Subscribe to Updates
Get the latest creative news from FooBar about art, design and business.
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
- ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
- ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
- ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
- ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
- ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
- ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
Author: admin
ನಮ್ಮರಾಜ್ಯಕ್ಕೆ ಬರಬೇಕಿರುವ ಜಿಎಸ್ಟಿ ಪಾಲನ್ನು ಕೊಡದಿದ್ದರೆ ಕೇಂದ್ರ ಸರ್ಕಾರಕ್ಕೆ ಜಿಎಸ್ಟಿ ಪಾವತಿ ಮಾಡುವುದನ್ನೇ ನಿಲ್ಲಿಸಬೇಕಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಒಂದೋ ಜಿಎಸ್ಟಿ ಬಾಕಿಯನ್ನು ನೀಡಬೇಕು. ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಯಬೇಕು ಎಂದು ಮಮತಾ ಆಗ್ರಹಿಸಿದ್ದಾರೆ. ನರೇಗಾ ಯೋಜನೆಯ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ ಸಿಎಂ ಇದನ್ನು ವಿರೋಧಿಸಿ ಬುಡಕಟ್ಟು ಮಂದಿ ಬೀದಿಗೆ ಇಳಿಯಬೇಕು ಎಂದು ಹೇಳಿದ್ದಾರೆ. ನ್ಯಾಯಬದ್ಧವಾಗಿ ರಾಜ್ಯ ಸರ್ಕಾರಕ್ಕೆ ಬರಬೇಕಿರುವ ಪಾಲು ಪಡೆಯಲು ನಾವು ಕೇಂದ್ರ ಸರ್ಕಾರದ ಮುಂದೆ ಭಿಕ್ಷೆ ಬೇಡುವುದಿಲ್ಲ, ನರೇಗಾ ಯೋಜನೆಯ ಹಣ ಬಿಡುಗಡೆ ಮಾಡುತ್ತಿಲ್ಲ. ನೀಡಬೇಕಿರುವ ಹಣ ನೀಡದಿದ್ದರೆ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಕಿಡಿ ಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು ನಗರದಲ್ಲಿ ಬೆಸ್ಕಾಂ ಗ್ರಾಹಕರು ಇನ್ಮುಂದೆ ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡುವಂತಿಲ್ಲ. ಹಾಗೆ ಮಾಡಿದರೆ ವಿದ್ಯುತ್ ಸಂಪರ್ಕದ ಲೈಸೆನ್ಸ್ ರದ್ದು ಮಾಡಲು ಬೆಸ್ಕಾಂ ಮುಂದಾಗಿದೆ. ಮೂರು ತಿಂಗಳು ವಿದ್ಯುತ್ ಬಿಲ್ ಕಟ್ಟಿಲ್ಲವೆಂದರೆ ಸಿಬ್ಬಂದಿ ಕರೆಂಟ್ ಫ್ಯೂಸ್ ತೆಗೆಯುವ ಬದಲು ಮನೆಯ ವಿದ್ಯುತ್ ಸಂಪರ್ಕದ ಲೈಸೆನ್ಸ್ ನನ್ನೇ ರದ್ದು ಮಾಡ್ತಾರೆ. ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಂಡರೆ ಪುನಃ ಅರ್ಜಿ ಸಲ್ಲಿಸಿ ಹೊಸ ಕನೆಕ್ಷನ್ ತೆಗೆದುಕೊಳ್ಳಲೇಬೇಕು. ವಿದ್ಯುತ್ ಬಿಲ್ ಪಾವತಿಸುವಲ್ಲಿ ವಿಳಂಬ ಮಾಡಿದ್ರೆ ಕರೆಂಟ್ ಇಲ್ಲದೆ ಕತ್ತಲಲ್ಲೇ ಜೀವನ ನಡೆಸುವಂತಹ ಸ್ಥಿತಿ ಉಂಟಾಗಲಿದೆ. ತಿಂಗಳಿಗೆ ಸರಿಯಾಗಿ ಬಿಲ್ ಪಾವತಿಸದೆ ನಿರ್ಲಕ್ಷ್ಯ ತೋರುವರರ ವಿರುದ್ಧ ಬೆಸ್ಕಾಂ ಈ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಈ ಬಗ್ಗೆ ಬೆಸ್ಕಾಂ ಎಂ.ಡಿ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಳಿಸುವಂತಹ ತೊಂದರೆ ಬೇಡ ಅಂದರೆ ಸರಿಯಾದ ಟೈಮ್ ಗೆ ವಿದ್ಯುತ್ ಬಿಲ್ ಕಟ್ಟಿ ಎಂದು ಗ್ರಾಹಕರಿಗೆ ಮನವಿ ಮಾಡಿದ್ದಾರೆ. ಬೆಸ್ಕಾಂ ಎಂಡಿಯ…
ನಾವು ಪ್ರತಿಯೊಬ್ಬರ ನಂಬಿಕೆಯನ್ನು ಗೌರವಿಸಬೇಕು,ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂ. ವೈವಿಧ್ಯತೆಯಲ್ಲಿ ಏಕತೆ ಭಾರತದ ಪುರಾತನ ವೈಶಿಷ್ಟ್ಯ. ಎಲ್ಲಾ ಭಾರತೀಯರ ಡಿಎನ್ಎ ಒಂದೇ ಆಗಿರುತ್ತದೆ. ಅವರ ಆಚರಣೆಗಳನ್ನು ಯಾರೂ ಬದಲಾಯಿಸುವ ಅಗತ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಛರಿಸಿದ್ದಾರೆ. ಛತ್ತೀಸ್ಗಢದಲ್ಲಿ ಮಾತನಾಡಿದ ಅವರು, ಎಲ್ಲರನ್ನು ತನ್ನೊಟ್ಟಿಗೆ ಕರೆದುಕೊಂಡು ಹೋಗುವುದನ್ನು ನಂಬುವ ವಿಶ್ವದ ಏಕೈಕ ಕಲ್ಪನೆ ಹಿಂದುತ್ವ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳು ಎಂದು ನಾವು 1925ರಿಂದಲೂ ಹೇಳುತ್ತಿದ್ದೇವೆ. ಭಾರತವನ್ನು ಮಾತೃಭೂಮಿ ಎಂದು ಪರಿಗಣಿಸುವವರು ವಿವಿಧತೆಯಲ್ಲಿ ಏಕತೆಯ ಸಂಸ್ಕೃತಿಯೊಂದಿಗೆ ಬದುಕಲು ಬಯಸುತ್ತಾರೆ. ಅವರು ಯಾವುದೇ ಧರ್ಮ, ಸಂಸ್ಕೃತಿ, ಭಾಷೆ ಮತ್ತು ಆಹಾರ ಪದ್ಧತಿ ಮತ್ತು ಸಿದ್ಧಾಂತವನ್ನು ಅನುಸರಿಸಿದರೂ ಅವರು ಹಿಂದೂಗಳೇ ಆಗಿರುತ್ತಾರೆ ಎಂದು ಹೇಳಿದ್ದಾರೆ. ಎಲ್ಲಾ ಭಾರತೀಯರ ಡಿಎನ್ಎ ಒಂದೇ ಆಗಿರುತ್ತದೆ. ವೈವಿಧ್ಯತೆಗಳ ಜೊತೆಯಲ್ಲೇ ನಾವೆಲ್ಲರೂ ಒಟ್ಟಿಗೇ ಇದ್ದೇವೆ. ಪ್ರತಿಯೊಬ್ಬರೂ ತಮ್ಮ ನಮ್ಮ ಪೂರ್ವಜರು ನಂಬಿಕೆ ಮತ್ತು ಆಚರಣೆಗಳಿಗೆ ಅಂಟಿಕೊಳ್ಳಬೇಕು, ಇತರರ ನಂಬಿಕೆಯನ್ನು ಪರಿವರ್ತಿಸಲು ಪ್ರಯತ್ನಿಸಬಾರದು ಎಂದು ಕಲಿಸಿದರು. ಅದರಂತೆ ನಾವು…
ರಷ್ಯಾ ಸೇನಾಪಡೆಗಳು ಉಕ್ರೇನಿನ ಇಂಧನ ಮೂಲ ಸ್ಥಾವರಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದು, ಒಂದೇ ಬಾರಿಗೆ 100 ಕ್ಷಿಪಣಿಗಳನ್ನು ಉಡಾಯಿಸಿವೆ. ಈ ಭೀಕರ ದಾಳಿಯಿಂದ ಉಕ್ರೇನಿನ ಹಲವೆಡೆ ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ. ಈ ಹಿಂದೆ ಅಕ್ಟೋಬರ್ 10 ಅಂದು ನಡೆಸಿದ ದಾಳಿಗಿಂತಲೂ ಈ ದಾಳಿ ಮಾರಕವಾಗಿದೆ ಎಂದು ಉಕ್ರೇನ್ ವಾಯುಪಡೆಯ ವಕ್ತಾರ ಯೂರಿ ಇಗ್ನಾಟ್ ತಿಳಿಸಿದ್ದಾರೆ. ರಷ್ಯಾ ಪಡೆಗಳು ಉಕ್ರೇನಿನ ಕೆಲವು ಕ್ಷಿಪಣಿಗಳನ್ನು ಹೊಡೆದುರುಳಿದೆ. ನಿರ್ಣಾಯಕ ಮೂಲ ಸೌರ್ಯಕಗಳನ್ನು ಧ್ವಂಸಗೊಳಿಸುತ್ತಿವೆ. ಈ ಬಗ್ಗೆ ನಿಖರ ಮಾಹಿತಿಯನ್ನು ಉಕ್ರೇನ್ ಸೇನೆ ಅಥವಾ ಸಚಿವಾಲಯ ಇನ್ನಷ್ಟೇ ನೀಡಬೇಕಿದೆ. ಉಕ್ರೇನ್ ಈ ಹಿಂದೆ ರಷ್ಯಾದ ಕ್ರಿಮಿಯಾ ಸೇತುವೆಯನ್ನು( ಧ್ವಂಸಗೊಳಿಸಿದ ನಂತರ ಪ್ರತೀಕಾರವಾಗಿ ರಷ್ಯಾ ದಾಳಿ ನಡೆಸಿತು. ನಿರಂತರ 75 ಕ್ಷಿಪಣಿಗಳು, 5 ಡೆಡ್ಲಿ ರಾಕೆಟ್ಗಳನ್ನು ಉಕ್ರೇನ್ ಮೇಲೆ ಉಡಾಯಿಸಿತ್ತು.. ಇದಾದ ಒಂದು ವಾರದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ವಿರುದ್ಧ ಕ್ಷಿಪಣಿ ದಾಳಿ ಅಂತ್ಯಗೊಳಿಸುವುದಾಗಿ ಹೇಳಿದ್ದರು. ಮತ್ತೆ 84 ಡೆಡ್ಲಿ ಡ್ರೋನ್ಗಳಿಂದ ದಾಳಿ ನಡೆಸಿತ್ತು. ಅದಕ್ಕಾಗಿ ಇರಾನಿ…
ಬೆಳಗಾವಿ : ಕೊಟ್ಟ ಹಣ ವಾಪಸ್ ಕೊಡದೇ ತಪ್ಪಿಸಿಕೊಳ್ಳಲು ಅಜ್ಜಿಯ ಪ್ರಾಣವನ್ನೇ ತೆಗೆದ ಘಟನೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ್ 6 ರಂದು ನಡೆದಿದ್ದ ಈ ಕೊಲೆಯ ಹಿಂದಿನ ರಹಸ್ಯ ಈಗ ಬಯಲಾಗಿದೆ. ಮಲ್ಲವ್ವ ಕಮತೆ ಕೊಲೆಯಾದ ವೃದ್ಧೆ. ಶಂಕರ್ ರಾಮಪ್ಪ ಪಾಟೀಲ್, ಗೆಳೆಯ ಮಹೇಶ ಸದಾಶಿವ ಕಬಾಡಗೆ ಬಂಧಿತ ಆರೋಪಿಗಳು. ಶಂಕರ ಪಾಟೀಲ್ ನಿಗೆ ವೃದ್ಧೆ ಮಲ್ಲವ್ವ ಬಳಿ 50 ಸಾವಿರ ರೂ. ಸಾಲ ಪಡದಿದ್ದ. ಆದರೆ, ಅದನ್ನು ಹಿಂದಿರುಗಿಸಲೇ ಇಲ್ಲ. ವೃದ್ಧೆ ಆಗಾಗ ಕೇಳಲು ಶುರು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಹಣ ಹೊಂದಿಸುವ ಬದಲು ಅಜ್ಜಿಯನ್ನೇ ಮುಗಿಸಲು ಸಂಚು ರೂಪಿಸಿದ್ದರು. ತನ್ನ ಗೆಳೆಯನಾಗಿರುವ ಮಹೇಶ ಸದಾಶಿವ ಕಬಾಡಗೆಯನ್ನು ಸೇರಿಸಿಕೊಂಡು ಅಜ್ಜಿಯ ಕುತ್ತಿಗೆಗೆ ಸೀರೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ. ಜೊತೆಗೆ ಮಲ್ಲವ್ವ ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ಕೂಡಾ ದೋಚಿದ್ದರು. ಸುಮಾರು 1 ಲಕ್ಷ ಮೌಲ್ಯದ ಬಂಗಾರದ ಸರವನ್ನು ಅವರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆವತ್ತು ಕೊಲೆ…
ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದಲೇ 1ನೇ ತರಗತಿಗೆ ಮಕ್ಕಳ ದಾಖಲಾತಿಯನ್ನು 6 ವರ್ಷ ನಿಗದಿ ಪಡಿಸಿತ್ತು. ಈ ಬಳಿಕ ಆದೇಶವನ್ನು ರದ್ದುಗೊಳಿಸಿತ್ತು. ಇದೀಗ 2025-26ನೇ ಶೈಕ್ಷಣಿಕ ವರ್ಷದಿಂದ ಅನ್ವಯ ಆಗುವಂತೆ ಕಡ್ಡಾಯಗೊಳಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 26-07-2022ರ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ 1ನೇ ತರಗತಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಈ ಮೊದಲಿನ ಆದೇಶವನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಖಾತೆ ಮಾಡಿ ಕೊಡೋದಕ್ಕಾಗಿ ಲಂಚ ಸ್ವೀಕರಿಸುವ ವೇಳೆಯಲ್ಲಿಯೇ, ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಖಾತೆ ಮಾಡಿ ಕೊಡೋದಕ್ಕಾಗಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆಯಲ್ಲಿ ತಹಶೀಲ್ದಾರ್ ವರ್ಷಾ ಎಂಬ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್ ವರ್ಷಾ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಸಿ ಕೊಡೋ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿಯೇ ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು : 2022ರ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ತಪ್ಪು ಮೌಲ್ಯಮಾಪನಕ್ಕಾಗಿ ಸರ್ಕಾರಿ ಪಿಯು ಕಾಲೇಜುಗಳ ಒಂಬತ್ತು ಅಧ್ಯಾಪಕರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ತಪ್ಪು ಮಾಡಿದ ಖಾಸಗಿ ಅನುದಾನರಹಿತ ಕಾಲೇಜಿನ ಒಬ್ಬ ಬೋಧಕನ ವಿರುದ್ಧ ಶಿಸ್ತು ಕ್ರಮಕ್ಕೆ ಇಲಾಖೆ ನಿರ್ದೇಶನ ನೀಡಿದೆ. 10 ಅಧ್ಯಾಪಕರ ಪೈಕಿ, ತಲಾ ಐದು ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳಿಗೆ ಸೇರಿದವುಗಳಾಗಿವೆ. ಅಮಾನತು ಆದೇಶದ ಪ್ರಕಾರ, ಉತ್ತರ ಪತ್ರಿಕೆಗಳ ಕೊನೆಯ ಕೆಲವು ಪುಟಗಳನ್ನು ಮೌಲ್ಯಮಾಪನ ಮಾಡಲು ಅಧ್ಯಾಪಕರು ವಿಫಲರಾಗಿದ್ದಾರೆ. ಮೌಲ್ಯಮಾಪಕರ ಜೊತೆಗೆ, ಉಪ ಮೌಲ್ಯಮಾಪಕರಾಗಿ ನಿಯೋಜನೆಗೊಂಡಿದ್ದ ಅಧ್ಯಾಪಕರನ್ನು ಸಹ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲಬುರಗಿ: ತಡರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಬೌಲಿಗಲ್ಲಿ ಬಳಿ ನಡೆದಿದೆ. ನಗರದ ರೋಜಾ ಬಡಾವಣೆ ನಿವಾಸಿ ಮುದಾಸಿರ್ (19) ಕೊಲೆಯಾದ ಯುವಕ, ತಡರಾತ್ರಿ ಬೌಲಿಗಲ್ಲಿ ಬಳಿ ಬೈಕ್ ಗಳಲ್ಲಿ ಬಂದಿದ್ದ 3-4 ದುಷ್ಕರ್ಮಿಗಳ ತಂಡ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಲವ್ ವಿಚಾರಕ್ಕೆ ಮುದಾಸಿರ್ ನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲಾ ಸವಿತಾ ಸಮಾಜ ಹಾಗೂ ಪಾವಗಡ ಸವಿತಾ ಸಮಾಜ ಸಹಯೋಗದೊಂದಿಗೆ ತುಮಕೂರು ಜಿಲ್ಲಾ ಸವಿತಾ ಸಮಾಜ ಯುವ ಪಡೆ ವತಿಯಿಂದ ಪಾವಗಡ ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಪಾವಗಡ ಸವಿತಾ ಸಮಾಜದ ಸಲೂನ್ ಗಳಿಗೆ ಉಚಿತ ಸಲೂನ್ ಕಿಟ್ ನೀಡಲಾಯಿತು. ಈ ವೇಳೆ ಮಾತನಾಡಿದ ಕಟ್ ವೆಲ್ ರಂಗನಾಥ್, ಯುವಕರು ಸಮುದಾಯ ಸಂಘಟನೆಗೆ ಮುಂದೆ ಬರಬೇಕು, ಹೋಬಳಿ ಮಟ್ಟದಲ್ಲಿ ಸಂಘಟನೆ ಆಗಬೇಕು. ವೃತ್ತಿಯನ್ನ ಆಧುನಿಕತೆಗೆ ಕೊಂಡೊಯ್ಯಬೇಕು ಎಂದು ಕರೆ ನೀಡಿದರು. ಇದೇ ವೇಳೆ ಪಾವಗಡ ಸವಿತಾ ಸಮಾಜ ಯುವ ಪಡೆ ಅಧ್ಯಕ್ಷರಾಗಿ ಲಿಂಗದಹಳ್ಳಿ ನೀಲಕಂಠ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾರ್ಥಸಾರಥಿ, ಪಾವಗಡ ಅಧ್ಯಕ್ಷರಾದ ರಾಮು, ಪ್ರತಿನಿದಿಯಾದ ದೇವರಾಜು, ಯುವ ಪಡೆ ಜಿಲ್ಲಾ ಪ್ರಮುಖರಾದ ಕಟ್ ವೆಲ್ ರಂಗನಾಥ್, ಲಿಂಗದಹಳ್ಳಿ ಸವಿತಾ ಸಮಾಜದ ಅಧ್ಯಕ್ಷರಾದ ರವಿ ಎನ್., ನೀಡಗಲ್ಲು ಸವಿತಾ ಸಮಾಜ ಅಧ್ಯಕ್ಷರಾದ ಕಣಮರಾಜು, ಅಣ್ಣಪ್ಪ, ನಾಗರಾಜು, ಮೋಹನ್, ಅರಸೀಕೆರೆ ನಾರಾಯಣಪ್ಪ, ಬಡವನಹಳ್ಳಿ ಪ್ರದೀಪ್,…