Subscribe to Updates
Get the latest creative news from FooBar about art, design and business.
- ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
- ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
- ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
- ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
- ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
- ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ
- ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ
- ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ
Author: admin
ಭಾರತ್ ಜೋಡೋ ಯಾತ್ರೆಯನ್ನು ಬಿಟ್ಟು ಮೊದಲು ತಮ್ಮ ಪಕ್ಷವನ್ನು ಜೋಡಿಸಿಕೊಳ್ಳುವಂತೆ ಟೀಕಿಸಿದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿಗೆ ನಮ್ಮ ಪಕ್ಷದ ಬಗ್ಗೆ ಯೋಚಿಸುವ ಅಗತ್ಯವಿಲ್ಲ. ತಮ್ಮಲ್ಲಿರುವ ಪ್ರಮಾದಗಳನ್ನು ಅವರು ಸರಿಪಡಿಸಿಕೊಳ್ಳಲಿ, ಪಾಪ ಈಶ್ವರಪ್ಪ ಕಣ್ಣೀರು ಸುರಿಸುತ್ತಿದ್ದಾರೆ. ಅವರನ್ನ ಸಮಾಧಾನಪಡಿಸಲಿ ಎಂದು ಲೇವಡಿ ಮಾಡಿದರು. ಅಕ್ಟೋಬರ್ 6 ರಂದು ನಡೆಯುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ ಹಬ್ಬ ಹಿನ್ನೆಲೆಯಲ್ಲಿ 2 ದಿನ ವಿಶ್ರಾಂತಿ ಪಡೆಯುತ್ತಾರೆ. ಅಲ್ಲಿಗೆ ಯಾವ ಕಾರ್ಯಕರ್ತ, ಮುಖಂಡರಿಗೂ ಅವಕಾಶ ಇಲ್ಲ. ಅ. 5 ರಂದು ಮೈಸೂರಿಗೆ ಖರ್ಗೆ ಬರಲಿದ್ದಾರೆ. ಅ.6 ರಂದು ಖರ್ಗೆ ಕೂಡ ಭಾಗಿಯಾಗಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಯುವದಸರಾ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವಾಚ್ಯಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಮಹಿಳಾ ಪೊಲೀಸರೊಬ್ಬರು ದೂರು ನೀಡಿದ್ದಾರೆ. ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಮಿತಾ ಎಂಬುವವರು ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಸಂಬಂಧ ಎಫ್ ಐಆರ್ ದಾಖಲಾಗಿದೆ. ಯುವದಸರಾ ಕಾರ್ಯಕ್ರಮಕ್ಕೆ ಬಂದೋಬಸ್ತ್ ಗಾಗಿ ನನ್ನನ್ನ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ಧ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಯ್ದಿರಿಸಿದ ಜಾಗವನ್ನ ತೋರಿಸಿ ಕಳುಹಿಸಿದೆ. ಈ ಸಮಯದಲ್ಲಿ ಅಪ್ಪಣ್ಣ ಮತ್ತು ಬೆಂಬಲಿಗರನ್ನ ತಡೆದಾಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಅಪ್ಪಣ್ಣ ಮತ್ತು ಸಹಚರರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಪಿಎಸ್ ಐ ಸ್ಮಿತಾ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಳಗಾವಿ: ಕಳೆದ ಕೆಲ ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದ ಬೆಳಗಾವಿ ಜಿಲ್ಲೆಯ 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಡಿಸಿಪಿ ರವೀಂದ್ರ ಗಡಾಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾಡಿ ಅವರು 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಒಬ್ಬೊಬ್ಬರಿಂದ 50 ಸಾವಿರ ರೂ. ಬಾಂಡ್ ಪಡೆದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಬೆಳಗಾವಿ ಪಿಎಫ್ ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ ,ಎಸ್ ಡಿಪಿಐ ಬೆಳಗಾವಿ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಸಲ್ಲಾವುದ್ದೀನ್ ಖಿಲೆವಾಲೆ, ಬದ್ರುದ್ದೀನ್ ಪಟೇಲ್, ಸಮೀವುಲ್ಲಾ, ಜಹೀರ್ ಘೀವಾಲೆ, ರೆಹಮಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಬಳ್ಳಾಪುರ: ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಶಿಟ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಅನುಕಂಪದ ಆಧಾರದಲ್ಲಿ ನೀಡುವ ಸರ್ಕಾರಿ ನೌಕರಿಯು ಹಕ್ಕಲ್ಲ ಎಂದು ಅಭಿಪ್ರಾಯಪಟ್ಟಿದೆ. ಅನುಕಂಪದನ ನೌಕರಿ ಒಂದು ರೀತಿಯ ವಿನಾಯ್ತಿಯೇ ವಿನಃ ಅದು ಹಕ್ಕು ಅಲ್ಲ. ಕುಟುಂಬದ ಸದಸ್ಯ ಹಠಾತ್ ನಿಧನರಾದಾಗ ಆದ ಹಾನಿಯಿಂದ ಚೇತರಿಸಿಕೊಳ್ಳಲು ಕುಟುಂಬಕ್ಕೆ ಅವಕಾಶ ನೀಡುವ ಉದ್ದೇಶದಿಂದ ಮಾತ್ರ ಅನುಕಂಪದ ಉದ್ಯೋಗ ನೀಡಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಹಿಳೆಯೊಬ್ಬರು ಅನುಕಂಪದ ಆಧಾರದಲ್ಲಿ ನೇಮಿಸಿಕೊಳ್ಳಬೇಕು ಎಂದು ಸರ್ಕಾರಿ ಸ್ವಾಮ್ಯದ ರಸಗೊಬ್ಬರ ಹಾಗೂ ರಾಸಾಯನಿಕ ಕಂಪನಿ ಟ್ರಾವಂಕೋರ್ ಲಿ.ಗೆ ಕೇರಳ ಹೈಕೋರ್ಟ್ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ದಾಖಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾ. ಎ. ಆರ್. ಶಾ ಹಾಗೂ ನ್ಯಾ. ಕೃಷ್ಣ ಮುರಾರಿ ಅವರಿದ್ದ ಪೀಠ, ಟ್ರಾವಂಕೋರ್ ಲಿ. ಉದ್ಯೋಗಿಯಾಗಿದ್ದ ಮಹಿಳೆಯ ತಂದೆ ತೀರಿಕೊಂಡು 2 ದಶಕಗಳೇ ಕಳೆದಿವೆ. ಹೀಗಾಗಿ ಅರ್ಜಿದಾರ ಮಹಿಳೆ ಅನುಕಂಪದ ನೌಕರಿ ಪಡೆಯಲು ಅರ್ಹಳಲ್ಲ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ವಿಜಯಪುರ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರನಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು. ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಜೆಪಿ ಪಕ್ಷದ ಹೆಸರು ಕೆಟ್ಟಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬರಲು ವಿಜಯೇಂದ್ರ ಕಾರಣ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು. ಬಿ ಎಸ್ ಯಡಿಯೂರಪ್ಪ ಒಳ್ಳೆಯವರು ಇದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೋಲ್ಕತ್ತಾ: ಅಖಿಲ ಭಾರತೀಯ ಹಿಂದೂ ಮಹಾಸಭಾ ಆಯೋಜಿಸಿದ್ದ ದುರ್ಗಾ ಪೂಜಾ ಪೆಂಡಾಲ್ ನಲ್ಲಿ ಮಹಾತ್ಮ ಗಾಂಧಿಯನ್ನು ಮಹಿಷಾಸುರನಾಗಿ ಪ್ರದರ್ಶಿಸಿದ್ದ ಘಟನೆ ಕೋಲ್ಕತ್ತಾದ ಪೂರ್ವ ಅಂಚಿನಲ್ಲಿರುವ ಕಸ್ಬಾದಲ್ಲಿ ನಡೆದಿದೆ. ಈ ಘಟನೆ ಇದೀಗ ಭಾರೀ ವಿವಾದವನ್ನು ಹುಟ್ಟುಹಾಕಿದೆ. ಅಖಿಲ ಭಾರತೀಯ ಹಿಂದೂ ಮಹಾಸಭಾದ ಪೂಜೆಯಲ್ಲಿ ಮಹಿಷಾಸುರನ ಮುಖವು ಮಹಾತ್ಮ ಗಾಂಧಿಯವರ ಮುಖವನ್ನು ಹೋಲುವಂತೆ ಮಾಡಲಾಗಿದೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೇ ಅಲ್ಲಿನ ಆಡಳಿತವು ತರಾತುರಿಯಲ್ಲಿ ಪೂಜಾ ಸಂಘಟಕರನ್ನು ತಲುಪಿದ್ದು ವಿಗ್ರಹವನ್ನು ಬದಲಾಯಿಸುವಂತೆ ಒತ್ತಾಯಿಸಿದೆ. ಪೊಲೀಸರು ಮತ್ತು ಆಡಳಿತದ ಒತ್ತಡಕ್ಕೆ ಮಣಿದು ಪೂಜೆ ಸಂಘಟಕರು ಗಾಂಧಿ ವೇಷಭೂಷಣದಲ್ಲಿ ತಯಾರಿಸಿದ ವಿಗ್ರಹವನ್ನು ಬದಲಾಯಿಸಿದ್ದು, ಅದೇ ಜಾಗಕ್ಕೆ ಮಹಿಷಾಸುರನ ರೂಪದ ವಿಗ್ರಹವನ್ನು ಸ್ಥಾಪಿಸಿದ್ದಾರೆ. ದುರ್ಗಾಪೂಜೆಯಲ್ಲಿ ಗಾಂಧಿಯನ್ನು ಮಹಿಷಾಸುರನಂತೆ ತೋರಿಸಲಾಗಿದೆ ಎಂಬ ಸುದ್ದಿ ವಾಹಿನಿಗಳಲ್ಲಿ ಪ್ರಕಟವಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 20/10/2022 ಕೊನೆಯ ದಿನವಾಗಿದೆ. ಗ್ರಾಮ ಪಂಚಾಯಿತಿ ನೇಮಕಾತಿ ಸೇವಾ ನಿಯಮಗಳನ್ವಯ ನೇರ ನೇಮಕಾತಿ ಮಾಡುವ ಸಲುವಾಗಿ ಆಯ್ಕೆ ಸಮಿತಿಯನ್ನು ರಚಿಸಿದ್ದು, ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ 4 ತಾಲೂಕುಗಳ ಪ್ರತಿ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇರೆಗೆ ಹಾಗೂ ಮೀಸಲಾತಿ ಅನ್ವಯ ನೇಮಕಾತಿ ಪ್ರಕ್ರಿಯೆ ಜರುಗಿಸಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಕರವಸೂಲಿಗಾರರು 4, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು 4, ಅಟೆಂಡೆಂಟ್ 8, ಕ್ಲೀನರ್ (ಸ್ವಚ್ಛತಾಗಾರ) 34 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ಆಯ್ಕೆ ಪಟ್ಟಿಯಲ್ಲಿನ ನೇಮಕ ಮಾಡಲಾಗುವ ನಿಬಂಧನೆಗೊಳಪಟ್ಟಿರುತ್ತದೆ. ಕನ್ನಡವನ್ನು…
ಹಿರಿಯೂರು: ನಗರದ ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿನ ಪ್ರಾಂಶುಪಾಲ ಡಿ.ಧರೇಂದ್ರಯ್ಯ ಅವರ ಅಧ್ಯಕ್ಷತೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಧರಣೇಂದ್ರಯ್ಯ ಅವರು, ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯ ವಿಚಾರಗಳನ್ನು ತಿಳಿಸಿದರು. ಇದೇ ವೇಳೆ ಮಾತನಾಡಿದ ಡಾ.ಸಿದ್ದಲಿಂಗಯ್ಯ ಗಾಂಧಿಯನ್ನು ಯುವಪೀಳಿಗೆ ಮರೆಯುತ್ತಿರುವುದು ನೋವಿನ ಸಂಗತಿ ಎಂದರು. ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಹೆಚ್.ತಿಪ್ಪೇಸ್ವಾಮಿ, ಬಿ.ಈ.ಜಗನ್ನಾಥ, ಹೆಚ್.ವಲಿ, ವಿ.ಪಿ.ಜನಾರ್ದನ, ಆರ್.ಹೇಮಲತಾ, ಜಿ.ಎಸ್.ರಾಮಪ್ಪ, ಎಸ್.ಎಲ್.ಎನ್.ಮೂರ್ತಿ, ಕೆ.ಮುರವರ್ದನ ಹಾಗೂ ಬೋಧಕೇತರರಾದ ಎನ್.ನರಸಿಂಹ ಮೂರ್ತಿ, ಈ.ಬಸೀರ್, ಶಿವಲೀಲಾ, ಕೆ.ರೂಪ, ಗೀತಾ, ನಾಗರಾಜ , ರೇವಣ್ಣ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯೂರು: ನಗರದ ಹರಿಶ್ಚಂದ್ರ ಘಾಟ್ ನ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ರಾಷ್ಟ್ರೀಯ ಹಬ್ಬವನ್ನು ಆಚರಿಸಲಾಗಿತ್ತು . ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಮ್.ಕೊಟ್ಟಿಗೆಯ ಅಂಗನವಾಡಿ ಶಿಕ್ಷಕಿ ಶೀಭಾ ಜೋನಿತ, ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬರು ಸಹ ಅಳವಡಿಸಿಕೊಳ್ಳಬೇಕು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕು ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ ಎಂದು ಶೀಭಾ ಜೋನಿತ ತಿಳಿಸಿದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy