Subscribe to Updates
Get the latest creative news from FooBar about art, design and business.
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
Author: admin
ತುರುವೇಕೆರೆ: ತಾಲೂಕು ಪಟ್ಟಣದಲ್ಲಿರುವ ಬೆಮೆಲ್ ಕಾಂತರಾಜ್ ರವರ ಕಚೇರಿಯ ಆವರಣದಲ್ಲಿ ಭಾರತ ಸುವರ್ಣ ಸ್ವಾತಂತ್ರ ನಡಿಗೆ ಕಾಂಗ್ರೆಸ್ ಕಡೆಗೆ ಎಂಬ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನ ಬೆಮೆಲ್ ಕಾಂತರಾಜ್ ರವರು ವಹಿಸಿದ್ದರು. ಪೂರ್ವಭಾವಿ ಸಭೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಬ್ಲಾಕ್, ಮಾಯಸಂದ್ರ ಹೋಬಳಿ ದಬ್ಬೇಘಟ್ಟ ಹೋಬಳಿ ದಂಡಿನ ಶಿವರ ಹೋಬಳಿ ಹಾಗೂ ಕಸಬಾ ಹೋಬಳಿಯ ನೂರಾರು ಮುಖಂಡರು ಭಾಗವಹಿಸಿದ್ದರು ಮುಖಂಡರುಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುವರ್ಣ ಸ್ವಾತಂತ್ರ್ಯ ನಡಿಗೆ ಕಾಂಗ್ರೆಸ್ ಕಡೆಗೆ ಕಾಲ್ನಡಿಗೆ ರ್ಯಾಲಿಗೆ ಕರೆತರುವ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಶಕ್ತಾನುಸಾರ ಕಾರ್ಯಕರ್ತರುಗಳನ್ನು ಸ್ವಯಂ ಪ್ರೇರಿತವಾಗಿ ಕರೆತೇವೆ ಎಂದು ಒಪ್ಪಿಕೊಂಡರು ಈ ನಡಿಗೆಯ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿ ಪಟ್ಟಣದ ಗ್ರಾಮ ದೇವತೆ ಉಡಸಲಮ್ಮ ದೇವಿಯ ದೇವಾಲಯದವರೆಗೆ ಕಾಲ್ನಡಿಗೆಯಲ್ಲಿ ಸಾಗಲಾಗುವುದು ಮತ್ತು 75ನೇ ಸುವರ್ಣ ಸ್ವಾತಂತ್ರ ಸಂಭ್ರಮ ದ ನಡಿಗೆ ಕಾಂಗ್ರೆಸ್ ನ ಕಡೆಗೆ ಎಂಬ ಘೋಷಣೆಗಳೊಂದಿಗೆ ಸಾಗುವುದು ಎಂದು ನಿರ್ಧರಿಸಲಾಯಿತು. ಈ…
ಕೊಪ್ಪಳ: ಗಂಗಾವತಿ ತಾಲೂಕಿನ ಕಿಷ್ಕಿಂಧೆ ಭಾಗದ ಅಂಜನಾದ್ರಿ ಬೆಟ್ಟವೇ ಹನುಮಂತ ಹುಟ್ಟಿದ ಸ್ಥಳ. ಇದಕ್ಕೆ ರಾಮಾಯಣದಲ್ಲಿನ ಉಲ್ಲೇಖಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ದೇಶದಲ್ಲಿ ಸುಖಾ ಸುಮ್ಮನೇ ಆಂಜನೇಯನ ಜನ್ಮಸ್ಥಳದ ಕುರಿತು ವಿವಾದ ಸೃಷ್ಟಿಸಲಾಗುತ್ತಿದೆ. ಬೇರೆಯವರ ವಾದದಲ್ಲಿ ಹುರುಳಿಲ್ಲ. ಅವರ ವಾದಕ್ಕೆ ಪುರಾವೆಗಳಿಲ್ಲ. ನಮ್ಮಲ್ಲಿ ಅನೇಕ ಪುರಾವೆಗಳಿವೆ. ರಾಮಾಯಣದ ಕಿಷ್ಕಿಂಧ ಕಾಂಡದಲ್ಲಿ ಬರುವ ಬೆಟ್ಟದಲ್ಲಿ ಆಂಜನೇಯನ ಜನನವಾಯಿತೆಂದು ಸ್ಪಷ್ಟವಾಗಿದೆ ಎಂದು ವಾದ ಮಂಡಿಸಿದರು. ಬೆಟ್ಟಕ್ಕೆ ಸಾಕಷ್ಟು ಜನ ಯಾತ್ರಿಕರು ಬರುತ್ತಾರೆ. ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲಾಗುವುದು. ಪ್ರಸಾದ ನಿಲಯ, ಯಾತ್ರಿ ನಿವಾಸ, ಪಾರ್ಕಿಂಗ್ ಆಸ್ಪತ್ರೆ ಸೇರಿ ಇತರ ಕಾಮಗಾರಿ ನಡೆಸಲಾಗುವುದು. ಎರಡನೇ ಹಂತದಲ್ಲಿ ರೋಪ್ ವೇ ಮಾಡಲಾಗುವುದು. ಹಂಪಿ, ಮೈಸೂರು ಟೂರಿಸಂ ಸರ್ಕಿಟ್ ಮಾಡಲಾಗುತ್ತಿದೆ. ಅದರಲ್ಲಿ ಹಂಪಿ ಅಕ್ಕಪಕ್ಕದ ಪಾರಂಪರಿಕ ತಾಣಗಳನ್ನು ಒಳಗೊಂಡು ಅಂತಾರಾಷ್ಟ್ರೀಯ ಟೂರಿಸಂ ಸರ್ಕೀಟ್ ಮಾಡಲಾಗುವುದೆಂದು ತಿಳಿಸಿದರು. ಪ್ರವೀಣ್ ಹತ್ಯೆಯಿಂದ ಸಹಜವಾಗಿ ಹಿಂದು ಕಾರ್ಯಕರ್ತರು…
ಮಧುಗಿರಿ: ಸೋದೇನಹಳ್ಳಿ ಅಂಬೇಡ್ಕರ್ ವಸತಿ ಶಾಲೆ ಜಲದಿಗ್ಬಂಧನವಾದ ಪರಿಣಾಮ ಮೇಲಾಧಿಕಾರಿ ರವರ ಆದೇಶದಂತೆ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಅಂಬೇಡ್ಕರ್ ವಸತಿ ಶಾಲೆ ಶಾಲೆಯ ಸುತ್ತ ನೀರು ತುಂಬಿದ್ದು, ಚಂದ್ರಗಿರಿಯ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ ತಿಮ್ಮಯ್ಯನವರು ಭೇಟಿ ನೀಡಿ ಜೆಸಿಬಿ ಮುಖಾಂತರ ನೀರು ಹೊರಗಡೆ ಹಾಕಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಲದಿಗ್ಬಂಧನವಾದ ಹಿನ್ನೆಲೆಯಲ್ಲಿ ಪ್ರಾಂಶುಪಾಲ ರಾಜಶೇಖರ್ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಮೇಲಾಧಿಕಾರಿಗಳ ಸೂಚನೆಯಂತೆ ಶಾಲೆಗೆ ಮೂರು ದಿನ ರಜೆ ಘೋಷಿಸಿದ್ದಾರೆ. ತುಮಕೂರು ಜಿಲ್ಲೆಗೆ ಒಳಪಡುವ ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾಭ್ಯಾಸಕ್ಕಾಗಿ ಈ ಶಾಲೆಗೆ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಇಲ್ಲಿನ ವಿದ್ಯುತ್ ಕಂಬಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಜಾನಪದ ಸಾಹಿತ್ಯದ ಶೇಕಡಾ ತೊಂಬತ್ತು ಭಾಗ ರಚನೆ ಮಹಿಳೆಯರದ್ದೇ ಆಗಿದ್ದು, ಸಾಹಿತ್ಯದ ಸೃಜನಶೀಲತೆ, ಕ್ರಿಯಾಶೀಲತೆಗಳಿಗೆ ಸಾಕ್ಷಿಯಾಗಿವೆ ಎಂದು ಜೆ. ಸಿ. ಮಾಧುಸ್ವಾಮಿ ಹೇಳಿದರು. ತಿಪಟೂರಿನಲ್ಲಿ ನಡೆದ ತುಮಕೂರು ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಆಡಿ ಬಾ ನನ ಕಂದ ಅಂಗಾಲ ತೊಳೆದೇನು ತೆಂಗೀನ ಕಾಯಿ ತಿಳಿನೀರ ತಕ್ಕೊಂಡು ಬಂಗಾರದ ಮೋರೆ ತೊಳೆದೇನು. ಕಲ್ಲುಕೊಟ್ಟವ್ವಾಗೆ ಎಲ್ಲಾ ಭಾಗ್ಯವು ಬರಲಿ ಪಲ್ಲಕ್ಕಿ ಮೇಲೆ ಮಗ ಬರಲಿ/ ಆ ಮನೆಗೆ ಮಲ್ಲೀಗೆ ಮುಡಿವ ಸೊಸೆ ಬರಲಿ . ಇಂತಹ ಹಾಡುಗಬ್ಬಗಳು ಬುದ್ದಿವಂತ ಹೆಣ್ಣುಮಕ್ಕಳಿಂದ ಮಾತ್ರ ಹುಟ್ಟಲು ಸಾಧ್ಯ ದುರದೃಷ್ಟವಶಾತ್ ಹೆಣ್ಣುಮಕ್ಕಳಿಗೆ ಹೆಚ್ಚಿನ ಪ್ರಾತಿನಿಧ್ಯ, ಸಮಾನತೆ ವಿವಿಧ ಕಾರಣಗಳಿಂದಾಗಿ ದೊರೆಯಲೇ ಇಲ್ಲ. ಎಂದು ವಿಷಾದಿಸಿದರು. ಕಾಯಕಯೋಗಿ ಸಿದ್ದರಾಮನಿಗೆ ಆಶ್ರಯ, ಹಣಕಾಸಿನ ನೆರವು ನೀಡಿದವಳು ರಾಣಿ ಚಾಮಲಾದೇವಿ. ಆಕೆಯ ಹೆಸರೇ ನಮಗೆ ತಿಳಿದಿಲ್ಲ. ಶೌರ್ಯ, ಸಾಹಸ, ಸ್ವಾಮಿನಿಷ್ಠೆಗೆ ಹೆಸರಾದ ಸಂಗೊಳ್ಳಿ ರಾಯಣ್ಣನ ರಾಜಮಾತೆ ಕಿತ್ತೂರು ಚೆನ್ನಮ್ಮ ಅಜ್ಞಾತ ವಾಸದಲ್ಲಿದ್ದಾಳೆ. ಮಹಿಳೆಯರು…
ಸರಗೂರು: ಬಂಡಿಪುರ ರಾಷ್ಟ್ರೀಯ ಉದ್ಯಾನದ ಉದ್ಯಾನವನದ ಯಡಿಯಾಲ ಅರಣ್ಯ ವಲಯವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ ಹುಲಿ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಾದನೂರು ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ನಂಜನಗೂಡು ತಾಲೂಕಿನ ಹಾದನೂರು ವಡೆಯನಪುರ ಗ್ರಾಮದ ಜಡ್ಡೇಗೌಡರ ಮಗ ಪುಟ್ಟಸ್ವಾಮೇಗೌಡ (45) ಮೃತಪಟ್ಟವರಾಗಿದ್ದಾರೆ. ವಿವರ ಕಾಡಂಚಿನ ತಮ್ಮ ಜಮೀನಿನಲ್ಲಿ ಪುಟ್ಟಸ್ವಾಮಿ ಗೌಡ ದನಗಳನ್ನು ಮೇಯಿಸುತ್ತಿದ್ದರು ಈ ವೇಳೆ ಪೊದೆಯೊಳಗೆ ಅಡಗಿದ್ದ ಹುಲಿ, ಹಸುವೊಂದರ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಘಟನೆಯಿಂದ ಬೆದರಿದ್ದ ಇತರ ಜಾನುವಾರುಗಳು ಹೋಗಿವೆ. ಈ ನಡುವೆ ಹಸುವನ್ನು ರಕ್ಷಿಸಲು ಯತ್ನಿಸಿದ ರೈತನ ಮೇಲೆ ಎರಗಿದ ಹುಲಿ ಕತ್ತಿನ ಭಾಗಕ್ಕೆ ಕಚ್ಚಿ ಎಳೆದುಕೊಂಡು ಹೋಗಿದೆ. ಈ ವೇಳೆ ಸ್ಥಳೀಯರು ಕೂಗಾಡಿದ್ದು, ಈ ವೇಳೆ ಹುಲಿ ಓಡಿಹೋಗಿದೆ ಎನ್ನಲಾಗಿದೆ. ಈ ವೇಳೆ ಸಾರ್ವಜನಿಕರು ಮತ್ತು ರೈತರು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ರೈತರ ಪ್ರಾಣಕ್ಕೆ ಬೆಲೆಯೇ ಇಲ್ಲವೇ ಎಂದು ಸರ್ಕಾರದ ವಿರುದ್ಧ…
ಅಮೇರಿಕಾದ ಫ್ಲೋರಿಡಾದಲ್ಲಿರುವ ಸಾನ್ ಫರ್ಡ್ ನ ಶ್ರೀ ವಿದ್ಯಾ ಇಂಟರ್ನ್ಯಾಷನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸಾಯನ್ಸ್, ಇವರು ತಮ್ಮ ಎರಡನೇ ಘಟಿಕೋತ್ಸವ (30-7-2022) ದಂದು ತಮ್ಮ ಬೆಂಗಳೂರು ಶಾಖೆ, ಶ್ರೀವಿದ್ಯಾ ವಿಶ್ವ ಸಂಶೋಧನ ಪ್ರತಿಷ್ಠಾಪನಮ್ ಇವರ ಮೂಲಕ ಉಡುಪಿಯ ಪ್ರೊ.ವಿ.ಅರವಿಂದ ಹೆಬ್ಬಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದ್ದಾರೆ. ಬೆಂಗಳೂರಿನ ಜಯರಾಮ ಸೇವಾ ಮಂಡಳಿಯಲ್ಲಿ ಜರುಗಿದ ಈ ಸಮಾರಂಭ ದಲ್ಲಿ ಬೇಲಿ ಮಠದ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿ ಯವರು ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಧೀಶ ಎನ್.ಕುಮಾರ್ ಅವರು ಪದವಿ ಪ್ರದಾನ ಕಾರ್ಯಕ್ರಮ ನಿರ್ವಹಿಸಿದರು. ಕುಲಪತಿಗಳಾದ ಡಾ.ಜೆ.ಶ್ರೀನಿವಾಸ ಮೂರ್ತಿ ಮತ್ತು ಕುಲಸಚಿವರಾದ ಡಾ.ಎಸ್.ಆರ್.ನರಸಿಂಹ ಮೂರ್ತಿಯವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ವೇದ, ಜ್ಯೋತಿಷ್ಯ, ತಂತ್ರ, ಆಗಮ, ಸಂಗೀತ, ಸಂಗೀತ ಶಾಸ್ತ್ರ ಮತ್ತು ಭರತ ನಾಟ್ಯದಲ್ಲಿ ಅಪ್ರತಿಮ ಸಾಧನೆಗೈದ ಏಳು ವಿದ್ವಾಂಸರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಯಿತು. ಹಾಗೆಯೇ ಏಳು ಜನ ವಿದ್ವಾಂಸರಿಗೆ ಮಹೋಪಾದ್ಯಾಯ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು. ಡಾ.ರಾ.ಸ.ನಂದಕುಮಾರ್ ಅವರಿಗೆ ಸಂಗೀತ…
ಬೆಂಗಳೂರು: ಬಿಜೆಪಿ ಯುವ ಮುಖಂಡನ ಹತ್ಯೆ, ರಾಜ್ಯದಲ್ಲಿ ನಡೆದ ಸಾಲು ಸಾಲು ಹಿಂದೂ ಪರ ಸಂಘಟನೆ ಕಾರ್ಯಕರ್ತರ ಹತ್ಯೆಯ ಬೆನ್ನಲ್ಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಹಂತಕರ ಬಂಧನದ ಬಗ್ಗೆ ಸರಿಯಾದ ಮಾಹಿತಿನೀಡಿಲ್ಲ. ರಾಜ್ಯ ಸರ್ಕಾರ ತನ್ನ ಪೊಲೀಸ್ ಪಡೆಯ ಮೇಲೆಯೇ ವಿಶ್ವಾಸ ಕಳೆದುಕೊಂಡಿದೆ. ಕಾರ್ಯಕರ್ತರಿಗೆ ಉಡಾಫೆ ಉತ್ತರ ಕೊಡುತ್ತಿದ್ದಾರೆ. ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ರಾಜ್ಯವನ್ನು ಉತ್ತರಪ್ರದೇಶ ಮಾಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಸಿಎಂ ಬೊಮ್ಮಾಯಿ ಅವರೇ ರಾಜ್ಯವನ್ನು ಉತ್ತರಪ್ರದೇಶ ಮಾಡಿದ್ದೀರಾ. ಹಾಗಾಗಿ ನೀವು ಇಲ್ಲಿ ಯುಪಿ ಮಾಡೆಲ್ ತರಬಹುದು. ಯುಪಿಯಲ್ಲಿ ಯೋಗಿ ಬರುವುದಕ್ಕೂ ಮೊದಲು ಹೇಗಿತ್ತೋ ಹಾಗೆ ರಾಜ್ಯ ಮಾಡಿದ್ದೀರಾ ಹಾಗಾಗಿ ಯುಪಿ ಮಾಡೆಲ್ ತರಲು ಹೊರಟಿದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಳಗಾವಿ: ಇಲ್ಲಿನ ಕೋಟೆ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ಎದುರಿಗೆ ಸೋಮವಾರ ಬೈಕಿಗೆ ಉಸುಕು ತುಂಬಿದ ಲಾರಿ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಭರತೇಶ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ ಸಾಬಿಯಾ ಶಬ್ಬೀರ್ ಪಾಳೇಗಾರ (16) ಮೃತಪಟ್ಟವರು. ಬೈಕ್ ಓಡಿಸುತ್ತಿದ್ದ ಪಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಂದಿನಂತೆ, ಸೋಮವಾರ ಬೆಳಿಗ್ಗೆ ಕುಡ ಸಾಬಿಯಾ ಅವರನ್ನು ಕಾಲೇಜಿಗೆ ಬಿಡಲು ಅವರ ಪಾಲಕರು ಬೈಕ್ ಮೇಲೆ ಕರೆದುಕೊಂಡು ಹೊರಟಿದ್ದರು. ಕೋಟೆ ರಸ್ತೆಯಲ್ಲಿ ಹಿಂದಿನಿಂದ ಬಂದ ಉಸುಕಿನ ಲಾರಿ ಬೈಕಿಗೆ ಡಿಕ್ಕಿ ಹೊಡೆಯಿತು. ಡಿಕ್ಕಿ ರಭಸಕ್ಕೆ ಬೈಕ್ ಮಗುಚಿ, ಸಾಬಿಯಾ ಲಾರಿಯ ಚಕ್ರಕ್ಕೆ ಸಿಲುಕಿದರು. ಅವರ ತಲೆಯ ಮೇಲೆಯೇ ಲಾರಿ ಹರಿಯಿತು. ಇದರಿಂದ ಮಿದುಳಿನ ಭಾಗ ರಸ್ತೆಯಲ್ಲಿ ಚೆಲ್ಲಾಡಿತು. ಈ ದೃಶ್ಯ ಕಂಡು ಜನ ಬೆಚ್ಚಿಬಿದ್ದರು. ಬೈಕ್ ಓಡಿಸುತ್ತಿದ್ದವರು ರಸ್ತೆ ಬದಿಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಮಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಜತೆಯಲ್ಲಿದ್ದರು. ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಸರಕಾರವು ಕಾಟಾಚಾರಕ್ಕೆ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್.ಐ.ಎ. ವಹಿಸಿದೆ. ಈ ಪ್ರಕರಣವನ್ನು ಕಾಟಾಚಾರಕ್ಕೆ ತನಿಖೆ ನಡೆಸಬೇಡಿ. ಇದರಲ್ಲಿ ಸತ್ಯಾಂಶ ಏನು, ಇದರ ಹಿಂದಿರುವ ಎಂತಹ ದೊಡ್ಡ ಶಕ್ತಿಗಳೇ ಇರಲಿ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸರಕಾರವನ್ನು ಒತ್ತಾಯಿಸುವುದಾಗಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಎನ್ ಹೆಚ್ 4 ರ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಮುರುಗನ್ ಕ್ರೇನ್ ಸರ್ವಿಸ್ ಟೂರಿಸ್ಟ್ ನಲ್ಲಿ ನಡೆದ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯಕ್ರಮದಲ್ಲಿ ಮುರುಳಿ ಪಿ. ಅವರನ್ನು ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷರಾದ ಸುದೀಂದ್ರ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಪದಾಧಿಕಾರಿಗಳ ಆಯ್ಕೆ ಬಗ್ಗೆ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಸುದೀಂದ್ರ ಅವರು, ಸಂಘದ ಚಟುವಟಿಕೆಯಲ್ಲಿ ಎಲ್ಲರು ಕೈ ಜೋಡಿಸಬೇಕು. ಸಂಕಷ್ಟದಲ್ಲಿರುವವರಿಗೆ ಸಹಕರಿಸಬೇಕು. ವಾಹನ ಚಾಲನೆ ಸಂದರ್ಭದಲ್ಲಿ ಅತ್ಯಂತ ಎಚ್ಚರಿಕೆ ವಹಿಸುವು ದರೊಂದಿಗೆ ಸೂಕ್ತ ದಾಖಲಾತಿಗಳನ್ನು ಚಾಲಕರು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು. ನೂತನ ಅಧ್ಯಕ್ಷರಾದ ಮುರುಳಿ ಪಿ . ಹಾಗೂ ಪ್ರಧಾನ ಕಾರ್ಯದರ್ಶಿ ತಿಮ್ಮೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮಾತನಾಡಿ, ಕಾರು ಚಾಲಕರಿಗೆ ಕರ್ನಾಟಕದ ಯಾವ ಮೂಲೆಯಲ್ಲಿ ಆದರೂ ಏನೇ ಸಮಸ್ಯೆ ಗಳು ಇದ್ದಲ್ಲಿ ತಕ್ಷಣವೇ ನಾವು ಅವರಿಗೆ…