Subscribe to Updates
Get the latest creative news from FooBar about art, design and business.
- ಮಾ.18ರಂದು ಶ್ರೀ ಹುಲಿಯೂರಮ್ಮ ಜಾತ್ರಾ ರಥೋತ್ಸವ
- ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವು ಪ್ರಕರಣ: ಸ್ಥಳಕ್ಕೆ ಶಿರಾ ತಹಶೀಲ್ದಾರ್ ರೇಷ್ಮಾ ಕೆ.ಎಸ್. ಭೇಟಿ
- ಶುಲ್ಕ ಮರುಪಾವತಿ ಸೌಲಭ್ಯ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಮಾ.14ರಂದು ಕಾಲಜ್ಞಾನಿ ಶ್ರೀ ಯೋಗಿ ನಾರೇಯಣ ಯತೀಂದ್ರರ ಜಯಂತೋತ್ಸವ
- ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
- ಬೇಸಿಗೆ ಸಹಾಯವಾಣಿ ಸ್ಥಾಪನೆ
- ಐಸಿಎಸ್ ಎಸ್ ಆರ್ ಪ್ರಾಯೋಜಿತ ಸಂಶೋಧನ ಕಾರ್ಯಾಗಾರ ಆರಂಭ: ಸಂಶೋಧನೆ ಶ್ರೇಷ್ಠ ಕೆಲಸ: ಪ್ರೊ.ಎಂ.ವೆಂಕಟೇಶ್ವರಲು
- ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!
Author: admin
ತಿಪಟೂರು: ತಿಪಟೂರು ಕನ್ನಡ ರಕ್ಷಣಾ ವೇದಿಕೆ ಕಾರ್ಯಾಲಯದಲ್ಲಿ ಪ್ರಾರಂಭೋತ್ಸವ ನಡೆಯಿತು. ಬಳಿಕ ನೂರಾರು ಯುವ ಕಾರ್ಯಕರ್ತರನ್ನೊಳಗೊಂಡ ಕನ್ನಡ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಬೈಕ್ ರ್ಯಾಲಿ ನಡೆಸಿ, ತಾಲೂಕು ಕಚೇರಿ ಆವರಣದಲ್ಲಿ ಸೇರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ವಿರುದ್ಧ ಪ್ರತಿಭಟನೆ ನಡೆಸಿದರು. ಶಿವಸೇನೆಯ ಪುಂಡರು ಕನ್ನಡ ಧ್ವಜವನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆಯನ್ನು ಖಂಡಿಸಿ ಗ್ರೇಡ್ 2 ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಆರ್.ವಿಜಯ್ ಕುಮಾರ್, ಬೆಳಗಾವಿಯ ವಿಷಯದಲ್ಲಿ ಪದೇ ಪದೇ ಜಗಳ ತೆಗೆದು ಕನ್ನಡಿಗರ ಮತ್ತು ಮರಾಠಿಗರ ನಡುವೆ ಸಾಮರಸ್ಯ ಕದಡಿಸುವ ಕಿಡಿಗೇಡಿಗಳು ಶಿವಸೇನೆ, ಮಹಾರಾಷ್ಟ್ರ ಏಕೀಕರಣ ಸಮಿತಿ, ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ ಎಂಬ ಸಂಘಟನೆಗಳ ಹೆಸರಿನಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕ ಇವುಗಳ ವಿರುದ್ಧ ಕಿಡಿಗೇಡಿ ಕೃತ್ಯ ನಿರಂತರವಾಗಿ ನಡೆಸುತ್ತಿದ್ದರೂ, ಸಹ ನಮ್ಮ ಕರ್ನಾಟಕದ ರಾಜ್ಯಾಡಳಿತ ಬೆಳಗಾವಿ ಜಿಲ್ಲಾಡಳಿತಗಳು ಅವರ ಮೇಲೆ ಯಾವುದೇ ಕಠಿಣ ಕ್ರಮ…
ತಿಪಟೂರು: ನಗರದಲ್ಲಿನ ಶ್ರೀ ಶಂಕರ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ವತಿಯಿಂದ ವಾರ್ಷಿಕ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಮಾರ್ ಆಸ್ಪತ್ರೆ ಡಾಕ್ಟರ್ ಶ್ರೀಧರ್ ಅವರು, ಸಂಘ ಸಂಸ್ಥೆಗಳ ಕಾರ್ಯಕ್ರಮದಲ್ಲಿ ನಾವೆಲ್ಲರೂ ಒಂದೇ ರೀತಿಯಲ್ಲಿ ಒಟ್ಟಾಗಿ ಇರುತ್ತೇವೆ. ಸಹಕಾರ ಸಂಘದ ದೇಶದ ಆರ್ಥಿಕ ಸುಭದ್ರತೆ ಅಡಿಪಾಯವನ್ನು ದೊರಕಿಸಿಕೊಟ್ಟಿದೆ. ಗ್ರಾಮೀಣ ಪ್ರದೇಶದ ಆರ್ಥಿಕತೆಯನ್ನು ಹೊಂದಿರುವ ಭಾರತಕ್ಕೆ ಬ್ಯಾಂಕುಗಳ ಕೊಡುಗೆ ಅಪಾರವಾಗಿದೆ ಎಂದು ಮೆಚ್ಚುಗೆ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಶ್ರೀ ಶ್ರೀ ಕ್ಷೇತ್ರ ಸ್ವಾಮೀಜಿಯವರು, ಡಾಕ್ಟರ್ ಶ್ರೀಧರ್ ಅವರು ಸಹಕಾರ ಸಂಘದ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ನೀಲಿಹಳ್ಳಿ ಸಮೀಪ ಸೋಮವಾರ ರಾತ್ರಿ ನಡೆದಿದೆ. ಪಟ್ಟಣದ ಬೂರ್ಕನಹಟ್ಟಿಯ 25 ವರ್ಷ ವಯಸ್ಸಿನ ರಂಜಿತ್ ರಮೇಶ್ ಮೃತಪಟ್ಟವರಾಗಿದ್ದಾರೆ. ಸೋಮವಾರ ರಾತ್ರಿ ವೇಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಮಧುಗಿರಿ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 15ರಂದು ಪಶು ಆರೋಗ್ಯ ಮತ್ತು ಬರಡು ರಾಸುಗಳ ಚಿಕಿತ್ಸೆ ಶಿಬಿರವನ್ನು ನಡೆಸಲಾಯಿತು. ಈ ವೇಳೆ ಸಹಾಯಕ ನಿರ್ದೇಶಕರಾದ ಡಾ.ಜಿ.ಗಿರೀಶ್ ಬಾಬು ರೆಡ್ಡಿ, ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಅಶ್ವಥ್ ನಾರಾಯಣ, ಡಾ.ಗಂಗಾಧರ್ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಸರಗೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಂಜೇಗೌಡ ಗೆಲುವಿನ ನಗೆ ಬೀರಿದ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕು ಜೆಡಿಎಸ್ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಬಿಜೆಪಿ ಹಾಗೂ ಜೆಡಿಎಸ್ ನಡುವೆ ನಡೆದಿದ್ದ ನೇರ ಸ್ಪರ್ಧೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಂಜೇಗೌಡ ಐದು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಮಂಜೇಗೌಡ ಗೆಲುವು ಸಾಧಿಸುತ್ತಿದ್ದಂತೆಯೇ ಪಕ್ಷದ ಕಾರ್ಯಕರ್ತರು, ಸದಸ್ಯರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಜಿ.ಗೋಪಾಲಸ್ವಾಮಿ, ಹನು ಎಚ್.ಮಾ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಪ.ಪಂ. ಸದಸ್ಯ ಎಸ್.ಎಲ್ ರಾಜಣ್ಣ, ಚೈತ್ರ ಸ್ವಾಮಿ ಪಟ್ಟಣ ಪಂಚಾಯಿತಿ ಸದಸ್ಯೆ ಪ.ಪಂ. ಸದಸ್ಯೆ ಮಗನಾದ ಪುಟ್ಟ ಹನುಮಯ್ಯ, ಶ್ರೀನಿವಾಸ ಪ್ರಧಾನ ಕಾರ್ಯದರ್ಶಿ, ಕಲೀಲ್ ಅಲ್ಪಸಂಖ್ಯಾತರ ಅಧ್ಯಕ್ಷ ಸರಗೂರು, ಮಹದೇವಪ್ಪ ಕೆ.ಪಿ.ಉದಯಕುಮಾರ್, ಸಿದ್ದರಾಜು ಆರ್.ಸುರೇಂದ್ರ ಕುಮಾರ್ ನರಸೀಪುರ, ನಾಗರಾಜ್, ನಾಗೇಂದ್ರ, ನಾಗರಾಜ್ ಸರಗೂರು, ಮಹೇಂದ್ರ ಸಾಗರೆ, ಜಯರಾಮ, ಚೆನ್ನಪ್ಪ ಕಾಳೇಗೌಡರಹುಂಡಿ, ಆರ್ ಉದಯಕುಮಾರ್, ಉಮೇಶ್, ಪುಟ್ಟಸ್ವಾಮಿ, ಮಂಜು ಕಾಳೇಗೌಡರಹುಂಡಿ ಇದ್ದರು.…
ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ….. ಸ್ವಾಮಿ ವಿವೇಕಾನಂದ.. ಇಲ್ಲದಿದ್ದರೆ….. ಒಂದೇ ಕುಟುಂಬಗಳು, ಒಂದೇ ಮನೆತನಗಳು, ಒಂದೇ ರಕ್ತ ಸಂಬಂಧಗಳು, ಒಂದೇ ಹಣ ದಾಹಿಗಳು, ಒಂದೇ ಜಾತಿಯವರುಗಳು, ಒಂದೇ ಭ್ರಷ್ಟಾಚಾರಿಗಳು, ಒಂದೇ ಸುಳ್ಳುಗಾರರು, ಒಂದೇ ಮತಾಂಧರು, ಒಂದೇ ಮೌಢ್ಯದವರು, ಹೀಗೆ ಅವರುಗಳೇ ನಮ್ಮ ಬದುಕನ್ನು ನಿಯಂತ್ರಿಸುತ್ತಾರೆ. ನಾವು ಅವರ ಅಡಿಯಾಳುಗಳಾಗಿ ಇಡೀ ನಮ್ಮ ಜೀವನವನ್ನು ಅವರ ನೆರಳಿನಲ್ಲಿ ಕಳೆಯಬೇಕಾಗುತ್ತದೆ. ನಮ್ಮ ಸ್ವಾತಂತ್ರ್ಯ, ನಮ್ಮ ಚಿಂತನೆ, ನಮ್ಮ ಕ್ರಿಯಾತ್ಮಕತೆಗೆ ಬೆಲೆಯೇ ಇರುವುದಿಲ್ಲ. ಕರ್ನಾಟಕದ ವಿಧಾನಸಭೆಯ ಮೇಲ್ಮನೆ ಕೆಳಮನೆಗಳಿಗೆ ಆಯ್ಕೆಯಾಗುವ ಜನ ಪ್ರತಿನಿಧಿಗಳ ಗುಣಮಟ್ಟ ನೋಡಿದರೆ ಮತದಾರರ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ಉಂಟಾಗುತ್ತದೆ. ಅದಕ್ಕಾಗಿಯೇ ಸ್ವಾಮಿ ವಿವೇಕಾನಂದರ ಮಾತಿನಂತೆ ನಾವು ಮಾತ್ರವಲ್ಲ ಇತರರನ್ನು ಎಚ್ಚರಗೊಳಿಸುವ ಜವಾಬ್ದಾರಿ ನಮ್ಮದಾಗಬೇಕು. ಅದು ಯಾವ ನಿಟ್ಟಿನಲ್ಲಿ ಇರಬೇಕೆಂದರೆ…….. ಒಬ್ಬ ಅಧಿಕಾರಿಗೆ ಲಂಚದ ಹಣ ಇನ್ನೊಬ್ಬರ ಬೆವರು – ಎಂಜಲು ಎನಿಸಬೇಕು. ಶ್ರೀಮಂತರ…
ನವದೆಹಲಿ: ದೇಶದ ಪ್ರತಿಯೊಬ್ಬ ನಾಗರಿಕ ಮೂಲಭೂತ ಹಕ್ಕುಗಳನ್ನು ಪಡೆಯಲು ಅರ್ಹ ಎಂದು ಹೇಳಿರುವ ಸುಪ್ರೀಂಕೋರ್ಟ್, ಲೈಂಗಿಕ ಕಾರ್ಯಕರ್ತೆರಿಗೆ ಆಧಾರ್ ಕಾರ್ಡ್, ಪಡಿತರ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗ ನಡೆಸುವಂತೆ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೋವಿಡ್-19 ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಸಿಲುಕಿರುವ ಲೈಂಗಿಕ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತಾದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠ, ವಿಚಾರಣೆ ನಡೆಸಿದ ಪೀಠವು, ಗುರುತಿನ ಪುರಾವೆ ಇಲ್ಲದಿದ್ದರೂ ಲೈಂಗಿಕ ಕಾರ್ಯಕರ್ತೆಯರಿಗೆ ಒಣ ಪಡಿತರವನ್ನು ನೀಡಬೇಕು ನಿರ್ದೇಶನ ನೀಡಿದೆ. ಲೈಂಗಿಕ ಕಾರ್ಯಕರ್ತರಿಗೆ ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿ ನೀಡಲು ಈ ಹಿಂದೆಯೂ ನಿರ್ದೇಶನ ನೀಡಲಾಗಿತ್ತು. ಆದರೆ, ಈವರೆಗೂ ಆದೇಶ ಅನುಷ್ಠಾನಕ್ಕೆ ಬಂದಿಲ್ಲ. ಇದರ ಹಿಂದೆ ಯಾವುದೇ ಕಾರಣಗಳೂ ಇಲ್ಲ ದೇಶದ ಎಲ್ಲಾ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ…
ನಂಜನಗೂಡು: ನಗರದ ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಐದು ತಿಂಗಳ ಗರ್ಭಿಣಿ ಹೆಂಡತಿಯನ್ನು ಗಂಡನೇ ನದಿಗೆ ತಳ್ಳಿ, ಮುಳುಗಿಸಿ ಹತ್ಯೆ ನಡೆದಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ ಪೊಲೀಸರು ತಿಳಿಸಿದ್ದಾರೆ. ತಾಲ್ಲೂಕಿನ ಮುದ್ದಹಳ್ಳಿ ಗ್ರಾಮದ ದೇವಿಕಾ (35) ಮೃತಪಟ್ಟವರು. ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದ ಪುಟ್ಟಸಿದ್ದಯ್ಯನ ಮಗಳಾದ ದೇವಿಕಾ ಅವರನ್ನು ಐದು ವರ್ಷಗಳ ಹಿಂದೆ ಮುದ್ದಹಳ್ಳಿಯ ರಾಜೇಶ್ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ರಾಜೇಶ್ ನದಿಯ ಬಳಿ ಹೆಂಡತಿಯನ್ನು ಕರೆದೊಯ್ದು ನದಿಗೆ ತಳ್ಳಿ, ಮುಳುಗಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ದೇವಿಕಾ ತಂದೆ ನೀಡಿರುವ ದೂರಿನನ್ವಯ ಆರೋಪಿ ರಾಜೇಶ್ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿ.ಪಿ.ಐ ಲಕ್ಷ್ಮೀಕಾಂತ್ ತಳವಾರ್ ತಿಳಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿ 12 ಹಾಗೂ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ ನಿಂದ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿರುವ ಅಭ್ಯರ್ಥಿಗಳ ವಿವರ ಹೀಗಿದೆ. ಬಿಜೆಪಿ = 12 ಬೆಂಗಳೂರು ನಗರ – ಗೋಪಿನಾಥ ರೆಡ್ಡಿ ಮಡಿಕೇರಿ – ಸುಜಾ ಕುಶಾಲಪ್ಪ ಶಿವಮೊಗ್ಗ – ಡಿ.ಎಸ್.ಅರುಣ್ ಚಿತ್ರದುರ್ಗ – ಕೆಎಸ್ ನವೀನ್ ಬಳ್ಳಾರಿ – ವೈಎಂ ಸತೀಶ್ ಉತ್ತರ ಕನ್ನಡ – ಗಣಪತಿ ಉಳ್ವೇಕರ್ ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್ ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್ ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ ಕಾಂಗ್ರೆಸ್ = 11 ಬೀದರ್ – ಭೀಮರಾವ್ ಬಿ ಪಾಟೀಲ್…
ತಿಪಟೂರು: ರಾಜೇಂದ್ರರವರು ಅವಕಾಶವಾದಿ ರಾಜಕಾರಣ ಮಾಡದೆ, ಜನರ ಮಧ್ಯದಲ್ಲಿದ್ದುಕೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ಕಷ್ಟ ಸುಖಗಳಿಗೆ ಸ್ಪಂದಿಸಿದ್ದರಿಂದಾಗಿ ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು, ಬೇರೆ ಪಕ್ಷಗಳ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ, ಪ್ರಾಮಾಣಿಕವಾಗಿ ಅಭಿವೃದ್ಧಿಯ ಕೆಲಸಗಳಿಗೆ ಮನ್ನಣೆ ಕೊಟ್ಟು ರಾಜೇಂದ್ರರವರನ್ನು ಗೆಲ್ಲಿಸಿದ್ದಾರೆ ಎಂದು ಎಪಿಎಂಸಿ ಅಧ್ಯಕ್ಷರಾದ ಕುಂದೂರು ರವಿ ಹೇಳಿದರು. ಆರ್.ರಾಜೇಂದ್ರ ಅವರ ಗೆಲುವಿನ ಹಿನ್ನೆಲೆಯಲ್ಲಿ ಕೆ.ಬಿ. ಕ್ರಾಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ ವೇಳೆ ಮಾತನಾಡಿದ ಅವರು, ಈ ಗೆಲುವು ಪ್ರಾಮಾಣಿಕ ಹಾಗೂ ನಿಷ್ಪಕ್ಷವಾದ ರಾಜಕಾರಣಕ್ಕೆ ಹಾಗೂ ಪ್ರಜಾಪ್ರಭುತ್ವದ ಆಶಯಕ್ಕಾನುಗುಣವಾಗಿ ಸಂದ ಗೆಲುವು ಎಂದರು. ರಾಜೇಂದ್ರರ ಗೆಲುವಿಗೆ ಜಿಲ್ಲೆಯ ಎಲ್ಲಾ ಹಾಲಿ, ಮಾಜಿ ಶಾಸಕರು, ಸಂಸತ್ ಸದಸ್ಯರು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ಈ ಗೆಲುವು ಎಲ್ಲರಿಗೂ ಸಲ್ಲಬೇಕು ಎಂದು ಅವರು ಇದೇ ವೇಳೆ ಹೇಳಿದರು. ಕಾಂಗ್ರೆಸ್ ಮುಖಂಡರಾದ ಕುಂದೂರು ಮುರಳಿ, ಕುಂದೂರು…