Author: admin

ಮಧುಗಿರಿ: ತಾಲೂಕಿನ ಕಸಬಾ ಹಾಗೂ ಕೊಡಿಗೇನಹಳ್ಳಿ ಹೋಬಳಿಯ ಶೆಟ್ಟಿ ಹಳ್ಳಿ ಹಾಗೂ ದೊಡ್ಡಮಾಲೂರು ಗ್ರಾಮಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆಗಳೇ ಇಲ್ಲದೇ ಜನರು ಸಂಕಷ್ಟಕ್ಕೀಡಾಗಿದ್ದು, ಇಲ್ಲಿನ ಜನರು ವಾಸವಿರುವ ಮನೆಯ ಮುಂದೆಯೇ ಕೊಳಚೆ ನೀರು ಹರಿಯುತ್ತಿದ್ದು, ಜನರು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ. ರಸ್ತೆಯಲ್ಲಿಯೇ ಚರಂಡಿ ನೀರು ಹರಿಯುತ್ತಿದ್ದು, ಇಲ್ಲಿ ಸಣ್ಣ ಮಕ್ಕಳು ಬರಿಗಾಲಿನಲ್ಲಿಯೇ ಆಟವಾಡುತ್ತಾ ಹೋಗುತ್ತಿರುತ್ತಾರೆ. ಸೊಳ್ಳೆ, ನೊಣಗಳ ಕಾಟವಂತೂ ಹೇಳತೀರದು. ಈ ಭಾಗದಲ್ಲಿ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಈ ರೀತಿಯ ಸಮಸ್ಯೆ ತಲೆದೋರಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್, ಮಧುಗಿರಿ ತಾಲ್ಲೂಕು ಕಸಬಾ ಹಾಗೂ ಕೊಡಿಗೇನಹಳ್ಳಿ ಹೋಬಳಿಯ ಶೆಟ್ಟಿಹಳ್ಳಿ ಹಾಗೂ ದೊಡ್ಡಮಾಲೂರು ಗ್ರಾಮಗಳ ಈ ಕಣಿವೆಗಳನ್ನು ಸರಿಪಡಿಸಲು ಸ್ಥಳೀಯ ಅಧಿಕಾರಿಗಳು ಸುಮಾರು ಐದು ವರ್ಷಗಳಿಂದ ಅನುದಾನವಿಲ್ಲ ಎಂಬ ಸಬೂಬು ಹೇಳುತ್ತಿದ್ದಾರೆ. ದಯಮಾಡಿ ಮಧುಗಿರಿ ತಾ.ಪಂ EO ಹಾಗೂ ತುಮಕೂರು ಸಮಾಜ ಕಲ್ಯಾಣ ಇಲಾಖೆಯ JD/DDರವರು…

Read More

ತುಮಕೂರು: ಕನ್ನಡ ನಾಡು ನುಡಿ ಸಂರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗನೂ ಕಂಕಣ ಬದ್ದರಾಗುವಂತೆ ನಗರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಕರೆ ನೀಡಿದರು. ನಗರದ ಉಪ್ಪಾರಹಳ್ಳಿ ಆಟೋ ನಿಲ್ದಾಣದಲ್ಲಿ ಉಪ್ಪಾರಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿ, ಕಟ್ಟಡ ಕಾರ್ಮಿಕರ ಸಂಘ ಹಾಗೂ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರತಿಯೊಬ್ಬ ಕನ್ನಡಿಗನೂ ಕೆಚ್ಚದೆಯ ಕನ್ನಡಿಗನಾಗಿ ನಾಡು ನುಡಿ ನೆಲ ಜಲವನ್ನು ಸಂರಕ್ಷಸುವ ಕಾರ್ಯ ಮಾಡುವ ಸಂಕಲ್ಪ ತೊಟ್ಟು ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಅಂತರಾಳದಿಂದ ನಾಡಗೌರವವಿಟ್ಟು ಈ ಮಣ್ಣಿನ ಋಣ ತೀರಿಸಬೇಕು. ಎಂತಹುದೇ ಸಂದರ್ಭದಲ್ಲಿಯೂ ನಮ್ಮ ನಾಡ ರಕ್ಷಣೆಗಾಗಿ ನಮ್ಮನ್ನು ನಾವು ಮೀಸಲಿಟ್ಟು ತಾಯಿ ಭುವನೇಶ್ವರಿಯ ರಥವನ್ನು ನಿತ್ಯ ಎಳೆಯುವುದರ ಮೂಲಕ ಪ್ರತೀ ದಿನ ನಿತ್ಯೋತ್ಸವವನ್ನು ಆಚರಿಸಬೇಕೆಂದು ಕರೆ ನೀಡಿದರು‌.  ಈ ಸಂದರ್ಭದಲ್ಲಿ ಸಮಿತಿಯ ಮಾರ್ಕೆಟ್ ಕುಮಾರ್, ಶಂಕರ್, ಸೇರಿದಂತೆ ಹಲವು ಮುಖಂಡರು…

Read More

ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯಲ್ಲಿ ಸುರಿದ ಮಳೆಯಿಂದಾಗಿ ಸುಮಾರು 3ರಿಂದ 4 ಮನೆಗಳು ಶಿಥಿಲಾವ್ಯವಸ್ಥೆಗೊಂಡಿದ್ದು, ಮಳೆಯಿಂದ ಗೋಡೆಗಳು ನನೆದು ಪೂರ್ತಿಯಾಗಿ ಮನೆಗಳು ಬಿದ್ದು ಹೋಗಿದೆ. ಮನೆ ಕುಸಿದು ಬಿದ್ದ ಪರಿಣಾಮ ಮನೆಯೊಳಗಿದ್ದ ವಸ್ತುಗಳು, ಆಹಾರ ಸಾಮಗ್ರಿಗಳು ಮಣ್ಣುಪಾಲಾಗಿದ್ದು, ನಾವು ಆತಂಕದಿಂದ ಇದ್ದೇವೆ ಎಂದು ಮನೆ ಮಾಲಿಕರು ಅಳಲು ತೋಡಿಕೊಂಡಿದ್ದಾರೆ. ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಲೆಕ್ಕಾಧಿಕಾರಿ ಮಂಜುಳಾ ಅವರು, ಪರಿಶೀಲನೆ ನಡೆಸಿ, ಘಟನೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತಿಪಟೂರು: ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗ್ಗಾವೆ ಗ್ರಾಮದ ಕಾಲನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಇದ್ದರೂ ಇಲ್ಲದಂತಾಗಿದ್ದು, ಅವ್ಯವಸ್ಥೆಯಿಂದ ಕೂಡಿದೆ. ಗಿಡಗಂಟೆಗಳ ಮಧ್ಯೆ ಮುಳುಗಿಹೋಗಿರುವ ಸಮುದಾಯ ಭವನವನ್ನು ಕುಡುಕರು ವಶಪಡಿಸಿಕೊಂಡಿದ್ದಾರೆಯೇ ಏನೋ ಎಂದು ಅನ್ನಿಸುವಷ್ಟು ಮದ್ಯದ ಬಾಟಲಿಗಳು ಇಲ್ಲಿ ರಾಶಿ ಬಿದ್ದಿವೆ. ಈ ಭವನದ ಸುತ್ತ ಮುತ್ತಲಿನ ಪ್ರದೇಶದಲ್ಲಿ  ಕೆಲವರು ಶೌಚ ಮಾಡಲು ಬಳಸುತ್ತಿದ್ದಾರೆ. ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ, ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಅಧ್ಯಕ್ಷರಿಗೆ ಕಾಲನಿಯ ನಿವಾಸಿಗಳು ನೂರು ಬಾರಿ ಮನವಿ ನೀಡಿದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಡಾ.ಎನ್.ಮೂರ್ತಿ ಸ್ಥಾಪಿತ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ ಆರೋಪಿಸಿದರು. ಸ್ಥಳೀಯ ನಿವಾಸಿಗಳಿಗೆ ಮತ್ತು ಅಕ್ಕಪಕ್ಕದ ಜನಸಾಮಾನ್ಯರಿಗೆ ಮದುವೆ ಮುಂತಾದ ಕಾರ್ಯಕ್ರಮಗಳಿಗೆ ಬಳಕೆಯಾಗಲಿ ಎಂದು ಸರಕಾರದ ಹಣವನ್ನು ವೆಚ್ಚ ಮಾಡಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ ಆದರೆ ಇಲ್ಲಿ ಭವನ ನೋಡಿದರೆ ಎಲ್ಲಾ ಗಿಡಗಂಟೆಗಳಿಂದ ಮುಚ್ಚಿಕೊಂಡು ಹೋಗಿದೆ ಇದು ನೆಪ…

Read More

ಮಂಡ್ಯ: ದೇಶದ 26 ರಾಜ್ಯಗಳಲ್ಲಿ ಕಾಂಗ್ರೆಸ್‌ ಉಸಿರಾಟ ನಿಲ್ಲಿಸಿದೆ, ಕರ್ನಾಟಕದಲ್ಲಿ ಕಾಂಗ್ರೆಸ್‌‌ ಅಷ್ಟು ಇಷ್ಟು ಉಸಿರಾಡುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಇಲ್ಲೂ ಕಾಂಗ್ರೆಸ್‌ ಉಸಿರು ನಿಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ವಿಧಾನ ಪರಿಷತ್‌ ಚುನಾವಣೆ ಅಂಗವಾಗಿ ನಗರದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ಹಿಂದೆ 400 ಸ್ಥಾನಗಳಲ್ಲಿ ಗೆಲ್ಲುತ್ತಿತ್ತು. ಈಗ 40-45 ಸ್ಥಾನದಲ್ಲಿ ಗೆಲ್ಲುವ ಸ್ಥಿತಿಗೆ ಬಂದು ತಲುಪಿದೆ. ಲೋಕಸಭೆಯಲ್ಲಿ ಪ್ರಾತಿನಿಧ್ಯವಿಲ್ಲದೇ ಕಾಂಗ್ರೆಸ್‌ ಮರ್ಯಾದೆ ಕಳೆದುಕೊಂಡಿದೆ ಎಂದು ಅವರು ಹೇಳಿದರು. ಈಗಿನಿಂದಲೇ ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗಳಿಸಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಮುಂದಿನ ಗುರಿಯಾಗಿದೆ. ವಿಧಾನ ಪರಿಷತ್‌ ಚುನಾವಣೆ ಹಾಗೂ ಮಂಡ್ಯದಲ್ಲಿ ಜೆಡಿಎಸ್‌‌ ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ನಮ್ಮ ಅಭ್ಯರ್ಥಿ ಇಲ್ಲದ ಕಡೆಯಲ್ಲಿ ಬೆಂಬಲ ನೀಡುವಂತೆ ಕೇಳಿದ್ದಾರೆ. ನಮ್ಮ ಅಭ್ಯರ್ಥಿ ಇರುವ ಕಡೆ ಹೊಂದಾಣಿಕೆ ಇಲ್ಲ ಎಂದು ಅವರು ಹೇಳಿದರು. ನರೇಂದ್ರ ಮೋದಿ ಅವರ…

Read More

ಹೈದರಾಬಾದ್: ಚಾಲನಾ ಪರವಾನಗಿ ಪಡೆದ ದೇಶದ ಮೊದಲ ಕುಬ್ಜ ವ್ಯಕ್ತಿ  ಎಂಬ ಹೆಗ್ಗಲಿಕೆಗೆ ಹೈದರಾಬಾದ್ ನಿವಾಸಿ ಪಾತ್ರರಾಗಿದ್ದು, ಕೇವಲ ಮೂರು ಅಡಿ ಎತ್ತರದ ವ್ಯಕ್ತಿ ತನ್ನ ಅಂಗವೈಕಲ್ಯವನ್ನು ಮೀರಿಸಿ ಸಾಧನೆ ಮಾಡಿದ್ದು, ಇದೀಗ ಚಾಲನಾ ಪರವಾನಗಿ ಪಡೆದುಕೊಂಡಿದ್ದಾರೆ. ಹೈದರಾಬಾದ್ ನಿವಾಸಿ ಗಟ್ಟಿಪಲ್ಲಿಯ 42 ವರ್ಷ ವಯಸ್ಸಿನ ಶಿವಪಾಲ್  ಅವರು ಈ ಸಾಧನೆ ಮಾಡಿದವರಾಗಿದ್ದು, ತಮ್ಮ ಅಂಗವೈಕಲ್ಯವನ್ನು ಮೆಟ್ಟಿನಿಂತು ಚಾಲನಾ ಪರವಾನಗಿ ಪಡೆದುಕೊಂಡಿದ್ದಾರೆ. ಮಾತ್ರವಲ್ಲದೇ ತನ್ನಂತೆಯೇ ಇರುವ ಇನ್ನಷ್ಟು ಕುಬ್ಜ ವ್ಯಕ್ತಿಗಳಿಗೆ ಡ್ರೈವಿಂಗ್ ತರಬೇತಿ ನೀಡುವುದು ತನ್ನ ಮುಂದಿನ ಗುರಿ ಎಂದು ಅವರು ಹೇಳಿದ್ದಾರೆ. ನನ್ನ ಎತ್ತರದ ಕಾರಣದಿಂದ ಅನೇಕ ಮಂದಿ ನನ್ನನ್ನು ಚುಡಾಯಿಸುತ್ತಿದ್ದರು. ಇಂದು ನಾನು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ನಾಮನಿರ್ದೇಶನಗೊಂಡಿದ್ದೇನೆ. ಚಾಲನಾ ತರಬೇತಿಗಾಗಿ ಅನೇಕ ಕುಳ್ಳಗಿನ ಜನರು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ದೈಹಿಕ ವಿಕಲಚೇತನರಿಗಾಗಿ ಮುಂದಿನ ವರ್ಷ ಡ್ರೈವಿಂಗ್ ಶಾಲೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…

Read More

ತುಮಕೂರು: ಡಿಸೆಂಬರ್ 10ರಂದು ನಡೆಯಲಿರುವ  ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷಗಳು ಕೊವಿಡ್ ನಿಯಮಗಳನ್ನು ಪಾಲಿಸಬೇಕು ಮತ್ತು ಚುನಾವಣೆಗೂ 72 ಗಂಟೆಗೂ ಮುಂಚಿತವಾಗಿ ಬಹಿರಂಗ ಪ್ರಚಾರ ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕೊವಿಡ್ ನಿಯಮಗಳನ್ನು ಪಾಲಿಸಬೇಕು. ಚುನಾವಣೆ ದಿನಾಂಕಕ್ಕೂ 72 ಗಂಟೆ ಮುನ್ನ ಸಾರ್ವಜನಿಕ ಸಭೆ ಸಮಾರಂಭ, ರ್ಯಾಲಿ, ಬೀದಿ ನಾಟಕ ಸೇರಿದಂತೆ ಎಲ್ಲ ರೀತಿಯ ಬಹಿರಂಗ ಪ್ರಚಾರಗಳನ್ನು ಮುಕ್ತಾಯಗೊಳಿಸಬೇಕು ಎಂದು ಅವರು ಸೂಚಿಸಿದ್ದಾರೆ. ವಿಧಾನ ಪರಿಷತ್ ಚುನಾವಣಾ ಕಣ ಇದೀಗ ರಂಗೇರಿದ್ದು, ಎಲ್ಲ ಪಕ್ಷಗಳು ಸ್ಪರ್ಧೆಗೆ ಬಿದ್ದು ಭರ್ಜರಿ ಪ್ರಚಾರ ನಡೆಸುತ್ತಿವೆ. ಬಹಿರಂಗ ಪ್ರಚಾರವು ಡಿಸೆಂಬರ್ 7ರ ಸಂಜೆ 4 ಗಂಟೆಗೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಈ ಸೂಚನೆ ನೀಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…

Read More

ಗುಬ್ಬಿ: ಸಾರ್ವಜನಿಕ ಸ್ಥಳದಲ್ಲಿ  ಜೂಜಾಟದಲ್ಲಿ ನಿರತರಾಗಿದ್ದವರ ಮೇಲೆ  ಗುಬ್ಬಿ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಸಿಬ್ಭಂದಿ ದಾಳಿ ನಡೆಸಿದ ಘಟನೆ ಗುಬ್ಬಿ ತಾಲ್ಲೂಕು  ಕಸಬಾ ಹೋಬಳಿ ಅಮ್ಮನಘಟ್ಟ ಗ್ರಾಮದ ವರದೇನಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ದಾಳಿ ವೇಳೆ ಮೂವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, 2 ಮೊಬೈಲ್, 9 ದ್ವಿಚಕ್ರ ವಾಹನ ಹಾಗೂ ಜೂಜಾಟಕ್ಕೆ ಬಳಸಿದ್ದ 2,700 ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. 8 ಮಂದಿ ಜೂಜಾಟದಲ್ಲಿ ನಿರತರಾಗಿದ್ದು, ಈ ಪೈಕಿ 5 ಮಂದಿ ಪೊಲೀಸರ ದಾಳಿ ವೇಳೆ ಸ್ಥಳದಿಂದ ಪರಾರಿಯಾಗಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಪಿಐ  ಎಫ್ ಕೆ ನದಾಫ್ ಹಾಗೂ  ಸಿಬ್ಬಂದಿ ಪೃಥ್ವಿರಾಜ್, ಪಾತರಾಜು, ಧನಂಜಯ, ನಾಗರಾಜ್, ರಬ್ಬಾನಿ ದಾಳಿಯಲ್ಲಿ ಭಾಗವಹಿಸಿದ್ದರು. ಘಟನೆ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನಡೆಯಿತು. ಶಿವರಾಂ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಶಿವರಾಮ್ ಅವರು ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದರು. ಪೂಜೆಯ ವೇಳೆ ಅವರು ಯಾವಾಗಲೂ ಬಾಗಿಲು ಹಾಕಿಕೊಳ್ಳುತ್ತಿದ್ದರು. ಈ ಘಟನೆ ನಡೆದ ದಿನವೂ ಅದೇ ರೀತಿ ಬಾಗಿಲು ಹಾಕಿಕೊಂಡು ಪೂಜೆ ಮಾಡುತ್ತಿದ್ದರು. ಈ ವೇಳೆ ಅವರು ಕುಸಿದು ಬಿದ್ದು, ಅವರ ತಲೆಗೆ ಗಂಭೀರವಾಗಿ ಏಟು ತಗಲಿತ್ತು. ಇನ್ನೂ ಪೂಜಾ ಕೊಠಡಿಗೆ ಬಾಗಿಲು ಹಾಕಿಕೊಂಡಿದ್ದರಿಂದಾಗಿ ಶಿವರಾಮ್ ಅವರು ಕುಸಿದು ಬಿದ್ದಿದ್ದರು ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದೆ. ವರದಿಗಳ ಪ್ರಕಾರ, ಒಂದು ಗಂಟೆಗೂ ಹೆಚ್ಚು ಕಾಲ ಅವರಿಗೆ ರಕ್ತಸ್ರಾವವಾಗಿತ್ತು ಎಂದು ಹೇಳಲಾಗಿದೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ರಾಜೇಶ್ ರಂಗನಾಥ್ ತುಮಕೂರು: ಮುಂದಿನ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ತಾವು ತುಮಕೂರಿನಲ್ಲೇ ಇದ್ದು ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿ ಹೊಸ ರಾಜಕಾರಣದ ಸಮೀಕರಣಕ್ಕೆ ನಾಂದಿ ಹಾಡಿದರು. ಅವರು ತಾಲ್ಲೂಕಿನ ಬಳ್ಳಗೆರೆಯ ಶಾಸಕ ಡಿ.ಸಿ.ಗೌರಿಶಂಕರ್ ರವರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,  ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಬಗ್ಗೆ ಅನ್ಯ ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕರುಗಳು ತಮಗಿಚ್ಛೆ ಬಂದಂತೆ ಹೇಳಿಕೆ ನೀಡುತ್ತಿದ್ದು, ಆ ಹೇಳಿಕೆಗಳಿಗೆ ಮತ್ತು ಅವರ ಆರೋಪಗಳಿಗೆ ಯಾವುದೇ ಮನ್ನಣೆ ನೀಡುವುದಿಲ್ಲ. ತಮಗೆ ಪಕ್ಷ ಸಂಘಟನೆ ಮಾಡುವ ಗುರಿ ಮುಂದಿದ್ದು, ಅದಕ್ಕಾಗಿ ರಾಜ್ಯವ್ಯಾಪಿ ಪ್ರವಾಸ ಮಾಡಿ ಮಾಡಿಯೇ ತೀರುತ್ತೇನೆ. ನಾನು ಕಳೆದ ಬಾರಿ ಲೋಕಸಭೆಯಲ್ಲಿಯೇ ಇನ್ನು ಮುಂದೆ ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎಂದು ಭಾಷಣ ಮಾಡಿ ಹೊರಬಂದಿದ್ದೆ. ಆದರೆ ಅಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೇ ನನ್ನನ್ನು ತುಮಕೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನ ನೀಡಿ ಕರೆತಂದರು. ಇಲ್ಲಿಯ ಸಂಸದರಾಗಿದ್ದ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸುವ ಉದ್ದೇಶ…

Read More