Author: admin

ಮಂಡ್ಯ:  ಪ್ರೀತಿ ನಿರಾಕರಿಸಿದ ಯುವತಿ ಮೇಲೆ ನಡು ರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಕ್ಕರೆ ನಾಡಿನಲ್ಲಿ ನಗರದ ಮಿಮ್ಸ್‌ ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ. ಮಂಡ್ಯ ತಾಲೂಕಿನ ವೈ.ಯರಹಳ್ಳಿ ಗ್ರಾಮದ ಸಂಪತ್‌ ಅದೇ ಗ್ರಾಮದ ಆತನ ಸಂಬಂಧಿಯೇ ಆದ ಯುವತಿಯನ್ನು ಕಳೆದ 2 ವರ್ಷಗಳ ಹಿಂದೆಯಿಂದ ಪ್ರೀತಿಸುತ್ತಿದ್ದ. ಆದರೆ ಸರಿಯಾಗಿ ಕೆಲಸಕ್ಕೂ ಹೋಗದೇ ಇದ್ದ ಸಂಪತ್‌ ಗೆ ಮಗಳನ್ನು ಕೊಟ್ಟು ಮದುವೆ ಮಾಡಲು ಯುವತಿಯ ಕುಟುಂಬಸ್ಥರು ವಿರೋದ ವ್ಯಕ್ತಪಡಿಸಿದ್ದು. ಯವತಿ ಸಹ  ಸಂಪತ್‌ ನನ್ನು ಪ್ರೀತಿಸಲು ನಿರಾಕರಿಸಿದ್ದಾಳೆ. ಆದರೆ ಸಂಪತ್‌ ಮಾತ್ರ  ನವ್ಯಾಳನ್ನು ಹಿಂಬಾಲಿಸುವುದು, ಕಾಲೇಜು ಬಳಿ ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಇದನ್ನು ತನ್ನ ತಂದೆ- ತಾಯಿ ಬಳಿ ಹೇಳಿಕೊಂಡಾಗ ಗ್ರಾಮದಲ್ಲಿ ಪಂಚಾಯ್ತಿ ನಡೆಸಿ, ನವ್ಯಾ ತಂಟೆಗೆ ಹೋಗದಂತೆ ಸಂಪತ್‌ ಗೆ ಎಚ್ಚರಿಸಿದ್ದಾರೆ. ಮಿಮ್ಸ್‌ ಕಾಲೇಜಿನಲ್ಲಿ 2ನೇ ವರ್ಷದ ಪ್ಯಾರಾ ಮೆಡಿಕಲ್‌ ಓದುತ್ತಿದ್ದ ನವ್ಯಾ ಇಂಟರ್ನಲ್‌ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಾಗ, ಆಕೆಯನ್ನು ಅಡ್ಡಗಟ್ಟಿ ಪ್ರೀತಿಸುವಂತೆ ಮತ್ತೆ ಪೀಡಿಸಿದ್ದಾನೆ. ಜತೆಗೆ ಸಂಜೆ…

Read More

ತುಮಕೂರು: ರಾಜ್ಯ ಸರ್ಕಾರದ ನಿರ್ಣಯದಲ್ಲಿ ಆರ್.ಎಸ್.ಎಸ್. ಪ್ರಭಾವವಿದೆ. ರಾಜ್ಯ ಸರ್ಕಾರ ಆರ್.ಎಸ್.ಎಸ್.  ಮಾತು ಕೇಳಿ ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರ ವಿಚಾರಗಳನ್ನು ಸುಟ್ಟು ಹಾಕಲು ಪ್ರಯತ್ನಿಸುತಿತ್ತು. ಹಾಗಾಗಿ ನಾವು ಆರ್.ಎಸ್.ಎಸ್. ಚಡ್ಡಿ ಸುಟ್ಟಿದ್ದೇವೆ ಎಂದು ಬಿಡುಗಡೆಗೊಂಡ ಎನ್‌.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿಗಣೇಶ್ ಹೇಳಿಕೆ ನೀಡಿದರು. ಅವರು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆದ ಗೊಂದಲಗಳ ಬಗ್ಗೆ ಹಾಗೂ ಮಹಾ ನಾಯಕರಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಶಿಕ್ಷಣ ಸಚಿವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದು ವಿನಾಕಾರಣ ತಮ್ಮನು ಬಂಧಿಸಲಾಗಿತ್ತು ಎಂದರು. ರಾಜ್ಯ ಸರ್ಕಾರದ ಪ್ರತಿಯೊಂದು ನಡೆಯ ಹಿಂದೆಯೂ ಆರ್. ಎಸ್. ಎಸ್ ನ ಪಾತ್ರವಿದ್ದು, ಅದರ ವಿರುದ್ಧ ಪ್ರತಿಭಟಿಸಿದ್ದೆವು. ಈ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ಸದಾ ನಮ್ಮ ಜೊತೆ ಇದ್ದರು. ದೇಶಕೋಸ್ಕರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೋರಾಟ ಮಾಡಿ  ಜೈಲಿಗೆ ಹೋಗಿರುವುದು ನಮ್ಮಲ್ಲಿ ಖುಷಿ ತಂದಿದೆ. ನಾಡಿಗಾಗಿ ಜೈಲಿಗೆ ಹೋಗಿದ್ದು ಹೆಮ್ಮೆ ಅನಿಸುತ್ತದೆ.…

Read More

ತುಮಕೂರು: ಜಿಲ್ಲೆಯ ತುರುವೇಕೆರೆ  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ  ತುರುವೇಕೆರೆ ತಾಲ್ಲೂಕು ಘಟಕದ ವತಿಯಿಂದ ಪ್ರೊ. ಬಿ.ಕೃಷ್ಣಪ್ಪ ರವರ ಜನ್ಮದಿನಾಚಾರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ  ತಾಲ್ಲೂಕು ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಮಾತನಾಡಿ , ಪ್ರೊ. ಬಿ.ಕೆ.ರವರು ದಲಿತರ ಏಳಿಗೆಗಾಗಿ  ರಾಜ್ಯದ , ಉದ್ದಗಲಕ್ಕೂ ಸಂಘಟನೆಗಳನ್ನು ಬಲಪಡಿಸಿ ಹೋರಾಟಗಳನ್ನು ಮಾಡಿ ದಲಿತರ  ನೋವು, ನಲಿವು ಗಳಲ್ಲಿ  ಭಾಗಿಯಾಗಿದ್ದರು ಎಂದು ತಿಳಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ  ಪ್ರೊ.ಬಿ.ಕೃಷ್ಣಪ್ಪರವರ ಭಾವಚಿತ್ರಕ್ಕೆ  ಪೂಜೆ ಸಲ್ಲಿಸಿ, ಪುಷ್ಪಅರ್ಚನೆ ಮಾಡಲಾಯಿತು . ಇನ್ನು ಈ ಕಾರ್ಯಕ್ರಮದಲ್ಲಿ ಮಲ್ಲೂರು ತಿಮ್ಮೇಶ್ , ಹೊನ್ನೆನಹಳ್ಳಿ ಕೃಷ್ಣಪ್ಪ , ಪಟ್ಟಣದ ಶಿವರಾಜು , ಹಿರಿಯರಾದ ಕೆಂಪಣ್ಣ , ಸುನಿಲ್,  ಮುನಿಯೂರು ರಂಗಸ್ವಾಮಿ , ದಿಲೀಪ್ ಹಾಜರಿದ್ದರು. ವರದಿ: ಸುರೇಶ್ ಬಾಬು , ತುರುವೇಕೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಹೆಚ್.ಡಿ.ಕೋಟೆ: ತಾಲೂಕಿನ ಚಾ ಕಳ್ಳಿ ಮತ್ತು  ಹೆಗ್ಗಡಾಪುರ ಗ್ರಾಮಗಳ ಸರ್ಕಾರಿ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್ನು ಮತ್ತು ಪೆನ್ಸಿಲ್ ಗಳನ್ನು ರಕ್ಷಣಾ ಸೇವಾ ಟ್ರಸ್ಟ್ ಅಧ್ಯಕ್ಷರಾದ ಚಂದ್ರಿಕಾ ದೊರೆಸ್ವಾಮಿ ಹಾಗೂ ಸ್ವಯಂ ನಿವೃತ್ತಿ ಹೊಂದಿದ ಎಎಸ್ಐ ದೊರೆಸ್ವಾಮಿ ವಿತರಣೆ ಮಾಡಿದರು. ಸಂದರ್ಭದಲ್ಲಿ ಚಂದ್ರಿಕಾ ದೊರೆಸ್ವಾಮಿ ಮಾತನಾಡಿ,  ಹೆಚ್.ಡಿ.ಕೋಟೆ ತಾಲೂಕು ಹಿಂದುಳಿದ ತಾಲೂಕು ಎಂದು ಹೆಸರುವಾಸಿಯಾಗಿದೆ ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿಯ ಬಗ್ಗೆ ಕೇವಲ ಸ್ಟೇಜ್ ಮೇಲೆ ಬೂಟಾಟಿಕೆ ಮಾತುಗಳಿಂದ ಆಗಲಿ ವೇದಾಂತದ ಮಾತುಗಳಿಂದ ಆಗಲಿ ಸುಳ್ಳು ಆಶ್ವಾಸನೆ ಭರವಸೆಗಳಿಂದ ಆಗಲಿ ಸಾಧ್ಯವಿಲ್ಲ, ಬದಲಿಗೆ ವಿದ್ಯೆಯಿಂದ , ಬುದ್ಧಿಯಿಂದ ಜ್ಞಾನದಿಂದ ಪ್ರಜ್ಞಾವಂತರಾದ ರೆ ಮಾತ್ರ ಅಭಿವೃದ್ಧಿ ಮತ್ತು ಬದಲಾವಣೆ ಮಾಡಲುಸಾಧ್ಯ ಎಂದು ಅರಿತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಪೋಲಿಸ್ ಇಲಾಖೆಯಿಂದ ನಿವೃತ್ತ ಹೊಂದಿ ಸಮಾಜಸೇವೆ ಮಾಡಲು ಎಎಸ್ಐ ದೊರೆಸ್ವಾಮಿ ಮಾತನಾಡಿ, ಹೆಚ್.ಡಿ.ಕೋಟೆಯನ್ನು ಬದಲಾವಣೆಯತ್ತ ಕೊಂಡೊಯ್ಯಲು ವಿದ್ಯೆಯಿಂದ ಜ್ಞಾನದಿಂದ ಸಾಧ್ಯ ಎಂದು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ…

Read More

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಸೇರಿದಂತೆ ದೇಶದ 4 ರಾಜ್ಯಗಳ 16 ಸ್ಥಾನಗಳಿಗೆ ಮತದಾನ ಇಂದು ಆರಂಭವಾಗಿದೆ. ವಿಧಾನಸಭೆಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಮತದಾನ ಮುಕ್ತವಾಗಿರುವುದರಿಂದ ಯಾರು ಯಾವ ಅಭ್ಯರ್ಥಿಗೆ ಮತ ಹಾಕಿದ್ದಾರೆ, ಎಷ್ಟು ಅಡ್ಡ ಮತದಾನವಾಗಲಿದೆ ಎಂದು ಸುಲಭವಾಗಿ ತಿಳಿದು ಬರಲಿದೆ. ಶಾಸಕರು ಮತದಾನ ಮಾಡುವಾಗ ತಮ್ಮ ಪಕ್ಷದ ಏಜೆಂಟ್ ಗೆ ತೋರಿಸಿ ಮತ ಹಾಕಬೇಕಾಗುತ್ತದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿವಾಸದ ಮುಂದೆ ಪ್ರತಿಭಟಿಸಿ ಆರೆಸ್ಸೆಸ್ ಚಡ್ಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎನ್ ಎಸ್ ಯುಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರಿಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿರುವುದನ್ನು ವಿರೋಧಿಸಿದ್ದ ಎನ್ ಎಸ್ ಯುಐ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿ.ಸಿ.ನಾಗೇಶ್ ಮನೆ ಮುಂದೆ ವಿದ್ಯಾರ್ಥಿಗಳು ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಯ ವೇಳೆ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿಗಳನ್ನು 9 ದಿನಗಳ ಬಳಿಕ ಇಂದು ಬಿಡುಗಡೆಗೊಳಿಸಲಾಗಿದೆ. ವಿದ್ಯಾರ್ಥಿಗಳ ಬಿಡುಗಡೆಗಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತ್ತು. ಬಿಡುಗಡೆಯ ಬಳಿಕ ಮಾತನಾಡಿದ ಎನ್ ಎಸ್ ಯುಐ ರಾಜ್ಯಾದ್ಯಕ್ಷ  ಕೀರ್ತಿ ಗಣೇಶ್, ದೇಶಕ್ಕೋಸ್ಕರ ಹೋರಾಟ ಮಾಡಿ ಜೈಲಿಗೆ ಹೋಗಿದ್ದಕ್ಕೆ ಖುಷಿ ಇದೆ. ಆರೆಸ್ಸೆಸ್ ಮಾತು ಕೇಳಿ ಬಿಜೆಪಿಯವರು ಅಂಬೇಡ್ಕರ್, ಬಸವಣ್ಣ, ಕುವೆಂಪು ವಿಚಾರಗಳನ್ನು ಸುಟ್ಟು ಹಾಕಲು ಪ್ರಯತ್ನಿಸುತ್ತಿತ್ತು. ಹಾಗಾಗಿ ನಾವು ಆರೆಸ್ಸೆಸ್ ಚಡ್ಡಿ ಸುಟ್ಟಿದ್ದೇವೆ ಎಂದು…

Read More

ಹಿರಿಯೂರು: ಪುರುಷರಿಗೆ ಸಮಾನವಾಗಿ ಮಹಿಳೆಯರು ಕರ್ತವ್ಯ ನಿರ್ವಹಿಸಲು ಸುರಕ್ಷಿತ ಹಾಗೂ ಸಾರ್ಥಕ ಸೇವೆ ಮಾಡಲು ಅನುಕೂಲಕರ ಕ್ಷೇತ್ರಗಳಲ್ಲಿ ಈ ಪೊಲೀಸ್ ಇಲಾಖೆಯು ಅಗ್ರಗಣ್ಯ ಸ್ಥಾನದಲ್ಲಿದೆ ಎಂಬುದಾಗಿ ನಗರಠಾಣೆ ಅಪರಾಧ ವಿಭಾಗದ ಉಪನಿರೀಕ್ಷಕಿಯಾದ ಪಿ ಎಸ್ ಐ ಅನುಸೂಯಮ್ಮ ಹೇಳಿದರು. ಹಿರಿಯೂರು ನಗರದ ಪೊಲೀಸ್ ಠಾಣೆಯಿಂದ ಪದೋನ್ನತಿ ಹೊಂದಿ ಚಿತ್ರದುರ್ಗ ನಗರ ಸಂಚಾರಿ ಠಾಣೆಗೆ ವರ್ಗಾವಣೆಗೊಂಡ ಮಹಿಳಾ ಪೇದೆ ಮಂಜುಳಾ ಅವರಿಗೆ ಹಮ್ಮಿಕೊಳ್ಳಲಾಗಿದ್ದ  ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮನ್ನು ಗುರುತಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಗೆ ಕೆಲವೊಂದು ಕ್ಷೇತ್ರಗಳಲ್ಲಿ ವಿನಾಕಾರಣ ಕಿರುಕುಳ ನೀಡುವ ಉದಾಹರಣೆಗಳನ್ನು ಸಹ ನೋಡಿದ್ದೇವೆ ಎಂದರು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಎಲ್ಲಾ ಹಂತದ ಸಿಬ್ಬಂದಿ, ಅಧಿಕಾರಿಗಳು ನಿರ್ಭೀತವಾಗಿ ಕಾರ್ಯ ನಿರ್ವಹಿಸುವ ಕ್ಷೇತ್ರವಾಗಿದೆ. ಕೌಟುಂಬಿಕ ಸೌಜನ್ಯ, ಕಿರುಕುಳ ಹಾಗೂ ಅಬಲೆಯರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಪೋಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಹೆಚ್ಚು ಅವಕಾಶ ಸಿಗುವ ಕಾರಣ ಇಲಾಖೆಯ ಸೇವೆಯನ್ನು ಆತ್ಮತೃಪ್ತಿಯಿಂದ ಮಾಡಬಹುದಾಗಿದೆ ಎಂದು ತಿಳಿಸಿದರು.…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಾಗನಾಯ್ಕನಹಟ್ಟಿ ಹೋಗುವ ರಸ್ತೆ ತೀರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ಹಾಗೂ ವಾಹನ ಸವಾರರು ಸಹ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸಂಬಂಧ ಪಟ್ಟ ವಾರ್ಡ್ ನ ನಗರಸಭೆ ಸದಸ್ಯರು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗನಾಯ್ಕನಹಟ್ಟಿ ಹೋಗುವ ರಸ್ತೆ ಮಾತ್ರವಲ್ಲದೆ ಹಿರಿಯೂರು ತಾಲ್ಲೂಕಿನ ಪ್ರಖ್ಯಾತಿ ಪಡೆದಿರುವ ಹಳೇ ಕಡಲೆಕಾಯಿ ಮಂಡಿಯ ಒಳಗಡೆ ರಾಷ್ಟ್ರಮಟ್ಟದ ಕಾರ್ಯಕ್ರಮಗಳು ನಡೆಯುವ ಸ್ಥಳವಾಗಿದ್ದು, ಇಲ್ಲಿನ ಕ್ರೀಡಾಂಗಣವು ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಇನ್ನೂ ಕ್ರೀಡಾಂಗಣದಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಿದ್ದರೂ, ಬೀದಿ ಬದಿ ವ್ಯಾಪಾರಿಗಳಿಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹಿರಿಯೂರು ನಗರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ. ಜನರು ಬೀದಿ ಬದಿ ವ್ಯಾಪಾರಸ್ಥರಿಂದ ಆಹಾರ ಖರೀದಿಸಿ ಸೇವಿಸಿದ ಬಳಿಕ ಪ್ಲಾಸ್ಟಿಕ್ ಪ್ಲೇಟ್ ಗಳನ್ನು ಅಲ್ಲಲ್ಲೆ ಹಾಕುತ್ತಿದ್ದಾರೆ. ಇದರಿಂದಾಗಿ ನಾನಾ ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ. ಅಧಿಕಾರಿಗಳ ತೀವ್ರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು…

Read More

ಚೆನ್ನೈ:  ಬಹುಬಾಷ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್​ ಶಿವನ್ ಗುರುವಾರ ಹಿಂದು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಂಭ್ರಮದ ಫೋಟೋಗಳು ರಿವೀಲ್​ ಆಗಿದ್ದು, ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಮಹಾಬಲಿಪುರಂನ ರೆಸಾರ್ಟ್ ​ನಲ್ಲಿ ಇವರ ಮದುವೆ ನಡೆದಿದ್ದು ಮದುವೆಯಲ್ಲಿ  ಶಾರುಖ್ ಖಾನ್, ರಜಿನಿಕಾಂತ್, ವಿಜಯ್ ಸೇತುಪತಿ, ತಲಾ ಅಜಿತ್, ಸೂರ್ಯ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು. ಇವರ ಮದುವೆಗೆ  ಮಾದ್ಯಮದವರಿಗೆ ನಿರ್ಬಂಧ ಹೇರಲಾಗಿತ್ತು. ಮದುವೆಯ ದೃಶ್ಯ ಪ್ರಸಾರದ ಹಕ್ಕನ್ನು 10 ಕೋಟಿ ರೂ.ಗೆ ಈ ಜೋಡಿ ಸೇಲ್ ಮಾಡಿದರು ಎನ್ನಲಾಗಿದೆ. ನವಜೋಡಿಯ ಫೋಟೋ ವೈರಲ್​ ಆಗಿದ್ದು, ನೆಟ್ಟಿಗರು ಮತ್ತು ಅಭಿಮಾನಿಗಳು ಪ್ರಭುದೇವ ಮತ್ತು ಸಿಂಬು ಜೊತೆಗಿನ ಅಫೇರ್‌ನಿಂದ ಸುದ್ದಿಯಾಗಿದ್ದ ನಯನತಾರಾ, ತನಗಿಂತ ಒಂದು ವರ್ಷ ಚಿಕ್ಕವರಾದ ವಿಘ್ನೇಶ್ ​ರನ್ನು ಕೈಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ರಶ್ಮಿಕಾ ಮಂದಣ್ಣ ಸದ್ಯ ಬಹು ಬೇಡಿಕೆಯ ನಟಿ. ಸ್ಯಾಂಡಲ್‌ ವುಡ್‌ ಗೆ ಕಿರಿಕ್‌ ಪಾರ್ಟಿ ಮೂಲಕ ಪದಾರ್ಪಣೆ ಮಾಡಿದ ಅವರು, ತೆಲುಗು ಸಿನಿಮಾಗಳಲ್ಲಿ ನಟಿಸಿ ಅಲ್ಲಿನ ಸಿನಿ ಪ್ರಿಯರ ಮನಗೆದ್ದರು. ಇದೀಗ ಬಾಲಿವುಡ್‌ಗೂ ಕಾಲಿಟ್ಟಿರುವ ರಶ್ಮಿಕಾ ಬ್ಯೂಟಿಗೆ ಮರುಳಾಗದವರಿಲ್ಲ. ಈ ಎಲ್ಲದರ ಮಧ್ಯೆ ರಶ್ಮಿಕಾಗೆ ಮತ್ತೊಂದು ಗರಿ ಸಿಕ್ಕಿದ್ದು, ಅಭಿಮಾನಿಗಳಿಗೆ ಸಂತಸದ ವಿಚಾರವಾಗಿದೆ. ಕೇವಲ ಒಂದೆರಡು ವರ್ಷಗಳಲ್ಲಿ, ರಶ್ಮಿಕಾ ಮಂದಣ್ಣ ದಕ್ಷಿಣದ ಅತ್ಯಂತ ಫೇಮಸ್‌ ತಾರೆಗಳಲ್ಲಿ ಒಬ್ಬರಾದರು. 2021 ರಲ್ಲಿ ಬಿಡುಗಡೆಯಾದ ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗಿನ ನಟನೆಯಿಂದ ಅವರ ಸ್ಟಾರ್‌ಡಮ್ ಮತ್ತಷ್ಟು ಹೆಚ್ಚಾಯಿತು. ಎಲ್ಲಾ ಭಾಷೆಗಳಲ್ಲಿಯೂ ಬಹುತೇಕ ಸ್ಟಾರ್‌ ನಟರಿಗೆ ನಾಯಕಿಯಾಗಿರುವ ರಶ್ಮಿಕಾ ಸಂಭಾವನೆ ಕೋಟಿಯ ಗಡಿ ದಾಟಿದೆ. ಈ ಹೊತ್ತಿನಲ್ಲಿಅವರು ಫಿಲ್ಮ್‌ಫೇರ್‌ ಮ್ಯಾಗಜೀನ್‌ನ ಮುಖಪುಟಕ್ಕೆ ರೂಪದರ್ಶಿಯಾಗಿದ್ದಾರೆ. ಈ ಮುಖಪುಟ ಈಗ ಸೋಷಿಯಲ್‌ ಮೀಡಿಯಾದಲ್ಲಿಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಸಂತಸ ತಂದಿದೆ. ಸದ್ಯ ತಮಿಳಿನ ದಳಪತಿ ವಿಜಯ್‌ ಜತೆ ರಶ್ಮಿಕಾ ನಟಿಸುತ್ತಿದ್ದಾರೆ. ಬಾಲಿವುಡ್‌ನಲ್ಲಿಅಮಿತಾಬ್‌ ಬಚ್ಚನ್‌…

Read More