Subscribe to Updates
Get the latest creative news from FooBar about art, design and business.
- ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ: ಡಾ.ಕರಿಯಣ್ಣ ಬಿ.
- ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
- ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
- ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಜುಲೈ 1: ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
- ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
- ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
- ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
Author: admin
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬಿ.ಹೊಸಳ್ಳಿಯ ಎಸ್.ಬಿ.ಕೆ. ಕ್ರಿಕೆಟರ್ಸ್ ತಂಡದ ವತಿಯಿಂದ ಎರಡನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆ ನಡೆಯಿತು. ಸಮಾಜ ಸೇವಕ ಬಿ.ಆರ್.ಶಶಿಧರ್, ಕೆ ಎಂಎಫ್ ನಿರ್ದೇಶಕ ಪ್ರಕಾಶ್ ಮತ್ತು ಅಭಿ ಡೆಂಟಲ್ ಕ್ಲಿನಿಕ್ ನ ಡಾ.ಬಸವ ಪ್ರಸಾದ್ ಕಾರ್ಯಕ್ರಮವನ್ನು ಬ್ಯಾಟ್ ಬೀಸುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಬಳುವನೇರಲು ಗ್ರಾ.ಪಂ. ಅಧ್ಯಕ್ಷೆ ಸುಶೀಲಮ್ಮ, ಹಾಲ್ಕುರ್ಕೆ ಗ್ರಾ.ಪಂ. ಅಧ್ಯಕ್ಷ ಉಮಾಮಹೇಶ್, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ. ಕುಮಾರ್, ಮತ್ತಿಹಳ್ಳಿ ಗ್ರಾಪಂ ಸದಸ್ಯ ಹರೀಶ್ ಗೌಡ, ಪ್ರಮೀಳಾ ಅಡವೀಶ್, ಮುಖಂಡರಾದ ಗಂಗಾಧರ್, ಚಿದಾನಂದ್ ಮತ್ತು ಶಂಕರಲಿಂಗಪ್ಪ ಸೇರಿದಂತೆ ಎಸ್.ಬಿ.ಕೆ. ಕ್ರಿಕೆಟರ್ಸ್ ನ ಪದಾಧಿಕಾರಿಗಳು, ಗ್ರಾಮದ ಮುಖಂಡರುಗಳು ಹಾಗೂ ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಗುಬ್ಬಿ: ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಚನ್ನಬಸವೇಶ್ವರ ಸ್ವಾಮಿ ಅವರ ರಥೋತ್ಸವದ ವೇಳೆ ದಾಸೋಹದ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಜಾಪ್ರಗತಿ ಪತ್ರಿಕೆ ತಾಲೂಕು ವರದಿಗಾರರಾದ ರಾಜೇಶ್ ಗುಬ್ಬಿ ಅವರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಸ್ಥಳೀಯ ವ್ಯಕ್ತಿ ವಿಶ್ವನಾಥ್ ಎಂಬಾತ ವರದಿಗಾರ ರಾಜೇಶ್ ಗುಬ್ಬಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಪರಿಣಾಮವಾಗಿ ಅವರ ಕೈಗಳಿಗೆ ಹೆಚ್ಚು ಗಾಯವಾಗಿದೆ. ಪತ್ರಕರ್ತ ರಾಜೇಶ್ ಗುಬ್ಬಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಿಸಲಾಗಿದೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಜಿಲ್ಲೆ,ತುರುವೇಕೆರೆ ತಾಲೋಕಿನ ಮಾಯಸಂದ್ರ ,ಕೊಡಿನಾಗಸಂದ್ರ ಟಿ.ಬಿ.ಕ್ರಾಸ್ ನಲ್ಲಿ, ಮಾರ್ಗ ಮದ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 151 ಎ ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,. ಪರಿಣಾಮವಾಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಡಸ್ಟರ್ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಕಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ. ಗಾಯಾಳುವನ್ನ, ಶ್ರೀ ಆದಿ ಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮಾಯಸಂದ್ರ ಹೋಬಳಿ ಹರಳಹಳ್ಳಿ ಗ್ರಾಮದ ಮಾಯಣ್ಣಗೌಡ ಮತ್ತು ಗಾಯಾಳು ದಂಡಿನಶಿವರ ಹೋಬಳಿ ಹರಿಕಾರನ ಹಳ್ಳಿ ವಾಸಿ ದಯಾನಂದ್ ಎಂದು ಗುರುತಿಸಲಾಗಿದೆ. ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಅಪಘಾತದ ಬಳಿಕ ಕಾರು ಡ್ರೈವರ್ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ತುರುವೇಕೆರೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು…
ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಹೋಬಳಿಯ ವೆಂಕಟೇ ಗೌಡನಪಾಳ್ಯ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಸ್ಪರ್ಶಿಸಿ ಗುಡಿಸಲು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ ವೆಂಕಟೇಗೌಡನ ಪಾಳ್ಯ ಲಲಿತಮ್ಮ ಎಂಬುವರಿಗೆ ಸೇರಿದ ವಾಸದ ಗುಡಿಸಲಾಗಿದ್ದು ಗುಡಿಸಿಲಿನಲ್ಲಿ ಸಂಗ್ರಹಿಸಲಾಗಿದ್ದ ದವಸ ಧಾನ್ಯಗಳು ಗೃಹ ಉಪಯೋಗಿ ವಸ್ತುಗಳು ಮತ್ತು ತೆಂಗು ಸೇರಿ ಸುಮಾರು ಎರಡು ಲಕ್ಷಕ್ಕೂ ಅಧಿಕ ವೆಚ್ಚದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ . ಘಟನಾ ಸ್ಥಳಕ್ಕೆ ಯಾವುದೇ ಇಲಾಖಾ ಅಧಿಕಾರಿಗಳು ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವೆಂಕಟೇಗೌಡನ ಪಾಳ್ಯ ನಿವಾಸಿಗಳು ಹಾಗೂ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ವರದಿ: ಡಿ.ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಜಮಖಂಡಿ: ತಾಲೂಕಿನ ಮಧುರಖಂಡಿ ಗ್ರಾಮದ ಸಾಯಿ ಸಂಕಲ್ಪ ಕನ್ನಡ , ಆಂಗ್ಲ ಮಾಧ್ಯಮ ಹಿರಿಯ , ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಎಂ.ಎಂ.ಮೂಡಲಗಿ ಗುರುಗಳು ಮಾತನಾಡಿ, ಇಂದಿನ ದಿನಮಾನಗಳಲ್ಲಿ ಕ್ರೀಡೆಗಳಿಂದ ದೈಹಿಕ, ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ, ಯೋಗಾಸನಗಳ ಅವಶ್ಯಕತೆ ಇದೆ . ಆದಕಾರಣ ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಕೊರೊನಾ ಎಂಬ ಸಾಂಕ್ರಾಮಿಕ ರೋಗದಿಂದ ದೇಶದ ಜನರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇದ್ದರಿಂದ ಹೊರಬರಬೇಕಾದರೆ ಕ್ರೀಡೆ ಹಾಗೂ ಯೋಗಾಸನದಂತಹ ದೈಹಿಕ ಶ್ರಮದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು. ವಾರ್ಷಿಕ ಕ್ರೀಡಾಕೂಟದಲ್ಲಿ 1 ರಿಂದ 5ನೇ ತರಗತಿ ಮಕ್ಕಳಿಗೆ ವಿಶೇಷ ಆಟಗಳನ್ನು ಆಡಿಸಿ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಮಹತ್ವವನ್ನು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಬಿ.ಎಸ್.ಮಲಾಬಾದಿ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಆರ್.ಜಿ.ಮೋರಗಾಂವಕರ ,ಶಿಕ್ಷಕರ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ: ಅಶೋಕ ಗುರಕೇರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಚರ್ಚ್ ರಸ್ತೆಯಲ್ಲಿ ಹಿರಿಯೂರು ತಾಲ್ಲೂಕಿನ ಎಸ್ ಆರ್ ಪಿ ಕಾಲೇಜಿಗೆ ಸೇರಿದ ವಾಹನ(ಕೆ ಎ ೧೬ ಡಿ ೪೯೦೪) ಕೆಟ್ಟು ಹೋಗಿದ್ದು, ಪರಿಣಾಮವಾಗಿ ರಸ್ತೆ ಸಂಚಾರಕ್ಕೆ ಕೆಲ ಕಾಲ ಅಡ್ಡಿಯುಂಟಾದ ಘಟನೆ ನಡೆಯಿತು. ವಾಹನ ಕೈ ಕೊಟ್ಟ ಬೆನ್ನಲ್ಲೇ ಎಸ್ ಆರ್ ಪಿ ಕಾಲೇಜಿನ ವ್ಯವಸ್ಥಾಪಕ ವಿದ್ಯಾರ್ಥಿಗಳ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿದರು. ಇನ್ನೂ ವಾಹನ ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಚಾಲಕರು ಪರದಾಡುವಂತಾಗಿತ್ತು. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು ತಮಗೆ ನಿರಾಸೆ ಮೂಡಿಸಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಹೇಳಿದರು. ನಗರದ ಹೆಗ್ಗೆರೆಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮತ್ತು ಪಕ್ಷ ಪ್ರಸ್ತುತ ನಡೆದ ಚುನಾವಣೆಯಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಿದ್ದು ಅಂತಿಮವಾಗಿ ಪಕ್ಷಕ್ಕೆ ಹಿನ್ನೆಡೆಯಾಗಿದ್ದು ಅದಕ್ಕೆ ಕಾರಣಗಳನ್ನು ಹುಡುಕಬೇಕಿದೆ ಎಂದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಗಿಂತಲೂ ಪ್ರಿಯಾಂಕ ಗಾಂಧಿಯವರು ಹೆಚ್ಚಿನ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದರು, ಜನರನ್ನು ತಲುಪುವ ಪ್ರಯತ್ನ ಮಾಡಿದರು ಆದರೂ ಮತಗಳು ಬೇರೆಯವರ ಪಾಲಾಗಿವೆ. ದೇಶದಲ್ಲಿ ಸಾಮಾನ್ಯ ಜನರ ಬದುಕಿಗೆ ತೊಂದರೆಯಾಗುತ್ತಿದೆ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿದೆ ಎನ್ನುವ ವಾತಾವರಣವಿದ್ದರೂ ಜನ ಬಿಜೆಪಿಗೆ ಮತ ಹಾಕುತ್ತಾರೆ ಎಂದರೆ ಏನೋ ಕಾರಣ ಇರಬಹುದು ಎನ್ನುವ ಅನುಮಾನ ವ್ಯಕ್ತಪಡಿಸಿದರು. ದೇಶದ ಅಭಿವೃದ್ಧಿ ದೃಷ್ಠಿಯಿಂದ 2024ರ ಲೋಕಸಭಾ ಚುನಾವಣೆ ಅತ್ಯಂತ ಪ್ರಮುಖವಾದುದ್ದಾಗಿದ್ದು ಅಷ್ಟರೊಳಗೆ ಕಾಂಗ್ರೆಸ್ ಪಕ್ಷವನ್ನು ದೇಶದಲ್ಲಿ ಸದೃಢಗೊಳಿಸಬೇಕು. ಇ.ವಿ.ಎಂ. ಬಗ್ಗೆ ತಮಗೇ ಮೊದಲಿನಿಂದಲೂ ಅನುಮಾನ ಇದ್ದು…
ಸಿರಾ: ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಕಾಳಜಿ ಶಿಕ್ಷಕರಿಗೂ ಇರುತ್ತದೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ವರಲಕ್ಷ್ಮೀ ರಾಜಣ್ಣ ಹೇಳಿದರು. ತಾಲ್ಲೂಕಿನ ಹೊಸಬಿಜ್ಜನಬೆಳ್ಳ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಹೆಚ್ಚಿನ ಸಮಯ ಶಿಕ್ಷಕ ರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು. ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ಅವರು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಿ ಆರ್ ಪಿ ಕರುಣಾಕರ್ , ಈ ಹಿಂದೆ ಮುಖ್ಯ ಶಿಕ್ಷಕರಾಗಿದ್ದ ಟಿ.ಜಿ ಗಂಗಪ್ಪ ಜಯಣ್ಣ, ಆಲಿ ಮುಖ್ಯ ಶಿಕ್ಷಕರಾದ ಬಿ.ಆರ್. ರಂಗನಾಥ, ಶಿಕ್ಷಕಿಯಾದ ಗಿರಿಜಾ ಟಿ, ಎಸ್ ಡಿ ಎಮ್ ಸಿ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ರಂಗಮ್ಮ, ಗ್ರಾಮದ ಪಟೇಲರಾದ…
ಹಿರಿಯೂರು: ಒಮಿಕ್ರೋನ್ ಹಾಗೂ ಕೊರೊನಾ ಮಹಾಮಾರಿ ಕಾಯಿಲೆಯಿಂದ ಕಳೆದರೆಡು ವರ್ಷಗಳಿಂದ ವ್ಯಾಪಾರಿಗಳು ನಿರಂತರ ನಷ್ಟ ಅನುಭವಿಸಿದ್ದಾರೆ. ಈ ನಡುವೆ ಹಿರಿಯೂರು ನಗರದಲ್ಲಿ ನಡೆಯುತ್ತಿದ್ದ ಸಂತೆ ಪುನಃ ಆರಂಭವಾದರೂ ವ್ಯಾಪಾರವಿಲ್ಲದೇ ಜನರು ಕಂಗಾಲಾಗಿದ್ದಾರೆ. ಬುಧವಾರ ಟಿ.ಬಿ.ಸರ್ಕಲ್ ನಲ್ಲಿ ಹಾಗೂ ಶನಿವಾರದಂದು ಹಿರಿಯೂರು ನಗರದಲ್ಲಿ ನಡೆಯುತ್ತದ್ದ ಸಂತೆ ಪುನಃ ಆರಂಭಗೊಂಡಿದೆ. ಆದರೆ, ಹಿರಿಯೂರು ನಗರದ ಸಂತೆ ಮೈದಾನದಲ್ಲಿ ವ್ಯಾಪಾರಸ್ಥರು ವ್ಯಾಪಾರವಿಲ್ಲದೇ ಕುಳಿತಿರುವುದು ಕಂಡು ಬಂದಿದೆ. ಶನಿವಾರ ಹಾಗೂ ಬುಧವಾರದಂದು ನಡೆಯುತ್ತಿದ್ದಂತಹ ವಾರದ ಸಂತೆ ಕಳೆದ ಎರಡು ವರ್ಷಗಳಿಂದ ಕೊರೊನಾ ಹಾಗೂ ಓಮಿಕ್ರೋನ್ ಎಂಬ ಸಾಂಕ್ರಾಮಿಕ ಕಾಯಿಲೆಗಳಿಂದ ಸ್ಥಗಿತಗೊಂಡಿತ್ತು . ಇದೀಗ ವಾರದ ಸಾಂಕ್ರಾಮಿಕ ಕಾಯಿಲೆಯು ಇದೀಗ ನಿಯಂತ್ರಣಕ್ಕೆ ಬಂದಿರುವುದರಿಂದ ಕಳೆದ ಶನಿವಾರದಿಂದ ಹಿರಿಯೂರು ನಗರಸಭೆ ಆಡಳಿತದ ಆದೇಶದಂತೆ ವ್ಯಾಪಾರಸ್ಥರು ಶನಿವಾರ ಹಾಗೂ ಬುಧವಾರದ ಸಂತೆಯಲ್ಲಿ ವ್ಯಾಪಾರ ಆರಂಭ ಮಾಡಿದ್ದರು. ಕಳೆದ ವಾರವೂ ಇದೇ ಸ್ಥಿತಿ ಇತ್ತು. ಈ ವಾರ ಕೂಡ ಇದೇ ಸ್ಥಿತಿ ಮುಂದುವರಿದಿದೆ. ಸಂತೆಯ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಇಲ್ಲದ ಕಾರಣ…
ತುಮಕೂರು: ಕಾರುಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಹೊರವಲಯದ ನಾಮದಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟವರು ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿ ಮೂಲದ ದಂಪತಿ ಎಂದು ತಿಳಿದು ಬಂದಿದೆ. ಇವರು ಓಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಅವರಿಗೆ ಸೇರಿದ ಕಾರು ಹಾಗೂ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಮಂಜು ಭಾರ್ಗವ್ ಅವರಿಗೂ ತೀವ್ರವಾಗಿ ಗಾಯವಾಗಿದ್ದು, ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಅತೀ ವೇಗದಲ್ಲಿದ್ದ ಕಾರುಗಳು ನಿಯಂತ್ರಣ ಕಳೆದುಕೊಂಡು ಮುಖಾಮುಖಿಯಾಗಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರಗಿಸಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…