Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಬೆಳಗಾವಿ : ಗಡಿಭಾಗದಲ್ಲಿ ಕರ್ನಾಟಕದ ಬಸ್ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆಯುತ್ತಿರುವುದು ಈಗ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಅಖಿಲ ಭಾರತೀಯ ಮರಾಠ ಸಂಘದ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದು, ಮಹಾರಾಷ್ಟ್ರ ಬಸ್ ಗಳಿಗೂ ಕಪ್ಪು ಮಸಿ ಬಳಿಯುವ ಭೀತಿ ಹಿನ್ನೆಲೆ ಏಕಾಏಕಿ 300ಕ್ಕೂ ಅಧಿಕ ಬಸ್ ಗಳನ್ನು ಸಂಚಾರವನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಥಗಿತ ಮಾಡಿದೆ. ಇತ್ತ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಎಂದಿನಂತೆ ಬಸ್ ಗಳು ತೆರಳುತ್ತಿವೆ. ನಿಪ್ಪಾಣಿಯ ಬಸ್ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಒಂದು ಡಿಆರ್ ತುಕಡಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸರು ಕ್ರಮ ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಪುಣೆ: ಕರ್ನಾಟಕ ಬಸ್ ಗಳಿಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆ ಜಿಲ್ಲೆಯ ದೌಂಡ್ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್ ಗೆ ಜೈ ಮಹಾರಾಷ್ಟ್ರ ಮತ್ತು ಜಾಹಿರ್ ನಿಷೇಧ್ ಪದಗಳನ್ನು ಕಪ್ಪು ಬಣ್ಣದಲ್ಲಿ ಬರೆದು ತಮ್ಮ ಪುಂಡಾಟವನ್ನು ಮೆರೆದಿದ್ದಾರೆ. ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನವೆಂಬರ್ 25 ರಂದು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಗಳೂರು ಕುಕ್ಕರ್ ಬ್ಲಾಸ್ಟ್ ಗೆ ಮೊದಲು ಅಂದರೆ ನವೆಂಬರ್ 18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದ್ದು, ನಿಷೇಧಿತ ತುರಾಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಮಾಹಿತಿ ಲಭ್ಯವಾಗಿದೆ. ನ. 19 ರ ಸಂಜೆ ಮಂಗಳೂರಿನಲ್ಲಿ ಬ್ಲಾಸ್ಟ್ ಆಗಿತ್ತು. 18ರಂದು ಬಂಟ್ವಾಳದ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 2, ಉಡುಪಿಯ ಒಂದು, ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಮಾಡಿರುವ ಲೊಕೇಷನ್ ಅನ್ನು ಬೇಹುಗಾರಿಕಾ ಏಜೆನ್ಸಿಗಳು ಪತ್ತೆ ಮಾಡಿವೆ. ಶಂಕಿತ ಉಗ್ರ ಶಾರೀಕ್ ಕರಾವಳಿಯ ದೇವಾಲಯಗಳನ್ನು ಟಾರ್ಗೆಟ್ ಮಾಡಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಕದ್ರಿ ಮಂಜುನಾಥ, ಮಂಗಳಾದೇವಿ, ಕುದ್ರೋಳಿ ದೇವಸ್ಥಾನವನ್ನು ಟಾರ್ಗೆಟ್ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಿಂದೂ ಸಂಘಟನೆಗಳು ದೇವಾಲಯದ ಮುಂಭಾಗ ಮುಸ್ಲಿಮರ ವ್ಯಾಪಾರದ ವಿರುದ್ದ ಸಿಡಿದೆದ್ದಿದ್ದರು. ಇದೇ ಕಾರಣಕ್ಕೆ ದೇವಸ್ಥಾನಗಳನ್ನೇ ಉಗ್ರ ಟಾರ್ಗೆಟ್ ಮಾಡಿದನಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕುಕ್ಕರ್…
ಮನೆ ಬಿಟ್ಟು ಬಂದು ಮದುವೆ ಆಗಿದ್ದ ಯುವ ಪ್ರೇಮಿಗಳು ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣದಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಪರಸ್ಪರ ಪ್ರೀತಿಸ್ತಿದ್ದ ಯುವಕ– ಯುವತಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ಸದ್ಯ ಇವರ ಮೃತದೇಹ ರೈಲು ಹಳಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಫೋನ್ ಪೇ, ಗೂಗಲ್ ಪೇ , ಪೇಟಿಎಂ ಸೇರಿದಂತೆ ಯುಪಿಐ ಪಾವತಿ ಆ್ಯಪ್ ವಹಿವಾಟುಗಳಿಗೆ ಮಿತಿ ವಿಧಿಸುವ ಕುರಿತು ಭಾರತದ ರಾಷ್ಟ್ರೀಯ ಪಾವತಿಗಳ ನಿಗಮವು ಭಾರತೀಯ ರಿಸರ್ವ್ ಬ್ಯಾಂಕ್ ಜೊತೆಗೆ ಸಮಾಲೋಚನೆ ನಡೆಸಿದೆ. ವರದಿಗಳ ಪ್ರಕಾರ ಥರ್ಡ್ ಪಾರ್ಟಿ ಆ್ಯಪ್ ಪೂರೈಕೆದಾರರಿಗೆ (ಟಿಪಿಎಪಿ) ಶೇ.30ರಷ್ಟು ವಹಿವಾಟಿನ ಮಿತಿ ವಿಧಿಸುವಂತೆ ಎನ್ ಪಿಸಿಐ ನವೆಂಬರ್ ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಡಿಜಿಟಲ್ ಪಾವತಿ ಆ್ಯಪ್ ವಲಯದಲ್ಲಿ ಗೂಗಲ್ ಪೇ ಹಾಗೂ ಫೋನ್ ಪೇ ಶೇ.80ರಷ್ಟು ಮಾರುಕಟ್ಟೆ ಪಾಲು ಹೊಂದಿವೆ. ಇಲ್ಲಿಯ ತನಕ ಡಿಜಿಟಲ್ ಪಾವತಿ ಆ್ಯಪ್ ಬಳಸಿ ಎಲ್ಲ ಕಡೆ ಪಾವತಿ ಮಾಡಿರೋರಿಗೆ ಮಿತಿ ಹೆಚ್ಚಳದಿಂದ ತೊಂದರೆಯಾಗಲಿದೆ. ಡಿಜಿಟಲ್ ಪಾವತಿ ಆ್ಯಪ್ ವಹಿವಾಟುಗಳಿಗೆ ಗರಿಷ್ಠ ಮಿತಿ ವಿಧಿಸುವ ಸಂಬಂಧ ನಡೆದ ಸಭೆಯಲ್ಲಿ ಭಾರತದ ರಾಷ್ಟ್ರೀಯ ಪಾವತಿಗಳ ನಿಗಮ ಅಧಿಕಾರಿಗಳ ಜೊತೆಗೆ ಹಣಕಾಸು ಸಚಿವಾಲಯ ಹಾಗೂ ಆರ್ ಬಿಐ ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ಮಿತಿ ವಿಧಿಸುವ ಕುರಿತು ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಯುಪಿಐ…
ಮೈಸೂರಿನ ಕೆ.ಆರ್.ನಗರ ತಾಲೂಕಿನ ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಜೊತೆಯಾಗಿದ್ದಾರೆ. ರಾಮೇಗೌಡ(75), ಗೌರಮ್ಮ(70) ಮೃತ ದಂಪತಿ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ರಾಮೇಗೌಡ ಮೃತಪಟ್ಟಿದ್ದಾರೆ. ಪತಿ ಮನೆಗೆ ಬಾರದ ಕಾರಣ ಗೌರಮ್ಮ ಜಮೀನಿಗೆ ಹೋಗಿ ನೋಡಿದಾಗ ಪತಿ ಶವವಾಗಿದ್ದರು. ಇದನ್ನು ಕಂಡು ಆಕೆ ಆಘಾತದಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದ್ರೆ ರಾಮೇಗೌಡ ರ ಅಂತ್ಯಸಂಸ್ಕಾರದ ವೇಳೆ ಗೌರಮ್ಮ ಮೃತಪಟ್ಟಿದ್ದಾರೆ. ಗ್ರಾಮಸ್ಥರು ಅಕ್ಕಪಕ್ಕದಲ್ಲೇ ದಂಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಒಂಟಿಯಾಗಿ ಬರುವ ಮಹಿಳೆಯರಿಗೆ ದಿಲ್ಲಿಯ ಜಾಮಾ ಮಸೀದಿ ಆಡಳಿತ ಪ್ರವೇಶ ನಿರಾಕರಿಸಿದೆ. ಒಂಟಿಯಾಗಿ ಬರುವ ಮಹಿಳೆಯರಿಗೆ ಮಾತ್ರವೇ ನಿರ್ಬಂಧ ಅನ್ವಯವಾಗುತ್ತದೆ. ಕುಟುಂಬದೊಂದಿಗೆ ಅಥವಾ ಪತಿಯೊಂದಿಗೆ ಬರುವ ಮಹಿಳೆಯರಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಜಾಮಾ ಮಸೀದಿ ಪಿಆರ್ಒ ಸಬಿವುಲ್ಲಾ ಖಾನ್ ಸ್ಪಷ್ಟಪಡಿಸಿದ್ದಾರೆ. ಮಸೀದಿ ಆವರಣದಲ್ಲಿ ನಡೆಯುವ ಅನುಚಿತ ವರ್ತನೆಗಳಿಗೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ತಿಳಿಸಿದ್ದಾರೆ. ಮಸೀದಿಗೆ ಮಹಿಳೆಯರು ಪ್ರವೇಶಿಸದಂತೆ ನಿಷೇಧ ಹೇರಿಲ್ಲ. ಮಹಿಳೆಯರು ಒಬ್ಬಂಟಿಯಾಗಿ ಬಂದಾಗ ಅನುಚಿತವಾಗಿ ವರ್ತಿಸುವುದು, ಟಿಕ್ ಟಾಕ್ಅಥವಾ ಡಾನ್ಸ್ವಿಡಿಯೊಗಳನ್ನು ಚಿತ್ರೀಕರಿಸುವುದು ವರದಿಯಾಗುತ್ತಿವೆ. ಇವುಗಳಿಗೆ ತಡೆಯೊಡ್ಡುವುದಕ್ಕಾಗಿ ನಿಷೇಧ ಹೇರಲಾಗಿದೆ. ಕುಟುಂಬದೊಂದಿಗೆ ಬರುವವರಿಗೆ ಅಥವಾ ದಂಪತಿಗೆ ಯಾವುದೇ ನಿರ್ಬಂಧ ಇಲ್ಲ. ಧಾರ್ಮಿಕ ತಾಣವನ್ನು ಹುಡುಗರು, ಹುಡುಗಿಯರ ಭೇಟಿ ಸ್ಥಳವನ್ನಾಗಿಸುವುದು ತರವಲ್ಲ ಎಂದು ಹೇಳಿದ್ದಾರೆ. ಮಸೀದಿಯ ಈ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ದಿಲ್ಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಅಧ್ಯಕ್ಷೆ ಸ್ವಾತಿ ಮಲಿವಾಲ್ಅಸಮಾಧಾನ ವ್ಯಕ್ತಪಡಿಸಿದ್ದು, ವಿವರಣೆ ಕೇಳಿ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
30 ವರ್ಷದ ಹಿಂದೆ ಶೈತ್ಯೀಕರಿಸಲಾಗಿದ್ದ ಭ್ರೂಣದಿಂದ ಯುಎಸ್ ನ ರಾಚೆಲ್ ರಿಡ್ಜ್ವೇ ಮತ್ತು ಫಿಲಿಪ್ ರಿಡ್ಜ್ವೇ ದಂಪತಿ ಅವಳಿ ಮಕ್ಕಳನ್ನು ಪಡೆದು ಸುದ್ದಿಯಾಗಿದ್ದಾರೆ. ಅಮೇರಿಕಾದ ಒರೆಗಾನ್ ದಂಪತಿಗೆ ಜನಿಸಿದ ಮಕ್ಕಳು ಈ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಹಿಂದಿನ ದಾಖಲೆಯಲ್ಲಿ ಮೊಲ್ಲಿ ಗಿಬ್ಸನ್ 27 ವರ್ಷ ಸಂಗ್ರಹವಾಗಿದ್ದ ಭ್ರೂಣದಿಂದ 2020 ರಲ್ಲಿ ಅವಳಿ ಮಕ್ಕಳನ್ನು ಪಡೆದಿದ್ದರು. ಸದ್ಯ ಒರೆಗಾನ ದಂಪತಿಗೆ ಜನಿಸಿದ ಮಕ್ಕಳನ್ನು ವಿಶ್ವದ ಅತ್ಯಂತ ಹಳೆಯ ಮಕ್ಕಳು ಎಂದು ಕರೆಯಲಾಗುತ್ತಿದೆ. ಹೆಣ್ಣು ಮಗು ಲಿಡಿಯಾ 5 ಪೌಂಡ್, 11 ಔನ್ಸ್, (2.5 ಕೆಜಿ) ಗಂಡು ಮಗು ತಿಮೋತಿ 6 ಪೌಂಡ್, 7 ಔನ್ಸ್ (2.92 ಕೆಜಿ) ತೂಕವಿತ್ತು. ಈಗಾಗಲೇ 8, 6, 3 ಮತ್ತು 2 ವರ್ಷ ನಾಲ್ಕು ಮಕ್ಕಳನ್ನು ಹೊಂದಿರುವ ರಿಡ್ಜ್ವೇಸ್ ದಾನ ಪಡೆದ ಭ್ರೂಣಗಳನ್ನು ಬಳಸಿಕೊಂಡು ಹೆಚ್ಚಿನ ಮಕ್ಕಳನ್ನು ಪಡೆದಿದ್ದಾರೆ. ದಾನಿಗಳಿಂದ ಭ್ರೂಣಗಳನ್ನು ಏಪ್ರಿಲ್ 22, 1992 ರಂದು ಫ್ರೀಜ್ ಮಾಡಲಾಗಿತ್ತು, 2007 ರವರೆಗೆ ವೆಸ್ಟ್ ಕೋಸ್ಟ್ ಫರ್ಟಿಲಿಟಿ…
ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆತನ ಸೋದರ ತೀವ್ರ ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಿಲ್ವಾರಾ ನಗರದಲ್ಲಿ 48 ಗಂಟೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ನಡೆದ ಆದರ್ಶ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಬೈಕ್ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮುಸ್ಲಿಂ ಸಹೋದರರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಹಲವೆಡೆ ಜನರು ಗುಂಪು ಕಟ್ಟಿಕೊಂಡು ಆಕ್ರೋಶ ಹೊರಹಾಕಲಾರಂಭಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಿಲ್ವಾರಾ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹವಾ ಸಿಂಗ್ ಘುಮಾರಿಯಾ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಆಸ್ಪತ್ರೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಅವರ ಸಹೋದರನನ್ನು ಚಿಕಿತ್ಸೆಗಾಗಿ ಉದಯಪುರಕ್ಕೆ ಕಳುಹಿಸಲಾಗಿದೆ. ಮಹಾತ್ಮಾ ಗಾಂಧಿ ಕ್ರಾಸಿಂಗ್, ಬದ್ಲಾ ಚೌರಾಹಾ, ಭೀಮಗಂಜ್, ಸಿಟಿ ಕೊತ್ವಾಲಿ ಸೇರಿದಂತೆ ಹಲವೆಡೆ ನಗರದಲ್ಲಿ…
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಅಭಿಯಾನ ನಡೆಸಿದೆ. 40% ಕಮಿಷನ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. ರೋಡಲ್ಲಿ ಯಮಗುಂಡಿ, ಬಿದ್ರೆ ಜೀವನ ಬಂಡಿ ಪೋಸ್ಟರ್ ಬಿಡುಗಡೆ ಮಾಡಿದ್ದು, ಪೋಸ್ಟರ್ ನಲ್ಲಿ ಸಿಎಂ ಯಮನಂತೆ ಬಿಂಬಿಸಿದೆ. ಈ ಮೂಲಕ ವಿವಿಧ ಚಿತ್ರಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಅಭಿಯಾನ ನಡೆಸಿದೆ. ಮತ್ತೊಂದು ಪೋಸ್ಟರ್ ನಲ್ಲಿ ಕಿಲಾಡಿ ಜೋಡಿ ಎಂದು ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥನಾರಾಯಣ ಅವರ ಪೋಸ್ಟರ್, ಸರ್ವರ್ ಸೋಮಣ್ಣ ಹೆಸರಲ್ಲಿ ಸಚಿವ ಸೋಮಣ್ಣ, ಚಪಲ ಚನ್ನಿಗರಾಯ ಎಂದು ರಮೇಶ್ ಜಾರಕಿಹೊಳಿ ಪೋಸ್ಟರ್, ಅಡುಗೆ ಭಟ್ಟರಂತೆ ಸಚಿವ ಬಿ.ಸಿ.ನಾಗೇಶ್ ಪೋಸ್ಟರ್ ಪ್ರಕಟಿಸಿದೆ. ಈ ಮೂಲಕ ಕಾಂಗ್ರೆಸ್ ವಿಭಿನ್ನ ರೀತಿಯ ಪೋಸ್ಟರ್ ಅಭಿಯಾನದ ಮೂಲಕ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಅಣಕವಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…