Subscribe to Updates
Get the latest creative news from FooBar about art, design and business.
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
- ತುಮಕೂರಿಗೆ ಏರ್ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
Author: admin
ಬೀದರ್: ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗೊಳಿಸುವುದು, ಆರ್ ಎನ್ ಐ ಸಂಖ್ಯೆ ಹೊಂದಿದ ಎಲ್ಲಾ ಪತ್ರಕರ್ತರಿಗೆ ರಾಜ್ಯದಾದ್ಯಂತ ಸಂಚರಿಸಲು ಉಚಿತ ಬಸ್ ಪಾಸ್ ಸೇರಿದಂತೆ ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಡಿ. 15 ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ನಡೆಸಿಲು ನಿರ್ಧರಿಸಿದೆ. ಡಿ.8ರಿಂದ 19 ರವರಿಗೆ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ನಡೆಯಲಿದೆ. ಈ ವೇಳೆ ಸರಕಾರದ ಗಮನ ಸೆಳೆಯಲು ಧರಣಿ ನಡೆಸಲಾಗುತ್ತಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ತಿಳಿಸಿದ್ದಾರೆ. ಪತ್ರಕರ್ತರ ಮಾಶಾಸನ ನಿಯಮ ಸರಳೀಕರಿಸುವುದು ಹಿರಿಯ ಪತ್ರಕರ್ತರಿಗೆ ನೆರವು ಕಲ್ಪಿಸುವುದು ಕರ್ತವ್ಯದ ವೇಳೆ ಅಥವಾ ಅಪಘಾತದಲ್ಲಿ ಪತ್ರಕರ್ತರು ಮೃ ತಪಟ್ಟರೆ ಅವರ ಕುಟುಂಬಕ್ಕೆ 10 ಲಕ್ಷ ಪರಿಹಾರ ಒದಗಿಸುವುದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ 300 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡುವುದು ಬೇಡಿಕೆಗಳಾಗಿವೆ ಎಂದು ಹೇಳಿದ್ದಾರೆ ವರದಿ: ಅರವಿಂದ ಮಲ್ಲಿಗೆ,…
ತುಮಕೂರು: ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ನಿರ್ಲಕ್ಷಿಸಿದ ಮಗನಿಗೆ ತಂದೆ, ಹಿರಿಯ ನಾಗರಿಕರ ಕಾನೂನಿನ ಮೂಲಕ ತಕ್ಕ ಪಾಠ ಕಲಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಗಾಂಧಿನಗರದ ನಿವಾಸಿ ಟಿ.ಕೆ. ಶಿವಪ್ರಸಾದ್ ಅವರು ಮನೆ ಸಹಿತ 2 ನಿವೇಶನಗಳನ್ನು ಕಿರಿಯ ಪುತ್ರ ಟಿ.ಎಸ್.ಪೃಥ್ವಿ ಪ್ರಸಾದ್ ಹೆಸರಿಗೆ 2020ರಲ್ಲಿ ನೋಂದಾಯಿತ ದಾನಪತ್ರದ ಮೂಲಕ ವರ್ಗಾವಣೆ ಮಾಡಿದ್ದರು. ದಾನಪತ್ರದಲ್ಲಿ ಮುಂದೆಯೂ ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುವ, ವೈದ್ಯಕೀಯ ವೆಚ್ಚ ಭರಿಸುವ ಭರವಸೆ ಹೊಂದಿರುವುದಾಗಿಯೂ ಉಲ್ಲೇಖಿಸಿದ್ದರು. ಆದರೆ, ಆಸ್ತಿ ವರ್ಗಾವಣೆಗೊಂಡ ಬಳಿಕ ಬಳಿಕ ಪುತ್ರನ ನಡವಳಿಕೆ ಬದಲಾಗಿದ್ದು, ತಮ್ಮನ್ನು ನಿರ್ಲಕ್ಷಿಸಿ, ನಿಂದಿಸುತ್ತಾ ದೌರ್ಜನ್ಯ ವೆಸಗುತ್ತಿದ್ದಾರೆ ಎಂದು ಶಿವ ಪ್ರಸಾದ್ ಅವರು ಉಪವಿಭಾಗಾಧಿಕಾರಿಗಳ ನ್ಯಾಯಾಲಯದ ಮೊರೆಹೋಗಿದ್ದರು. ಮಗನಿಗೆ ಮಾಡಿದ್ದ ದಾನಪತ್ರ ರದ್ದುಪಡಿಸುವಂತೆ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯಿದೆಯಡಿ ಮನವಿ ಸಲ್ಲಿಸಿದ್ದ ಶಿವಪ್ರಸಾದ್ ಅವರ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಪ್ರಕರಣದ ವಿಚಾರಣೆ ನಡೆಸಿದ ಉಪ ವಿಭಾಗಾಧಿಕಾರಿಗಳು ಹಾಗೂ ನ್ಯಾಯಿಕ ದಂಡಾಧಿಕಾರಿಗಳಾದ ನಾಹಿದಾ ಜಮ್…
ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ–1ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಡಿಸೆಂಬರ್ 5ರಂದು ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬೆಳ್ಳಾವಿ ಹಾಗೂ ಬುಗುಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳು ಮತ್ತು ಇತರೆ 66/11 ಕೆವಿ ಬೆಳ್ಳಾವಿ ಉಪಸ್ಥಾವರದ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ವೈ.ಎನ್. ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊಸದಾಗಿ ಸ್ಥಾಪಿಸಿರುವ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಖಾಲಿಯಿರುವ 1 ನೇತ್ರ ಸಹಾಯಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಡಿಸೆಂಬರ್ 9ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ನೇರ ಸಂದರ್ಶನವು ಡಿಸೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅಮಾನಿಕೆರೆ ಎದುರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 2 ವರ್ಷದ Diploma in Ophthalmic ಅಥವಾ ನೇತ್ರ ಸಹಾಯಕರಾಗಿ ಮಾನ್ಯತೆ ಪಡೆದ ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್ ಪಿಸಿಐಬಿ ನಿಯಮಾನುಸಾರ ತರಬೇತಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಇಂಟರ್ ನೆಟ್ ಇತ್ಯಾದಿ ಬಳಕೆಗೆ ಬೇಕಾಗುವ ಕಂಪ್ಯೂಟರ್ ಬೇಸಿಕ್ ಕೋರ್ಸ್ನಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು. ಸಂದರ್ಶನಕ್ಕೆ ಗರಿಷ್ಠ 45 ವರ್ಷದ ಅಭ್ಯರ್ಥಿಗಳು ಮೂಲ ದಾಖಲೆ ಹಾಗೂ 2 ಸ್ವಯಂ ದೃಢೀಕೃತ ಪ್ರತಿ ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು…
ತುಮಕೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳು, ಬೋಧಕರು ಜನಸಾಮಾನ್ಯರಿಗೆ ಅನುಕರಣೀಯ ಆವಿಷ್ಕಾರ/ನಾವೀನ್ಯತೆಯ ಪುರಸ್ಕಾರ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ, ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದೋಗ ಸೃಷ್ಟಿಗೆ ಕಾರಣವಾದ ಅನುಕರಣೀಯ ಆವಿಷ್ಕಾರಗಳು/ಪರಿಹಾರಗಳನ್ನು ಪ್ರತಿ ವರ್ಷ ಗುರುತಿಸಿ ಈ ಪುರಸ್ಕಾರ ನೀಡಲಾಗುವುದು. ಪುರಸ್ಕಾರವು 10,000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಸ್ನಾತಕೋತ್ತರ ವಿದ್ಯಾರ್ಥಿಗಳು ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಪ್ರೊ.ಯು.ಆರ್. ರಾವ್, ಪದವಿ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಡಾ.ಎಸ್.ಕೆ. ಶಿವಕುಮಾರ್ ಹಾಗೂ ಬೋಧಕರು ಹಾಗೂ ಜನಸಾಮಾನ್ಯರ ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಪ್ರೊ.ಎಸ್.ಅಯ್ಯಪ್ಪನ್ ಪುರಸ್ಕಾರ ನೀಡಲಾಗುವುದು, ಆಸಕ್ತರು ಡಿಸೆಂಬರ್ 31ರೊಳಗಾಗಿ ಅಕಾಡೆಮಿಯ ವೆಬ್ ಸೈಟ್ https://kstacademy.in ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080–29721550 ಅಥವಾ ಮೊ.ಸಂ: 9620767819/ 9686449019ನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ…
ಗುಬ್ಬಿ: ದನ ಮೇಯಿಸಲು ಹೋಗಿದ್ದ 60 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿ.ಎಸ್.ಪುರ ಹೋಬಳಿ ಮಣಿಕುಪ್ಪೆ ನಿವಾಸಿ ನರಸಯ್ಯ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಡಿಕೆ ತೋಟದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಉಗಣಿ ಬಳ್ಳಿ, ಗಿಡಗಂಟೆಗಳು ಹಬ್ಬಿದ್ದು, ಇದರಿಂದಾಗಿ ವಿದ್ಯುತ್ ಸ್ಪರ್ಶಿಸಿ ಅವರು ಸಾವನ್ನಪ್ಪಿದ್ದಾರೆನ್ನಲಾಗಿದೆ. ಹಸುಗಳು ಮಾತ್ರವೇ ಮನೆಗೆ ಬಂದ ವೇಳೆ ಮನೆಯವರು ಅನುಮಾನಗೊಂಡು ಹುಡುಕಾಟ ನಡೆಸಿದ್ದು, ಈ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತದೇಹ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅಮಾಯಕ ವ್ಯಕ್ತಿ ಬಲಿಯಾಗಲು ಪ್ರಮುಖ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜನ ಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು, ಡಿ.29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಈ ಕುರಿತು ನ್ಯಾಯಾಲಯ ಮಂಗಳವಾರ ವಿಚಾರಣೆ ನಡೆಸಿತು. ಈ ವೇಳೆ ತನಿಖಾಧಿಕಾರಿಗಳು ಸೂರಜ್ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವು ಬಿ ರಿಪೋರ್ಟ್ ತಿರಸ್ಕರಿಸಿದೆ. ಜೊತೆಗೆ ತನಿಖೆ ಮುಂದುವರೆಸಿ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಸೂರಜ್ ವಿರುದ್ಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತಪಟ್ಟವರು. ಮೃತರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹವನ್ನ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಇರಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಳಗಾವಿ: ಏಳನೇ ತರಗತಿಯ ವಿದ್ಯಾರ್ಥಿನಿಯನ್ನು ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ನವೆಂಬರ್.23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಕೃತ್ಯ ಬೆಳಕಿಗೆ ಬರುವುದು ತಡವಾಗಿದೆ. ಏತನ್ಮಧ್ಯೆ ವಿಚಾರ ತಿಳಿದ ಪೋಷಕರು ಡಿಸೆಂಬರ್ 1ರಂದು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ರಾಜ್ಯದ ಗೃಹ ಸಚಿವರ ಆದೇಶದಂತೆ ತಾಲೂಕಿನ 6 ಹೋಬಳಿಯ ಕೇಂದ್ರಗಳನ್ನ ಸಮಗ್ರ ಅಭಿವೃದ್ಧಿಗಾಗಿ ತಲಾ ಎರಡುವರೆ ಕೋಟಿ ಅನುದಾನ ನೀಡಿದ್ದು, ರಸ್ತೆ ಅಗಲಿಕರಣ ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತುಮಕೂರು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಜಿ. ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಕೋಳಾಲ ಹೋಬಳಿ ಕೇಂದ್ರದ ಗ್ರಾ.ಪಂ.ಯಲ್ಲಿ ಸದಸ್ಯರ ಸಭೆ ಮಾಡಿ ನಂತರ ಕಾಮಗಾರಿ ನಡೆಯುವ ಸ್ಥಳವನ್ನ ಪರಿಶೀಲಿಸಿ ಮಾತನಾಡಿದರು. ಈಗಾಗಲೇ ಶಾಸಕರ ನಿಧಿಯಾಗಿ ಮುಖ್ಯಮಂತ್ರಿಗಳು 50 ಕೋಟಿ ರೂ ಅನುದಾನವನ್ನ ಬಿಡುಗಡೆ ಮಾಡಿದ್ದು, ಗೃಹ ಸಚಿವರ ಮಾರ್ಗದರ್ಶನ ಹಾಗೂ ಅವರ ಆದೇಶದಂತೆ ತಾಲೂಕಿನ ಹೊಳವನಹಳ್ಳಿ, ಕೋಳಾಲ, ಕಸಬಾ, ಪುರವಾರ, ತೋವಿನಕೆರೆ, ಚಿಕ್ಕತೊಟ್ಲುಕೆರೆ ಹೋಬಳಿ ಕೇಂದ್ರಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಪುಟ್ಪಾತ್, ರಸ್ತೆ ಮಧ್ಯ ವಿನ್ಯಾಸವಾದ ವಿದ್ಯುತ್ ದೀಪ ಅಳವಡಿಸಿ ಪಟ್ಟಣದ ಮಾದರಿಯಂತೆ ಮಾಡಲು ಈಗಾಗಲೇ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. 50 ಕೋಟಿ ಅನುದಾನದಲ್ಲಿ ರಸ್ತೆ,…