Subscribe to Updates
Get the latest creative news from FooBar about art, design and business.
- ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
- ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!
- ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!
- ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
- ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ
- ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮುಂದುವರಿಸಿ: ಮಾ. 24 ರಂದು ಬೆಂಗಳೂರು ಚಲೋ: ತಿಪ್ಪೇಸ್ವಾಮಿ
- ಕಸಾಪ ಭವನಕ್ಕೆ ಜಾಗ ನೀಡಿ: ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮನವಿ
- ಸಚಿವ ಶಿವರಾಜ್ ತಂಗಡಗಿಗೆ ದಿಢೀರ್ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು
Author: admin
ಅಮರಾವತಿ, ಸೆ.22: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಎನ್ಟಿಆರ್ ಆರೋಗ್ಯ ವಿಶ್ವವಿದ್ಯಾಲಯಕ್ಕೆ ತಮ್ಮ ತಂದೆ ಮತ್ತು ದಿವಂಗತ ಮಾಜಿ ಮುಖ್ಯಮಂತ್ರಿ ಡಾ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರ ಬುಧವಾರ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) ಇಡೀ ದಿನ ಸದನದಲ್ಲಿ ಗದ್ದಲ ಸೃಷ್ಟಿಸಿತ್ತು. ಇದರ ನಡುವೆಯೂ ಎನ್ಟಿಆರ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಹೆಸರನ್ನು ಡಾ ವೈಎಸ್ಆರ್ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಎಂದು ಬದಲಿಸುವ ಮಸೂದೆಯನ್ನು ರಾಜ್ಯ ವಿಧಾನಸಭೆಯು ಅಂಗೀಕರಿಸಿತು. ಬುಧವಾರ ರಾಜ್ಯ ಆರೋಗ್ಯ ಸಚಿವ ವಿಡದಾಳ ರಜಿನಿ ಮಸೂದೆಯನ್ನು ಮಂಡಿಸಿದರು. ಈ ನಿರ್ಧಾರದ ವಿರುದ್ಧ ಟಿಡಿಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿ ಪ್ರಶ್ನೋತ್ತರ ಕಲಾಪಕ್ಕೆ ಅಡ್ಡಿಪಡಿಸಿದರು.ವಿಧಾನಸಭೆಯು ಮಸೂದೆಯನ್ನು ಅಂಗೀಕರಿಸಿದ ಕೂಡಲೇ ಟಿಡಿಪಿ ಕಾರ್ಯಕರ್ತರು ವಿಜಯವಾಡದಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಿದರು. ಆರೋಗ್ಯ ವಿಶ್ವವಿದ್ಯಾಲಯದ ಬಳಿ ಧರಣಿ ನಡೆಸುವ ಮೂಲಕ ರಸ್ತೆಗಳನ್ನು ತಡೆದರು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.…
ಗದಗ: ತಾಲೂಕಿನ ಡಂಬಳ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಕಂಬಳಿ ಹುಳು ಆಕಾರದ ವಿಚಿತ್ರ ಕೀಟವೊಂದು ಹರಿದಾಡಿದ ಪರಿಣಾಮ ಆ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ತಮ್ಮ ಜಮೀನು ಕೆಲಸಕ್ಕೆ ಹೋಗಿದ್ದ ಸಿದ್ದಲಿಂಗಪ್ಪ ಕುರ್ತಕೋಟಿ ಮೈ ಮೇಲೆ ಈ ಹುಳು ಹರಿದಾಡಿದೆ. ಹಾಗಾಗಿ ಸಿದ್ದಲಿಂಗಪ್ಪ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಗುಣಮುಖರಾಗಿರುವ ಸಿದ್ದಲಿಂಗಪ್ಪ ಮನೆಯಲ್ಲಿದ್ದಾರೆ. ಅದೇ ಮಾದರಿಗೆ ಹುಳವೊಂದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹುಳು ಮೈ ಮೇಲೆ ಹರಿದ್ರೆ ಸಾವು ಸಂಭವಿಸುತ್ತದೆ ಎಂದು ಸಂದೇಶ ಹರಿಬಿಡಲಾಗುತ್ತಿದೆ. ಇದರಿಂದ ಆತಂಕಗೊಂಡಿರುವ ಹೊಂಬಳ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು, ಹುಳುವನ್ನು ಕೃಷಿ ಇಲಾಖೆ ಅಧಿಕಾರಿಗಳಿಗೆ ನೀಡಿ ಪರೀಕ್ಷೆ ಮಾಡಿಸುವಂತೆ ಆಗ್ರಹಿಸುತ್ತಿದ್ದಾರೆ. ಸುಳ್ಳು ಮಾಹಿತಿಯುಳ್ಳ ಫೊಟೋಗಳೊಂದಿಗೆ ಹರಿದಾಡುತ್ತಿರುವ ಸಂದೇಶದಿಂದ ಜನ ಭಯ ಭೀತರಾಗಿದ್ದಾರೆ. ಎರಡು ಮೃತ ದೇಹದ ಜೊತೆಗೆ ಒಂದು ವಿಚಿತ್ರ ಮಾದರಿಯ ಹುಳು ಫೋಟೋವನ್ನು ಶೇರ್ ಮಾಡುತ್ತಿದಾರೆ. ಈ ಭಯಾನಕ ಕೀಟ ದೇಹಕ್ಕೆ ಸ್ಪರ್ಶ ಮಾಡಿದ್ರೆ, ವಾಂತಿ ಬರುತ್ತದೆ. ಹಾಗೇ ಮೂರ್ಛೆ ಹೋಗುತ್ತಾರೆ…
ನವದೆಹಲಿ: ಪ್ರಧಾನ ಮಂತ್ರಿ ಕೇರ್ಸ್ ಫಂಡ್ಗೆ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ಕೆ.ಟಿ.ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ. ಹಾಗೆ ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ, ಇಂಡಿಕಾಪ್ಸ್ ಮತ್ತು ಪಿರಮಲ್ ಫೌಂಡೇಶನ್ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್ ಟ್ರಸ್ಟಿಗಳ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿ.ಜೆ.ಪಿ ಸರ್ಕಾರವು ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ ಮತ್ತು ಇತರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರಾಗಿ ನೇಮಕಾತಿ ಮಾಡಲು ಸಮ್ಮತಿ ನೀಡಿದ ಪ್ರಯುಕ್ತ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ವ್ಯಯಕ್ತಿಕವಾಗಿ ಹಾಗೂ ಎಲ್ಲ ಪೌರಕಾರ್ಮಿಕರ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು. ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುತ್ತೀರುವ ರಾಜ್ಯ ಬಿ.ಜೆ.ಪಿ ಸರ್ಕಾರವು ಎಲ್ಲರ ಹಿತವನ್ನು ಕಾಯುತ್ತಿದ್ದು, ಪೌರಕಾರ್ಮಿಕರ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಿರುವುದು ಅತೀ ಸಂತೋಷದ ಸಂಗತಿಯಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಇಂದು ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಭಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತ ಹೊರ ರಾಜ್ಯಗಳಾದ ಗೋವಾ ಮತ್ತು ಮಹರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮ್ಸ್ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೇಟಿ ಮಾಡಿ ವಿನಂತಿಸಲಾಗಿದೆ ಎಂದರು. ನಮ್ಮ ಮನವಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿವಾಸಕ್ಕೆ ಭೇಟಿ ನೀಡಿ ವಿಚಾರಿಸಿದರು. ಅನಾರೋಗ್ಯಕ್ಕೆ ಒಳಗಾಗಿರುವಂತ ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ,ಕೆಲ ಕಾಲ ಮಾತುಕತೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಚಿವ ಕೆ.ಗೋಪಾಲಯ್ಯ, ವಿ.ಸೋವಣ್ಣ, ವಿ. ಮುನಿರತ್ನ ಸೇರಿದಂತೆ ಅನೇಕರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದೆ. ಕರ್ನಾಟಕ ತಮಿಳುನಾಡು, ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್ ಡಿಪಿಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಇನ್ನೂ, ಮಂಗಳೂರಿನ ಪಿಎಫ್ಐ ಕಚೇರಿ ಮೇಲೆ ಇಂದು ಬೆಳಗಿನ ಜಾವ 3.30ರ ರ ಸುಮಾರಿಗೆ ಎನ್ಐಎ ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಕಚೇರಿಗೆ ಪ್ರವೇಶಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿಂದೂ ಸಂಘಟನೆ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ. ಈ ವೇಳೆ ಗೋ ಬ್ಯಾಕ್ ಎನ್ ಐಎ ಎಂದು ಪಿಎಫ್ ಐ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಎನ್ಐಎ ದಾಳಿ ಹಿನ್ನಲೆಯಲ್ಲಿ ಪೊಲೀಸರು…
ಹೆಚ್.ಡಿ.ಕೋಟೆ: ಕೆಲಸ ಕೊಡಿ, ಸಂಬಳ ಹೆಚ್ಚಿಸಿ ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕಿ ಎಚ್. ವಿ.ವಿನುತಾ, ಒಂದು ಕುಟುಂಬಕ್ಕೆ 200 ದಿನಗಳ ಕೆಲಸ ನೀಡಬೇಕು. ಕಾರ್ಮಿಕರು ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿ ಊಟಕ್ಕೂ ಗತಿಯಿಲ್ಲದೆ ಪರದಾಡುತ್ತಿದ್ದಾರೆ. ತಕ್ಷಣ ಅವರಿಗೆ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು. ಗ್ರಾಮ ಪಂಚಾಯಿತಿಯಿಂದ ಸಾಮಗ್ರಿಗಳು ಪೂರೈಸಿ , ಇಲ್ಲವಾದಲ್ಲಿ ಕೂಲಿಕಾರ್ಮಿಕರಿಗೆ 20 ರೂಪಾಯಿಗಳಿಗೆ ಹೆಚ್ಚಿಸಿ ಖಾತೆಗೆ ಜಮಾ ಮಾಡಬೇಕು. ಕಾರ್ಮಿಕರಿಗೆ ಸ್ಥಳೀಯವಾಗಿ ಕೆಲಸ ಲಭ್ಯವಿಲ್ಲ ಎಂದಾದಲ್ಲಿ 5 ಕಿಲೋ ಮೀಟರ್ ಗಿಂತಲೂ ಹೆಚ್ಚಿನ ದೂರದಲ್ಲಿ ಕೆಲಸ ನೀಡಿದರೆ ಕೂಲಿ ಹಣದ ಶೇಕಡಾ 10ರಷ್ಟು ಹಣ ನೀಡಲಾಗುತ್ತಿತ್ತು. ಅದು ಸಾಕಾಗುತ್ತಿಲ್ಲ ಅದನ್ನು ಶೇ.20ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಕಾರ್ಮಿಕರು ಕೆಲಸ ಮಾಡಿದ ಹದಿನೈದು ದಿನಗಳ ಒಳಗಾಗಿ ಕೂಲಿ ಪಾವತಿ ಆಗಬೇಕು. ಆದರೆ,…
ಬಹುಭಾಷಾ ನಟ ಧನಂಜಯ್ ಅವರ 26ನೇ ಸಿನಿಮಾ ಅನೌನ್ಸ್ ಆಗುತ್ತಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ ಪ್ರತಿಭಾನ್ವಿತ ನಟ ಸತ್ಯದೇವ್ ಕೂಡ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ವಿಶೇಷ ಅಂದರೆ ಇದು ಸತ್ಯದೇವ್ ನಟಿಸುತ್ತಿರುವ 26ನೇ ಕೂಡ ಹೌದು.. ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ಮಾಡಿದ್ದ ಈಶ್ವರ್ ಕಾರ್ತಿಕ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಚರಣ್ ರಾಜ್ ಸಂಗೀತ ನೀಡಲಿದ್ದಾರೆ. ಅಂದಹಾಗೆ ಕ್ರೈಮ್ ಕಥೆಯನ್ನೊಳಗೊಂಡ ಈ ಚಿತ್ರವನ್ನು ಓಲ್ಡ್ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು ಸೆಪ್ಟಂಬರ್ 21: ಹೆಚ್ಚುತ್ತಿರುವ ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ 15 ವರ್ಷಕ್ಕಿಂತಲೂ ಹಳೆಯದಾದ 80 ಲಕ್ಷ ಹಳೆಯ ವಾಹನಗಳನ್ನು ಸಂಚಾರಕ್ಕೆ ಅನರ್ಹಗೊಳಿಸಲು ಮುಂದಾಗಿದೆ. ಈ ಸಂಬಂಧ ‘ವಾಹನ ಗುಜರಿ ನೀತಿ- 2021’ ಅಳವಡಿಸಿಕೊಳ್ಳಲು ಮುಂದಾಗಿದೆ. ಇದು ಜಾರಿಯಾದರೆ ವಾಹನಗಳ ಮಾಲೀಕರು ವಾಹನಗಳನ್ನು ಗುಜರಿಗೆ ನೀಡಿ ಪ್ರಮಾಣ ಪತ್ರ ಪಡೆಯಬೇಕು. ಅದನ್ನು ಹೊಸ ವಾಹನಗಳಿಗೆ ಖರೀದಿ ವೇಳೆ ಸಲ್ಲಿಸಿದರೆ ಮೋಟಾರು ವಾಹನ ತೆರಿಗೆಯಲ್ಲಿ ರಿಯಾಯಿತಿ ಪಡೆಯಬಹುದಾಗಿದೆ. ರಾಜ್ಯದಲ್ಲಿ ನೋಂದಾಯಿತ 2.8 ಕೋಟಿ ವಾಹನಗಳಲ್ಲಿ 15 ವರ್ಷಕ್ಕಿಂತಲೂ ಹೆಚ್ಚು ಹಳೆಯದಾದ 80 ಲಕ್ಷಕ್ಕೂ ಅಧಿಕ ವಾಹನಗಳು ಇವೆ ಎಂದು ಅಂದಾಜಿಸಲಾಗಿದೆ. ಸಾರಿಗೆ ಇಲಾಖೆಯ ಪ್ರಕಾರ, ರಾಜಧಾನಿ ಬೆಂಗಳೂರಿನಲ್ಲೇ ಒಂದು ಕೋಟಿ ವಾಹನಗಳಿವೆ. ಈ ವರ್ಷದ ಮಾರ್ಚ್ ಮಾಸಾಂತ್ಯಕ್ಕೆ 29 ಲಕ್ಷ ವಾಹನಗಳು 15 ವರ್ಷಗಳ ಮಿತಿಯನ್ನು ದಾಟಿರುವುದು ಪತ್ತೆ ಆಗಿದೆ. ಹೆಚ್ಚಿನ ಮಾಲಿನ್ಯಕಾರಕವಾಗಿರುವ ಎರಡು ಸ್ಟ್ರೋಕ್ ಆಟೋರಿಕ್ಷಾಗಳು ಬೆಂಗಳೂರಲ್ಲಿ ಸಂಚಾರ ಸೇವೆ ನೀಡುತ್ತಿವೆ ಎಂದು ಇಲಾಖೆ ತಿಳಿಸಿದೆ. ಕೇಂದ್ರ ಗುಜರಿ…