Author: admin

ಭ್ರಷ್ಟಾಚಾರದಿಂದ ಗಳಿಸಿರುವ ಹಣ ಬಳಕೆ ಮಾಡಿಕೊಂಡು ಬಿಜೆಪಿ ವಿವಿಧ ರಾಜ್ಯಗಳಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಬಿಜೆಪಿಯ ಚಾಳಿ ಇಡೀ ದೇಶಕ್ಕೆ ಹಬ್ಬಿದೆ ಎಂದು ಅವರು ಕಿಡಿಕಾರಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಆಪರೇಷನ್ ಕಮಲ ತಡೆಗಟ್ಟಲು ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು. ಒಂದು ಪಕ್ಷದಿಂದ ಆಯ್ಕೆಯಾದವರು ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು. ಒಂದು ವೇಳೆ ಬೇರೆ ಪಕ್ಷಕ್ಕೆ ಹೋದರೆ ೧೦ ವರ್ಷ ಆತ ಚುನಾವಣೆಗೆ ಸ್ಪರ್ಧಿಸದಂತೆ ಆದೇಶ ಮಾಡಬೇಕು ಎಂದು ಹೇಳಿದರು. ಪ್ರಜಾಪ್ರಭುತ್ವ ಉಳಿವಿಗಾಗಿ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದು ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದ ಅವರು, ಆಪರೇಷನ್ ಕಮಲದ ಪಿತಾಮಹಾ ಬಿಜೆಪಿಯವರು. ೨೦೦೮ರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೊದಲು ಆಪರೇಷನ್ ಕಮಲ ಮಾಡಿದರು. ಎಲ್ಲೂ ಅವರಿಗೆ ಬಹುಮತ ಬಂದಿಲ್ಲ. ಹಣಕೊಟ್ಟು ಶಾಸಕರನ್ನು…

Read More

ಮಧುಗಿರಿ: ತಾಲೂಕಿನ ರೈತರಿಗೆ ಬಗರ್ ಹುಕುಂ ಸಾಗುವಳಿ ಪಡೆಯಲು ಆನ್ ಲೈನ್ ನಮೂನೆ ಅರ್ಜಿ ನಂಬರ್  57ರಲ್ಲಿ ರೈತರು ಸಾಗುವಳಿದಾರರು ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿದೆ. ಉಳುವವನೇ ಭೂಮಿಯ ಒಡೆಯ, ರೈತರಿಗೆ ಜೀವನೋಪಾಯಕ್ಕಾಗಿ ವ್ಯವಸಾಯ ಮಾಡಲು ಇರುವ ಭೂಮಿಯಲ್ಲಿ ಬೆಳೆ ಬೆಳೆದುಕೊಂಡು ಜೀವನ ಮಾಡಿಕೊಂಡಿರುವ ರೈತರಿಗೆ ಅನುಕೂಲವಾಗುವ ಭೂಮಿಯನ್ನು ನಮೂನೆ 57 ರಲ್ಲಿ ಅಕ್ರಮ-ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಸುವರ್ಣಾವಕಾಶ ನೀಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ತಾಲೂಕು  ದಂಡಾಧಿಕಾರಿ ಸುರೇಶ್ ಆಚಾರ್ ರವರು ತಿಳಿಸಿದ್ದಾರೆ. ಎಲ್ಲ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು  ಅವಕಾಶ ನೀಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೆಲವು ದಾಖಲಾತಿಗಳ ಅವಶ್ಯಕತೆ ಇದೆ. ಆಧಾರ್ ಕಾರ್ಡ್, ಜಮೀನಿನ ಪಹಣಿ ಇತ್ಯಾದಿ ದಾಖಲೆ ತೆಗೆದುಕೊಂಡು ಹೋಗಿ ನಾಡಕಚೇರಿಯಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ಮಹಿಳೆಯರಿಗೆ ಶಕ್ತಿ ತುಂಬುವುದು ಶ್ರೀಮತಿ ಇಂದಿರಾ ಗಾಂಧಿ ಅವರ ಕನಸು. ಅವರು ಸದಾ ಅವಕಾಶಗಳನ್ನು ಸೃಷ್ಟಿ ಮಾಡಿಕೊಳ್ಳಬೇಕು ಎಂದು ಹೇಳುತ್ತಿದ್ದರು.  ದೇವರು ನಮಗೆ ವರವನ್ನೂ ಕೊಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಅವಕಾಶಗಳನ್ನು ಮಾತ್ರ ನೀಡುತ್ತಾನೆ. ಅವುಗಳನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಜೂಮ್ ಮೂಲಕ ಬಳ್ಳಾರಿಯ ನಾ ನಾಯಕಿ ಪ್ರಾದೇಶಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,  ತಾಯಿ ಮಗುವಿಗೆ ಜನ್ಮ ನೀಡಿದಾಗ ಆಕೆಯೇ ಆ ಮಗುವಿನ ಮೊದಲ ಗುರು ಆಗುತ್ತಾಳೆ. ಅದೇ ರೀತಿ ಬಳ್ಳಾರಿಯಲ್ಲಿ ಸಾವಿರಾರು ಮಹಿಳೆಯರು ಸೇರಿದ್ದು, ನೀವೆಲ್ಲರೂ ನಾಯಕಿಯರೇ ಎಂದರು. ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ. ದೇವರ ನೆನಪು ಭಕ್ತಿಯ ಮೂಲ. ಮನುಷ್ಯತ್ವ ಮೋಕ್ಷಕ್ಕೆ ಮೂಲ ಎಂಬ ಮಾತಿದೆ. ಅದೇ ರೀತಿ ತಾಯಿಗೆ ಪವಿತ್ರವಾದ ಸ್ಥಾನವಿದೆ. ನಾವು ಎಲ್ಲಿ ಹೋದರೂ ಗ್ರಾಮದೇವತೆಯನ್ನು ನೋಡುತ್ತೇವೆ. ಈ ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ಇದೇ ಈ ದೇಶದ ಸಂಸ್ಕೃತಿ,…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಕರುನಾಡ ವಿಜಯಸೇನೆ ಸಂಘಟನೆ ಮತ್ತು ಆನೆಕೆರೆ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ  ಜೂನ್ 22ರಂದು ಆನೆಕೆರೆ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಆಯ್ಕೆಯಾದ 20 ಜನ ರೋಗಿಗಳನ್ನು ಹೆಚ್ಚಿನ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಸಪ್ತಗಿರಿ ವೈದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡು ವಿಜಯ ಸೇನೆ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಹೆಚ್.ಎಸ್.ಸುರೇಶ್,  ಹೆಚ್ಚಿನ ಚಿಕಿತ್ಸೆಗಾಗಿ ತೆರಳುತ್ತಿರುವ ತಮಗೆಲ್ಲರಿಗೂ ಶುಭವಾಗಲಿ  ಚಿಕಿತ್ಸೆಗೆ ಸಹಕರಿಸಿ, ಬೇಗನೆ ಗುಣಮುಖರಾಗಿ ಬನ್ನಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಕಾರ್ಯಾಧ್ಯಕ್ಷ ನಂದೀಶ್ , ತಾಲೂಕು ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ , ತಾಲೂಕು ಕಾರ್ಯದರ್ಶಿ  ಗವಿರಂಗಪ್ಪ, ತಾಲೂಕು ಉಪಾಧ್ಯಕ್ಷ ನೂರುಲ್ಲಾ, ತಾಲೂಕು ಅಲ್ಪಸಂಖ್ಯಾತ ಘಟಕದ ಗೌರವಾಧ್ಯಕ್ಷ ರಫೀಕ್ , ಮಹಿಳಾ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷೆ ವಿನುತಾ, ವೆಂಕಟೇಶ್, ಮಂಜುನಾಥ್ , ಪಾರ್ಥ ಸಾರಥಿ  ಮುಂತಾದ ಪದಾಧಿಕಾರಿಗಳು ಹಾಜರಿದ್ದರು.  ವರದಿ:  ಸುರೇಶ್ ಬಾಬು, ತುರುವೇಕೆರೆ …

Read More

ಪಾವಗಡ: ತಹಶಿಲ್ದಾರ್ ಕಛೇರಿಯಲ್ಲಿ ಬಗರ್ ಹುಕುಂ ನಲ್ಲಿ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ 100 ಮಂದಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ ವಿತರಣೆಯನ್ನು ಶಾಸಕ ವೆಂಕಟರಮಣಪ್ಪ ವಿತರಣೆ ಮಾಡಿದರು. ವಿತರಣೆ ನಂತರ ಮಾತನಾಡಿದ ಶಾಸಕ ವೆಂಕಟರವಣಪ್ಪ, ರಾಜ್ಯ ಸರಕಾರ 2023 ಮೇ 27ರ ತನಕ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅಗತ್ಯ ದಾಖಲೆಗಳೊಂದಿಗೆ ರೈತರು ತಹಶಿಲ್ದಾರ್ ಕಛೇರಿಯಲ್ಲಿ ಅರ್ಜಿಸಲ್ಲಿಸ ಬಹುದಾಗಿದೆ. ಪಾವಗಡದ ನಾಲ್ಕು ಹೋಬಳಿಗಳಲ್ಲಿ 100 ಮಂದಿ ರೈತರಿಗೆ ಬಗರ್ ಹುಕುಂ ಸಾಗುವಳಿ ಆದೇಶ ಪ್ರತಿಯನ್ನು ವಿತರಣೆ ಮಾಡಿದ್ದು, ಪಹಣಿ ಪಡೆದ ರೈತರು ಸರಕಾರಿ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ತಿಳಿಸಿದರು. ನಂತರ ಮಾತನಾಡಿದ ತಹಶಿಲ್ದಾರ್ ನಾಗರಾಜ್ ತಾಲ್ಲೂಕಿನ ನಾಲ್ಕು ಹೋಬಳಿಗಳ 100 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ ಮಾಡಿದ್ದು, ರೈತರು ಸರಕಾರಿ ಸೌಲಭ್ಯ ಪಡೆದುಕೊಳ್ಳಬಹುದು ಹಾಗೂ ಇನ್ನು ಸಮಯವಿದ್ದು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿಬಹುದು ಎಂದು ತಿಳಿಸಿದರು. ಈ ವೇಳೆ ಬಗರ್ ಹುಕ್ಕುಂ…

Read More

ತಿಪಟೂರು:  ಇಡಿ ತನಿಖೆಯ ಹೆಸರಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ ಷಡಕ್ಷರಿ ಆರೋಪಿಸಿದರು ತಿಪಟೂರು ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಇದೇ ವೇಳೆ ಮಾತನಾಡಿದ ಕೆ ಷಡಕ್ಷರಿ, ಅಗ್ನಿಪಥ ಯೋಜನೆಯ ಮೂಲಕ ದೇಶದ ಶಕ್ತಿಯನ್ನು ಕುಂದಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡ ಲೋಕೇಶ್ ಮಾತನಾಡಿ,  ಜನರ ತೆರಿಗೆ ಹಣದಿಂದ ಬಿಜೆಪಿ ಕಟ್ಟಾಳು ಗಳಿಗೆ ಸರ್ಕಾರದ ವತಿಯಿಂದ ಮೂರು ವರ್ಷ ತರಬೇತಿ ನೀಡಿ, ನಂತರ ಅವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಿಕೊಳ್ಳುವ ಹುನ್ನಾರವೇ ಅಗ್ನಿಪಥ್  ನೇಮಕಾತಿ ಎಂದು ಆರೋಪಿಸಿದರು. ಇದೇ ವೇಳೆ ತಹಶೀಲ್ದಾರ್  ಚಂದ್ರಶೇಖರ್  ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಟಿ.ಎಂ.ಪ್ರಕಾಶ್ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಸುರೇಶ್,  ನಗರಸಭಾ ಸದಸ್ಯ ಮೇಘನಾ,  ಭೂಷಣ್, ಲೋಕ್ ನಾಥ್ ಸಿಂಗ್, ಆರ್.ದಿನೇಶ್ ಬಾಬು , ನಿಖಿಲ್ ರಾಜಣ್ಣ ಸೇರಿದಂತೆ  ನೂರಾರು ಕಾರ್ಯಕರ್ತರು…

Read More

ತುಮಕೂರು:  SSLC, PUC  ಪಾಸ್ ಅಥವಾ ಫೇಲ್ ಆಗಿರುವ ಅಭ್ಯರ್ಥಿಗಳಿಗೆ  ತುಮಕೂರಿನಲ್ಲೇ ಉದ್ಯೋಗಾವಕಾಶಗಳಿದ್ದು, ತುಮಕೂರಿನ ಹೆಸರಾಂತ ಕಂಪನಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡಲು ಯುವಕ ಯುವತಿಯರು ಬೇಕಾಗಿದ್ದಾರೆ ಎಂದು ಗೊಲನ ಎಂಟರ್ ಪ್ರೈಸೆಸ್  ಪ್ರಕಟಣೆಯಲ್ಲಿ ತಿಳಿಸಿದೆ. ಲೋಡಿಂಗ್ ಮತ್ತು ಆನ್ಲೋಡಿಂಗ್, ಇತರೆ ಉದ್ಯೋಗ ಅವಕಾಶಗಳಿಗೆ  SSLC, PUC ಪಾಸ್ ಆಗಿರುವ ಅಥವಾ ಫೇಲ್ ಆಗಿರುವವರು ಬೇಕಾಗಿದ್ದಾರೆ. ಅಭ್ಯರ್ಥಿಗಳು  ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗಕ್ಕೆ ಆಯ್ಕೆಯಾಗುವವರಿಗೆ ESI & PF ಸೌಲಭ್ಯ ಇರುತ್ತದೆ . ಆಸಕ್ತರು +91 97431 03968 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು  ಗೊಲನ ಎಂಟರ್  ಪ್ರೈಸೆಸ್   ಪ್ರಕಟಣೆಯಲ್ಲಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಟ್ಟ ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 52,10,11,14 ,15 ರ ಜಾಮೀನಿನ ರೈತರು ಜಮೀನಿಗೆ ಸಂಚಾರ ಮಾಡಲು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದ ರೈತರು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ನಮ್ಮತುಮಕೂರು ವರದಿ ಬೆನ್ನಲ್ಲೇ ಒತ್ತುವರಿ ತೆರವು ಮಾಡುವಲ್ಲಿ ಕೊರಟಗೆರೆ ತಾಲ್ಲೂಕು ಆಡಳಿತ ಯಶಸ್ವಿಯಾಗಿದೆ . ಗ್ರಾಮದ ರೈತರು ಮತ್ತು ಸಾರ್ವಜನಿಕರು ತಹಶೀಲ್ದಾರ್ ರವರಿಗೆ ದಿನಾಂಕ : 17/06/2020 ರ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರೂ ಕೂಡ ಸಂಬಂಧ ಪಟ್ಟ ಅಧಿಕಾರಿಗಳು ಮೂರ್ನಾಲ್ಕು ಬಾರಿ ಸರ್ವೆ ಮಾಡಿ ನಕಾಶೆ ರಸ್ತೆಯನ್ನು ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾದಾಗ ಸರ್ವೇ ನಂಬರ್ 52 ರ ಖಾತೆ ಮಾಲೀಕ ಮತ್ತು ಅವರ ಕುಟುಂಬಸ್ತರು ತೊಂದರೆ ಮಾಡುತ್ತಿದ್ದರು. ಈ ಎಲ್ಲಾ ಸಮಸ್ಯೆಗಳು ತಹಶೀಲ್ದಾರ್ ನಹೀದಾ ಜಂ ಜಂ ರವರ ಗಮನಕ್ಕೆ ನಮ್ಮ ವಾಹಿನಿಯ ವರದಿಗಾರರು ತಂದಿದ್ದರು. ನಂತರ ತಹಶೀಲ್ದಾರ್ ಅವರು ದಿನಾಂಕವನ್ನು ನಿಗದಿಪಡಿಸಿ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಎಲ್ಲವನ್ನೂ…

Read More

ಹಾಸನ: ನಾಡ ಪ್ರಭು ಕೆಂಪೇಗೌಡರ ಹೆಸರಿನಿಂದ ಲಾಭ ಪಡೆದುಕೊಳ್ಳುವ ರಾಜಕೀಯ ನಾಯಕರು, ಆ ಬಳಿಕ ಕೆಂಪೇಗೌಡರು ಮಾತ್ರವಲ್ಲದೇ ಒಕ್ಕಲಿಗ ಸಮುದಾಯವನ್ನೂ ಮರೆತು ಬಿಡುವುದು ವಿಪರ್ಯಾಸವಾಗಿದೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಪೇಗೌಡರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಒಕ್ಕಲಿಗ ಮುಖಂಡರು ತಮ್ಮ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ರಾಜಕೀಯದಲ್ಲಿಯೂ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಮುಖಂಡರು, ತಮ್ಮ ಸಮುದಾಯದ ಅಭಿವೃದ್ಧಿಗೆ ಎಷ್ಟು ಒತ್ತನ್ನು ನೀಡುತ್ತಿದ್ದಾರೆ ಎನ್ನುವುದನ್ನು ಯೋಚಿಸಬೇಕಿದೆ ಎಂದು ಅವರು ಹೇಳಿದರು. ಕೆಂಪೇಗೌಡರನ್ನು ಕೇವಲ ಬೆಂಗಳೂರಿಗೆ ಮಾತ್ರವೇ ಸೀಮಿತಗೊಳಿಸಲಾಗುತ್ತಿದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಕ್ಕಲಿಗ ಸಮುದಾಯದ ಓಲೈಕೆಗೆ ಕೆಂಪೇಗೌಡರ ಬಗ್ಗೆ ಮಾತನಾಡುವ ನಾಯಕರು, ಈವರೆಗೆ ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಿದ್ದಾರೆ. ಹಾಸನ ಜಿಲ್ಲೆ ಒಕ್ಕಲಿಗರ ಪ್ರಾಬಲ್ಯದ ಜಿಲ್ಲೆಯಾಗಿದ್ದು, ಇಲ್ಲಿ ಕೆಂಪೇಗೌಡರ ಪುತ್ಥಳಿಯೇ ಇಲ್ಲ. ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಫೋಟೋಗೆ ಹಾರಾರ್ಪಣೆ ಮಾಡಿ ಆಚರಿಸುವಂತಹ ಸ್ಥಿತಿ ಇಂದಿಗೂ ಹಾಸನದಲ್ಲಿದೆ ಎಂದು ಸಚಿನ್ ಸರಗೂರು ಆಕ್ರೋಶ ವ್ಯಕ್ತಪಡಿಸಿದರು. ಒಕ್ಕಲಿಗ ಸಮುದಾಯವು ಕೃಷಿಯನ್ನು ಅವಲಂಬಿಸಿರುವ…

Read More

ಬೆಂಗಳೂರು: ಶಾಲಾ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಸಿದ್ಧರಾಮಯ್ಯ ಸರ್ಕಾರದಲ್ಲಿ ಪಠ್ಯ ಪರಿಷ್ಕರಣೆಯಾದಾಗ ಯಾರು,ಏಕೆ ದ್ವನಿ ಎತ್ತಲಿಲ್ಲ. ಈಗ ಮಾತ್ರ ವಿರೋಧ ಮಾಡುತ್ತಿರುವ ಹಿಂದಿನ ಮರ್ಮ ಏನು ಎಂದು ಸಚಿವ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸಚಿವರುಗಳಾದ ಸಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಬೈರತಿ ಬಸವರಾಜು ಇವರುಗಳ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಆರ್. ಅಶೋಕ್, ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಅಜೆಂಡಾಗಳನ್ನು ಪಠ್ಯದಲ್ಲಿ ತುರುಕಿದ್ದರು. ಮನ ಬಂದಂತೆ ಪಠ್ಯಗಳಲ್ಲಿ ವಿಚಾರಗಳನ್ನು ಅಳವಡಿಸಿದ್ದರು. ಆಗ ಯಾರೂ ಮಾತನಾಡಲಿಲ್ಲ. ಆಗಿದ್ದ ತಪ್ಪುಗಳನ್ನು ಸರಿಪಡಿಸಿದ್ದಕ್ಕೆ ವಿವಾದ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಪಠ್ಯ ಚರ್ಚೆಗೆ ಒಳಗಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಈ ಹಿಂದೆ ತುರುಕಲಾಗಿದ್ದ ವಿಚಾರಗಳು, ಕೈಬಿಡಲಾಗಿದ್ದ ಅಂಶಗಳು, ಈಗ ಬಿಜೆಪಿ ಸರ್ಕಾರ ಪರಿಷ್ಕರಿಸಿರುವ ಅಂಶಗಳು, ಸರಿಪಡಿಸಿರುವ ತಪ್ಪುಗಳು ಎಲ್ಲವನ್ನು ಸಾಕ್ಷ್ಯ ಸಮೇತ ಎಳೆ ಎಳೆಯಾಗಿ ಬಿಚ್ಚಿಟ್ಟ ಸಚಿವರು, ಈ ಹಿಂದೆ ಹಿಂದೂ ಮಹಾಸಾಗರ ಎಂಬ ಹೆಸರನ್ನೇ ಕೈಬಿಡಲಾಗಿತ್ತು.…

Read More