Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಬಸವರಾಜ್ ಆಸ್ಪತ್ರೆ ರಸ್ತೆಯ ನೃಪತುಂಗ ಬಡಾವಣೆಯಲ್ಲಿರುವ ಶ್ರೀ ಸಾಯಿಬಾಬಾ ಸ್ವಾಮಿಗೆ ವಾರದ ಪ್ರಯುಕ್ತ ಭಕ್ತಾದಿಗಳಿಂದ ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವು ಸಹ ಬಹಳ ವಿಜೃಂಭಣೆಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಭಕ್ತಾದಿಗಳು ಸಾಯಿಬಾಬಾ ಅವರ ಮಹಿಮೆಗಳು ಹಾಗೂ ತಮ್ಮ ಜೀವನದಲ್ಲಿ ನಡೆದ ಪವಾಡಗಳನ್ನು ವಿವರಿಸಿ, ಸ್ವಾಮಿಯ ಮಹಿಮೆಗೆ ಅಚ್ಚರಿ ವ್ಯಕ್ತಪಡಿಸಿದರು. ಹಿರಿಯೂರು ನಗರದಲ್ಲಿರುವ ಈ ಸಾಯಿಬಾಬಾ ದರ್ಶನ ಪಡೆಯಲು ಸಾವಿರಾರು ಜನ ಈ ದೇವಾಲಯಕ್ಕೆ ಶ್ರೀ ಸಾಯಿಬಾಬಾನ ದರ್ಶನ ಪಡೆಯಲು ದಿನನಿತ್ಯವು ಸಹ ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರು ಹಾಗೂ ನಾನಾ ಕಡೆಗಳಿಂದಲೂ ಸಹ ಭಕ್ತಾದಿಗಳು ಆಗಮಿಸುತ್ತಾರೆ ಎಂದು ಇಲ್ಲಿನ ಮಹಿಮೆಗಳನ್ನು ಭಕ್ತರು ಕೊಂಡಾಡಿದರು. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಾಜ್ಯದಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಠಿಸುವ ಸಲುವಾಗಿ ಮುಂಬರುವ ನವೆಂಬರ್ ತಿಂಗಳಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ನವೆಂಬರ್ 2, 3 ಮತ್ತು 4ರಂದು ಮೂರು ದಿನಗಳ ಅರಮನೆ ಮೈದಾನದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು. ನಗರದಲ್ಲಿ ಹೊರವಲಯದ ಗಂಗಾಧರಯ್ಯ ಮೆಮೋರಿಯಲ್ ಹಾಲ್ ನಲ್ಲಿ ಏರ್ಪಡಿಸಲಾಗಿರುವ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2010 ಮತ್ತು 2012ರಲ್ಲಿ ಆಯೋಜಿಸಿದ್ದ ವಿಶ್ವ ಹೂಡಿಕೆದಾರರ ಸಮಾವೇಶ ಬಹಳ ಯಶಸ್ವಿಯಾಗಿತ್ತು. ಇದರಿಂದ 15 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆತ್ತಿತ್ತು. ಹಾಗಾಗಿಯೇ ಮತ್ತೆ ನವೆಂಬರ್ನಲ್ಲೂ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಕೈಗಾರಿಕೆಯಲ್ಲಿ ಹಾಗೂ ಬಂಡವಾಳ ಆಕರ್ಷಿಸುವಲ್ಲಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ನಾವು ಮಕ್ಕಳನ್ನು ಬರೀ ಪದವೀಧರರನ್ನಾಗಿ ಮಾಡಿದರೆ ಸಾಲದು,…
ತೆರಿಗೆ ವಂಚನೆಯ ವಿರುದ್ಧ ಸಮರ ಸಾರಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ಮುಂಜಾನೆಯಿಂದ ನಗರದಲ್ಲಿ ಹೆಚ್ಚು ಹಣ ಸಂಪಾದಿಸಿ ತೆರಿಗೆ ಪಾವತಿಸದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಮೇಲೆ ಇಂದು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಬಾಗಲೂರಿನಲ್ಲಿರುವ ರೇವಾ ಶಿಕ್ಷಣ ಸಂಸ್ಥೆ, ದಿವ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್,ಹುಣಸಮಾರಹಳ್ಳಿಯ ಕೃಷ್ಣದೇವರಾಯ ಇನ್ಸ್ಟಿಟ್ಯೂಟ್ ಸೇರಿ ಸರ್ಚ್ ವಾರೆಂಟ್ ಪಡೆದು ೪೫ ಕ್ಕೂ ಹೆಚ್ಚು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಕಾಲೇಜು ಅಲ್ಲದೇ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರ ಮನೆ ಮೇಲೂ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು ಎಪ್ಪತ್ತು ವಾಹನಗಳಲ್ಲಿ ಬಂದ ಕರ್ನಾಟಕ ಗೋವಾ ವಲಯದ 250 ಕ್ಕೂ ಐಟಿ ಅಧಿಕಾರಿಗಳು ಮುಂಜಾನೆಯಿಂದ ನಡೆಸಿರುವ ಏಕಕಾಲದ ದಾಳಿ ಮಧ್ಯಾಹ್ನದವರೆಗೆ ಮುಂದುವರೆದಿದೆ. ವಿದೇಶಿ ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಶುಲ್ಕ ಸಂಗ್ರಹ ಮಾಡಿರುವುದು,ಸರ್ಕಾರದ ನಿಯಮಾವಳಿಗಳನ್ನ ಮೀರಿ ಪೇಮೆಂಟ್ ಕೋಟಾ ಸೀಟ್ಗಳನ್ನು ಮ್ಯಾನೇಜ್ಮೆಂಟ್ಗಳು ಬ್ಲಾಂಕಿಂಗ್…
ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಠ ಕೂಸು ಎಂದು ಮಾಜಿ ಸಚಿವ ಹಾಗೂ ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಧ್ಯ ಪ್ರದೇಶ ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ, ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನಬಾಹಿರ ಎಂದು ಅವರು ಟ್ವೀಟರ್ನಲ್ಲಿ ಟೀಕಿಸಿದ್ದಾರೆ. ನಾ ಖಾವೂಂಗ,ನಾ ಖಾನೇ ದೂಂಗಾ ಎಂದು ಭಾಷಣ ಬಿಗಿಯುವ ಪ್ರಧಾನಿ ಮೋದಿ ಅವರು ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣವನ್ನು ಯಾರು ತಿಂದಿ ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ ಎಂದು ಪ್ರಶ್ನಿಸಿರುವ ದಿನೇಶ್ಗುಂಡೂರಾವ್, ಮೋದಿ ಅವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸುತ್ತಾರಾ ಎಂದು ಟ್ವೀಟರ್ನಲ್ಲಿ…
ತುಮಕೂರು: ವ್ಯಕ್ತಿಯೊಬ್ಬರ ಮೇಲೆ ಮಚ್ಚಿನಿಂದ ಕೊಚ್ಚಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಭೀಮಸಂದ್ರದಲ್ಲಿ ನಡೆದಿದ್ದು, ಘಟನೆಗೆ ಹಳೆಯ ವೈಷಮ್ಯ ಕಾರಣ ಎನ್ನಲಾಗಿದೆ. ಭೀಮಸಂದ್ರ ದ ಜನನಿಬಿಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಂಗರಾಜು ಎಂಬವರ ಮೇಲೆ ಕಿರಣ್ ಎಂಬಾತ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದ. ಕೃತ್ಯದ ಬಳಿಕ ಆರೋಪಿಯು ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾಗಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕುಣಿಗಲ್: ಉಪನೋಂದಣಾಧಿಕಾರಿ ಕಚೇರಿ ಕಿಟಕಿಯ ಸರಳು ಮುರಿದು, ಕಳ್ಳತನಕ್ಕೆ ಯತ್ನಿಸಿದ ಘಟನೆ ಬುಧವಾರ ತಡ ರಾತ್ರಿ ಕುಣಿಗಲ್ ನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಕಚೇರಿ ಒಳಗೆ ನುಗ್ಗಿದ ಕಳ್ಳರು ಬಿರು ಒಡೆದು ಕಳ್ಳತನಕ್ಕೆ ಯತ್ನಿಸಿದ್ದು, ನಗದು ಸಿಗದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ಸಾಗಿದ್ದಾರೆ. ಗುರುವಾರ ಬೆಳಗ್ಗೆ ಕಚೇರಿಗೆ ಉಪನೋಂದಣಾಧಿಕಾರಿ ಯಶೋಧ ಆಗಮಿಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ, ಪ್ರಕರಣ ದಾಖಲಿಸಲಾಗಿದೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ಬೈಕ್ ಗೆ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಲ್ಲಿರುವ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಹಾಲ್ಕುರಿಕೆ ಗ್ರಾಮದ ವಾಸಿ ಸುಮಾರು 38ವರ್ಷ ವಯಸ್ಸಿನ ಮಂಜುನಾಥ್ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಮಂಜುನಾಥ್ ಅವರ ಪತ್ನಿಗೆ ಅಪಘಾತದಲ್ಲಿ ಗಾಯವಾಗಿದೆ. ಅಪಘಾತದ ವೇಳೆ ಮಂಜುನಾಥ್ ಅವರ ತಲೆ ರಸ್ತೆಗೆ ಅಪ್ಪಳಿಸಿದ ಪರಿಣಾಮ ತಲೆ ಛಿದ್ರಗೊಂಡಿದ್ದು, ಘಟನೆಯ ದೃಶ್ಯ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಅಪಘಾತದ ವೇಳೆ 112 ತುರ್ತು ವಾಹನಕ್ಕೆ ಕರೆ ಮಾಡಿದರೆ, 2 ಗಂಟೆಯಾದರೂ ತುರ್ತು ವಾಹನ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಗೆ ತೆರಳಲು ಸರಿಯಾದ ವಾಹನ ಸಿಗದೇ ಮಹಿಳೆ ಸಂಕಷ್ಟಕ್ಕೀಡಾದರು. 112ತುರ್ತುವಾಹನ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದರು. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದ ಬಾಳೆ ಹೊನ್ನೂರು ಶಾಖಾ ಮಠದ ಸಮುದಾಯ ಭವನದಲ್ಲಿ ಪುಸ್ತಕ ದಾಸೋಹ ಕಾರ್ಯಕ್ರಮ ಆಯೋಜನೆಗೊಂಡಿತ್ತು ಶ್ರೀ ಮಠದ ವಿದ್ಯಾರ್ಥಿಗಳಿಂದ ವೇದ ಮಂತ್ರ ಪಠಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪುಸ್ತಕ ದಾಸೋಹ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಆಟವಿ ಶಿವಲಿಂಗ ಮಹಾ ಸ್ವಾಮಿಜೀ ಮತ್ತು ಶ್ರೀ ಶ್ರೀ ಈಶ್ವರನಂದ ಪುರಿ ಮಹಾ ಸ್ವಾಮಿಜೀ ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಣೆ ಮಾಡಲಾಗಿತ್ತು. ಪುಸ್ತಕ ಜೋಳಿಗೆ ಎಂಬ ಕಾರ್ಯಕ್ರಮದಿಂದ ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಮತ್ತು ಕೊರಟಗೆರೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿಯ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಿದ್ದರಬೆಟ್ಟದ ಕನಕ ಪೀಠದ ಪೀಠಾಧಿಪತಿಗಾಳದ ಶ್ರೀ ಈಶ್ವರನಂದ ಪುರಿ ಮಹಾ ಸ್ವಾಮೀಜಿ ಮಾತನಾಡಿ, ಪ್ರತಿ ನಿತ್ಯವು ಶ್ರೀಗಳು ವಿಭಿನ್ನ…
ತುರುವೇಕೆರೆ : ತಾಲೂಕಿನ ದಂಡಿನಶಿವರ ಹೋಬಳಿ ,ಕೊಂಡಜ್ಜಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ,ಕಲ್ಲುಬೊರನಹಳ್ಳಿ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಉಪಾಧ್ಯಕ್ಷ ರಾದ ಎಂ.ಆರ್ , ಶೀಲಾ ನವೀನ್ ಕುಮಾರ್ ರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಲ್ಲು ಬೋರನಹಳ್ಳಿ ರವಿಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದರು. ಹೀಗಾಗಿ ಚುನಾವಣಾಧಿಕಾರಿ ನಯೀಮ್ ಉನ್ನಿಸ್ಸಾ ರವರು ಕಲ್ಲಬೋರನಹಳ್ಳಿ ರವಿಕುಮಾರ್ ಉಪಾಧ್ಯಕ್ಷ ರೆಂದು ಘೋಷಿಸಿದರು . ರವಿ ಕುಮಾರ್ ಅವರನ್ನು ಪಂಚಾಯ್ತಿ ಅಧ್ಯಕ್ಷರಾದ ಸುಶೀಲಮ್ಮ ,ಬಸವರಾಜು , ಸದಸ್ಯರುಗಳಾದ , ಶಿವಮ್ಮ , ಕೀರ್ತಿ, ಜೀವನ್ ಗೌಡ, ಎಂ.ಆರ್.ಶೀಲಾ., ನಾಗರಾಜು , ನಾಗವೇಣಿ , ಗಂಗಾನಮ್ಮ , ಶ್ರೀನಿವಾಸ್ ಪ್ರಸಾದ್ , ಶೋಭಾ, ಮಹಾಲಿಂಗಯ್ಯ , ದೇವರಾಜು, ಜಯಲಕ್ಷ್ಮಿ., ಭಾಮಾ , ವಿ.ಎಸ್.ಎಸ್.ಎನ್. ಅಧ್ಯಕ್ಷರಾದ ಪೈಂಟ್ ರಂಗನಾಥ್ , ನಿರ್ದೇಶಕರಾದ ನಟರಾಜ್, ಹರಿಕಾರನಹಳ್ಳಿ ಮಂಜಣ್ಣ ಮುಂತಾದವರು ಅಭಿನಂದನೆ ಸಲ್ಲಿಸಿದರು. ಚುನಾವಣೆ ಯಲ್ಲಿ .ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಸಹಕರಿಸಿದರು , ಉಪಾಧ್ಯಕ್ಷರಾಗಿ ,…
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸುತ್ತಿದ್ದು, ಭಾರತ ನಮ್ಮ ಹೆಮ್ಮೆ ಎಂದು ಆರನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಿದ್ದೇವೆ, ಇದ್ರಲ್ಲಿ ತಪ್ಪೇನಿದೆ? ಎಂದು ಸಚಿವ ಆರ್ ಅಶೋಕ್ ಕೇಳಿದ್ದಾರೆ. ಕೆ.ಎಸ್.ನರಸಿಂಹಸ್ವಾಮಿರವರ ಭಾರತೀಯತೆ ಕವನವನ್ನ ಸೇರಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರಾದ ನಿಟ್ಟೂರು ಶ್ರೀನಿವಾಸರಾಯರ ಪಾಠ ಮರು ಸೇರ್ಪಡೆ ಮಾಡಿದ್ದೇವೆ. ಚೆನ್ನಾಭೈರಾದೇವಿ ಕನ್ನಡ ರಾಣಿಯ ಬಗ್ಗೆ ಪಠ್ಯ ಸೇರ್ಪಡೆ. ಏಣಗಿ ಬಾಳಪ್ಪನವರ ಜೀವನ ಪರಿಚಯವನ್ನ ಮರು ಮರು ಸೇರ್ಪಡೆ. ವಿವೇಕಾನಂದರ ಜನ್ಮದಿನದ ಕುರಿತ ಪಠ್ಯ ಸೇರ್ಪಡೆ ಮಾಡಿದ್ದೇವೆ ಎಂದರು. ಎಸ್.ಎಲ್.ಭೈರಪ್ಪ ಬರೆದ ಯಾವುದೇ ಪಠ್ಯ ಪುಸ್ತಕ ಇರಲಿಲ್ಲ. 9ನೇ ತರಗತಿಯ ಪಠ್ಯದಲ್ಲಿ ನಾನು ಕಂಡಂತೆ ಬಿಜಿಎಲ್ ಸ್ವಾಮಿ ಎಂಬ ಬರಹವನ್ನ ಸೇರಿಸಿದ್ದೇವೆ. ಸನಾತನ ಧರ್ಮದ ಪಾಠವನ್ನ 8ನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಿದ್ದೇವೆ. ಮಂಜೇಶ್ವರ್ ಗೋವಿಂದ ಪೈ ಬರಹ ಮರು ಸೇರ್ಪಡೆ ಮಾಡಿದ್ದೇವೆ. ಪಂಜೆ ಮಂಗೇಶರಾಯರ ಸೀಗಡಿ ಯಾಕೆ ಒಣಗಲಿಲ್ಲ ಪಠ್ಯ ಸೇರ್ಪಡೆಯಾಗಿದೆ. ಬರಗೂರು ಸಮಿತಿಯವರು ಮೊಘಲರು, ದೆಹಲಿ ಸುಲ್ತಾನರ…