Author: admin

ಸರ್ಕಾರದ ಬಹು ನಿರೀಕ್ಷಿತ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜೂನ್ 18ರಂದು ಜಿಲ್ಲಾಯ ತುರುವೇಕೆರೆ ತಾಲೂಕು ಮಾಯಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾÁರೆ ಎಂದು ಜಿಲ್ಲಾಧಿಕಾರಿ ವೈ.ಎಸ್ . ಪಾಟೀಲ ತಿಳಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯ ಪ್ರಯೋಜನಗಳನ್ನು ತಿಳಿಸಲು 30ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಮಾಹಿತಿ ನೀಡಬೇಕಲ್ಲದೇ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಿದರು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರನ್ನು ಸೇರಿಸಬೇಕು. ಸ್ಥಳೀಯ ಪಂಚಾಯತಿ ಅಧ್ಯಕ್ಷರು, ಸದಸ್ಯರನ್ನು ಆಹ್ವಾನಿಸಬೇಕು ಎಂದು ಸಂಬಂಧಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದರೊಂದಿಗೆ ಶೌಚಾಲಯ,…

Read More

ಪ್ರಸಿದ್ದ ದೇವಸ್ಥಾನವೊಂದರಲ್ಲಿ ಬೃಹತ್ ರಥ ಉರುಳಿಬಿದ್ದು ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸಿ.ಮನೋಹರನ್ (57) ಮತ್ತು ಜಿ ಸರವಣನ್ (50) ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ವೈಕಾಶಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ 30 ಅಡಿ ಅಲಂಕೃತ ರಥ ದೇವಾಲಯದ ಸುತ್ತಮುತ್ತಲಿನ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದ್ದಾಗ ರಥವು ಇದ್ದಕ್ಕಿದ್ದಂತೆ ಉರುಳಿಬಿದ್ದಿದೆ. ಪರಿಣಾಮ ರಥದ ಮರದ ಚಕ್ರದಡಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಕೂಡಲೇ ರಥ ಎಳೆಯುತ್ತಿದ್ದ ಭಕ್ತರು ಹಾಗೂ ಮೆರವಣಿಗೆ ವೀಕ್ಷಿಸುತ್ತಿದ್ದವರು ರಥದಡಿ ಸಿಲುಕಿದ್ದ ಇನ್ನುಳಿದವರ ರಕ್ಷಣೆಗೆ ಧಾವಿಸಿ ಮೂವರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಅವರನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಸಕಲೇಶಪುರ: ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಸಂಸ್ಕಾರಕ್ಕೆ ತೆರಳಿ ವಾಪಸ್ಸಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಮಠಸಾಗರದಿಂದ ಬಾಳ್ಳುಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ಬುಧವಾರ ನಡೆದಿದೆ. ತಾಲೂಕಿನ ಮಠಸಾಗರ ಗ್ರಾಮದ ನಿವಾಸಿ ಎ. ಸ್ವಾಮಿ (53) ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಇವರು  ಕಳೆದ 25 ವರ್ಷಗಳಿಂದ ಕಾಫಿ ಮಂಡಳಿಯಲ್ಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಸಂಸ್ಕಾರಕ್ಕೆ ತೆರಳಿ ವಾಪಸಾಗಿದ್ದರು. ಬುಧವಾರ ಮುಂಜಾನೆ ಮಠಸಾಗರದಿಂದ ಬಾಳ್ಳುಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ದಾರಿ ಹೋಕರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ವಾಮಿ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ಪುತ್ರ, ನಮ್ಮ ತಂದೆ ತುಂಬಾ ಸೌಮ್ಯ ಸ್ವಭಾವದವಾರಗಿದ್ದು ಯಾರೋ ಕೊಲೆ ಮಾಡಿ ಬಿಸಾಕಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಚೀನಾದ ಪುರಾತತ್ವ ಶಾಸ್ತ್ರಜ್ಞರು ಸುಮಾರು 13,000 ಕಲಾಕೃತಿಗಳ ಪುರಾತನ ನಿಧಿ ಪತ್ತೆ ಹಚ್ಚಿದ್ದು, ನೈಋತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಪತ್ತೆಯಾದ ಕನಿಷ್ಠ ಹತ್ತು ಕಂಚಿನ ಸಾಮಾನು ಒಳಗೊಂಡಂತೆ ಸೊಗಸಾದ ಕಂಚು, ಚಿನ್ನ ಮತ್ತು ‍ಪಚ್ಚೆಹರಳು ಸಾಮಾನುಗಳು ಪುರಾತತ್ವ ಶಾಸ್ತ್ರಜ್ಞರನ್ನು ಬೆರಗುಗೊಳಿಸಿದೆ. ಇದು 3,000 ದಿಂದ 4,500 ವರ್ಷಗಳಷ್ಟು ಹಿಂದಿನ ನಿಗೂಢ ಸಾಮ್ರಜ್ಯವೆಂದು ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೊದಲಿಗೆ ಇದನ್ನು 1920ರ ದಶಕದ ಅಂತ್ಯದಲ್ಲಿ ಪತ್ತೆಹಚ್ಚಲಾಗಿತ್ತು. ಅವಶೇಷಗಳನ್ನು 20ನೇ ಶತಮಾನದ ವಿಶ್ವದ ಶ್ರೇಷ್ಠ ಪುರಾತತ್ವ ಶಾಸ್ತ್ರದ ಸಂಶೋಧನೆಗಳಲ್ಲಿ ಒಂದು ಎಂದು ಹೆಸರಿಸಲಾಗಿದೆ.  ಪುರಾತನ ಕಾಲದ ಸಾಂಸ್ಕೃತಿಕ ಅವಶೇಷಗಳನ್ನು ಪುರಾತತ್ವ ಶಾಸ್ತ್ರಜ್ಞರು ಈ ಸ್ಥಳದಲ್ಲಿ  ಪತ್ತೆ ಹಚ್ಚಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಲ್ಪೆ: ನಾಗರಹಾವು ಕಚ್ಚಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಿದಿಯೂರು ಗ್ರಾಮದ ಸುಧಾಕರ ಅಮೀನ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಧಾಕರ ಅಮೀನ್ (55) ಅವರಿಗೆ ಜೂ. 8ರಂದು ತಮ್ಮ ಮನೆಯ ಕೋಣೆಯಲ್ಲಿ ಕಪಾಟಿನ ಮೇಲೆ ಇಟ್ಟಿದ್ದ ಅಂಗಿಯನ್ನು ತೆಗೆಯಲು ಹೋದಾಗ ಕಪಾಟಿನ ಮೇಲೆ ಇದ್ದ ನಾಗರಹಾವು ಕಚ್ಚಿದೆ. ಕೂಡಲೇ ಸುಧಾಕರ ಅಮೀನ್ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜೂ. 13ರಂದು ಮಧ್ಯಾಹ್ನದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಅಕ್ಕ ವನಜ ಅಮೀನ್ ಅವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಪಾಲಕ್ಕಾಡ್: ಬಾತ್ ರೂಮ್ ಕಿಟಕಿಯಲ್ಲಿ ವ್ಯಕ್ತಿಯ ನೆರಳು ಕಂಡು ಸ್ನಾನ ಮಾಡುತ್ತಿದ್ದ ಮಹಿಳೆ ಬೆಚ್ಚಿಬಿದ್ದಿದ್ದು,  ಮಹಿಳೆ ಕಿರುಚಿ ಕೊಂಡಾಗ ವ್ಯಕ್ತಿ ಸ್ಥಳದಿಂದ ಪರಾರಿಯಾಗಿರುವ ಘಟನೆ  ಕೇರಳದ  ಪಾಲಕ್ಕಾಡ್ ನಲ್ಲಿ ನಡೆದಿದ್ದು, ಆರೋಪಿಯನ್ನು ಕೇರಳ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಶಹಜಹಾನ್​ ಎಂದು ಗುರುತಿಸಲಾಗಿದೆ. ಈತ ಕೊಡುಂಬಾ ನಿವಾಸಿಯಾಗಿದ್ದು, ಸಿಪಿಎಂ ಪಕ್ಷದ ಮಾಜಿ ನಾಯಕನಾಗಿದ್ದಾನೆ ಎಂದು ತಿಳಿದು ಬಂದಿದೆ.  ಆರೋಪಿ ವಿರುದ್ಧ ಜಾಮೀನು ರಹಿತ ಕಾಯ್ದೆ ದಾಖಲಿಸಲಾಗಿದೆ. ಬಾತ್​  ರೂಮ್​ ಕಿಟಕಿಯ ಬಳಿ ನಿಂತು ಮಹಿಳೆಯ ಅಶ್ಲೀಲ ಚಿತ್ರ ವಿಡಿಯೋ ಮಾಡುತ್ತಿದ್ದ  ಶಹಜಹಾನ್ ನ ನೆರಳು  ನೋಡಿ ಮಹಿಳೆ ಕಿರುಚಿಕೊಂಡಿದ್ದು, ಈ ವೇಳೆ ಆರೋಪಿ ಗಾಬರಿಯಿಂದ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಪರಾರಿಯಾಗುತ್ತಿದ್ದ ವೇಳೆ  ಆತನ ಮೊಬೈಲ್​ ಮೈದಾನದ ಬಳಿ ಬಿದ್ದಿತ್ತು. ರಹಸ್ಯ ಕ್ಯಾಮೆರಾವನ್ನು ಅಳವಡಿಸಿದ್ದೇ  ಶಹಜಹಾನ್​ ಎಂದರಿಯದ ಮಹಿಳೆ ಸಹಾಯಕ್ಕಾಗಿ ಶಹಜಹಾನ್​ ನೆರವಿಗಾಗಿ ಕರೆ ಮಾಡಿದ್ದಾಳೆ. ಈ ವೇಳೆ ಮೈದಾನದಲ್ಲಿದ್ದ ಮೊಬೈಲ್ ರಿಂಗ್ ಆಗಿದ್ದು, ಇದರಿಂದಾಗಿ ಶಹಜಹಾನ್ ಮೇಲೆ ಅನುಮಾನ ಮೂಡಿತ್ತು. ಆ…

Read More

ಕೊರಟಗೆರೆ: ತನ್ನ ಅಕ್ಕನ ಮಗಳನ್ನು ಮದುವೆಯಾಗಿದ್ದ ವ್ಯಕಿಯೊಬ್ಬ, ಸಂಸಾರದಲ್ಲಿ ಅನ್ಯೋನ್ಯತೆ ಇಲ್ಲದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಇದ್ದುದರಿಂದ, ಹೆಂಡತಿಯು ತನ್ನ ಗಂಡನನ್ನು ಬಿಟ್ಟು ತವರು ಮನೆಗೆ ಹೋಗಿ ವಾಸವಿದ್ದಳು. ಇದರಿಂದ ಮನನೊಂದು ಗಂಡನು ಆತ್ಮಹತ್ಯೆ ಮಾಡಿಕೊಂಡ ದಾರುಣಾ ಘಟನೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮದಲ್ಲಿ ಜರುಗಿದೆ. ಶಿವಪ್ರಸಾದ್  ಕುಮಾರ ಬಿನ್ ರಾಮನರಸಯ್ಯ(45) ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾನೆ.  ಮೃತ ಶಿವಪ್ರಸಾದ್ ಕುಮಾರ ರಾತ್ರಿ 9 ಗಂಟೆಗೆ ಊಟ ಮಾಡಿಕೊಂಡು ಮನೆಯಿಂದ ಹೊರ ಹೋಗಿ ಕಿರಣ್ ಕುಮಾರ್ ರವರ ಜಮೀನಿನ ತ್ಯಾಗದ ಮರಕ್ಕೆ ಪ್ಲಾಸ್ಟಿಕ್ ದಾರಗಳಿಂದ ನೇಣು ಹಾಕಿಕೊಂಡು ತನ್ಮೂಲಕ ತಾನೆ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಮೃತನ ಸಾವಿನಲ್ಲಿ ಯಾವುದೇ ಅನುಮಾನಗಳಿರುವುದಿಲ್ಲ ಎನ್ನಲಾಗಿದೆ. ಪಿರ್ಯಾದಿ ರಾಮಯ್ಯ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ ಐ ನಾಗರಾಜು, ಎಎಸ್ ಐ ಯೋಗೀಶ್, ಮುಖ್ಯಪೇದೆ ಜಯಪ್ರಕಾಶ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಚಿತ್ರದುರ್ಗ: ಹಿರಿಯೂರು ನಗರದ ಕಾರ್ಮಿಕರ ಇಲಾಖೆಯಲ್ಲಿ ನಕಲಿ ಲೇಬರ್ ಕಾರ್ಡ್ ಮಾಡಿಸಿಕೊಡುತ್ತಿರುವ ದ್ವಿದಸ ಸಹಾಯಕರಾದ ಜೋಗೇಶ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ಹಿರಿಯೂರು ನಗರದ ಸಿರಿಗನ್ನಡ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ವತಿಯು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಸಿರಿಗನ್ನಡ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ವತಿಯ ಮುಕುಂದ, ಕರ್ನಾಟಕ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಮಂಡಳಿಯು ಸೌಲಭ್ಯಗಳನ್ನು ಪಡೆಯಲು ಕಾಮನ್ ಸರ್ವಿಸ್ ಸೆಂಟರ್ ನ ಆನ್ ಲೈನ್ ನ ಮುಖಾಂತರ , ಮಧ್ಯವರ್ತಿಗಳ ಮುಖಾಂತರ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ಗಳು ನೋಂದಣಿಯಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಹ ಇದರ ಬಗ್ಗೆ ತೀವ್ರವಾಗಿ ಗಮನ ನೀಡದೆ ಇರುವುದು ಬೇಸರದ ಸಂಗತಿಯಾಗಿದೆ. ಕಟ್ಟಡ ಕಾರ್ಮಿಕರ ಇಲಾಖೆ ದೊರೆಯುವ ಸೌಲಭ್ಯಗಳು ಯಾವುದು ಸಹ ನಿಜವಾದ ಕಟ್ಟಡ ಕಾರ್ಮಿಕರಿಗೆ ದೊರೆಯದ ರೀತಿಯಲ್ಲಿ ಮಧ್ಯವರ್ತಿಗಳ ಕಾಟ ಹೆಚ್ಚುತ್ತಿದೆ.…

Read More

ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‍ನಲ್ಲಿ ಪಾಕಿಸ್ತಾನಿ ಪ್ರಜೆ ಸೇರಿದಂತೆ ಇಬ್ಬರು ಲಷ್ಕರ-ಎ-ತೊಯ್ಬಾ ಉಗ್ರರು ಹತರಾಗಿದ್ದಾರೆ. ಶ್ರೀನಗರ ನಗರದ ಬೆಮಿನಾ ಪ್ರದೇಶದಲ್ಲಿ ತಡರಾತ್ರಿ ನಿಷೇತ ಭಯೋತ್ಪಾದಕ ಸಂಘಟನೆ ಎಲ್ ಇಟಿಯ ಇಬ್ಬರು ಭಯೋತ್ಪಾದಕರು ಅಡಗಿರುವ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಬಲಿಯಾದರೆ ಒಬ್ಬ ಪೊಲೀಸ್ ಸಿಬ್ಬಂಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್ಕೌಂಟರ್ ಸ್ಥಳದಿಂದ ವಶಪಡಿಸಿಕೊಂಡ ದಾಖಲೆಗಳು ಮತ್ತು ಇತರ ದೋಷಾರೋಪಣೆ ಸಾಮಗ್ರಿಗಳ ಪ್ರಕಾರ, ಹತರಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಪಾಕಿಸ್ತಾನದ ಫೈಸಲಾಬಾದ್ ನಿವಾಸಿ ಅಬ್ದುಲ್ಲಾ ಗೌಜ್ರಿ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ. ಇದೇ ಭಯೋತ್ಪಾದಕರ ಗುಂಪು ಸೋಪೋರ್‍ನಲ್ಲಿ ತಪ್ಪಿಸಿಕೊಂಡಿದ್ದರು ನಾವು ಅವರ ಚಲನವಲನವನ್ನು ಪತ್ತೆಹಚ್ಚಿದ್ದೇವೆ ಎಂದು ಹೇಳಿದರು. ಹತ್ಯೆಗೀಡಾದ ಇನ್ನೊಬ್ಬ ಉಗ್ರನನ್ನು ಅನಂತನಾಗ್ ಜಿಲ್ಲಾಯ ನಿವಾಸಿ ಆದಿಲ್ ಹುಸೇನ್ ಮಿರ್ ಅಲಿಯಾಸ್ ಸುಫಿಯಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ದಾಖಲೆಗಳ ಪ್ರಕಾರ, ಈತ 2018 ರಲ್ಲಿ ವಾಘಾದಿಂದ…

Read More

ಜನತಾ ಜಲಧಾರೆ ಕಾರ್ಯಕ್ರಮದ ನಂತರ ಜೆಡಿಎಸ್ ಬೆಂಗಳೂರಿನಲ್ಲಿ ಜನತಾ ಮಿತ್ರ ಎಂಬ ಕಾರ್ಯಕ್ರಮವನ್ನು ಒಂದು ತಿಂಗಳ ಕಾಲ ನಡೆಸಲು ನಿರ್ಧರಿಸಿದೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜೂ.22ರಂದು ಜನತಾ ಮಿತ್ರ ವಾಹನಗಳಿಗೆ ಚಾಲನೆ ನೀಡಲಾಗುತ್ತದೆ. 15 ವಾಹನಗಳು ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದು, ಜನರಿಗೆ ಯಾವ ರೀತಿಯ ಆಡಳಿತ ಬೇಕು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಿವೆ. ಅಲ್ಲದೆ, ಜೆಡಿಎಸ್ನ ಉದ್ದೇಶಿತ ಪಂಚರತ್ನ ಕಾರ್ಯಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತದೆ. ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಏಕೆ ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಅತ್ಯಾಧುನಿಕವಾಗಿ ವಿನ್ಯಾಸಗೊಳಿಸಲಾಗಿರುವ ವಾಹನ ಪ್ರತಿ ವಿಧಾನಸಭಾ ಕ್ಷೇತ್ರದ ವಾರ್ಡ್ ನಲ್ಲೂ ಸಂಚರಿಸಲಿವೆ. ಸಾರ್ವಜನಿಕರು ಮುಂದಿನ ಸರ್ಕಾರ ಹೀಗಿರಬೇಕು ಎಂಬ ಬಗ್ಗೆ ತಮ್ಮ ಸಲಹೆಯನ್ನು ಬರೆದು ಡ್ರಾಪ್ ಬಾಕ್ಸ್ನಲ್ಲಿ ಹಾಕಬಹುದು. ಅಲ್ಲದೆ,ಮೊಬೈಲ್ ನಲ್ಲಿ ಬಾರ್ಕೋಡ್ ಸ್ಕ್ಯಾನ್ ಮಾಡಿ ವೆಬ್ ಸೈಟ್ ಮೂಲಕವೂ ಅಭಿಪ್ರಾಯ ತಿಳಿಸಬಹುದು. ಪೋಡಿಯಂನಲ್ಲಿ ಟ್ಯಾಬ್ ಲಭ್ಯವಿದ್ದು, ಅದರಲ್ಲೂ ಕೂಡ ತಮ್ಮ ಸಲಹೆಗಳನ್ನು ಬರೆಯಬಹುದಾಗಿದೆ. ಒಂದು…

Read More