Subscribe to Updates
Get the latest creative news from FooBar about art, design and business.
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
Author: admin
ಬಾಗಲಕೋಟೆ: ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದವ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಶಿರಾ ತಾಲ್ಲೂಕಿನ ಚನ್ನನಕುಂಟೆ ಬಳಿ ಹಳ್ಳ ದಾಟುತ್ತಿದ್ದ ಶಿಕ್ಷಕ ಆರೀಫ್ ವುಲ್ಲಾ (55) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ದಾವೂದ್ ಪಾಳ್ಯ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆ ಮುಗಿಸಿಕೊಂಡು ಶಿರಾಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಿರಾದ ದೊಡ್ಡ ಕೆರೆಯ ಕೋಡಿ ನೀರು ಚನ್ನನಕುಂಟೆ ಹಳ್ಳದ ಮೂಲಕ ಹರಿದು ಹೋಗುತ್ತಿದ್ದು, ಅದನ್ನು ದಾಟಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ಅಂಗನವಾಡಿ ಕಾರ್ಯಕರ್ತೆಯ ಕಾರ್ಯನಿರ್ವಹಣೆಯ ಬಗ್ಗೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ಐ ಡಿ ಹಳ್ಳಿ ಹೋಬಳಿಯ ಹೊಸ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯು ಮಕ್ಕಳ ಆಹಾರ ಸಾಮಗ್ರಿಗಳನ್ನು ಕೇಳಲು ಹೋದಾಗ ಉಡಾಫೆ ಉತ್ತರಕೊಡುತ್ತಿದ್ದು, ಗ್ರಾಮಸ್ಥರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಪೋಷಕರಾದ ನಾಗಮಣಿ ಎಂಬವರು ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ, ಮೊಟ್ಟೆಯೂ ಕೊಡುತ್ತಿಲ್ಲ ಎಂದು ಸಾವಿತ್ರಮ್ಮ ಎಂಬವರು ಆರೋಪಿಸಿದರು. ಅಂಗನವಾಡಿ ಕಾರ್ಯಕರ್ತೆಯ ಪತಿ ಪೋಷಕರ ಮನೆ ಮುಂದೆ ಹೋಗಿ ಗಲಾಟೆ ಮಾಡುತ್ತಿದ್ದಾರೆ. ಅಕ್ಷರ ಕಲಿಸಬೇಕಾದ ಶಿಕ್ಷಕಿ ಏಕವಚನದಲ್ಲಿ ಬೈಯ್ಯುತ್ತಾರೆ. ಮುಗ್ದ ಜನಗಳ ಬಳಿ ದುರಹಂಕಾರದಿಂದ ಮಾತನಾಡುತ್ತಾರೆ. 3 ದಿನಗಳಿಂದ ಅನಾವಶ್ಯಕವಾಗಿ ಅಂಗನವಾಡಿಯ ಬಾಗಿಲು ತೆರೆದಿಲ್ಲ ಎಂದು ಗ್ರಾಮಸ್ಥರು ಆರೋಪಗಳ ಸುರಿಮಳೆ ಸುರಿಸಿದ್ದಾರೆ. ಈ ಭಾಗದ ಇಲಾಖೆಯ ಸಂಬಂಧಪಟ್ಟ ಮೇಲಧಿಕಾರಿಗಳು ಗಡಿ ಭಾಗಗಳಿಗೆ ಹೋಗಿ ಕುಂದುಕೊರತೆ ಸಭೆಗಳನ್ನು ನಡೆಸಿ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಮ್ಮ ಊರಲ್ಲಿ ಈ ಕಾರ್ಯಕರ್ತೆ ಕಾರ್ಯನಿರ್ವಹಿಸುವುದು ಬೇಡ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ: ಅಬಿದ್…
ತುಮಕೂರು: ಮಳೆ ಅವಾಂತರದಿಂದಾಗಿ ವಿದ್ಯುತ್ ಶಾಕ್ ಹೊಡೆದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರನ್ನು ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, 6 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು. ಸರ್ಕಾರದಿಂದ 5 ಲಕ್ಷ ಹಾಗೂ ಮಹಾನಗರ ಪಾಲಿಕೆಯಿಂದ 1 ಲಕ್ಷ ಪರಿಹಾರ ನೀಡಲಾಯಿತು. ಝೀರೋ ಟ್ರಾಫಿಕ್ ನಲ್ಲಿ ಮಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ ಗೃಹಸಚಿವರು. 20 ನಿಮಿಷಗಳ ಕಾಲ ಮಳೆ ಹಾನಿ ವೀಕ್ಷಿಸಿ ಬಳಿಕ ತೆರಳಿದರು. ಗೃಹಸಚಿವರ ಭೇಟಿ ಹಿನ್ನೆಲೆಯಲ್ಲಿ ಅರ್ಧಗಂಟೆಗೂ ಹೆಚ್ಚುಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಹಾನಗರ ಪಾಲಿಕೆ, ಚರ್ಚ್ ಸರ್ಕಲ್, ಕೋಟೆ ಆಂಜನೇಯ ದೇವಾಲಯ ಮುಂಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜಡಿ ಮಳೆಯಲ್ಲಿ ಸಿಲುಕಿದ ಪ್ರಯಾಣಿಕರು ಹಿಡಿಶಾಪ ಹಾಕಿರುವುದು ಕಂಡು ಬಂತು. ತುಮಕೂರಿನ ಎಸ್ ಮಾಲ್, ಅಮಾನಿಕೆರೆ ಹಾಗೂ ಕೋತಿತೋಪು ಬಳಿಯಿರುವ ಮನೆಗಳಿಗೆ ಸಚಿವರು ಭೇಟಿ ನೀಡಿದರು. ಗೃಹ ಸಚಿವರ ಜೊತೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಶಾಸಕ ಜ್ಯೋತಿ ಗಣೇಶ್, ಹಾಗೂ…
ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾದವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ನಂದಿ ಧ್ವಜ,ವೀರಗಾಸೆ ಕಲಾ ಪ್ರದರ್ಶನದ ಜೊತೆಗೆ,ಸಾವಿರಾರು ಸಂಖ್ಯೆಯಲ್ಲಿದ್ದ ಲಿಂಗಾಯಿತ,ವೀರಶೈವ ಸಮುದಾಯದ ಮುಖಂಡರುಗಳು ನಗರದ ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಪ್ರತಿಭಟನಾನಿರತ ವೀರಶೈವ,ಲಿಂಗಾಯಿತ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕತೊಟ್ಲುಕೆರೆಯ ಶ್ರೀಅಟವಿ ಶಿವಲಿಂಗಸ್ವಾಮೀಜಿ,ಗೊಲ್ಲಹಳ್ಳಿಮಠದ ಶ್ರೀವೀಭವ ವಿದ್ಯಾಶಂಕರ ಸ್ವಾಮೀಜಿ, ಮಾಕನಹಳ್ಳಿ ಮಠದ ಶ್ರೀಗಂಗಾಧರ ಸ್ವಾಮೀಜಿ, ಬೆಳ್ಳಾವಿಯ ಶ್ರೀಕಾರದೇಶ್ವರ ಮಠದ ಶ್ರೀಕಾರದ ವೀರಬಸವಸ್ವಾಮೀಜಿ, ಶ್ರೀರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಹರಳೂರು ಮಠದ ಶ್ರೀ ಚನ್ನಬಸವಸ್ವಾಮೀಜಿಗಳು, ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ವೀರಶೈವ, ಲಿಂಗಾಯಿತರು ಸೇರಿದ್ದಾರೆ.ಆದರೆ ಕೇಂದ್ರದ ಪಟ್ಟಿಯಲ್ಲಿ ಇಲ್ಲ.ಇದರಿಂದ ಯುಪಿಎಸ್ಸಿ,ಸೇರಿದಂತೆ ಕೇಂದ್ರ ಸರಕಾರದ ಉದ್ಯೋಗಗಳಲ್ಲಿ ವೀರಶೈವ ಲಿಂಗಾಯಿತ…
ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದ ಗುಡುಗು, ಸಿಡಿಲಿನೊಂದಿಗೆ ಬಿಟ್ಟು ಬಿಡದೆ ಬಿರುಸಿನ ಮಳೆಯಾಗುತ್ತಿದೆ. ಚರಂಡಿಗಳು ಉಕ್ಕಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಜನ, ವಾಹನ ಸಂಚಾರಕ್ಕೆ ಅಡಚಣೆ ಆಗಿದೆ. ಕರಿ ಮೋಡಗಳು ದಟ್ಟೈಸಿದ್ದು, ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಬಿಸಿಲನಾಡು ವಿಜಯಪುರದಲ್ಲಿ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಶಾಲೆ, ಕಾಲೇಜು, ಕಚೇರಿಗೆ ತೆರಳಲು ಮಕ್ಕಳು, ಶಿಕ್ಷಕರು, ನೌಕರರು ಪರದಾಡಿದರು. ಪಂಚಮಿ ಹಬ್ಬದ ಪ್ರಯುಕ್ತ ನಾಗರಕಟ್ಟೆಗೆ ಹಾಲೆರೆದು ಪೂಜೆ ಸಲ್ಲಿಸಲು ಮಹಿಳೆಯರು ತೆರಳಲಾಗದಷ್ಟು ಮಳೆ ಸುರಿಯುತ್ತಿದೆ. ಹೀಗಾಗಿ ಜನರು ಮನೆಯಲ್ಲೇ ನಾಗರ ಪಂಚಮಿ ಆಚರಿಸುತ್ತಿದ್ದಾರೆ. ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಾವಣಗೆರೆ: ಮುಂಬರುವ ದಿನಗಳಲ್ಲಿ ಕರಾವಳಿಯಲ್ಲಿ ಕೊಲೆಯಾಗಿರುವ ಮಸೂದ್ ಹಾಗೂ ಫಾಜಿಲ್ ಮನೆಗೂ ಭೇಟಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯತೆಯೇ ನಮ್ಮ ನಿಲುವಾಗಿದ್ದು, ಯಾರಿಗೂ ಭೇದ-ಭಾವ ಮಾಡುವ ಪ್ರಶ್ನೆಯೇ ಇಲ್ಲ. ಮುಂಬರುವ ದಿನಗಳಲ್ಲಿ ಕರಾವಳಿಯಲ್ಲಿ ಕೊಲೆಯಾಗಿರುವ ಮಸೂದ್ ಹಾಗೂ ಫಾಜಿಲ್ ಮನೆಗೂ ಭೇಟಿ ನೀಡುವುದಾಗಿ ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆಗಳು ಕಡಿಮೆಯಾಗಿದ್ದು, ನಾವು ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವುದರಿಂದ ಎಲ್ಲರಿಗೂ ಕೂಡ ವಿಶ್ವಾಸ ಬಂದಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನ ತಿಪ್ಪೂರು ಬಳಿ ನಡೆದಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ ಮಂಗಳೂರಿಗೆ ತೆರಳಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಹೆಚ್.ಡಿ.ಕೆ. ಅವರ ಬೆಂಗಾವಲು ವಾಹನ ಕುಣಿಗಲ್ ಬಳಿ ಅಪಘಾತಕ್ಕೀಡಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಎಸ್ಕಾರ್ಟ್ ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸ್ ಸಿಬ್ಬಂದಿ ಮಹೇಶ್, ಆನಂದ್, ಹರೀಶ್ ಎಂಬುವವರು ಗಾಯಗೊಂಡಿದ್ದು, ಗಾಯಾಳು ಸಿಬ್ಬಂದಿಗಳನ್ನು ಆದಿಚುಂಚನಗಿರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಊರುಕೇರಿಯ ಬೀದಿಗಳಲ್ಲಿ ಮನೆ ಬಾಗಿಲುಗಳಿಗೆ ಕತ್ತೆಯನ್ನು ಕರೆತಂದು ಹಸಿಬಿಸಿ ಕತ್ತೆ ಹಾಲನ್ನು ಎಳೆಮಕ್ಕಳಿಗೆ ಕರೆದು ಕೊಡುವ ಕತ್ತೆ ಹಾಲಿನ ವಹಿವಾಟು ಇತ್ತೀಚಿಗೆ ಜನಪ್ರಿಯವಾಗುತ್ತಿದೆ. ಆಂಧ್ರಪ್ರದೇಶದ ಅದಿಲಾಬಾದ್ ಜಿಲ್ಲೆಯ ಸೈಬು ಎಂಬ ಯುವಕ ಹೇಳುವ ಪ್ರಕಾರ ಒಂದು ಲೀಟರ್ ಕತ್ತೆ ಹಾಲಿನ ಬೆಲೆ ₹.10000. ಇವನ ಕಡೆಯ ನಾಲ್ಕಾರು ಕುಟುಂಬಗಳು ಸುಮಾರು ಇಪ್ಪತ್ತು ಕರೇವು ಕತ್ತೆಗಳ ಮಂದೆಯನ್ನು ದಟ್ಟಿದಾವಣಿ ಹಾಕಿಕೊಂಡು, ಕತ್ತೆಗಳ ಮೇಲೆಯೇ ತಮ್ಮ ಸಂಸಾರದ ಅಗತ್ಯ ಗಂತೆಗಬಾಳ ಹೇರುಹಾಕಿಕೊಂಡು ಬೆಂಗಳೂರಿಗೆ ಬಂದು ತಾತ್ಕಾಲಿಕವಾಗಿ ವಸ್ತಿ ಮಾಡಿಕೊಂಡಿದ್ದಾರೆ. ಖಾಲಿ ನಿವೇಶನ ವಿಸ್ತಾರದಲ್ಲಿ ಬಿಡದಿ ಬಿಟ್ಟಿರುವ ಕತ್ತೆಗಳಿಗೆ ಹಾಲಿನ ವಹಿವಾಟಿನಿಂದ ಗಳಿಸುವ ಹಣದಿಂದಲೇ ಹುಲ್ಲು ಹುರುಳಿ ಇಂಡಿ ಹೊಟ್ಟು ಖರೀದಿಸಿ ಮೇಯಿಸುತ್ತಾರೆ. ನಾವು ಕತ್ತೆಹಾಲನ್ನು ಶೆಟ್ಟಿಹಾಲು ಎಂದು ಕರೆಯುತ್ತೇವೆ. ಕತ್ತೆ ಹಾಲು ಕುಡಿದವರಿಗೆ ಸ್ಯಾನೆ ಜೀರ್ಣಶಕ್ತಿ ಬರುತ್ತದೆಯಂತೆ. ನಮ್ಮೂರಿನಲ್ಲಿ ಸುಣ್ಣಕಲ್ಲು ಮಾರಾಟ ಮಾಡುತ್ತಿದ್ದ ಸುಗಾಲಿ(ಬಂಜಾರ)ಯರ ಕತ್ತೆಗಳಿಂದ ಹಾಲು ಹಿಂಡಿಸಿಕೊಂಡು, ನನಗೆ ನನ್ನ ಅಮ್ಮ ಮತ್ತು ಅಜ್ಜಿ ಸುಮಾರು ಒಂದು ತಿಂಗಳ ಕಾಲ ಎರಡೂಟೆ ಶೆಟ್ಟಿ…
ಮಧುಗಿರಿ: ಕೈಮರ ಮುಖ್ಯ ರಸ್ತೆಯಿಂದ ತೊಣಚಗೊಂಡನಹಳ್ಳಿ ಗ್ರಾಮದವರೆಗೆ ಹಳ್ಳ ಹರಿಯುತ್ತಿದ್ದು ರಸ್ತೆಯು ನೀರಿನಿಂದ ಮುಳುಗಿದೆ. ಮುಖ್ಯರಸ್ತೆಯಿಂದ ಓಡಾಡಲು ಸಂಚರಿಸಲು ಯತ್ನಿಸಿದ ಊರಿನ ಗ್ರಾಮಸ್ಥರ ವಾಹನಗಳು ಕೊಚ್ಚಿ ಹೋಗಿದ್ದು ಯಾವುದೇ ಪ್ರಾಣಪಾಯ ಇಲ್ಲದೆ ಪಾರಾಗಿದ್ದಾರೆ . ಸುಮಾರು 200 ಮೀಟರ್ ರಸ್ತೆ ಜಲಾವೃತಗೊಂಡಿದ್ದು, ಕೈಮರದಿಂದ ರಂಟವಾಳ ಮುಖ್ಯರಸ್ತೆಯಾಗಿದೂ ಆಂಧ್ರ ಗಡಿ ಹೋಗುವ ದಾರಿಯಾಗಿದ್ದು, ನಾಗೇನಹಳ್ಳಿ ಕೆರೆ ತುಂಬಿ ದೊಡ್ಡೇರಿ ಹೀರೇಕೆರೆ ತುಂಬಿ ಸುತ್ತಮುತ್ತಲಿನ ಕೆರೆಗಳು ತುಂಬಿ ಹಳ್ಳ ಹರಿಯುತ್ತಿವೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz