Author: admin

ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಸಮಸ್ಯೆಗಳ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಇದೀಗ ಮುಂಬೈ ಪೊಲೀಸರು ನೂಪುರ್ ಶರ್ಮಾಗೆ ಸಮನ್ಸ್ ನೀಡಿದ್ದಾರೆ. ಜೂನ್ 22 ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ‘ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ವಾಗ್ದಾಳಿ ನಡೆಸಿದ ರೀತಿಗೆ ಸಂಬಂಧಿಸಿದಂತೆ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಈ ಎಂದು ತಿಳಿಸಿದ್ದರು. ಇತ್ತೀಚಿಗೆ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಅಮಾನತುಗೊಳಿಸಿದೆ. ಟಿವಿ ಚರ್ಚೆಯೊಂದರಲ್ಲಿ ನೂಪುರ್ ಶರ್ಮಾ ಅವರು ಮೊಹಮ್ಮದ್ ಪೈಗಂಬರ್ ಗೆ ಮಾಡಿದ ಅವಮಾನಕರ ಹೇಳಿಕೆ ಗೆ ಮುಸ್ಲಿಂ ಸಮುದಾಯಗಳಿಂದ ತುಂಬಾ ವಿರೋಧ ವ್ಯಕ್ತವಾಗಿದೆ. ವರದಿ: ಆಂಟೋನಿ ಬೇಗೂರು…

Read More

ಖ್ಯಾತ ನಟ, ಮಾಜಿ ವಿಧಾನ ಪರಿಷತ್‌ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್‌ ಆದ್ಮಿ ಪಾರ್ಟಿ ಅಧಿಕೃತವಾಗಿ ಮಂಗಳವಾರ ಸೇರ್ಪಡೆಯಾದರು. ಬೆಂಗಳೂರಿನ ಹೋಟೆಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷಕ್ಕೆ ಬರಮಾಡಿಕೊಂಡರು. ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ “ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು ರಾಜ್ಯಗಳ ಒಕ್ಕೂಟವಾಗಿದ್ದು, ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕತೆಗೆ ಒತ್ತು ನೀಡಿ ರಾಷ್ಟ್ರದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವುದೇ ಎಎಪಿಯ ಸ್ಪಷ್ಟ ನಿಲುವು. ಸತತ ನಲವತ್ತಕ್ಕೂ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿ ನಾಟಕದ ಮೂಲಕ ರಾಜಕೀಯ ಕ್ಷೇತ್ರವನ್ನು ಶುದ್ಧೀಕರಣ ಮಾಡುವ ದಿಶೆಯಲ್ಲಿ ಚಂದ್ರುರವರು ಸಾಕಷ್ಟು ಶ್ರಮಿಸಿದ್ದಾರೆ ” ಎಂದು ಹೇಳಿದರು. “ಮುಖ್ಯಮಂತ್ರಿ ಚಂದ್ರುರವರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದವರು. ಗೌರಿಬಿದನೂರು ಕ್ಷೇತ್ರದ ಶಾಸಕರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ, ಕನ್ನಡ…

Read More

IBPS (ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ) ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಅಸಿಸ್ಟಂಟ್, ಆಫೀಸರ್ ಸ್ಕೇಲ್‌(ವಿವಿಧ ಹಂತ) ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8,106 ಹುದ್ದೆಗಳಿದ್ದು, ಜೂನ್ 27 ರವರೆಗೆ ಆನ್‌ಲೈನ್‌ ಅಪ್ಲಿಕೇಶನ್ ಹಾಕಬಹುದು. ಸಿಎ, ಬ್ಯಾಚುಲರ್ ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಈ ಕೆಳಗಿದೆ ನೋಡಿ.. ಹುದ್ದೆಗಳ ವಿವರ: ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪಸ್ ) : 4483 ಆಫೀಸರ್ ಸ್ಕೇಲ್‌-1: 2676 ಆಫೀಸರ್ ಸ್ಕೇಲ್‌-2 (ಅಗ್ರಿಕಲ್ಚರ್ ಆಫೀಸರ್): 12 ಆಫೀಸರ್ ಸ್ಕೇಲ್‌-2 (ಮಾರ್ಕೆಟಿಂಗ್ ಮ್ಯಾನೇಜರ್) :06 ಆಫೀಸರ್ ಸ್ಕೇಲ್‌-2(ಟ್ರೆಸರಿ ಮ್ಯಾನೇಜರ್): 10 ಆಫೀಸರ್ ಸ್ಕೇಲ್‌-2 (Law): 18 ಆಫೀಸರ್ ಸ್ಕೇಲ್‌-2 (CA) :19 ಆಫೀಸರ್ ಸ್ಕೇಲ್‌-2 (IT): 57 ಆಫೀಸರ್ ಸ್ಕೇಲ್‌-2 (ಜೆನೆರಲ್ ಬ್ಯಾಂಕಿಂಗ್ ಆಫೀಸರ್) – 745 ಆಫೀಸರ್ ಸ್ಕೇಲ್‌-3 : 80 ವಿದ್ಯಾರ್ಹತೆ: ಐಬಿಪಿಎಸ್‌ ಆರ್‌ಆರ್‌ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ…

Read More

ನನ್ನ ದೇಹದಲ್ಲಿ ರಕ್ತ ಇರುವವರೆಗೆ ಬಂಗಾಳವನ್ನು ವಿಭಜಿಸಲು ನಾನು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಗಾಳ ವಿಭಜನೆಯ ಬಗ್ಗೆ ಗುಡುಗಿದ್ದಾರೆ. ಉತ್ತರ ಬಂಗಾಳದ ಅಲಿಪುರ್‌ದೌರ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ ಬ್ಯಾನರ್ಜಿ, ಕಳೆದ 10 ವರ್ಷಗಳಲ್ಲಿ ಉತ್ತರ ಬಂಗಾಳದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ, ಈಗ ಉತ್ತರ ಬಂಗಾಳದ ಜನರು ದಕ್ಷಿಣ ಬಂಗಾಳಕ್ಕೆ ಹೋಗಬೇಕಾಗಿಲ್ಲ ಎಂದರು. ಜಾನ್ ಬರ್ಲಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಪ್ರತ್ಯೇಕ ಉತ್ತರ ಬಂಗಾಳದ ವಿಷಯವನ್ನು ಪ್ರಸ್ತಾಪಿಸಿದರು, ಆಗ ದೀದಿ ನನ್ನ ದೇಹದಲ್ಲಿ ರಕ್ತ ಇರುವವರೆಗೂ ಬಂಗಾಳ ಇಬ್ಭಾಗವಾಗಲು ಬಿಡುವುದಿಲ್ಲ. ಬಿಜೆಪಿಯವರು ವಿಭಜನೆಯ ರಾಜಕಾರಣ ಮಾಡುತ್ತಾರೆ. ನಾವು ವಿಭಜಿಸುವುದಿಲ್ಲ, ನಾವು ಒಟ್ಟಿಗೆ ಬೆಳೆಯುತ್ತೇವೆ, ಬದುಕುತ್ತವೆ ಎಂದು ಹೇಳಿದರು. ಈ ಮಧ್ಯೆ, ಕಮ್ತಾಪುರ್ ಲಿಬರೇಶನ್ ಆರ್ಗನೈಸೇಶನ್ (KLO) ಮುಖ್ಯಸ್ಥ ಜಿಬೋನ್ ಸಿಂಗ್, ನಾನು ಮಮತಾ ಬ್ಯಾನರ್ಜಿ ಅವರಿಗೆ ಹೇಳುತ್ತಿದ್ದೇನೆ, ಕೋಚ್ ಕಮ್ತಾಪುರಕ್ಕೆ ಕಾಲಿಡಲು ಧೈರ್ಯ ಮಾಡಬೇಡಿ. ನೀವು ಕೋಚ್ ಕಮ್ತಾಪುರ ರಚನೆಗೆ ಮಧ್ಯಪ್ರವೇಶಿಸಲು ಅಥವಾ ವಿರೋಧಿಸಲು ಸಾಧ್ಯವಿಲ್ಲ”…

Read More

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನವಾಗಿ ಮರು ವಿಂಗಡಣೆ ಆಗಿರುವ ವಾರ್ಡ್ ಒಂದಕ್ಕೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ರವರ ಹೆಸರನ್ನು ಇಡಬೇಕೆಂದು ಬೆಂಗಳೂರಿನ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಭಾಗ್ಯವತಿ ಅಮರೇಶ್ ಎಂಬುವವರು ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ರವರು ನಟನೆ ಮತ್ತು ಸಾಮಾಜಿಕ ಕಾರ್ಯದಿಂದ ಅತ್ಯಂತ ಜನಪ್ರಿಯರಾಗಿದ್ದರು. ಇವರ ಅಕಾಲಿಕ ಮರಣದಿಂದ ಕರ್ನಾಟಕ ಮತ್ತು ದೇಶದ ಇತರೆ ರಾಜ್ಯದ ಜನತೆ ನೋವು ಅನುಭವಿಸುವಂತೆ ಮಾಡಿದೆ. ಹೀಗಾಗಿ ಬಿಬಿಎಂಪಿಯ 198 ರಿಂದ 243ಕ್ಕೆ ಮರು ವಿಂಗಡಣಿ ಆಗುತ್ತಿದ್ದು, ಹೊಸದಾಗಿ ಸೇರ್ಪಡೆಯಾಗುತ್ತಿರುವ ವಾರ್ಡ್‌ಗಳಿಗೆ ನಾಮಕರಣ ಮಾಡುವಾಗ ಯಾವುದಾದರು ಒಂದು ವಾರ್ಡ್‌ಗೆ ಅಥವಾ ಪುನೀತ್ ರಾಜ್‌ಕುಮಾರ್ ರವರು ವಾಸವಿದ್ದ ಮನೆಯ ವಾರ್ಡ್‌ಗೆ ಅವರ ಹೆಸರನ್ನು ಇಟ್ಟು ಶಾಶ್ವತವಾಗಿ ಅವರ ಹೆಸರು ಉಳಿಯುವಂತೆ ಮಾಡಬೇಕಿದೆ ಎಂದು ಮನವಿ ಪತ್ರದಲ್ಲಿ ಕೋರಿಕೊಳ್ಳಲಾಗಿದೆ. ಒಂದು ಬೀದಿಗೆ, ಒಂದು ವೃತ್ತಕ್ಕೆ ಅಥವಾ ರಸ್ತೆಗೆ ಅವರ ಹೆಸರನ್ನ ಇಡುವುದಕ್ಕಿಂತ ಸಂಪೂರ್ಣ ಒಂದು ವಾರ್ಡ್‌ಗೆ ಅವರ ಹೆಸರನ್ನು ಇಟ್ಟರೆ…

Read More

ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಅವರ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ 2.85 ಕೋಟಿ ರೂಪಾಯಿ ಅನಾಮದೇಯ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಇಡಿ ಹಿಂದಿನ ದಿನ 7 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪ್ರಕಾಶ್ ಜ್ಯುವೆಲರ್‌ನಿಂದ 2.23 ಕೋಟಿ ನಗದು, 41.5 ಲಕ್ಷ ನಗದು ಮತ್ತು 133 ಚಿನ್ನದ ನಾಣ್ಯಗಳು ವೈಭವ್ ಜೈನ್ ಅವರ ಮನೆಯಲ್ಲಿ ಪತ್ತೆಯಾಗಿದೆ. ಹಾಗೆ, ವೈಭವ್ ಮತ್ತೊಬ್ಬ ಆಪ್ತ ಸ್ನೇಹಿತ ಜಿ.ಎಸ್.ಮಥಾರು ಅವರಿಂದ 20 ಲಕ್ಷ ರೂ. ಅನ್ನು ಇಡಿ ವಶ ಪಡಿಸಿಕೊಂಡಿದೆ. ಸಚಿವ ಜೈನ್ ಅವರನ್ನು ಮೇ 30 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಮತ್ತು ಜೂನ್ 9 ರವರೆಗೆ ಇಡಿ ಕಸ್ಟಡಿಯಲ್ಲಿದ್ದಾರೆ. ಇಡಿ ಆಭರಣ ವ್ಯಾಪಾರಿ ಸೇರಿದಂತೆ ಸುಮಾರು 7 ಸ್ಥಳಗಳಲ್ಲಿ…

Read More

ತುರುವೇಕೆರೆ: ಈ ಸಮಾಜ ನನಗೇನು ನೀಡಿದೆ ಅನ್ನುವುದಕ್ಕಿಂತ ಸಮಾಜಕ್ಕೆ  ನಾನೇನು ಕೊಡುಗೆ ನೀಡಿದ್ದೇನೆ ಎಂದು ನಾವೆಲ್ಲಾ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹುಲ್ಲೇಕೆರೆ ಸಮಾಜ ಸೇವಕ ಎಚ್.ಬಿ.ಗಂಗಾಧರಯ್ಯ  ಹೇಳಿದರು. ತಾಲ್ಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದ ಶ್ರೀ ಸೋಮೇಶ್ವರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನೋಟ್ ಬುಕ್, ಲೇಖನ ಸಾಮಗ್ರಿಗಳ ವಿತರಣೆ ಹಾಗೂ  ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ  ಹಳ್ಳಿಗಳಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳಿದ್ದಾರೆ ಅವರಿಗೆ ಸೂಕ್ತ ಮಾರ್ಗದರ್ಶನ  ಹಾಗೂ ಆರ್ಥಿಕ ನೆರವಿನ ಕೊರತೆಯಿಂದಾಗಿ ಎಷ್ಟೋ  ಪ್ರತಿಭೆಗಳು ಉನ್ನತ ಮಟ್ಟದ ವ್ಯಾಸಂಗ ಮಾಡಲು ಸಾಧ್ಯವಾಗದ ಸ್ಥಿತಿ ಇದೆ. ನಾವು ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ  ಪೂರಕವಾದ ಪ್ರೋತ್ಸಾಹವಿಲ್ಲದ ಕಷ್ಟದ ದಿನಗಳನ್ನು ಕಂಡಿದ್ದೇನೆ. ಸಮಾಜದಲ್ಲಿ ಬಹಳ ಮಂದಿ ಸ್ಥಿತಿವಂತರಿದ್ದಾರೆ. ಅವರೆಲ್ಲಾ ಬಡಬಗ್ಗರಿಗೆ ತಮ್ಮ ಕೈಲಾದ ಸಹಾಯ ಮಾಡಿದರೆ ನಿರ್ಗತಿಕರೂ ಸಮಾಜದಲ್ಲಿ ಕೊಂಚ ಮುಂದೆ ಬರಲು ಸಾಧ್ಯವಿದೆ ಆದರೆ ಇಂತಹ ಮೌಲ್ಯಯುತ ಆಲೋಚನೆಗಳನ್ನು ಇಂದು ಕಾಣಲು ಸಾಧ್ಯವಿಲ್ಲ. ಬಲಗೈಯಲ್ಲಿ ಮಾಡಿದ ದಾನವು ಎಡಗೈಯಿಗೆ ತಿಳಿಯಬಾರದು…

Read More

ಮೈಸೂರು:  ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ. ಮೈಸೂರು:  ವಿಶ್ವವಿದ್ಯಾನಿಲಯದ  ಸಂಶೋಧಕರ ನೂತನ ವಿದ್ಯಾರ್ಥಿ ನಿಲಯವು ಉದ್ಘಾಟನೆಗೊಂಡು ಒಂದೂವರೆ ವರ್ಷ ಕಳೆದರೂ ವಿಶ್ವವಿದ್ಯಾನಿಲಯವು ಇನ್ನೂ ಸಹ ಪ್ರವೇಶಾತಿಯನ್ನು ನೀಡದೆ ವಿಳಂಬ ಮಾಡುತ್ತಿರುವುದರಿಂದ ಹಲವಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ತೊಂದರೆ ಉಂಟಾಗಿದ್ದು, ಇದನ್ನು ಪ್ರಶ್ನಿಸಿ ಮೈಸೂರು ವಿಶ್ವವಿದ್ಯಾನಿಯದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದರು. ಕುಲಪತಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ ಪ್ರತಿಭಟನಾಕಾರರು,  ಸಂಶೋಧಕರ ವಿದ್ಯಾರ್ಥಿನಿಲಯದ ಪ್ರವೇಶಾತಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕ ಕೂಡಲೇ ಕಟ್ಟಬೇಕೆಂದು ಮೈಸೂರು ವಿವಿ ಆದೇಶ ಹೊರಡಿಸಿರುವ ಆದೇಶವನ್ನು ರದ್ದುಪಡಿಸಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಂದನಂತರ ಶುಲ್ಕಗಳನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ದರು. ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಇದೆ. ಅದೇ ದಿನ  ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಪರೀಕ್ಷೆಯನ್ನು ಮುಂದೂಡಬೇಕು ಎಂದು ಇದೇ ವೇಳೆ…

Read More

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ  ಹಾಲ್ಕುರಿಕೆ ತರಳಬಾಳು ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ತರಳಬಾಳು ಗುರುಪರಂಪರೆಯ ಚರಪಟ್ಟಾಧ್ಯಕ್ಷರಾದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿಯವರ100ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಹೆಚ್.ಸಿ.ಎಂ.ಜಿ ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ನಾಯಕ್,ತರಳಬಾಳು ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ಶಿಕ್ಷಕ ಹೆಚ್.ಬಿ.ವಿಜಯ ಕುಮಾರ್,ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಗೌಡ್ರು ಸೇರಿದಂತೆ ಶಾಲಾ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ಕೊಡಲಾಯಿತು.ಪರಿಸರ ಗೀತಾ  ಗಾಯನ ಹಮ್ಮಿಕೊಳ್ಳಲಾಗಿತ್ತು. ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ರವರ ಜೀವನ ವೃತ್ತಾಂತ,ಸೇವೆ,ಅವರ ಹಾಕಿ ಕೊಟ್ಟಂತಹ ಮಾರ್ಗವನ್ನು ನೆನೆಯಲಾಯಿತು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಪಾವಗಡ:  ತಾಲೂಕಿನ ಪ್ರಾರ್ಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತಿ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ತಾಲೂಕಿನ ಪ್ರಾಥಮಿಕ ಸಹಕಾರ ಸಂಘಗಳಿಗೆ ತಾಲೂಕಿನ ಪಟ್ಟಣದ ಎಸ್. ಎಸ್. ಕೆ. ಸಮುದಾಯಭವನದಲ್ಲಿ ಪೀಠೋಪಕರಣಗಳ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ  ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕರಾದ ಆರ್. ರಾಜೇಂದ್ರ ಭಾಗವಹಿಸಿ ಮಾತನಾಡಿ,  ಪಾವಗಡ ಪಾವಗಡ ತಾಲೂಕು ಅತೀ  ಹಿಂದುಳಿದಿದ್ದು,  ತಾಲೂಕಿನ ಅಭಿವೃದ್ಧಿಗೆ ಪಕ್ಷತೀತವಾಗಿ ಕೆಲಸ  ಮಾಡಲಾಗುವುದು ಹಾಗೂ ತಾಲೂಕಿನ ಸಹಕಾರ ಸಂಘಗಳ ಅಭಿವೃದ್ದಿಗೆ ಶಕ್ತಿ ತುಂಬಿ ಅಭಿವೃದ್ಧಿಪಡಿಸುತ್ತೇವೆ ಮತ್ತು ತಾಲೂಕಿನ ಸಮಗ್ರ ನೀರಾವರಿ ಯೋಜನೆಗೆ ಜಾರಿಗೆ ತರಲು ಸರ್ಕಾರ ಮಟ್ಟದಲ್ಲಿ ಒತ್ತಾಯಿಸಲಾಗುವುದು ಮುಂದಿನ ದಿನಗಳಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವೆಂಕಟರವಣಪ್ಪ ,  ಸಹಕಾರ ಸಂಘಗಳು ರೈತರಿಗೆ ಸಾಲ ಸೌಲಭ್ಯ ನೀಡಿ…

Read More