Author: admin

ಜೂನ್‌ 21ರಂದು ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಂಚರಿಸಲಿರುವ ಪ್ರದೇಶದ ರಸ್ತೆಗಳ ಕಾಮಗಾರಿ ನಡೆಸಲಾಗುತ್ತಿದೆ. ಆದರೆ ಈ ಪ್ರಕ್ರಿಯೆಯು ಜನರಿಗೆ ಸಂಕಷ್ಟ ತಂದೊಡ್ಡಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ರಸ್ತೆ, ಎಂಜಿ ರೋಡ್, ರೈಲ್ವೆ ನಿಲ್ದಾಣದ ರಸ್ತೆ, ಮೈಸೂರು ವಿವಿಗೆ ತೆರಳುವ ಮಾರ್ಗ, ಅರಮನೆ ಸುತ್ತಲಿನ ಮಾರ್ಗಗಳನ್ನು ಕಾಮಗಾರಿ ಮಾಡಲಾಗುತ್ತಿದೆ. ಆದರೆ ಈ ಕಾಮಗಾರಿ ಪ್ರಕ್ರಿಯೆಯಿಂದಾಗಿ ವಾಹನ ಸವಾರರರು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಜೂನ್‌ 20ರಂದು ಆಗಮಿಸಲಿದ್ದಾರೆ. ಆದರೆ ಇದಕ್ಕೂ ಮುನ್ನ ಕೈಗೊಂಡಿರುವ ಕಾಮಗಾರಿ ಪ್ರಕ್ರಿಯೆಯು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಬದಲಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರೂ ಸಹ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನ ರೇಸ್‌ ಕೋರ್ಸ್‌ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಯೋಗ ದಿನಾಚರಣೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಈ…

Read More

ಬೆಂಗಳೂರು: ತಡರಾತ್ರಿಯಾದರೂ ಪಾರ್ಟಿ ನಡೆಸುತ್ತಿದ್ದ ಫೈವ್ ಸ್ಟಾರ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ನಡೆಸಿದ್ದು, ಪಾರ್ಟಿಯಲ್ಲಿ ತೊಡಗಿದ್ದ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ರಾಜಕೀಯ ನಾಯಕರ ಮಕ್ಕಳು ಸಹ ಪಾರ್ಟಿಯಲ್ಲಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಅನುಮಾನ ಹಿನ್ನೆಲೆ ಜಿಟಿ ಮಾಲ್ ಮುಂಭಾಗದಲ್ಲಿರುವ ಫೈವ್‌ ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆಸಲಾಗಿದೆ. ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ ನಲ್ಲಿರುವ ಪ್ರತಿಷ್ಠಿತ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ವಶಕ್ಕೆ ಪಡೆದಿದ್ದ 50 ಜನರ ಪೈಕಿ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ಪಾರ್ಟಿಯಲ್ಲಿ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರ, ಬಾಲಿವುಡ್‌ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್‌…

Read More

ಚಿತ್ರದುರ್ಗ:   ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರ ಬಸ್ ನಿಲ್ದಾಣದಲ್ಲಿರುವ ಶೌಚಾಲಯ ಗಬ್ಬೆದ್ದು ನಾರುತ್ತಿದ್ದು, ಶೌಚಾಲಯದ ನೈರ್ಮಲ್ಯ ಕಾಪಾಡಲು ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂತಹದ್ದೊಂದು ಘಟನೆ ನಡೆದಿದ್ದು, ಪ್ರಯಾಣಿಕರು ಮೂಗುಮುಚ್ವಿಕೊಂಡು ಓಡಾಡುವಂತಹ ಪರಿಸ್ಥಿತಿ ಇದೀಗ ಬಂದಿದೆ. ಹಿರಿಯೂರು ನಗರದಲ್ಲಿ ದಿನಕ್ಕೆ ಸಾವಿರಾರು ಮಂದಿ ಪ್ರಯಾಣ ಪ್ರಯಾಣ ಮಾಡುವಂತಹ ನಿಲ್ದಾಣವಾಗಿದ್ದು, ಹಿರಿಯೂರು ನಗರದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಶೌಚಾಲಯದ ಇದೀಗ ಸರಿಯಾದ ವ್ಯವಸ್ಥೆ ಇಲ್ಲದೆ ಗಬ್ಬೆದ್ದು ಹೋಗಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರು ಸಂಬಂಧ ಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ . ಇದೇ ಸ್ಥಳದಲ್ಲಿಕಾರ್ಯ ನಿರ್ವಹಿಸುವ ಸಾರಿಗೆ ಸಂಸ್ಥೆ ಇಲಾಖೆಯ ಅಧಿಕಾರಿಗಳು , ಬಸ್ ನಿಲ್ದಾಣದ ದುಸ್ಥಿತಿ ಕಂಡೂ ಕಂಡು ಕಾಣದಂತೆ ಕಣ್ಣುಮುಚ್ಚಿ ಕುಳಿತಿದ್ದಾರೆ.  ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಕೇಳುವವರು ಯಾರು? ಎನ್ನುವ ಪ್ರಶ್ನೆಗಳಿಗೆ ಇದು ಕಾರಣವಾಗಿದೆ. ಬಸ್ ನಿಲ್ದಾಣದ ಆವರಣದಲ್ಲಿರುವ ಮರವೊಂದು ಒಣಗಿ ಹೋಗಿದ್ದು, ಇದನ್ನು ಇನ್ನೂ ತೆರವುಗೊಳಿಸದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ, ನಗರಸಭೆ , ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ , ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಇಲಾಖೆ ಮತ್ತು ಪೋಲಿಸ್ ಇಲಾಖೆ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಮತ್ತು ಮಕ್ಕಳು ಮತ್ತು ಪೋಷಕರಿಗೆ ಶಿಕ್ಷಣದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಿರಿಯೂರು ನಗರದ ಸಿವಿಲ್ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಹಾಗೂ ಅಧ್ಯಕ್ಷರು, ತಾಲ್ಲೂಕು ಕಾನೂನು ಸೇವಾ ಸಮಿತಿ , ಹಿರಿಯೂರು ಮೊಹಮ್ಮದ್ ಮೊಯಿನುದ್ದಿನ್ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ನಾಮ ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಹಾಗೂ ನಿರ್ಮೂಲನೆಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಹದಿನಾಲ್ಕು ವರ್ಷದೊಳಗಿನ ಶಾಲೆಯಿಂದ ಹೊರಗಡೆ ಇರುವ ಯಾವುದೇ ಮಗು ಕಂಡುಬಂದರೆ, ಅವರ ಪೋಷಕರಿಗೆ ತಿಳುವಳಿಕೆ ಹೇಳಿ, ಆ ಮಗುವನ್ನು ಶಾಲೆಗೆ ಸೇರಿಸಲು ಹಾಗೂ…

Read More

ಪಾವಗಡ:  ಪಾವಗಡ ಪಟ್ಟಣದ  ಅಪ್  ಬಂಡೆ ಬಳಿ ಇಂದು ಹೆಲ್ಪ್ ಸೊಸೈಟಿ ವತಿಯಿಂದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಯಿತು. ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್  ಸ್ಥಳೀಯ ಬಾಲಕರ ಪೋಷಕರೊಂದಿಗೆ ವಿಚಾರ ವಿನಮಯ ನಡೆಸಿ, ಮಕ್ಜಳನ್ನು ತಪ್ಪದೆ ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ವಿನಂತಿಸಿದರು. ಬಾಲ ಮಕ್ಕಳನ್ನು ಯಾವುದೇ ಕಾರಣಕ್ಕೂ ದುಡಿಯಲು ಪ್ರೇರಪಿಸಬೇಡಿ, ಅಂತಹ ಕೆಟ್ಟ ದುಸ್ಸಾಹಕ್ಜೆ ಕೈ ಹಾಕಿದ್ದಲ್ಲಿ, ಕಾನೂನು ರೀತ್ಯ ಅಪರಾಧವಾಗುತ್ತದೆ ಎಂದು ಅವರು ಸ್ಥಳೀಯ ನಾಗರಿಕರಿಗೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಮಕ್ಜಳೊಂದಿಗೆ ಸಿಹಿ ಹಂಚಿ ಆತ್ಮೀಯತೆಯೊಂದಿಗೆ ಬಾಲ  ಕಾರ್ಮಿಕ ವಿರೋಧಿ ದಿನ ವನ್ನು ಆಚರಿಸಿದರು. ಈ ವೇಳೆ ಸಾಗರ್,ವೀರ, ಗೌತಮ್, ಬಾಬಾ,  ಸಾಯಿ ಕುಮಾರ್,  ಮೋಹನ್, ಇದ್ದರು. ವರದಿ:  ರಾಮಪ್ಪ ಸಿ.ಕೆ.ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಂಡೀಪುರ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಗುಂಡ್ರೆ ವಲಯದಲ್ಲಿ ಉದ್ದ ಕೊಂಬಿನ ಆನೆಯೊಂದು ಮೃತಪಟ್ಟಿದ್ದು, ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಎಲ್ಲರ ಆಕರ್ಷಣೆಯಾಗಿದ್ದ ಭೋಗೇಶ್ವರ ಆನೆಯೇ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಎರಡು ಮೂರು ದಿನಗಳ ಹಿಂದೆ ಗುಂಡ್ರೆ ವಲಯ ವ್ಯಾಪ್ತಿಯಲ್ಲಿ ಆನೆಯ ಸಹಜವಾಗಿ ಮೃತಪಟ್ಟಿದ್ದು, ಈ ಆನೆ ಉದ್ದವಾದ ದಂತಗಳನ್ನು ಹೊಂದಿದೆ. ಬಲಕೊಂಬಿನ ಮೇಲೆ ಎಡಕೊಂಬು ಬಂದ್ದಿದು, ಆನೆಗೆ 55 ರಿಂದ 60 ವರ್ಷಗಳಾಗಿರಬಹುದು ಎಂದು ತಿಳಿದು ಬಂದಿದೆ. ಕಬಿನಿ ಹಿನ್ನೀರು ಭಾಗದಲ್ಲಿ ವಲಸ್ಸಾದ ಮೂರ್ನಾಲ್ಕು ಆನೆಗಳು ಇರುವದರಿಂದ ಇದು ಮಿಸ್ಟರ್ ಕಬಿನಿ ಭೋಗೇಶ್ವರ ಆನೆಯೇ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತ ಪಡಿಸಿಲ್ಲ. ಇತ್ತೀಚಿನ ಆದೇಶದಂತೆ ಆನೆಯ ಕಳೇಬರವನ್ನು ಸಂಸ್ಕಾರ ಮಾಡದೆ ಹಾಗೆ ಬಿಟ್ಟಿದ್ದಾರೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ. “ಗಜ” ಗಾಂಭೀರ್ಯ ಭಿನ್ನ ಹಾವಬಾವ” : ಕಬಿನಿ ಹಿನ್ನೀರು ಪ್ರದೇಶದ ವ್ಯಾಪ್ತಿಯಲ್ಲಿರುವ ಬರುವ ಬಂಡೀಪುರದ ರಾಷ್ಟ್ರೀಯ ಉದ್ಯಾನವನದ ಗುಂಡ್ರೆ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ಮತ್ತು ಡಿ ಬಿ ಕುಪ್ಪೆವಲಯ ವ್ಯಾಪ್ತಿಯಲ್ಲಿ…

Read More

ಗಂಜಿ ಗಿರಾಕಿ ರೋಹಿತ್ ಚಕ್ರತೀರ್ಥ ಆರ್‌ಎಸ್‌ಎಸ್‌ ಗಂಜಿ ಕೇಂದ್ರದಿಂದ ಬಂದವರು. ಸತ್ಯವಲ್ಲದ ವಿಷಯಗಳನ್ನು ಪಠ್ಯದಲ್ಲಿ ಸೇರಿಸಿ ನಾಡಿನ ಚೇತನಗಳಿಗೆ ಅವಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವರಾದ ನಾಗೇಶ್ ಅವರು ಹೆಸರಿಗೆ ಅಷ್ಟೇ ಮಂತ್ರಿಯಾಗಿದ್ದಾರೆ. ಅವರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇವರೆಲ್ಲ ಗೊಂಬೆಗಳಿದ್ದಂತೆ. ಆರ್‍ಎಸ್‍ಎಸ್ ಕೀ ಕೊಟ್ಟಂತೆ ಗೊಂಬೆಗಳು ತಿರುಗುತ್ತದೆ ಎಂದು ವ್ಯಂಗ್ಯವಾಡಿದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್, ನಾರಾಯಣಗುರು ಅವರ ಪಠ್ಯಗಳನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಪಾಠವನ್ನು ತಿರುಚಲಾಗಿದೆ. ಅಂಬೇಡ್ಕರ್ ಮತ್ತು ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಹೇಳಿದರು. ಚನ್ನಣ್ಣ ವಾಲಿಕಾರ್ ಅವರು ಬರೆದ 6ನೇ ತರಗತಿಯಲ್ಲಿದ್ದ ಅಂಬೇಡ್ಕರ್ ಪಾಠವನ್ನು ಕೈಬಿಟ್ಟಿದ್ದಾರೆ. 9ನೇ ತರಗತಿಯ ಸಂವಿಧಾನದ ಪಾಠ ತಿರುಚಿ ಅಲ್ಲದೆ ಸಂವಿಧಾನ ಶಿಲ್ಪಿ ಎಂಬ ಪದವನ್ನೇ ತೆಗೆದು ಹಾಕಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ, ಗೊಂದಲ ಮೂಡಿಸಿದ್ದು, ಪರಿಷ್ಕರಣೆ ನೆಪದಲ್ಲಿ ಮಕ್ಕಳ ಭವಿಷ್ಯದ ಮೇಲೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಇದು…

Read More

ಚಾಮರಾಜಪೇಟೆ: ಈದ್ಗಾ ಮೈದಾನದಲ್ಲಿ ಪೊಲೀಸರು ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆಯಿತು. ಮೈದಾನದ ಸುತ್ತಮುತ್ತ ಮುಂಜಾಗ್ರತಾ ಕ್ರಮವಾಗಿ ಸಿಸಿಟಿವಿ ಅಳವಡಿಕೆಗೆ ಪೊಲೀಸರು ಮುಂದಾದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಸಿಸಿಟಿವಿ ಅಳವಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿ ಹೇಳಿದರೂ ಕ್ಯಾಮೆರಾ ಅಳವಡಿಕೆಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಇಷ್ಟು ದಿನ ಇಲ್ಲದ ಕ್ಯಾಮೆರಾವನ್ನು ಈಗೇಕೆ ಹಾಕಬೇಕು. ಜನಪ್ರತಿನಿಧಿಗಳು ಮುಸ್ಲಿಮರ ರಕ್ಷಣೆಗೆ ನಿಂತಿದ್ದಾರೆ ಎಂದು ಹಿಂದೂ ಸಂಘಟನೆಯವರು ವಿರೋಧ ವ್ಯಕ್ತಪಡಿಸಿದರು. ಬಿಬಿಎಂಪಿ ಕಾಮಗಾರಿಯಲ್ಲ. ಇದು ರಕ್ಷಣೆ ಸಂಬಂಧ ಸಿಸಿಟಿವಿ ಅಳವಡಿಸುತ್ತಿದ್ದೇವೆ ಎಂದು ಇನ್‍ಸ್ಪೆಕ್ಟರ್ ಸಮಜಾಯಿಷಿ ನೀಡಿದರು. ಆದರೂ ಸ್ಥಳೀಯರು ಇಲ್ಲಿ ಹಿಂದೂಗಳ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಮಕ್ಕಳು ಆಟವಾಡಲು ಭಯಪಡುತ್ತಾರೆ. ಮೈದಾನದಲ್ಲಿ ಯಾವುದೇ ಒಂದು ವಾಹನವನ್ನು ಪಾರ್ಕ್ ಮಾಡಿಲಿಕ್ಕೆ ಆಗುವುದಿಲ್ಲ ಎಂದು ಹರಿಹಾಯ್ದರು. ಇದು ಜಯಚಾಮರಾಜೇಂದ್ರ ಒಡೆಯರ್ ನಿರ್ಮಿಸಿದ ಮೈದಾನ. ಐತಿಹಾಸಿಕ ಆಟದ ಮೈದಾನ. ವಕ್ ಬೋರ್ಡ್‍ನಿಂದ ಈದ್ಗಾ ಎಂದಾಗಿದೆ. ಕೂಡಲೇ ಕಾಮಗಾರಿಯನ್ನು ನಿಲ್ಲಿಸಿ…

Read More

ಒಂದು ಸಮುದಾಯದವರು ನಿನ್ನೆಯಿಂದ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ ಸಮುದಾಯದ ನಾಯಕರ ಸಭೆ ಕರೆಯಲು ಸೂಚನೆ ನೀಡಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‍ಆರ್‍ಪಿಯ ಬೆಟಾಲಿಯನ್‍ಗಳನ್ನು ನಿಯೋಜಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ನಾಡಿನ ಜನರು ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ಅನುಮತಿ ಪಡೆದು ನಿರ್ದಿಷ್ಟ ಸ್ಥಳದಲ್ಲಿ ಶಾಂತಿಯುತ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಆದರೆ, ನಿನ್ನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ನಿನ್ನೆ ರಾಜ್ಯದ ಕೆಲವೆಡೆ ಒಂದು ಸಮುದಾಯದವರು ಪ್ರತಿಭಟನೆ ಮಾಡಿದ್ದಾರೆ. ಈತನಕ ರಾಜ್ಯದಲ್ಲಿ ಯಾವುದೇ ತೊಂದರೆಯಾಗಿಲ್ಲ. ಒಂದು ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಈಗಾಗಲೇ ಕ್ಷಮೆ ಕೇಳಿ ಮುಗಿದುಹೋಗಿರುವ ವಿಚಾರಕ್ಕೆ ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ ಕೇಂಬ್ರಿಡ್ಜ್ ಶಾಲೆ ಹಿಂಭಾಗದ ಶೆಡ್‍ವೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡುತ್ತಿರುವ ಹಿನ್ನಲೆ ನಗರಸಭೆ ಅಧ್ಯಕ್ಷರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಿದೆ. ಯುಜಿಡಿ, ಅಮೃತ್ ಕಾಮಗಾರಿ ಪರಿಶೀಲನೆಗೆಂದು ತೆರಳಿದಾಗ ಅನುಮಾನಗೊಂಡು ಕೇಂಬ್ರಿಡ್ಜ್ ಶಾಲೆ ಹಿಂಭಾಗದ ಶೆಡ್‍ಗೆ ತೆರಳಿ ಪರಿಶೀಲಿಸಿದಾಗ ಅಕ್ರಮವಾಗಿ ದನವನ್ನು ಕಡಿದಿರುವುದು ಬೆಳಕಿಗೆ ಬಂದಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದ್ದಾರೆ. ನಗರದ 22 ನೇ ವಾರ್ಡ್‍ನಲ್ಲಿ ಎಂದಿನಿಂದ ನಗರಸಭೆಯಿಂದ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿತ್ತು. ಗೋಹತ್ಯೆ ನಡೆದಿರುವುದು ಗೊತ್ತಾಗುತ್ತಿದ್ದಂತೆ ಆರೋಪಿತರು ತಪ್ಪಿಸಿಕೊಂಡು ಓಡಿಹೋಗಿದ್ದಾರೆ. ಸುಮಾರು 500 ಕೆ.ಜಿ ದನದ ಮಾಂಸ ಪತ್ತೆಯಾಗಿದೆ. ವಿರುದ್ದ ಗೋಹತ್ಯೆ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಗೋಹತ್ಯೆ ಸಂಬಂಧವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನಗರದಲ್ಲಿ ಯಾವುದೇ ಅನಧಿಕೃತ ಶೆಡ್‍ಗಳು ನಿರ್ಮಿಸಿಕೊಂಡಲ್ಲಿ ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆಯಿಂದ ತೆರವು ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.…

Read More