Subscribe to Updates
Get the latest creative news from FooBar about art, design and business.
- ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮುಂದುವರಿಸಿ: ಮಾ. 24 ರಂದು ಬೆಂಗಳೂರು ಚಲೋ: ತಿಪ್ಪೇಸ್ವಾಮಿ
- ಕಸಾಪ ಭವನಕ್ಕೆ ಜಾಗ ನೀಡಿ: ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮನವಿ
- ಸಚಿವ ಶಿವರಾಜ್ ತಂಗಡಗಿಗೆ ದಿಢೀರ್ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು
- ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ
- ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ
- ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ
- ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ
- ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ
Author: admin
ಬೆಂಗಳೂರು, ಸೆಪ್ಟಂಬರ್ 29: ಸ್ಥಳೀಯ ನಿವಾಸಿಗಳ ನಿರಂತರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಮೂಲಕ ಜನರ ಆತಂಕ ದೂರವಾಗಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಮಹಾದೇವಪುರ ವ್ಯಾಪ್ತಿಯ ಬಳಗೆರೆ ಮುಖ್ಯ ರಸ್ತೆಯಲ್ಲಿಯೇ ವಿದ್ಯುತ್ ಕಂಬ ಒಂದನ್ನು ಅಳವಡಿಸಲಾಗಿತ್ತು. ನಿತ್ಯ ನೂರಾರು ವಾಹನಗಳು ಓಡಾಡುವ ಜಾಗದಲ್ಲೇ ವಿದ್ಯುತ್ ಕಂಬ ನಿಲ್ಲಿಸಲಾಗಿತ್ತು. ಇದು ರಸ್ತೆ ಅಪಘಾತ ಸೇರಿದಂತೆ ವಿವಿಧ ಗಂಡಾಂತರಗಳಿಗೆ ಆಹ್ವಾನ ನೀಡುವಂತೆ ರಸ್ತೆಯಲ್ಲೇ ಅಳವಡಿಸಲಾಗಿತ್ತು. ಈ ಸಂಬಂಧ ಬಳಗೆರೆ ಮುಖ್ಯ ರಸ್ತೆಯ ಸ್ಥಳಿಯ ನಿವಾಸಿಗಳು ವಿದ್ಯುತ್ ಪೂರೈಸುವ ಸರ್ವೀಸ್ ಲೈನ್ ಇರುವ ವಿದ್ಯುತ್ ಕಂಬವನ್ನು ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದು, ಕೂಡಲೇ ತೆರವು ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬಗ್ಗೆ ಬೆಸ್ಕಾಂ ನಿರ್ಲಕ್ಷ್ಯ ವಹಿಸಲಾಗಿತ್ತು ಎನ್ನಲಾಗಿದೆ. ಸಾರ್ವಜನಿಕರ ಮನವಿ ಮೇರೆಗೆ ಮಹದೇವಪುರ ಟಾಸ್ಕ್ ಫೋರ್ಸ್ ಮೊಬಿಲಿಟಿ ತಂಡವು ಕಾರ್ಯಾಚರಣೆ ನಡೆಸಿದೆ. ‘ಬಳಗೆರೆ ಮುಖ್ಯ ರಸ್ತೆಯಲ್ಲಿನ ನಿವಾಸಿಗಳ ಬಹುಬೇಡಿಕೆಯಂತೆ ವಿದ್ಯುತ್ ಕಂಬ ತೆರವುಗೊಳಿಸಲಾಗಿದೆ. ಅದಕ್ಕು ಮೊದಲು ಇಲ್ಲಿನ ಭೂ ಮಾಲೀಕರ ಜತೆಗಿನ ವ್ಯಾಜ್ಯ…
ಚಿತ್ರದುರ್ಗ, ಸೆಪ್ಟೆಂಬರ್, 29: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಉಳಿದಿದೆ. ಈಗಿನಿಂದಲೇ ಟಿಕೆಟ್ ಖಾತ್ರಿ ಪಡಿಸಿಕೊಳ್ಳಲು ಟಿಕೆಟ್ ಆಕಾಂಕ್ಷಿಗಳು ಆಯಾ ಪಕ್ಷದ ವರಿಷ್ಠರ ಬೆನ್ನು ಬಿದ್ದಿದ್ದಾರೆ. 2018ರ ಜೆಡಿಎಸ್ ಪರಾಜಿತ ಅಭ್ಯರ್ಥಿ, ಕ್ಯಾಸಿನೊ ದೊರೆ ಹಾಗೂ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ. “ಭಾರತ್ ಜೋಡೋ” ಪಾದಯಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಚಿತ್ರದುರ್ಗಕ್ಕೆ ಬಂದಿದ್ದರು. ಆಗ ಪಪ್ಪಿ ಅವರಿಗೆ ಟಿಕೆಟ್ ನೀಡುವಂತೆ ಅಭಿಮಾನಿಗಳು ಭಾವಚಿತ್ರ, ಫೋಟೋ ಹಿಡಿದು ಡಿ.ಕೆ.ಶಿವಕುಮಾರ್ ಬಳಿ ಒತ್ತಾಯಿಸಿದ್ದಾರೆ. ಈ ಬೆಳವಣಿಗೆಯನ್ನು ಗಮನಿಸಿದರೆ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ ಎನ್ನಬಹುದು. 2018ರಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸುಮಾರು 49 ಸಾವಿರ ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದರು. 2023ಕ್ಕೆ ಚಿತ್ರದುರ್ಗ ಕ್ಷೇತ್ರ ಬಿಟ್ಟು,…
ಮೊದಲು ಕಾಂಗ್ರೆಸ್ ಪಕ್ಷವನ್ನೇ ಬ್ಯಾನ್ ಮಾಡಬೇಕು ಎಂದು ಹೇಳಿಕೆ ನೀಡಿದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಬಿ.ಕೆ ಹರಿಪ್ರಸಾದ್, ನಳೀನ್ ಕಟೀಲು ಮಂಪರು ಪರೀಕ್ಷೆ ಮಾಡಬೇಕು. ಮಂಗಳೂರಿನಲ್ಲಿ ಯಾರ ಜತೆ ಪಿಎಫ್ ಐ ಸಂಬಂಧ ಇದೆ ಎಂದು ಗೊತ್ತಾಗುತ್ತೆ. ಚುನಾವಣೆ ವೇಳೆ ಮೋದಿಗೆ ಜೀವ ಬೆದರಿಕೆ ವಿಚಾರ ಹೊರ ಬರುತ್ತೆ ಎಂದರು. ಇನ್ನು ಲೂಟಿ ರವಿಯ ಟೀಕೆಗಳಿಗೂ ನಾವು ಉತ್ತರಿಸುವ ಅಗತ್ಯವಿಲ್ಲ ಎಂದು ಬಿಕೆ ಹರಿಪ್ರಸಾದ್ ಟಾಂಗ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಗುಮ್ಮಟನಗರಿ ವಿಜಯಪುರದಲ್ಲಿ ನಡೆಯಲಿದ್ದು, ಸಮ್ಮೇಳನದ ಲಾಂಛನವನ್ನು ಸೆ.30(ನಾಳೆ) ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅನಾವರಣ ಮಾಡಲಿದ್ದಾರೆ. ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು, ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ. ವಿಜಯಪುರ ಜಿಲ್ಲೆಯಾಗಿ ರೂಪುಗೊಂಡ ಮೇಲೆ ಇದೇ ಪ್ರಪ್ರಥಮ ಬಾರಿಗೆ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗುತ್ತಿದೆ. ಕಳೆದ ಬಾರಿ ಕಲಬುರಗಿಯಲ್ಲಿ ರಾಜ್ಯ ಸಮ್ಮೇಳನ ನಡೆದ ಬಳಿಕ ಮತ್ತೊಂದು ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಅದೂ, ಗಡಿ ಜಿಲ್ಲೆಯಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಸಮ್ಮೇಳನ ಆಯೋಜಿಸಿರುವುದು ವಿಶೇಷ. ಆಲಮಟ್ಟಿ ಜಲಾಶಯ ಹೊಂದಿರುವ, ದ್ರಾಕ್ಷಿ ಬೀಡಾಗಿರುವ, ಗೋಳಗುಮ್ಮಟ ಖ್ಯಾತಿಯ ವಿಜಯಪುರ ನೆಲದ ಸೊಗಡನ್ನು ಒಳಗೊಂಡಂತೆ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನವನ್ನು ಚಿತ್ರಕಲಾವಿದ ಮಂಜುನಾಥ ಮಾನೆ ಅವರು…
ನವದೆಹಲಿ, ಸೆಪ್ಟೆಂಬರ್ 29: ಅಸ್ಸಾಂನ ಧುಬ್ರಿ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಸುಮಾರು 100 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಿದೆ. ಈ ವೇಳೆ ಸರ್ಕಾರಿ ಅಧಿಕಾರಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ. ದೋಣಿಯಲ್ಲಿ 10 ಮೋಟರ್ಸೈಕಲ್ಗಳನ್ನು ತೆಗೆದುಕೊಂಡು ಹೋಗುತ್ತಿರುವುದೇ ಅಪಘಾತಕ್ಕೆ ಕಾರಣವಾಯಿತು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ದೋಣಿ ಮುಳುಗಡೆ ಘಟನೆ ಕುರಿತು ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಸ್ಸಾಂ ಧುಬ್ರಿ ಟೌನ್ನಿಂದ ಸುಮಾರು 3 ಕಿಮೀ ದೂರದಲ್ಲಿರುವ ಅದಬರಿ ಎಂಬಲ್ಲಿನ ಸೇತುವೆಗೆ ದೋಣಿ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ, ಇದುವರೆಗೆ 15 ಜನರನ್ನು ರಕ್ಷಿಸಲಾಗಿದೆ. ಇದೇ ದೋಣಿಯಲ್ಲಿ ಶಾಲಾ ಮಕ್ಕಳೂ ಸಹ ಇದ್ದು, ಇದುವರೆಗೂ ಯಾವುದೇ ವಿದ್ಯಾರ್ಥಿಯನ್ನು ರಕ್ಷಿಸಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಧುಬ್ರಿ ಸರ್ಕಲ್ ಆಫಿಸರ್ ಸಂಜು ದಾಸ್ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳು ಸಮೀಕ್ಷೆಗಾಗಿ ದೋಣಿಯಲ್ಲಿ ಸಾಗುತ್ತಿದ್ದರು. ಭೂ ದಾಖಲೆ ಅಧಿಕಾರಿ ಮತ್ತು ಕಚೇರಿ…
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು. ಈ ವೇಳೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕ್ರೀಡಾಜ್ಯೋತಿ ಬೆಳಗಿಸಲಾಯಿತು. ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಕ್ರೀಡಾ ಸಚಿವರಾದ ನಾರಾಯಣಗೌಡ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದರು. ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 4500 ಕ್ರೀಡಾಪಟುಗಳು ಆಗಮಿಸಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಶಾಸಕರಾದ ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಕ್ರೀಡಾಪಟುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಎಲ್ಲಾ ಮಹಿಳೆಯರು ಕಾನೂನು ಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ಜಸ್ಟಿಸ್ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿವಾಹಿತ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಹೇಳಿದೆ. ಮಹಿಳೆಯರು ಗರ್ಭಪಾತ ಹಕ್ಕು ಹೊಂದಿದ್ದಾರೆ ವಿವಾಹಿತ, ಅವಿವಾಹಿತ ಮಹಿಳೆಯರು ಹಕ್ಕು ಹೊಂದಿದ್ದಾರೆ. ಗರ್ಭಪಾತದ ಬಗ್ಗೆ ಅವರ ವೈಯಕ್ತಿಕ ತೀರ್ಮಾನ ಅಂತಿಮವಾದದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಗರ್ಭಪಾತ ವಿಚಾರದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪ ಇರಬಾರದು ಈ ವಿಚಾರದಲ್ಲಿ ಮಹಿಳೆ ನಿರ್ಧಾರವೇ ಅಂತಿಮ. ವಿವಾಹಿತ ಅವಿವಾಹಿತರ ನಡುವೆ ವ್ಯತ್ಯಾಸ ಮಾಡುವ ಆಗಿಲ್ಲ. ಮಹಿಳೆಯರ ನಡುವೆ ವ್ಯತ್ಯಾಸ ಮಾಡುವ ಆಗಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ : ಕಾಂಗ್ರೆಸ್ ಪಕ್ಷದ ವತಿಯಿಂದ ಹಾಗೂ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೂಡೋ ಪಾದಯಾತ್ರೆಯ ನಮ್ಮ ರಾಜ್ಯದಲ್ಲಿ ಸರಿ ಸುಮಾರು 500 ಕಿ ಮೀ ನ ವರೆಗೆ ಪಾದಯಾತ್ರೆ ಇದ್ದು ಅದರ ಉದ್ದೇಶದಿಂದ ಮಾನ್ಯ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರನ್ನು ದಾವಣಗೆರೆ ಹಾಗೂ ಚಿತ್ರದುರ್ಗದ ಮಹಿಳಾ ಕಾಂಗ್ರೆಸನ ಉಸ್ತುವಾರಿಗಳಾಗಿ ಕೆಪಿಸಿಸಿ ಅಧ್ಯಕ್ಷರು ನೇಮಕ ಮಾಡಿದ್ದು ಅದರ ಪೂರ್ವಭಾವಿ ಸಭೆಯನ್ನು ಶಾಸಕಿ ಅಂಜಲಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಾಗೆ ಪಕ್ಷದ ಹಿರಿಯರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿ ಕುಶಲೋಪರಿ ವಿಚಾರಿಸಿ ಭಾರತ ಜೂಡೋ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸವದತ್ತಿ/ರಾಮದುರ್ಗ: ಭಾರತ ಜೋಡೋ ಪಾದಯಾತ್ರೆ ಮೂಲಕ ಸುಭದ್ರ ದೇಶ ಕಟ್ಟುವ ಕಾಂಗ್ರೆಸ್ ನ ಮಹೋದ್ದೇಶ ಯಶಸ್ವಿಯಾಗಿ ಈಡೇರುವ ನಿಟ್ಟಿನಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆಯಿತ್ತರು. ಸವದತ್ತಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಭಾರತ ಜೋಡೋ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ತನ್ನದೇ ಆದ ಸಿದ್ಧಾಂತಗಳ ಮೂಲಕ ಈ ಪಾದಯಾತ್ರೆಯನ್ನು ಕೈಗೊಂಡಿದೆ. 70-80 ವರ್ಷಗಳಿಂದ ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಂತಹ ಕೊಡುಗೆಗಳನ್ನು ಜನರಿಗೆ ತಿಳಿಸುತ್ತಾ ದೇಶದ ಉದ್ದಗಲಕ್ಕೂರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಪಾದಯಾತ್ರೆ ಸಾಗುತ್ತಿದೆ. ಇದಕ್ಕೆ ಹೆಚ್ಚಿನ ಜನಬೆಂಬಲ ದೊರೆಯುವಂತೆ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಆರ್.ವಿ. ಪಾಟೀಲ, ಪಂಚನಗೌಡ ದ್ಯಾಮನಗೌಡರ, ವಿನಯ ನಾವಲಗಟ್ಟಿ, ದಯಾನಂದ ಪಾಟೀಲ, ಡಿ.ಡಿ. ಟೋಪೋಜಿ, ಮಹಾಂತೇಶ ಮತ್ತಿಕೊಪ್ಪ, ವಿಶ್ವಾಸ ವೈದ್ಯ, ಶಿವಾ ಶಿಂತ್ರಿ, ಲಕ್ಕಪ್ಪ ಸವದತ್ತಿ, ಲಕ್ಕನ್ನವರ, ಕಲ್ಪನಾ ಜೋಶಿ ಹಾಗೂ ಪಕ್ಷದ ಹಿರಿಯರು…
ಬೆಳಗಾವಿ : ಜಿಲ್ಲಾ ಅಲ್ಪ ಸಂಖ್ಯಾತ ಕಾಂಗ್ರೆಸ್ ವತಿಯಿಂದ ಶಹಿದ್ ಭಗತ್ ಸಿಂಗ್ ಜಯಂತಿ ಆಚರಣೆ ಮಾಡಲಾಯಿತು ಬಳಿಕ ನಗರದ ತಿಲಕವಾಡಿಯಿಂದ ಕಾಂಗ್ರೆಸ್ ಭವನದವರೆಗೆ ಬೈಕ್ ರೈಲಿ ಮಾಡಲಾಯಿತು . ನಂತರ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಜಿಲ್ಲಾ ಅಧ್ಯಕ್ಷರಾದ ಇಮ್ರಾನ್ ತಿಪ್ಪೇಕ ಮಾತನಾಡಿದ ಅವರು ಭಗತ್ ಸಿಂಗ್ ಅವರ ದೇಶಭಕ್ತಿ ನಮ್ಮೆಲ್ಲರಿಗೂ ಆದರ್ಶ ಮತ್ತು ಮಾರದರ್ಶಕವಾಗಿದೆ. ಆದ್ದರಿಂದ ಭಗತ್ ಸಿಂಗ್ ಈ ದೇಶದ ಸರ್ವ ಶ್ರೇಷ್ಠ ಸ್ವತಂತ್ರ ಹೋರಾಟಗಾರರಾಗಿದ್ದಾರೆ ಭಾರತದ ಅಖಂಡತೆ, ಕೋಮ ಸೌಹಾರ್ದತೆಯ ಪ್ರತಿಕವಾಗಿದಾರೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಉಪಾಧ್ಯಕ್ಷರಾದ ವೀಕಿ ಸಿಂಗ್ ಹಾಜಿ ಮುಸಗೊರಿಖಾನ್ ಡಿಸಿಸಿ ವೈಸ್ ಚೇರ್ಮನ್, ತಬ್ಬಸು ಮುಲ್ಲಾ ಡಿ ಸಿ ಸಿ ಉಪ ಅಧ್ಯಕ್ಷ ಖಾದಿರ್, ಡಿ ಸಿ ಸಿ ವೈಸ್ ಚೇರ್ಮನ್ ಅಕ್ಬರ್ ಸೇಕರ್, ಡಿಸಿಸಿ ವೈಸ್ ಚೇರ್ಮನ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…