Author: admin

ಸರಗೂರು: ಮಳೆ ಹಾನಿಯ ಫಲಾನುಭವಿಗಳಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಕೊತ್ತೇಗಾಲದಲ್ಲಿ ಗ್ರಾಮಸ್ಥರ ನಡುವೆಯೇ ಗೊಂದಲ ಸೃಷ್ಟಿಯಾಗಿದ್ದು, ಒಂದೆಡೆ ಕೊತ್ತೆಗಾಲದ ಕೆಲವು ಗ್ರಾಮಸ್ಥರು ಪರಿಹಾರ ನೀಡಲು ಅಧಿಕಾರಿಗಳು  ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದರೆ, ಇನ್ನೊಂದು ಗ್ರಾಮಸ್ಥರ ತಂಡ, ಇದು ಸುಳ್ಳು, ಅಧಿಕಾರಿಗಳು ಯಾವುದೇ ಹಣದ ಬೇಡಿಕೆ ಇಟ್ಟಿಲ್ಲ ಎಂದು ಆರೋಪ ನಿರಾಕರಿಸಿದ್ದಾರೆ. ಗ್ರಾಮಸ್ಥರ ಒಂದು ತಂಡ, “ಮಳೆಯಿಂದ ಹಾನಿಯಾದ ಮನೆಗಳ ಪರಿಹಾರದ ಫಲಾನುಭವಿಗಳ ಪಟ್ಟಿಗೆ ಸೇರಿಸಲು ಪರಿಶೀಲನೆಗೆ ಬರುವ ಗ್ರಾಮ ಲೆಕ್ಕಿಗರು 60-80 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ನೀಡಿದವರ ಹೆಸರನ್ನು ಮಾತ್ರ ಫಲಾನುಭವಿಗಳ ಪಟ್ಟಿಗೆ ಸೇರಿಸಿ ಉಳಿದ ಹಣ ನೀಡದ 20 ಬಡಕುಟುಂಬದ ಮನೆಗಳನ್ನು ಫಲಾನುಭವಿಗಳ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ” ಎಂದು ಆರೋಪಿಸಿ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ತಹಸೀಲ್ದಾರ್ ರವರಿಗೆ ಮನವಿಪತ್ರ ಸಲ್ಲಿಸಿದರು. ಆದರೆ, ಇದೀಗ ಅದೇ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮತ್ತೊಂದು ಗ್ರಾಮಸ್ಥರ ಗುಂಪು, ತಾಲ್ಲೂಕು ಕಛೇರಿಗೆ ಭೇಟಿ ನೀಡಿ…

Read More

ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ. 2020ರ ಸ್ವಾತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಈ ಯೋಜನೆ ಒಂದು ವರ್ಷದ ನಂತರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಹೆಣ್ಣುಮಕ್ಕಳ ವಿವಾಹದ ಕಾನೂನುಬದ್ಧ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವಕ್ಕೆ ಅನುಮತಿ ನೀಡಿದೆ. ಸಂಪುಟ ಇದಕ್ಕೆ ಅನುಮೋದನೆ ನೀಡಿದ ಬಳಿಕ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ.ೀ ಮೂಲಕ ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದೂ ವಿವಾಹ ಕಾಯ್ದೆ 1955ರಂತಹ ವೈಯಕ್ತಿಕ ಕಾನೂನುಗಳಿಗೂ ತಿದ್ದುಪಡಿ ತರಲಾಗುತ್ತದೆ ಎಂದು ತಿಳಿದುಬಂದಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದು ಅವರು ಹೇಳಿದ್ದಾರೆ. ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ಖಂಡಿತವಾಗಿಯೂ ವಿರೋಧ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಳಗಾವಿ: ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಮಳೆಯಿಂದ ನಷ್ಟ ಅನುಭವಿಸಿರುವ ರೈತರಿಗೆ ಕೇಂದ್ರ ಸರಕಾರದ ಅನುದಾನಕ್ಕೆ ಕಾಯದೇ ತತ್‌ ಕ್ಷಣ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸದನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸಲಹೆ ನೀಡಿದರು. ಪ್ರವಾಹದ ಕುರಿತು ನಿಯಮ 69ರ ಅಡಿಯಲ್ಲಿ ನಡೆಯುತ್ತಿರುವ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯಆರ್‌. ವಿ. ದೇಶಪಾಂಡೆ ಮಾತಿಗೆ ಬೆಂಬಲ ಸೂಚಿಸಿ ಮಾತನಾಡಿದ ಯಡಿಯೂರಪ್ಪ, ಅತಿವೃಷ್ಟಿ ಹಾನಿ ವಿಚಾರವಾಗಿ ದೇಶಪಾಂಡೆ ಮಾತು ವಾಸ್ತವಿಕ ಸತ್ಯ ಎಂದು ಸಮ್ಮತಿ ಸೂಚಿದರು. ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ, ಅವರಿಗೂ ವಾಸ್ತವಿಕ ಸ್ಥಿತಿ ಗೊತ್ತಿದೆ. ಕೇಂದ್ರ ಸರಕಾರ ತಜ್ಞರ ಸಮಿತಿ ಕಳಿಸಿ ಪರಿಶೀಲಿಸಲಿದೆ. ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಹೋಗಬೇಡಿ, ಬೇರೆ ಎಲ್ಲ ಕೆಲಸ ಬದಿಗೊತ್ತಿ ದೇಶಪಾಂಡೆ ಅವರ ಮಾತನ್ನು ಗಮನದಲ್ಲಿ ಇಟ್ಟುಕೊಂಡು ಪರಿಹಾರ ನೀಡಿ ಎಂದು ಸಿಎಂಗೆ ಸಲಹೆ ನೀಡಿದರು. ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದವರ ಕೂಲಿಯನ್ನು 1-2 ತಿಂಗಳು ಕೊಡದಿದ್ದರೆ…

Read More

ಬೆಂಗಳೂರು:  ತುಮಕೂರು ನಗರದ ರಸ್ತೆ ಅವ್ಯವಸ್ಥೆ ಸರಿಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ ಎಂದು ವರದಿಯಾಗಿದೆ. ತುಮಕೂರು ನಗರದ ರಸ್ತೆಗಳು ಅವ್ಯವಸ್ಥೆಯಿಂದ ಕೂಡಿದ್ದು, ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿವೆ ಈ ಹಿನ್ನೆಲೆಯಲ್ಲಿ ವಕೀಲ ಎಲ್. ರಮೇಶ್ ನಾಯಕ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳು ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ನಗರದ ರಸ್ತೆಗಳ ಸ್ಥಿತಿ ಮಾತ್ರ ಬದಲಾಗಿಲ್ಲ. ಇವುಗಳನ್ನು ಮುಚ್ಚುವಂತೆ ಕೋರಿ ಕಳೆದ ಮೂರು ವರ್ಷಗಳಿಂದ ಹಲವು ಬಾರಿ ಮನವಿ ಸಲ್ಲಿಸಿದ್ದರೂ ತುಮಕೂರು ನಗರಸಭೆ ಅಧಿಕಾರಿಗಳು ಪರಿಗಣಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ. ವಾಹನ…

Read More

ಬೆಳಗಾವಿ: ಮತಾಂತರ ನಿಷೇಧ ಮಸೂದೆ ಇದೇ ಅಧಿವೇಶನದಲ್ಲಿ ಮಂಡಿಸುವ ಬಗ್ಗೆ ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಿತು. ಈ ವಿಷಯವನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಿಟ್ಟು ನಂತರ ಮಂಡಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿತು. ಇನ್ನು ಕೆಲವು ಶಾಸಕರು ಸಾರ್ವಜನಿಕ ಚರ್ಚೆ ನಡೆಸದೇ ಮಂಡಿಸುವುದು ಸೂಕ್ತ ಎಂಬ ವಾದವನ್ನೂ ಮುಂದಿಟ್ಟರು. ಆ ರೀತಿ ಮಾಡುವುದೇ ಆದರೆ, ಕೆಲವು ತಿದ್ದುಪಡಿಗಳನ್ನು ಮಾಡಬೇಕು ಎಂಬ ಅಭಿಪ್ರಾಯ ಕೇಳಿ ಬಂದಿತು ಎಂದು ಮೂಲಗಳು ತಿಳಿಸಿವೆ ಮಸೂದೆ ಮಂಡಿಸುವುದೇ ಆದರೆ, ಮುಂದಿನ ವಾರ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ಮಸೂದೆಯ ಅಂಗೀಕಾರಕ್ಕೆ ವಿರೋಧ ಪಕ್ಷಗಳು ಅಡ್ಡಿ ಉಂಟು ಮಾಡುವ ಸಾಧ್ಯತೆ ಇದ್ದು, ವಿಧಾನಪರಿಷತ್ತಿನಲ್ಲಿ ಬಹುಮತ ಇಲ್ಲದ ಕಾರಣ ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ ಕೇಸರಿ ಧ್ವಜಗಳಲ್ಲಿ ಕಂಗೊಳಿಸುತ್ತಿದ್ದು, ಕೋಟೆ ಶ್ರೀ ಆಂಜನೇಯಸ್ವಾಮಿ ಯುವಕರ ಬಳಗ ಹನುಮ ಜಯಂತಿ ಪ್ರಯುಕ್ತ ಸಕಲ ಕೆಲಸ ಕಾರ್ಯಗಳಲ್ಲಿಯೂ ಭಾಗಿಯಾಗುತ್ತಿದೆ. ಗುರುವಾರ 10ನೇ ವರ್ಷದ ವೈಭವದ ಹನುಮ ಜಯಂತಿ ಹಾಗೂ ನೂತನ ರಥೋತ್ಸವ ನಡೆಯಲಿದ್ದು, ಶುಕ್ರವಾರ  ಬೆಳಗ್ಗೆ 11:30ಕ್ಕೆ ಕೋಟೆ ಶ್ರೀ ಆಂಜನೇಯ ಸ್ವಾಮಿಯ ವೈಭವದ ಮೆರವಣಿಗೆಯನ್ನು ತುಮಕೂರಿನ ರಾಜಬೀದಿಗಳಲ್ಲಿ ನಡೆಯಲಿದೆ. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಪುರಾತನ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ವಿಶೇಷತೆ ಏನೆಂದರೆ, ಗರ್ಭಗುಡಿಯ ಒಳಗೆ ಹನುಮನ ಎರಡು ಮೂರ್ತಿಗಳಿವೆ. ಈ ಪೈಕಿ ಒಂದು ಮೂರ್ತಿ ಪುರಾತನ ಕಾಲದ್ದಾಗಿದ್ದು, ಇನ್ನೊಂದು ಆ ಬಳಿಕ ಸ್ಥಾಪನೆ ಮಾಡಿದ ಮೂರ್ತಿಯಾಗಿದೆ. ಈ ದೇವಸ್ಥಾನದ ಹೊರ ಭಾಗಗಳಲ್ಲಿ ವಿಶಾಲವಾದ ಕೋಟೆ ಇದ್ದುದರಿಂದಾಗಿ ಈ ದೇವಸ್ಥಾನಕ್ಕೆ ಕೋಟೆ ಆಂಜನೇಯ ದೇವಸ್ಥಾನ ಎಂಬ ಹೆಸರು ಬಂದಿದೆ. ಆದರೆ, ಪ್ರಸ್ತುತ…

Read More

ಬೆಂಗಳೂರು: ಅಲ್ಲು ಅರ್ಜುನ್ ನಟನೆಯ ಬಹು ನಿರೀಕ್ಷಿತ ಚಿತ್ರ ಪುಷ್ಪ ಸಿನಿಮಾ 17ಕ್ಕೆ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಚಿತ್ರ ತಂಡ ಚಿತ್ರದ ಪ್ರಚಾರ ನಡೆಸಿತು.  ನಟ ಅಲ್ಲು ಅರ್ಜುನ್ , ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಚಿತ್ರದ ವಿವಿಧ ಕಲಾವಿದರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಚಿತ್ರದ ಬಗ್ಗೆ ಮಾತನಾಡಿದ ರಶ್ಮಿಕಾ ಮಂದಣ್ಣ,  17 ಪುಷ್ಪ ಸಿನಿಮಾ ರಿಲೀಸ್ ಆಗ್ತಿದೆ… ಎನ್ನುತ್ತಲೇ ಯಾವ ಭಾಷೆಯಲ್ಲಿ ಮಾತನಾಡಬೇಕು ಎಂದು ತಿಳಿಯದೇ ಗೊಂದಕ್ಕೀಡಾಗಿ ಜೋರಾಗಿ ನಕ್ಕರು ಬಳಿಕ ಮಾತು ಮುಂದುವರಿಸಿ,  ಎಲ್ಲ ಲಾಂಗ್ವೇಜ್ ಮಿಕ್ಸ್ ಆಗಿದೆ ತುಂಬಾ ಹಿಂದೆ ಹೋಗಿ ಬಿಟ್ಟಿದ್ದೇನೆ ಎಂದರು. ನನ್ನ ಕ್ಯಾರೆಕ್ಟರ್ ಬಗ್ಗೆ ಹೇಳ್ಬೇಕೆಂದ್ರೆ, ನೀವು ಟ್ರೈಲರ್ ನಲ್ಲಿ, ಸಾಂಗ್ಸ್ ನಲ್ಲಿ ನೋಡಿದ್ದೀರಿ ನಿಮಗೆಲ್ಲರಿಗೂ ಖುಷಿಯಾಗಿದೆ ಅಂದ್ಕೊಂಡಿದ್ದೇನೆ. ಪುಷ್ಪಂನಲ್ಲಿ ಚಿತ್ರ ತಂಡ ಹಾರ್ಡ್ ವರ್ಕ್ ಮಾಡಿದೆ. ಅದು ಟ್ರೈಲರ್ ನಲ್ಲಿ, ಸಾಂಗ್ಸ್ ನಲ್ಲಿ ಕಾಣಿಸುತ್ತಿದೆ. ಇದೊಂದು ಟೀಂ ವರ್ಕ್, ನನಗೆ ಏನ್ ಹೇಳ್ಬೇಕು ಅಂತ ಅರ್ಥವಾಗ್ತಿಲ್ಲ,  17ಕ್ಕೆ ನಮ್ಮೆಲ್ಲರ…

Read More

ನವದೆಹಲಿ: ತಮಿಳುನಾಡಿನಲ್ಲಿ ನಡೆದ ಹೆಲಿಕಾಫ್ಟರ್ ದುರಂತದಲ್ಲಿ ಬದುಕುಳಿದಿದ್ದ ಅನುಭವಿ ಪೈಲಟ್‌ ಎನಿಸಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಂಗಳೂರಿನ ಕಮಾಂಡೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 2020ರಲ್ಲಿ, ಲಘು ಯುದ್ಧವಿಮಾನ (ಎಲ್‌ಸಿಎ) ತೇಜಸ್‌ ತಾಂತ್ರಿಕ ವೈಫಲ್ಯದಿಂದ ಪತನವಾಗುವ ಅಪಾಯವಿದ್ದಾಗಲೂ, ತಮ್ಮ ಪ್ರಾಣವನ್ನು ಲೆಕ್ಕಿಸದೆ ಅದನ್ನು ರಕ್ಷಿಸಿದ್ದ ವರುಣ್ ಸಿಂಗ್ ಅವರಿಗೆ ಸ್ವಾತಂತ್ರ್ಯೋತ್ಸವದಲ್ಲಿ ಶೌರ್ಯಚಕ್ರ ನೀಡಲಾಗಿತ್ತು. ವರುಣ್ ಸಿಂಗ್ ಅವರು ಎಲ್‌ ಸಿಎ ಸ್ಕ್ವಾಡ್ರನ್‌ ನಲ್ಲಿ ಪೈಲಟ್ ಆಗಿದ್ದರು. ಯುದ್ಧವಿಮಾನದಲ್ಲಿ ಕಾಣಿಸಿದ್ದ ತಾಂತ್ರಿಕ ದೋಷವ‌ನ್ನು ಸರಿಪಡಿಸಿದ ಬಳಿಕ, ಅದನ್ನು ಪರೀಕ್ಷಾರ್ಥವಾಗಿ ಹಾರಾಟ ನಡೆಸುವ ಹೊಣೆಯನ್ನು ವರುಣ್ ಹೊತ್ತಿದ್ದರು. ಅತ್ಯಂತ ಎತ್ತರದ ಪ್ರದೇಶದಲ್ಲಿ ವಿಮಾನ ನಿಯಂತ್ರಣ ವ್ಯವಸ್ಥೆ ಮತ್ತು ವಿಮಾನದೊಳಗಿನ ಗಾಳಿಯ ಒತ್ತಡ ವ್ಯವಸ್ಥೆಯನ್ನು ಅವರು ಪರೀಕ್ಷಿಸಬೇಕಿತ್ತು. ಅತ್ಯಂತ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ವಿಮಾನದಲ್ಲಿ ಮತ್ತೆ ತಾಂತ್ರಿಕ ದೋಷ ಇರುವುದನ್ನು ಅವರು ಪತ್ತೆಹಚ್ಚಿದರು. ತಕ್ಷಣ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಅವರು ಮುಂದಾದರು. ವಿಮಾನವನ್ನು ಇಳಿಸುವಾಗ ವಿಮಾನ ನಿಯಂತ್ರಣ ವ್ಯವಸ್ಥೆ ಕೈಕೊಟ್ಟಿತು. ಪೈಲಟ್‌…

Read More

ಸರಗೂರು:  ಮಳೆಯಿಂದ ಹಾನಿಗೊಳಗಾದ ಮನೆ ದುರಸ್ತಿಗೆ ಪರಿಶೀಲನೆಗೆ ಬರುವ ಗ್ರಾಮ ಲೆಕ್ಕಿಗರು 60ರಿಂದ 80 ಸಾವಿರ ರೂಪಾಯಿ ಹಣ ಲಂಚ ನೀಡಬೇಕು ಎಂದು ಬೇಡಿಕೆಯಿಡುತ್ತಿದ್ದಾರೆ ಎಂದು ಆರೋಪಿಸಿ, ಕೊತ್ತೇಗಾಲ ಗ್ರಾಮಸ್ಥರು ತಾಲ್ಲೂಕು ಕಛೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು. ಈ ಸಂಬಂಧ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಹಸೀಲ್ದಾರ್ ಚಲುವರಾಜು ರವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲ್ಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ಉಂಟಾದ ಭಾರಿ ಮಳೆಯಿಂದಾಗಿ ಸಾಕಷ್ಟು ಮನೆಯ ಗೋಡೆಗಳು, ಮೇಲ್ಚಾವಣಿಗಳು ಕುಸಿದು ಹೋಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಹಾನಿಯುಂಟಾಗಿತ್ತು. ಗ್ರಾಮಸ್ಥರು ಸಹ ಪ್ರವಾಹ ಪೀಡಿತ ಯೋಜನೆಯ ಅಡಿಯಲ್ಲಿ ಪರಿಹಾರವನ್ನು ನೀಡಿ ಮನೆಗಳ ದುರಸ್ತಿಗೆ ಸಹಕರಿಸುವಂತೆ ಕೋರಿ ಅರ್ಜಿಗಳನ್ನು ಸಹ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಆ ಸಂಬಂಧ ಪರಿಶೀಲನೆಗೆ ಬಂದಿದ್ದ ಗ್ರಾಮ ಲೆಕ್ಕಿಗರು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿರುವ ಸುಮಾರು 20 ಮನೆಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಅಲ್ಲದೇ ಕೆಲವರ ಬಳಿ ಹಣ ಪಡೆದು ಅವರನ್ನು…

Read More