Subscribe to Updates
Get the latest creative news from FooBar about art, design and business.
- ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
Author: admin
ಐಪಿಎಲ್ ನಲ್ಲಿ ರನ್ನರ್ ಅಪ್ ಆದ ರಾಜಸ್ಥಾನ್ ರಾಯಲ್ಸ್ನ ನಾಯಕ ಸಂಜು ಸಮ್ಸನ್ರ ಆಟದ ವೈಖರಿ ಕುರಿತು ವಿಶ್ವಕಪ್ ವಿಜೇತ ನಾಯಕ ಕಪಿಲ್ದೇವ್ ಅವರು ಕಿಡಿಕಾರಿದ್ದಾರೆ. ಸಂಜು ಸಮ್ಸನ್ ಅವರು ತಮ್ಮ ಬ್ಯಾಟಿಂಗ್ ನಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ಎಡವುತ್ತಿರು ವುದರಿಂದ ಅವರು ತಂಡದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳಲು ಆಗುತ್ತಿಲ್ಲ ಎಂದ ಕಪಿಲ್ದೇವ್, ಐಪಿಎಲ್ 2022ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಮರ್ಥವಾಗಿ ನಿಭಾಯಿಸಿದ ಸಂಜು ಸಮ್ಸನ್ 458 ರನ್ ಗಳನ್ನು ಗಳಿಸಿದರೂ ಕೂಡ ಅವರು ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಎಡವಿದ್ದರು. ಅವರು ಒಂದೆರಡು ಪಂದ್ಯಗಳಲ್ಲಿ ಗರಿಷ್ಠ ರನ್ಗಳನ್ನು ದಾಖಲಿಸಿದ್ದರಿಂದ ಅವರ ಅಷ್ಟೊಂದು ರನ್ಗಳನ್ನು ಗಳಿಸಲು ಸಾಧ್ಯವಾಯಿತಷ್ಟೇ ಎಂದು ಹೇಳಿದರು. ಸಂಜು ಸಮ್ಸನ್ ಅವರು ಕಳೆದ ಕೆಲವು ವರ್ಷಗಳಿಂದ ಭಾರತ ತಂಡಕ್ಕೆ ಮರಳಲು ಪ್ರಯತ್ನಿಸುತ್ತಿದ್ದರಾದರೂ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಕ್ಕಿಂತ ಬೆಂಚ್ ಕಾದಿದ್ದೇ ಹೆಚ್ಚು, ಶ್ರೀಲಂಕಾ ಸರಣಿಯಲ್ಲಿ ಸಂಜು ಸಮ್ಸನ್ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದಿದ್ದರಿಂದ ಅವರನ್ನು ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗಿಡಲಾಗಿದೆ ಎಂದರು.…
ಇಂಧನ (ಎಟಿಎಫ್) ಬೆಲೆಯಲ್ಲಿನ ತೀವ್ರ ಏರಿಕೆ ಮತ್ತು ರೂಪಾಯಿ ಮೌಲ್ಯ ಕುಸಿತದಿಂದಾಗಿ ದೇಶೀಯ ವಿಮಾನಯಾನ ಸಂಸ್ಥೆಗಳು ತಕ್ಷಣವೇ ವಿಮಾನಯಾನ ದರಗಳನ್ನು ಹೆಚ್ಚಳವಾಗಲಿದೆ. ದರ ಏರಿಕೆ ಮಾರ್ಗ ಬಿಟ್ಟು ಬೇರೆ ದಾರಿಯಿಲ್ಲ ಎಂದು ಸ್ಪೈಸ್ ಜೆಟ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಹೇಳಿದ್ದಾರೆ. ಕಾರ್ಯಾಚರಣೆಯ ವೆಚ್ಚವನ್ನು ಉತ್ತಮವಾಗಿ ಉಳಿಸಿಕೊಳ್ಳಲು ವಿಮಾನ ದರಗಳಲ್ಲಿ ಕನಿಷ್ಠ 10-15 ಪ್ರತಿಶತ ಹೆಚ್ಚಳ ಅಗತ್ಯವಿದೆ ಎಂದು ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೂನ್ 2021 ರಿಂದ ಎಟಿಎಫ್ ಬೆಲೆಗಳು ಶೇಕಡಾ 120 ಕ್ಕಿಂತ ಹೆಚ್ಚಾಗಿದೆ. ಈ ಬೃಹತ್ ಹೆಚ್ಚಳವು ಸಮರ್ಥನೀಯವಲ್ಲ ,ಕೇಂದ್ರ ಮತ್ತು ರಾಜ್ಯಗಳು, ಎಟಿಎಫ್ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡಲು ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ ಎಮದು ಒತ್ತಾಯಿಸಿದ್ದಾರೆ. ವಿಶ್ವ ಮಟ್ಟಕ್ಕೆ ಹೊಲಿಸಿದರೆ ಭಾರತದಲ್ಲೇ ಅತಿ ಹೆಚ್ಚು ಎಂದು ಅವರು ಹೇಳಿದರು.ಸ್ಪೈಸ್ಜೆಟ್ ಕಳೆದ ಕೆಲವು ತಿಂಗಳುಗಳಲ್ಲಿ ಇಂಧನ ಬೆಲೆ ಏರಿಕೆಯ ಭಾರವನ್ನು ಹೀರಿಕೊಳ್ಳಲು ಪ್ರಯತ್ನಿಸಿದೆ, ಸದ್ಯ ನಮ್ಮ ಕಾರ್ಯಾಚರಣೆಯ ವೆಚ್ಚದ ಶೇಕಡಾ 50 ಕ್ಕಿಂತ ಹೆಚ್ಚು ಹೊರೆಯಾಗುತ್ತಿದೆ…
ಕಳೆದ 24 ಗಂಟೆ ಅವದಿಯಲ್ಲಿ ದೇಶದಲ್ಲಿ 12,213 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಮಂಗಳವಾರಕ್ಕೆ ಹೊಲಿಸಿದರೆ ಶೇಕಡಾ 38.4 ರಷ್ಟು ಹೆಚ್ಚಾಗಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವರದಿಯಲ್ಲಿ ತಿಳಿಸಿದೆ. ಸಕ್ರಿಯ ಪ್ರಕರಣವು 58,215 ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11 ಸಾವುಗಳು ವರದಿಯಾಗಿವೆ. ಮಹಾರಾಷ್ಟ್ರ (4,024)ಮೂದಲ ಸ್ಥಾನದಲ್ಲಿದೆ ನಂತರ ಕೇರಳ (3,488), ದೆಹಲಿ (1,375), ಕರ್ನಾಟಕ (648) ಮತ್ತು ಹರಿಯಾಣ (596) ರಾಜ್ಯದಲ್ಲಿ ಪ್ರಕರಣಗಳ ಹೆಚ್ಚಳ ದಾಖಲಾಗಿವೆ.ದಿನೆ ದಿನೆ ಸೋಂಕು ಹೆಚ್ಚಳ ಆತಂಕ ಮೂಡಿಸಿದೆ. ಬೂಸ್ಶರ್ ಲಸಿಗೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುಡು ಬಿಸಿಲಿನ ಅಬ್ಬರ ಮನೆ ಮಾಡಿತ್ತು. ಆದರೆ ಇದೀಗ ಕೊಂಚ ಮಳೆಯಾದ ಕಾರಣ ಬಿಸಿಲಿನ ಬೇಗೆಗೆ ತತ್ತರಿಸಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಸದ್ಯ ನೈರುತ್ಯ ಮಾರುತ ಉತ್ತರ ಭಾರತಕ್ಕೆ ಯಾವಾಗ ಪ್ರವೇಶಿಸುತ್ತದೆ ಎಂಬುದರ ಕುರಿತು ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದೆ. ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯ ಪ್ರಕಾರ, ನೈರುತ್ಯ ಮಾನ್ಸೂನ್ ದೇಶದ ಮಧ್ಯ ಮತ್ತು ಪೂರ್ವ ಭಾರತದತ್ತ ಸಾಗಿದೆ. ಜೂನ್ 23 ರಿಂದ 29 ರವರೆಗೆ ವಾಯುವ್ಯ ಭಾರತದ ಹಲವು ಭಾಗಗಳನ್ನು ಮಳೆ ಸುರಿಯಲಿದೆ. ಇದರೊಂದಿಗೆ ಜೂನ್ 16 ರಿಂದ 2 ದಿನಗಳವರೆಗೆ ತಾಜಾ ವೆಸ್ಟರ್ನ್ ಡಿಸ್ಟರ್ಬನ್ಸ್ ಕೂಡ ಕಂಡುಬಂದಿದೆ ಎಂದು ಇಲಾಖೆ ತಿಳಿಸಿದೆ. ಈ ಎರಡೂ ಕಾರಣಗಳಿಂದಾಗಿ, ದೇಶದ ಎಲ್ಲಾ ಭಾಗಗಳಲ್ಲಿ ತಂಪಿನ ವಾತಾವರಣ ಕಂಡುಬಂದಿದೆ. ಇದೇ ಜೂನ್ 29ರವರೆಗೆ ಇದೇ ಸ್ಥಿತಿ ಮುಂದುವರಿಯಲಿದ್ದು, ಬಿಸಿಲಿನ ತಾಪದಿಂದ ಜನರಿಗೆ ಕೊಂಚ ಮುಕ್ತಿ ಸಿಗಲಿದೆ ಎಂದು ಇಲಾಖೆ ತಿಳಿಸಿದೆ. ಈ ಹಿಂದೆ, ಜೂನ್ 2…
ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಎಸಿಬಿ ಅಧಿಕಾರಿಗಳ ತಂಡ 21 ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದೆ. ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರ, ಬಸವನಗುಡಿ, ಚಂದ್ರಾಲೇಔಟ್, ಬಸವೇಶ್ವರನಗರ, ಬನಶಂಕರಿ, ಕ್ರೆಸೆಂಟ್ ರಸ್ತೆ ಹಾಗೂ ಉತ್ತರಹಳ್ಳಿ ಭಾಗ ದೊಡ್ಡಕಲ್ಲಸಂದ್ರದಲ್ಲಿ ಎಸಿಬಿ ತಲಾಶ್ ನಡೆದಿದೆ. 1. ಭೀಮಾ ರಾವ್ ವೈ ಪವಾರ್ (ಸೂಪರಿಂಟೆಂಡೆಂಟ್ ಆಫ್ ಇಂಜಿನಿಯರ್, ಬೆಳಗಾವಿ) 2. ಹರೀಶ್ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ಉಡುಪಿ) 3. ರಾಮಕೃಷ್ಣ ಎಚ್ .ವಿ. (ಎಇಇ, ಸಣ್ಣ ನೀರಾವರಿ,…
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಲಷ್ಕರ್- ಎ- ತಯಬಾ (ಎಲ್ಇಟಿ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಇತ್ತೀಚೆಗಷ್ಟೇ ಕುಲ್ಗಾಮ್ನಲ್ಲಿ ನಡೆದಿದ್ದ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಜಾನ್ ಮೊಹಮ್ಮದ್ ಲೋನ್ ನನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಭದ್ರತಾ ಪಡೆಗಳು ಇಂದು ಮುಂಜಾನೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಕಾಶ್ಮೀರಿ ಪಂಡಿತರು, ಹಿಂದೂ ಸಮುದಾಯದ ವಲಸಿಗರು ಹಾಗೂ ಸರ್ಕಾರಿ ಉದ್ಯೋಗಿಗಳನ್ನು ಗುರಿಯಾಗಿಸಿ ಉಗ್ರರು ಹತ್ಯೆ ನಡೆಸುತ್ತಿದ್ದಾರೆ. ಹತ್ಯೆಯಾಗಿರುವ ಉಗ್ರ ಶೋಪಿಯಾನ್ನ ಜಾನ್ ಮೊಹಮ್ಮದ್ ಲೋನ್ ಭಯೋತ್ಪಾದನಾ ಚಟುವಟಿಕೆಗಳ ಜೊತೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಕಳೆದ ಜೂ.೨ ರಂದು ನಡೆದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ’ ಎಂದು ಕಾಶ್ಮೀರ ಪೊಲೀಸ್ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ. ಅಮರನಾಥ ಯಾತ್ರೆ ವೇಳೆ ದಾಳಿಗೆ ಸಂಚು ರೂಪಿಸಿದ್ದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಟಿ.ಟಿ.ರಸ್ತೆಯಲ್ಲಿರುವ ಎಸ್ ಜಿ ಕೆ ಮೊಬೈಲ್ ಅಂಗಡಿಯ ಬೀಗವನ್ನು ಮುರಿದು ಮೊಬೈಲ್ ಕಳುವು ಮಾಡಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಹಿರಿಯೂರು ನಗರ ಪೋಲಿಸರು ಯಶಸ್ವಿಯಾಗಿದ್ದಾರೆ. ಹಿರಿಯೂರು ಉಪವಿಭಾಗದ ಪೋಲಿಸ್ ಉಪಾಧೀಕ್ಷರಾದ ಸೈಯದ್ ರೋಷನ್ ಜಮೀರ್ ರವರ ಉಸ್ತುವಾರಿಯಲ್ಲಿ ಹಿರಿಯೂರು ನಗರ ಪೋಲಿಸ್ ಠಾಣೆಯ ಪೋಲಿಸ್ ನಿರೀಕ್ಷಕರಾದ ವಿ ಎಸ್ ಶಿವಕುಮಾರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿ ಕಳವಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ನೀಲಿ ಮತ್ತು ಕಪ್ಪು ಬಣ್ಣದ ಸ್ಪ್ಲೇಂಡರ್ ಪ್ಲಸ್ ಬೈಕ್ ನಲ್ಲಿ ಬಂದ ಆರೋಪಿಗಳನ್ನು ಹಿಡಿದು ವಿಚಾರ ಮಾಡಿದಾಗ ಕಳವು ಮಾಡಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಬಂದಮ್ಮ ದೇವಸ್ಥಾನದ ಸಮೀಪದ ಮಿರ್ಜಾ ಬಡಾವಣೆಯ ಸಲೀಂಬೇಗ್ (20), ಗೋಪಾಲಪುರದ ಜಾಫರ್ ಸಾಧಿಕ್(19), ಸಿಗ್ಬತ್ ಹೋಟೆಲ್ ಬಳಿಯ ನಿವಾಸಿ ನವಾಜ್(19) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ರೂ. 1,22,000 ಮೌಲ್ಯದ ಹನ್ನೊಂದು ಮೊಬೈಲ್ ಗಳನ್ನು ಹಾಗೂ…
ಪಾವಗಡ: ತಾಲ್ಲೂಕಿನ ರೈತರ ಜಮೀನಿನಲ್ಲಿ ಕೆಲಸ ಮಾಡುವ ರೈತರಿಗೆ ನರೇಗಾ ಯೋಜನೆಯಡಿಯಲ್ಲಿ ಅವಕಾಶ ಕಲ್ಪಸುವಂತೆ ಕಿಸಾನ್ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೃಷ್ಣ ನಾಯ್ಕ ಆಗ್ರಹಿಸಿದರು. ತಹಸೀಲ್ದಾರ್ ಕಚೇರಿ ಮುಂದೆ ಕಿಸಾನ್ ಸಂಘದ ರಾಜ್ಯಾಧ್ಯಕ್ಷರಾದ ವಿ.ನಾಗಭೂಷಣರೆಡಿ ಹಮ್ಮಿಕೊಂಡಿದ್ದ ಮೌನಪ್ರತಿಭಟನೆಯಲ್ಲಿ ಮಾತನಾಡುತ್ತಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಜಮೀನಿನಲ್ಲಿ ಕೆಲಸ ಮಾಡುವ ರೈತರಿಗೆ ನರೇಗಾ ಯೋಜನೆಯಡಿಯಲ್ಲಿ ಅವಕಾಶ ಕಲ್ಪಿಸಿದರೆ ನಿರುದ್ಯೋಗ ಸಮಸ್ಯೆ ಹಾಗೂ ವಲಸೆ ಹೋಗುವುದು ತಪ್ಪುಲಿದೆ ಎಂದ ಅವರು, ಶೇಂಗಾ, ಬತ್ತ, ಗೋಧಿ, ಅಡಿಕೆ, ಗುಣಿಗಳ ಕಾರ್ಯ ಮಾಡುವ ರೈತರಿಗೆ ಸರ್ಕಾರಗಳು ನೇರವಾಗಬೇಕೆಂದು ಒತ್ತಾಯಿಸಿದ್ದರು. ಮೌನ ಪ್ರತಿಭಟನೆ ಮನವಿಯನ್ನು ಉಪತಹಸೀಲ್ದಾರ್ ಸುಮತಿಯವರಿಗೆ ನೀಡಿದರು. ಇದೇ ಪ್ರತಿಭಟನೆಯಲ್ಲಿಗೆ ಕೊಂಚೆ ಶಿವರುದ್ರಪ್ಪ, ಚಂದ್ರಕಲಾ, ಮಂಜುಳ, ರಮೇಶ್ ಬಾಬು ರಾಠೋಡ್, ಸಿ.ಕೆ. ಪುರ ನಾಗರಾಜ ಸ್ವಾಮಿ, ಮಲ್ಲಿಕಾರ್ಜುನ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಪಾವಗಡ: ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಗುರುವಾರ ದಲಿತಪರ ಸಂಘಟನೆ ಒಕ್ಕೂಟ ಸಹಯೋಗದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಡಿ.ಜೆ.ಎಸ್. ನಾರಾಯಣಪ್ಪ, ಜಿಲ್ಲೆಯಲ್ಲಿ ದಲಿತರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡದೆ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು. ಪ್ರಗತಿ ಪರ ಸಂಘಟನೆಯ ಮುಖಂಡ ಪಾಳೇಗಾರ್ ಲೋಕೇಶ್ ಮಾತನಾಡಿ, ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಪಂಗಡದ ಯುವಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಗುಬ್ಬಿ ಪಟ್ಟಣದಲ್ಲಿ ಡಿ.ಎಸ್ .ಎಸ್. ಸಂಚಾಲಕ ನರಸಿಂಹಮೂರ್ತಿ ಹತ್ಯೆ ಖಂಡನೀಯ. ದಲಿತರಿಗೆ ರಕ್ಷಣೆ ನೀಡಿದ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ದಲಿತ ಮುಖಂಡ ಸಿ.ಕೆ.ತಿಪ್ಪೇಸ್ವಾಮಿ ರಾಜ್ಯ ಸರ್ಕಾರ ದಲಿತರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳನ್ನು ನಿರ್ಲಕ್ಷ್ಯ ತನದಿಂದ ನೋಡುತ್ತಿದ್ದು, ತಳ ವರ್ಗದವರಿಗೆ ನೆಲೆಯಿಲ್ಲದಂತಾಗುತ್ತಿದೆ. ಇದು ತುಂಬಾ ಬೇಸರ ತರಿಸುತ್ತಿದೆ ಹಾಗಾಗಿ ಸರ್ಕಾರ ಎಚ್ಚೆತ್ತು ಕೊಲೆಗೈದವರಿಗೆ ತಕ್ಕ…
ಬೆಂಗಳೂರು: ಬಿಜೆಪಿಯವರೇ ನೀವು ಅಧಿಕಾರದಲ್ಲಿ ಗೂಟ ಹೊಡೆದುಕೊಂಡು ಇರಲು ಸಾಧ್ಯವಿಲ್ಲ. ನಿಮ್ಮ ಕೇಡುಗಾಲ ಸಮೀಪಿಸುತ್ತಿದೆ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ. ಬಿಜೆಪಿ ನಿರ್ಣಾಮವಾಗಲಿದೆ. 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನ ಚಲೋ ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ಗೋಸುಂಬೆ ನಾಟಕ ರಾಜ್ಯದಲ್ಲಿ ನಡೆಯುವುದಿಲ್ಲ. ಜನರಿಗೆ ಅರ್ಥವಾಗಿದೆ. ನಾವು ಬಂಧನವಾದರೂ, ಜೈಲಿಗೆ ಹೋಗಲು ತಯಾರಾಗೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಬೇಕು. ಪೊಲೀಸರು ತಡೆಯಬಹುದು. ಯಾರೂ ಎದೆಗುಂದುವ ಅಗತ್ಯವಿಲ್ಲ. ಪೊಲೀಸರು ಬಂಧಿಸಲಿ, ಜೈಲಿಗೆ ಹಾಕಲಿ ನೀವೆಲ್ಲರೂ ಗಟ್ಟಿಯಾಗಿ ನಿಲ್ಲಿ. ನೀವು ಧೈರ್ಯವಾಗಿರಿ ಎಂದರು. ನಾಳೆ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಎಲ್ಲ ಶಾಸಕರು, ಪದಾಧಿಕಾರಿಗಳು, ಸಂಸದರು ನಿಮ್ಮ ಜಿಲ್ಲೆಗೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ. ಕಾಂಗ್ರೆಸ್ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…