Author: admin

ಕೊರಟಗೆರೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವು ನಡೆಯಲಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರಕಾರದ ಸಾಧನೆಗಳು, ಜನಪರ ಕೆಲಸಗಳ ಸಾರ್ಥಕ ಸೇವೆ ಮತ್ತು ಸಬಲೀಕರಣಕ್ಕಾಗಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವನ್ನು ಪಟ್ಟಣದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 7ರ ಬುಧವಾರ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಜಿಲ್ಲಾ ಮಂತ್ರಿಗಳಾದ ಬಿ.ಸಿ ನಾಗೇಶ್, ಜೆ.ಸಿ.ಮಾಧುಸ್ವಾಮಿ, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರುಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ ಸೇರಿದಂತೆ ಜಿಲ್ಲೆಯ ನಾಯಕರು, ಮುಖಂಡರು, ತಾಲ್ಲೂಕಿನ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಈ ಜನಸಂಕಲ್ಪ ಯಾತ್ರೆಗೆ ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 2023 ರ…

Read More

ಬೆಣಚು ಕಲ್ಲಿನ ಗಣಿಗಾರಿಕೆ ಕುಸಿದ ಪರಿಣಾಮ 7 ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಛತ್ತೀಸ್ ಗಢದಲ್ಲಿ ಶುಕ್ರವಾರ ಸಂಭವಿಸಿದೆ. ಬಸ್ತಾರ್ ಜಿಲ್ಲೆಯ ಜಗ್ದಲ್ ಪುರದಿಂದ 12 ಕಿ.ಮೀ. ದೂರದಲ್ಲಿರುವ ಗಣಿಗಾರಿಕೆಯಲ್ಲಿ ಈ ದುರಂತ ಸಂಭವಿಸಿದ್ದು, ಮೃತಪಟ್ಟವರಲ್ಲಿ 6 ಮಂದಿ ಮಹಿಳೆಯರು ಎಂದು ಪೊಲೀಸರು ತಿಳಿಸಿದ್ದಾರೆ. ಕಣಿವೆಯಲ್ಲಿ ಕಾರ್ಮಿಕರು ಮಣ್ಣು ಅಗೆಯುತ್ತಿದ್ದಾಗ ಗಣಿಗಾರಿಕೆಯ ಒಂದು ಭಾಗ ಕುಸಿದಿದೆ. ಇದರಲ್ಲಿ ಕಾರ್ಮಿಕರು ಸಿಲುಕಿ ಮೃತಪಟ್ಟರು ಎಂದು ಹೇಳಲಾಗಿದೆ. ಮಣ್ಣಿನಡಿ 7 ಮಂದಿ ಮಾತ್ರ ಇದ್ದರು ಎಂದು ಹೇಳಲಾಗಿದೆ. ಆದರೆ ಘಟನಾ ಸ್ಥಳಕ್ಕೆ ಆಗಮಿಸಿರುವ ರಕ್ಷಣಾ ಸಿಬ್ಬಂದಿ ಪರಿಹಾರ ಕಾರ್ಯದಲ್ಲಿ ತೊಡಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ರಸ್ತೆ ಗುಂಡಿಗಳಿಗೆ ರಾಜ್ಯ ಸರಕಾರ ಹಾಗೂ ಬಿಬಿಎಂಪಿ ಮುಕ್ತಿ ನೀಡದೇ ಇರುವುದರಿಂದ ವಾಹನಗಳ ಸಂಚಾರ ವೇಗದಲ್ಲಿ ಕುಸಿತ ಕಂಡು ಬಂದಿದೆ. ಸಂಚಾರಿ ವಿಭಾಗದ ವಿಶೇಷ ಕಮಿಷನರ್ ಆಗಿ ಇತ್ತೀಚೆಗೆ ನೇಮಕಗೊಂಡ ಡಾ.ಎಂ.ಎ.ಸಲೀಂ ಮಾತನಾಡಿ, ಕಳೆದ 10 ದಿನಗಳಲ್ಲಿ ವಾಹನಗಳ ಸಂಚಾರ ವೇಗ ಶೇ.50ರಷ್ಟು ಕುಸಿದಿದೆ. ನಗರದಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ಲಘು ವಾಹನಗಳು ನಗರ ಪ್ರವೇಶಿಸಿದಂತೆ ನಿರ್ಬಂಧ ವಿಧಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಲಘು ಹಾಗೂ ಗೂಡ್ಸ್ ವಾಹನಗಳ ಸಂಚಾರದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಅಲ್ಲದೇ ರಸ್ತೆ ಗುಂಡಿಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅವರು ಸೂಚಿಸಿದ್ದಾರೆ. ನಗರದಲ್ಲಿ ಅತೀ ಹೆಚ್ಚು ಸಂಚಾರ ದಟ್ಟಣೆ ಇರುವ 9 ಕಾರಿಡಾರ್ ರಸ್ತೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಸುಗಮ ಸಂಚಾರದ ಕಡೆ ಗಮನ ಹರಿಸಲಾಗುತ್ತಿದೆ. ಇದರಲ್ಲಿ ಸಿಲ್ಕ್ ಬೋರ್ಡ್, ಗೊರಗುಂಟೆಪಾಳ್ಯ ಅತೀ ಹೆಚ್ಚು ಗಮನ ಹರಿಸಲಾಗುತ್ತಿದೆ. ಈ…

Read More

ಸರ್ಕಾರಿ ಶಾಲೆಯ ತರಗತಿಯೊಳಗೆ ಇಬ್ಬರು ಹುಡುಗರು ತಮ್ಮ 13 ವರ್ಷದ ಕ್ಲಾಸ್ ಮೇಟ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಮುಂಬೈನ ಮಾಟುಂಗಾ ಪ್ರದೇಶದಲ್ಲಿ ದಾಖಲಾಗಿದೆ. ಕೆಲವು ದಿನದ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು ನೃತ್ಯ ಅಭ್ಯಾಸಕ್ಕಾಗಿ ಹೊರಬಂದಾಗ ಆಕೆಯ ಇಬ್ಬರು ಕ್ಲಾಸ್ ಮೇಟ್ಸ್ ಗಳು 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮಾಟುಂಗಾ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ. ಹುಡುಗಿ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದು, ಪೋಷಕರು ತಕ್ಷಣ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿರತೆ ದಾಳಿಗೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಯುವತಿ ಮೃತಪಟ್ಟ ಪ್ರಕರಣ ಸಂಬಂಧ ಮೃತ ಯುವತಿ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ ಹಸ್ತಾಂತರಿಸಲಾಗಿದೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ 5 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಇದೇ ವೇಳೆ ಕುಟುಂಬದ ಒಬ್ಬರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾದ ಹಿನ್ನೆಲೆ ಆಕ್ರೋಶಗೊಂಡಿರುವ ಗ್ರಾಮದ ಜನರು ಧರಣಿ ಕುಳಿತಿದ್ದರು. ಅದತರಂತೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಆರ್​​ಎಫ್​​ಒಗೆ ಕಡ್ಡಾಯ ರಜೆ ನೀಡಿ ತನಿಖೆ ಬಳಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಂತರ ಗ್ರಾಮಸ್ಥರು ಧರಣಿಯನ್ನು ಕೈಬಿಟ್ಟರು. ತಾಲೂಕಿನಲ್ಲಿ ಚಿರತೆ ಹಾವಳಿ ಇರುವ ಹಿನ್ನೆಲೆ 15 ತಂಡಗಳನ್ನು ರಚನೆ ಮಾಡಿ ಬೇರೆಬೇರೆ ಕಡೆಗಳಲ್ಲಿ ಕಾರ್ಯಾಚರಣೆಗೆ ಇಳಿಸುತ್ತೇವೆ. 7 ದಿನಗಳ ಒಳಗೆ ಕಂಡಲ್ಲಿ ಗುಂಡು ಹಾರಿಸಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯ ನಾವು ಮಾಡುತ್ತೇವೆ. ಆರ್​ಎಫ್​ಒ ಅವರನ್ನು ಕಡ್ಡಾಯ ರಜೆ…

Read More

ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ವೈ.ಎಸ್ ರವಿಕುಮಾರ್ ಅವರ ಪತ್ನಿ ರೂಪಾಲಿ ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಆರೋಪಿಸಿದ್ದಾರೆ. ಹಣ ಕೊಡದೆ ಇದ್ದಿದ್ದಕ್ಕಾಗಿ ನನ್ನನ್ನು ಗಡಿಪಾರು ಮಾಡಿದ್ದಾರೆ ಎಂದು ಚಿತ್ತಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಣಿಕಂಠ ರಾಠೋಡ್ ಹೇಳೀದ್ದಾರೆ. ಸೆ.30 ರಂದು ರೂಪಾಲಿ ಸೇರಿದಂತೆ ಅವರ ತಂಡದಿಂದ ದಾಂಡಿಯಾ ನೈಟ್ ಆಯೋಜಿಸಲಾಗಿತ್ತು. ಮುಂಬೈ ಮೂಲದ ಇವೆಂಟ್ ಕಂಪನಿಗೆ ಮೂರು ಲಕ್ಷ ನೀಡಿದ್ದೆ. ಅನಂತರ ಮತ್ತೆ ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು, ಕೊಡದೇ ಇದ್ದಾಗ ಅವರ ಪತಿ ನಗರ ಪೊಲೀಸ್ ಕಮಿಷನರ್ ಡಾ.ವೈ ಎಸ್ ರವಿಕುಮಾರ್ ನನ್ನನ್ನು ಸುಳ್ಳು ಪ್ರಕರಣ ದಾಖಲಿಸಿ ಗಡಿಪಾರು ಆದೇಶ ಮಾಡಿದ್ದರು. ನನ್ನ ಹಣ ನನಗೆ ನೀಡಬೇಕು, ಇಲ್ಲದಿದ್ದರೆ ಮೇಲಾಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದು ರಾಠೋಡ್ ತಿಳಿಸಿದ್ದಾರೆ. ನನ್ನ ಪತ್ನಿ ದಾಂಡಿಯಾ ನೈಟ್ ಮಾಡಿದ್ದು ನಿಜ, ಅನೇಕರಿಂದ ಸ್ಪಾನ್ಸರ್ ಕೇಳಿದ್ದಾರೆ. ಮಣಿಕಂಠ ರಾಠೋಡ್ರಿಗೂ ಕೇಳಿರಬಹುದು, ಹಣಕ್ಕಾಗಿ ಒತ್ತಾಯ…

Read More

ಸೇವಾ ನ್ಯೂನತೆ ಎಸಗಿದ ಮೈಸೂರಿನ ಸಯ್ಯಾಜಿ ರಾವ್ ರಸ್ತೆಯಲ್ಲಿ ಇರುವ ಮಾರ್ಕೆಟ್ ಬ್ರಾಂಚ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಅಶೋಕ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೆ ದಂಡ ವಿಧಿಸಿ ಮೈಸೂರು ಜಿಲ್ಲಾ ಗ್ರಾಹಕರ ವೇದಿಕೆ ಆದೇಶಿಸಿದೆ. ಮೈಸೂರಿನ ವಿಶ್ವೇಶ್ವರ ನಗರ ಎರಡನೇ ಹಂತದ ಸಿಐಟಿಬಿ ಕಾಲೋನಿಯ ಮಲ್ಲಿಗೆ ರಸ್ತೆಯ ನಿವಾಸಿ ರಾಮೋಜಿ ರಾವ್ ಅವರ ಮಗನಾದ ‘ಮಾಜಿ ಯೋಧ’ ಕೃಷ್ಣೋಜಿ ರಾವ್ ಅವರು ಮನೆಯನ್ನು ಖರೀದಿ ಮಾಡಲು ಮತ್ತು ಆ ಮನೆಯನ್ನು ನವೀಕರಣ ಮಾಡುವ ಸಲುವಾಗಿ 2003 ಹಾಗೂ 2013 ರ ಸಮಯದಲ್ಲಿ ಮೈಸೂರಿನ ಸಯ್ಯಾಜಿ ರಾವ್ ರಸ್ತೆಯಲ್ಲಿದ್ದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಮಾರ್ಕೆಟ್ ಬ್ರಾಂಚ್ ಹಾಗೂ ಅಶೋಕ ರಸ್ತೆಯ ಬ್ರಾಂಚ್ ನಲ್ಲಿ ರೂ.3,55,000/- ಹಾಗೂ ರೂ.6,40,000/- ಗಳನ್ನು ಸಾಲವಾಗಿ ಪಡೆದಿದ್ದರು. ಸಾಲ ಮಂಜೂರು ಮಾಡುವ ಸಮಯದಲ್ಲಿ ಕೃಷ್ಣೋಜಿ ರಾವ್ ತಮ್ಮ ಮನೆಯ ಹಕ್ಕು ಪತ್ರ, ಕ್ರಯಪತ್ರ ಹಾಗೂ ಖಾತೆಗೆ ಸಂಬಂಧಿಸಿದ ದಾಖಲೆಗಳನ್ನು ಬ್ಯಾಂಕಿಗೆ ಭದ್ರತೆಯಾಗಿ…

Read More

ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಮೊಬೈಲ್ ಪೋನ್‌ ಬಳಕೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಆದೇಶಿಸಿದೆ. ತಮಿಳುನಾಡಿನ ತೂತಿಕೊರಿನ್‌ ಜಿಲ್ಲೆಯ ತಿರುಚೆಂದೂರಿನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದೊಳಗೆ ಮೊಬೈಲ್ ನಿಷೇಧಿಸುವಂತೆ ನಿರ್ದೇಶನ ಕೋರಿ ಎಂ. ಸೀತಾರಾಮನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್ ಈ ಆದೇಶ ನೀಡಿದೆ. ಭಕ್ತರು ಮೊಬೈಲ್​ನಲ್ಲಿ ದೇವರ ವಿಗ್ರಹಗಳು ಮತ್ತು ಪೂಜೆಗಳ ಪೋಟೋಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅರ್ಜಿದಾರರು ಬೇಸರ ವ್ಯಕ್ತಪಡಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಮತ್ತು ಜೆ. ಸತ್ಯನಾರಾಯಣ ಪ್ರಸಾದ್, ಭಕ್ತರ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸುವುದರ ಜೊತೆಗೆ ದೇವಾಲಯದ ಪಾವಿತ್ರ್ಯ ಕಾಪಾಡಲು ಅಧಿಕಾರಿಗಳು ದೇವಾಲಯದ ಆವರಣದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಗುರುವಾಯೂರ್‌ನಲ್ಲಿರುವ ಶ್ರೀ ಕೃಷ್ಣ ದೇವಾಲಯ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಾಲಯಗಳಲ್ಲಿ ಮೊಬೈಲ್‌ ನಿಷೇಧ ಜಾರಿಯಲ್ಲಿದೆ. ತಿರುಚೆಂದೂರಿನ ದೇವಾಲಯದ ಅಧಿಕಾರಿಗಳು ಈಗಾಗಲೇ ದೇವಾಲಯದ ಆವರಣದೊಳಗೆ ಮೊಬೈಲ್ ನಿಷೇಧ,…

Read More

ಪಶ್ಚಿಮ ದೆಹಲಿಯ ತಿಲಕ್‌ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಹಜೀವನ ನಡೆಸುತ್ತಿದ್ದ ಜೋಡಿಯ ಮಧ್ಯೆ ವಿರಸವುಂಟಾಗಿ 35 ವರ್ಷದ ಮಹಿಳೆಯನ್ನು ಗೆಳೆಯ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ರೇಖಾರಾಣಿ ಮೃತ ಮಹಿಳೆ. ಇರಿತದ ಗಾಯಗಳೊಂದಿಗೆ ಆಕೆಯ ಶವ ಗಣೇಶ ನಗರದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದೆ.ಕೊಲೆ ಆರೋಪದ ಮೇಲೆ ಆಕೆಯ ಗೆಳೆಯ ಮನ್‌ ಪ್ರೀತ್‌ ಸಿಂಗ್‌(45) ಎಂಬಾತನನ್ನು ಪೊಲೀಸರು ಪಂಜಾಬ್ ‌ನಲ್ಲಿ ಬಂಧಿಸಿದ್ದಾರೆ. ರೇಖಾರಾಣಿ ಮಗಳೊಂದಿಗೆ ವಾಸವಿದ್ದರು. 2015ರಲ್ಲಿ ಸಿಂಗ್ ಪರಿಚಿತನಾಗಿದ್ದ. ಒಟ್ಟಿಗೆ ವಾಸವಿದ್ದರು. ಇತ್ತೀಚೆಗೆ ಸಂಬಂಧ ವಿರಸಕ್ಕೆ ತಿರುಗಿ ಜಗಳವಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯ ‍ಪುತ್ರಿ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಇಬ್ಬರು ಯುವಕರು ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿ​ಕ​ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಹೊಸಪೇಟೆ ಸಮೀಪ ನಡೆದಿದೆ. ಸಿಂಧನೂರು ನಿವಾಸಿಯಾಗಿರುವ ವಿದ್ಯಾರ್ಥಿನಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,  ನ.25ರಂದು ತಾಯಿಯ ತವರೂರಾದ ಹೊಸ ಪೇಟೆಗೆ ಹೋಗಿದ್ದಳು.  ನ.27 ರಂದು ಹೊಸಪೇಟೆಯಿಂದ ಸಿಂಧನೂರಿಗೆ ವಾಪಸ್‌ ಬರುವಾಗ ಪರಿಚಿತ ಸಚಿನ್‌ ಎಂಬ ಯುವಕ ಕರೆ ಮಾಡಿ ಆಕೆಯನ್ನು ವಾಪಸ್‌ ಹೊಸಪೇಟೆಗೆ ಕರೆಸಿಕೊಂಡಿದ್ದಾನೆ. ಸಚಿನ್‌ ಮತ್ತು ಆತನ ಗೆಳೆಯ ಇಬ್ಬರೂ ಸೇರಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅಂಜನಾದ್ರಿ ಬೆಟ್ಟ ಹಾಗೂ ಗಂಗಾವತಿಯತ್ತ  ಹೋಗಿ ಮದ್ಯ ಖರೀದಿಸಿ ಗಂಗಾವತಿಯಿಂದ ಹೊಸಪೇಟೆಗೆ ಹೋಗುವ ವೇಳೆ ಕಾರಿನಲ್ಲೆ ಸಚಿನ್‌ ಆಕೆಗೆ ಬಲವಂತದಿಂದ ಮದ್ಯ ಕುಡಿಸಿ, ಲೈಂಗಿಕ ಕಿರು​ಕು​ಳ ನೀಡಿ​ದ್ದಾನೆ ಎಂದು ವಿದ್ಯಾರ್ಥಿನಿಯ ತಾಯಿ ದೂರು ನೀಡಿದ್ದಾರೆ. ಪಿಎಸ್‌ ಐ ಸೌಮ್ಯ ಅವರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More