Author: admin

ಕೊಯಮತ್ತೂರು: ಉನ್ನತ ಸೇನಾ ಅಧಿಕಾರಿ ಬಿಪಿನ್ ರಾವತ್  ಸೇರಿದಂತೆ 4 ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದ್ದು,  ಹೆಲಿಕಾಫ್ಟರ್ ಬೆಂಕಿ ಹತ್ತಿಕೊಂಡು ಉರಿದು ಹೋಗಿದೆ. ಇಲ್ಲಿನ ಕೂನೂರು ಜಿಲ್ಲೆಯ ನೀಲಗಿರಿ ಗುಡ್ಡಗಾಡು ಬಳಿ ಬುಧವಾರ ಹೆಲಿಕಾಫ್ಟರ್ ಪತನಗೊಂಡಿದ್ದು, ಸೂಲೂರ್ ಐಎಎಫ್ ನೆಲೆಯಿಂದ ವೆಲ್ಲಿಂಗ್ಟನ್‌ ನಲ್ಲಿರುವ ಡಿಫೆನ್ಸ್ ಸರ್ವಿಸಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೆಲಿಕಾಫ್ಟರ್ ಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿದೆ. ಸದ್ಯ ಯಾವುದೇ ಸಾವು ನೋವುಗಳ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಈ ಸಂಬಂಧ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಔಪಾಚಾರಿಕವಾಗಿ ತಜ್ಞರ ಜೊತೆ ಚರ್ಚೆ ನಡೆಸಲಿದ್ದೇನೆ. ಓಮಿಕ್ರಾನ್ ಮತ್ತು ಕೋವಿಡ್ ಸೋಂಕಿನ ಬಗ್ಗೆ ಚರ್ಚೆ ಮಾಡಲಾಗುವುದು. ಕ್ಲಸ್ಟರ್‍ ಗೆ  ಮಾರ್ಗಸೂಚಿ ಹೊರಡಿಸುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳುವುದಾಗಿ ತಿಳಿಸಿದರು. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಜನರ ಆರೋಗ್ಯ ಮತ್ತು ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧರಿಸುತ್ತೇವೆ ಎಂದರು. ತಜ್ಞರು ಯಾವೆಲ್ಲ ಸಲಹೆಗಳನ್ನು ನೀಡುತ್ತಾರೋ ನೋಡಬೇಕು ಎಂದರು. ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಕೋವಿಡ್ ಸೋಂಕು ಅಲ್ಲಲ್ಲಿ ಕಾಣಿಸಿಕೊಳ್ಳುತ್ತದೆ. ಇದನ್ನು ನಿಯಂತ್ರಿಸಲು ಯಾವೆಲ್ಲ ಪರಿಹಾರ ಕೈಗೊಳ್ಳಬೇಕೋ ಎಂಬುದರ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಇದೇ ವೇಳೆ ಅವರು ಭರವಸೆ ನೀಡಿದರು. ಸದ್ಯ ಸರ್ಕಾರ…

Read More

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಸಭೆ ಜರುಗಿತು. ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಪಾವಗಡ: ವಿಧಾನ ಪರಿಷತ್ ಚುನಾವಣೆ ಪ್ರಚಾರದಲ್ಲಿ ಸಕ್ರಿಯರಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಪಾವಗಡದ ಹೊರ ವಲಯದ ಬಿ.ಕೆ.ಹಳ್ಳಿ ಕ್ರಾಸ್ ಬಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.’ ಪ್ರಸನ್ನ ಕುಮಾರ್(46) ಹತ್ಯೆಗೀಡಾದವರು ಎಂದು ವರದಿಯಾಗಿದ್ದು,  ತಮ್ಮ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿಯಲ್ಲಿ ರೈತ ಯುವಮೋರ್ಚ ಕಾರ್ಯಕಾರಣಿ ಸದಸ್ಯರಾಗಿದ್ದ ಪ್ರಸನ್ನ ಕುಮಾರ್. ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿಯೂ ಸಕ್ರಿಯರಾಗಿದ್ದರು ಎನ್ನಲಾಗಿದೆ. ಆದರೆ ಇದೀಗ ಅವರ ಬರ್ಬರ ಹತ್ಯೆಯಾಗಿದೆ. ಕೊಲೆಗೆ ನಿಖರ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರ ಮುಂದಿನ ತನಿಖೆಯಿಂದ ಕೃತ್ಯದ ಹಿಂದಿನ ಕಾರಣ ಬಯಲಾಗಬೇಕಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417…

Read More

ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಹೋಬಳಿಗೆ ಕೆಂಚನಹಳ್ಳಿ ಗ್ರಾಮದಲ್ಲಿ ಸಿ.ಎಸ್.ಪುರ ಗ್ರಾಮ ಪಂಚಾಯಿತಿ ವತಿಯಿಂದ ಘನ ತ್ಯಾಜ್ಯ ವಿಲೇವಾರಿ ಘಟಕ ಮಾಡಲು ಮುಂದಾಗಿರುವುದನ್ನು ಕೆಂಚನಹಳ್ಳಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಚನಹಳ್ಳಿ ಗ್ರಾಮದ ಸ.ನಂ.80.ಮತ್ತು 81 ರಲ್ಲಿ ಸರ್ಕಾರಿ ಜಾಗವಿದ್ದು, ಈ ಜಾಗದಲ್ಲಿ ಕಳೆದ 40 ವರ್ಷಗಳಿಂದ ಹಲವು ಕುಟುಂಬದವರು ಜಮೀನು ಉಳುಮೆ ಮಾಡಿಕೊಂಡಿದ್ದು, ಅನುಭವದಾರರು ಜಮೀನು ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದರು ಸಹ ಯಾವುದಕ್ಕೂ  ಮನ್ನಣೆ ನೀಡದೆ ಏಕಏಕಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಆಡಳಿತ ವರ್ಗ ಉಳುಮೆ ಮಾಡುತ್ತಿರುವ ರೈತ ಕುಟುಂಬಕ್ಕೆ ಯಾವುದೇ ನೋಟಿಸ್ ನೀಡದೆ, ಜಾಗ ತೆರವು ಮಾಡುವಂತೆ ರೈತರಿಗೆ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಕರೆದುಕೊಂಡು ಬಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳ ನಡೆ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಆಡಳಿತ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಪಂಚಾಯತ್ ವ್ಯಾಪ್ತಿಯಲ್ಲಿ ಬೇರೆಡೆ ಸಾಕಷ್ಟು ಜಾಗವಿದ್ದು, ಉದ್ದೇಶ ಪೂರ್ವಕವಾಗಿ ಈ ಜಾಗದಲ್ಲಿ ಘಟಕ…

Read More

ಸರಗೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲು ಹೇಳಿದ್ದಾರೆ. ಇಂದಿನ ಪ್ರಪಂಚದಲ್ಲಿ ಶಿಕ್ಷಣ ಎನ್ನುವುದು ಬಹಳ ಮುಖ್ಯವಾಗಿದೆ ಹಾಗಾಗಿ ನಿಮ್ಮ ಮಕ್ಕಳ ಶಿಕ್ಷಣಕ್ಕೆ ಬಾಲ್ಯದಿಂದಲೇ ಹೆಚ್ಚಿನ ಒತ್ತು ನೀಡಿ ಎಂದು ಪೋಷಕರಿಗೆ ಅಂಬೇಡ್ಕರ್ ವಿಚಾರವಾದಿ ಪ್ರಕಾಶ್ ಕರೆ ನೀಡಿದರು. ತಾಲ್ಲೂಕಿನ ಹಳೆಯೂರು ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 65ನೇ ವರ್ಷದ ಪರಿನಿಬ್ಬಾಣ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣಕ್ಕೆ ತಾಯಂದಿರು ಹೆಚ್ಚಿನ ಮಹತ್ವ ನೀಡಬೇಕು. ತಂದೆ, ತಾಯಂದಿರುವ ಮಕ್ಕಳನ್ನು ಯಾವುದೇ ಕಾರಣಕ್ಕೂ ಶಾಲೆಯಿಂದ ಬಿಡಿಸಬೇಡಿ, ಈ ಮೂಲಕ ಮುಂದಿನ ಪೀಳಿಗೆಯನ್ನು ವಿದ್ಯಾವಂತರನ್ನಾಗಿಸಿ ಅವರಿಗೆ ಬಲತುಂಬೋಣ ಎಂದು ಅವರು ಕರೆ ನೀಡಿದರು. ಅಂತರಸಂತೆ ಸಾರನಾಥ ಬುದ್ಧ ವಿಹಾರ ಬಿಕ್ಕುಣಿ ಗೋತಮಿ ಬಂತೇಜಿ ಮಾತನಾಡಿ, ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ವಿವರಿಸಿ, ಸಮಾಜದಲ್ಲಿ ಜನರು ಮುಂದಿನ ಪೀಳಿಗೆಗೆ ಮಾದರಿಯಾಗಿ ಬದುಕುವಂತೆ ಹಾಗೂ ಅವರ ಜವಾಬ್ದಾರಿಗಳನ್ನು ಎಚ್ಚರಿಸಿ, ಮಾರ್ಗದರ್ಶನ ನೀಡಿದರು. ಹಳೆಯೂರು ಗ್ರಾಮದ ಮಾಜಿ ಗ್ರಾ.ಪಂ. ಸದಸ್ಯ…

Read More

ತಿಪಟೂರು: ದಲಿತ ಮುಖಂಡರು ಉಪ ವಿಭಾಗಧಿಕಾರಿ ಕಚೇರಿಗೆ ತೆರಳಿದ ಸಂದರ್ಭ ಉಪ ವಿಭಾಗಾಧಿಕಾರಿ ದಿಗ್ವಿಜಯ ಬೊಡ್ಕೆ ಅವರು ಜಾತಿ ನಿಂದನೆ ಮಾಡಿ, ಅವಮಾನಿಸಿದ್ದಾರೆ ಎಂದು ಆದಿಜಾಂಬವ ಮಹಾಸಭಾ ಆರೋಪಿಸಿದೆ. ತಿಪಟೂರು ಕಚೇರಿಯಲ್ಲಿ ಹಲವು ಪ್ರಗತಿಪರ ಸಂಘಟನೆಗಳ ಜೊತೆಗೆ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ದಿನಾಂಕ: 04-12-2021ರಂದು ದಲಿತ ಮುಖಂಡರಾದ ನರಸಿಂಹಯ್ಯ, ರಂಗಸ್ವಾಮಿ ಕುಪ್ಪಾಳು, ಬಸವರಾಜು ಮತ್ತು ಮಧುಸೂದನ್ ಅವರು ಪೆದ್ದಿಹಳ್ಳಿ ರಂಗಮ್ಮ ನವರ ಖಾತೆ ಬದಲಾವಣೆ ಬಗ್ಗೆ ಮಾತನಾಡಲು ಉಪ ವಿಭಾಗಧಿಕಾರಿ ಕಚೇರಿಗೆ ತೆರಳಿದ್ದು, ಈ ವೇಳೆ ಬಹಳ ವಿನಂಮ್ರತೆಯಿಂದ ಕೈ ಮುಗಿದು ಕಚೇರಿಯ ಒಳಗೆ ಹೋಗಿದ್ದೇವು. ಈ ವೇಳೆ ಉಪ ವಿಭಾಗಾಧಿಕಾರಿಗಳು ಕರೆದು ನೀವು ಯಾರು? ಏಕೆ ಬಂದಿದ್ದೀರಿ? ಎಂದು ಕೇಳಿದಾಗ ನಾವು ದಲಿತ ಮುಖಂಡರು, ನಿಮಗೆ ಗೊತ್ತಿಲ್ಲವೇ ಎಂದು ವಿಚಾರಿಸಿದಾಗ ಅವರು, ಬೆಲ್ ಮಾಡಿ ಜವಾನನನ್ನು ಕರೆದು, ಇವರನ್ನು ಯಾರು ಒಳಗೆ ಬಿಟ್ಟವರು ಎಂದು ಜಾತಿನಿಂದನೆ ಮಾಡಿದ್ದಲ್ಲದೇ ಅವಮಾನ ಮಾಡಿ ಏಕವಚನದಲ್ಲಿ ಬೈದು ಹೊರಗೆ ಕಳುಹಿಸಿದ್ದಾರೆ…

Read More

ತಿಪಟೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 65ನೇ ಮಹಾಪರಿನಿಬ್ಬಾಣ ದಿನದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್.ಮೂರ್ತಿ ಸ್ಥಾಪಿತ) ಇದರ ವತಿಯಿಂದ ತಾಲೂಕಿನ ಮಿನಿ ವಿಧಾನಸೌಧದಲ್ಲಿ ವಿಚಾರ ಸಂಕಿರಣ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಶೋಷಣೆ ವಿರುದ್ಧ ಹೋರಾಡಿದ ಮಹಾನ್ ವ್ಯಕ್ತಿಗೆ ಎಂದೆಂದಿಗೂ ನಾವೆಲ್ಲರೂ ಚಿರಋಣಿಯಾಗಿರಬೇಕು. ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಿಕೊಂಡು ಹೋಗಬೇಕೆಂದು ತಿಳಿಸಿದರು. ತಾಲೂಕು ಉಪಾಧ್ಯಕ್ಷ ಮತಿಘಟ್ಟ ಶಿವಕುಮಾರ್ ಮಾತನಾಡಿ, ನಮ್ಮೆಲ್ಲರ ಧೀಮಂತ ವ್ಯಕ್ತಿ, ಸಾಮಾನ್ಯ ಬಡ ಕುಟುಂಬದಿಂದ ಬಂದ ಅವರು, ಅಸ್ಪೃಶ್ಯತೆ ಜಾತಿ ಶೋಷಣೆಯನ್ನು ಸಹಿಸಿಕೊಂಡು ಉನ್ನತ ವಿದ್ಯಾಭ್ಯಾಸ ಮಾಡಿ ಇಡೀ ವಿಶ್ವಕ್ಕೆ ಕೊಡುಗೆಯನ್ನು ನೀಡಿದ್ದಾರೆ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ ಮಾತನಾಡಿ, ವಿಶ್ವದ ಮಹಾನ್ ವ್ಯಕ್ತಿಯಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ  ಮಾತನಾಡುತ್ತಾ, ಉಡುಪಿಯ ಪೇಜಾವರ ಶ್ರೀಗಳು ಸಂವಿಧಾನ ರಚನೆ ಬಗ್ಗೆ ತುಂಬಾ ಹಗುರವಾಗಿ ಮಾತನಾಡಿದ್ದರು ಅವರನ್ನು ನಮ್ಮ ಸಂಘಟನೆ ಖಂಡಿಸುತ್ತದೆ ಎಂದರು. ಈ ಸಂದರ್ಭದಲ್ಲಿ.…

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ಮಣೆಚಂಡೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ರಮೇಶ್ ರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಯ್ಯದ್ ಯೂನಿಸ್ ಅವರನ್ನು  ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಾಯಸಂದ್ರ ಹೋಬಳಿ ಮಣೆಚಂಡೂರು ಗ್ರಾಮ ಪಂಚಾಯಿತಿ ಉಪ ಚುನಾವಣೆಗೆ ಸಯ್ಯದ್ ಯೂನಿಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ ಯಾರೂ ಸ್ಪರ್ಧಿಸದ ಹಿನ್ನೆಲೆಯಲ್ಲಿ ಸಯ್ಯದ್ ಯೂನಿಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇನ್ನೂ ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷರನ್ನು ಸದಸ್ಯರು ಅಭಿನಂದಿಸಿದರು. ಈ ವೇಳೆ ಮಾತನಾಡಿದ ಸಯ್ಯದ್ ಯೂನಿಸ್  ಅವರು, ನಿಮ್ಮೆಲ್ಲರ ಸಹಕಾರದಿಂದ ನಾನು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದೇನೆ. ನಿಮ್ಮ ಸೇವೆಯನ್ನು ನಿಷ್ಪಕ್ಷಪಾತವಾಗಿ ಮಾಡುತ್ತೇನೆ. ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಮಲ್ಲೂರು ತಿಮ್ಮೇಶ್, ಎ.ಪಿ.ಎಂ.ಸಿ. ಅಧ್ಯಕ್ಷರಾದ ನರಸಿಂಹ, ಆರ್.ಎಸ್ ಪಾಳ್ಯ ಮಹಮದ್, ಬಸವರಾಜು .ವಿ.ಎಸ್.ಎಸ್.ಎನ್. ಮಾಜಿ ಅಧ್ಯಕ್ಷರು, ಯುವ ಮುಖಂಡರಾದ ಹರೀಶ್ ಮುನಿಯಪ್ಪ, ಕೋಡಿಹಳ್ಳಿ ಕುಮಾರ್…

Read More

ತುಮಕೂರು: ತುಮಕೂರು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕ ಡಾ.ಜಿ.ಪರಮೇಶ್ವರ್ ಜಿ. ಅವರು ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಪರವಾಗಿ ಮತಯಾಚನೆ ಮಾಡಿದರು. ಅಕ್ಕಿರಾಂಪುರ, ಹುಲಿಕುಂಟೆ, ತೀತಾ ಮತ್ತು ಹಂಚಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಮತದಾರರು ಹಾಗೂ ಮುಖಂಡರಲ್ಲಿ ಮತಯಾಚನೆ ಮಾಡಿದ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಆರ್.ರಾಜೇಂದ್ರ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು. ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್ ನಾರಾಯಣ, ಅರಕೆರೆ ಶಂಕರ್, ಮಹಿಳಾ ಅಧ್ಯಕ್ಷರಾದ ಜಯಮ್ಮ, ಮುಖಂಡರಾದ ವೆಂಕಟಾಚಲಯ್ಯ, ವಾಲೇ ಚಂದ್ರಯ್ಯ, ಕೊಡವಾಡಿ ಚಂದ್ರಶೇಖರ್, ಚಂದ್ರಶೇಖರ್ ಗೌಡ, ಬಲರಾಮಯ್ಯ, ಬೈರಪ್ಪ, ಮೈಲಾರಪ್ಪ, ಶ್ರೀನಿವಾಸ್, ರಾಮಚಂದ್ರಪ್ಪ, ವೆಂಕಟಪ್ಪ, ರುದ್ರಪ್ರಸಾದ್, ರಾಜಣ್ಣ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಗ್ರಾ.ಪಂ. ಸದಸ್ಯರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More