Subscribe to Updates
Get the latest creative news from FooBar about art, design and business.
- ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
- ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
- ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
- ವರನಟ ಡಾ. ರಾಜ್ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
- ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
- ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
- ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ
- ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು
Author: admin
ಹಿರಿಯೂರು: ತಾಲ್ಲೂಕು ಪಂಚಾಯತಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೂಮಿ ಪೂಜೆ ನೆರವೇರಿಸಿದರು. ಹಿರಿಯೂರು ತಾಲೂಕಿಗೆ ಸುಸಜ್ಜಿತವಾದ ನೂತನ ತಾಲೂಕು ಪಂಚಾಯಿತಿ ಕಟ್ಟಡವನ್ನು ಆದಿವಾಲ ಗ್ರಾಮದ ಮುರುಗನ್ ದೇವಸ್ಥಾನದ ಹತ್ತಿರ 3,52,00,000 ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಪೂರ್ಣಿಮಾ ಶ್ರೀನಿವಾಸ್, ನಿರ್ಮಾಣ ಹಂತದಲ್ಲಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಕುರಿತು ಪ್ರಸ್ತಾಪಿಸಿ, 25 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಸದ್ಯದಲ್ಲಿಯೇ ಕಾಮಗಾರಿ ಪೂರ್ಣಗೊಳ್ಳಲಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು. ಹಿರಿಯೂರು ತಾಲ್ಲೂಕಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ವ್ಯವಸ್ಥೆ ಬಗ್ಗೆಯೂ ಈಗಾಗಲೇ ಸಂಬಂಧ ಪಟ್ಟ ಸಚಿವರ ಬಳಿ ಹಾಗೂ ಸರ್ಕಾರದಲ್ಲಿ ಈಗಾಗಲೇ ಚರ್ಚಿಸಿದ್ದೇನೆ ಎಂದು ತಿಳಿಸಿದ ಅವರು, ಕಳೆದ ನಾಲ್ಕುವರೆ ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರವರ್ಗ 01ರ…
ಮಧುಗಿರಿ: ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗುತ್ತಿದ್ದು, ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಭಾರೀ ಅನಾನುಕೂಲವಾಗುತ್ತಿದೆ. ಸಂತೆ ಮೈದಾನದಲ್ಲಿ ನೀರು ನಿಲ್ಲುವುದರಿಂದ ಮಹಿಳೆಯರು ವ್ಯಾಪಾರದ ವೇಳೆ ಜಾರಿ ಬಿದ್ದಿರುವುದು, ಬೀದಿದೀಪ ನಿರ್ವಹಣೆ ನಿರ್ಲಕ್ಷ್ಯ, ರಾಜೀವ್ ಗಾಂಧಿ ಕ್ರೀಡಾಂಗಣ ಕೆಸರುಗದ್ದೆಯಾಗಿರುವುದರಿಂದ ವಾಯುವಿಹಾರಿಗಳಿಗೆ ಮತ್ತು ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ದೂರಿದೆ. ಈ ಸಂಬಂಧ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಅಕ್ಟೋಬರ್–21ರಂದು ”ಮಧುಗಿರಿ ಬಂದ್” ಕರೆ ನೀಡಲಾಗುತ್ತಿದೆಂದು ಸೋಮವಾರ ಪಟ್ಟಣದಲ್ಲಿ ಪದಾಧಿಕಾರಿಗಳು ದ್ವಿಚಕ್ರವಾಹನದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕಳೆದ ಹದಿನೈದು ದಿನಗಳಿಂದ ದಸರಾ ರಜೆ ಇದ್ದ ಹಿನ್ನೆಲೆಯಿಂದಾಗಿ ಶಾಲಾ ಕಾಲೇಜುಗಳು ರಜೆ ಇದ್ದವು, ಸೋಮವಾರದಿಂದ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು ಮಕ್ಕಳನ್ನು ಪೋಷಕರು ಶಾಲೆಗೆ ಬಿಡಲು ದ್ವಿಚಕ್ರ ವಾಹನಗಳು ಮತ್ತು ಆಟೋಗಳ ಮೂಲಕ ಬರುತ್ತಾರೆ. ಆದರೆ ಮಧುಗಿರಿ ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ…
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಹೊಸದಾಗಿ 4 ಸಾವಿರ ಬಸ್ ಗಳನ್ನು ಖರೀದಿಸಲು ಮುಂದಾಗಿದೆ. ಇದೇ ವೇಳೆ ನಷ್ಟವನ್ನು ತಪ್ಪಿಸಲು ನಾಲ್ಕೂ ನಿಗಮಗಳನ್ನು ವಿಲೀನಗೊಳಿಸಲು ಸಜ್ಜಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕಗಳಿಂದ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟವನ್ನು ತಪ್ಪಿಸಲು ನಾಲ್ಕೂ ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಶ್ರೀನಿವಾಸಮೂರ್ತಿ ಸಮಿತಿ ಶಿಫಾರಸು ಮಾಡಿದೆ ಎಂದು ಹೇಳಿದರು. ನಾಲ್ಕು ನಿಗಮಗಳು ಅಸ್ತಿತ್ವದಲ್ಲಿರುವುದರಿಂದ ಆಡಳಿತಾತ್ಮಕ ಹೊರೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ನಿಗಮಗಳನ್ನು ವಿಲೀನಗೊಳಿಸಿ ಒಂದೇ ನಿಗಮ ಅಸ್ತಿತ್ವದಲ್ಲಿರುವಂತೆ ಮಾಡಿದರೆ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟ ತಪ್ಪುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಲ್ಕು ನಿಗಮಗಳಿರುವುದರಿಂದ ಎಲ್ಲ ನಿಗಮಗಳು ತಮ್ಮ ತಮ್ಮ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳುತ್ತವೆ. ಹೀಗಾಗಿ ಬಹುತೇಕ ಸಂದರ್ಭಗಳಲ್ಲಿ ಬಸ್ಸುಗಳು ಕಡಿಮೆ ಪ್ರಯಾಣಿಕರೊಂದಿಗೆ ಸಂಚರಿಸುವಂತಾಗಿ ನಷ್ಟದ ಪ್ರಮಾಣ ಹೆಚ್ಚುತ್ತದೆ. ನಿಗಮಗಳು ವಿಲೀನವಾದಾಗ ಅಗತ್ಯಕ್ಕನುಗುಣವಾಗಿ ಬಸ್ ಸಂಚಾರಕ್ಕೆ ಅವಕಾಶ ನೀಡಬಹುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಳಗಾವಿ: ಇಲ್ಲಿನ 3ನೇ ರೈಲ್ವೆ ಗೇಟ್ ಗೆ ನಿರ್ಮಿಸಿದ ಮೇಲ್ಸೇತುವೆಯಲ್ಲಿ ಗುಂಡಿಗಳು ಬಿದ್ದ ಪರಿಣಾಮ, ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಮೇಲ್ಸೇತುವೆಯನ್ನು ಆರು ದಿನಗಳ ಹಿಂದಷ್ಟೇ ಜನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೇ ಅಕ್ಟೋಬರ್ 12ರಂದು ಮೇಲ್ಸೇತುವೆಯನ್ನು ಉದ್ಘಾಟಿಸಲಾಗಿತ್ತು. ಆದರೆ, ಸೇತುವೆಯ ಮಧ್ಯದಲ್ಲಿ ಗುಂಡಿಗಳು ಬಿದ್ದಿವೆ. 35.46 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಮೂರು ವರ್ಷ ತೆಗೆದುಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನ ಹಾಗೂ ವಾಹನ ಸಂಚಾರ ನಿಲ್ಲಿಸಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಅಭಯ ಪಾಟೀಲ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳೂ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಗುತ್ತಿಗೆದಾರರ ಬಾಕಿಯನ್ನು ತಡೆಹಿಡಿಯಬೇಕು ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಾಕೋಲೆಟ್, ಕ್ಯಾಂಡಿ ತಿನ್ನಲು ಅಮ್ಮ ಬಿಡುತಿಲ್ಲ ಎಂದು ಮೂರು ವರ್ಷದ ಕಂದ ಅಮ್ಮನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮನಕುಲುಕುವ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಂದೆಯ ಜೊತೆ ಪೊಲೀಸ್ ಠಾಣೆಗೆ ಆಗಮಿಸಿದ 3 ವರ್ಷದ ಮಗು, ಅಮ್ಮ ನನಗೆ ಚಾಕೋಲೆಟ್, ಕ್ಯಾಂಡಿ ತಿನ್ನಲು ಬಿಡುವುದಿಲ್ಲ. ನನ್ನ ಬಳಿ ಇರುವ ಚಾಕೋಲೇಟ್ ಮತ್ತು ಕ್ಯಾಂಡಿ ಕದಿಯುವ ಅಮ್ಮನನ್ನು ಜೈಲಿಗೆ ಹಾಕಿ ಎಂದು ದೂರು ಕೊಟ್ಟಿದ್ದಾನೆ. ಮಧ್ಯಪ್ರದೇಶದ ಭುರಾನ್ ಪುರ್ ಜಿಲ್ಲೆಯ ಡೆಧಾತಲೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಾಕೋಲೇಟ್ ಕೇಳಿದರೆ ಅಮ್ಮ ಹೊಡೆಯತ್ತಾರೆ. ಈ ಬಗ್ಗೆಯೂ ಗಮನಹರಿಸಿ ಎಂದು ಮಗು ದೂರು ಕೊಟ್ಟಿದ್ದನ್ನು ಮಹಿಳಾ ಪೊಲೀಸ್ ದೂರು ಸ್ವೀಕರಿಸಿದ್ದಾರೆ. ಮಗು ಸ್ನಾನ ಮಾಡುವಾಗ ಚಾಕೋಲೆಟ್ ನೀಡಲು ನಿರಾಕರಿಸಿದ್ದಾರೆ. ಈ ವೇಳೆ ಸ್ನಾನ ಮುಗಿಸಿ ಬಂದಾಗ ಮಗ ಚಾಕೋಲೇಟ್ ಕೇಳಿದಾಗ ಅಮ್ಮ ಮೆಲ್ಲಗೆ ಹೊಡೆದಿದ್ದಾಳೆ. ಇದರಿಂದ ಅಳಲು ಆರಂಭಿಸಿದ್ದು, ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಂತೆ ಪಟ್ಟು ಹಿಡಿದಿದ್ದರಿಂದ ಕರೆದುಕೊಂಡು ಬಂದೆ…
ಬೆಂಗಳೂರು: 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದ್ದು, ಜೊತೆಗೆ ಲಂಬಾಣಿ ತಾಂಡಾಗಳನ್ನೂ ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಮೀನು ವಿಚಾರದಲ್ಲಿ ಬಗರ್ ಹುಕುಂ ಸಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ, ಬರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಹಳ್ಳಿಗಳಲ್ಲಿ ಸ್ಮಶಾನ ಇಲ್ಲದಿದ್ದರೇ ಸರ್ಕಾರದ ಅಥವಾ ಖಾಸಗಿ ಜಾಗ ಗುರುತಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಮಣ್ಣು ಸವಕಳಿಯಿಂದ ಹಾನಿಗೊಳಗಾದವರಿಗೂ ಪರಿಹಾರ ನೀಡಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್,ಶ್ರೀಕಂಠಯ್ಯನವರು ರಚಿಸಿದ “ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ” ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕರೆ ನೀಡಿದ್ದಾರೆ. ನವೆಂಬರ್ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು ಸಂಭ್ರಮದಿಂದ ಆಚರಿಸುತ್ತಾರೆ. ಅದರೊಂದಿಗೆ ಈ ಬಾರಿ ಪ್ರತಿಯೊಬ್ಬ ಕನ್ನಡಿಗನೂ ನಮ್ಮ ಭಾಷೆ, ಸಂಸ್ಕೃತಿ, ಪರಂಪರೆಯ ಧ್ಯೋತಕವಾದ ಕನ್ನಡದ ಧ್ವಜವನ್ನು ಸ್ವ-ಇಚ್ಛೆಯಿಂದ ಹೆಮ್ಮೆಯಿಂದ ಪ್ರತಿಯೋಬ್ಬರ ಮನೆಯ ಮೇಲೆ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಆಚರಿಸೋಣ. ನಾಡಿನಾದ್ಯಂತ ಎಲ್ಲೆಡೆಯೂ ಹಳದಿ ಕೆಂಪು ಬಣ್ಣವು ರಾರಾಜಿಸಲಿ, ಸ್ಫೂರ್ತಿಯ ಸೆಲೆ ಎಲ್ಲೆಡೆಯೂ ಪಸರಿಸಲಿ, ಎಲ್ಲರ ಮನ-ಮನೆಯಲ್ಲೂ ಕನ್ನಡತನ ಮೆರೆಯಲಿ ಎಂದು ನಾಡೋಜ ಡಾ. ಮಹೇಶ ಜೋಶಿ ಆಶಯ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ-ಕನ್ನಡಿಗ-ಕರ್ನಾಟಕ…
ನವದೆಹಲಿ: ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ನೇಮಕ ಮಾಡಿದ್ದಾರೆ. ಹಾಲಿ ಸಿಜೆಐ ಯುಯು ಲಲಿತ್ ಅವರ ನಿವೃತ್ತಿಯ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಸಿಜೆಐ ಯುಯು ಲಲಿತ್ ಅವರು ಅಕ್ಟೋಬರ್ 11 ರಂದು ನ್ಯಾಯಮೂರ್ತಿ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ಸಿಜೆಐ ಆಗಿ, ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ಎರಡು ವರ್ಷಗಳಿಗೂ ಹೆಚ್ಚು ಅವಧಿಯನ್ನು ಹೊಂದಿರುತ್ತಾರೆ. ಇದು ಇತ್ತೀಚಿನ ದಿನಗಳಲ್ಲಿ ಸಿಜೆಐ ಹುದ್ದೆಗೆ ಸುದೀರ್ಘ ಅವಧಿಗಳಲ್ಲಿ ಒಂದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕೋಡಿ : ಕಾಂಗ್ರೆಸ್, ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರಗಳನ್ನು ಪಕ್ಷ ಆಯ್ಕೆ ಮಾಡಿಕೊಂಡಿದ್ದು ಪ್ರತಿ ಕಾರ್ಯಕರ್ತನಿಗೂ ತಲಾ 25 ವೋಟ್ಗಳನ್ನು ಸೆಳೆಯುವ ಜವಾಬ್ದಾರಿ ನೀಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ನಡೆದ ಸಂಕಲ್ಪ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 100 ಕ್ಷೇತ್ರಗಳನ್ನು ಆಯ್ಕೆ ಮಾಡಿ ಅವುಗಳ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇವೆ. ಒಬ್ಬೊಬ್ಬ ಕಾರ್ಯಕರ್ತನಿಗೆ 21 ಮತಗಳ ಜವಾಬ್ದಾರಿ ನೀಡಲಾಗಿದೆ. ರಾಜಕಾರಣದಲ್ಲಿ 51 ಪರ್ಸೆಂಟ್ ನೂರಕ್ಕೆ ಸಮಾನ 49 ಪರ್ಸೆಂಟ್ ಶೂನ್ಯಕ್ಕೆ ಸಮಾನ ಎಂದರು. ಬಿಜೆಪಿ ಗೆಲ್ಲಿಸುವ ಜವಾಬ್ದಾರಿ ಸವದಿಯವರಿಗೆ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು , ಯಾವ ಕುದುರೆ ಓಡುತ್ತೋ ಅದಕ್ಕೆ ಜಿದ್ದು ಕಟ್ಟುತ್ತಾರೆ. ಯಮಕನಮರಡಿ, ಚಿಕ್ಕೋಡಿ, ಬೆಳಗಾವಿ ಗ್ರಾಮೀಣ, ಖಾನಾಪುರ ಸೇರಿದಂತೆ ಐದು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತೇನೆ ಎಂದರು. ಇನ್ನು ಪಂಚಮಸಾಲಿ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳು ಚಿಂತನೆ ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯ ಕೊಡಬೇಕು ಎನ್ನುವ ಚಿಂತನೆ ಬಗ್ಗೆ…
ಬೆಳಗಾವಿ: ಖಾಸಗಿ ಫೈನಾನ್ಸ್ ವಿರುದ್ಧ 25 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಂತ್ರಸ್ತರು ಫೈನಾನ್ಸ್ ಮತ್ತು ಆಡಳಿತ ಮಂಡಳಿ ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನಡೆದಿದೆ. ಘಟಪ್ರಭಾ ಪಟ್ಟಣದಲ್ಲಿರುವ ನವೋದಯ ಫೈನಾನ್ಸ್, ಜಗಜ್ಯೋತಿ ಸೌಹಾರ್ದ ಸಹಕಾರಿ ಸಂಘವು ಸರ್ವಜ್ಞ ಚಿಟ್ ಹೆಸರಿನಲ್ಲಿ ಅಂದಾಜು 25 ಕೋಟಿ ರೂಪಾಯಿ ವಂಚನೆ ಆರೋಪ ಮಾಡಿದ್ದಾರೆ. ಹೀಗಾಗಿ ವಂಚನೆಗೊಳಗಾದವರು ಫೈನಾನ್ಸ್ನ ಆಡಳಿತ ಮಂಡಳಿ ಮತ್ತು ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮನೆಯ ಮುಂದೆ ಬೊಬ್ಬೆಹಾಕಿ, ತಮಟೆ, ಪಾತ್ರೆಗಳನ್ನು ಬಾರಿಸಿ ಪ್ರತಿಭಟನೆ ನಡೆಸಿದ ಜನರು, ನಮ್ಮ ದುಡಿದ ಹಣ ವಾಪಸ್ ಕೊಡಿ ಎಂದು ಘೋಷಣೆ ಕೂಗಿದರು. ಇತ್ತ ಜನರ ಪ್ರತಿಭಟನೆಗೆ ಹೆದರಿದ ಆಡಳಿತ ಮಂಡಳಿ ಅಧ್ಯಕ್ಷ ಅಣ್ಣಪ್ಪ ಸೇರಿ ಸದಸ್ಯರು ಪರಾರಿ ಆಗಿದ್ದಾರೆ. ಗ್ರಾಹಕರು ಠೇವಣಿ ಇಟ್ಟ ಹಣದಲ್ಲಿ ಆಡಳಿತ ಮಂಡಳಿ ಸದಸ್ಯರು ಬೇರೆಡೆ ಆಸ್ತಿ ಖರೀದಿಸಿದ ಆರೋಪವಿದೆ. ನಮ್ಮತುಮಕೂರು.ಕಾಂನ ಕ್ಷಣ…