Subscribe to Updates
Get the latest creative news from FooBar about art, design and business.
- ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
- ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ: ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
- ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC ವಿದ್ಯಾರ್ಥಿ ಬಲಿ
- ರಾಜಕೀಯ ಕಾರಣಕ್ಕೆ ಹೆಚ್ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
- ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
- ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು: ನಟ ರಣವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ!
- ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು
- ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್
Author: admin
ಮೈಸೂರು: ಪ್ರಸ್ತುತ ಹೃದಯಸಂಬಂಧಿಗೆ ಕಾಯಿಲೆಗೆ ಭಾರತದಲ್ಲಿ ಶೇ.30 ರಷ್ಟು ಜನ ಮೃತಪಡುತ್ತಿದ್ದಾರೆ. ಉಳಿದಂತೆ ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್, ಸ್ಟ್ರೋಕ್ ಕೂಡ ಮಾನವನನ್ನು ಕಾಡುತ್ತಿದೆ. ಬೇರೆ ದೇಶಕ್ಕೆ ಹೋಲಿಸಿದರೆ 15 ವರ್ಷಗಳಿಗಿಂತ ಮುಂಚಿತವಾಗಿಯೇ ಹೃದಯ ಸಂಬಂಧಿ ಕಾಯಿಲೆ ಭಾರತೀಯರಲ್ಲಿ ಕಾಡುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತರೂ ಆದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಯುವಕರಲ್ಲಿ ಹೃದಯಾಘಾತ ಹೆಚ್ಚುತ್ತಿದೆ. 45 ವರ್ಷ ಕಡಿಮೆ ಇರುವ ಶೇ.8ರಷ್ಟು ಮಹಿಳೆಯರಿಗೆ ಹೃದಯಾಘಾತ ಆಗುತ್ತಿದೆ. ಸ್ಮೋಕಿಂಗ್, ಅಧಿಕ ರಕ್ತದೊತ್ತಡ ಹೃದಯಾಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದರು. ನಮ್ಮ ಸುತ್ತಮುತ್ತಲಿನ ವಾತಾವರಣ ಹಾಗೂ ಜೀವನಶೈಲಿ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಭಾರತದಲ್ಲಿ ವಾಯು ಮಾಲಿನ್ಯದಿಂದ 20 ಲಕ್ಷ ಜನ ನಾನಾ ಕಾಯಿಲೆಗೆ ತುತ್ತಾಗಿ ಮೃತ ಪಟ್ಟಿದ್ದಾರೆ. 45 ವರ್ಷದಿಂದ 60 ವರ್ಷದವರಲ್ಲಿ ಹೃದಯ ಸಂಬಂಧಿ…
ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಡ್ಯಾಂ ಕಾಲುವೆ ಬಳಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕ್ರೇನ್ ಪಲ್ಟಿಯಾಗಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. 35 ಅಡಿ ಎತ್ತರದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಶನಿವಾರ ರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ತುಂಗಭದ್ರಾ ಡ್ಯಾಂ ಕಾಲುವೆ ಬಳಿ ಗಣೇಶ ಮೂರ್ತಿ ಇದ್ದ ಕ್ರೇನ್ ಪಲ್ಟಿಯಾಗಿದೆ. ತುಂಗಭದ್ರಾ ಡ್ಯಾಂನ ಇವಿ ಕ್ಯಾಂಪ್ ನಿವಾಸಿ ಅಶೋಕ್ (18) ಮೃತಪಟ್ಟವರು. ನಿಖಿಲ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ. ಹೊಸಪೇಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ 35 ಅಡಿ ಅತ್ತರದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಶನಿವಾರ ನಡೆದಿತ್ತು. ಟಿಬಿ ಡ್ಯಾಂ ಕಾಲುವೆಯಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ಸಕಲ ತಯಾರಿ ನಡೆದಿತ್ತು. ವಾಹನದಿಂದ ಗಣೇಶ ಮೂರ್ತಿಯನ್ನು ಕ್ರೇನ್ ಮೂಲಕ ಎತ್ತಿ ಕಾಲುವೆಗೆ ಇಳಿಸುವಾಗ ಕ್ರೇನ್ ಪಲ್ಟಿಯಾಗಿದೆ. ಆಗ ಇಬ್ಬರು ಯುವಕರು ಅದರ ಅಡಿ ಸಿಲುಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಯುಪಿಯ ಲಕ್ನೋದಿಂದ ಕೃಷ್ಣನಗರದಲ್ಲಿ ಸಾಕು ನಾಯಿಯೊಂದು ಯುವಕ (23) ಮೇಲೆ ದಾಳಿ ಮಾಡಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ದಾಳಿ ವೇಳೆ ಯುವಕನ ಖಾಸಗಿ ಅಂಗಕ್ಕೆ ನಾಯಿ ಕಚ್ಚಿದೆ ಎನ್ನಲಾಗಿದೆ. ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಕೆಜಿಎಂಯುಗೆ ದಾಖಲಿಸಲಾಗಿದ್ದಾನೆ. 2 ದಿನಗಳ ನಂತರ ಕೆಜಿಎಂಯುನಿಂದ ಬಿಡುಗಡೆಯಾದ ನಂತರ, ಸಂತ್ರಸ್ತ ಕೃಷ್ಣನಗರ ಪೊಲೀಸ್ ಠಾಣೆಗೆ ಬಂದು ನಾಯಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ನಡೆದಿದೆ. ಇನ್ನೂ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ಈ ವೇಳೆ ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು ಕಂಡು ಊರಿನ ಜನ ಗುಂಪಾಗಿ ಸೇರಿದರು. ತನ್ನನ್ನು ಎಳೆದುಕೊಂಡು ಹೋಗಲು ಯತ್ನಿಸಿದರು ಎಂದು ಬಾಲಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಜನಸೇರಿರುವುದನ್ನು ಕಂಡು ಮೂವರು ಪರಾರಿಯಾಗಿದ್ದು, ಮೂವರನ್ನು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ತಾವು ಉತ್ತರ ಪ್ರದೇಶದಿಂದ ವ್ಯಾಪಾರ ಮಾಡುತ್ತ ಊರೂರು ಅಲೆಯುವುದಾಗಿ ಆರೋಪಿಗಳು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ : ಗಣಪತಿ ವಿಸರ್ಜನೆ ವೇಳೆ ಯುವಕನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಅರ್ಜುನಗೌಡ ಪಾಟೀಲ್ (20) ಹತ್ಯೆ ಮಾಡಲಾಗಿದೆ. ಅರ್ಜುನಗೌಡ ಪಾಟೀಲ್ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು :ಶೀಘ್ರದಲ್ಲೇ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ.ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಸಿ. ಹೊರಕೇರಪ್ಪ ಹಾಗೂ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಕರೆನ್ಸಿ ಮೀಟರ್ ಅಳವಡಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ.ಹೊರಕೇರಪ್ಪ, ರಾಜ್ಯದ ಎಲ್ಲಾ ಸರ್ಕಾರಗಳು ರೈತರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸುತ್ತಿತ್ತು. ಪ್ರಸ್ತುತ ರೈತರು ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಇಳಿಕೆ, ಬೆಳೆಗಳಿಗೆ ಸಾಂಕ್ರಾಮಿಕ ರೋಗ ತಗುಲಿ ಬೆಳೆನಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಕರೆನ್ಸಿ ಮೀಟರ್ ಅಳವಡಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ರೈತರು ಬೆಳೆದಿರುವ ಬೆಳೆದಿರುವ ಬೆಳೆಗಳಿಗೆ ಸೂಕ್ತ ಬೆಳೆಗಳು ಸಿಗದೇ ರೈತರು ನಷ್ಟ ಅನುಭವಿಸುತ್ತಿದ್ದಾರೆ. ರೈತರು ಸಾಲಗಾರರಾಗುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏಕಾಏಕಿ ವಿದ್ಯುತ್ ಖಾಸಗೀಕರಣ ಮಾಡುವ ಮುಖಾಂತರ ರೈತರ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಹಾಕಲು…
ಪಾವಗಡ: ತಾಲ್ಲೂಕು ಸಿ ಕೆ ಪುರ ಕ್ಲಸ್ಟರ್ ಪಾವಗಡ ತಾಲೂಕು ನಿಡಗಲ್ಲು ಹೋಬಳಿ ವ್ಯಾಪ್ತಿಯ ಹರಿಹರಪುರ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೊತ್ತೂರು ಗ್ರಾಮದ ರತ್ನಮ್ಮ ಕೊಂಡಪ್ಪ, ಈ ಶಾಲೆಯಲ್ಲಿ 135 ಜನ ಮಕ್ಕಳಿದ್ದು, ಇವರಿಗೆ ನಮ್ಮ ಗ್ರಾಮ ಪಂಚಾಯತಿ ಪಿಡಿಓ, ನಾವು ನಮ್ಮ ಸದಸ್ಯರೆಲ್ಲರೂ ಸೇರಿ ಪರಿಶುದ್ಧ ಕುಡಿಯುವ ನೀರು ಒದಗಿಸುತ್ತೇನೆ ಇಂದು ಭರವಸೆ ನೀಡಿದರು. ಈ ಶಾಲೆಯ ಕ್ಲಸ್ಟರ್ ಸಿ ಆರ್ ಪಿ ಮೂರ್ತಿ ಎಲ್. ಮಾತನಾಡಿ, ನಮ್ಮ ಕ್ಲಸ್ಟರ್’ನ ಎಲ್ಲಾ ಶಾಲೆಗಳಿಗೂ ಕುಡಿಯುವ ನೀರು ಕಲ್ಪಿಸಿ ಕೊಡಬೇಕು. ನಮ್ಮ ಕ್ಲಸ್ಟರ್ನ’ನ ಉತ್ತಂಡಪ್ಪನ ಪಾಳ್ಯ ಗ್ರಾಮದಲ್ಲಿ ಶಾಲೆಯಿದ್ದು, 12 ಜನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಓದುವುದಕ್ಕೆ ತುಂಬಾ ಅನಾನುಕೂಲವಾಗಿದೆ. ಇಲ್ಲಿ ಕೇವಲ ಎರಡು ಕೊಠಡಿಗಳಿದ್ದು ಒಂದು ಕೊಠಡಿ ಚೆನ್ನಾಗಿದ್ದು ಇನ್ನೊಂದು ಕೊಠಡಿ ಬಿದ್ದು ಹೋಗಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮುಖ್ಯೋಪಾಧ್ಯಾಯರಾದ ರಮೇಶ್…
ಗುಬ್ಬಿ: ಇತ್ತೀಚೆಗೆ ಜಿಲ್ಲಾದ್ಯಂತ ಅತ್ಯಧಿಕ ಮಳೆ ಬೀಳುತ್ತಿದ್ದು ಸಾಕಷ್ಟು ಕೆರೆಗಳು ತುಂಬಿ ತುಳುಕುತ್ತಿವೆ ಇದರ ನಡುವೆ ಹೇಮಾವತಿ ನಾಲೆಯ ಸಾಕಷ್ಟು ಭಾಗದಲ್ಲಿ ಕುಸಿತ ಕಾಣುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಎಂ.ಡಿ.ಶಂಕರಗೌಡ ಗುಬ್ಬಿ ತಾಲೂಕಿನ ಹಲವು ಭಾಗಗಳಿಗೆ ಭೇಟಿ ಪರಿಶೀಲನೆ ನಡೆಸಿದರು. ತಾಲೂಕಿನ, ಎಂಎನ್ ಕೋಟೆ, ಸಾಗರನಹಳ್ಳಿ, ಇಡಕನಹಳ್ಳಿ ಗ್ರಾಮಗಳಲ್ಲಿ ಹೇಮಾವತಿ ನಾಲೆ ಪರಿಶೀಲನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸಾಕಷ್ಟು ಮಳೆ ಬೀಳುತ್ತಿದ್ದು ಭೂಕುಸಿತ ವಾಗುತ್ತಿದೆ. ಇಂದು ಮೈಸೂರಿನಿಂದ ತಾಂತ್ರಿಕ ಡಿಸೈನರ್ಸ್ ಆಗಮಿಸಿದ್ದು, ನವೆಂಬರ್, ಡಿಸೆಂಬರ್ ವರೆಗೂ ನಾಲೆಯಲ್ಲಿ ನೀರು ಹರಿಯುತ್ತದೆ. ತದನಂತರವೇ ಕಾಮಗಾರಿಯನ್ನು ಮಾಡಲು ಸಾಧ್ಯವಾಗುತ್ತದೆ. ಸರ್ಕಾರದಲ್ಲಿ ಅನುದಾನಕ್ಕೆ ಸಮಸ್ಯೆ ಇಲ್ಲ ಮತ್ತೆ ಕುಸಿಯದ ರೀತಿಯಲ್ಲಿ ಶಾಶ್ವತವಾಗಿ ನಾಲೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ತಾಲೂಕಿನ ಅಡಗೂರು ಕೆರೆ ಕೋಡಿ ಹೊಡೆದಿದ್ದು, ಅದರ ಮರುನಿರ್ಮಾಣಕ್ಕೆ 98 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ. ಅದನ್ನು ಸಹ ತುರ್ತುಗಿ ಸರಿ ಪಡಿಸಲಾಗಿದೆ. ಕೆ.ಜಿ ಟೆಂಪಲ್ ಬಳಿಯ ನಾಲೆ ಮುಚ್ಚಿದ್ದು, ಅದಕ್ಕೂ…