Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಐತಿಹಾಸಿಕ ಕಥಾಹಂದರ ಹೊಂದಿರುವ, ಖ್ಯಾತ ನಿರ್ದೇಶಕ ಮಣಿರತ್ನಂ ಅವರ ‘ಪೊನ್ನಿಯನ್ ಸೆಲ್ವನ್ -1’ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಹೌದು. ವಿಶ್ವದೆಲ್ಲೆಡೆ ಉತ್ತಮ ಪ್ರಶಂಸೆ ಪಡೆದ ಚಿತ್ರವು ಇದೀಗ ಡಿಜಿಟಲ್ ವೇದಿಕೆಯಲ್ಲಿ ಲಭ್ಯವಾಗುತ್ತಿದೆ. ಅಮೆಜಾನ್ ಪ್ರೈಮ್ ವೇದಿಕೆಯಲ್ಲಿಯೂ ಚಿತ್ರ ರಿಲೀಸ್ ಆಗುತ್ತಿದೆ. ‘ಪೊನ್ನಿಯನ್ ಸೆಲ್ವನ್ -1’ ಚಿತ್ರ ನಿರೀಕ್ಷೆಯಂತೆಯೇ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾಗಿ ಒಂದು ತಿಂಗಳ ಅವಧಿಯಲ್ಲಿ ಚಿತ್ರ ವಿಶ್ವದಾದ್ಯಂತ 500 ಕೋಟಿ ರೂ ಕಲೆಕ್ಷನ್ ಮಾಡಿದೆ. ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿ ಐಶ್ವರ್ಯ ರೈ ಬಚ್ಚನ್, ವಿಕ್ರಮ್, ಕಾರ್ತಿ, ತ್ರಿಶಾ, ಜಯಂ ರವಿ ಮತ್ತು ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣ ತನಿಖೆ ಆಗಬೇಕು. ಅದು ಒಂದು ಬಾರ್ ವಿಚಾರಕ್ಕೆ ಅಮಾನತು ಮಾಡುವಷ್ಟೇ ನಡೆದಿಲ್ಲ. ಇದರ ಹಿಂದೆ ಇನ್ನೂ ಬೇರೇನೋ ಇದ್ದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದರು. ಈ ಕುರಿತು ಮಾತನಾಡಿದ ಅವರು, ನಾನು ಮೊದಲೇ ಹೇಳಿದ್ದೆ. ಒಂದು ಪೋಸ್ಟಿಂಗ್ ಗೆ 70 ಲಕ್ಷ ರೂಪಾಯಿಯಿಂದ 2 ಕೋಟಿ ತನಕ ಹಣದ ವಿಚಾರ ಇದೆ. ಇದು ಬಿಜೆಪಿಯ ಸಂಸ್ಕೃತಿ. ಇದು ಗಂಭೀರವಾದ ವಿಚಾರವಾಗಿದೆ. ನಂದೀಶ್ ಅಮಾನತಿನ ಹಿಂದೆ ಅಷ್ಟೇ ಇದ್ದಂತೆ ಇಲ್ಲ, ಅದಕ್ಕಿಂತ ಹೆಚ್ಚಿನದು ಬೇರೆನೋ ಇದೆ. ಹೀಗಾಗಿ ಅವರ ಸಾವಿನ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್ ಒಂದು ದಿಕ್ಕು, ಸಿದ್ದರಾಮಯ್ಯ ಇನ್ನೊಂದು ದಿಕ್ಕು ಎಂದು ಟೀಕಿಸಿದ್ಧ ಬಿಜೆಪಿ ನಾಯಕರಿಗೆ ಎಂಎಲ್’ಸಿ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದರು. ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಹೌದು, ಕಾಂಗ್ರೆಸ್’ನಲ್ಲಿ ಎರಡು ದಿಕ್ಕು…
ಇಂದು ನಟ ಪುನೀತ್ ರಾಜ್ ಕುಮಾರ್ ಅವರ ಪ್ರಥಮ ಪುಣ್ಯಸ್ಮರಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿ ಇರುವ ನಟ ಅಪ್ಪು ಸಮಾಧಿಗೆ ದೊಡ್ಮನೆ ಕುಟುಂಬ ಪೂಜೆ ಸಲ್ಲಿಕೆ ಮಾಡಿತು. ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಕೆ ಮಾಡಿದರು. ಮೊದಲು ಡಾ. ರಾಜ್ ಕುಮಾರ್ ಪಾರ್ವತಮ್ಮ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಅಪ್ಪು ಸಮಾಧಿಗೆ ಹಿರಿಯ ನಟ ರಾಘವೇಂಧ್ರ ರಾಜ್ ಕುಮಾರ್ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಟ ಪುನೀತ್ರ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಪೂರ್ಣಿಮಾ ಲಕ್ಷ್ಮೀ, ವಿನಯ್ ರಾಜ್ ಕುಮಾರ್ ಚಿನ್ನೇ ಗೌಡ , ಗೋವಿಂದರಾಜ್ ಅವರು ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಕೆ ವೇಳೆ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಣ್ಣೀರಿಟ್ಟರು. ಇನ್ನು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಸಮಾಧಿ ಬಳಿಗೆ ಆಗಮಿಸಿ ದರ್ಶನ ಪಡೆಯುತ್ತಿದ್ದು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳಿಂದ ರಕ್ತದಾನ ಶಿಬಿರ…
ಹಾವೇರಿ : ನವೆಂಬರ್ 20 ರ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ಸಂಬಂಧ ನವೆಂಬರ್ 2ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಇದರ ನಂತರ ನವೆಂಬರ್ 15 ರಿಂದ 20 ದಿನದೊಳಗೆ ರಾಜ್ಯದಲ್ಲಿ ಸಭೆ ಮಾಡಿ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಯಾವುದಾದರೂ ಶಾಲೆಯವರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯದ ಪ್ರಕಾರ ಮಕ್ಕಳಿಗೆ ಶಿಕ್ಷಣ ನೀಡಲು ಮುಂದೆ ಬಂದರೆ ಅವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದ ಗ್ರಾಮಸ್ಥರು ಮತ್ತು ಅಭಿಮಾನಿಗಳು ಕರ್ನಾಟಕ ರತ್ನ,ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಅತ್ಯಂತ ಭಕ್ತಿಪೂರ್ವಕವಾಗಿ ಆಚರಿಸಿದರು. ಅತಿ ಚಿಕ್ಕ ವಯಸ್ಸಿನಲ್ಲಿಯೇ ಬಹುದೊಡ್ಡ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸಾಧನೆಗೈದ ಮಹನೀಯ, ಕರ್ನಾಟಕ ರತ್ನ, ಪುನೀತ್ ರಾಜಕುಮಾರ್ ಅವರ ಸಾವಿನಿಂದ ಇಡಿ ವಿಶ್ವವೇ ಕಂಬನಿಯನ್ನು ಮಿಡಿದಿತ್ತು. ಪ್ರತಿ ಹಳ್ಳಿಯಲ್ಲಿಯೂ ಸಹ ದೇವರಂತೆಯೇ ಪುನೀತ್ ರಾಜಕುಮಾರ್ ರವರನ್ನು ಅವರ ಅಭಿಮಾನಿಗಳು ಆರಾಧಿಸುತ್ತಿದ್ದರು. ಸಮಾಜಮುಖಿ ಕಾರ್ಯಗಳಲ್ಲಿ ಅಪ್ಪು ನಡೆದು ಬಂದಂತೆ ರಾಜ್ಯದ ಸಾವಿರಾರು ಸಂಘಟನೆಗಳು ಸಾವಿರಾರು ಸಂಘ ಸಂಸ್ಥೆಗಳು ಪುನೀತ್ ರಾಜಕುಮಾರ್ ರವರ ಹೆಸರಿನಲ್ಲಿ ಕಳೆದ ಒಂದು ವರ್ಷಗಳಿಂದ ಸಾವಿರಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದರು. ಇಂದಿಗೆ ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಅವರ ಅಪಾರ ಅಭಿಮಾನಿಗಳನ್ನು ಅಗಲಿ ಒಂದು ವರ್ಷ ಕಳೆಯಿತು. ಆದಕಾರಣ ನೇಗಲಾಲ ಗ್ರಾಮದ ಅಭಿಮಾನಿಗಳು ಮತ್ತು ಗ್ರಾಮಸ್ಥರು…
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ದೀಪಾವಳಿ ಉಡುಗೋರೆಯಾಗಿ ಆಯ್ದ ಪತ್ರಕರ್ತರಿಗೆ ಸಿಹಿ ತಿಂಡಿ ಜೊತೆಗೆ ಹಣವನ್ನು ಇಟ್ಟು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್,ಮುಖ್ಯಮಂತ್ರಿ ಕಚೇರಿ ನೀಡಿದ 2.5 ಲಕ್ಷ ರೂ. ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಒತ್ತಾಯಿಸಿದೆ. ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು.. ಸರ್ಕಾರದ್ದೇ…ಬಿಜೆಪಿ ಪಕ್ಷದ್ದೇ..ಮುಖ್ಯಮಂತ್ರಿಗಳದ್ದೇ..40% ಕಮಿಷನ್ ಆ ಹಣದ ಮೂಲವೇ.. ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ.. ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ.. ಎಂದು ಟ್ವೀಟ್ ಮೂಲಕ ಕರ್ನಾಟಕ ಕಾಂಗ್ರೆಸ್ ಆಗ್ರಹಿಸಿದೆ. ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ…
ಬೆಂಗಳೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ, ಇಂದಿಗೂ ನಮ್ಮ ನಡುವೆ ಅವರು ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಇಂದಿಗೂ ಸಾಧ್ಯವಾಗುತ್ತಿಲ್ಲ. ತಮ್ಮ ಸರಳತೆ ಮತ್ತು ಮಾನವೀಯ ಗುಣಗಳಿಂದಲೇ ಕೋಟ್ಯಾಂತರ ಅಭಿಮಾನಿಗಳ ಮನದಲ್ಲಿ ಅಪ್ಪು ಮನೆ ಮಾಡಿದ್ದಾರೆ. ಜೊತೆಗಿರದ ಜೀವ ಎಂದಿಗೂ ಜೀವಂತ ಎನ್ನುವಂತೆ ಪ್ರತಿ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳು ರಾಜನನ್ನು ನೆನೆಯುತ್ತಿದ್ದಾರೆ. ಇಂದು ಕಂಠೀರವ ಸ್ಟುಡಿಯೋ ಬಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ರ ನೇತೃತ್ವದಲ್ಲಿ ಬಂದೋಬಸ್ತ್ ನೀಡಲಾಗಿದ್ದು. ನಿನ್ನೆ ರಾತ್ರಿಯಿಂದಲು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಂಠೀರವ ಸ್ಟುಡಿಯೋ ಮುಂಭಾಗದಿಂದಲು ಸಹ ಪೊಲೀಸರು ಸರ್ಪಗಾವಲಿನಲ್ಲಿದ್ದು, ಬ್ಯಾರಿಕೇಡ್ಗಳನ್ನು ಅಳವಡಿಸಿರುವ ಮುಖಾಂತರವಾಗಿ ಜನರು ಬರುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಂದು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು, ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವನ್ನು ಪೊಲೀಸರು ವಹಿಸಿದ್ದಾರೆ. ಇನ್ನು ಪುನೀತ್ ರನ್ನು ನೋಡಲು ಬರುವ ಅಭಿಮಾನಿಗಳಿಗೆ…
ಬಳ್ಳಾರಿ: ಹೆಂಡತಿ ಶೀಲ ಶಂಕಿಸಿ ಆಕೆಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೇಖಾ (30) ಕೊಲೆಯಾದ ಮಹಿಳೆ. ಕುಮಾರಸ್ವಾಮಿ (35) ಆತ್ಮಹತ್ಯೆಗೆ ಶರಣಾದ ಪತಿ. 12 ವರ್ಷದ ಹಿಂದೆ ರೇಖಾಳನ್ನ ಮದುವೆಯಾಗಿದ್ದ ಕುಮಾರಸ್ವಾಮಿಗೆ 5 ಜನ ಮಕ್ಕಳಿದ್ದಾರೆ. ಹಾಗಿದ್ದರೂ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಕುಮಾರಸ್ವಾಮಿ, ಜಿಗೇನಹಳ್ಳಿ ಗ್ರಾಮದ ಜಮೀನಿಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಕೂಡ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚೋರನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಯೋಧನ ಪತ್ನಿ ಮತ್ತು ಚಿಕ್ಕಮ್ಮಗೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಾಯಾಳುಗಳು ಗೋಕಾಕ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯೋಧ ಅಶೋಕ ಮೂಲಿಮನಿ ಗ್ವಾಲಿಯರ್ ನ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಲಕ್ಷ್ಮೇಶ್ವರ ಗ್ರಾಮದಲ್ಲಿ ಯೊಧನ ಮನೆ ಇದ್ದು, ಇದನ್ನು ಬಾಡಿಗೆಗೆ ಕೊಟ್ಟು ಪತ್ನಿ ಸಂಗೀತಾ ಮೂಲಿಮನಿ ಮತ್ತು ಅವರ ಚಿಕ್ಕಮ್ಮ ಮಲ್ಲವ್ವ ಯೋಧನೊಂದಿಗೆ ಗ್ವಾಲಿಯರ್ ನಲ್ಲಿ ವಾಸವಿದ್ದರು. ಮುಂದಿನ ವರ್ಷ ಅಶೋಕ ಮೂಲಿಮನಿ ಸ್ವಯಂ ನಿವೃತ್ತಿ ಹೊಂದಲಿದ್ದಾರೆ. ಈ ಸಂಬಂಧ ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆ ಸಂಗೀತಾ ಮತ್ತು ಮಲ್ಲವ್ವ ಮರಳಿದ್ದಾರೆ. ಬಾಡಿಗೆಗೆ ವಾಸವಿದ್ದವರಿಗೆ ಮನೆ ಬಿಡುವಂತೆ ಹೇಳಿದ್ದಾರೆ. ಇದಕ್ಕೆ ಸಂತೋಷ ಮಾಳಿ, ಈರಯ್ಯ ಮಠದ, ರೂಪಾ, ಸತ್ಯವ್ವಾ, ಭಾರತಿ ಮಾಳಿ ಎಂಬುವರು ಯೋಧನ ಪತ್ನಿ ಮತ್ತು ಚಿಕ್ಕಮ್ಮರಿಗೆ ಕಣ್ಣಿಗೆ ಖಾರದ ಪುಡಿ ಎರಚಿ, ಮನೆಯಲ್ಲಿಟ್ಟಿದ್ದ ಸಾಮಗ್ರಿಗಳನ್ನ ರಸ್ತೆಗೆ ಎಸೆದು…
ಕೊರಟಗೆರೆ: ತಾಲ್ಲೂಕು ಕಚೇರಿ ಹತ್ತಿರದ ಎಸ್ ಬಿಐ ಬ್ಯಾಂಕ್ ಪಕ್ಕದಲ್ಲಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅನಿಲ್ ಕುಮಾರ್ ನಿರ್ಮಿಸಿರುವ ನೂತನ ಕಟ್ಟಡವನ್ನು ಸಂಸದ ಜಿ.ಎಸ್ ಬಸವರಾಜು ಶುಕ್ರವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಕ್ಷೇತ್ರ ಅಭಿವೃದ್ಧಿಗೆ ಸಂಬಂಧಪಟ್ಟಂತಹ ವಿಷಯವನ್ನು ಚರ್ಚಿಸಲು ಸೂಕ್ತ ಕಟ್ಟಡವಿರಲಿಲ್ಲ, ನಿಜಕ್ಕೂ ಇಂದು ಸುದಿನ ಎಂದೇ ಹೇಳಬಹುದ. ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿ ಅನಿಲ್ ಕುಮಾರ್ ಮತ್ತು ಕಾರ್ಯಕರ್ತರು ಸೇರಿ ನೂತನ ಕಟ್ಟದ ನಿರ್ಮಿಸಿರುವುದು ನಿಜಕ್ಕೂ ಸಂತಸದ ವಿಷಯ ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಅನಿಲ್ಕುಮಾರ್ ಮಾತನಾಡಿ, ಕೊರಟಗೆರೆ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ಸರ್ಕಾರದ ಪ್ರತಿಯೊಂದು ಸೌಲಭ್ಯವು ಜನರಿಗೆ ನೇರವಾಗಿ ಸಿಗುವಂತೆ ಮಾಡುವ ದೃಷ್ಟಿಯಿಂದ ಪಕ್ಷದ ಕಾರ್ಯಕರ್ತರೊಂದಿಗೆ ನೂತನ ಕಟ್ಟಡವನ್ನ ನಿರ್ಮಿಸಿದೆ ಎಂದು ಹೇಳಿದರು. ಈ ವೇಳೆ ಬಿಜೆಪಿ ಪಕ್ಷದ ತಾಲ್ಲೂಕು ಅಧ್ಯಕ್ಷ ಪವನ್…