Subscribe to Updates
Get the latest creative news from FooBar about art, design and business.
- ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
- ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!
- ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!
- ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
- ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ
- ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮುಂದುವರಿಸಿ: ಮಾ. 24 ರಂದು ಬೆಂಗಳೂರು ಚಲೋ: ತಿಪ್ಪೇಸ್ವಾಮಿ
- ಕಸಾಪ ಭವನಕ್ಕೆ ಜಾಗ ನೀಡಿ: ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮನವಿ
- ಸಚಿವ ಶಿವರಾಜ್ ತಂಗಡಗಿಗೆ ದಿಢೀರ್ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು
Author: admin
ಬೆಂಗಳೂರು, ಸೆಪ್ಟೆಂಬರ್ 19: ಪ್ರೀತಿ ಹುಟ್ಟುವುದು ನಂಬಿಕೆಯ ಮೇಲೆಯೇ. ಪ್ರೀತಿಸುವ ಮುಗ್ದ ಮನಸ್ಸುಗಳನ್ನು ಒಬ್ಬರನ್ನೊಬ್ಬರ ನಂಬಿಕೆಯನ್ನಿಟ್ಟು ವಿಶ್ವಾಸವನ್ನು ಹೊಂದಿದ ಮೇಲೆಯ ಪ್ರೀತಿಯ ಹಾದಿಯಲ್ಲಿ ಸಲುಗೆ ಅನ್ನೋದು ಬೆಳೆಯುತ್ತೆ. ಸಲುಗೆ ಬೆಳೆಸಿದ ಪ್ರೇಮಿಯೊಬ್ಬ ತನ್ನ ಪ್ರೇಯಸಿಯ ಅಶ್ಲೀಲ ವಿಡಿಯೋ ಸೆರೆಹಿಡಿದು ಇನ್ಸ್ಟಾದಲ್ಲಿ ಹಾಕಿದ್ದಕ್ಕೆ ಕೊಲೆಯಾಗಿದ್ದಾನೆ. ಪ್ರೀತಿಸಿದ್ದ ಹುಡುಗಿಯ ಮಾನವನ್ನು ಕಾಪಾಡಬೇಕಾಗಿದ್ದು ಪ್ರಿಯಕರನ ಕರ್ತವ್ಯ ಆಗಿರುತ್ತದೆ. ಆದರೆ ಪ್ರೀತಿಸಿದಾಕೆಯ ಅಶ್ಲೀಲ ಫೋಟೋಗಳನ್ನು ಮತ್ತು ವಿಡಿಯೋವನ್ನು ತೆಗೆದುಕೊಂಡಿದ್ದ ಪ್ರಿಯಕರ ಆಕೆಯ ಫೋಟೋವನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿ ವಿಕೃತವಾದ ಆನಂದವನ್ನು ಹೊಂದಿದ್ದ. ಇದರಿಂದ ಪ್ರಿಯಕರನ ಜೊತೆಗೆ ಪ್ರೇಯಸಿ ಜಗಳವನ್ನುಆಡಿದ್ದಳು. ಪ್ರಿಯಕರನ ಕೃತ್ಯದಿಂದ ಬೇಸತ್ತಿದ್ದ ಪ್ರಿಯತಮೆ ತನ್ನ ಸ್ನೇಹಿತರ ಜೊತೆ ಸೇರಿ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟಿನಲ್ಲಿ ನಡೆದಿದೆ. ತನ್ನ ಪ್ರೇಯಸಿಯ ಅಶ್ಲೀಲ ಫೋಟೋವನ್ನು ಇನ್ಸ್ಟಾದಲ್ಲಿ ಹಾಕಿದ್ದ ತಪ್ಪಿಗೆ ಪ್ರೇಯಸಿ ಮತ್ತು ಆಕೆಯ ಸ್ನೇಹಿತರಿಂದ ಡಾ.ವಿಕಾಸ್ ಎಂಬಾತ ಕೊಲೆಯಾಗಿದ್ದಾನೆ. ಪ್ರತಿಭಾ,ಸುಶೀಲ್, ಗೌತಮ್ ಮತ್ತು ಸೂರ್ಯ ಕೊಲೆಗೈದಿರುವ ಆರೋಪಿಗಳಾಗಿದ್ದು. ಮೂವರನ್ನು ಪೊಲೀಸರು…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬಿಡಿಎ ವಸತಿ ಯೋಜನೆ ಕಾಮಗಾರಿಗೆ ಗುತ್ತಿಗೆ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಈ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಕುರಿತು ನಗರದಲ್ಲಿ ಮಾತನಾಡಿದ ಬಿ. ಎಸ್ ಯಡಿಯೂರಪ್ಪ ಅವರು,ನನಗೆ ನ್ಯಾಯಾಂಗದ ಮೇಲೆ ತುಂಬಾ ವಿಶ್ವಾಸವಿದೆ. ಆದರೆ ನಾನು ಏನು ತಪ್ಪು ಮಾಡಿಲ್ಲ. ಹೀಗಾಗಿ ನನಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಸಚಿವ ಸೋಮಶೇಖರ್, ಶಶಿಧರ್ ಮುರಳಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ ಹಾಗೂ ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ನಮ್ಮ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ದಾಖಲೆ ನೀಡಿದೆ ಇರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ 50 ಕೋಟಿ. ರೂ ಮಾನನಷ್ಟ ಮೊಕದ್ಧಮೆ ಹಾಕುತ್ತೇನೆ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮುನಿರತ್ನ, 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. 1 ವರ್ಷದಿಂದ ಆರೋಪ ಮಾಡುತ್ತಿದ್ದಾರೆ. ಸಿಎಂ ಕರೆದು ಮಾತನಾಡಿದರು. ಇತ್ತೀಚೆಗೆ ಸಿದ್ಧರಾಮಯ್ಯ ಮನೆಗೆ ಹೋಗಿ ಆರೋಪ ಮಾಡಿದ್ಧರು. ಲೋಕಾಯುಕ್ತಗೆ ದಾಖಲೆ ಕೊಡಿ ಎಂದಿದ್ದೇನೆ ಕೆಂಪಣ್ಣ ಎಲ್ಲಿಯೂ ದಾಖಲೆ ನೀಡಿಲ್ಲ. ಕೆಂಪಣ್ಣ ದಾಖಲೆ ಇದ್ದರೇ ಕೊಡಬೇಕು ಇಲ್ಲದಿದ್ದರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಕಾಂಗ್ರೆಸ್ ನವರ ಬಳಿ ಯಾವುದೇ ದಾಖಲೆ ಇಲ್ಲ.ಸದನದಲ್ಲಿ ಸಿದ್ಧರಾಮಯ್ಯ ದಾಖಲೆ ಇಟ್ಟುಕೊಂಡು ಮಾತನಾಡಿಲಿ. ಕೆಂಪಣ್ಣ ಆರೋಪದಿಂದ ನಮಗೆ ಕೆಟ್ಟ ಹೆಸರು ಬಂದಿದೆ. ಕೋ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಸಚಿವ ಮುನಿರತ್ನ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಲಂಡನ್, ಸೆ.19: ಬ್ರಿಟನ್ನ ದೀರ್ಘಾವಧಿಯ ರಾಣಿಯಾಗಿದ್ದ ರಾಣಿ ಎರಡನೇ ಎಲಿಜಬೆತ್ ಅಂತ್ಯಕ್ರಿಯೆ ಸೋಮವಾರ ವೆಸ್ಟ್ಮಿನಿಸ್ಟರ್ ಅಬ್ಬೆಯಲ್ಲಿ ಪೂರ್ಣ ಸರ್ಕಾರಿ ಗೌರವದೊಂದಿಗೆ ನಡೆಸಲಾಗುತ್ತದೆ. ರಾಣಿಯ ಉತ್ತರಾಧಿಕಾರಿ, ಆಕೆಯ ಮಗ ಕಿಂಗ್ ಚಾರ್ಲ್ಸ್ III ರ ಆಶಯಕ್ಕೆ ಅನುಗುಣವಾಗಿ, ಅಂತ್ಯಕ್ರಿಯೆಯ ನಂತರ ಒಂದು ವಾರದವರೆಗೆ ಸಾರ್ವಜನಿಕ ಶೋಕಾಚರಣೆಯು ದೇಶಾದ್ಯಂತ ಮುಂದುವರಿಯುತ್ತದೆ. ಅಂತ್ಯಕ್ರಿಯೆಯು ಮಧ್ಯಾಹ್ನ 3.30 ಕ್ಕೆ ಪ್ರಾರಂಭವಾಗಿ ಒಂದು ಗಂಟೆಯವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. 1965 ರಲ್ಲಿ ರಾಣಿ ಎಲಿಜಬೆತ್ ಅವರ ಮೊದಲ ಪ್ರಧಾನ ಮಂತ್ರಿ ವಿನ್ಸ್ಟನ್ ಚರ್ಚಿಲ್ ಅವರ ಮರಣದ ನಂತರ, ಬ್ರಿಟನ್ನಲ್ಲಿ ಮೊದಲ ಬಾರಿಗೆ ಒಂದು ಗಂಟೆ ಅವಧಿಯ ಅಂತ್ಯಕ್ರಿಯೆ ಸೋಮವಾರ ಲಂಡನ್ನ ವೆಸ್ಟ್ಮಿನ್ಸ್ಟರ್ ಅಬ್ಬೆಯಲ್ಲಿ ನಡೆಯಲಿದೆ. ವಿಶ್ವ ನಾಯಕರು, ಬ್ರಿಟನ್ನ ರಾಜಮನೆತನ, ರಾಜಮನೆತನದ ರಾಜಕೀಯ ಗಣ್ಯರು ಮತ್ತು ಮಿಲಿಟರಿ, ನ್ಯಾಯಾಂಗ ಮತ್ತು ದತ್ತಿ ಸಂಸ್ಥೆಗಳ ಸದಸ್ಯರನ್ನು ರಾಜ್ಯ ಅಂತ್ಯಕ್ರಿಯೆಯಲ್ಲಿ ಸೇರುತ್ತಾರೆ.ಬ್ರಿಟನ್ನಾದ್ಯಂತ ಸುಮಾರು 125 ಚಿತ್ರಮಂದಿರಗಳಲ್ಲಿ ಅಂತ್ಯಕ್ರಿಯೆಯನ್ನು ಪ್ರದರ್ಶಿಸಲಾಗುವುದು. ಜೊತೆಗೆ ಉದ್ಯಾನವನಗಳು, ಚೌಕಗಳು ಮತ್ತು ಕ್ಯಾಥೆಡ್ರಲ್ಗಳು ಕೂಡ ಅಂತ್ಯಕ್ರಿಯೆ ವೀಕ್ಷಿಸಲು ಬೃಹತ್…
ಬೆಂಗಳೂರು: ಈ ವರ್ಷದಿಂದಲೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ವಿಚಾರವಾಗಿ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು.ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್’ಪೆಕ್ಟರ್ ನೇಮಕಾತಿ ಹಗರಣ ಸಂಬಂಧ ಅಕ್ಟೋಬರ್ ನಲ್ಲಿ ಎಲ್ಲ ಪ್ರಕರಣಗಳ ಚಾರ್ಜ್ ಶೀಟ್ ಆಗುತ್ತದೆ ಐಜಿಪಿ ಪ್ರವೀನ್ ಸೂದ್ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣ ಸಂಬಂಧದ ಎಲ್ಲ ಪ್ರಕರಣಗಳು ಅಕ್ಟೋಬರ್ ನಲ್ಲಿ ಚಾರ್ಜ್ ಶೀಟ್ ಆಗುತ್ತದೆ. ಆ ನಂತರ ಮರು ಪರೀಕ್ಷೆ ದಿನಾಂಕ ಅನೌನ್ಸ್ ಮಾಡುತ್ತೇವೆ. ಪ್ರಕರಣ ದಾಖಲಾಗಿ 90 ದಿನಗಳಲ್ಲಿ ಚಾರ್ಜ್ ಶೀಟ್ ಆಗಬೇಕು ಆನಂತರ ಪರೀಕ್ಷೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ : ಮಕ್ಕಳ ಕಳ್ಳರೆಂದು ಭಾವಿಸಿ ಜನರು ಕಾರು ಬೆನ್ನತ್ತಿದ್ದು, ತಪ್ಪಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾದ ಘಟನೆ ಜಿಲ್ಲೆಯ ಬೀಳಗಿಯಲ್ಲಿ ನಡೆದಿದೆ. ಮಕ್ಕಳ ಕಳ್ಳರೆಂದು ಭಾವಿಸಿ ಜನರು ಕಾರೊಂದನ್ನು ಬೆನ್ನತ್ತಿದ್ದಾರೆ. ಈ ವೇಳೆ ಭಯಗೊಂಡ ಕಾರಿನವರು ತಪ್ಪಿಸಿಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಬೀಳಗಿಯಿಂದ ಗ್ರಾಮದ ಜನರು ಬೈಕ್ ನಲ್ಲಿ ಕಾರು ಬೆನ್ನತ್ತಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ದೇವರಾಜ ಭಾರತಿ, ಜಯದೀಪ ಜಗದಾಳೆ, ಮೊಹಮ್ಮದ್ ಇಲಿಯಾಸ್ಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೊಹಾಲಿ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾನಿಲಯದ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಒಟ್ಟು 60 ವಿದ್ಯಾರ್ಥಿನಿಯರು ಸ್ನಾನದ ವಿಡಿಯೋಗಳು ಹರಿದಾಡುತ್ತಿದೆ ಎನ್ನಲಾಗಿದೆ. ಆಘಾತಕಾರಿ ಸಂಗತಿ ಎಂದರೆ ಈ ವಿಡಿಯೋಗಳನ್ನು ಅದೇ ಹಾಸ್ಟೆಲ್ ನ ವಿದ್ಯಾರ್ಥಿನಿ ವಿಡಿಯೋ ಮಾಡಿ ತನ್ನ ಸ್ನೇಹಿತಿಗೆ ಕಳುಹಿಸಿದ್ದಾರೆ. ವಿಡಿಯೊಗಳನ್ನು ಶೇರ್ ಮಾಡಿದ್ದ ಸಹ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯರ ವಿಡಿಯೊಗಳನ್ನು ಚಿತ್ರೀಕರಿಸಿದ್ದ ಆಕೆ, ಶಿಮ್ಲಾದಲ್ಲಿರುವ ಯುವಕನಿಗೆ ಕಳುಹಿಸಿದ್ದರು. ಆತ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯಿಂದ ಮನನೊಂದು 8 ಜನ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದ್ರೇ ಈ ಬಗ್ಗೆ ಮಾತನಾಡಿರುವ ಮೊಹಾಲಿ ಎಸ್ ಬಂಧಿತ ವಿದ್ಯಾರ್ಥಿನಿ ಬೇರೆ ಯಾವ ವಿದ್ಯಾರ್ಥಿನಿಯರ ವಿಡಿಯೋಗಳನ್ನು ಮಾಡಿಲ್ಲ, ತನ್ನದೇ ವಿಡಿಯೋ ಮಾಡಿ ಸ್ನೇಹಿತನಿಗೆ ಕಳುಹಿಸಿದ್ಧಾಳೆ ಎಂದು ಹೇಳಿದ್ದಾರೆ. ಇದು ಸೂಕ್ಷ್ಮ ವಿಚಾರವಾಗಿದೆ. ನಮ್ಮ ಸಹೋದರಿಯರು ಮತ್ತು…
ಕೊರಟಗೆರೆ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ ಜನೌಷಧಿ ಮಳಿಗೆಯು ಕೇವಲ ನೆಪಮಾತ್ರಕ್ಕೆ ಇದ್ದಂತಾಗಿದ್ದು, ಬಡ ಜನರಿಗೆ ಸಿಗಬೇಕಾದ ಔಷಧಿಗಳು ಸಿಗದೇ ಮೂರು ತಿಂಗಳಿಂದ ಬಂದ್ ಆಗಿದ್ದು, ಸಾರ್ವಜನಿಕರಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಜನೌಷಧಿ ಮಳಿಗೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾಗಿದ್ದು, ಜನರಿಗೆ ಸಹಾಯಕವಾಗಿತ್ತು. ಇದೀಗ ಜನೌಷಧಿ ಕೇಂದ್ರ 3 ತಿಂಗಳುಗಳಿಂದ ಮುಚ್ಚಿರುವುದರಿಂದ ಬಡ ಜನರು ದುಬಾರಿ ಹಣ ನೀಡಿ ಖಾಸಗಿ ಔಷಧಿ ಮಳಿಗೆಗಳಿಂದ ಔಷಧಿ ಖರೀದಿಸುವಂತಾಗಿದೆ. ಈ ಕುರಿತಾಗಿ ಸಂಬಂಧ ಪಟ್ಟ ಎಂಎಸ್ ಐಎಲ್ ಅಧಿಕಾರಿಗಳನ್ನು ಕೇಳಿದರೆ, ಬಿ ಫಾರ್ಮ್, ಡಿ ಫಾರ್ಮ್ ಮಾಡಿರುವ ವಿದ್ಯಾರ್ಥಿಗಳು ನಮಗೆ ಸಿಗುತ್ತಿಲ್ಲ ಎಂದು ಉಡಾಫೆ ಉತ್ತರ ಹೇಳುತ್ತಿದ್ದಾರೆ. ತಮಗೂ ಅದಕ್ಕೂ ಸಂಬಂಧವೇ ಎನ್ನುವಂತಹ ಮನಸ್ಥಿತಿಯನ್ನು ಅಧಿಕಾರಿಗಳು ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಎಂಎಸ್ ಐಎಲ್ ಗುತ್ತಿಗೆದಾರ ಡಿ ಎಲ್ ಓ ಮಂಜುನಾಥ್ ಈ ಬಗ್ಗೆ ಪ್ರತಿಕ್ರಿಯಿಸಿ, ಸುಮಾರು ಮೂರು ತಿಂಗಳಿಂದ ಮಳಿಗೆಯನ್ನು ಮುಚ್ಚಿದ್ದೇವೆ. ಫಾರ್ಮಸಿ…
ಕೊರಟಗೆರೆ: ಪ್ರತಿ ತಿಂಗಳ 3ನೇ ಶನಿವಾರದಂದು ಸರ್ಕಾರದ ಅದೇಶದಂತೆ ಆಯ್ದ ಗ್ರಾಮದಲ್ಲಿ ಗ್ರಾಮ ಸಭೆ ನಡೆಸಿ ಗ್ರಾಮಸ್ಥರಿಗೆ ಎಲ್ಲಾ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ವಿವಿಧ ಸವಲತ್ತು ಮತ್ತು ಜಾಗೃತಿಯನ್ನು ಮೂಡಿಸಲಾಗುತ್ತದೆ ಎಂದು ತಹಶೀಲ್ದಾರ್ ನಾಹಿದಾ ಜಮ್ ಜಮ್ ತಿಳಿಸಿದರು. ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ನವಿಲುಕುರಿಕೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವಿಲುಕುರಿಕೆ ಗ್ರಾಮ ವಾಸ್ತವ್ಯದಲ್ಲಿ ತಾಲೂಕಿನ ಎಲ್ಲಾ ಇಲಾಖಾ ಅಧಿಕಾರಿಗಳು ಹಾಜರಾಗಿ, ಇಲಾಖೆಯ ವಿವಿಧ ಮಾಹಿತಿಗಳನ್ನು ಹಂಚಿಕೊಂಡು, ಜನರ ಸಮಸ್ಯೆಗಳು ಅಧಿಕಾರಿಗಳ ಮಟ್ಟದಲ್ಲೇ ಪರಿಹರಿಸಲು ಸಾಧ್ಯ ಇದ್ದರೆ ಇಲ್ಲೇ ಪರಿಹರಿಸಿಕೊಳ್ಳಬಹುದು. ದೊಡ್ಡ ಸಮಸ್ಯೆಗಳನ್ನು ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಗೆ, ಶಾಸಕರಿಗೆ , ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು. ಚುನಾವಣೆಯಲ್ಲಿ ಮತ ಹಕ್ಕು ಪಡೆದಿರುವ ಜನರು ಈಗ ತಮ್ಮ ಅಧಾರ್ ಕಾರ್ಡ್ ಗೆ ಚುನಾವಣೆ ಗುರುತಿನ ಚೀಟಿಯನ್ನು ಲಿಂಕ್ ಮಾಡಲೇಬೇಕಿದೆ ಹಾಗೂ ಸರ್ಕಾರದ ಪಿಂಚಣಿದಾರರು ತಮ್ಮ ಪಿಂಚಣಿ ಆದೇಶ ಪತ್ರ, ಆಧಾರ್ ಮತ್ತು ಬ್ಯಾಂಕ್…