Subscribe to Updates
Get the latest creative news from FooBar about art, design and business.
- ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!
- ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?
- ತುಮಕೂರು | ಡಿ.12ರಂದು ವಿಚಾರ ಸಂಕಿರಣ
- ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ
- ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು
- ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ
- ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ
- AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ
Author: admin
ತುರುವೇಕೆರೆ: ವಡವನಘಟ್ಟ ಪಂಚಾಯ್ತಿ ವ್ಯಾಪ್ತಿಯ ಆಯರಹಳ್ಳಿಯಲ್ಲಿ ಸುಮಾರು 33 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ಅಭಿವೃದ್ಧಿಗೆ ಶಾಸಕ ಮಸಾಲಾ ಜಯರಾಮ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಜೆ.ಡಿ.ಎಸ್. ಹಾಗೂ ಬೇರೆ ಪಕ್ಷಗಳಿಂದ ಗ್ರಾ.ಪಂ. ಮಾಜಿ ಹಾಗೂ ಹಾಲಿ ಸದಸ್ಯರುಗಳು ಮತ್ತು ಅಧ್ಯಕ್ಷರುಗಳು ಸೇರ್ಪಡೆಯಾಗಿದ್ದಾರೆ. ಗ್ರಾಮದ ಅಭಿವೃದ್ಧಿಯಾದರೆ, ಬಿಜೆಪಿಗೆ ಬರುವುದಾಗಿ ಅವರು ತಿಳಿಸಿದ್ದರು. ಅವರೆಲ್ಲರ ಆಶಯದಂತೆ ನಮ್ಮ ಗ್ರಾಮದ ಅಭಿವೃದ್ಧಿ ಮಾಡಿದ್ದು, ಕೊಟ್ಟ ಆಶ್ವಾಸನೆಯಂತೆ ಮುಖಂಡರಾದ ಸಿದ್ದೇಗೌಡ. ಗಿರೀಶ್. ಕೇಶವ . ಕಿಶೋರ್. ಮಂಜುನಾಥ್. ರಾಮ. ರಮೇಶ್. ಕುಮಾರ್. ಚನ್ನಕೇಶವ. ಗೋಪಾಲ್. ರಂಗಸ್ವಾಮಿ. ಈಶ್ವರಯ್ಯ. ಗೋವಿಂದರಾಜ್. ಬಿ.ಜೆ.ಪಿ. ಪಕ್ಷ ಸೇರ್ಪಡೆಯಾಗಿದ್ದಾರೆ ಎಂದರು. ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೊಚಿಹಳ್ಳಿ, ಚಿಕ್ಕಕಲ್ಲೂರು ಮತ್ತು ಸುತ್ತಮುತ್ತಲ ಹಳ್ಳಿಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದವು. ನಾನು ಶಾಸಕನಾದ ತಕ್ಷಣ 25ಕೋಟಿ ಅನುದಾನ ಬಿಡುಗಡೆ ಮಾಡಿಸಿ ಟಿ.ಬಿ. ಕ್ರಾಸ್ ನಿಂದ ನಿಟ್ಟೂರು ವರೆಗಿನ ರಸ್ತೆ ಮಾಡಿಸಿದ್ದೇನೆ. ಬೋಚಿಹಳ್ಳಿ ಸ್ಕೂಲ್ ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು. ಅದನ್ನು ದುರಸ್ತಿ ಮಾಡಲಾಯಿತು …
ತುಮಕೂರು: ಪಾವಗಡ ತಾಲ್ಲೂಕಿನ ವೆಂಕಟಾಪುರ ಗ್ರಾಮದ ಕೆರೆ ಬಳಿಯ ಆಂಜನೇಯಸ್ವಾಮಿ ದೇಗುಲದಲ್ಲಿ ಭಾನುವಾರ ಮಧ್ಯರಾತ್ರಿ ನಿಧಿಗಾಗಿ ಗುಂಡಿ ತೋಡುವಾಗ 5 ಮಂದಿಯನ್ನು ಥಳಿಸಿರುವ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ಒಂಟಿರೆಡ್ಡಿಪಲ್ಲಿ ಗ್ರಾಮದ ವೆಂಕಟರವಣಪ್ಪ, ಸಾಯಿ ಮುರುಳಿ, ಮುರುಳಿ, ನಾಗರಾಜು, ಚಿನ್ನಾರೆಡ್ಡಿ ಬಂಧಿತರು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಮೆಟಲ್ ಡಿಟೆಕ್ಟರ್, ಸಲಿಕೆ, ಗಡಾರಿ ಇತರೆ ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಶಿವಾನಂದ ಪ್ರೌಢಶಾಲೆ ಬೀಜವರ ಶಾಲೆಗೆ ಪೋಷಕರು ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮುಖ್ಯ ಶಿಕ್ಷಕರಾದ ರಾಮಕೃಷ್ಣಯ್ಯನವರನ್ನು ತುಂಬಾಡಿ ಪ್ರೌಢ ಶಾಲೆಗೆ ವರ್ಗಾವಣೆ ಮಾಡಲಾಗಿದ್ದು, ಅವರು ನಮ್ಮ ಶಾಲೆಗೆ ಬೇಕು ಎಂದು ಒತ್ತಾಯಿಸಿದ ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು ಶಾಲೆ ಮುಂಭಾಗದಲ್ಲಿ ಧರಣಿ ನಡೆಸಿದರು. ಇದೇ ವೇಳೆ ಶಿಕ್ಷಣ ಇಲಾಖೆಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಶಿವಾನಂದ ಪ್ರೌಢಶಾಲೆಗೆ ರಾಮಕೃಷ್ಣಯ್ಯ ಅವರನ್ನು ಮರು ನೇಮಕ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ವರದಿ: ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಬಿಜೆಪಿಯ ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಹೋರಾಟ ಮಾಡುವುದು ನಮ್ಮ ಆದ್ಯತೆಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಭ್ರಷ್ಟಾಚಾರ ವಿಚಾರವಾಗಿ ಚರ್ಚೆಗೆ ಸಿದ್ಧ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ನಾನು ಭ್ರಷ್ಟಾಚಾರದ ಚರ್ಚೆಯಿಂದ ವಾಪಸ್ ಹೋಗುವುದಿಲ್ಲ. ಈ ಚರ್ಚೆಯನ್ನು ಅಧ್ಯಕ್ಷರ ಜತೆ ಮಾಡಬೇಕೋ, ಮಾಜಿ ಮುಖ್ಯಮಂತ್ರಿಗಳ ಜತೆ ಮಾಡಬೇಕೋ ಎಂದು ತೀರ್ಮಾನ ಮಾಡುತ್ತೇನೆ ಎಂದರು. ಸರ್ಕಾರ ಈಶ್ವರಪ್ಪ ಅವರ ಪ್ರಕರಣ ಮುಚ್ಚಿ ಹಾಕಿದ್ದು, ಈ ವಿಚಾರವಾಗಿ ಯಡಿಯೂರಪ್ಪ, ಮುಖ್ಯಮಂತ್ರಿ, ಗೃಹಸಚಿವರು ಏನೆಲ್ಲಾ ಹೇಳಿಕೆ ನೀಡಿದ್ದಾರೆ ನೀವೇ ನೋಡಿ. ಬಿ ರಿಪೋರ್ಟ್ ಸಲ್ಲಿಕೆ ಈ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರವೇ ಪ್ರಾರಂಭದಿಂದ ಪ್ರಯತ್ನ ಪಟ್ಟಿದ್ದನ್ನು ಸಾಬೀತುಪಡಿಸಿದೆ. ಹೀಗಾಗಿ ವಿರೋಧ ಪಕ್ಷದ ನಾಯಕರು ನ್ಯಾಯಾಂಗ…
ತುಮಕೂರು: ಅರಣ್ಯ ಇಲಾಖೆಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ನೆಪದಲ್ಲಿ ಅರಣ್ಯ ಅಧಿಕಾರಿಯೊಬ್ಬರು ರೈತರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಬ್ಬಿ ತಾಲ್ಲೂಕಿನ ಚೇಳೂರು ಯಾದವರಗಟ್ಟಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಗುಬ್ಬಿ ತಾಲ್ಲೂಕು ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತ ಬಸವರಾಜು ಮೇಲೆ ಹಲ್ಲೆ ನಡೆಸಿ, ಕುಟುಂಬದ ಸದಸ್ಯರನ್ನು ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆಯಲ್ಲಿ ಗಾಯಗೊಂಡ ರೈತ ಬಸವರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ರೈತನ ಕುಟುಂಬಸ್ಥರು ಚೇಳೂರು ಠಾಣೆಗೆ ದೂರು ನೀಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಯಾರೋ ನನ್ನ ಬಗ್ಗೆ ಇಲ್ಲದ ವದಂತಿ ಹಬ್ಬಿಸಿ, ಬಾಯಿಗೆ ಬಂದಂತೆ ಅಬ್ಬರಿಸಿ ಬೊಬ್ಬಿರಿದು, ನನ್ನ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ, ಅದು ಸಾಧ್ಯವಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ನಾನು ಹೇಳಿದ್ದು, ಕೇವಲ ಒಂದು ಸಮುದಾಯದ ಮತಗಳಿಂದ ಮುಖ್ಯಮಂತ್ರಿಗಳಾಗಲು ಸಾಧ್ಯವಿಲ್ಲ. ಎಲ್ಲ ಸಮುದಾಯದವರ ಬೆಂಬಲ, ಆಶೀರ್ವಾದ ಇದ್ದರೆ ಮಾತ್ರ ರಾಜ್ಯದ ಸಿಎಂ ಆಗಲು ಸಾಧ್ಯ ಎಂದು. ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆಯೇ ಹೊರತು, ನಾನು ಒಗ್ಗಲಿಗರ ಬಗ್ಗೆ ಆಗಲಿ, ಅಥವಾ ಯಾವುದೇ ಸಮುದಾಯದ ಬಗ್ಗೆ ಎಲ್ಲಿಯೂ ತಪ್ಪು ಹೇಳಿಕೆ ನೀಡಿಲ್ಲ ಎಂದು ಜಮೀರ್ ಅಹ್ಮದ್ ಹೇಳಿದರು. ಒಕ್ಕಲಿಗರ ಸಮುದಾಯದ ಮೇಲೆ ನನಗೆ ಅಪಾರ ಗೌರವ, ಅಭಿಮಾನವಿದೆ. ನಾನು ಒಕ್ಕಲಿಗರ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ಎಐಸಿಸಿ ಯಿಂದ ನೋಟಿಸ್ ಬಂದಿದೆ ಎಂಬುದು ಸುಳ್ಳು. ನಾನು ಏನೂ ತಪ್ಪು ಮಾತನಾಡಿಯೇ ಇಲ್ಲ ಎಂದ ಮೇಲೆ ನನಗೇಕೆ ನೋಟೀಸ್ ನೀಡುತ್ತಾರೆ ಎಂದು ಅವರು ಪ್ರಶ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತುರುವೇಕೆರೆ: ಪಟ್ಟಣದ ಬಾಣಸಂದ್ರ ರಸ್ತೆಯಲ್ಲಿನ ಕೋಳಿ ಅಂಗಡಿಯ ಹಿಂಭಾಗ ಸರಿಸುಮಾರು 85ರ ಆಸುಪಾಸಿನ ವಯೋವೃದ್ದ ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದಿದ್ದು, ಈ ವೃದ್ಧನನ್ನು ತುರುವೇಕೆರೆ ಠಾಣೆಯ ಪೊಲೀಸರು ಚಿಕಿತ್ಸೆ ಕೊಡಿಸಿ ಮಗನ ಜೊತೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವೃದ್ಧ ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದಿದ್ದು, ಕೋಳಿ ಅಂಗಡಿಯ ಕೆಲಸಗಾರರು ತುರುವೇಕೆರೆ ಠಾಣೆಯ ಪೊಲೀಸರಿಗೆ ಕರೆಮಾಡಿ ಸುದ್ದಿ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ವೃತ್ತ ನಿರೀಕ್ಷಕರಾದ ಗೋಪಾಲ್ ನಾಯಕ್ ಹಾಗೂ ಠಾಣೆಯ ಪೊಲೀಸ್ ಪಿ.ಎಸ್ ಐ ಕೇಶವಮೂರ್ತಿ ಅವರ ಮಾರ್ಗದರ್ಶನದಲ್ಲಿ ಅಸ್ವಸ್ಥಗೊಂಡಿದ್ದ ವೃದ್ಧನನ್ನು ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ವೃದ್ಧನ ವಿಳಾಸ ಪತ್ತೆ ಹಚ್ಚಿ ಮಗನ ಜೊತೆ ಕಳುಹಿಸಿಕೊಟ್ಟಿದ್ದಾರೆ. ವೃದ್ದನು ತಿಪಟೂರಿನಲ್ಲಿರುವ ಮಗಳ ಮನೆಗೆಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹೊಸಳ್ಳಿ ಅಗ್ರಹಾರದಿಂದ ಪ್ರಯಾಣ ಬೆಳೆಸಿ ಬಂದು ತಿಪಟೂರು ಎಂದು ತುರುವೇಕೆರೆಯಲ್ಲಿಯೇ ಇಳಿದು ದಿಕ್ಕು ತೋಚದೆ ಬಾಣಸಂದ್ರ ರಸ್ತೆಯ ಕೋಳಿ ಅಂಗಡಿಯ ಬಳಿ ಅಸ್ವಸ್ಥಗೊಂಡು ಬಿದ್ದಿರುವುದಾಗಿ ವೃದ್ದನು ಹೇಳಿಕೆ ನೀಡಿದ್ದಾನೆ. ತಂದೆ…
ಹಾಸನ: ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದ್ದು, ವಿದ್ಯಾರ್ಥಿಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ನಂತರ ವಿದ್ಯಾರ್ಥಿನಿಯರಲ್ಲಿ ವಾಂತಿ, ಭೇದಿ ಶುರುವಾಗಿದ್ದು, ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣವೇ ವಿದ್ಯಾರ್ಥಿನಿಯರನ್ನು ಆಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ಬಹುಭಾಷಾ ನಟ ಅರ್ಜುನ್ ಸರ್ಜಾ ರವರ ತಾಯಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿಯ ಜಕ್ಕೇನಳ್ಳಿಯ ಸ್ವಗ್ರಾಮದಲ್ಲಿ ಶಕ್ತಿಪ್ರಸಾದ್ ರವರ ಸಮಾಧಿಯ ಪಕ್ಕದಲ್ಲಿ ನೆರವೇರಿಸಿದರು. ಕಳೆದ 22 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಲಕ್ಷ್ಮಿ ದೇವಿ ಅಮ್ಮನವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಲಕ್ಷ್ಮೀದೇವಮ್ಮನವರಿಗೆ 85 ವರ್ಷ ವರ್ಷ ವಯಸ್ಸಾಗಿತ್ತು. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು ಹಾಗೂ ಮಧುಗಿರಿ ಶಾಸಕರಾದ ವೀರಭದ್ರಯ್ಯ, ಮುರಳಿಧರ ಹಾಲಪ್ಪ, ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ, ಎಲ್.ಸಿ.ನಾಗರಾಜ್ , ಮಧು ಗೌಡ ಮೊದಲಾದವರು ಇದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ದೇಶದ ಅತ್ಯುನ್ನತ ಹುದ್ದೆಯ್ದಾ ರಾಷ್ಟ್ರಧ್ಯಕ್ಷರಾಗಿ ದ್ರೌಪದಿ ಮುರ್ಮ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಸೋಮವಾರ ಬೆಳಗ್ಗೆ 10.15ಕ್ಕೆ ಸಮಾರಂಭ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೂತನ ರಾಷ್ಟ್ರಾಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ರಾಷ್ಟ್ರಪತಿಯವರು 21 ಗನ್ ಸೆಲ್ಯೂಟ್ ಸ್ವೀಕರಿಸಿದ ಬಳಿಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಂತರ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೂ ಮೊದಲು ನಿರ್ಗಮಿತ ಅಧ್ಯಕ್ಷರು ಮತ್ತು ನೂತನ ಅಧ್ಯಕ್ಷರು ವಿಧ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸಲಿದ್ದಾರೆ. ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…