Subscribe to Updates
Get the latest creative news from FooBar about art, design and business.
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
- ತುರುವೇಕೆರೆ: ಚಿರತೆ ಸಿಕ್ಕರೂ ಗ್ರಾಮಸ್ಥರಲ್ಲಿ ದೂರವಾಗದ ಆತಂಕ
- ಶಿರಾ: ಮರಕ್ಕೆ ಡಿಕ್ಕಿ ಹೊಡೆದ ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ
- ತುಮಕೂರು | ಕುದ್ಮಲ್ ರಂಗರಾವ್ ರಾಜ್ಯ ಪ್ರಶಸ್ತಿ ಪ್ರದಾನ–ಕವಿಗೋಷ್ಠಿ
- ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
Author: admin
ತಿಪಟೂರು: ಮಾಜಿ ಜಿಲ್ಲಾ ಪರಿಷತ್ ಸದಸ್ಯ ಎಚ್. ಗಂಗಾಧರ್ ಹಾಲ್ಕುರಿಕೆ ವಯೋ ಸಹಜದಿಂದ ಮರಣ ಹೊಂದಿದ್ದಾರೆ. 1984 ರಲ್ಲಿ ನಡೆದ ಹಾಲ್ಕುರಿಕೆ ಕ್ಷೇತ್ರದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹೆಚ್ ಪಿ ಗಂಗಾಧರಪ್ಪ ವಿರುದ್ಧ ಇವರು ಸ್ಪರ್ಧೆ ಮಾಡಿ ಜಿಲ್ಲಾ ಪರಿಷತ್ ಸದಸ್ಯತ್ವಕ್ಕೆ ಆಯ್ಕೆಯಾಗಿದ್ದರು. ಒಮ್ಮೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು, ಮುಜರಾಯಿ ಇಲಾಖೆಯ ಪಾರ್ತೆಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ 30 ವರ್ಷಗಳ ಕಾಲ ಕನ್ವಿಯಾರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತವಾಗಿ ಹೆಚ್ ಸಿಎಂಜಿ ಕಾಲೇಜಿನ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮತ್ತು ಸಾಧು ವೀರಶೈವ ಸಮಾಜ ಮುಖಂಡರಾಗಿದ್ದಾರೆ. ಇವರು ಇಬ್ಬರು ಗಂಡು ಮಕ್ಕಳು ಓರ್ವ ಪುತ್ರಿಯನ್ನು ಅಗಲಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ಗಳಲ್ಲಿ ವಿಡಿಯೋ ತೆಗೆಯುವುದನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗಿದ್ದರೂ, ಅನೇಕ ಚರ್ಚೆಗಳಿಗೆ ಕಾರಣವಾಗಿದ್ದು, ಸರ್ಕಾರ ಅಧಿಕಾರಿ ಸ್ನೇಹಿಯೋ, ಜನ ಸ್ನೇಹಿಯೋ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ದರ್ಪ, ದಬ್ಬಾಳಿಕೆ, ಲಂಚಾವತಾಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದು, ಇದರಿಂದಾಗಿ ಹಲವಾರು ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ. ಹಲವರ ಅಮಾನತು ಕೂಡ ಆಗಿವೆ. ಇದೇ ಕಾರಣಕ್ಕೆ ಅಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಲ್ಲಿ ಚಿತ್ರೀಕರಿಸುವಂತಿಲ್ಲ ಎನ್ನುವ ನಿಯಮವನ್ನು ಹೇರಿದೆ. ಈ ಆದೇಶವನ್ನು ಹೊರಡಿಸಿದ್ದು ಯಾಕೆ ಎನ್ನುವುದರ ಹಿಂದಿನ ಕಾರಣ ಬಯಲಾಗಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಆದೇಶವನ್ನು ಹೊರಡಿಸಿ ತಡ ರಾತ್ರಿ ವಾಪಸ್ ಪಡೆದುಕೊಂಡಿದೆ. ಈ ಆದೇಶವನ್ನು ಹೊರಡಿಸಿದ್ದರ ಹಿಂದಿನ ಉದ್ದೇಶ ಏನು? ಒಂದು ಜವಾಬ್ದಾರಿಯುತ ಸರ್ಕಾರ, ಒಂದು ಆದೇಶವನ್ನು ಹೊರಡಿಸುವ ಮೊದಲು ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸದೇ ಏಕಾಏಕಿ ಆದೇಶ ಹೊರಡಿಸುವುದು ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.…
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕು ದಂಡಿನ ಶಿವರ ಹೋಬಳಿ ಸಂಪಿಗೆ ಹೊಸಳ್ಳಿ ಗ್ರಾಮ ಪಂಚಾಯತಿಯ ಕುರುಬರಹಳ್ಳಿ ಬ್ಯಾಲ ಗ್ರಾಮದಲ್ಲಿ ತಡರಾತ್ರಿ ಸತತವಾಗಿ ಸುರಿಯುತ್ತಿರುವ ಮಳೆಗೆ ಬಡ ಮಹಿಳೆಗೆ ಸೇರಿದ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಸಂಪಿಗೆ ಹೊಸಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಬರಹಳ್ಳಿ ಬ್ಯಾಲದ ವಾಸಿಯಾದ ಗಂಗಮ್ಮ ಎಂಬ ಬಡ ಮಹಿಳೆಗೆ ಸೇರಿದ ಮನೆಯ ಮೇಲ್ಚಾವಣಿ ಕುಸಿದಿದೆ. ಕಳೆದ ಸುಮಾರು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ನನೆದು ಮನೆಯ ಮೇಲ್ಚಾವಣಿಯ ಹೆಂಚು ,ಶೀಟ್ ಎಲ್ಲವೂ ಒಮ್ಮೆಲೆ ಮುರಿದು ಕೆಳಗೆ ಬಿದ್ದಿದೆ. ಇದರಿಂದಾಗಿ ಮನೆಯಲ್ಲಿ ಟಿವಿ ಬೀರು ಮಂಚ ಹಾಗೂ ಬೆಲೆಬಾಳುವ ಸಾಮಗ್ರಿಗಳು ಸಂಪೂರ್ಣವಾಗಿ ಹಾನಿಯಾಗಿದೆ. ಆಹಾರ ಪದಾರ್ಥಗಳು ಮಣ್ಣು ಪಾಲಾಗಿದ್ದರೆ, ಪಾತ್ರೆ ಇತರೆ ಸಾಮಗ್ರಿಗಳು ಮೇಲಿಂದ ಬಿದ್ದ ರಭಸಕ್ಕೆ ನುಜುಗುಜ್ಜಾಗಿವೆ. ಸ್ಥಳಕ್ಕೆ ಸಂಬಂಧಪಟ್ಟ ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಮನೆ ಕಳೆದುಕೊಂಡ ನಿರ್ಗತಿಗಳಾದ ಬಡ ಮಹಿಳೆಗೆ ನೆರವು…
ಚಿತ್ರದುರ್ಗ: ವಾಹನ ನಿಲುಗಡೆಗೆ ಸರಿಯಾದ ವ್ಯವಸ್ಥೆ ಕಲ್ಪಿಸುವಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಹಿರಿಯೂರು ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೆಂಗಳೂರು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ದಿನನಿತ್ಯ ಸಾವಿರಕ್ಕೂ ಹೆಚ್ಚು ವಾಹನಗಳು ಹಿರಿಯೂರು ನಗರದ ಪ್ರವೇಶ ಮಾಡುತ್ತಿದ್ದು, ರಸ್ತೆಯಲ್ಲಿ ಅತಿಯಾದ ಲಾರಿ ನಿಲುಗಡೆ , ದೊಡ್ಡ ವಾಹನಗಳ ನಿಲುಗಡೆಯಿಂದ ಹಿರಿಯೂರು ನಗರದ ಒಳಬರುವ ವಾಹನಗಳಿಗೆ ಹಾಗೂ ಆ ಭಾಗದಲ್ಲಿ ಸಂಚರಿಸುವ ಹಿರಿಯೂರಿನ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ತಕ್ಷಣವೇ ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಜೀವಿನಿ ಜೀವರಕ್ಷಕ ಟ್ರಸ್ಟ್ ನ ರಾಜ್ಯ ಸಂಚಾಲಕರಾದ ಮಹಾಂತೇಶ್ ಆರ್, ತಾಲ್ಲೂಕು ಸಂಚಾಲಕರಾದ ಚೇತನ್ ಆಲೂರು, ತಾಲ್ಲೂಕು ಅಧ್ಯಕ್ಷರಾದ ಧನುಷ್, ತಾಲೂಕು ಉಪಾಧ್ಯಕ್ಷರಾದ ಗಿರೀಶ್,ಕಾರ್ಯದರ್ಶಿ ರಾಘವೇಂದ್ರ, ಸಂತೋಷ್, ಪ್ರಸನ್ನ , ನಾಗರ್ಜುನ್, ಹರೀಶ್, ಅವಿನಾಶ್, ದರ್ಶನ್, ಇನ್ನಿತರ…
ಸರಗೂರು: ತಾಲ್ಲೂಕಿನ ನುಗು ಜಲಾಶಯ ಭರ್ತಿಯಾದ ಹಿನ್ನೆಲೆ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ನಂಜನಗೂಡು ಶಾಸಕ ಹರ್ಷವರ್ಧನ್ ಜೊತೆಯಾಗಿ ಬಾಗೀನ ಅರ್ಪಿಸಿದರು. ತಾಲ್ಲೂಕಿನ ನುಗು ಜಲಾಶಯಕ್ಕೆ ಶುಕ್ರವಾರ ಇಬ್ಬರು ಶಾಸಕರು ಭೇಟಿ ನೀಡಿದ ಶಾಸಕರು ಗಣಪತಿ, ಲಕ್ಷ್ಮಿ ದೇವಿಯ ವಿಗ್ರಹವಿಟ್ಟು ಪೂರ್ಣಕುಂಭ ಕಳಶದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಜಲಾಶಯಕ್ಕೆ ಬಾಗೀನ ಅರ್ಪಿಸಿದರು. ಇದೇ ವೇಳೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂದಿನಿಂದಲೇ ನುಗು ಮೇಲ್ದಂಡೆ ನಾಲೆಗೆ ನೀರು ಹರಿಸಲಾಗುವುದು. ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಲ್ಲಿನ ಹೂಳು, ಜಂಗಲ್ ಕಟ್ಟಿಂಗ್ ಮಾಡಿಸಿ ನಂತರ ಆಗಸ್ಟ್ 5ರಿಂದ ನೀರು ಹರಿಸಲಾಗುವುದು ಎಂದರು. ನುಗು ಅತಿಥಿ ಗೃಹ, ಜಲಾಶಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಬಿರ್ವಾಳ್ನಿಂದ ಮುಳ್ಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಹಲಸೂರಿನಿಂದ ಮುಳ್ಳೂರು ಸೇತುವೆವರೆಗೂ ರಸ್ತೆ ಹದಗೆಟ್ಟಿದ್ದು, ಅದನ್ನು ಶೀಘ್ರದಲ್ಲೇ ಸರಿಪಡಿಸಲು ಕ್ರಮವಹಿಸಲಾಗುವುದು. ಜೊತೆಗೆ ನುಗು ಜಲಾಶಯದ ನಿರ್ವಹಣೆಗಾಗಿ ಶಾಶ್ವತವಾಗಿ ನುಗು ಅತಿಥಿ ಗೃಹದಲ್ಲಿ ಎಂಜಿನಿಯರ್ ಉಪ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ. ಸರ್ಕಾರಿ ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈಸ್ ಮಿಲ್ ಮಾಲೀಕರು ವರ್ತಕರು ತುಮಕೂರು ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪ್ರತಿಭಟನೆ ನಡೆಸಿದರು. ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಡಾ.ರಮೇಶ್ ಬಾಬು ಮಾಧ್ಯಮಗಳ ಜೊತೆಗೆ ಮಾತನಾಡಿ, ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದು ಸಾಮಾನ್ಯ ಜನರಿಗೆ ತೊಂದರೆಯಾಗಲಿದೆ ಎಂದರು. ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ಹಾಕಬಾರದು, ಇದನ್ನು ತಕ್ಷಣವೇ ರದ್ದುಗೊಳಿಸಬೇಕು. ಇದರ ವಿರುದ್ಧ ದೇಶವ್ಯಾಪಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಜಿ.ಎಸ್.ಟಿ. ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಭಾರತ್ ಮಾತಾಕೀ ಜೈ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಾದಾಮಿ : ಕೆರೂರಿನಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಮಾಜಿ ಸಿಎಂ, ವಿಪಕ್ಷ ನಾಯಕ ಹಾಗೂ ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ತೆರಳಿದ್ದು, ಸಂತ್ರಸ್ತರಿಗೆ ಈ ವೇಳೆ ಅವರು ನೀಡಿದ್ದ ಹಣವನ್ನು ಮಹಿಳೆಯೊಬ್ಬರು ಸಿದ್ದರಾಮಯ್ಯನವರ ಕಾರಿನೊಳಗೆ ಎಸೆದ ಘಟನೆ ನಡೆದಿದೆ. ತಾಲೂಕಿನ ಕೆರೂರಿನಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಹಿಳೊಬ್ಬರು ಸಿಟ್ಟಿಗೆದ್ದು ಹಣ ವಾಪಾಸ್ ಎಸೆದಿದ್ದಾರೆ. ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನರಿಗೆ ಗಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಮಹಿಳೆಯೊಬ್ಬರಿಗೆ 2 ಲಕ್ಷ ನೆರವು ನೀಡಿದ್ದರು. ಸಂದರ್ಭದಲ್ಲಿ ನನಗೆ ಹಣಬೇಡ ನನಗೆ ಶಾಂತಿ, ನಮಗೆ ನ್ಯಾಯ ಕೊಡಿ ಎಂದು ಸಿದ್ದರಾಮಯ್ಯ ಅವರು ನೀಡಿದ ಹಣವನ್ನು ಏಕಾಏಕಿ ಕಾರಿನ ಮೇಲೆ ಎಸೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆ ಮಹಿಳೆಯನ್ನು ಯಾರೋ ಎತ್ತಿ ಕಟ್ಟಿದ್ದಾರೆ ದುಡ್ಡು ಬಿಸಾಡಿದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯು ಸಾರ್ವಜನಿಕರಿಗೆ ಆಕರ್ಷಣೀಯವಾಗಿ, ಸ್ವಚ್ಛವಾಗಿ ಹಾಗೂ ಮಾದರಿಯಾಗಿ ಇರಬೇಕು ಎಂದು ಜಿಲ್ಲಾ ಕಾನೂನು ನ್ಯಾಯಾಧೀಶರು ಹಾಗೂ ಕೆರೆ ಮತ್ತು ಕಾಲುವೆಗಳ ಸಂರಕ್ಷಣಾ, ಪ್ರಾಧಿಕಾರ ಅಧ್ಯಕ್ಷರಾಗಿರುವ ಗಿರೀಶ್ ಅವರು ತಿಳಿಸಿದರು. ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಯಾಗಿರುವ ಕುಮಾರನಾಯ್ಕ ಜೊತೆಗೂಡಿ ಆಸ್ಪತ್ರೆಯ ಹೆರಿಗೆವಿಭಾಗ, ಶಸ್ತ್ರಚಿಕಿತ್ಸೆ, ತುರ್ತು ಚಿಕಿತ್ಸಾ ವಿಭಾಗ, ಆಕ್ಸಿಜನ್ ಘಟಕ, ಒಳರೋಗಿಗಳ ವಿಭಾಗ, ಔಷಧಿ ಉಗ್ರಾಣ, ಆಸ್ಪತ್ರೆಯಲ್ಲಿರುವ ಶೌಚಾಲಯಗಳು ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳರೋಗಿಗಳಾಗಿ ದಾಖಲಾಗಿದ್ದ ರೋಗಿಗಳೊಂದಿಗೆ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ವಿಚಾರಿಸಿದರು. ಔಷಧಿ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಗಳ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿ, ಉಗ್ರಾಣದ ನಿರ್ವಹಣೆ ಬಗ್ಗೆ ಪರಿಶೀಲಿಸಿ ಉಗ್ರಾಣದಲ್ಲಿ ಸಾಕಷ್ಟು ಔಷಧಿಗಳ ಲಭ್ಯತೆ ಇರುವುದನ್ನು ಖಚಿತಪಡಿಸಿಕೊಂಡು ಪ್ರಶಂಸೆ ವ್ಯಕ್ತಪಡಿಸಿದರು. ಬಡರೋಗಿಗಳಿಗೆ ಹೊರಗಡೆಗೆ ಔಷಧಿಗಳನ್ನು ಬರೆದುಕೊಡದಂತೆ ಸೂಚಿಸಿದರು. ಸರ್ಕಾರಿ ಆಸ್ಪತ್ರೆಯನ್ನು ನಂಬಿ…
ತುಮಕೂರು: ನಗರದ ಭದ್ರಮ್ಮ ಸರ್ಕಲ್ ಬಳಿಯ ಎಚ್ ಡಿಎಫ್ ಸಿ ಬ್ಯಾಂಕ್ ಮುಂಭಾಗದಲ್ಲಿ ಕಳ್ಳನೋರ್ವ ನೋಡನೋಡುತ್ತಲೇ ವ್ಯಕ್ತಿಯೊಬ್ಬರ ಕೈಯಿಂದ ಹಣ ಕದ್ದು ಪರಾರಿಯಾದ ಘಟನೆ ನಡೆದಿದೆ. ಕಾಂತರಾಜು ಎಂಬವರು ಎಚ್ ಡಿಎಫ್ ಸಿ ಬ್ಯಾಂಕ್ ನಿಂದ ಎರಡು ಲಕ್ಷ ಹಣ ಡ್ರಾ ಮಾಡಿ ಬ್ಯಾಗ್ ಗೆ ಹಾಕಿಕೊಂಡಿದ್ದರು. ಬ್ಯಾಂಕ್ ಒಳಗೆ ಇದನ್ನು ಗಮನಿಸಿದ ಓರ್ವ ಮತ್ತೋರ್ವನಿಗೆ ಸಂದೇಶ ರವಾನಿಸಿದ್ದು, ಕಾಂತರಾಜು ಬ್ಯಾಂಕ್ ನಿಂದ ಹೊರ ಬರುವ ವೇಳೆ ಕಳ್ಳ ಹಣದ ಬ್ಯಾಗ್ ಕಿತ್ತು ಪರಾರಿಯಾಗಿದ್ದಾನೆ. ಕಳ್ಳರು ಪಲ್ಸರ್ ಹಾಗೂ ಯೂನಿಕಾನ್ ಬೈಕ್ ನಲ್ಲಿ ಬಂದಿದ್ದರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಡಿಎಸ್ಪಿ ಶ್ರೀನಿವಾಸ್, ಎನ್ ಇ ಪಿಎಸ್ ಪೊಲೀಸರು ಭೇಟಿ ನೀಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy