Author: admin

ದಾವಣಗೆರೆ: ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಿದ್ದರಾಮೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್​ನ ಅಧ್ಯಕ್ಷರಾಗಿದ್ದಾರೆ. ಅನೇಕ ಬಾರಿ ವಿರೋಧ ಪಕ್ಷದವರು ಜನರಿಗೆ ತಪ್ಪು ಮಾಹಿತಿಯನ್ನು ಕೊಡುವಂತಹ ಪ್ರಯತ್ನ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ದೊಡ್ಡ ಬಿರುಕಿದೆ ಅಂತ. ಈ 75ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಕ್ಕೆ ಡಿ.ಕೆ.ಶಿವಕುಮಾರ್ ಅವರ ವಿರೋಧವಿದೆ  ಅಂತ ಅಪಪ್ರಚಾರ ಮಾಡಿದ್ರು, ಆದರೆ ನಾನು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕರ್ನಾಟಕದಲ್ಲಿ ಒಂದು ಭ್ರಷ್ಟ, ಕೋಮುವಾದಿ ಸರ್ಕಾರ ಇದೆ. ಈ ಭ್ರಷ್ಟ, ಕೋಮುವಾದಿ ಸರ್ಕಾರವನ್ನು ಕಿತ್ತೊಗೆದು ರಾಹುಲ್​ ಗಾಂಧಿಯವರ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಮಧುಗಿರಿ: ಮಳೆ ಹಾನಿ ಪೀಡಿತ ಸ್ಥಳಗಳಿಗೆ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಹಾಗೂ ತಹಸೀಲ್ದಾರ್   ಸುರೇಶ್ ಆಚಾರ್ ತೆರಳಿ ಗ್ರಾಮವಾಸಿಗಳ  ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ,. ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಬಗ್ಗೆ ಮತ್ತು  ಕಡಿತಗೊಂಡ ರಸ್ತೆಗಳ ಸಂಪರ್ಕದ ಬಗ್ಗೆ   ಪರಿಶೀಲನೆ ನಡೆಸಿ, ಜಲಾವೃತಗೊಂಡ  ಮನೆಗಳಲ್ಲಿ ಸಿಲುಕಿದ ಗ್ರಾಮ ವಾಸಿಗಳನ್ನು ರಕ್ಷಿಸಿದರು. ಈ ಬಗ್ಗೆ ಅಧಿಕಾರಿಗಳು ಮಾಧ್ಯಮದೊಂದಿಗೆ ಮಾತನಾಡಿ , ಸಾರ್ವಜನಿಕರು ಹಳ್ಳ-ಕೊಳ್ಳ ಕೆರೆ-ಕಟ್ಟೆ ಹರಿಯುತ್ತಿರುವ ನದಿಯ ದಡಕ್ಕೆ ಯಾರು ಸಹ ಇಳಿಯಬಾರದು. ಮುಖ್ಯವಾಗಿ ಮಕ್ಕಳನ್ನು ಈ ಸಮಯದಲ್ಲಿ ಹರಿಯುತ್ತಿರುವ ನೀರಿನ ಹತ್ತಿರ ಹೋಗದಂತೆ ತಡೆಯಬೇಕು ಎಂದು ಎಚ್ಚರಿಸಿದರು. ಸತತವಾಗಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು‌ ತುಂಬಿದ್ದು ,  ಜಯಮಂಗಲಿ ನದಿ   ಮೈದುಂಬಿ ಹರಿಯುತ್ತಿದ್ದು , ಇದರಿಂದ ತಗ್ಗುಪ್ರದೇಶದ ಗ್ರಾಮಗಳಿಗೆ ನೀರು ನುಗ್ಗಿ ಜಲವೃತವಾಗಿದೆ. ಇದರಿಂದ ಅಪಾರ ಹಾನಿಯಾಗಿದೆ  ಎಂದು ತಿಳಿಸಿದರು. ಮಳೆಯಿಂದಾಗಿ ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡರೆ ಗ್ರಾಮವಾಸಿಗಳು ತಕ್ಷಣ  ತಾಲೂಕು ಅಧಿಕಾರಿಗಳಾದ  ತಹಸೀಲ್ದಾರ್, ತಾಲೂಕು ಪಂಚಾಯಿತಿ  ಇ ಒ.  ಸಂಬಂಧಪಟ್ಟ ಗ್ರಾಮಗಳ…

Read More

ಚಿತ್ರದುರ್ಗ: ಇಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಉತ್ಸವದಲ್ಲಿ ಭಾಗವಹಿಸುವುದಕ್ಕೂ ಮುನ್ನ ಸಂಸದ ರಾಹುಲ್‌ ಗಾಂಧಿ, ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಶ್ರೀಗಳ ಆಶೀರ್ವಾದ ಪಡೆದು ಕೊಂಡರು. ಇದೇ ವೇಳೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿ ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಅವರ ಮಾತನ್ನು ಅರ್ಧಕ್ಕೆ ತಡೆದಿದ್ದಾರೆ ಎನ್ನಲಾಗಿದೆ. ಇನ್ನೂ ಸಿದ್ದರಾಮಯ್ಯಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟುಹಬ್ಬ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇತ್ತ ಸಿದ್ದರಾಮಯ್ಯನವರ ತವರೂರು ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿ ಜನರಿಲ್ಲದೆ ಬಣಗುಡುತ್ತಿದೆ. ಇಲ್ಲಿನ ಬಹುತೇಕರು ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದು, ಕಾಲು ನೋವಿನ ಕಾರಣಕ್ಕೆ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ಸಿದ್ದರಾಮನ ಹುಂಡಿಯಲ್ಲಿ ಉಳಿದುಕೊಂಡಿದ್ದಾರೆ. ಇನ್ನುಳಿದಂತೆ ಎಲ್ಲರೂ ಸಹ ದಾವಣಗೆರೆಗೆ ತೆರಳಿದ್ದಾರೆ. ತವರು ಗ್ರಾಮದ ಜನತೆಗಾಗಿ ದಾವಣಗೆರೆಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡ ಬೇಕು. ಜಾತಿ ನಿಂದಿಸುವವರ ವಿರುದ್ಧ ಸರ್ಕಾರಿ ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಸವಿತಾ ಸಮಾಜ ಮೀಸಲಾತಿ ಮತ್ತು ಹೋರಾಟ ಸಮಿತಿ ವತಿಯಿಂದ ಒತ್ತಾಯಿಸಿತು. ತಿಟೂರಿನಲ್ಲಿ ಈ ಸಂಬಂಧ ಸಂಘಟನೆಯ ರಾಜ್ಯಾಧ್ಯಕ್ಷ G. ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ್, ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡಬೇಕು. ಹಾಗೂ ಜಾತಿ ನಿಂದಕರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಅವರು ಒತ್ತಾಯಿಸಿದರು. ಹೊರ ರಾಜ್ಯದಿಂದ ಮತ್ತು ಹೊರ ದೇಶದಿಂದ ಆಗಮಿಸಿರುವವರು ನಮ್ಮ ರಾಜ್ಯಕ್ಕೆ ಬಂದು ನೆಲೆಸಿ ನಮ್ಮ ವೃತ್ತಿಯನ್ನು ಪ್ರಾರಂಭಿಸಿದ್ದು, ನಮ್ಮ ಕುಲಕಸುವಾದ ಕ್ಷೌರಿಕ ವೃತ್ತಿಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ನಮ್ಮ ಕುಲಬಾಂಧವರ ಆದಾಯಕ್ಕೆ ಕತ್ತರಿ ಹಾಕುತ್ತಿದ್ದಾರೆ. ನಮ್ಮ ಜನಾಂಗದ ಒಳಿತಿಗಾಗಿ ನಾವು ಈ ಸಮಿತಿ ರಚಿಸಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಚಿತ್ರದುರ್ಗ: ಜಿಲ್ಲಾ ಮೂರನೇಯ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ನ್ಯಾಯಾಧೀಶರಾಗಿ ನೇಮಕಗೊಂಡಿರುವ ನ್ಯಾಯಾಧೀಶರಾದ ಸಹನಾ ಅವರನ್ನು ಜಿಲ್ಲಾ ವಕೀಲರ ಸಂಘದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸಿ.ಶಿವು ಯಾದವ್, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಲವು ವರ್ಷಗಳಿಂದ ನ್ಯಾಯಾಧೀಶರು ನೇಮಕಗೊಂಡಿರಲಿಲ್ಲ. ಇದೀಗ ಸಹನಾರವರು ನ್ಯಾಯಾಧೀಶರಾಗಿ ಆಗಮಿಸಿರುವುದು ತುಂಬಾ ಸಂತೋಷದಾಯಕ ವಿಷಯವಾಗಿದೆ. ಅವರ ನ್ಯಾಯಾಧೀಶರ ವೃತ್ತಿಜೀವನವು ಚಿತ್ರದುರ್ಗದಿಂದ ಆರಂಭಿಸುತ್ತಿದ್ದಾರೆ. ಅವರ ಮುಂದಿನ ನ್ಯಾಯಾಧೀಶರ ವೃತ್ತಿಜೀವನವು ಸುಂದರವಾಗಿರಲಿ ಎಂದು ಹಾರೈಸಿದರು. ನ್ಯಾಯಾಧೀಶರಾದ ಸಹನರವರಿಗೆ ನ್ಯಾಯದಾನ ವಿಚಾರದಲ್ಲಿ ಎಲ್ಲಾ ರೀತಿಯಿಂದಲೂ ವಕೀಲರ ಸಂಘದಿಂದ ಸಹಕಾರ ನೀಡಲಾಗುವುದು. ತ್ವರಿತ ನ್ಯಾಯದಾನದಲ್ಲಿ ನ್ಯಾಯಾಧೀಶರ ಮತ್ತು ವಕೀಲರ ಪರಸ್ಪರ ಸಹಕಾರ ಅತ್ಯವಶ್ಯಕವಾಗಿರುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರೇಮವತಿ ಮನಗೂಳಿ ಅವರು ಮಾತನಾಡಿ, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಸಹನಾರವರನ್ನು ನೇಮಕ ಮಾಡಿರುವುದು ಸಂತೋಷದಾಯಕ ವಿಷಯವಾಗಿದೆ. ತಮ್ಮ ಕೆಲಸ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಲಿ…

Read More

ಹಿರಿಯೂರು: ಶ್ರಾವಣ ಮಾಸದ ಮೊದಲ ಸೋಮವಾರ ಹಾಗೂ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ದಕ್ಷಿಣ ಕಾಶಿ ಎಂದೇ ಪ್ರಖ್ಯಾತ ವಾಗಿರುವ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ ಪೂಜೆಗಳು ಬಹಳ ವಿಜೃಂಭಣೆಯಿಂದ ನಡೆದವು. ನಾಗರ ಪಂಚಮಿಯಂದು ದೇವಸ್ಥಾನ ಹಾಗೂ ಹುತ್ತಗಳಿಗೆ ಭಕ್ತಾದಿಗಳು ವಿಶೇಷ ಪೂಜೆ ಮಾಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು, ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ . ಈ ಹಬ್ಬವನ್ನು ಅಣ್ಣ –ತಂಗಿಯರು ಸೇರಿಕೊಂಡು ಪೂಜಿಸುವುದು ಇನ್ನೊಂದು ವಿಶೇಷತೆಯಾಗಿದೆ. ಹಿರಿಯೂರು ತಾಲ್ಲೂಕಿನ ದಕ್ಷಿಣ ಕಾಶಿ ಶ್ರೀ ತೇರು ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಹೊರ ಭಾಗದಲ್ಲಿರುವ ನಾಗರ ಕಲ್ಲುಗಳಿಗೆ ಭಕ್ತಾದಿಗಳು ಹಾಲು ಸುರಿದು ಪೂಜೆ ಸಲ್ಲಿಸುವುದರ ಮುಖಾಂತರ ನಾಗರ ಪಂಚಮಿ ಹಬ್ಬವನ್ನು ಬಹಳ ವಿಶೇಷತೆಯಿಂದ ಆಚರಿಸಿದರು . ಇದೇ ಸಂದರ್ಭದಲ್ಲಿ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರು ತೇರುಮಲ್ಲೇಶ್ವರ ಸ್ವಾಮಿಯ ಹಾಗೂ ದೇವಸ್ಥಾನದ ವೈಶಿಷ್ಟ್ಯಗಳ ಬಗ್ಗೆ ನಮ್ಮ…

Read More

ಪಾವಗಡ: ತಾಲೂಕಿನ ನಿಡಗಲ್ಲು ಹೋಬಳಿ ದೇವಲಕೆರೆ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಕರಡಿಯೊಂದು ರಾತ್ರಿ ಕಳೆದಿದೆ. ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದ ರಕ್ಷಣೆ ಪಡೆಯಲು ಕರಡಿ ಮಂಜುಳಾ ಪುಟ್ಟರಾಜು ಎಂಬುವರ ನಿರ್ಮಾಣ ಹಂತದ ಮನೆಗೆ ಕರಡಿ ನುಗ್ಗಿದೆ ಎನ್ನಲಾಗಿದೆ. ಬುಧವಾರ ಬೆಳಿಗ್ಗೆ ಮನೆ ಬಳಿ ಹೋದಾಗ ಮನೆಯಲ್ಲಿ ಕರಡಿ ಮಲಗಿರುವುದನ್ನು ಗಮನಿಸಿದ ಮನೆಯ ಮಾಲೀಕರು ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಕರಡಿಯನ್ನು ಓಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ 2022-23ನೇ ಸಾಲಿನ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ  ನಡೆಸಿ ಅವರು, ಪರಿಶಿಷ್ಟ ಜಾತಿ, ಪಂಗಡದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ 75ಯೂನಿಟ್ ವಿದ್ಯುತ್ ಸರಬರಾಜು ಮಾಡುವ ಯೋಜನೆ ರೂಪಿಸಿದ್ದು ಇಂಧನ ಇಲಾಖೆ ಅಧಿಕಾರಿಗಳು ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕೆಂದು ಅವರು ಸೂಚಿಸಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 20 ಸಾವಿರ ರೂ.ಗಳ ಘಟಕ ಯೋಜನೆಯ ಸಹಾಯಧನದಲ್ಲಿ ಸ್ವಚ್ಚ ಭಾರತ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ವಿಶೇಷವಾಗಿ ಈ ಸಮುದಾಯಕ್ಕೆ ವಸತಿ ಯೋಜನೆ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ…

Read More

ಮಧುಗಿರಿ: ಆಗಸ್ಟ್ 15ರ ಸ್ವಾತಂತ್ರ ದಿನಾಚರಣೆ ಅಮೃತ ಮಹೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಸಭಾಂಗಣದಲ್ಲಿ ತಿಳಿಸಿದ್ದಾರೆ.  ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು  ಮಟ್ಟದ ಅಧಿಕಾರಿಗಳ ಸಂಘ-ಸಂಸ್ಥೆಗಳ ಪೂರ್ವಭಾವಿ ಸಭೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೂ ಮೂರು ದಿನಗಳ ಕಾಲ ಸರ್ಕಾರಿ ಕಚೇರಿಗಳ ಮೇಲೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯ್ತಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕೆಂದು. ರಾಷ್ಟ್ರಧ್ವಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾಡಬಾರದು ಎಂದು ತಿಳಿಸಿದರು.  ಸಂದರ್ಭದಲ್ಲಿ ಮಾಜಿ ಸೈನಿಕರಿಗೆ ಪೆರೇಡ್ ಮಾಡಲು ಅವಕಾಶ ನೀಡಲಾಗುವುದು ಮತ್ತು ಅವರಿಗೆ ಸನ್ಮಾನ ಮಾಡಲಾಗುವುದಿಲ್ಲ. ಸರ್ಕಾರಿ ನೌಕರರು ಕ್ರಿಯಾಶೀಲವಾಗಿ ಕೆಲಸ ಮಾಡಿದಾಗ ವಿಜೃಂಭಣೆಯಿಂದ ಆಚರಿಸಲು ಸಾಧ್ಯ ಎಂದರು.  ಆಗಸ್ಟ್ 15ರ ಬೆಳಿಗ್ಗೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾತಂತ್ರೋತ್ಸವದ ದಿನಕ್ಕೆ ಚಾಲನೆ ನೀಡಲಾಗುವುದು ಅದೇ ರೀತಿ ಸರ್ಕಾರಿ ಕಛೇರಿಗಳು ಬ್ಯಾಂಕುಗಳು ಆಗಸ್ಟ್ 13ರಿಂದ ತಮ್ಮ ಕಚೇರಿಗಳ ಮೇಲೆ…

Read More