Author: admin

ಹಾವೇರಿ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಂದಹಾಗೇ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳೋ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಖಚಿತ ಮಾಹಿತಿಯನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವಿಜಯಪುರ: ಬೆಳಗಾವಿ ಗೋಲ್ಫ್ ಮೈದಾನದಲ್ಲಿ ಪತ್ತೆಯಾಗಿರುವ ಚಿರತೆಯನ್ನು ಸೆರೆ ಹಿಡಿಯಲಾಗದ ಕಾರಣಕ್ಕೆ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ನಾನು ರಾಜೀನಾಮೆ ನೀಡಿದರೆ ಚಿರತೆ ಸೆರೆ ಆಗುತ್ತದೆ ಎಂದಾದರೆ ಈಗಲೇ ರಾಜಿನಾಮೆ ನೀಡುತ್ತೇನೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು‌ ಉತ್ತರ ಕರ್ನಾಟಕ ‌ಭಾಗದ ಸಿಬ್ಬಂದಿಯನ್ನು ಹಾಕಿದ್ದೇವೆ. ಪಳಗಿದ ಆನೆಗಳನ್ನು‌ ತಂದಿದ್ದೇವೆ, ಆದರೂ ಚಿರತೆ ಸೆರೆ ಸಾಧ್ಯವಾಗಿಲ್ಲ. ಎರಡು ದಿನಗಳಿಂದ ಚಿರತೆ ಬೆಳಗಾವಿ ಪಟ್ಟಣದಲ್ಲಿ ಎಲ್ಲೂ ಕಂಡು ಬಂದಿಲ್ಲ. ಚಿರತೆ ಗೋಲ್ಫ್ ಕೋರ್ಟ್ ಸುತ್ತಮುತ್ತ ತಿರುಗಾಡುತ್ತಿದೆ ಎನ್ನಲಾಗಿದೆ. ಸಿಬ್ಬಂದಿ ಚಿರತೆ ಸೆರೆಹಿಡಿಯುವ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಳ್ಳಾರಿ: ವಿದ್ಯುತ್ ​ತಂತಿ ಸ್ಪರ್ಶಿಸಿ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಂಡಿಹಟ್ಟಿಯಲ್ಲಿ ನಡೆದಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಂಪಾಪತಿ ಹಾಗೂ ಅವರ ಪತ್ನಿ ದ್ಯಾವಮ್ಮ ಮೃತ ದುರ್ದೈವಿಗಳಾಗಿದ್ದಾರೆ. ಮನೆಯ ಮೇಲೆ ಹಾದು ಹೋಗಿದ್ದ ವಿದ್ಯುತ್​ ತಂತಿ ದ್ಯಾವಮ್ಮಗೆ ತಗುಲಿತ್ತು, ಈ ವೇಳೆ ಪತ್ನಿಯನ್ನ ಬಿಡಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್  ಗಳನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳ ಒಂದು ಬ್ಯಾಚ್ ಅನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಹಾಗೂ ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಪೀಠ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ. ಈ ಹಿಂದೆ, ಅಂದಿನ ಸಿಜೆಐ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು, ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ. ಶಾಲಾ ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹಿರಿಯೂರು: ಕೆಂಪೇಗೌಡ ಜಯಂತಿ ಅಂಗವಾಗಿ ನಡೆಸಲಾದ ಮೆರವಣಿಗೆಯಲ್ಲಿ ನಿಯಮ ಉಲ್ಲಂಘಿಸಿ ಅಧಿಕ ಶಬ್ಧದ ಡಿ.ಜೆ. ಬಳಸಲಾಗಿರುವ ಬಗ್ಗೆ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಡಿಸೆಬಲ್ ಮಿತಿ ಮೀರಿ ಡಿ.ಜೆ.ಬಳಕೆ ಮಾಡಲಾಗಿದ್ದು, ಈ ಮೂಲಕ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷರಾದ ರಾಮಚಂದ್ರಪ್ಪ ಹಾಗೂ ಡಿ ಜೆ ಮಾಲೀಕರ ಮೇಲೆ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆಗಸ್ಟ್ 18ರಂದು ಶ್ರೀ ಕೆಂಪೇಗೌಡ ಜಯಂತಿ ಅಂಗವಾಗಿ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಹೋಟೆಲ್ ಬಳಿಯಿಂದ ಡಿ.ಜೆ. ಬಳಕೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸಾಂಬ್ರಾ ಗ್ರಾಮದ ಮಾರುತಿ ಗಲ್ಲಿಯಲ್ಲಿ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಯ ಕಾಂಕ್ರೀಟ್ (ಸ್ಲ್ಯಾಬ್ ಭರಣಿ) ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪೂಜೆ ನೆರವೇರಿಸಿದರು. ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ಈ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹನೀಯರ ತ್ಯಾಗ, ಬಲಿದಾನಗಳನ್ನು ಗೌರವಿಸುವ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಹಲವಾರು ವಿದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರ ಸಹಕಾರ ಇದೇ ರೀತಿ ಇರಲಿ ಎಂದು ಅವರು ಕೋರಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ನಾಗೇಶ ದೇಸಾಯಿ, ಈರಪ್ಪ ಸುಳೇಭಾವಿ, ಸದು ಪಾಟೀಲ, ಲಕ್ಷ್ಮಣ ಕೊಳ್ಳಪ್ಪಗೋಳ, ಮಹೇಶ ಕುಲಕರ್ಣಿ, ರಂಜನಾ ಅಪ್ಪಯಾಚೆ, ಸಂತೋಷ ದೇಸಾಯಿ, ಗ್ರಾಮ ಪಂಚಾಯತಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ನೋಯ್ಡಾದ ಸೆಕ್ಟರ್ 93 ಎ ನಲ್ಲಿರುವ ಸೂಪರ್ ಟೆಕ್ ಟ್ವಿನ್ ಟವರ್ ನೆಲಸಮಗೊಂಡಿದೆ. ಭ್ರಷ್ಟಾಚಾರದಿಂದ ಹೊರಹೊಮ್ಮಿದ 100 ಮೀಟರ್ ಎತ್ತರದ ಗಗನಚುಂಬಿ ಕಟ್ಟಡವನ್ನು ಜಲಪಾತದ ಇಂಪ್ಲೋಷನ್ ತಂತ್ರವನ್ನು ಬಳಸಿಕೊಂಡು ಕೇವಲ 9 ಸೆಕೆಂಡ್ ನಲ್ಲಿ ನೆಲಸಮಗೊಳಿಸಲಾಯಿತು. ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದ್ದಂತ ನೋಯ್ಡಾದ ಟ್ವಿನ್ ಟವರ್ ಅನ್ನು, ಸುಪ್ರೀಂ ಕೋರ್ಟ್ ಆದೇಶದಂತೆ ನೆಲಸಮಗೊಳಿಸಲಾಗಿದೆ. ಇದು ಕುತುಬ್ ಮಿನಾರ್ ಗಿಂತ ಎತ್ತರವಾದ ಅವಳಿ ಗೋಪುರವಾಗಿತ್ತು. ಈ ಕಟ್ಟಡವನ್ನು 3,700 ಕಿಲೋಗ್ರಾಂಗಳಷ್ಟು ಎಕ್ಸ್ಲೋಸಿವ್ಸ್ ಪ್ಲಾಂಟ್ ಬಳಸಿ ಇಂದು ನೆಲಸಮ ಮಾಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ತನಿಖೆ ಬಳಿಕ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಶ್ರೀಗಳು ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸ ಇದೆ ಎಂದು ಹೇಳಿದರು. ಈ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪೋಕ್ಸೋ ಕೇಸ್ ಹಾಗೂ ಕಿಡ್ನ್ಯಾಪ್​ ಕೇಸ್ ದಾಖಲಾಗಿದೆ. ಎರಡು ಪ್ರಕರಣಗಳನ್ನ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಈಗ ಮಾತನಾಡುವುದು ಸೂಕ್ತವಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿತ್ರದುರ್ಗ : ಅಜ್ಜ, ಅಜ್ಜಿ ಕುಡಿಸಿದ ಭಂಡಾರದ ನೀರು ಕುಡಿದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಓಬಳೇಶ್ (5), ಬಿಂದು (3) ಮೃತಪಟ್ಟ ದುರ್ದೈವಿ ಮಕ್ಕಳು, ನಿನ್ನೆ ರಾತ್ರಿ ಇಬ್ಬರು ಮಕ್ಕಳು ವಾಂತಿ ಮಾಡಿಕೊಂಡಿದ್ದರು. ಅಜ್ಜ ದುರ್ಗಪ್ಪ ಮತ್ತು ಅಜ್ಜಿ ರೇಣುಕಾ ಭಂಡರಾದ ನೀರನ್ನು ಮಕ್ಕಳಿಗೆ ಕುಡಿಸಿದ್ದರು. ಆದರೆ ಮಕ್ಕಳು ಬೆಳಗಾಗುವುದರೊಳಗೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಗೆ ಮಕ್ಕಳ ತಾಯಿ ಕಾವೇರಿ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ: ಪಟ್ಟಣದ ಎಚ್ ಎಸ್ ಆರ್ ಸಮುದಾಯಭವನದಲ್ಲಿ ಜಾಮಿಯಾ ಮಸೀದಿ ವತಿಯಿಂದ ತಾಲೂಕಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 75ಕ್ಕೂ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ಇಲಾಖೆ ಆಯುಕ್ತರಾದ ಐ ಎ ಎಸ್ ಅಧಿಕಾರಿ ಅಕ್ರಂಪಾಷ, ಅಲ್ಪಸಂಖ್ಯಾತರ ಸಮಾಜದಲ್ಲಿ ಶಿಕ್ಷಣದ ಕೊರತೆ ತುಂಬಾನೇ ಇದೆ, ಎಸೆಸೆಲ್ಸಿ ನಂತರ ವಿದ್ಯಾರ್ಥಿಗಳು ಕೆಲವು ಕುಂದುಕೊರತೆ ಗಳಿಂದ ಮೊದಲ ಹಂತದಲ್ಲಿ ಡ್ರಾಪೌಟ್ ಆಗುತ್ತಾರೆ. ಜೀವನದಲ್ಲಿ ಎಜುಕೇಶನ್ ತುಂಬಾನೇ ಅವಶ್ಯ ಸಮುದಾಯಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಗುತ್ತದೆ ಎಂದರು. ಅಲ್ಪಸಂಖ್ಯಾತರ ಇಲಾಖೆ ಆಯುಕ್ತರಾಗಿದ್ದ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಮೊರಾರ್ಜಿ ವಸತಿ ಶಾಲೆ ಮತ್ತು ಮೌಲಾನಾ ಆಜಾದ್ ವಸತಿ ರಹಿತ ಶಾಲೆ ಪ್ರಾರಂಭಿಸಿದೆ, ಪ್ರಾರಂಭದ ಸಮಯದಲ್ಲಿ ಶಾಲೆಗಳಲ್ಲಿ ಅಡ್ಮಿಶನ್ ಗಾಗಿ ಇಲಾಖೆ ಸಿಬ್ಬಂದಿಯಿಂದ ಕ್ಯಾಂಪೇನ್ ಮಾಡಬೇಕಾಗಿತ್ತು. ಆದರೆ ಈಗ ಅದರ ಅವಶ್ಯಕತೆ ಇಲ್ಲ…

Read More