Subscribe to Updates
Get the latest creative news from FooBar about art, design and business.
- ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು ಅನ್ನೋದು ನನ್ನ ಆಸೆ: ಕೇಂದ್ರ ಸಚಿವ ವಿ.ಸೋಮಣ್ಣ
- ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
- ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
- ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು
- ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
- ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
- ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ
- ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ: ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್
Author: admin
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಹುಚ್ಚಗೊಂಡನಹಳ್ಳಿ ಗ್ರಾಪಂ ಸದಸ್ಯ ಹಿಂಡಿಸ್ಕೆರೆ ಸೋಮಶೇಖರ್ ಸೇರಿದಂತೆ, ಬೆಂಬಲಿಗರು ಮಾಜಿ ಶಾಸಕ ಕೆ. ಷಡಕ್ಷರಿ ಮತ್ತು ತಾಪಂ ಮಾಜಿ ಸದಸ್ಯ ಜಯಣ್ಣ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ತಾ.ಪಂ. ಮಾಜಿ ಅಧ್ಯಕ್ಷ ಎನ್. ಎಂ.ಸುರೇಶ್, ಗ್ರಾಪಂ ಸದಸ್ಯರಾದ ಬಿ.ಬಿ.ಬಸವರಾಜ್, ಜಗನ್ನಾಥ್ ಮತ್ತು ನರಸಿಂಹಯ್ಯ, ಮುಖಂಡರಾದ ರವೀಂದ್ರ, ವಸಂತ, ಮಹದೇವಣ್ಣ, ಗಂಗಣ್ಣ ರಾಜಶೇಖರ್, ಅಶೋಕ್, ರಾಜು, ಉಮಾಶಂಕರ್, ಜಗದೀಶ್, ರಘು, ಕುಮಾರ್, ರವಿಕುಮಾರ್, ತರಕಾರಿ ನಾಗಣ್ಣ, ರಂಗನಾಥಸ್ವಾಮಿ, ಎಎಸ್ ಡಿ ಎಂಸಿ ಅಧ್ಯಕ್ಷ ರವಿಕುಮಾರ್, ಜಯಣ್ಣ, ರೇಣುಕ ಮತ್ತು ಲೋಕೇಶ್ ಸೇರಿದಂತೆ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಹಾಜರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ತಾಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ಬಲದಂಡೆ ಕಾಲುವೆಗೆ ಕಾರು ಬಿದ್ದಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕಬಿನಿ ಬಲದಂಡ ನಾಲೆಗೆ ಬಿದ್ದು ಇಬ್ಬರು ವಕೀಲರು ನೀರು ಪಾಲಾಗಿದ್ದು, ಒಬ್ಬ ವಕೀಲ ದಡ ಸೇರಿರುವ ಘಟನೆ ಶುಕ್ರವಾರ ನಡೆದಿದೆ. ಹುಣಸೂರು ತಾಲ್ಲೂಕಿನ ನಿಲುವಾಗಿಲು ಗ್ರಾಮದ ಲೇ.ಸ್ವಾಮಿ ನಾಯಕ ಅವರ ಮಗ ಗಿರೀಶ್ (40), ಹುಂಡುವಾಡಿ ಗ್ರಾಮದ ಬುಂಡಯ್ಯ ಅವರ ಮಗ ಸಿ. ದಿನೇಶ್ (50) ನದಿಯಲ್ಲಿ ಕೊಚ್ಚಿ ಹೋದವರು. ಮತ್ತೊಬ್ಬ ವಕೀಲ ಕಟ್ಟೇಮಳಲವಾಡಿ ಗ್ರಾಮದ ಅಶೋಕ ನದಿ ಈಜಿ ದಡ ಸೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ವಕೀಲರು ಹುಣಸೂರು ತಾಲ್ಲೂಕಿನಿಂದ ಎಚ್.ಡಿ.ಕೋಟೆ ನ್ಯಾಯಾಲಯಕ್ಕೆ ತಮ್ಮ ಕಕ್ಷಿದಾರರ ಮೊಕದ್ದಮೆ ನ್ಯಾಯಲಯದ ವಿಚಾರಣೆ ಮೇಲೆ ಬಂದಿದ್ದರು. ಈ ಸಂದರ್ಭದಲ್ಲಿ ವಿಚಾರಣೆ ಮುಗಿದ ನಂತರ ಮೂವರು ತಮ್ಮ ಕಾರಿನಲ್ಲಿ ಕಬಿನಿ ಜಲಾಶಯ ವೀಕ್ಷಣೆ ಮಾಡಲು ಸರಗೂರು ಮಾರ್ಗವಾಗಿ ತೆರಳಿ, ಜಲಾಶಯ ವೀಕ್ಷಣೆ ಮಾಡಿದ ನಂತರ ಅದೇ ಮಾರ್ಗವಾಗಿ ವಾಪಸ್ ಸಾಗರೆ…
ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಯತ್ನಿಸಿದರು. ಆದರೂ ಮನೆಯ ಗೇಟ್ ತಳ್ಳಿ ಬಾಗಿಲ ಬಳಿಗೆ ಧಾವಿಸಿದ ಎಬಿವಿಪಿ ಕಾರ್ಯಕರ್ತರು, ಪ್ರವೀಣ್ ಸಾವಿಗೆ ನ್ಯಾಯ ಬೇಕು. ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಗೃಹ ಸಚಿವರ ನಿವಾಸದೊಳಗೆ ಪ್ರವೇಶಿಸಲು ಪ್ರತಿಭಟನಾಕಾರರು ಯತ್ನಿಸಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ. 50ಕ್ಕೂ ಅಧಿಕ ಪ್ರತಿಭಟನಾಕಾರರು ಇದ್ದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಎಬಿವಿಪಿ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಲಾಯಿತು. ಘಟನೆಯಲ್ಲಿ 50ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ …
ಮಧುಗಿರಿ: ಕರ್ನಾಟಕ ರಾಜ್ಯ ಪೊಲೀಸ್ ತುಮಕೂರು ಜಿಲ್ಲೆ ಮಧುಗಿರಿ ಉಪವಿಭಾಗ ಮಧುಗಿರಿ ಪೊಲೀಸ್ ಠಾಣೆ ವತಿಯಿಂದ ಪಿ.ಎಸ್.ಐ ರಮೇಶ್ ರವರ ನೇತೃತ್ವದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಆಚರಿಸಲಾಯಿತು. ಮಧುಗಿರಿ ಪಟ್ಟಣದ ವಿವಿಧ ಕಡೆ ಜಾಗೃತಿ ಮೂಡಿಸುವ ಮೂಲಕ ಮಾನವ ಕಳ್ಳಸಾಗಾಣಿಕೆ ವಿರುದ್ಧ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಮಾತನಾಡಿದ ಪಿ.ಎಸ್.ಐ ರಮೇಶ್ ಕುಮಾರ್, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು. ಆಟೋದಲ್ಲಿ ಅಥವಾ ನಡೆದುಕೊಂಡು ಹೋಗಬೇಕಾದರೆ ಅಥವಾ ಯಾವುದೇ ಸಾರ್ವಜನಿಕ ರಸ್ತೆಗಳಲ್ಲಿ ಯಾರಾದರೂ ಮಕ್ಕಳನ್ನು ಅಥವಾ ಮಹಿಳೆಯರನ್ನು ಬಲವಂತವಾಗಿ ವಾಹನದಲ್ಲಿ ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದರೆ, ಪೊಲೀಸ್ ಠಾಣೆ ಕಂಟ್ರೋಲ್ ನಂಬರ್ 112 ಕರೆ ಮಾಡಿ ಮಾಹಿತಿ ನೀಡಿ. ತಕ್ಷಣವೇ ಬಂದು ರಕ್ಷಣೆ ಮಾಡುತ್ತೇವೆ ಎಂದರಲ್ಲದೇ, ಸಾರ್ವಜನಿಕರಿಗೆ ಸಲಹೆ ಸೂಚನೆ ನೀಡಿದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್ ಐಎ ತನಿಖೆಗೆ ವಹಿಸಲು ಯಾಕೆ ಹಿಂಜರಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ ಎಂದು ಟೀಕಿಸಿದ್ದಾರೆ. ಚುನಾವಣೆ ವರ್ಷದಲ್ಲಿ ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ! ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು…
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಖ್ಯಾತ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಗರ ಹಾಗೂ ಭೀಮನ ಅಮಾವಾಸ್ಯೆ ಪ್ರಯುಕ್ತ ತಾಯಿ ದುರ್ಗಾ ಪರಮೇಶ್ವರಿ ದೇವಿಗೆ ಭಕ್ತಾದಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದುರ್ಗಾಪರಮೇಶ್ವರಿ ದೇವಿಗೆ ಹೂವಿನ ಅಲಂಕಾರ , ಪುಷ್ಪಾರ್ಚನೆ ನೆರವೇರಿಸಲ್ಪಟ್ಟಿತ್ತು . ವಿಶೇಷ ಪೂಜೆ ಬಗ್ಗೆ ಮಾಧ್ಯಮದ ಪ್ರತಿನಿಧಿಯೊಂದಿಗೆ ಮಾತನಾಡಿದ ದುರ್ಗಾ ಪರಮೇಶ್ವರಿ ದೇವಸ್ಥಾನ ಅರ್ಚಕರಾದ ಕೃಷ್ಷ ಅವರು, ದೇವಿಯ ವೈಶಿಷ್ಟ್ಯತೆ ಹಾಗೂ ಮಹತ್ವಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಭಕ್ತಾದಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು . ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕೃಷ್ಣ, ರವಿ ಸೇರಿದಂತೆ ಅನೇಕ ಭಕ್ತಾದಿಗಳು ಸಹ ಧೇವಿ ದುರ್ಗಾ ಪರಮೇಶ್ವರಿ ದೇವಿಯ ಪೂಜೆಯಲ್ಲಿ ಭಾಗವಹಿಸಿದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಮಿಷನ್ ಫಾರ್ ಸೋಶಿಯಲ್ ಡೆವಲಪ್ಮೆಂಟ್ ಸಂಸ್ಥೆ ವತಿಯಿಂದ ಪೌಷ್ಠಿಕತೆಯ ಹಾದಿಯಲ್ಲಿ, ಆರೋಗ್ಯ ಮತ್ತು ಪೌಷ್ಠಿಕತೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಎಲ್ಲಾ ಮಕ್ಕಳು ಆರೋಗ್ಯಕರವಾದ ಬೆಳವಣಿಗೆಯನ್ನು ಹೊಂದಬೇಕು. ಜನರು ನಾಲಿಗೆಗೆ ರುಚಿ ನೀಡುವ ಜಂಕ್ ಫುಡ್ ಮರಳಾಗಿದ್ದಾರೆ ಎಂದರು. ಈ ಕಾರ್ಯಕ್ರಮದ ಸಂಯೋಜಕ ರು ಅಮಿತ್ ಕಾರ್ಣಿಕ್ ನಿವೃತ್ತ ಜಂಟಿ ಸಂಯೋಜಕ ತಿರುಮಲ ರಾವ್, ದಿವ್ಯ, ಕಾರ್ಣಿಕ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಪ್ರಭುಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಟೀಕೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ತೀರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರು ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಹೇಳಿದ್ದಾರೆ. ಪ್ರವೀಣ್ ಹತ್ಯೆಯನ್ನು ಖಂಡಿಸಿ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಕೊಲೆಗಳಾಗಿವೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಸಿಎಂ ಬೊಮ್ಮಾಯಿ ಅವರು ಸಿದ್ಧರಾಮಯ್ಯ ನವರ ಆಡಳಿತದ ಸಮಯದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಸಿಎಂ ಪ್ರಶ್ನಿಸಿದರು. ಎಸ್ಡಿಪಿಐ, ಪಿಎಫ್ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬ ಹೇಳಿಕೆ ಅತ್ಯಂತ ಹಾಸ್ಯಾಸ್ಪದವಾಗಿದೆ. ಇದು ಕಾಂಗ್ರೆಸ್ನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ತಾಲೂಕು ಜಕ್ಕನಹಳ್ಳಿ ಮತ್ತು ಚೌಡಲಾಪುರ ಗ್ರಾಮದ ರೈತರು ಗೋಮಾಳದಲ್ಲಿ ಉಳುಮೆ ಮಾಡಲು ಅರಣ್ಯಾಧಿಕಾರಿಗಳು ಅಡ್ಡಿಪಡಿಸುತ್ತಿದ್ದು, ರೈತರಿಗೆ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಿಪಟೂರು ತಾಲೂಕು ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮಾತನಾಡಿ, ತಾಲೂಕಿನ ಬಡ ರೈತರಿಗೂ ಸರ್ಕಾರಿ ಆದೇಶದಂತೆ ಸಾಗುವಳಿ ಚೀಟಿ ನೀಡಬೇಕು, ಅರ್ಜಿ ನಮೂನೆ 57ರಲ್ಲಿ ಸಲ್ಲಿಸಿದವರಿಗೂ ಅಕ್ರಮ ಸಕ್ರಮ ಯೋಜನೆ ಬಡವರಿಗೆ ಸಿಗಬೇಕು. ಉಳ್ಳವರಿಗಲ್ಲ, ರೈತರಿಗೆ ನ್ಯಾಯ ಸಿಗದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದರು . ಈ ಪ್ರತಿಭಟನೆಯಲ್ಲಿ ರೈತ ಸೇವ್ ಸಂಘದ ಅಧ್ಯಕ್ಷ ಇಂದ್ರೇಶ್, ಉಪಾಧ್ಯಕ್ಷ ಎಚ್.ಆರ್. ಭೋಜರಾಜ್ , ಸೇವಾ ಸಹಕಾರ ಸಂಘದ ಗೊರಗಂಡನಹಳ್ಳಿಯ ಸುದರ್ಶನ್ ಸುತ್ತಮುತ್ತ ಹಳ್ಳಿಯ ರೈತರು ಭಾಗವಹಿಸಿದ್ದರು ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಗೊಂಡಾ : ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದು ಮತ್ತು ನಂತರ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ಪತಿ ಮೊಹಮ್ಮದ್ ಅದ್ನಾನ್ ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದರು ಮತ್ತು ನನಗೆ ಥಳಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಆರೋಪಿಯ ಹಿಂಸೆಯಿಂದ ಬೇಸತ್ತು ತವರು ಮನೆಯಲ್ಲಿ ವಾಸಿಸಲು ಪ್ರಾರಂಭಿಸಿರುವುದಾಗಿ ಪೊಲೀಸ್ ಸೂಪರಿಂಟೆಂಡೆಂಟ್ ಹೇಳಿದ್ದಾರೆ. ಮಂಗಳವಾರ ಆರೋಪಿ ಅದ್ನಾನ್ ಮತ್ತು ಅವರ ಸೋದರಸಂಬಂಧಿ ತನ್ನ ಅತ್ತೆಯ ಮನೆಗೆ ಹೋಗಿದ್ದು, ಇಬ್ಬರೂ ಮಹಿಳೆಯನ್ನು ಒಬ್ಬಂಟಿಯಾಗಿ ಇರುವುದನ್ನು ಗಮನಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಥಳಿಸಿ, ಕಾನೂನುಬಾಹಿರವಾದ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಲಾಗಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಹೇಳಿದ್ದಾರೆ. ಲಕ್ನೋ ಮೂಲದ ಆರೋಪಿಯಾಗಿರುವ ಮಹಿಳೆಯ ಪತಿ ಮೊಹಮ್ಮದ್ ಅದ್ನಾನ್ ನನ್ನು ಗುರುವಾರ ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆತನ ಸೋದರ ಸಂಬಂಧಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಸೋದರ ಸಂಬಂಧಿಯನ್ನು…