Subscribe to Updates
Get the latest creative news from FooBar about art, design and business.
- ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಜುಲೈ 1: ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
- ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
- ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
- ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
- DIGITAL ARREST ಬಗ್ಗೆ ಎಚ್ಚರವಿರಲಿ!
- ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
- ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
Author: admin
ಕೊರಟಗೆರೆ: ತಾಲ್ಲೂಕಿನ ಹೊರವಲಯದಲ್ಲಿರುವ ಶ್ರೀ ಬೈಲಾಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ಹೊರಾಂಗಣದಲ್ಲಿ ವಿಷ್ಣು ಸಮಾಜವು ಹೋಳಿ ಹಬ್ಬವನ್ನು ಸಡಗರ ಸಂಭ್ರಮ ಆಚರಿಸಿದರು. ವಿಷ್ಣು ಸಮಾಜದ ಹೆಣ್ಣು ಮಕ್ಕಳು ಅವರ ಜನಾಂಗದಲ್ಲಿ ಬರುವ ಜನಪದ ಗೀತೆಗಳನ್ನು ಹಾಡುತ್ತಾ ಸಂಭ್ರಮಿಸಿದರೆ, ಇತ್ತ ಹುಡುಗರು ನಾವೇನು ಕಮ್ಮಿ ಎನ್ನುವಂತೆ ಸಮಾಜದ ಹಲವು ಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ವಿಷ್ಣು ಸಮುದಾಯದ ಮುಖಂಡ ಜಯರಾಂ ಮಾತನಾಡಿ, ನಮ್ಮ ಪೂರ್ವಿಕರ ಕಾಲದಿಂದಲೂ ಮಾಡಿಕೊಂಡು ಬಂದಿರುವ ಹೋಳಿ ಹಬ್ಬದ ಸಂಭ್ರಮಾಚರಣೆ ನಾವು ಕೂಡ ಮುಂದುವರಿಸುತ್ತಿದ್ದೇವೆ. ಪ್ರತಿವರ್ಷ ಹೋಳಿ ಹಬ್ಬ ಬಂತೆಂದರೆ ಸಾಕು ನಮ್ಮ ಸಮುದಾಯದ ಎಲ್ಲಾ ಜನರು ಒಟ್ಟಿಗೆ ಕೂಡಿ ಸಂಭ್ರಮಿಸುತ್ತೇವೆ. ಕಳೆದ 3ವರ್ಷಗಳಿಂದ ಕೋವಿಡ್ ಹಿನ್ನೆಲೆ ಯಾವುದೇ ಸಂಭ್ರಮಾಚರಣೆ ಮಾಡಲು ಸಾಧ್ಯವಾಗಿರಲಿಲ್ಲ ಇದೀಗ ದೇವರ ದಯೆಯಿಂದ ಎಲ್ಲಾ ಮಹಾಮಾರಿಯಿಂದ ದೂರವಾಗಿ ಸಂಭ್ರಮಗಳು ಮನೆ ಮಾಡುತ್ತಿವೆ ಎಂದು ತಿಳಿಸಿದರು. ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಕೊರಟಗೆರೆ : ಹುಲಿಕುಂಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜೆ.ಸಿ.ರಮೇಶ್ ರಾಜೀನಾಮೆಯಿಂದ ತೆರವಾಗಿದ್ದ ಸಾಮಾನ್ಯ ಮೀಸಲು ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಫ್ರೆಂಡ್ಸ್ ಗ್ರೂಪ್ ಡಿ.ಎಲ್.ಮಲ್ಲಣ್ಣ ಸರ್ವ ಸದಸ್ಯರ ಬೆಂಬಲದಿಂದ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹುಲೀಕುಂಟೆ ಗ್ರಾಪಂಯಲ್ಲಿ ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಫ್ರೆಂಡ್ಸ್ ಗ್ರೂಪ್ ಮಲ್ಲಣ್ಣ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಹುಲೀಕುಂಟೆ ಅನ್ನಪೂರ್ಣ ಮುಂದುವರಿದಿದ್ದಾರೆ. ಈ ಸಂದರ್ಭ ಕೊರಟಗೆರೆ ತಹಶೀಲ್ದಾರ್ ನಾಹೀದಾ ಮಾತನಾಡಿ, ಹುಲೀಕುಂಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಮಲ್ಲಣ್ಣ ಒಬ್ಬರೇ ನಾಮಪತ್ರ ಸಲ್ಲಿಸಿದ್ದಾರೆ. ಮಲ್ಲಣ್ಣ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಯಾರೂ ಪ್ರತಿಸ್ಪರ್ಧಿಗಳಿಲ್ಲದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ ಹಾಗೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದರು. ಹುಲೀಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ಕರುನಾಡಿನ ಯುವರಾಜ ಅಪ್ಪು ಹುಟ್ಟಿದ ದಿನ ನಾನು ಗ್ರಾಮ ಪಂಚಾಯಿತಿಯ ಅಧ್ಯಕ್ಷನಾಗಿ…
ಗುಬ್ಬಿ: ತಾಲೂಕಿನ ಕಡಬ ಗ್ರಾಮದಲ್ಲಿ ದಿವಂಗತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಯುವ ಬ್ರಿಗೇಡ್ ವತಿಯಿಂದ ರಕ್ತದಾನ ಶಿಬಿರ ಹಾಗೂ ದಾಸೋಹ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಮೀಪದ ಗ್ರಾಮಸ್ಥರೂ ಆಗಮಿಸಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಅಪ್ಪು ಯೂತ್ ಬ್ರಿಗೇಡ್ ವತಿಯಿಂದ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಯಿತು. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಶಿಕ್ಷಣ ಮತ್ಚು ಉದ್ಯೋಗಕ್ಕಾಗಿ ಶೇ. 7.5 ಮೀಸಲಾತಿ ನೀಡುವ ಭರವಸೆಯನ್ನು ನೀಡಿತ್ತು. ಆದರೆ ಇನ್ನು ಈಡೇರಿಲ್ಲ ಎಂದು ಹೆಚ್.ಡಿ.ಕೋಟೆಯ ಶಾಸಕ ಅನಿಲ್ ಚಿಕ್ಕಮಾದು ಒತ್ತಾಯಿಸಿದರು. ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ನಾಗಮೋಹನದಾಸ್ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು. ಇದು ಸಾಕಷ್ಟು ವರ್ಷಗಳಿಂದ ಬಾಕಿ ಉಳಿದಿದೆ. ನಾಯಕ ಜನಾಂಗದವರು ಶೈಕ್ಷಣಿಕವಾಗಿ ಮತ್ತು ಉದ್ಯೋಗ ಇಲ್ಲದೆ ಹಿಂದೆ ಉಳಿದಿದ್ದಾರೆ ಎಂದು ತಿಳಿಸಿದರು. ಸುಮಾರು 40 ವರ್ಷಗಳಿಂದ ನಾಯಕ ಸಮಾಜದವರು ಹೋರಾಟವನ್ನು ನಿರಂತರವಾಗಿ ಮಾಡುತ್ತಿದ್ದು ನಮ್ಮ ಹೋರಾಟಕ್ಕೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಿರಿಯೂರು: ನಗರದ ನಂಜುಡೇಶ್ವರ ಚಿತ್ರಮಂದಿರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಪ್ರದರ್ಶನ ನಿನ್ನೆಯಿಂದ ಆರಂಭಗೊಂಡಿದ್ದು, ಇಲ್ಲಿನ ದೊಡ್ಮನೆ ಅಭಿಮಾನಿ ಬಳಗದವರು ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವ ಮೂಲಕ ಚಿತ್ರವನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಅಭಿಮಾನಿಗಳು ವಾದ್ಯ ಸಂಗೀತಗಳೊಂದಿಗೆ ಕುಣಿದು ಕುಪ್ಪಳಿಸಿದರಲ್ಲದೆ. ಪಟಾಕಿಗಳನ್ನು ಸಿಡಿಸಿ ಖುಷಿಪಟ್ಟರು. ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ವಿತರಿಸಿದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪರವಾಗಿ ಘೋಷಣೆಗಳನ್ನು ಕೂಗಿದರಲ್ಲದೆ, ಅಲ್ಲಿ ನೆರೆದಿದ್ದ ಸಾವಿರಾರು ಜನರಿಗೆ ಉಪಹಾರ ವಿತರಣೆ ಮಾಡುವ ಮೂಲಕ ಅಭಿಮಾನ ಮೆರೆದರು. ಈ ಸಂದರ್ಭದಲ್ಲಿ ಹಿರಿಯೂರು ನಗರ ಪೋಲಿಸ್ ಅಧಿಕಾರಿಯಾದ ಶಿವಕುಮಾರ್ ರವರು ಸಹ ಸ್ಥಳಕ್ಕೆ ಆಗಮಿಸಿದರು. ಹಿರಿಯೂರು ನಗರದ ನಂಜುಡೇಶ್ವರ ಚಿತ್ರಮಂದಿರದ ಆವರಣದಲ್ಲಿ ದೊಡ್ಮನೆ ಅಭಿಮಾನಿ ಬಳಗದ ನೂರಾರು ಜನ ಸದಸ್ಯರು ಹಾಗೂ ಪುನೀತ್ ರಾಜ್ ಕುಮಾರ್ ರವರ ಸಾವಿರಾರು ಜನ ಅಭಿಮಾನಿಗಳು ನಟ ಪುನೀತ್ ರಾಜ್ ಕುಮಾರ್ ಅಭಿನಯದ ಜೇರ್ಮ್ಸ್ ಚಿತ್ರದ ವೀಕ್ಷಣೆಗಾಗಿ ತುದಿಗಾಲಲ್ಲಿ…
ತುಮಕೂರು: ತುಮಕೂರು ನಗರದ 19 ವರ್ಷದ ಯುವತಿಯ ಸಾವು ಪ್ರಕರಣದ ಪ್ರಮುಖ ಆರೋಪಿಯಾದ ರಾಜೇಂದ್ರ ಕುಮಾರ್ ನನ್ನು ಗುರುವಾರ ಮಧ್ಯಾಹ್ನ ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣದ ಪ್ರಮುಖ ಆರೋಪಿಯಾದ ರಾಜೇಂದ್ರ ಕುಮಾರ್ ಹಾಗೂ ಇತರರು ತಲೆಮರೆಸಿಕೊಂಡಿದ್ದರು. ಆದರೆ ಕೊನೆಗೂ ತುಮಕೂರು ಪೊಲೀಸರು ಪ್ರಮುಖ ಆರೋಪಿ ರಾಜೇಂದ್ರಕುಮಾರ್ ನನ್ನ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದು, ಗುರುವಾರ ಮಧ್ಯಾಹ್ನ ಪ್ರಮುಖ ಆರೋಪಿ ರಾಜೇಂದ್ರಕುಮಾರ್ ನನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ತುಮಕೂರು ನಗರದ 19 ವರ್ಷದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದ ಪ್ರಮುಖ ಆರೋಪಿ ರಾಜೇಂದ್ರ ಕುಮಾರ್ ವಿರುದ್ಧ ಮೃತ ಯುವತಿಯ ತಾಯಿ ದೂರು ದಾಖಲಿಸಿದ್ದರು. ತಾಯಿ ದೂರಿನನ್ವಯ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಮರಣೋತ್ತರ ಪರೀಕ್ಷೆ. ಕಳೆದ ಮೂರು ದಿನಗಳ ಹಿಂದೆ ಯುವತಿಯ ಮೃತದೇಹವನ್ನು ಬೆಂಗಳೂರಿನ ಸ್ಥಳೀಯ ಅಧಿಕಾರಿಗಳು ವೈದ್ಯರು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರಿನ ಶಾಂತಿನಗರದ ಭಾರತೀಯ ಕ್ರೈಸ್ತ ಸಮಾಧಿ ಗೇಟ್ ನಲ್ಲಿರುವ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಮಣ್ಣು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಜವನಗೊಂಡನಹಳ್ಳಿ ಹೋಬಳಿಯ ಬಗ್ಗನಡು ಗೇಟ್ ಬಳಿ ಟೆಂಪೂ ಟ್ರಾವೆಲರ್ ವಾಹನವು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಶ್ವೇತಾ (24), ಟೆಂಪೊ ಟ್ರಾವೆಲರ್ ಕ್ಲೀನರ್ ಅರಿಕ್ಯದಾಸ್ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ಯುವತಿಯು ಬೆಂಗಳೂರಿನ ಪಿ.ಎಸ್.ಕೆ. ನಾಯ್ಡು ರಸ್ತೆ,ಮು ದ್ದಮ್ಮ ಗಾರ್ಡನ್ ನ ಫ್ರೇಜರ್ ಟೌನ್ ಬೆಂಗಳೂರು ವಾಸಿ ಎಂದು ಹೇಳಲಾಗಿದೆ. ಬೆಂಗಳೂರಿನ ಇಂಡಿಯನ್ ಅಕಾಡೆಮಿ ಕಾಲೇಜಿನಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡಿದ್ದ 2013ರ ಬ್ಯಾಚ್ ನ ಒಟ್ಟು 11 ಮಂದಿ ಸ್ನೇಹಕೂಟ (ಗೆಟ್ ಟುಗೆದರ್) ಮಾಡಲು ಮಾರ್ಚ್ 10ರಂದು ಉಡುಪಿ, ಗೋಕರ್ಣಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಶಿರಸಿ ಮಾರ್ಗವಾಗಿ ದಾವಣಗೆರೆ , ಚಿತ್ರದುರ್ಗದ ಮೂಲಕ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಈ ದುರ್ಘಟನೆ ನಡೆದಿದೆ. ಕ್ಲೀನರ್ ಅರಿಕ್ಯದಾಸ್ ಸ್ಥಳದಲ್ಲೇ ಮೃತ ಪಟ್ಟರೆ, ಶ್ವೇತಾ ಅವರು…
ತುಮಕೂರು: ತುಮಕೂರಿನ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಡಾ.ವಿದ್ಯಾಕುಮಾರಿ ನೇತೃತ್ವದಲ್ಲಿ ಎಸೆಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಪರಿಶೀಲನೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸಿಇಓ ಡಾ.ವಿದ್ಯಾಕುಮಾರಿ, ಎಸೆಸೆಲ್ಸಿ ಮಕ್ಕಳು ಪರೀಕ್ಷೆ ಬರೆಯುವುದನ್ನು ಖಾತರಿಪಡಿಸುವುದು ಮುಖ್ಯ ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ. ಎಲ್ಲೆಲ್ಲಿ ಪರೀಕ್ಷೆ ನಡೆಯುತ್ತದೆ ಅಲ್ಲಿನ ಕೇಂದ್ರಗಳಲ್ಲಿ ಸಮರ್ಪಕವಾದ ವ್ಯವಸ್ಥೆಯನ್ನು ಮಾಡಬೇಕು ಎಂದರು. ಸರ್ಕಾರದ ಮಾರ್ಗಸೂಚಿಯ ಪ್ರಕಾರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಯಾವ ರೀತಿ ಮಾಡಬೇಕು ಅದಕ್ಕೆ ಎಲ್ಲರೂ ಬದ್ಧವಾಗಿರಬೇಕಾಗುತ್ತದೆ. ಎಲ್ಲರೂ ಕೂಡ ಅದನ್ನು ಪಾಲಿಸಬೇಕಾಗುತ್ತದೆ. ಮಕ್ಕಳಿಗೆ ಕುಡಿಯುವ ನೀರನ್ನು ಇಡಬೇಕು ಮತ್ತುಸಣ್ಣ ಸಣ್ಣಅಂಶಗಳನ್ನು ನಾವು ಪಾಲಿಸಬೇಕಾಗುತ್ತದೆ ಎಂದರು. ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುರುವೇಕೆರೆ: ತಾಲೂಕಿನ ಮಾಯಸಂದ್ರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು 12ರಿಂದ 14 ವರ್ಷದ ಮಕ್ಕಳಿಗೆ ಕೊರೋನ ತಡೆಗಟ್ಟುವ ಕೊವಿಡ್ ವ್ಯಾಕ್ಸಿನ್ ಕಾರ್ಯಕ್ರಮ ನಡೆಯಿತು . ಈ ಕಾರ್ಯಕ್ರಮವನ್ನು. ಮಾಯಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಗೌರಮ್ಮ, ಸರ್ಕಾರಿ ವೈದ್ಯಾಧಿಕಾರಿ ಡಾ. ಸ್ವರೂಪ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ವೈದ್ಯಾಧಿಕಾರಿ ಡಾ.ಸ್ವರೂಪ, ಇಂದು 12ರಿಂದ 14 ವರ್ಷದವರೆಗಿನ ಸುಮಾರು 50ರಿಂದ ನೂರು ಮಕ್ಕಳಿಗೆ. ವ್ಯಾಕ್ಸಿನ್ ಕೊಡಲಾಗುವುದು. ಮುಂದಿನ ದಿನಗಳಲ್ಲಿ ನಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ 12ರಿಂದ 14 ವರ್ಷದ ಮಕ್ಕಳಿಗೆ ಈ ವ್ಯಾಕ್ಸಿನ್ ಕೊಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಎಚ್.ಪಿ.ಎಸ್. ಸರ್ಕಾರಿ ಶಾಲೆ .ಹಾಗೂ ಬಾಲಿಕಾ ಪ್ರೌಢಶಾಲೆ ಮಾಯಸಂದ್ರ, ಜ್ಞಾನವಾಹಿನಿ ಕಾನ್ವೆಂಟ್ ಶಾಲಾ ವಿದ್ಯಾರ್ಥಿಗಳು, ಈ ಶಾಲೆಗಳ ಉಪಾಧ್ಯಾಯರುಗಳಾದ ಶಿವಲಿಂಗೇಗೌಡ , ಸಿದ್ದಲಿಂಗಯ್ಯ, ಗೀತಾ ಹಾಗೂ ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದ್ದರು. ವರದಿ: ಸುರೇಶ್ ಬಾಬು…
ಪಾವಗಡ: ತಾಲೂಕಿನ ನಿಡಗಲ್ ಹೋಬಳಿಯ ವ್ಯಾಪ್ತಿಯಲ್ಲಿ ಮಂಗಳವಾಡ ಗ್ರಾಮದಲ್ಲಿ ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು. ಈ ಶಿಬಿರದಲ್ಲಿ ಕಾರ್ಮಿಕ ಇಲಾಖೆಯ ಪಾವಗಡ ವೃತ್ತ ನಿರೀಕ್ಷಕರಾದ ಅಬ್ದುಲ್ ರಾವೂಪ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮಿ ಭೂತರಾಜು, ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶಿವ ಪ್ರಸಾದ್, ಸದಸ್ಯರಾದ ರಾಮಾಂಜಮ್ಮ, ಆನಂದ ಮತ್ತು ಶಿರಡಿ ಸಾಯಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯದರ್ಶಿ ಶ್ರೀ ಕೃಷ್ಣಮೂರ್ತಿ ಮತ್ತು ಬಿ.ತಿಮ್ಮಣ್ಣ ಕಾರ್ಮಿಕ ಸದಸ್ಯರು ಮಂಗಳವಾಡ, ಶ್ರೀ ಭಗತ್ ಸಿoಗ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಗೌಡ ರಂಗಪ್ಪ ಡಿ.ಇ.ಓ.ಕಮಲ L, ಶ್ರೀ ಸಿದ್ಧಾರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಶ್ರೀಗಿರಿಸ್ವಾಮಿ ಮತ್ತು ಕನ್ನಮೇಡಿ, ಗ್ರಾಮ ಪಂಚಾಯಿತಿ ಸದಸ್ಯ ಶ್ರೀ ಶಿವಕುಮಾರ ಹಾಗೂ ಗ್ರಾಮದ ಮುಖಂಡರು…