Subscribe to Updates
Get the latest creative news from FooBar about art, design and business.
- ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ
- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
- ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
- ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
Author: admin
ಸರಗೂರು: ರಾಜ್ಯದಲ್ಲಿ ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಒಗ್ಗಟ್ಟಾಗಿ ಒಂದು ವೇದಿಕೆಯನ್ನು ಸೃಷ್ಟಿಸಿಕೊಂಡು ಪ.ಜಾತಿ ಮತ್ತು ಪ.ಪಂಗಡಗಳ ಜನರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸರಗೂರು ಸಂವಿಧಾನ ರಕ್ಷಣಾ ಸಮಿತಿ ಪತ್ರ ಚಳುವಳಿಯ ಮೂಲಕ ಎಚ್ಚರಿಕೆ ನೀಡಿದೆ. ಪಟ್ಟಣದ ಅಂಚೆ ಕಛೇರಿ ಆವರಣದಲ್ಲಿ ಜಮಾಯಿಸಿದ ಸಂವಿಧಾನ ರಕ್ಷಣಾ ಸಮಿತಿಯ ಸದಸ್ಯರು, ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರುಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಪ.ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಪಕ್ಷಭೇದವನ್ನು ಮರೆತು ಒಗ್ಗೂಡಿ ಕೆಲಸ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂವಿಧಾನ ರಕ್ಷಣಾ ಸಮಿತಿಯ ಖಜಾಂಚಿ ಗ್ರಾಮೀಣ ಮಹೇಶ್, ರಾಜ್ಯದಲ್ಲಿ ಸಂವಿಧಾನದ ಮೂಲ ಆಶಯ ಬುಡಮೇಲಾಗುತ್ತಿದ್ದು, ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿ ದೂರದ ಮಾತಾಗಿದೆ. ಈ ನಿಟ್ಟಿನಲ್ಲಿ ಸಂವಿಧಾನದ ಮೀಸಲಾತಿಯಿಂದ ಗೆದ್ದಂತಹ ರಾಜ್ಯದ ಶಾಸಕರು ಪಕ್ಷಕ್ಕಾಗಿ ದುಡಿಯುವುದನ್ನು ಬಿಟ್ಟು ಪಕ್ಷಭೇದ ಮರೆತು ಒಗ್ಗಟ್ಟಾಗಿ ಶೋಷಿತರ ಅಭಿವೃದ್ಧಿಯ ಕೆಲಸಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಮೇಲ್ವರ್ಗದವರಿಗೆ ಜಾತಿಗೊಂದು…
ಹಿರಿಯೂರು : ಭಾರತ ಸ್ವತಂತ್ರ್ಯ ಪಡೆದು 75 ವರ್ಷಗಳು ಕಳೆದಿದ್ದು, ಈ ಅಮೃತ ಮಹೋತ್ಸವದ ಸಂಭ್ರಮದ ಅಂಗವಾಗಿ ಶಿಕ್ಷಣ, ಆರೋಗ್ಯ, ಕೃಷಿ ಈ ಮೂರು ಕ್ಷೇತ್ರಗಳಿಗೆ ಆದ್ಯತೆ ನೀಡಬೇಕೆಂಬ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲ್ಲೂಕಿನ ಐಮಂಗಲ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮೊದಲು ಹೋಬಳಿ ಮಟ್ಟದಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲು ಸರ್ಕಾರ ಮುಂದಾಗಿದ್ದು, ಜೀವನದಲ್ಲಿ ಆರೋಗ್ಯ ಮತ್ತು ಶಿಕ್ಷಣವನ್ನು ಮುಂದೂಡಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಈ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಐಮಂಗಲ, ಮರಡಿಹಳ್ಳಿ, ಬುರುಜಿನರೊಪ್ಪ, ಸೂರಗೊಂಡನಹಳ್ಳಿ, ಮೇಟಿಕುರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಕೆಇಬಿ ಕಚೇರಿ ಮುಂಭಾಗ ದೊಡ್ಡ ಆಲದಮರ ಬಿದ್ದು, ಹುಳಿಯಾರು – ತಿಪಟೂರು ರಸ್ತೆ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದ್ದು, ಪರಿಣಾಮವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ವಿದ್ಯುತ್ ತಂತಿಯ ಮೇಲೆಯೇ ಮರ ಬಿದ್ದ ಪರಿಣಾಮ ರಸ್ತೆ ಬಂದ್ ಆಗಿರುವುದಲ್ಲದೇ ಈ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಂಡಿದೆ. ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಈ ಮಾರ್ಗದ ಬದಿಯಲ್ಲಿ ಹಳೆಯ ಕಾಲದ ಸಾಕಷ್ಟು ಮರಗಳಿದ್ದು, ಗಾಳಿ, ಮಳೆಗಳ ಸಂದರ್ಭದಲ್ಲಿ ರಸ್ತೆಗೆ ಬೀಳುತ್ತಿವೆ. ಪದೇ ಪದೇ ಇಂತಹ ಘಟನೆಗಳು ಇಲ್ಲಿ ನಡೆಯುತ್ತಲೇ ಇರುತ್ತವೆ. ಸಂಬಂಧ ಪಟ್ಟವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಚಲಿಸುತ್ತಿರುವ ವಾಹನಗಳ ಮೇಲೆ ಮರಗಳು ಉರುಳಿ ಬಿದ್ದು, ಸಾವು ನೋವು ಸಂಭವಿಸುವ ಮೊದಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿರುವ ಮರಗಳ ತೆರವಿಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ವರದಿ: ಆನಂದ ತಿಪಟೂರು…
ಬೆಂಗಳೂರು: ಮೇ 19ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದರು. ಇದೀಗ ನಾಳೆ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧವಾಗಿದೆ. ಇನ್ನೊಂದೆಡೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕಾತರದಿಂದ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನದ ವೇಳೆಗೆ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಹೊರ ಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ನಾಳೆ ಪರೀಕ್ಷೆ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು karresults.nic.in ಮತ್ತು sslc.karnataka.gov.in ವೆಬ್ ಸೈಟ್ ಗಳಿಗೆ ಭೇಟಿ ನೀಡಬಹುದಾಗಿದೆ. ಹಾಗೆಯೂ ಯಾರಿಗಾದರೂ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಲು ಸಾಧ್ಯವಾಗದಿದ್ದರೆ. ಮೇ 20ರಂದು ನಿಮ್ಮ ಶಾಲೆಗಳಲ್ಲಿಯೇ ಫಲಿತಾಂಶಗಳು ಪ್ರಕಟಗೊಳ್ಳಲಿದೆ. ಹಾಗಾಗಿ ವಿದ್ಯಾರ್ಥಿಗಳು ಆತಂಕಕ್ಕೀಡಾಗಬೇಕಾದ ಅಗತ್ಯವಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ ಫೈಲ್ಸ್’ ಚಿತ್ರವೇ ಕಾರಣ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ. ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಅಧಿಕಾರಾವಧಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗಿತ್ತು. ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದ್ದೇವೆ. 2016ರಲ್ಲಿ ಗರಿಷ್ಠ ಅಶಾಂತಿಯ ಸಂದರ್ಭದಲ್ಲಿ ಯಾವುದೇ ಹತ್ಯೆ ನಡೆದಿಲ್ಲ ಎಂದರು. ಅಲ್ಲದೆ, ಕಾಶ್ಮೀರ ಫೈಲ್ಸ್ ಚಲನಚಿತ್ರವು ಹಿಂಸಾಚಾರವನ್ನು ಪ್ರಚೋದಿಸಿದೆ ಎಂದ ಅವರು, ಕೇಂದ್ರ ಸರ್ಕಾರ ನಮ್ಮ ಎಲ್ಲಾ ಮಸೀದಿಗಳ ಹಿಂದೆ ಬಿದ್ದಿದ್ದಾರೆ. ಕೇಂದ್ರ ಸರ್ಕಾರವು ನೈಜ ವಿಷಯಗಳಿಂದ ವಿಚಲಿತರಾಗಲು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಈಗ ಜ್ಞಾನವಾಪಿ ಮಸೀದಿಯ ಹಿಂದೆ ಇದ್ದಾರೆ ಎಂದು ಹೇಳಿದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕೊರಟಗೆರೆ: ಕೊರಟಗೆರೆಯಿಂದ ಮಲ್ಲೇಶ್ವರಕ್ಕೆ ಹೋಗುವ ರಸ್ತೆ ಮಧ್ಯದಲ್ಲಿ ಸೇತುವೆ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು. ರಸ್ತೆಗಳಿಗೆ ಮಣ್ಣನ್ನು ಹಾಕುತ್ತೇವೆ ಎಂದು ಟಿಪ್ಪರ್ ಗಟ್ಟಲೆ ಮಣ್ಣನ್ನು ಅಗೆದು ಹೊರ ಸಾಗಿಸುತ್ತಿರುವ ಘಟನೆ ನಡೆದಿದ್ದು, ಇದು ಸ್ಥಳೀಯ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ ಅಥವಾ ಕಂಡರೂ ಕಾಣದಂತೆ ಗಾಢನಿದ್ರೆಯಲ್ಲಿ ಮಲಗಿದ್ದಾರೆಯೇ ಎನ್ನುವ ಪ್ರಶ್ನೆಗಳು ಕೇಳಿಬಂದಿವೆ. ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಬಜನಹಳ್ಳಿ ಹಾಗೂ ಕ್ಯಾಮೇನಹಳ್ಳಿ ಹೋಗುವ ರಸ್ತೆ ಪಕ್ಕದಲ್ಲಿರುವ ದೊಡ್ಡ ದೊಡ್ಡ ಬೆಟ್ಟಗಳೇನ್ನೆ ಕರಗಿಸುತ್ತಿರುವ ಗುತ್ತಿಗೆದಾರರು, ದೊಡ್ಡ ದೊಡ್ಡ ಜೆಸಿಬಿ ಹಿಟಾಚಿಗಳನ್ನು ತಂದು ದೊಡ್ಡ ಬೆಟ್ಟಗಳನ್ನೇ ಕರಗಿಸಿ ಭೂತಾಯಿಯ ಒಡಲಿಗೆ ಕೊಡಲಿ ಹಾಕುತ್ತಿದ್ದಾರೆ. ಇಂತಹ ದೊಡ್ಡ ದೊಡ್ಡ ಗುತ್ತಿಗೆದಾರರ ಕಂಪನಿಗಳನ್ನು ಕೂಡಲೇ ರದ್ದು ಮಾಡಬೇಕು. ಇಷ್ಟು ದೊಡ್ಡ ಪ್ರಮಾಣದಲ್ಲಿ ಮಣ್ಣು ಅಗೆದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದರ ಬಗ್ಗೆ ಮಣ್ಣನ್ನು ಅಗೆಯುತ್ತಿದ್ದ ವ್ಯಕ್ತಿಯನ್ನು ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ನಮ್ಮ ಗುತ್ತಿಗೆದಾರರ ಬಳಿ ಕೇಳಿ ಎಂದು ಹೇಳುತ್ತಾರೆ. ಅವರಿಗೆ ಕರೆ ಮಾಡಿ ಕೇಳಿದಾಗ ಇದಕ್ಕೆಲ್ಲಾ ನಾವು ಪರ್ಮಿಷನ್…
ಪ್ರಸಿದ್ಧ ಅಮರನಾಥ ಯಾತ್ರೆಗೆ ಜೂನ್ ೩೦ ರಿಂದ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಕೈಗೊಳ್ಳಬೇಕಾಗಿರುವ ಭದ್ರತೆ ಬಗ್ಗೆ ಚರ್ಚೆ ನಡೆಸಲಾಯಿತು. ಇತ್ತೀಚೆಗೆ ಕಾಶ್ಮೀರ ಪಂಡಿತ ಸಮುದಾಯದ ನೌಕರ ರಾಹುಲ್ ಭಟ್ ಅವರನ್ನು ಭಯೋತ್ಪಾದಕ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಕಾಶ್ಮೀರಿ ಪಂಡಿತರು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅಮಿತ್ ಷಾ ಈ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಮ್ಮು-ಕಾಶ್ಮೀರದ ಲೆಫ್ಟಿನೆಟ್ ಗವರ್ನರ್ ಮನೋಜ್ ಸಿನ್ಹಾ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಗುಪ್ತಚರ ಇಲಾಖೆಯ ಮುಖ್ಯಸ್ಥ ಅರವಿಂದ್ ಕುಮಾರ್, ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದವು. ಹಿಂದಿನ ಸಭೆಯಲ್ಲಿ ಅಮರನಾಥ್ ದೇವಾಲಯದ ಆಡಳಿತ ಮಂಡಳಿ ಸದಸ್ಯರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಜಮ್ಮು- ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭದ್ರತಾ ಸಂಸ್ಥೆಗಳಿಗೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಚುರುಕುಗೊಳಿಸುವಂತೆ…
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಸಿಲಿನ ದಗೆಗೆ ಜನ ಹೈರಾಣಾಗಿದ್ದಾರೆ. ಹರಿಯಾಣ ಗಡಿಯ ಮಂಗೇಶ್ಕರ್ನಲ್ಲಿ ಗರಿಷ್ಠ ತಾಪಮಾನ 48.8 ಡಿಗ್ರಿ ತಲುಪಿದ್ದು ಹೊಸ ಆತಂಕಕ್ಕೆ ಕಾರಣವಾಗಿದೆ. ಬಿಸಿಗಾಳಿಯ ವಾತಾವರಣ ಹಾಗೂ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿರುವುದು ಹವಾಮಾನ ವೈಪರಿತ್ಯದ ಸಂಕೇತ ಎಂದು ಪರಿಸರವಾದಿಗಳು ಎಚ್ಚರಿಸಿದ್ದಾರೆ. ಮಳೆ ಕೊರತೆ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ. ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬಿಸಿ ಗಾಳಿ ಹೆಚ್ಚಾಗಿ ಬೀಸುತ್ತಿದೆ. ನವದೆಹಲಿಯ ಪಶ್ಚಿಮದಲ್ಲಿ ಕಳೆದ 2 ತಿಂಗಳಿನಿಂದ ದಟ್ಟಮೋಡದವ ವಾತಾವರಣ ಸೃಷ್ಟಿಯಾದರೂ ಮರೆಯಾಗುತ್ತಿಲ್ಲ. ಮೋಡ ಮುಸುಕಿನ ಸನ್ನಿವೇಶದಲ್ಲಿ ಬಿರುಗಾಳಿ ಬೀಸುವುದು ಸಾಮಾನ್ಯವಾಗಿದೆ. ಇದರಿಂದ ಉಷ್ಣಾಂಶ ಹೆಚ್ಚಾಗುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಯಾದಗಿರಿ: ಜಿಲ್ಲೆಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಡಾ.ಆರ್.ಕೋದಂಡರಾಮ್ ಅವರ ಮಾರ್ಗದರ್ಶನದಲ್ಲಿ ಸರಳ ಸಾಮೂಹಿಕ ವಿವಾಹ ಮತ್ತು ಮಂತ್ರ ಮಾಂಗಲ್ಯ ಬುದ್ಧ ವಂದನಾ ಹಾಗೂ ಮಂಗಲಧಾರಣೆ ನೆರವೇರಿಸಲಾಯಿತು. ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಕಾಶೀನಾಥ್ ನಾಟೇಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಜೋಡಿಗಳಿಗೆ ವಿವಾಹವನ್ನು ನೇರವೇರಿಸಲಾಯಿತು. ವಿವಾಹ ಕಾರ್ಯಕ್ರಮವನ್ನು ನಾಗಪುರದ ನಾಗಾರ್ಜುನ ಬಂತೇಜಿಯವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ರಾಜ್ಯ ಗೌರವ ಅಧ್ಯಕ್ಷರಾದ ಶಿವರುದ್ರಪ್ಪ, ರಾಜ್ಯ ಉಪಾಧ್ಯಕ್ಷರಾದ ಆನಂದ್ ಕುಮಾರ್ ಎಂ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಜೆ.ಇ., ರಾಜ್ಯ ಕಾರ್ಯದರ್ಶಿಗಳು ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ ., ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಕಾಶೀನಾಥ್ ನಾಟೇಕರ್ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಅಧ್ಯಕ್ಷರಾದ ನಾಗೇಶ್ ಮತ್ತಿತರರು ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್.,…
ಸರಗೂರು: ತಾಲ್ಲೂಕಿನ ನಾಯಕ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಹಾಗೂ ಆದಿಜಾಂಭವ ಸಮಿತಿ ಆದಿವಾಸಿ ಬುಡಕಟ್ಟು, ಗಿರಿಜನ ಪ್ರಗತಿಪರ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಪರಮ ಪೂಜ್ಯ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರ ಹೋರಾಟಕ್ಕೆ ಬೆಂಬಲ ನೀಡಲು ಕರೆ ನೀಡಲಾಯಿತು. ತಾಲ್ಲೂಕಿನ ನಾಮಧಾರಿಗೌಡನ ಕಲ್ಯಾಣ ಮಂಟಪದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಪರಮ ಪೂಜ್ಯ ಶ್ರೀ ಪ್ರಸನಾನಂದ ಸ್ವಾಮೀಜಿ ನಮ್ಮ ಜನಾಂಗಕ್ಕೆ ಸಂವಿಧಾನ ಬದ್ಧವಾಗಿ ಸರ್ಕಾರ ನೀಡಬೇಕಾಗಿರುವ ಪರಿಶಿಷ್ಟ ಪಂಗಡ 7.5ರಷ್ಟು ಮತ್ತು ಪರಿಶಿಷ್ಟ ಜಾತಿ 17ರಷ್ಟು ಮೀಸಲಾತಿ ಹೆಚ್ಚಳಕ್ಕಾಗಿ ಸುಮಾರು 95 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಗ್ರಹ ಧರಣಿ ಕುಳಿತಿದ್ದಾರೆ. ಆದರೆ ಈವರೆಗೆ ನ್ಯಾಯ ದೊರಕದೇ ಇರುವುದು ನೋವಿನ ಸಂಗತಿ ಎಂದರು. ಪಟ್ಟಣ ಪಂಚಾಯತ್ ಸದಸ್ಯ ಹಾಗೂ ನಾಯಕ ಸಮಾಜದ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ, ಪರಮ ಪೂಜ್ಯ ಶ್ರೀ ಪ್ರಸನಾನಂದ ಸ್ವಾಮೀಜಿಗೆ ಬೆಂಬಲ ಸೂಚಿಸಿ ರಾಜ್ಯದ ಎಲ್ಲಾ ತಾಲ್ಲೂಕು…