Author: admin

ಕುಣಿಗಲ್:  ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಪಿ.ಹೆಚ್.ಹಳ್ಳಿ ಗ್ರಾಮದ ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ  ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಹುಲಿಕಟ್ಟೆ ನೇತೃತ್ವದಲ್ಲಿ ನೂರಾರು ಮಂದಿ ರೈತರು ಆಗೂ ರೈತ ಮಹಿಳೆಯರು  ಬೀಸೆಗೌಡನದೊಡ್ಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು.  ಇದೇ ವೇಳೆ ಸ್ಥಳಕ್ಕೆ ಬಂದ ತಹಶೀಲ್ದಾರ ಮಹಾಭಲೇಶ್ವರ್,ಅರಣ್ಯ ಇಲಾಖೆಯ ಅಧಿಕಾರಿ ಮಹೇಶ್ ಆಗೂ ಪಿಡಬ್ಲೂಡಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗುರುಸಿದ್ದಪ್ಪ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ,ಪರಿಸರ ಇಲಾಖೆಯ ಅಧಿಕಾರಿಗಳನ್ನು ರೈತಮುಖಂಡರು ಸ್ಥಳದಲ್ಲಿ ತರಾಟೆಗೆ ತೆಗೆದುಕೊಂಡರು. ಕಳೆದ ಹದಿನೈದು ದಿನಗಳಿಂದ ರೈತ ಮಹಿಳೆಯರು ಅಹೊರಾತ್ರಿ ಧರಣಿ ನಡೆಸುತ್ತಿದ್ದರು. ತಾಲ್ಲೂಕಿನ ಒಬ್ಬ ಅಧಿಕಾರಿಗಳು ಇತ್ತ ಸುಳಿದಿಲ್ಲ ಹೋರಾಟಕ್ಕೆ ಮುಂದಾಗುವ ರೈತರ ಮೇಲೆ ರೇಪ್ ಕೇಸ್ ದಾಖಲಿಸಿದ್ದಾರೆ.  ದೊಡ್ಡಮಟ್ಟದಲ್ಲಿ ಗಣಿಗಾರಿಕೆ ನಡೆಸಿ ಪ್ರಕೃತಿ ಸಂಪತ್ತು ನಾಶಕ್ಕೆ ಆಗೂ ಸಾರ್ವಜನಿಕರ ಸಮಸ್ಯೆಗೆ ಕಾರಣವಾಗಿರುವ ಗಣಿ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳದೆ ಇರುವುದಕ್ಕೆ ಕಾರಣವಾದರು ಏನು ?…

Read More

ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ಹೊರಡಿಸಿದೆ . 18 ದಿನಗಳ ನಂತರ ತೀರ್ಪು ಹೊರಬದ್ದಿದೆ. ಸಿಜೆ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ 11 ದಿನಗಳ ಸುದೀರ್ಘ ವಿಚಾರಣೆ ಬಳಿಕ ಫೆಬ್ರವರಿ 25ರಂದು ವಿಚಾರಣೆ ಅಂತ್ಯಗೊಳಿಸಿತ್ತು. ಅರ್ಜಿದಾರರ ಪರ ದೇವದತ್ ಕಾಮತ್, ಮಹಮ್ಮದ್ ತಾಹೀರ್, ರವಿವರ್ಮ ಕುಮಾರ್, ಎ.ಎಂ.ಧರ್, ವಿನೋದ್ ಕುಲಕರ್ಣಿ ಸೇರಿ 8ಕ್ಕೂ ಹೆಚ್ಚು ವಕೀಲರು ವಾದ ಮಂಡಿಸಿದ್ದರು. ಸರ್ಕಾರದ ಪರ ಎಜಿ ಪ್ರಭುಲಿಂಗ ನಾವದಗಿ, ಶಾಲಾ ಆಡಳಿತ ಮಂಡಳಿ ಪರ ಸಜ್ಜನ್ ಪೂವಯ್ಯ ಸೇರಿ 5 ವಕೀಲರು ವಾದ ಮಂಡಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಶಿರಾ:  ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಾರ್ಚ್‌ 18ರಂದು ಮಾನವ ಬಂಧುತ್ವ ವೇದಿಕೆ ವತಿಯಿಂದ ನಗರದಲ್ಲಿ ರಾಜ್ಯಮಟ್ಟದ ಮಹಿಳಾ ಸಮಾವೇಶವನ್ನು ನಡೆಸಲಾಗುವುದು ಎಂದುಪತ್ರಿಕಾಗೋಷ್ಠಿಯಲ್ಲಿ ಮುಖಂಡರು ತಿಳಿಸಿದರು. ಮೌಢ್ಯಾಚರಣೆಗಳಿಂದ ಜನರನ್ನು ರಕ್ಷಿಸಲು, ಶೋಷಣೆ ತಪ್ಪಿಸಲು, ಜಾಗೃತಿ ಮೂಡಿಸಲು ಮಾನವ ಬಂಧುತ್ವ ವೇದಿಕೆ ಸ್ಥಾಪಿಸಲಾಗಿದೆ. ಇದು ಒಂದು, ಜಾತಿ, ಧರ್ಮಕ್ಕೆ ಸೀಮಿತವಲ್ಲ. ವೈಚಾರಿಕ ಮನೋಭಾವದ ಎಲ್ಲರಿಗೂ ಅವಕಾಶವಿದೆ. ಬುದ್ಧ, ಬಸವ, ಡಾ.ಬಿ.ಆರ್. ಅಂಬೇಡ್ಕರ್‌ ಅವರ ಚಿಂತನೆಯನ್ನು ಜನ ಸಾಮಾನ್ಯರಿಗೆ ತಲುಪಿಸಬೇಕಿದೆ’ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರಾದ  ಧರಣಿ ಕುಮಾರ್,   ತಾಲೂಕು ಸಂಚಾಲಕರಾದ ರಂಗರಾಜ್ ,  ಮಹಿಳಾ ಕಾರ್ಯಕರ್ತರು ಗಳಾದ ಶಿವಮ್ಮ , ರೇಖಾ ರಾಘವೇಂದ್ರ, ರೇಣುಕಮ್ಮ ಶಿವಕುಮಾರ್ , ವಿಜಯಲಕ್ಷ್ಮಿ ಪೂಜಾ ಪೆದ್ದರಾಜು,  ಮಂಜುಳಾ   ಶೇಷ ನಾಯಕ್ ವಿವರಿಸಿದರು ವರದಿ:  ಎ.ಎನ್. ಪೀರ್ ,  ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಉಂಡ ಮನೆಗೆ ಕನ್ನ ಹಾಕಿದ ನೇಪಾಳಿ ದಂಪತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಬೆಂಗಳೂರು ನಗರದ ಕೊತ್ತನೂರು ದಿಣ್ಣೆ ಬಳಿಯ ಕ್ಲಾಸಿಕ್ ಆರ್ಚಿಟ್ ಲೇಔಟ್ ನಲ್ಲಿ ನಡೆದಿದೆ. ನಗರದ ಕೊತ್ತನೂರು ದಿಣ್ಣೆ ಬಳಿಯ ಕ್ಲಾಸಿಕ್ ಆರ್ಚಿಟ್ ಲೇಔಟ್ ನಲ್ಲಿ ಮನೆ ಕೆಲಸಕ್ಕಿದ್ದ ನೇಪಾಳ ಮೂಲದ ದಂಪತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ (Theft) ಪರಾರಿಯಾಗಿರುವ ಘಟನೆ ನಡೆದಿದೆ. ಕಾಂಗ್ರೆಸ್ (Congress) ಮುಖಂಡ ಚಂದ್ರಶೇಖರ್ ಅಲಿಯಾಸ್ ಬಾರ್ ಚಂದ್ರಪ್ಪ ಮನೆಯಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 10 ರಂದು ಚಂದ್ರಶೇಖರ್ ಕುಟುಂಬಸ್ಥರು ಧರ್ಮಸ್ಥಳಕ್ಕೆ ಮಂಜುನಾಥಸ್ವಾಮಿ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ನೇಪಾಳ‌ (Nepal) ಮೂಲದ ದಂಪತಿ ಹೊಂಚು ಹಾಕಿ ಕೂತಿದ್ರು. ತಮ್ಮವರನ್ನು ಕರೆಸಿಕೊಂಡ ಈ ಖತರ್ನಾಕ್ ದಂಪತಿ ಮನೆಯಲ್ಲಿದ್ದ 50 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕದ್ದು ಎಸ್ಕೇಪ್ ಆಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ…

Read More

ಹಿರಿಯೂರು: ತಾಲ್ಲೂಕಿನ ಐಮಂಗಲ ಹೋಬಳಿಯ ಬಾಲೇನಹಳ್ಳಿ ಗ್ರಾಮದಲ್ಲಿ’ ಪ್ರೇಮ ಪಕ್ಷಿಗಳಿಗೆ ಸಂಚಿನ ಸಿಡಿಲು’ ಎಂಬ ನಾಟಕ ಪ್ರದರ್ಶನ ನಡೆಯಿತು. ವಿಧವೆಗೆ ಮದುವೆ ಭಾಗ್ಯ ಕಥೆ ಹೊಂದಿರುವ ನಾಟಕವನ್ನು ಕಲಾ ಪ್ರೇಮಿಗಳು ವೀಕ್ಷಿಸಿ ಆನಂದಿಸಿದರು. ನಾಟಕ ನೋಡಲು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಆಗಮಿಸುವ ಮೂಲಕ ರಂಗ ಭೂಮಿ ಕಲಾವಿದರನ್ನು ಪ್ರೋತ್ಸಾಹಿಸಿದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತಿಪಟೂರು: ಅಪಘಾತದಲ್ಲಿ ಮೃತಪಟ್ಟ ಪುನೀತ್ ರಾಜ್ ಕುಮಾರ್ ಅಭಿಮಾನಿಯೊಬ್ಬರು ನೇತ್ರದಾನ ಮಾಡುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವು ದೃಷ್ಟಿ ಹೀನರಿಗೆ ದೃಷ್ಠಿ ನೀಡಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿಯ ಹಿಂಡಿಸ್ಕೆರೆಯ 23 ವರ್ಷ ವಯಸ್ಸಿನ ಯುವಕ ಯಶ್ವಂತ್ ಅವರು,   ಹಿಂಡಿಸ್ಕೆರೆ ಗೇಟ್ ಬಳಿ ಪೆಟ್ರೋಲ್ ಬಂಕ್ ಮುಂಭಾಗ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾನ ಮಾಡಲಾಗಿದೆ. ಯಶ್ವಂತ್ ಅವರು ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯಾಗಿದ್ದರು. ತಮ್ಮ ಜೀವನದ ಕಾಲದಲ್ಲಿಯೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ವರದಿ:  ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಎಲ್ಲೆಡೆ ಇದೀಗ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾದ ಸದ್ದು ತುಂಬಾ ಜೋರಾಗಿದೆ.ಪ್ರಧಾನಿ ಮೋದಿ ಕೂಡ ಇದೀಗ ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.ಇದರಿಂದ ಚಿತ್ರತಂಡಕ್ಕೆ ಒಂದು ಹೊಸ ಹುಮ್ಮಸ್ಸು ಸಿಕ್ಕಂತಾಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಸತ್ಯ ಘಟನೆ ಆಧರಿಸಿದ ಸಿನಿಮಾ ಆಗಿದೆ. ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮಾರ್ಚ್‌ 11ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಚಿತ್ರತಂಡ ಹೆಚ್ಚಿನ ಪ್ರಚಾರ ನೀಡಿರಲಿಲ್ಲ. ಆದ್ರೀಗ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. 1990 ರ ಕಾಶ್ಮೀರದ ಘಟನೆಗಳು, ಕಾಶ್ಮೀರಿ ಪಂಡಿತರ ನರಮೇಧದ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಈ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.ಕಾಶ್ಮೀರ ದಂಗೆಯ ಸಮಯದಲ್ಲಿ ಕಾಶ್ಮೀರಿ ಹಿಂದೂಗಳ ವಲಸೆ ಕುರಿತ ವಿಷಯ ಇಟ್ಟುಕೊಂಡು, ಅದನ್ನು ಒಂದು ಸಿನಿಮಾವಾಗಿ ಸಮರ್ಥವಾಗಿ ಕಟ್ಟಿಕೊಟ್ಟಿರುವ ಚಿತ್ರತಂಡಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿರ್ಮಾಪಕ ಅಭಿಷೇಕ್ ಜೊತೆಗೆ ಚಿತ್ರದ ನಟಿ ಪಲ್ಲವಿ ಜೋಷಿ ಅವರು ಪ್ರಧಾನಿ…

Read More

ಭಾನುವಾರದಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್ ಪಕ್ಷವು ಸೋನಿಯಾ ಗಾಂಧಿ ಅವರು ಹಳೆಯ ಪಕ್ಷವನ್ನು ಮುನ್ನಡೆಸುತ್ತಾರೆ ಮತ್ತು ಪಕ್ಷದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಘೋಷಿಸಿದೆ. ‘ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಅವರು ನಮ್ಮನ್ನು ಮುನ್ನಡೆಸುತ್ತಾರೆ ಮತ್ತು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಅವರ ನಾಯಕತ್ವದ ಮೇಲೆ ನಮಗೆಲ್ಲರಿಗೂ ನಂಬಿಕೆಯಿದೆ” ಎಂದು ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಎನ್‌ಐಗೆ ತಿಳಿಸಿದರು.ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಇಂದು ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯನ್ನು ನಡೆಸಿ 5 ರಾಜ್ಯಗಳಲ್ಲಿನ ಕಾಂಗ್ರೆಸ್ ಪಕ್ಷದ ಚುನಾವಣಾ ಸೋಲು ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ‘ಅವರು ಪಕ್ಷದ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.5 ರಾಜ್ಯಗಳ ಚುನಾವಣೆಯ ಬಗ್ಗೆ ವಿವರವಾದ ಚರ್ಚೆ ನಡೆಯಿತು.ನಾವು ವಿಷಯಗಳನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಮತ್ತು ಮುಂಬರುವ ಚುನಾವಣೆಗೆ ನಾವು ಹೇಗೆ…

Read More

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಪಂಜಾಬ್ ರಾಜ್ಯವನ್ನು ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಗೆ ಹೆಚ್ಚಿನ ಉತ್ಸಾಹ ನೀಡಿದೆ. ಇಷ್ಟು ಕಷ್ಟಪಟ್ಟು ದೊಡ್ಡ ಗೆಲುವು ಸಾಧಿಸಿ ಬಿಜೆಪಿ ರಿಲ್ಯಾಕ್ಸ್ ಮೂಡ್‌ ನಲ್ಲಿದೆ ಎಂದು ನೀವು ಯೋಚಿಸುತ್ತಿದ್ದರೆ ನಿಮ್ಮ ಆಲೋಚನೆ ತಪ್ಪು. ನಾಲ್ಕು ರಾಜ್ಯಗಳ ಚುನಾವಣೆಯ ವಿಜಯೋತ್ಸವದ ಬಳಿಕ ಬಿಜೆಪಿ ರಿಲಾಕ್ಸ್ ‘ಮೂಡ್’ನಲ್ಲಿಲ್ಲ, ಬದಲಿಗೆ ಈಗಿನಿಂದಲೇ ಬಿಜೆಪಿ ಮಿಷನ್ 2024 (BJP Mission 2024)ಗಾಗಿ ತಂತ್ರಗಾರಿಕೆಯನ್ನು ಪ್ರಾರಂಭಿಸಿದೆ. ಮತದಾನದ ಶೇಕಡಾವಾರು ಹೆಚ್ಚಳಕ್ಕೆ ತಂತ್ರ ಸಿದ್ಧವಾಗಿದೆ: ಪಕ್ಷದ ಸಂಪೂರ್ಣ ಗಮನವು ಶೇಕಡಾವಾರು ಮತಗಳನ್ನು ಹೆಚ್ಚಿಸುವತ್ತ ನೆಟ್ಟಿದೆ. 2019ಕ್ಕಿಂತ ಹೆಚ್ಚು ಶೇಕಡಾವಾರು ಮತ ಗಳಿಸಲು ಕಾರ್ಯತಂತ್ರ ಸಿದ್ಧಪಡಿಸಲಾಗುತ್ತಿದೆ. ಎಲ್ಲ ರಾಜ್ಯಗಳಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಈಗಾಗಲೇ ಬಿಜೆಪಿ (BJP) ಮುಖಂಡರು ಹಾಗೂ ಕಾರ್ಯಕರ್ತರು ಸಿದ್ಧತೆಯಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ನಾಲ್ಕು ರಾಜ್ಯಗಳಲ್ಲಿ…

Read More

ಪ್ರೀತಿಯ ‘ಅಪ್ಪು’ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮೈಸೂರು ವಿವಿ 46 ವರ್ಷದ ಹಿಂದೆ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್. ಕರುನಾಡಿನ ಕಣ್ಮಣಿ, ಕನ್ನಡಿಗರ ಪಾಲಿನ ಪ್ರೀತಿಯ ‘ಅಪ್ಪು’ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಅಪ್ಪು ನಮ್ಮನ್ನೆಲ್ಲಾ ಅಗಲಿದ್ದರೂ, ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಮೂಲಕ ಮತ್ತೆ ಅಭಿಮಾನಿಗಳ ಎದುರು ಬರುತ್ತಿದ್ದಾರೆ. ಈ ಹೊತ್ತಲ್ಲೇ ಸಂಭ್ರಮದ ಸುದ್ದಿಯೊಂದು ಸಿಕ್ಕಿದ್ದು, ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್(Dr G Hemanth Kumar) ಅವರು, ‘ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ…

Read More