Author: admin

ಕೊರಟಗೆರೆ: ಸರ್ಕಾರದಿಂದ ಶಾಲಾ ಕಾಲೇಜುಗಳ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗಲೆಂದು ಸ್ಯಾನಿಟರಿ ಪ್ಯಾಡ್ ಗಳ ಉಚಿತ ವಿತರಣೆ ಮಾಡಲಾಗಿದ್ದರೆ, ಇತ್ತ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿಕೆ ಮಾಡದೇ ಗೋಡಾನ್ ನಲ್ಲಿ ಕೊಳೆಯಲು ಹಾಕಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕೊರಟಗೆರೆ ತಾಲೂಕಿನ ವೈದ್ಯಾಧಿಕಾರಿ ವಿಜಯ್ ಕುಮಾರ್ ಅವರ ನಿರ್ಲಕ್ಷ್ಯದಿಂದಾಗಿ ಬಡ ಹೆಣ್ಣುಮಕ್ಕಳಿಗೆ ಸೇರಬೇಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳು ಆಸ್ಪತ್ರೆ ವಠಾರದಲ್ಲಿರುವ ಗೋಡಾನ್ ನಲ್ಲಿ ಕೊಳೆಯುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ, ಬಡ ಹೆಣ್ಣು ಮಕ್ಕಳಿಗೆ ಈ ಕೊಡುಗೆ ನೀಡಿದೆ. ಆದರೆ, ಇದು ಫಲಾನುಭವಿಗಳಿಗೆ ದೊರಕದೇ ಈ ರೀತಿಯಾಗಿ ಗೋಡಾನ್ ನಲ್ಲಿ ಕೊಳೆಯುತ್ತಿರುವುದು ದುರದೃಷ್ಟಕರವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ತಕ್ಷಣವೇ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಪಾಳು ಬಿದ್ದಿರುವ ಸ್ಥಿತಿಯಲ್ಲಿರುವ ಗೋಡಾನ್ ನಲ್ಲಿ ಸ್ಯಾನಿಟರಿ ಪ್ಯಾಡ್ ಗಳು ಕಂಡು ಬಂದಿದ್ದು,…

Read More

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಬೇರೆ ನಗರಗಳಲ್ಲೂ ಸಹ 100 ರೂ.ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಚಂಡಮಾರುತದಿಂದ ಅಕ್ಕಪಕ್ಕದ ರಾಜ್ಯಗಳಲ್ಲಿ ಟೊಮೆಟೊ ಬೆಳೆಗೆ ಭಾರಿ ಹಾನಿಯಾಗಿದ್ದು, ಬೆಲೆ ಗಗನಕ್ಕೇರಿದೆ. ಚಂಡಮಾರುತದ ಜತೆಗೆ ಬಿರುಗಾಳಿ ಸಹಿತ ಮಳೆಯಿಂದಾಗಿ ಬೆಳೆ ಹಾನಿಯಾಗಲು ಪ್ರಮುಖ ಕಾರಣವಾಗಿದೆ. ಮಾರುಕಟ್ಟೆಗೆ ಟೊಮೆಟೊ ಅತಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು, ಇದರಿಂದಾಗಿ ಬೆಲೆ ಗಗನಕ್ಕೇರಿದೆ.ಟೊಮೆಟೊ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಬೆಂಗಳೂರು: ಮೇ 15ರಂದು ಡಿ.ಕೆ. ಶಿವಕುಮಾರ್ ರವರ 60ನೇ ವರ್ಷದ ಹುಟ್ಟುಹಬ್ಬವಾಗಿತ್ತು.ಹುಟ್ಟು ಹಬ್ಬ ಪ್ರಯುಕ್ತ ಅದೇ ದಿನ ಸಂಜೆ ಸಣ್ಣ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿದ್ದರು ಅದರಲ್ಲಿ ಪ್ರಿಯಾಂಕಾ ಗಾಂಧಿ ಸಹ ಭಾಗಿಯಾಗಿದ್ದರು. ಅಲ್ಲಿ ನಡೆದ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ಪ್ರಸಂಗವನ್ನು ರಾಜ್ಯ ಬಿಜೆಪಿ ಟೀಕಿಸಿದೆ. ಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ವಿಚಾರವಾಗಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.ಬಿಜೆಪಿಯುವರು ಡಿಕೆ ಶಿವಕುಮಾರ್ ಅವರನ್ನು ಹರಕೆಯ ಕುರಿಗೆ ಹೋಲಿಸಿದ್ದಾರೆ ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿ ಸ್ಧಾನದಲ್ಲಿ ಇಡುತ್ತಾರೆ ಎಂದಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿಕೆಶಿ ಅವರ ಹುಟ್ಟುಹಬ್ಬದ ಕೇಕ್ ತಿನ್ನಿಸುವಷ್ಟೂ ಪ್ರಿಯಾಂಕಾ ಗಾಂಧಿಗೆ ಸೌಜನ್ಯವಿಲ್ಲ, ಬೆರೊಬ್ಬ ವ್ಯಕ್ಕಿಯ ಕೈಯಲ್ಲಿ ಕೇಕ್ ತಿನ್ನಿಸುವ ಪ್ರಮೇಯವೇನಿತ್ತು? ಎಂದು ಪ್ರಶ್ನಿಸಿದ್ದಾರೆ. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಮುಯದಲ್ಲಿ ನಕಲಿ ಗಾಂಧಿ ವಂಶದವರು ಡಿಕೆ ಶಿವಕುಮಾರ್ ಅವರನ್ನು…

Read More

ತಿಪಟೂರು:  ನಗರದ ಗುರುಕುಲ್ ನಂದ್ ಆಶ್ರಮದಲ್ಲಿ ಮೇ 20 ರಂದು ಜಿಲ್ಲಾ ಮಟ್ಟದ ಮೂರನೇ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಮ್ಮೇಳನಾಧ್ಯಕ್ಷೆ ಡಾ.ಲೀಲಾ ಸಂಪಿಗೆ ಅವರನ್ನು ತಿಪಟೂರು ಗ್ರಾಮದೇವತೆ ಕೆಂಪಮ್ಮ ದೇವಾಲಯದಿಂದ, ನಗರದ ಪ್ರಮುಖ ರಸ್ತೆಯಲ್ಲಿ ನಂದಿದ್ವಜ ಮಂಗಳವಾದ್ಯ ಜಾನಪದ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ಮಹಿಳಾ ಸಾಹಿತ್ಯ ಸಮ್ಮೇಳನ ವೇದಿಕೆಗೆ ತರಲಾಗುವುದು. ಬಳಿಕ  ನಾಡಿನ ಹಿರಿಯ ಸಾಹಿತಿ ನಾಡೋಜ ಕಮಲ ಹಂಪನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.  ಕೇಂದ್ರ ಸಾಹಿತ್ಯ ಪರಿಷತ್  ಅಧ್ಯಕ್ಷ ಮಹೇಶ್ ಜೋಶಿ ಕಲ್ಪ ಜೋತಿ ಸಣ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿಸುಧಾ ನರಸಿಂಹರಾಜು,  ಕಿರುತೆರೆ ನಟಿ ಸುನಿತಾ ರಾವ್ ವೈ .ವಿ., ನಾರಾಯಣಸ್ವಾಮಿ,  ಎಂಎಲ್ಸಿ ಎಂ ಚಿದಾನಂದಗೌಡ ಭಾಗವಹಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಸಮಾಜಸೇವೆ ಶಿಕ್ಷಣ ಕನ್ನಡ ಸೇವೆ…

Read More

ಎರಡು ವರ್ಷದ ನಂತರ ಪೂರ್ಣ ಪ್ರಮಾಣದ ಶಾಲೆ ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ವಿನೂತನವಾಗಿ ಕಲಿಕಾ ಚೇತರಿಕೆ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಎಂಪ್ರೆಸ್ ಶಾಲೆಯಲ್ಲಿ ನಡೆದ ಕಲಿಕಾ ಚೇತರಿಕೆ ಮತ್ತು ಶಾಲಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದ ಮಕ್ಕಳು ಸ್ಪರ್ಧಾತ್ಮಕವಾಗಿರುವ ಈ ಕಾಲದಲ್ಲಿ ಮೂಲಭೂತ ಶಿಕ್ಷಣದಿಂದ ವಂಚಿತವಾಗಬಾರದು, ಎರಡು ವರ್ಷದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ, ಇಂತಹ ಮಕ್ಕಳಿಗೆ ವಿಶೇಷ ಪಠ್ಯ ಕ್ರಮದ ಮೂಲಕ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಕಲಿಕಾ ಚೇತರಿಕೆ ಉದ್ದೇಶವಾಗಿದೆ ಎಂದರು. ನಮ್ಮ ರಾಜ್ಯದ ಭವಿಷ್ಯಕ್ಕೆ ಅಡಿಪಾಯ ಕಲಿಕಾಚೇತರಿಕೆಯಾಗಿದ್ದು, ಶಿಕ್ಷಣಕ್ಕೆ ಅನುದಾನ ನೀಡಿದರೆ ಸಾಲದು, ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಧ್ಯೇಯ ಹೊಂದಲಾಗಿದೆ, ಶಿಕ್ಷಕರ ನೇಮಕ ಮತ್ತು ಕೊಠಡಿ ನಿರ್ಮಾಣದಿಂದ ಎಲ್ಲವು ಆಗುವುದಿಲ್ಲ, ಜ್ಞಾನದ ಶತಮಾನದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕಿರುವುದು ಸರ್ಕಾರದ ಬದ್ಧತೆಯಾಗಬೇಕಿದೆ ಎಂದರು. 21ನೇ ಶತಮಾನದಲ್ಲಿ ಜ್ಞಾನಕ್ಕೆ ಬೆಲೆ ಇದೆ, ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ, ಪ್ರಪಂಚದಲ್ಲಿ ಇಂದು ಬೆಂಗಳೂರು…

Read More

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28ರಂದು ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ.ಗೋವಿಂದು ಅವರು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಸಾ.ರಾ.ಗೋವಿಂದು ಅಧ್ಯಕ್ಷ ಸ್ಥಾನಕ್ಕೆ ಸ್ರ್ಪಧಿಸಿ ನಾಮಪತ್ರ ಸಲ್ಲಿಸಿದ್ದರೆ, ಅವರ ತಂಡದಲ್ಲಿರುವ ಚಿತ್ರಲೋಕ ವೀರೇಶ್ ನಿರ್ಮಾಪಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕರಿಸುಬ್ಬು (ವಿ.ಸುಬ್ರಮಣಿ)ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ವಿತರಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಪಿ.ಎಸ್.ಜ್ಞಾನೇಶ್ವರ ಐತಾಳ್, ಪ್ರದರ್ಶಕರ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಪಿ.ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕೆ.ಸಿ.ಎನ್. ಕುಮಾರ್ (ಎಂ.ಎನ್.ಕುಮಾರ್) ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ, ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎಲï.ಸಿ.ಕುಶಾಲ್ ಹಾಗೂ ಗೌರವ ಖಜಾÁಂಚಿ ಸ್ಥಾನಕ್ಕೆ ಬಿ.ಕೆ.ಜಯಸಿಂಹ ಮುಸರಿ ನಾಮಪತ್ರ ಸಲ್ಲಿಸಿದ್ದಾರೆ. ಮೇ 28ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ ಎಂದು ಬಿಜೆಪಿ ಪ್ರಶ್ನಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವಾಗ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು, ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್ ಜೋಡೋ ಎಂದು ಹೊರಟಿದೆ ಎಂದು ವ್ಯಂಗ್ಯವಾಡಿದೆ. ಎಷ್ಟೊಂದು ನಾಟಕ ಮಾಡುವಿರಿ?:…

Read More

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಡೇಂಘಿ, ಮಲೇರಿಯಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡೆಂಗ್ಯು ಡೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ 331 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಡೆಂಗ್ಯು ಡೇ ಆಚರಣೆ ಮಾಡಲಾಗುತ್ತಿದೆ. 98 ಸಾವಿರ ಮನೆಗಳ ಸಮೀಕ್ಷೆ ಮಾಡಲಾಗಿದೆ ಎಂದರು.ಟೊಮೊಟೊ ಜ್ವರ ಸರ್ವೆಲೆನ್ಸಿ ಸಕ್ರಿಯವಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಈ ವರೆಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂದು ಹೇಳಿದರು. ಜೂನ್ ಅಂತ್ಯದ ವೇಳೆಗೆ ಸಮವಸ್ತ್ರ ವಿತರಣೆ: ಬಿಬಿಎಂಪಿ ವ್ಯಾಪ್ತಿಯ 163 ಶಾಲೆಗಳಿದ್ದು, 23 ಸಾವಿರ ವಿದ್ಯಾರ್ಥಿಗಳಿದ್ದಾರೆ. ಜೂನ್ ಅಂತ್ಯದ ವೇಳೆಗೆ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರವನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.ರಸ್ತೆಗುಂಡಿ ಸಮಸ್ಯೆ ನಿವಾರಣೆ: ಬೆಂಗಳೂರಿಗೆ ಮಾರಕವಾಗಿರುವ ರಸ್ತೆಗುಂಡಿ ಸಮಸ್ಯೆ ನಿವಾರಣೆಗೆ ಸಮಾರೋಪದಿಯಲ್ಲಿ ಕಾರ್ಯೋನ್ಮುಖವಾಗಿದ್ದು, ಈಗಾಗಲೆ 9500 ಗುಂಡಿಗಳ ಸಮೀಕ್ಷೆ ಮಾಡಲಾಗಿದೆ. ಮಳೆ ನಿಂತ ಕೂಡಲೇ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಲಿದೆ…

Read More

ಉತ್ತರ ಕೊರಿಯಾದಲ್ಲಿ ಕೋವಿಡ್ ಅಬ್ಬರಿಸುತ್ತಿದ್ದು, ಸೋಮವಾರ ಎಂಟು ಹೊಸ ಸಾವುಗಳು ಮತ್ತು 392,920 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಏಪ್ರಿಲ್ ಅಂತ್ಯದಿಂದ ಜ್ವರದ ತ್ವರಿತ ಹರಡುವಿಕೆಯಿಂದ ಒಟ್ಟು 1.2 ದಶಲಕ್ಷಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಪ್ರಸ್ತುತ 564,860 ಜನ ಸಕ್ರಿಯ ಪ್ರಕರಣಗಳಿಗೆ ಸಿಲುಕಿದ್ದಾರೆ. ಭಾನುವಾರ ಸಂಜೆ 6 ರಿಂದ 24 ಗಂಟೆಗಳಲ್ಲಿ ಎಂಟು ಹೊಸ ಸಾವುಗಳು ವರದಿಯಾಗಿವೆ. ಈ ಮೂಲಕ ಸಾವಿನ ಸಂಖ್ಯೆ 50 ದಾಟಿದೆ. ರಾಜಧಾನಿ ಪಯೋಂಗ್ಯಾಂಗ್ ನಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ನಾನಾ ರೀತಿಯ ಕಸರತ್ತು ನಡೆಸಲಾಗುತ್ತಿದೆ. ಔಷಧಿ ವಿತರಣೆಯಲ್ಲಿನ ವಿಳಂಬಕ್ಕಾಗಿ ನಾಯಕ ಕಿಮ್ ಜಾಂಗ್ ಉನ್ ಅಧಿಕಾರಿಗಳನ್ನು ದಂಡಿಸಿದ್ದಾರೆ. ಅಮೆರಿಕಾ ಬೆಂಬಲಿತ ಲಸಿಕೆ ಪಡೆಯದೆ 26 ದಶಲಕ್ಷ ಜನಸಂಖ್ಯೆ ಹೊಂದಿರುವ ಉತ್ತರ ಕೋರಿಯಾ ಹಿಂದಡಿ ಇಟ್ಟಿತ್ತು. ದೇಶದಲ್ಲಿ ಆರೋಗ್ಯ ಸೌಲಭ್ಯಗಳು ದುರ್ಬಲವಾಗಿರುವುದರಿಂದ ಕೋವಿಡ್ ಸಂಕಷ್ಟ ಗಂಭೀರ ಪರಿಣಾಮ ಬೀರುವ ಆತಂಕ ಸೃಷ್ಟಿಯಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ತುಮಕೂರು: ವಿದ್ಯುತ್ ಖಾಸಗೀಕರಣ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನೂರಾರು ರೈತರು. ಟೌನ್ ಹಾಲ್ ವೃತ್ತದಿಂದ ಬೆಸ್ಕಾಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಹರಿಸದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಖಾಸಗೀಕರಣದಿಂದ ವಿದ್ಯುತ್ ಗುತ್ತಿಗೆದಾರರು ಅತಂತ್ರಕ್ಕೆ ಒಳಗಾಗುವ ಭೀತಿ ಸೃಷ್ಟಿಯಾಗಿದೆ. ಅನುಮತಿ ಪಡೆದ ಕರ್ನಾಟಕ ವಿದ್ಯುತ್ ಗುತ್ತಿಗೆದಾರರ ಸಂಘ ಪ್ರತಿಭಟನೆಯಲ್ಲಿ ಭಾಗಿಯಾಗಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More