Subscribe to Updates
Get the latest creative news from FooBar about art, design and business.
- ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
- ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!
- ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!
- ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
- ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ
- ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮುಂದುವರಿಸಿ: ಮಾ. 24 ರಂದು ಬೆಂಗಳೂರು ಚಲೋ: ತಿಪ್ಪೇಸ್ವಾಮಿ
- ಕಸಾಪ ಭವನಕ್ಕೆ ಜಾಗ ನೀಡಿ: ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮನವಿ
- ಸಚಿವ ಶಿವರಾಜ್ ತಂಗಡಗಿಗೆ ದಿಢೀರ್ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು
Author: admin
ಬೆಳಗಾವಿ: ಡಿಸೆಂಬರ್ ಚಳಿಗಾಲ ಅಧಿವೇಶನದ ವೇಳೆಯಲ್ಲಿ ಮಲ್ಟಿ ಸೂಪರ್’ಸ್ಪೆಷಾಲಿಟಿ ಆಸ್ಪತ್ರೆಯ ಎರಡು ಮಹಡಿಗಳನ್ನು ಉದ್ಘಾಟನಾ ಮಾಡಲಿದ್ದೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಶನಿವಾರ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ ಸಭೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಆ ವೇಳೆ ಬೆಳಗಾವಿ ನಗರದಲ್ಲಿ ಪ್ರಗತಿ ಹಂತದಲ್ಲಿ ಇರುವ ಮಲ್ಟಿ ಸೂಪರ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟನೆ ಆಗಲಿದೆ ಎಂದು ತಿಳಿಸಿದರು. ಸದ್ಯದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದರು. ಬಳ್ಳಾರಿ ಆಸ್ಪತ್ರೆಯಲ್ಲಿ ಆಗಿರುವ ಸಮಸ್ಯೆ ನಮ್ಮ ಜಿಮ್ಸ್ ಆಸ್ಪತ್ರೆಯಲ್ಲಿ ಆಗಬಾರದು. ಆಕ್ಸಿಜನ್ ತೊಂದರೆ ಆಗದಂತೆ ನೋಡಿಕೋಳ್ಳಬೇಕು, ವಿದ್ಯುತ್ ಸಮಸ್ಯೆ ಎದುರಾದಾಗ ಆಕ್ಸಿಜನ್ ಸಪ್ಲೈ ಮಾಡಲು ಜನರೇಟರ್ ರೇಡಿ ಇರಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದಕ್ಕಿಂತ ಮುಂಚೆ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ…
ಮಧುಗಿರಿ: ತಾಲೂಕು ದಂಡಾಧಿಕಾರಿಗಳ ಕಚೇರಿಯ ಸುತ್ತಮುತ್ತ ಬೆಳೆದಿದ್ದ ಗಿಡಗಂಟಿಗಳನ್ನು ತಹಶೀಲ್ದಾರ್ ಸುರೇಶ್ ಆಚಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಈ ಸ್ವಚ್ಛತಾ ಕಾರ್ಯದಲ್ಲಿ ಕಚೇರಿ ಸಿಬ್ಬಂದಿ ಹಾಗೂ ಪುರಸಭೆಯ ಪೌರ ಕಾರ್ಮಿಕರು ಭಾಗಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಐ.ಡಿಹಳ್ಳಿ ಆರ್.ಐ ನಾರಾಯಣಪ್ಪ, ಕಸಬಾ ವಿ.ಎ ಪರಮೇಶ್, ಸಿಬ್ಬಂದಿಗಳಾದ ಸುನಿಲ್, ರವಿ, ಶಿವಶಂಕರ್ ನಾಯಕ್, ಮತ್ತು ಪುರಸಭಾ ಹೆಲ್ತ್ ಇನ್ಸ್ಪೆಕ್ಟರ್ ಬಾಲಾಜಿ ಮತ್ತು ಗ್ರಾಮ ಸಹಾಯಕರು ಹಾಗೂ ಪುರಸಭೆ ಪೌರ ಕಾರ್ಮಿಕರು ಈ ಸಂದರ್ಭ ಇದ್ದರು. ವರದಿ: ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ದೊಡ್ಡಮಾಲೂರು ಪಂಚಾಯತಿ ವ್ಯಾಪ್ತಿಯಿಂದ ಸೂರ್ ನಾಗೇನಹಳ್ಳಿ ಗ್ರಾಮದಲ್ಲಿ ಜನಜೀವನ ಮಿಷನ್ ಯೋಜನೆಯಡಿಯಲ್ಲಿ ಸುಮಾರು 39 ಲಕ್ಷ ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಶಾಸಕರಾದ ಎಂ.ವಿ.ವೀರಭದ್ರಯ್ಯ ಚಾಲನೆ ನೀಡಿದರು. ಗ್ರಾಮದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದೆನ್ನುವ ಉದ್ದೇಶದೊಂದಿಗೆ ಕೊಡಿಗೇನಹಳ್ಳಿ ದೊಡ್ಡಮಾಲೂರು ಪಂಚಾಯತಿ ವ್ಯಾಪ್ತಿಯಿಂದ ಸೂರ್ ನಾಗೇನಹಳ್ಳಿ ಗ್ರಾಮದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ವ್ಯಾಪ್ತಿಯ ಮುಖಂಡರು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು. ವರದಿ : ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾಸನ: ಜಿಲ್ಲೆಯ ಚೆನ್ನಾರಾಯಪಟ್ಟಣ ತಾಲ್ಲೂಕಿನ ಜಂಬೂರಿನಲ್ಲಿ ಗಂಗಾಪರಮೇಶ್ವರಿ ವಿಸರ್ಜನೆ ಮಹೋತ್ಸವ ನಡೆಯಿತು. ಗೌರಿ ಹಬ್ಬದದಂದು ಗಂಗಾಪರಮೇಶ್ವರಿ ಮೀನುಗಾರರ ಸಹಕಾರಿ ಸಂಘ ಹಾಗೂ ಗಂಗಾಮತಸ್ಥ ಸಮಾಜ ಮತ್ತು ಗ್ರಾಮಸ್ಥರು ಪ್ರತಿಷ್ಠಾಪಿಸಿದ್ದ ಶ್ರೀ ಗಂಗಾಪರಮೇಶ್ವರಿ ತಾಯಿಯ ವಿಗ್ರಹವನ್ನು ಜಂಬೂರಿನಲ್ಲಿ ಕೆರೆಗೆ ವಿಸರ್ಜನೆ ಮಾಡಲಾಯಿತು. ವಿಸರ್ಜನೆಗೆ ಮೊದಲು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬೆಸ್ತ ಜನಾಂಗಂದ ಕುಲದೇವತೆಯಾದ ಗಂಗಾಪರಮೇಶ್ವರಿಯನ್ನು ಗೌರಿ ಹಬ್ಬದದಂದು ಪ್ರತಿಷ್ಠಾಪಿಸಲ್ಪಟ್ಟು ಇಲ್ಲಿ ವಿಶೇಷ ಪೂಜೆ ನಡೆಸುತ್ತಾರೆ. ಮೊಸಳೆಯನ್ನು ತನ್ನ ರಥವಾಗಿಮಾಡಿಕೊಂಡು ಕುಳಿತ ಸುಂದರ ದೇವತೆ, ಸಕಲ ಜೀವರಾಶಿಗಳಿಗೆ ಜೀವನಾಡಿ ಗಂಗಾಪರಮೇಶ್ವರಿ ಪೂಜೆ ಜೊತೆಗೆ ಮೀನು ಹಿಡಿಯುವ ಬಲೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತ ಕಾರ್ಯಕ್ರಮದ ಭಾಷಣದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಲವೊಂದು ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರು ಒಗ್ಗಟ್ಟಾಗಿ ಇರಿ ಎಂದು ಕರೆ ನೀಡಿದ್ದಾರೆ. ವಿದ್ಯಾರ್ಥಿ ದಿನಗಳಿಂದ ತಾನು ಬೆಳೆದ ಬಂದ ರೀತಿಯೇ ಎಲ್ಲರಿಗೂ ಮಾದರಿಯಾಗಲಿ ಎಂದ ಡಿಕೆಶಿ, ಪರಿಶ್ರಮಕ್ಕೆ ಫಲ ಇದೆ ಎನ್ನುವುದಕ್ಕೆ ನಾನೇ ಸಾಕ್ಷಿ ಎಂದು ಹೇಳಿದ್ದಾರೆ. ಹುದ್ದೆಗೆ ಆಸೆ ಪಡದೇ ಕೆಲಸ ಮಾಡಿ ಹುದ್ದೆ ನಿಮ್ಮನ್ನೇ ಹುಡುಕಿಕೊಂಡು ಬರುತ್ತದೆ ಎಂದು ಹೇಳಿದ್ದಾರೆ. ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಗೊಳಿಸುವುದು ಮತ್ತು ಮುಂದಿನ ಚುನಾವಣೆಗೆ ಪೂರ್ವ ತಯಾರಿ ಸಂಬಂಧ ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ನಡೆಸಿದ್ದ ಸಂಭಾಷಣೆಯನ್ನೂ ಡಿಕೆಶಿ ಈ ವೇಳೆ ಬಹಿರಂಗ ಪಡಿಸಿದ್ದಾರೆ. ಡಿಕೆಶಿ ಭಾಷಣದ ವೇಳೆ ಭಾರತ್ ಜೋಡೋ ಯಾತ್ರೆಯ ವಿಚಾರದಲ್ಲಿ ಕೆಪಿಸಿಸಿಯ ಕೆಲವು ಮುಖಂಡರ ಜೊತೆಗೆ ಸಹಮತವಿಲ್ಲ ಎನ್ನುವ ವಿಚಾರವೂ ಪರೋಕ್ಷವಾಗಿ ಬಹಿರಂಗಗೊಂಡಿದೆ. “ನಾನು ಫೈನಲ್ ಇಯರ್ ಸ್ಟೂಡೆಂಟ್, ವಿದ್ಯಾರ್ಥಿ ನಾಯಕನಾಗಿದ್ದ ದಿವಸದಲ್ಲಿ ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷ ನನಗೆ…
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರಿ ಸದ್ದು ಮಾಡಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ನಾನೇ ಮುಸ್ಲಿಂ ಯುವಕನನ್ನು ಇಷ್ಟಪಟ್ಟು ಮದುವೆಯಾಗುತ್ತಿದ್ದು, ಆ ಧರ್ಮಕ್ಕೆ ಮತಾಂತರಗೊಳ್ಳುತ್ತೇನೆ. ಅದು ನನ್ನ ಹಕ್ಕು, ಸ್ವಾತಂತ್ರ್ಯ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಮದುವೆಗೆ ಅಡ್ಡಿಪಡಿಸಿದವರಿಗೆ ಹಿಂದೂ ಯುವತಿ ಚೈತ್ರಾ ತಿರುಗೇಟು ಕೊಟ್ಟಿದ್ದಾಳೆ. ನಾವು ಪ್ರೀತಿಸಿಯೇ ಮದುವೆ ಆಗುತ್ತಿದ್ದೇನೆ, ಮುಂದೆಯೂ ಚೆನ್ನಾಗಿರುತ್ತೇವೆ ಎಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರಿಗೆ ಯುವತಿ ತಿರುಗೇಟು ನೀಡಿದ್ದಾಳೆ. ನನ್ನ ಗಂಡನ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರ ವಿರುದ್ಧವೂ ಕಿಡಿಕಾರಿದ್ದಾಳೆ. ಸೆಪ್ಟೆಂಬರ್ 14ರಂದು ಸಂಜೆ ಚಿಕ್ಕಮಗಳೂರು ನಗರದಲ್ಲಿ ಲವ್ ಜಿಹಾದ್ ಆರೋಪದ ಬಿಸಿಯ ತಾಪ ಏರಿತ್ತು. ಮುಸ್ಲಿಂ ಹುಡುಗ-ಹಿಂದೂ ಹುಡುಗಿ ಮದುವೆ ಆಗುವ ವಿಷಯ ತಿಳಿದು ಹಿಂದೂಪರ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಪೊಲೀಸರೂ ಎಲ್ಲರನ್ನೂ ಠಾಣೆಗೆ ಕರೆದೊಯ್ದಿದ್ದರು. ನೈತಿಕ ಪೊಲೀಸ್ ಗಿರಿಯ ಆರೋಪದಡಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದರು. ಹುಡುಗ-ಹುಡುಗಿ…
ಮಾಜಿ ಮುಖ್ಯಮಂತ್ರಿ ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ಮುಂದಿನ ವಾರ ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ.ತಾವು ಬಿಜೆಪಿ ಸೇರುವುದರ ಜೊತೆಗೆ ಅಮರಿಂದರ್ ಸಿಂಗ್ ತಾವು ಹೊಸದಾಗಿ ರಚಿಸಿದ್ದ ಪಂಜಾಬ್ ಲೋಕ ಕಾಂಗ್ರೆಸ್ (PLC) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ. ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಾಗಿ ಲಂಡನ್ಗೆ ತೆರಳಿದ್ದ ಪಂಜಾಬ್ ಮಾಜಿ ಸಿಎಂ, ಕ್ಯಾಪ್ಟನ್ ಅಮರಿಂದರ್ ಸಿಂಗ್ (80) ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.ಮಾಜಿ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಕಳೆದ ವರ್ಷ ನವೆಂಬರ್ ಆರಂಭದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ರಾಜೀನಾಮೆ ನೀಡಿ ಒಂದೂವರೆ ತಿಂಗಳ ನಂತರ ಕಾಂಗ್ರೆಸ್ ನಾಯಕತ್ವವು ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಆಗಿ ನೇಮಿಸಿತು. ಆಗ ಪಂಜಾಬ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಆಗಿದ್ದರು. ಕಾಂಗ್ರೆಸ್ ತೊರೆದ ನಂತರ, ಫೆಬ್ರವರಿ 20 ರ ಪಂಜಾಬ್ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಅಮರಿಂದರ್ PLC…
ಬೈಲಹೊಂಗಲ: ಸತತ ಪರಿಶ್ರಮ ಹಾಗೂ ದೃಢಸಂಕಲ್ಪದಿಂದ ಅಂದುಕೊಂಡದ್ದನ್ನು ವಿದ್ಯಾರ್ಥಿ ಜೀವನದಲ್ಲಿ ಸಾಧಿಸಬಹುದು ಎಂದು ನ್ಯಾ.ಎಫ್.ಎಸ್.ಸಿದ್ದನಗೌಡರ ಹೇಳಿದರು. ಸಮೀಪದ ಸುಕ್ಷೇತ್ರ ಇಂಚಲಶಿವಯೋಗಿಶ್ವರ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯ ಅಂತಿಮ ವರ್ಷದ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಹಾಗೂ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ, ಜೀವನದಲ್ಲಿ ತುಂಬಾ ಕಷ್ಟಪಟ್ಟು ಮೇಲೆರಿದವರಿದ್ದಾರೆ. ಅಂಥವರ ಜೀವನವೇ ವಿದ್ಯಾರ್ಥಿಗಳಿಗೆ ಒಂದು ಸ್ಪೂರ್ತಿಧಾಯಕ ನಿದರ್ಶನ. ವಿದ್ಯಾರ್ಥಿಗಳು ಜೀವನದಲ್ಲಿ ಇಟ್ಟುಕೊಂಡ ಗುರಿಸಾಧನೆಗೆ ದಿನ ರಾತ್ರಿ ಎನ್ನದೆ ದೃಷ್ಟಿ ಎಲ್ಲವನ್ನು ಗುರಿಯಮೇಲಿರಿಸಿ ಇನ್ನೊಂದು ವಿಚಾರದ ಬಗ್ಗೆ ಕನಸ್ಸಿನಲ್ಲೂ ಯೋಚಿಸದೆ ಅಂದುಕೊಂಡ ಗುರಿ ಸಾಧನೆಯ ಹಾದಿಯಲ್ಲಿ ದೇಹದ ಕಷ್ಟುಗಳನ್ನು ಮರೆಯುತಾ ಸತತ ಪರಿಶ್ರಮದಿಂದ ಅಂದುಕೊಂಡ ಎಂತಹ ದೊಡ್ಡದಾದ ಗುರಿಯನ್ನು ಮುಟ್ಟಬಹುದು ಎಂದರು. ಇಂದಿನ ಶಿಕ್ಷಣ ಕಲಿತ ಪ್ರತಿಯೊಬ್ಬ ವಿದ್ಯಾರ್ಥಿಗಳು ನೌಕರಿಗಾಗಿ ಶಿಕ್ಷಣ, ಹೊಟ್ಟೆಗಾಗಿ ನೌಕರಿ ಎನ್ನದೆ ಉನ್ನತ ಶಿಕ್ಷಣ ಪಡೆಯುವತ್ತ ವಿದ್ಯಾರ್ಥಿಗಳ ಗಮನ ಇರಬೇಕು. ಜ್ಞಾನ ಪಡೆದ ವಿದ್ಯಾರ್ಥಿಗಳು ಸ್ವತಃ ತಾವೇ ತಮ್ಮ ಜೀವನದ ಶಿಲ್ಪಿಗಳಾಗಬೇಕು. ಪ್ರಪಂಚದಲ್ಲಿ ಸೋಲಿನಿಂದ…
ಬೆಂಗಳೂರು, ಸೆಪ್ಟೆಂಬರ್ 17: ಬೆಂಗಳೂರು ನಗರದಲ್ಲಿ ಸ್ಥಗಿತ ಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಗೊಳಿಸುವ ಯಾವುದೇ ಪ್ರಸ್ತಾವನೆ, ಸದ್ಯಕ್ಕೆ, ಸರಕಾರದ ಮುಂದಿಲ್ಲ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ, ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು, ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನ ವಾಗಿಲ್ಲ, ಸಾರ್ವಜನಿಕರಿಂದ, ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಇರುವ ಹಿನ್ನೆಲೆಯಲ್ಲಿ, ಸ್ಥಗಿತಗೊಳಿ ಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು, ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದರುಹೈಕೋರ್ಟ್ ಟೋಯಿಂಗ್ ಬಗ್ಗೆ ಪರಿಶೀಲನೆ ಕಾಲಾವಕಾಶ ನೀಡಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಟೋಯಿಂಗ್…
ದೇವನಹಳ್ಳಿ, ಸೆಪ್ಟೆಬಂರ್ 17: ಪ್ರೀತಿಸಿದ ಯುವತಿ ಕೈಕೊಟ್ಟು ಮತ್ತೊಬ್ಬನ್ನು ವಿವಾಹವಾಗಿದ್ದಕ್ಕೆ ಮನನೊಂದಿದ್ದ ಪಾಗಲ್ ಪ್ರೇಮಿಯೊಬ್ಬ ಹಳೇಯ ಪ್ರೇಯಸಿಗೆ 20ಕ್ಕೂ ಹೆಚ್ಚು ಸಲ ಚಾಕುವಿನಿಂದ ಇರಿದು ಕೊಂದಿದ್ದಾನೆ. ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಪ್ರೀತಿಸಿದಾಗಿ ನವವಧುವಾಗಿ 15 ದಿನಗಳಷ್ಟೇ ಕಳೆದಿತ್ತು. ಪ್ರೀತಿಸಿದ್ದ ಹುಡುಗ ತನ್ನ ಪ್ರೇಯಸಿ ಕೈಕೊಟ್ಟು ಮತ್ತೊಬ್ಬನ ಪಲ್ಲಂಗದಲ್ಲಿ ಪವಣಿಸುತ್ತಿರುವುದನ್ನು ಸಹಿಸದೇ ಪಾಗಲ್ ಆಗಿದ್ದ. ಪತಿಯ ಮನೆಯಿಂದ ತವರು ಮನೆಗೆ ಬಂದಿದ್ದ ಪ್ರೇಯಸಿಯ ವಿಚಾರ ಅದು ಹೇಗೋ ಪಾಗಲ್ ಪ್ರೇಮಿಗೆ ತಿಳಿದಿದೆ. ಪ್ರೇಯಸಿಯನ್ನು ಮಾತನಾಡಿಸುವ ಸೋಗಿನಲ್ಲಿ ಬಂದು ಕೊಟ್ಟಿಗೆಯಲ್ಲಿ 20ಕ್ಕೂ ಹೆಚ್ಚು ಸಲ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ 23 ವರ್ಷದ ಸೌಮ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ, ಚಾಕುವಿನಿಂದ ಇರಿದುಪಾಗಲ್ ಪ್ರೇಮಿ ತಾನೂ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪಾಗಲ್ ಪ್ರೇಮಿಯನ್ನು ಬಂಧಿಸಲು ಹೋದ ಪೊಲೀಸರೇ ಆರೋಪಿ ಸುಬ್ರಮಣ್ಯನನ್ನು…