Subscribe to Updates
Get the latest creative news from FooBar about art, design and business.
- ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ
- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
- ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
- ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
Author: admin
ಜಗತ್ತನ್ನೇ ಕಾಡಿದ್ದ ಕೋವಿಡ್ ಸೋಂಕು ಉತ್ತರ ಕೊರಿಯಾವನ್ನು ಆವರಿಸಿದ್ದು, ಉದ್ದೇಶ ಪೂರ್ವಕವಾಗಿ ಅಲ್ಲಿನ ಸರ್ಕಾರ ಮಾಹಿತಿಗಳನ್ನು ಮುಚ್ಚಿಟ್ಟಿತ್ತೆ ಎಂಬ ಅನುಮಾನಗಳು ಕಾಡಲಾರಂಭಿಸಿವೆ. ಗುರುವಾರವಷ್ಟೆ ಕೋವಿಡ್ನ ರೂಪಾಂತರ ಓಮಿಕ್ರಾನ್ನ ಮೊದಲ ಪ್ರಕರಣ ದೃಢಪಟ್ಟಿದೆ ಎಂದು ವರದಿಯಾಗಿತ್ತು, ಅದರ ಬೆನ್ನಲೇ ಆಡಳಿತದ ಮುಖ್ಯಸ್ಥ ಕಿಮ್ ಜೊಂಗ್ ಉನ್ ದೇಶದಲ್ಲಿ ಲಾಕ್ಡೌನ್ ಘೋಷಿಸಿದರು. ಮೊದಲ ಬಾರಿಗೆ ತಾವು ಮಾಸ್ಕ್ ಧರಿಸಿ ಅಧಿಕಾರಿಗಳ ಸಭೆ ನಡೆಸಿದರು. ಆದರೆ ಮಾರನೇಯ ದಿನವೇ ಆತಂಕಕಾರಿ ಮಾಹಿತಿಗಳು ಹೊರ ಬಂದಿವೆ. 26 ದಶ ಲಕ್ಷ ಜನ ಸಂಖ್ಯೆ ಇರುವ ಉತ್ತರ ಕೊರಿಯಾದಲ್ಲಿ 1,74,440 ಜನರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದಿವೆ. ನಿನ್ನೆ ಒಂದೇ ದಿನ 21 ಹೊಸ ಸಾವಿನ ಪ್ರಕರಣಗಳು ದಾಖಲಾಗಿವೆ. ಈವರೆಗೂ 27 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ, 5,24,440 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. 2,43,630 ಮಂದಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಉತ್ತರ ಕೊರಿಯಾದಲ್ಲಿ ಲಸಿಕೀಕರಣ ಪರಿಣಾಮಕಾರಿಯಾಗಿ ನಡೆದಿಲ್ಲ. ದೇಶದ ಆರೋಗ್ಯ ವ್ಯವಸ್ಥೆ ಕೂಡ ದುರ್ಬಲವಾಗಿದೆ ಎನ್ನಲಾಗಿದೆ. ಸೋಂಕು…
ಆ್ಯಸಿಡ್ ದಾಳಿ ನಡೆಸಿದ ನಂತರ ಆರೋಪಿ ನಾಗೇಶ್ ತನ್ನ ಅಣ್ಣನಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಬಳಿಕ ತನ್ನ ಬೈಕ್ ನಲ್ಲಿ ನ್ಯಾಯಾಲಯದ ಬಳಿ ಹೋಗಿ ವಕೀಲರೊಬ್ಬರನ್ನು ಸಂಪರ್ಕಿಸಿ ನಡೆದ ಘಟನೆ ಬಗ್ಗೆ ವಿವರಿಸಿದಾಗ ವಕೀಲರು ಪೊಲೀಸರಿಗೆ ಶರಣಾಗುವಂತೆ ಸೂಚಿಸಿದ್ದಾರೆ. ವಕೀಲರ ಮಾತನ್ನು ಅಲ್ಲಗಳೆದ ಆರೋಪಿ ಬೈಕನ್ನು ಅಲ್ಲೇ ಬಿಟ್ಟು ಬಸ್ ನಲ್ಲಿ ಹೊಸಕೋಟೆಗೆ ಹೋಗಿದ್ದಾನೆ. ಅಲ್ಲಿಯ ಕೆರೆಯೊಂದರ ಬಳಿ ತೆರಳಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬಳಿಕ ಆರೋಪಿ ನಾಗೇಶ್ ಮನಸ್ಸು ಬದಲಿಸಿಕೊಂಡು ತಿರುಪತಿಗೆ ಹೋಗಲು ನಿರ್ಧರಿಸಿ ತನ್ನ ಬಳಿ ಮೊಬೈಲ್ ಇದ್ದರೆ ಸಿಕ್ಕಿಬೀಳುತ್ತೇನೆಂದು ತಿಳಿದು ಆ ಮೊಬೈಲ್ ಅನ್ನು ಕೆರೆಗೆ ಬಿಸಾಡಿದ್ದಾನೆ. ನಂತರ ತಿರುಪತಿಗೆ ಹೋದರೆ ಸಿಕ್ಕಿಹಾಕಿಕೊಳ್ಳಬಹುದೆಂದು ತಿಳಿದು ತಮಿಳುನಾಡಿಗೆ ಹೋಗಲು ನಿರ್ಧಾರ ಬದಲಿಸಿದ್ದಾನೆ. ಅದರಂತೆ ಹೊಸಕೋಟೆಯಿಂದ ಮಾಲೂರು ಮುಖಾಂತರ ತಮಿಳುನಾಡಿನ ತಿರುವಣ್ಣಾಮಲೈಗೆ ಹೋಗಿದ್ದಾನೆ. ಅಲ್ಲಿನ ರಮಣ ಆಶ್ರಮದ ಬಗ್ಗೆ ತಿಳಿದುಕೊಂಡು ಖಾವಿ ವಸ್ತ್ರ ಖರೀದಿಸಿ ಸನ್ಯಾಸಿಯಂತೆ ವೇಷ ಧರಿಸಿ ಅಲ್ಲಿನವರೊಂದಿಗೆ…
ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಮತ್ತಿತರರ ಜೊತೆ ಮಾತುಕತೆ ನಡೆಸಲಾಯಿತು. ದೆಹಲಿಯಿಂದ ವರಿಷ್ಠರ ಸಂದೇಶವನ್ನು ಹೊತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ ಸಂದರ್ಭದಲ್ಲೇ ಬೊಮ್ಮಾಯಿ ಅವರು ಪ್ರಮುಖರ ಜೊತೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಮೂರ್ನಾಲ್ಕು ದಿನಗಳಲ್ಲಿ ಸಂದೇಶ ನೀಡಲಾಗುವುದು ಎಂದು ವರಿಷ್ಠರು ಹೇಳಿದ್ದರು. ಆದರೆ ಇದುವರೆಗೂ ಯಾವುದೇ ಸಂದೇಶ ದೆಹಲಿ ನಾಯಕರಿಂದ ಬಾರದಿರುವುದು ಸಚಿವ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. ಬೆಂಗಳೂರಿಗೆ ಆಗಮಿಸಿರುವ ಉಸ್ತುವಾರಿ ಅರುಣ್ ಸಿಂಗ್ ದೆಹಲಿ ನಾಯಕರಿಂದ ಶುಭ ಸುದ್ದಿಯನ್ನೇ ತಂದೇ ತರುತ್ತಾರೆ ಎಂಬ ಅಚಲವಾದ ವಿಶ್ವಾಸ ಬಿಜೆಪಿ…
ಏರುತ್ತಿರುವ ದೇಶೀಯ ಬೆಲೆಗಳನ್ನು ನಿಯಂತ್ರಿಸುವ ಕ್ರಮಗಳ ಭಾಗವಾಗಿ ಭಾರತ ತಕ್ಷಣವೇ ಜಾರಿಗೆ ಬರುವಂತೆ ಗೋಧಿ ರಫ್ತುಗಳನ್ನು ನಿಷೇಧಿಸಿದೆ. ಗೋಧಿ ರಫ್ತು ನೀತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಡಿಜಿಎಫ್ ಟಿ ತಿಳಿಸಿದೆ. ಭಾರತ ಸರ್ಕಾರವು ಇತರ ದೇಶಗಳಿಗೆ ಅವರ ಆಹಾರ ಭದ್ರತೆ ಅಗತ್ಯತೆಗಳನ್ನು ಪೂರೈಸಲು ಮತ್ತು ಆ ಸರ್ಕಾರಗಳ ಕೋರಿಕೆಯ ಮೇರೆಗೆ ನೀಡುವ ಅನುಮತಿಯನ್ನು ಆಧರಿಸಿ ಗೋಧಿ ರಫ್ತಿಗೆ ಅನುಮತಿಸಲಾಗುವುದು ಎಂದು ಸ್ಪಷ್ಟ ಪಡಿಸಲಾಗಿದೆ. ಪ್ರತ್ಯೇಕ ಅಧಿಸೂಚನೆಯಲ್ಲಿ ಈರುಳ್ಳಿ ಬೀಜಗಳ ರಫ್ತು ಷರತ್ತುಗಳನ್ನು ಸಡಿಲಿಸುವುದಾಗಿ ಡಿಜಿಎಫ್ಟಿ ತಿಳಿಸಿತ್ತು. ಈ ಹಿಂದೆ ಈರುಳ್ಳಿ ರಫ್ತು ಮಾಡುವುದನ್ನು ನಿಷೇಧಿಸಲಾಗಿತ್ತು. ಈ ವಾರ ಬಿಡುಗಡೆಯಾದ ಅಧಿಕೃತ ಮಾಹಿತಿಯ ಪ್ರಕಾರ ಇಂಧನ ಮತ್ತು ಆಹಾರ ಪದಾರ್ಥಗಳ ಬೆಲೆ ಹೆಚ್ಚಳದಿಂದ ಹಣದುಬ್ಬರದಲ್ಲಿ ಏರಿಕೆ ಕಂಡುಬಂದಿದೆ. ಚಿಲ್ಲರೆ ಹಣದುಬ್ಬರವು ಏಪ್ರಿಲ್ನಲ್ಲಿ ಎಂಟು ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ತಿಳಿದು ಬಂದಿದೆ. ಆಹಾರಧಾನ್ಯದ ಪ್ರಮುಖ ರಫ್ತುದಾರರಾಗಿರುವ ರಷ್ಯಾ ಮತ್ತು ಉಕ್ರೇನ್ ಯುದ್ಧದಿಂದ ಜಾಗತಿಕ ಗೋ ಪೂರೈಕೆಯಲ್ಲಿ ಏರುಪೇರಾಗಿದೆ. 2021-22ರಲ್ಲಿ…
ಆರೋಪಿ ನಾಗೇಶನನ್ನು ಪೊಲೀಸರು ಬಂಧಿಸುವುದಕ್ಕಿಂತ ಶೂಟೌಟ್ ಮಾಡಬೇಕಿತ್ತು ಎಂದು ಸಂತ್ರಸ್ಥೆ ಯುವತಿಯ ತಂದೆ ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ನಾಗೇಶನ ಒಂದು ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆಂದು ಗೊತ್ತಾಯಿತು. ಎರಡೂ ಕಾಲಿಗೂ ಹೊಡೆಯಬೇಕಿತ್ತು. ಆತನನ್ನು ಜೈಲಿಗೆ ಕಳುಹಿಸಿದರೆ ಪ್ರಯೋಜನವಾಗುವುದಿಲ್ಲ. ರಸ್ತೆಗೆ ಆತನನ್ನು ಬಿಟ್ಟರೆ ಜನ ಏನು ಮಾಡುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಗುಡುಗಿದರು. ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ನಮಗೂ ಸಹ ಧೈರ್ಯ ತುಂಬಿದ್ದಾರೆ. ಮಗಳ ಚಿಕಿತ್ಸೆಗೆ ಸರ್ಕಾರ ಸ್ಪಂದಿಸಿದೆ. ಅದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ರಾಜಣ್ಣ ಹೇಳಿದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಿಎಸ್ ಐ ಪರೀಕ್ಷಾ ಅಕ್ರಮ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆಯ ಸಹಯೋಗದಲ್ಲಿ ಸಿಐಡಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪರೀಕ್ಷಾ ಅಕ್ರಮದಲ್ಲಿ ದೊಡ್ಡವರ ಹೆಸರುಗಳು ಕೇಳಿಬರುತ್ತಿವೆ. ನೇಮಕಾತಿ ವಿಭಾಗದ ಅಧಿಕಾರಿ ಶಾಂತಕುಮಾರ್ ವಿಚಾರಣೆ ಸಂದರ್ಭದಲ್ಲಿ ಅನೇಕ ಪ್ರಭಾವಿಗಳನ್ನು ಬಂಧಿಸದಂತೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಐಪಿಎಸ್ ಅಧಿಕಾರಿಗಳು, ರಾಜಕೀಯ ನಾಯಕರನ್ನು ಇನ್ನು ವಿಚಾರಣೆ ನಡೆಸಲಾಗುತ್ತಿಲ್ಲ. ಸಿಐಡಿ ತನಿಖೆ ಮೇಲೆ ಹೆಚ್ಚಿನ ಪ್ರಭಾವ ಮತ್ತು ಒತ್ತಡ ಇರುವುದರಿಂದ ಹಿರಿಯ ಅಧಿಕಾರಿಗಳನ್ನು ವಿಚಾರಣೆ ಮಾಡಲಾಗುತ್ತಿಲ್ಲ. ಹೀಗಾಗಿ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆ ಸಹಯೋಗದಲ್ಲಿ ಮೇ 17ರಂದು ಸಿಐಡಿ ಕಚೇರಿ ಎದುರು ಪಾರದರ್ಶಕ ತನಿಖೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ…
ಶ್ರೀರಂಗಪಟ್ಟಣ: ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಉಗಮ ಚೇತನ ಟ್ರಸ್ಟ್,(ರಿ,) ಹಾಗೂ ಗಮ್ಯಶ್ರೀರಂಗಪಟ್ಟಣ ಇವರ ಸಹಯೋಗದೊಂದಿಗೆ ಸರಳವಾಗಿ ತಾಯಂದಿರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಶ್ರೀರಂಗಪಟ್ಟಣ ಕೆ.ಹೆಚ್.ಬಿ. ಕಾಲೋನಿಯಲ್ಲಿ ಗಮ್ಯ ತಂಡದಿಂದ ನಡೆಯುತ್ತಿದ್ದ ಚಿಲಿಪಿಲಿ ಬೇಸಿಗೆ ಶಿಬಿರದಲ್ಲಿ ವಿಶ್ವ ತಾಯಂದಿರ ದಿನಾಚರಣೆಯನ್ನು ಇಂದು ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನೂತನ ವನಿತೆ ವ್ಯವಸ್ಥಾಪನಾ ನಿರ್ದೇಶಕರಾದ ಕನ್ನಿಕಾ ರವರು ವಹಿಸಿಕೊಂಡಿದ್ದರು. ಇದರ ಉದ್ಘಾಟನೆಯನ್ನು ಉಗಮ ಚೇತನ ಟ್ರಸ್ಟಿನ ಅಧ್ಯಕ್ಷರಾದ ಪ್ರಿಯಾ ರಮೇಶ್ ರವರು ವಹಿಸಿಕೊಂಡಿದ್ದರು. ನಂತರ ತಾಯಿಯ ಬಗ್ಗೆ ಶಿಬಿರದ ಮಕ್ಕಳು ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಭಾಗವಾದ ಎಲ್ಲ ತಾಯಂದಿರು ತಮ್ಮ ಮಕ್ಕಳಿಗೆ ಕೈತುತ್ತು ನೀಡುವುದರ ಮೂಲಕ ತನ್ನ ತಾಯಿತನದ ಅನುಭವ ಹಾಗೂ ಮಕ್ಕಳಿಗೆ ಪ್ರೀತಿಯನ್ನು ನೀಡಿ ಕೈತುತ್ತು ನೀಡಿದರು. ಆನಂತರ ಎಲ್ಲಾ ತಾಯಂದಿರು ತಮ್ಮ ತಮ್ಮ ಮಕ್ಕಳಾ ಜೊತೆಯಲ್ಲಿ ಹಾಡಿ ಕುಣಿದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಗಮ್ಯ ತಂಡದ ನಾಯಕ ಹಾಗೂ ನಿರ್ದೇಶಕರಾದ ಆದಿತ್ಯ ಭಾರದ್ವಾಜ ಹಾಗೂ ಮನೋಜ್…
ಹೆಚ್.ಡಿ.ಕೋಟೆ: ತಾಲ್ಲೂಕಿನ ಮೇಟಿಕುಪ್ಪೆ ಗ್ರಾಮದ ಕಾಂತರಾಜು ಆಚಾರಿ ಎಂಬುವವರ ಉಳುಮೆ ಮಾಡುವ ಎತ್ತನ್ನು ಹುಲಿ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ನಡೆದಿದೆ. ಬೆಳಿಗ್ಗೆ ಬೆಳಿಗ್ಗೆ ಜನೀನಿನಲ್ಲಿ ಕಟ್ಟಲಾಗಿದ್ದ ಎತ್ತಿನ ಮೇಲೆ ಹುಲಿಯು ಬೇಟೆಯಾಡಿದೆ, ಇದನ್ನು ಕಂಡು ಜಮೀನಿನಲ್ಲಿದ್ದ ಎಲ್ಲರೂ ಗಾಬರಿಗೊಂಡಿದ್ದಾರೆ. ಘಟನೆಯಿಂದ ಭೀತರಾದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣ ಹುಲಿಯನ್ನು ತಕ್ಷಣ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ. ಹುಲಿ ಸೆರೆ ಕಾರ್ಯಾಚರಣೆಯನ್ನು ತಕ್ಷಣವೇ ಕೈಗೆತ್ತಿಕೊಳ್ಳಬೇಕು ಇಲ್ಲವಾದರೆ ಮನುಷ್ಯರ ಮೇಲೆ ಹುಲಿ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಪ್ರತಿ ನಿತ್ಯವೂ ಜಾನುವಾರುಗಳ ಬಲಿ ನಡೆಯುತ್ತದೆ, ಆದರೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದೇ ಕಣ್ಣು ಮುಚ್ಚಿ ಕುಳಿತಿದೆ ಎಂದು ವಕೀಲರಾದ ರಾಜಚಾರಿ ಆರೋಪಿಸಿದ್ದಾರೆ. ಹುಲಿ ಕಾಡಿನಿಂದ ಹೊರ ಬರುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ, ಈಗಾಗಲೇ ಜಾನುವಾರುಗಳ ಬಲಿಯಾಗಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಕ್ಯಾಮರಾ ಟ್ರಾಪ್ ಅಳವಡಿಸಲಾಗಿದೆ. ತಕ್ಷಣವೇ ಬೋನು ಅಥವಾ ಯಾವ ರೀತಿ ಸೆರೆಹಿಡಿಯಬೇಕು ಎಂಬ…
ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಸಂಬಂಧ ಇಂದು ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ಚರ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷದ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆ ಹಾಗೂ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ವರಿಷ್ಠರಿಗೆ ಕಳುಹಿಸಿಕೊಡಲಾಗುವುದು. ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಕ್ಕೂ ಅಭ್ಯರ್ಥಿಗಳ ಹೆಸರನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಂತರ ತೀರ್ಮಾನ ಮಾಡುತ್ತೇವೆ ಎಂದರು. ಆಕಾಂಕ್ಷಿಗಳ ಪಟ್ಟಿ ಸಾಕಷ್ಟಿದ್ದರೂ ಅಂತಿಮವಾಗಿ ಯಾರಿಗೆ ನೀಡಬೇಕು ಎಂಬುದನ್ನು ಪಕ್ಷದ ಪ್ರಮುಖರು ತೀರ್ಮಾನಿಸುತ್ತಾರೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕಾಗುತ್ತದೆ ಎಂದು ಸಿಎಂ ಸೂಚಿಸಿದರು.ದಾವೋಸ್ ಪ್ರವಾಸ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಅವರು ಇಡೀ ದೇಶದಲ್ಲಿ ನನ್ನನ್ನು ಸೇರಿದಂತೆ…
ಬಿಜೆಪಿ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ಮಾಡುವ ಮನಸ್ಸೇ ಇಲ್ಲ. ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಸುಪ್ರೀಂಕೋರ್ಟ್ ಆದೇಶದನ್ವಯ ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ತಿಂಗಳು ಮೊದಲೇ ಬಿಬಿಎಂಪಿಗೆ ಚುನಾವಣೆ ನಡೆಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಚುನಾವಣೆ ಮಾಡುವುದಕ್ಕೆ ಸಿದ್ಧವಿಲ್ಲ. ಶೀಘ್ರ ಚುನಾವಣೆ ನಡೆಸಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು. ಕಾನೂನು ಪ್ರಕಾರ ಆಯೋಗ ನಡೆದುಕೊಳ್ಳುತ್ತದೆ. ಹಿಂದೆಯೂ ಕೂಡ ಆಯೋಗ ಕೋರ್ಟ್ಗೆ ಹೋಗಿತ್ತು. ಚುನಾವಣಾ ಆಯೋಗ ಚುನಾವಣೆ ನಡೆಸುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು. ಹಿಂದುಳಿದವರಿಗೆ ಮೀಸಲಾತಿ ಮಾಡಬೇಕು. ಕಾಂತರಾಜ್ ಆಯೋಗದ ಮಾಹಿತಿ ಸರ್ಕಾರದ ಬಳಿ ಇದೆ. ಅದನ್ನು ಪರಿಗಣಿಸದೆ ಬೇರೆಯವರನ್ನು ನೇಮಕ ಮಾಡಿ ಸಬೂಬು ಹೇಳಲು ಮುಂದಾಗಿದೆ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ರಮ್ಯಾ ಟ್ವಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದೆಲ್ಲ ಸಣ್ಣ ವಿಚಾರ. ಯತ್ನಾಳ್ ಹೇಳಿಕೆ ಮುಂದೆ…