Subscribe to Updates
Get the latest creative news from FooBar about art, design and business.
- ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
- ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
Author: admin
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟೀಕಿಸಿದರು. ಪ್ರಧಾನಿ ಮೊದಿ ರಾವಣ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಹಿರಿಯರಾದ ಖರ್ಗೆ ಈ ರೀತಿ ಮಾತನಾಡಬಾರದು. ಪ್ರಧಾನಿ ಮೋದಿಯನ್ನ ಪ್ರಪಂಚವೇ ಮೆಚ್ಚಿದೆ. ಎಐಸಿಸಿ ಅಧ್ಯಕ್ಷ ಖರ್ಗೆ ರಬ್ಬರ್ ಸ್ಟಾಂಪ್ ಆಗಿದ್ದಾರೆ ಎಂದರು. ಬಿಜೆಪಿ ರೌಡಿಗಳ ಪಕ್ಷ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ರೌಡಿಗಳ ಪಕ್ಷ, ಬಿಜೆಪಿ ಸುಸಂಸ್ಕೃತ ಪಕ್ಷವಾಗಿದೆ. ಕಾಂಗ್ರೆಸ್ ರೌಡಿಗಳ ಪಕ್ಷ ಎಂದು ತಿರಸ್ಕರಿಸಿದ್ದಾರೆ. ಡಿಕೆ ಶಿವಕುಮಾರ್ ಯಾವಾಗ ಜೈಲಿಗೆ ಹೋಗ್ತಾರೋ ಗೊತ್ತಿಲ್ಲ ಅಂತವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಇದೆ. ನಲಪಾಡ್ ಜೈಲಿಗೆ ಹೋಗಿ ಬದವನು. ಅವನಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಸೋಲದೇವನಹಳ್ಳಿಯಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯೇ ಪ್ರಿಯಕರನ ಜೊತೆ ಸೇರಿಕೊಂಡು ಗಂಡನ ಕೊಲೆ ಮಾಡಿರುವ ಘಟನೆ ನಡೆದಿದೆ. ದಾಸೇಗೌಡ (48) ಕೊಲೆಯಾದ ವ್ಯಕ್ತಿ. ನಾಪತ್ತೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಸಿನಿಮಾ ರೀತಿಯಲ್ಲಿ ನಡೆದ ಈ ಕೊಲೆ ರಹಸ್ಯ ಬಯಲಾಗಿದೆ. ದಾಸೇಗೌಡ ನಾಪತ್ತೆಯಾಗಿದ್ದ ಬಗ್ಗೆ ಸೋಲದೇವನಹಳ್ಳಿಯಲ್ಲಿ ಪತ್ನಿ ದೂರು ದಾಖಲಿಸಿದ್ದಳು. ರಾಮನಗರ ಗ್ರಾ. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಸೇಗೌಡನ ಮೃತದೇಹ ಪತ್ತೆಯಾಗಿದ್ದು, ದಾಸೇಗೌಡನ ಪತ್ನಿ ಸೇರಿ ಇಬ್ಬರನ್ನು ವಿಚಾರಣೆ ನಡೆಸಿದಾಗ ನಿಜ ಹೊರ ಬಂದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಒಂ ಮೃತದೇಹವನ್ನು ಸೋಲದೇವನಹಳ್ಳಿ ಫಾರ್ಮ್ ಹೌಸ್ನಿಂದ ಕಾರಿನಲ್ಲಿ ಸಾಗಟ ಮಾಡಿದ್ದು, ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಮೋರಿಯಲ್ಲಿ ಎಸೆದಿದ್ದಾರೆ. ಕೊಲೆ ಮಾಡಲು ಬಳಸಿದ್ದ ಹಗ್ಗವನ್ನು ಬೇರೆಡೆ ಎಸೆದಿದ್ದು, ಸಾಕ್ಷ್ಯ ಸಿಗದಂತೆ ಒಂದೊಂದು ಕಡೆ ವಸ್ತುಗಳು ಎಸೆದಿದ್ದಾರೆ. 35 ವರ್ಷದ ಜಯ 16 ವರ್ಷದ ಹಿಂದೆ ದಾಸೇಗೌಡನನ್ನ ಮದುವೆಯಾಗಿ ಇಬ್ಬರು ಮಕ್ಕಳು ಇದ್ದರು. ಗಂಡ ಹೆಂಡತಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಗಂಡ…
ಕೆಎಸ್ಸಾರ್ಟಿಸಿಯು ಹೊಸದಾಗಿ ಆರಂಭಿಸಲಿರುವ ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ಬ್ರಾಂಡ್ ಹೆಸರು ಟ್ಯಾಗ್ಲೈನ್ ಹಾಗೂ ಗ್ರಾಫಿಕ್ಸ್ ಆಹ್ವಾನಿಸಿದೆ. ಪ್ರತಿ ಮಾದರಿಯ ವಾಹನಗಳಿಗೆ ಉತ್ತಮ ಬ್ರಾಂಡ್ ಹೆಸರನ್ನು ಸೂಚಿಸುವ ವಿಜೇತರಿಗೆ ₹10,000 ಹಾಗೂ ಉತ್ತಮ ಗ್ರಾಫಿಕ್ಸ್ ನೀಡಿದವರಿಗೆ ತಲಾ ₹ 25,000 ಬಹುಮಾನ ನೀಡಲಾಗುವುದು. ಹೆಸರನ್ನು ಸೂಚಿಸಲು ಡಿಸೆಂಬರ್ 5 ಕೊನೆ ದಿನ ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಬ್ರ್ಯಾಂಡ್ ಐಡಿಯಾಗಳನ್ನು cpro @ksrtc.org ಇ–ಮೇಲ್ ಗೆ ಅಥವಾ ನಿಗಮದ ಫೇಸ್ಬುಕ್/ಟ್ವಿಟರ್ ಖಾತೆಗೆ ಸಲ್ಲಿಸಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಡರಾತ್ರಿ ಊಟ ನೀಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಹೋಟೆಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಸೇರಿದಂತೆ ಯುವಕರ ಗುಂಪೊಂದು ಮಹಿಳೆಯರು ಸೇರಿದಂತೆ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.20ರಂದು ರಾತ್ರಿ 11.30ರ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ನಗರದ ಬಳಿಯ ವಿಲೇಜ್ ರೆಸ್ಟೋರೆಂಟ್ನಲ್ಲಿ ಯುವಕರ ಗುಂಪು ಗೂಂಡಾಗಿರಿ ನಡೆಸಿ, ಮಹಿಳಾ ಸಿಬ್ಬಂದಿ ಮೇಲೂ ಹಲ್ಲೆ ಮಾಡಲಾಗಿದೆ. ಈ ವೀಡಿಯೋ ಇದೀಗ ವೈರಲ್ ಆಗಿದೆ. ರೆಸ್ಟೋರೆಂಟ್ನ ಮಹಿಳಾ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿ ಊಟ ಕೊಟ್ಟರೆ ಸರಿ, ಇಲ್ದಿದ್ರೆ ಒದೆ ತಿಂತೀಯಾ ಅಂತ ಬೆಂಗಳೂರು ನಗರ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ರಾಮಚಂದ್ರಪ್ಪನ ಮಗ ಧನುಶ್ ಕೆಸಿ ದಾಂಧಲೆ ಮಾಡಿದ್ದಾನೆ. ನಾನ್ ಹೇಳಿದಂಗೆ ಕೇಳ್ಬೇಕು ಇಲ್ದಿದ್ರೆ ಈ ರೆಸ್ಟೋರೆಂಟ್ ಇರಲ್ಲ ಎಂದು ಬೆದರಿಕೆ ಹಾಕಿದ್ದಾನೆ. ಬರ್ತ್ಡೇ ಪಾರ್ಟಿ ಮಾಡಿದ ನಂತರ ರಾತ್ರಿ 11:30ಕ್ಕೆ ವಿಲೇಜ್ ರೆಸ್ಟೋರೆಂಟ್ಗೆ ಬಂದಿದ್ದ…
ಪುರುಷರ ಐಪಿಎಲ್ ಯಶಸ್ಸಿನ ಹಿನ್ನೆಲೆಯಲ್ಲಿ ಭಾರೀ ಬೇಡಿಕೆ ಇದ್ದ ಮಹಿಳಾ ಐಪಿಎಲ್ ಗೆ ಬಿಸಿಸಿಐ ಪ್ರಕ್ರಿಯೆ ಆರಂಭಿಸಿದ್ದು, 5 ಫ್ರಾಂಚೈಸಿಗಳ ಖರೀದಿಗೆ 400 ಕೋಟಿ ರೂ. ಮೂಲಧನ ನಿಗದಿಪಡಿಸಿದೆ. 2023 ಮಹಿಳಾ ಐಪಿಎಲ್ ಟೂರ್ನಿ ಪಾದರ್ಪಣೆ ಮಾಡಲಿದ್ದು, ಪುರುಷರ ಐಪಿಎಲ್ ಯಶಸ್ಸಿನ ಹಿನ್ನೆಲೆಯಲ್ಲಿ ಮಹಿಳಾ ಐಪಿಎಲ್ ನಲ್ಲೂ ದೊಡ್ಡ ಮೊತ್ತದ ಮೇಲೆ ಬಿಸಿಸಿಐ ಕಣ್ಣಿಟ್ಟಿದೆ. 5 ಫ್ರಾಂಚೈಸಿಗಳ ಟೆಂಡರ್ ಆಹ್ವಾನಿಸಲು ಬಿಸಿಸಿಐ ಸಿದ್ಧತೆ ನಡೆಸಿದ್ದು, ಮೂಲಧನ 400 ಕೋಟಿ ರೂ.ನಿಗದಿಪಡಿಸಿದೆ. ಈ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಕೂಡ ಅನುಮೋದನೆ ನೀಡಿದೆ ಎನ್ನಲಾಗಿದೆ. ಚೊಚ್ಚಲ ಮಹಿಳಾ ಐಪಿಎಲ್ ನಲ್ಲಿ ಲೀಗ್ ಹಂತದಲ್ಲಿ 20 ಪಂದ್ಯಗಳು ನಡೆಯಲಿದ್ದು, ಪ್ರತಿ ತಂಡಗಳು ಎರಡು ಬಾರಿ ಮುಖಾಮುಖಿ ಆಗಲಿವೆ. ಅಗ್ರ 2 ತಂಡಗಳು ನೇರವಾಗಿ ಫೈನಲ್ ಪ್ರವೇಶಿಸಲಿದ್ದರೆ, ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ಎಲಿಮಿನೇಟರ್ ಸುತ್ತು ಇರಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಅಮೆರಿಕದ ಸೆನೆಟ್ನಲ್ಲಿ ಮಂಗಳವಾರ ಸಲಿಂಗ ವಿವಾಹದ ಫೆಡರಲ್ ಮಾನ್ಯತೆಯನ್ನು ರಕ್ಷಿಸುವ ಮಸೂದೆಯನ್ನು ಅಂಗೀಕರಿಸಲಾಗಿದೆ. 2015ರಲ್ಲೇ ಸಲಿಂಗ ವಿವಾಹವನ್ನು ಅಮೆರಿಕದಲ್ಲಿ ಕಾನೂನುಬದ್ಧಗೊಳಿಸಲಾಗಿದ್ದು, ಇದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಮಸೂದೆ ಜಾರಿ ಮಾಡಲಾಗಿದೆ. ಇಂದು ಒಂದು ದೊಡ್ಡ ಸಮಾನತೆಯ ಎಡೆಗೆ ಮಹತ್ವದ ಹೆಜ್ಜೆ ಇಡಲಾಗಿದೆಎಂದು ಸೆನೆಟ್ ನಾಯಕ ಚುಕ್ ಶೂಮರ್ ಹೇಳಿದ್ದಾರೆ.ಈ ಮಸೂದೆ ಅಂಗೀಕರಿಸುವ ಮೂಲಕ ಅಮೆರಿಕದ ಎಲ್ಲ ನಾಗರಿಕರ ಧ್ವನಿಯನ್ನು ಆಲಿಸಬೇಕು ಎಂಬ ಸಂದೇಶ ನೀಡಿದೆ. ನೀವು ಯಾರೇ ಆಗಿರಲಿ, ಯಾರನ್ನೇ ಪ್ರೀತಿಸುತ್ತಿರಲಿ, ಕಾನೂನಿನ ಅಡಿಯಲ್ಲಿ ನೀವು ಘನತೆ ಮತ್ತು ಸಮಾನತೆಗೆ ಅರ್ಹರು ಎಂದು ಹೇಳಿದ್ದಾರೆ. ಮಸೂದೆಯ ಪರ 61 ಮತಗಳು ಮತ್ತು ವಿರುದ್ಧವಾಗಿ 36 ಮತಗಳು ಬಿದ್ದಿದ್ದವು. ಡೆಮಾಕ್ರಟಿಕ್ನ 49 ಮತ್ತು ರಿಪಬ್ಲಿಕ್ ಪಕ್ಷದ 12 ಮಂದಿ ಮಸೂದೆ ಪರ ಮತ ಹಾಕಿದ್ದರು. ಡೆಮಾಕ್ರಟಿಕ್ ಪಕ್ಷದ ಒಬ್ಬರು ಮತ್ತು ರಿಪಬ್ಲಿಕ್ ಪಕ್ಷದ ಇಬ್ಬರು ಸಭೆಗೆ ಹಾಜರಾಗಿರಲಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ಕಾಲೇಜಿಗೆ 2.50 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ. ಮುಂದಿನ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರ ಕಾಲೇಜು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದು, ಕಾಲೇಜು ನಿರ್ಮಾಣದ ಉದ್ಘಾಟನೆಗೆ ಮುಖ್ಯಮಂತ್ರಿಗೆ ಆಹ್ವಾನ ನೀಡಲಾಗಿದೆ. ವಕ್ಫ್ ಬೋರ್ಡ್ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧಾರ ಮಾಡಲಾಗಿದ್ದು ತರಗತಿಯಲ್ಲಿ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿದ ಕಾರಣ. ಬಹುತೇಕ ಮುಸ್ಲಿಂ ಸಂಘ, ಸಂಸ್ಥೆಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದವು. ಇದೀಗ ಚುನಾವಣೆಯ ಪರ್ವ ಕಾಲದಲ್ಲಿ ಸರ್ಕಾರವೇ ಮುತುವರ್ಜಿ ವಹಿಸಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ರಾಜ್ಯದ ದಕ್ಷಿಣಕನ್ನಡಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕರ್ನಾಟಕ ಸೇರಿದಂತೆ ರಾಜ್ಯದ ಹತ್ತು ಕಡೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಸ್ಥಾಪನೆ ಮಾಡಿಕೊಡಲು ಮುಂದಾಗಿದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಾ ಅದಿ ಹೇಳಿದ್ದಾರೆ. ಉಡುಪಿಯ ಸರ್ಕಾರಿ ಶಾಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬರುತ್ತಿದ್ದ ಹೆಣ್ಣು ಮಕ್ಕಳಿಂದ ಶುರುವಾದ…
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ (ಕೆಆರ್ಇಡಿಎಲ್) ಯೋಜನಾ ನಿರ್ದೇಶಕರಾಗಿದ್ದ ಡಿ.ಕೆ. ದಿನೇಶ್ ಕುಮಾರ್ (50) ಮೈಸೂರಿನ ಬೋಗಾದಿಯಲ್ಲಿರುವ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಅವರು ಪತ್ನಿ, ಕಿರಿಯ ಪುತ್ರನೊಂದಿಗೆ ವಾಸವಿದ್ದರು. ಹಿರಿಯ ಪುತ್ರ ಮಂಗಳೂರಿನಲ್ಲಿ ಓದುತ್ತಿದ್ದಾರೆ. ದಿನೇಶ್ ಕುಮಾರ್ ಮೃತಪಟ್ಟು 40 ಗಂಟೆಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ನ. 27 ರಂದು ರಾತ್ರಿ ಜೊತೆಯಲ್ಲೇ ಊಟ ಮಾಡಿ ಮಲಗಿದ್ದೆವು.ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ದಿನೇಶ್ ಕುಮಾರ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅದನ್ನು ನೋಡಿ ನಾವೂ ಮೂರ್ಛೆ ಹೋದೆವು ಎಂದು ಪತ್ನಿ ಮತ್ತು ಪುತ್ರ ಹೇಳಿಕೆ ನೀಡಿದ್ದಾರೆ. ಮೃತದೇಹ ಊದಿಕೊಂಡಿದ್ದು ಬಾಯಲ್ಲಿ ರಕ್ತಸ್ರಾವವಾಗಿದೆ. ದೇಹದ ಕೆಲಭಾಗ ಗಾಯವಾಗಿದೆ. ಈ ಸಾವಿನಲ್ಲಿ ಅನುಮಾನವಿದ್ದು, ಜೊತೆಯಲ್ಲಿಯೇ ಇದ್ದ ಪತ್ನಿ, ಪುತ್ರ, ಕೆಲಸಗಾರರನ್ನು ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಮೃತ ವ್ಯಕ್ತಿಯ ಸೋದರ ಮಾವ ಮಂಡ್ಯದ ವಕೀಲ ಎಚ್.ಎಂ. ನಾರಾಯಣ ಸರಸ್ವತಿಪುರಂ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಸೇರಿದ 1.5 ಎಕರೆ ಫಾರ್ಮ್ ಹೌಸ್ ಸೇರಿದಂತೆ ಮೂರು ಅಕ್ರಮ ಫಾರ್ಮ್ ಹೌಸ್ ಗಳನ್ನು ಪಂಜಾಬ್ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್ ಇಲಾಖೆ ಸೀಜ್ ಮಾಡಿದೆ. ಸನ್ಹಾದಲ್ಲಿರುವ ಧಮ್ ಧಾಮ ಸರೋವರದ ಬಳಿ ಇರುವ ದಲೇರ್ ಮೆಹೆಂದಿಗೆ ಸೇರಿದ ಫಾರ್ಮ್ ಹೌಸ್ ಸೇರಿದಂತೆ ಮೂರು ಫಾರ್ಮ್ ಸೀಜ್ ಮಾಡಲಾಗಿದೆ. ಕೆರೆಯ ಬಳಿ ನಿರ್ಮಿಸಲಾದ ಅಕ್ರಮ ಮೂರು ಫಾರ್ಮ್ ಹೌಸ್ ಗಳನ್ನು ಸೀಜ್ ಮಾಡಲಾಗಿದೆ. ಯಾವುದೇ ಅನುಮತಿ ಇಲ್ಲದೇ ಅರಾವಳಿ ವಲಯದಲ್ಲಿ ಫಾರ್ಮ್ ಹೌಸ್ ಗಳನ್ನು ನಿರ್ಮಿಸಲಾಗಿತ್ತು ಎಂದು ಜಿಲ್ಲಾ ಯೋಜನಾಧಿಕಾರಿ ಅಮಿತ್ ಮಡೋಲಿಯಾ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ವಿವಿಧ ಶಾಲೆಗಳ ಮಕ್ಕಳ ಬ್ಯಾಗ್ ಗಳಲ್ಲಿ ಹಲವು ಆಘಾತಕಾರಿ ವಸ್ತುಗಳಿರುವುದು ಬೆಳಕಿಗೆ ಬಂದಿದ್ದು, ಶಾಲಾ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್ಫೋನ್ ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್ ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್ ಗಳಲ್ಲಿ ಸ್ಮಾರ್ಟ್ಫೋನ್ ಗಳು, ಜೊತೆಗೆ ಕಾಂಡೋಮ್ ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್ ಗಳು, ಸಿಗರೇಟ್ ಗಳು, ಮತ್ತೇರಿಸುವ ವಾಸನೆ ಹೊಂದಿರುವ ವೈಟ್ ನರ್ ಗಳು ಮತ್ತು ಹೆಚ್ಚಿನ ಮೊತ್ತದ ನಗದು ಪತ್ತೆಯಾಗಿವೆ. ಈ ಬೆಳವಣಿಗೆಯು ಹಲವು ಶಾಲೆಗಳ ಬೋಧಕ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ತರಗತಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ತರುತ್ತಾರೆ, ಅದರಿಂದ ಕಿರಿಕಿರಿ ಆಗುತ್ತಿದೆ ಎಂದು ಶಿಕ್ಷಕರು ಇತ್ತೀಚೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ವಿದ್ಯಾರ್ಥಿಗಳ ಬ್ಯಾಗ್ ಗಳನ್ನು ಪರಿಶೀಲಿಸುವಂತೆ ಕರ್ನಾಟಕ…