Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಸಲು ನ 15 ಕೊನೆಯ ದಿನವಾಗಿದ್ದು, ಸಾವಿರಾರು ಮಂದಿ ಅರ್ಜಿ ಸ್ವೀಕರಿಸಿದ್ದು, 400 ಮಂದಿ ಮಾತ್ರವೇ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ 30 ಶಾಸಕರು ಸೇರಿದ್ದಾರೆ. ಹಲವು ಶಾಸಕರು ಮತ್ತು ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಕೊನೆಯ ದಿನಾಂಕ ವಿಸ್ತರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಕಾಂಗ್ರೆಸ್ ಪಕ್ಷವು ಟಿಕೆಟ್ಗಾಗಿ ಅರ್ಜಿಗೆ ₹ 5,000 ಶುಲ್ಕ ನಿಗದಿಪಡಿಸಿದೆ. ಅರ್ಜಿಯೊಂದಿಗೆ ₹ 2 ಲಕ್ಷ ಡಿಡಿ ನೀಡಬೇಕು ಎಂದು ಷರತ್ತು ವಿಧಿಸಿದೆ. ಕೋಲಾರ ಕ್ಷೇತ್ರಕ್ಕೆ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಅರ್ಜಿ ಪಡೆದಿದ್ದರು. ಆದರೆ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾದ ಬಳಿಕ ಅರ್ಜಿ ಸಲ್ಲಿಸಲು ಅವರು ಹಿಂದೇಟು ಹಾಕಿದ್ದಾರೆ. ವಿ.ಆರ್.ಸುದರ್ಶನ್ ಅವರ ಜೊತೆಗೆ ಗೋವಿಂದೇಗೌಡ, ಶ್ರೀನಿವಾಸ್ ಅರ್ಜಿ ಪಡೆದಿದ್ದರು ಎನ್ನಲಾಗಿದೆ. ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ಅರ್ಜಿ ಸಲ್ಲಿಕೆಯಾಗಿಲ್ಲ. ನಂಜನಗೂಡು ಕ್ಷೇತ್ರಕ್ಕೆ ಎಚ್.ಸಿ.ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅರ್ಜಿ ಸಲ್ಲಿಸಿದ್ದಾರೆ. ಪುಲಕೇಶಿ ನಗರದಲ್ಲಿ ಶಾಸಕ ಅಖಂಡ ಶ್ರೀನಿವಾಸ್…
ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್ಐ ನಾರಾಯಣಸ್ವಾಮಿಯ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಅರೀಫ್(35) ಹಾಗೂ ಜಮಷೀದ್ ಖಾನ್(27) , ಆಂಧ್ರಪ್ರದೇಶದ ಪಟಾಣ್ ಯಾರಿಸ್ ಖಾನ್(30) ಬಂಧಿತರು. ನ. 8ರಂದು ಬಾಗೇಪಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆ ಮೇಲೆ ದಾಳಿ ಮಾಡಿ ಮನೆಯಲ್ಲಿದ್ದ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ, ಮನೆಯಲ್ಲಿದ್ದ ನಗನಾಣ್ಯ ಲೂಟಿ ಮಾಡಿದ್ದರು. ಅಡ್ಡ ಬಂದಿದ್ದ ಮನೆ ಮಾಲೀಕ ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದರು. ಜೊತೆಗ ನಾರಾಯಣಸ್ವಾಮಿ ಪುತ್ರ ಶರತ್ ಕಾಲಿಗೆ ಗುಂಡು ಹಾರಿಸಿದ್ದರು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಸದ್ಯ ಮೂವರನ್ನ ಬಂಧಿಸಿದ್ದು, ಬಂಧಿತರಿಂದ ಮೂರು ನಾಡ ಪಿಸ್ತೂಲ್ , ಖಾಲಿ ಮ್ಯಾಗ್ಜಿನ್ ಹೊಂದಿರುವ ಒಂದು ಪಿಸ್ತೂಲ್, 3 ಲಕ್ಷದ 41000 ನಗದು, ಕೃತ್ಯಕ್ಕೆ ಬಳಸಿದ ಕಾರು, 71 ಗ್ರಾಂ ತೂಕದ ಚಿನ್ನದ ಸರ, 21 ಬೆಳ್ಳಿಯ ಪೂಜಾ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…
ದಾಬಸ್ಪೇಟೆಯ ತ್ಯಾಮಗೊಂಡ್ಲು ಹೋಬಳಿ ತಡಸಿಘಟ್ಟಗ್ರಾಮದ ಕುಟುಂಬವೊಂದು ಪಿತ್ರಾರ್ಜಿತ ಆಸ್ತಿಯನ್ನ ಕಳೆದುಕೊಂಡು ಮನನೊಂದು ಕುಟುಂಬದ ಎಲ್ಲಾ ಸದಸ್ಯರು ತಹಶೀಲ್ದಾರ್ಮೂಲಕ ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಮನವಿ ಸಲ್ಲಿಸಿದ್ದಾರೆ. ತಡಸಿಘಟ್ಟದ ಗಂಗಹನುಮಕ್ಕ ಕುಟುಂಬದ 26 ಸದಸ್ಯರು ನೆಲಮಂಗಲ ತಹಶೀಲ್ದಾರ್ ಕಚೇರಿ ಎದುರು ದಯಾಮರಣ ಕೋರಿ ಪತ್ರ ಬರೆದು ಸಹಿ ಹಾಕಿ ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ. ತಡಸೀಘಟ್ಟಗ್ರಾಮದಲ್ಲಿನ ಸರ್ವೆ ನಂ. 73ರಲ್ಲಿ ತಮ್ಮ 3. 22 ಎಕರೆ ಜಮೀನನ್ನು ಗ್ರಾಮದ ರಾಜಗೋಪಾಲಯ್ಯ ಎಂಬ ವ್ಯಕ್ತಿಗೆ ಗಂಗಹನುಮಕ್ಕನ ತಂದೆ ದಿ. ಭೈರಣ್ಣ 10-06-1981ರಂದು 3500 ರೂ.ಗಳಿಗೆ ವಾಯಿದೆ ಕ್ರಯಕ್ಕೆ ಕೊಟ್ಟಿದ್ದರು. ಆದರೆ ರಾಜಗೋಪಾಲಯ್ಯ ನಕಲಿ ದಾಖಲೆ ಸೃಷ್ಟಿಸಿ ವಾಯಿದೆ ಕ್ರಯಕ್ಕೆ ಕೊಟ್ಟಿದ್ದ ಜಮೀನನ್ನು ರಾಜಕೀಯ ಪ್ರಭಾವ ಬಳಸಿ ಶುದ್ಧ ಕ್ರಯ ಮಾಡಿಕೊಂಡು ವಂಚಿಸಿರುವುದಾಗಿ ಆರೋಪಿಸಿದ್ದಾರೆ. ಕುಟುಂಬದ ಹಿರಿಯ ನಾರಾಯಣಪ್ಪ ಪ್ರತಿಕ್ರಿಯಿಸಿ, ನಮ್ಮ ತಂದೆ ಕಾಲವಾದ ನಂತರ ಜಮೀನು ವಾಪಸ್ ಪಡೆಯಲು ತೆರಳಿದಾಗ ಇವತ್ತು, ನಾಳೆ ಅಂತ ಕಾಲಹರಣ ಮಾಡಿಕೊಂಡು 2012ರಲ್ಲಿ ನಕಲಿ ದಾಖಲೆ ಸೃಷ್ಟಿಸಿ…
ಬೆಂಗಳೂರು : ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ ಅವರು ಸೋಮವಾರ ಅವರು ವಿಧಿವಶರಾಗಿದ್ದಾರೆ. ಕನ್ನಡದ ಗರ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಕೆ.ಆರ್. ಮುರಳಿ ಕೃಷ್ಣ ಅವರಿಗೆ ಬ್ರೈನ್ ಟ್ಯೂಮರ್ ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಿಜೋರಾಂನ ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟ ಬಿಹಾರದ 8 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ. ಸೋಮವಾರ ಸಂಜೆ ಕಲ್ಲುಕ್ವಾರಿ ಕುಸಿದಿದ್ದು, ಅದರಡಿ 12 ಮಂದಿ ಸಿಲುಕಿದ್ದರು. ಇನ್ನೂ ನಾಲ್ವರಿಗಾಗಿ ಹುಡುಕಾಟ ಮುಂದುವರಿದಿದೆ. ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಎಲ್ಲ ಕಾರ್ಮಿಕರು ಪತ್ತೆಯಾಗುವವರೆಗೂ ಕಾರ್ಯಾಚರಣೆ ನಡೆಯಲಿದೆಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ಊಟದ ವಿರಾಮದ ಬಳಿಕ ಕೆಲಸದಲ್ಲಿ ತೊಡಗಿದ್ದಾಗ ಅವಘಡ ಸಂಭವಿಸಿದೆ. ಕಾರ್ಮಿಕರ ಜೊತೆಗೆ ಐದು ಹಿಟಾಚಿ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎನ್ನಲಾಗಿದೆ. ಲೀಟೆ ಮತ್ತು ನಾತಿಯಾಲ್ ಗ್ರಾಮಗಳ ಜನರು ಸ್ವಯಂಪ್ರೇರಿತರಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್ ಪಡೆಯನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಕರ್ನಾಟಕದ ಅಥ್ಲೀಟ್ ಅಶ್ಚಿನಿ ಅಕ್ಕುಂಜೆ ಮತ್ತು ಕಬಡ್ಡಿ ಆಟಗಾರ ಬಿಸಿ ಸುರೇಶ್ ಜೀವಮಾನದ ಸಾಧನೆಗಾಗಿ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಉಡುಪಿ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅಶ್ವಿನಿ ಅಕ್ಕುಂಜೆ 400 ಮೀ. ರೀಲೆ ಓಟಗಾರ್ತಿಯಾಗಿದ್ದು, 2010ರ ಕಾಮನ್ ವೆಲ್ತ್ ಹಾಗೂ ಏಷ್ಯನ್ ಗೇಮ್ಸ್ ಗಳ ರಿಲೇ ತಂಡದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಚೀನಾದ ಗುವಾಂಗ್ ಜುನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಅಶ್ವಿನಿ ಅಕ್ಕುಂಜೆ ವೈಯಕ್ತಿಕ 400 ಮೀ. ರೇಸ್ ನಲ್ಲಿ ಚಿನ್ನದ ಪದಕದ ಸಾಧನೆ ಮಾಡಿದ್ದರು. ಮಾಜಿ ಕಬ್ಬಡ್ಡಿ ಆಟಗಾರ ಬಿಸಿ ಸುರೇಶ್ ಈಗಾಗಲೇ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಎರಡು ಬಾರಿ ಚಿನ್ನದ ಪದಕ ಗೆದ್ದ ಭಾರತ ತಂಡದ ಆಟಗಾರರಾಗಿದ್ದರು. ಅಲ್ಲದೇ ಪ್ರೊ ಕಬಡ್ಡಿ ಲೀಗ್ ನಲ್ಲಿ ಪ್ರಶಸ್ತಿ ತಂಡದ ಕೋಚ್ ಆಗಿದ್ದರು. ಪ್ರಸ್ತುತ ಬಂಗಾಳ್ ವಾರಿಯರ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದೀಯ ಅಂತ ಶಿಕ್ಷಕಿ ನಿಂದಿಸಿದ್ದರಿಂದ ನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಎಂಬಿಆರ್ ಲೇಔಟ್ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿನಿ ಅಮೃತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನವೆಂಬರ್ 2ರಂದು ಟೆಸ್ಟ್ ವೇಳೆ ಅಮೃತಾ ಕಾಪಿ ಚೀಟಿ ತಂದಿದ್ದಾಳೆ ಎಂದು 4-5 ದಿನಗಳಿಂದ ಕ್ಲಾಸ್ನಲ್ಲಿ ವಿದ್ಯಾರ್ಥಿಗಳ ಮುಂದೆ ಅಮೃತಾಳನ್ನು ಶಿಕ್ಷಕಿ ಶಾಲಿನಿ ನಿಂದಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕಿ ಪದೇಪದೆ ನಿಂದಿಸಿ ಅಪಮಾನ ಮಾಡಿದ್ದಾರೆ ಎಂದು ಅಮೃತಾ ಡೆತ್ ನೋಟ್ ನಲ್ಲಿ ವಿವರಿಸಿದ್ದಾಳೆ. ಎಲ್ ಕೆಜಿಯಿಂದ ಇದೇ ಶಾಲೆಯಲ್ಲಿ ಓದುತ್ತಿದ್ದ ಅಮೃತಾ ಸಾವಿಗೆ ಶಾಲಾ ಆಡಳಿತ ಮಂಡಳಿ ಕಾರಣ ಎಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದರು.ಇದ್ದ ಒಬ್ಬಳೇ ಪುತ್ರಿಯನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕಿದ್ದಾರೆ. ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಜಯಪ್ರಕಾಶ್ ಭೇಟಿ ನೀಡಿ ಅಮೃತಾ ತಾಯಿ ಆಶಾ ಅವರನ್ನು ಸಾಂತ್ವನ ಮಾಡಿದರು. ಅಮೃತಾ ಮೃತ ದೇಹಕ್ಕೆ ಅಂತಿಮ…
ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಕಚೇರಿಯ 10ನೇ ಮಹಡಿಯಿಂದ ಅಧಿಕಾರಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನವದೆಹಲಿಯಲ್ಲಿ ನಡೆದಿದೆ. ಲೋಧಿ ಕಾಲೋನಿಯ ರಾ ಕಚೇರಿಯ ಕಟ್ಟಡದಿಂದ ಹಾರಿ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿ ಖಿನ್ನತೆಯಿಂದ ನರಳುತ್ತಿದ್ದರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ತನಿಖೆ ಆರಂಭಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ತನ್ನ ಸಿಬ್ಬಂದಿಗೆ ಅಪಘಾತ ವಿಮಾ ಯೋಜನೆ ಸೌಲಭ್ಯಯನ್ನು 1 ಕೋಟಿ ರೂ.ಗೆ ಏರಿಸಿದೆ. ಕೆಎಸ್ಆರ್ಟಿಸಿ ಸಿಬ್ಬಂದಿಗೆ 50 ಲಕ್ಷ ರೂ ವಿಮೆ ನೀಡಲಾಗುತ್ತಿತ್ತು. ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ರವರಿಂದ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂ. ಸೇರಿ ಒಟ್ಟು ರೂ.1 ಕೋಟಿ ಅಪಘಾತ ವಿಮೆ ನೀಡುವುದಾಗಿ ಕೆಎಸ್ಆರ್ಟಿಸಿ ಘೋಷಿಸಿದೆ. ನಿಗಮದ ಸಿಬ್ಬಂದಿಗಳು ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ರೂ. 50 ಲಕ್ಷಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಜಾರಿಗೆ ತಂದಿರುತ್ತದೆ. ಸೋಮವಾರ ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ರವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಅದರಂತೆ ಸಿಬ್ಬಂದಿಗಳಿಗೆ…
ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದರು. ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಹೃದಯ ಸ್ತಂಭನದ ನಂತರ ಅವರಿಗೆ ನುರಿತ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿದ್ದರು. ಮಂಗಳವಾರ ಬೆಳಗ್ಗೆ ನಟ ಇಹಲೋಕ ತ್ಯಜಿಸಿದ್ದಾರೆ. ಶ್ರೀ ಕೃಷ್ಣಅವರು 350 ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ ಯಶಸ್ವಿ ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿದ್ದರು. 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy