Author: admin

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ  ಸಮನ್ಸ್ ನೀಡಿದೆ. ಇಂದು ಇಡಿ ಅಧಿಕಾರಿಗಳು ಕೊರೊನಾದಿಂದ ಚೇತರಿಸಿಕೊಂಡಿರುವ ಸೋನಿಯಾ ಗಾಂಧಿ ಅವರನ್ನು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಸೋನಿಯಾ ಗಾಂಧಿ ಅವರ ಮನವಿಯ ಮೇರೆಗೆ ಹೆಚ್ಚಿನ ವಿಚಾರಣೆಯನ್ನು ಎರಡನೇ ಸುತ್ತಿನವರೆಗೆ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸೋನಿಯಾ ಗಾಂಧಿ ಅವರನ್ನು ಇನ್ನು ಮುಂದೆ ಪ್ರಶ್ನಿಸುವುದಿಲ್ಲ ಮತ್ತು ಅವರು ಹೊರಹೋಗಬಹುದು ಎಂದು ಇಡಿ ಹೇಳಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವಿಟ್ ಮೂಲಕ ತಿಳಿಸಿದ್ದಾರೆ. AIIMS ವೈದ್ಯರ ಮೇಲ್ವಿಚಾರಣೆಯಲ್ಲಿ ವಿಚಾರಣೆ ಸೋನಿಯಾ ಗಾಂಧಿ ಅವರ ವಿಚಾರಣೆ ವೇಳೆ ಅವರ ಆರೋಗ್ಯ ಹದಗೆಟ್ಟರೆ ತಕ್ಷಣವೇ ಚಿಕಿತ್ಸೆ ನೀಡಲು ಇಬ್ಬರು ಏಮ್ಸ್ ವೈದ್ಯರು ಮತ್ತು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು, ಸೋನಿಯಾ ಅವರನ್ನು ಭೇಟಿ ಮಾಡಲು ಎರಡು ಬಾರಿ ಪ್ರಿಯಾಂಕಾ ಗಾಂಧಿ ವಿಚಾರಣೆ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ  ನಗರದ  ಪ್ರಧಾನ ರಸ್ತೆಯಲ್ಲಿರುವ ನೆಹರು ಮೈದಾನದಲ್ಲಿ ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಖೋಖೋ ಸಂಸ್ಥೆ ಬೆಂಗಳೂರು, ಚಿತ್ರದುರ್ಗ ಜಿಲ್ಲೆ ಖೋಖೋ ಸಂಸ್ಥೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಪುರುಷರ ಹಾಗೂ ಮಹಿಳೆಯರ ದೀಪಾಲಂಕೃತ ಖೋಖೋ ಅಸೋಸಿಯೇಷನ್ ಕಪ್-2022 ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಡದ ಸಾರಥ್ಯವನ್ನು ಕ್ಷೇತ್ರದ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ವಹಿಸಲಿದ್ದು, ರಾಜ್ಯ ಪ್ರವರ್ಗ-1ರ ಒಕ್ಕೂಟಗಳ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜುಲೈ 22, ರಿಂದ 24 ರವರೆಗೆ 3 ದಿನಗಳ ಕಾಲ ಕ್ರೀಡಾಕೂಟ ನಡೆಸಲು ನೆಹರು ಕ್ರೀಡಾಂಗಣ ಸಿದ್ಧವಾಗುತ್ತಿದೆ. ಕ್ರೀಡಾಕೂಟದ ಹಿನ್ನೆಲೆಯಲ್ಲಿ ಡಿ.ಟಿ.ಶ್ರೀನಿವಾಸ್ ಹಾಗೂ ಕೆ.ಪೂರ್ಣಿಮಾ ಶ್ರೀನಿವಾಸ್ ಈ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕ್ರೀಡಾಕೂಟಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸಿಬ್ಬಂದಿಗೆ ಸೂಚನೆ…

Read More

ಮಧುಗಿರಿ: ಭಾರತ ದೇಶದ ಗೌರವಾನ್ವಿತ ನೂತನ ರಾಷ್ಟ್ರಪತಿಯಾಗಿ ದ್ರೌಪತಿ ಮುರ್ಮು ರವರು ಆಯ್ಕೆಯಾದ ಹಿನ್ನೆಲೆಯಲ್ಲಿ ಮಧುಗಿರಿ ನಗರದ ಡೂಮ್ ಲೈಟ್ ಸರ್ಕಲ್ ನಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ  ನೇತೃತ್ವದಲ್ಲಿ ಸಂಭ್ರಮಾಚರಿಸಲಾಯಿತು. ಈ ವೇಳೆ ಮಾತನಾಡಿದ ಮಹಿಳಾ ಮುಖಂಡರು, ಒಬ್ಬ ಆದಿವಾಸಿ ಮಹಿಳೆಗೆ ಯಾವ ಸರ್ಕಾರವು ನೀಡದ ಗೌರವವನ್ನು ಮೋದಿ ಸರ್ಕಾರ ನೀಡಿದೆ. ಮಹಿಳೆಯರಿಗೆ ಸಮಾನತೆ ಕೊಟ್ಟಿರುವುದು ನಮ್ಮೆಲ್ಲರಿಗೆ ಹೆಮ್ಮೆಯನ್ನುಂಟು ಮಾಡಿದೆ ಎಂದರು. ಇದೇ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ವಿಭಾಗದ ಸಂಘಟನಾ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ವಿಧಾನ ಪರಿಷತ್ ಶಾಸಕರಾದ  ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷರಾದ ಬಿ.ಕೆ. ಮಂಜುನಾಥ್, ಯುವ ಮುಖಂಡರಾದ ಹನುಮಂತೇಗೌಡ, ಮಧುಗಿರಿಯ ಮಾಜಿ ಶಾಸಕರಾದ ಗಂಗಹನುಮಯ್ಯ, ಸ್ಫೂರ್ತಿ ಚಿದಾನಂದ್,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಣ್ಣ, ರವಿ ಪಾವಗಡ, ತಿಮ್ಮಜ್ಜ ಸೇರಿದಂತೆ ಎಲ್ಲಾ ಮಂಡಲಗಳ  ಪ್ರಮುಖರು ಹಾಜರಿದ್ದರು.  ವರದಿ: ದೊಡ್ಡೇರಿ ಮಹಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುರುವೇಕೆರೆ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಇರುವ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಜನೌಷಧಿ ಮಾರಾಟ ಮಳಿಗೆ ಕಳೆದ ಎರಡು ವರ್ಷಗಳಿಂದ ಮುಚ್ಚಿಟ್ಟು ಮತ್ತೆ ಕಳೆದ ಮೂರು ತಿಂಗಳಿನಿಂದ ಎಂ.ಎಸ್.ಐ ಎಲ್ ನವರು ಮಾರಾಟ ಮಳಿಗೆಯನ್ನು ತೆರೆದಿದ್ದು ಮಾರಾಟ ಮಾಡಲು ಒಬ್ಬ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಮಾಡಿಕೊಂಡಿದೆ. ಈ ಸಿಬ್ಬಂದಿ ಎಂಆರ್ ಪಿ ಬೆಲೆಗಿಂತ ಹೆಚ್ಚು ಬೆಲೆ ತೆಗೆದುಕೊಳ್ಳುತ್ತಿದ್ದು, ಇಂದು ತಾಲೂಕಿನ ದಂಡಿನಶಿವರ ಹೋಬಳಿಯ ಬೀಚನಹಳ್ಳಿ ಗ್ರಾಮದ ವಾಸಿ ಸುನಿಲ್ ಬಿನ್ ಚನ್ನಯ್ಯ ಎಂಬುವರು ಸರ್ಕಾರಿ ಆಸ್ಪತೆಗೆ ತನ್ನ ಬಾಣಂತಿ ಹೆಂಡತಿಯನ್ನು ವೈದ್ಯರ ಬಳಿ ಪರೀಕ್ಷೆ ಮಾಡಿಸಿದ್ದಾರೆ. ವೈದ್ಯರು ಮೆಡಿಸನ್ ಮತ್ತು ಮಾತ್ರೆಯನ್ನು ಬರೆದಿದ್ದು,  ಮಾತ್ರೆಕೊಳ್ಳಲು ಈ ಜನೌಷಧಿ ಮಳಿಗೆಗೆ ಹೋಗಿ ಕೊಂಡುಕೊಂಡು ಬೆಲೆಕೇಳಿದಾಗ ಹೆಚ್ಚುಪಟ್ಟು ಪಡೆದಿರುವುದು ಕಂಡು ಬಂದಿದೆ. ಈ ಮಾತ್ರೆಯ ಲೇಬಲ್ ಮೇಲೆ 18 ರೂ. ಇದ್ದು ಆದರೆ  ಈ ಮಾರಾಟ ಸಿಬ್ಬಂದಿ ಮಾತ್ರೆ ಲೇಬಲ್ 118 ಆಗಿ ಮಾರ್ಕರ್ ಪೆನ್ನಿನಲ್ಲಿ ಬರೆದಿರುವುದು ಬೆಳಕಿಗೆ ಬಂದಿದೆ. ಇದನ್ನು ಮತ್ತೆ ಸಿಬ್ಬಂದಿ…

Read More

ಹರ್ಯಾಣ:  ಮೊಬೈಲ್ ಚಾರ್ಜ್ ಮಾಡಿ ಜೇಬಿನಲ್ಲಿ ಹಾಕಿದ ಕೆಲವೇ ನಿಮಿಷಗಳಲ್ಲಿ ಮೊಬೈಲ್ ಬ್ಲಾಸ್ಟ್ ಆಗಿ ಯುವಕ ಗಾಯಗೊಂಡ ಘಟನೆ ಹರ್ಯಾಣದಲ್ಲಿ ನಡೆದಿದ್ದು,  ಯುವಕನನ್ನು ಆಸ್ಪತ್ರೆಗೆ ದಾಖಲಾಗಿದೆ. ಸ್ಫೋಟಗೊಂಡ ಮೊಬೈಲನ್ನು ಯುವಕ ಬಹಳ ಸಮಯದಿಂದ ಬಳಸುತ್ತಿದ್ದರು ಎನ್ನಲಾಗಿದೆ. ಬುಧವಾರ ಫೋನ್ ನ ಬ್ಯಾಟರಿ ಖಾಲಿಯಾದ ಕಾರಣ ಮೊಬೈಲ್ ಚಾರ್ಜಿಂಗ್ ಗೆ ಹಾಕಿದ್ದರು. ಚಾರ್ಜ್ ಮಾಡಿದ ನಂತರ, ಸ್ವಲ್ಪ ಹೊತ್ತು ಬಳಸಿ, ಪ್ಯಾಂಟ್ನ ಜೇಬಿಗೆ ಹಾಕಿಕೊಂಡಿದ್ದು, ಈ ವೇಳೆ ಮೊಬೈಲ್ ಏಕಾಏಕಿ ಸ್ಫೋಟಗೊಂಡಿದೆ. ಫೋನ್ ಬ್ಲಾಸ್ಟ್ ಆದ ಪರಿಣಾಮ ಯುವಕನ ಕಾಲಿಗೆ ತೀವ್ರವಾದ ಸುಟ್ಟಗಾಯಗಳಾಗಿವೆ. ಸದ್ಯ ಯುವಕನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಬಳಿಕ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯ ಕೋರಿದ್ದು ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ದ್ರೌಪದಿ ಮುರ್ಮು ಅವರಿಗೆ 5,121 ಮತಗಳು ಬಿದ್ದಿವೆ. ಈ ಮತಗಳ ಒಟ್ಟು ಮೌಲ್ಯ 5,77,777 ಆಗಿದೆ. ಇನ್ನು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ 1,058 ಮತಗಳು ಬಿದ್ದಿದ್ದು ಇದರ ಮೌಲ್ಯ 2,61,062 ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತಿಪಟೂರು: ಬೈಕ್ ಮೇಲೆ ಜಲ್ಲಿ ತುಂಬಿದ ಕ್ರಷರ್ ಲಾರಿ ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವನಿಗೆ ಗಂಭೀರವಾಗಿ ಗಾಯವಾದ ಘಟನೆ ಹುಚ್ಚನಟ್ಟಿ ಅಂಡರ್ ಪಾಸ್ ಬಳಿ ನಡೆದಿದೆ. ಹಳೇಪಾಳ್ಯದ ಪರಿಶಿಷ್ಟ ಜಾತಿ ಕಾಲೋನಿಯ 24 ವರ್ಷ ವಯಸ್ಸಿನ ರಂಗಸ್ವಾಮಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ರಂಗಸ್ವಾಮಿ ಅವರು ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ರಂಗಸ್ವಾಮಿ ಅವರು ಬೈಕ್ ನಲ್ಲಿ  ಹಸುವಿಗೆ ಮೇವು ಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ರಷರ್ ಲಾರಿ ಬೈಕ್ ಸವಾರನ ಮೇಲೆಯೇ ಹರಿದಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಡರ್ ಪಾಸ್ ನಲ್ಲಿ ಯಾವುದೇ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು,  ಅಂಡರ್ ಪಾಸ್ ರಸ್ತೆಗೆ ಕನಿಷ್ಟ ಹಂಪ್ ಗಳು ಕೂಡ ಮಾಡದೇ ಹಾಗೆಯೇ ಬಿಡಲಾಗಿದ್ದು, ವಾಹನಗಳು ಅಡ್ಡದಿಡ್ಡಿಯಾಗಿ ಚಲಿಸುತ್ತಿವೆ. ಇದೀಗ ಪ್ರಾಣವೊಂದು ಬಲಿಯಾಗಿದೆ. ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬ ಒತ್ತಾಯಗಳು ಘಟನೆಯ…

Read More

ಸರಗೂರು: ತಾಲ್ಲೂಕಿನ ಇತ್ತೀಚಿನ ದಿನಗಳಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಮಾಡಿದ್ದು. ಆದರೆ ಕಳಪೆ ಕಾಮಗಾಯಿಂದಾಗಿ ರಸ್ತೆಗೆ ಹಾಕಿದ ಡಾಂಬಾರು ಕಿತ್ತು ಹೋಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಗನಹಳ್ಳಿ ಮಾರ್ಗವಾಗಿ ಆಡಹಳ್ಳಿ ಗ್ರಾಮಕ್ಕೆ ಹಾದುಹೋಗುವ ರಸ್ತೆ ಇದಾಗಿದ್ದು, ಕೆಲವು ತಿಂಗಳ ಹಿಂದೆ ರಸ್ತೆ ಕಾಮಗಾರಿ ಮಾಡಿದ್ದಾರೆ. ಆದರೆ ಇದೀಗ ಡಾಂಬರ್ ಕಿತ್ತುಹೋಗಿ ನೀರು ನಿಂತಿದ್ದು, ಪ್ರಯಾಣಿಕರ ಪ್ರಾಣಕ್ಕೆ ಕುತ್ತು ತರುವ ಸ್ಥಿತಿಯಲ್ಲಿದೆ. ಸರಗೂರು ಮತ್ತು ಹೆಚ್.ಡಿ.ಕೋಟೆ ತಾಲ್ಲೂಕಿಗೆ ಹೋಗುವ ಇದ್ದಾಗಿದ್ದು, ರೈತರು ಹಾಗೂ ಶಾಲೆ ಕಾಲೇಜು ಮಕ್ಕಳು ಆಡಹಳ್ಳಿ ಗ್ರಾಮಸ್ಥರು ಇದೆ ಮಾರ್ಗವಾಗಿ ತೆರಳುತ್ತಿದ್ದಾರೆ. ಕಳಪೆ ಕಾಮಗಾರಿಯಿಂದಾಗಿ ಇದೀಗ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜಿಲ್ಲಾ ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಹಾಗೂ ಗುತ್ತಿಗೆದಾರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ…

Read More

ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಲೊಯೋಲ ಪದವಿ ಕಾಲೇಜಿನ ತೃತೀಯ ಬಿಎ ತರಗತಿಯ ವಿದ್ಯಾರ್ಥಿಯಾದ ಅರವಿಂದ್ ಎನ್.ಎಸ್, ‘ಕರಾಟೆ’ ಯಲ್ಲಿ ತೋರಿದ ಅಪ್ರತಿಮ ಸಾಧನೆಯನ್ನು ಗುರುತಿಸಿ, ಇವರನ್ನು ದಕ್ಷಿಣ ಭಾರತೀಯ ರೈಲ್ವೆ ಸೇವೆಗೆ ಆಯ್ಕೆ ಮಾಡಿಕೊಂಡಿದೆ. ಅರವಿಂದ್, ಎನ್.ಎಸ್‌. ಕರಾಟೆಯಲ್ಲಿ ಒಂದು ನಿಮಿಷಕ್ಕೆ 340 ಪೂರ್ಣ ವಿಸ್ತರಣೆಯ ಪಂಚ್‌ಗಳಿಗಾಗಿ ‘ಇಂಟರ್ ನ್ಯಾಷನಲ್ ಬುಕ್ ರೆಕಾರ್ಡ್’ನ್ನು ಹೊಂದಿರುತ್ತಾರೆ. ಅಂತರ ಕಾಲೇಜಿನ ಕರಾಟೆ ಪಂದ್ಯದಲ್ಲಿ ಸ್ವರ್ಣಪದಕ, ಅಂತರ ವಿಶ್ವವಿದ್ಯಾಲಯ ಕರಾಟೆ ಪಂದ್ಯದಲ್ಲಿ ಕಂಚಿನ ಪದಕ ಮತ್ತು ಜೈನ್ ವಿಶ್ವವಿದ್ಯಾಲಯದಲ್ಲಿ ನಡೆದ ‘ಬೇಲೋ ಇಂಡಿಯಾ 2022ರ ಕರಾಟೆ ಪಂದ್ಯದಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ. ಪ್ರಸ್ತುತ ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಯನ್ನು ಗಮನಿಸಿದ ದಕ್ಷಿಣ ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಅವಕಾಶವನ್ನು ನೀಡಿದೆ. ಅರವಿಂದ್ ಎನ್.ಎಸ್‌. ಅವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಸಹಪಾಠಿಗಳು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಪ್ರಾಂಶುಪಾಲರ ಮಾತು: ನಮ್ಮ ಕಾಲೇಜು ವಿದ್ಯಾರ್ಥಿಗಳ ಸರ್ವಾಂಗೀಣ ಮತ್ತು ಗುಣಾತ್ಮಕ ಬೆಳವಣಿಗೆಗಾಗಿ ಉತ್ತಮವಾದ…

Read More

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಸರ್ಕಾರದ ಆದೇಶ ಆಧಾರಿಸಿ ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೆ ಮುಸ್ಲಿಂ ಸಮುದಾಯದವರು ತಮ್ಮದೆಯಾದ ಕಾಲೇಜು ಪ್ರಾರಂಭಿಸಲು ಮುಂದಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ಕಾಲೇಜು ಸ್ಥಾಪನೆಗೆ ಪಿಯುಸಿ ಮಂಡಳಿಗೆ ೧೪ ಅರ್ಜಿಗಳು ಬಂದಿದ್ದು, ಈ ಅರ್ಜಿಗಳ ಪೈಕಿ ೧೩ ಅರ್ಜಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆಗಳಿಗೆ ಸೇರಿರುವುದು ವಿಶೇಷ.ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಕಾಲೇಜುಗಳಿಗೆ ಬರುವಂತಿಲ್ಲ ಎಂಬ ಆದೇಶಕ್ಕೆ ಸಡ್ಡು ಹೊಡೆಯಲು ಮುಸ್ಲಿಂ ಸಮುದಾಯದವರು ತಮ್ಮದೇ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ಕಾಲೇಜು ಆರಂಭಿಸಲು ಅನುಮತಿ ಕೋರಿ ಸಲ್ಲಿಸಲಾಗಿರುವ ೧೪ ಅರ್ಜಿಗಳ ಪೈಕಿ ೨ ಅರ್ಜಿಗಳನ್ನು ಪಿಯು ಮಂಡಳಿ ವಿಲೇವಾರಿ ಮಾಡಿ ಕಾಲೇಜು ತೆರೆಯಲು ಅನುಮತಿ ನೀಡಿದೆ.ಅನುಮತಿ ನೀಡಿರುವ ಒಂದು ಪಿಯು ಕಾಲೇಜು ಗುರುಪುರದ ಮುಸ್ಲಿಂ ಶಿಕ್ಷಣ ಸಂಸ್ಥೆಗೆ ಸೇರಿದರೆ, ಮತ್ತೊಂದು ಸುಬ್ರಮಣ್ಯದ ಮುಸ್ಲಿಮೇತರ ಶಿಕ್ಷಣ ಸಂಸ್ಥೆಗೆ ಸೇರಿದ್ದಾಗಿದೆ.ಜಿಲ್ಲೆಯಲ್ಲಿ ಉಳಿದ ೧೨ ಮುಸ್ಲಿಂ ಆಡಳಿತದ…

Read More