Author: admin

ಗುಬ್ಬಿ: ತಾಲ್ಲೂಕಿನ ದೊಡ್ಡ ಕಟ್ಟೀಗೆನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ ಪರಿಣಾಮ 8 ಕುರಿಗಳ ಸಾವನ್ನಪ್ಪಿದ ಘಟನೆ   ಭಾನುವಾರ ರಾತ್ರಿ  ನಡೆದಿದೆ. ಶಿವಣ್ಣ ಎಂಬವರಿಗೆ  ಸೇರಿದ ರೊಪ್ಪದಲ್ಲಿ ಇದ್ದ ಒಟ್ಟು 10 ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, 8 ಕುರಿಗಳನ್ನು ಕೊಂದು ಹಾಕಿದೆ. ಘಟನೆಯಲ್ಲಿ ಎರಡು ಕುರಿಗಳು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ. ಈ ಭಾಗದಲ್ಲಿ ಹಲವು ಬಾರಿ ಚಿರತೆ ದಾಳಿ ನಡೆದರೂ, ಅರಣ್ಯ ಇಲಾಖೆ ಕ್ರಮವಹಿಸುತ್ತಿಲ್ಲ. ಹೀಗಾಗಿ ಮತ್ತೆ ಮತ್ತೆ ಇಂತಹ ಘಟನೆ ನಡೆಯುತ್ತಿದೆ  ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ಮಂಜುನಾಥ್,  ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಮಧುಗಿರಿ: ರಾಜೀವ್ ಗಾಂಧಿ ಕ್ರೀಡಾಂಗಣದ ಹಿಂಭಾಗದ ಜಮೀನಿನಲ್ಲಿ ಸುಮಾರು 30 ಕೋತಿಗಳನ್ನು ಜಮೀನಿನ ಮಾಲಿಕ ಕುಮಾರ್ ಅವರು ಹಿಡಿದು ತೆಂಗಿನ ತೋಟದಲ್ಲಿ ಬೋನ್ ನಲ್ಲಿ ಕೂಡಿ ಹಾಕಿರುವ ಘಟನೆ ನಡೆದಿದೆ. ಬೋನಿನಲ್ಲಿ ಕೋತಿಗಳು ಹಿಂಸೆಗೆ ತಾಳಲಾರದೆ ಒಂದಕ್ಕೊಂದು ಕಿತ್ತಾಡಿಕೊಂಡು ಪರಸ್ಪರ ಗಾಯ ಮಾಡಿಕೊಂಡು  ಬೋನಿನಲ್ಲಿ ನರಳುತ್ತಿದ್ದ ದೃಶ್ಯ ಕಂಡುಬಂದಿದ್ದು, ಈ ದೃಶ್ಯವನ್ನು ಕಂಡ ವಾಲ್ಮೀಕಿ ನಗರದ ನಿವಾಸಿಯಾದ ಯುವಕರು ಜನರ ಸಹಯೋಗದಿಂದ ರಮೇಶ್ ಸಾರ್ ಇಂದು ಮುಖಂಡ ಚಂದ್ರಶೇಖರ್,  ಮಂಜುನಾಥ್ ಶಿವರಾಜ್ ಅವರಿಗೆ ತಿಳಿಸಿದ್ದು, ಅವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಕೋತಿಗಳನ್ನು ಬೋನಿನ ಮೂಲಕ ಬೇರೆ ಕಡೆಗೆ ರವಾನಿಸಿದ್ದು, ಬೋನಿನಿಂದ ಬಿಡುಗಡೆ ಮಾಡಿದ್ದಾರೆ. ಇನ್ನೂ ಜಮೀನಿನ ಮಾಲಿಕ ಕುಮಾರ್ ಕೋತಿಗಳನ್ನು ಬೋನಿನಲ್ಲಿ ಕೂಡಿ ಹಾಕಿ ಹಿಂಸಿಸುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೊರಟಗೆರೆ ತಾಲ್ಲೂಕಿನ ವೆಂಗಳಮ್ಮನಹಳ್ಳಿಯಲ್ಲಿ ರಸ್ತೆ ಬದಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಲೆರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮಿಗಳು, ಕಾಂಗ್ರೆಸ್ ಪಕ್ಷದ ವಕ್ತಾರರಾದ ಮುರಳೀಧರ ಹಾಲಪ್ಪ, ಶ್ರೀರಾಮ ಸೇವಾ ಟ್ರಸ್ಟ್ ಮುಖ್ಯಸ್ಥರು, ವಲಯ ಅರಣ್ಯಾಧಿಕಾರಿ ಸುರೇಶ್ ಹಾಜರಿದ್ದರು. ಬೀಜ ಬಿತ್ತನೆ ಕಾರ್ಯಕ್ರಮವನ್ನು ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಗೊಂದಿಹಳ್ಳಿ ಗ್ರಾಮದ ಅರಣ್ಯ ಸಮಿತಿಯ ಸಹಕಾರದಿಂದ ಹೀರೆಬೆಟ್ಟ ರಕ್ಷಿತ ಅರಣ್ಯ ಪ್ರದೇಶದಲ್ಲಿ ವಿವಿಧ ಜಾತಿಯ ಬೀಜಗಳನ್ನು ಬಿತ್ತನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಗೊಂದಿಹಳ್ಳಿ ರಂಗರಾಜ್, ಅರಣ್ಯಾಧಿಕಾರಿ ನಾಗರಾಜ್, ಗ್ರಾಮಸ್ಥರು, ಅರಣ್ಯ ಸಿಬ್ಬಂದಿ ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಮಧುಗಿರಿ: ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಮುದ್ದೇನೇರಳೆಕೆರೆ ಗ್ರಾಮದಲ್ಲಿ ಎನ್.ಗಂಗಪ್ಪ ಎಜುಕೇಶನಲ್ ಅಂಡ್ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ವತಿಯಿಂದ 2021-22 ನೇ ಶೈಕ್ಷಣೀಕ ಸಾಲಿನಲ್ಲಿ ಎಸೆಸೆಲ್ಸಿಯಲ್ಲಿ ಅತ್ಯುತ್ತಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನಿವೃತ್ತ ಅಪರ ಕೃಷಿ ನಿರ್ದೇಶಕರಾದ ಎನ್ ಗಂಗಪ್ಪ, ವಿದ್ಯಾರ್ಥಿಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡಬೇಕು. ಮಕ್ಕಳಿಗೆ ಆಸ್ತಿ ಮಾಡದೇ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಬೇಕು ಎಂದರು. ವಿದ್ಯಾರ್ಥಿಗಳ ಬೆನ್ನು ತಟ್ಟುವ ಕಾರ್ಯವನ್ನು ಸಂಘಸಂಸ್ಥೆಗಳು ಮಾಡಿದಾಗ ವಿದ್ಯಾರ್ಥಿಗಳಿಗೆ ಸಾಧನೆ ಮಾಡುವಲ್ಲಿ  ಶಕ್ತಿದಾಯಕವಾಗಿ ಬೆಳೆಯುತ್ತದೆ ಎಂದರು. ಮಾತ್ರವಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಲ್ಲೂ ಬೆಳೆಯುತ್ತಿದ್ದು, ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿ ಇರುತ್ತದೆ ಎಂದರು. ಸೊಸೈಟಿಯ ಕಾರ್ಯದರ್ಶಿ ತಿಪ್ಪೇಸ್ವಾಮಿ ಎಂ.ಕೆ.  ಮಾತನಾಡಿ, ಶಿಕ್ಷಣದ ಹಾದಿಯಲ್ಲಿ ವಿದ್ಯಾರ್ಥಿಗಳು ಮೇರು ಶಿಖರ ಮುಟ್ಟಬೇಕು. ವಿದ್ಯಾರ್ಥಿಗಳಲ್ಲಿ ಅದಮ್ಯ ಶಕ್ತಿಯಿದ್ದ ಪ್ರತಿಭೆಗಳು ಪ್ರತಿಮೆಗಳಾಗಿ ಹೊರಹೊಮ್ಮಬೇಕು ಪೋಷಕರು ಉತ್ತಮ ಪೋಷಣೆ ಕೊಟ್ಟಾಗ ವಿದ್ಯಾರ್ಥಿಗಳು ಹೆಮ್ಮರವಾಗಿ ಬೆಳೆಯುತ್ತಾರೆ ಎಂದರು. ಈ…

Read More

ತಿಪಟೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿವಾಸದ ಎದುರು ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ. ಕಾರ್ಯಕರ್ತರ ಬಂಧನಕ್ಕೆ ವಿವಿಧ ಸಂಘಟನೆಗಳು, ತಿಪಟೂರು ತಾಲ್ಲೂಕು ನಾಗರಿಕ ಬಳಗ  ಹಾಗೂ ಕಾಂಗ್ರೆಸ್  ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಬಿ.ಸಿ.ನಾಗೇಶ್ ರಾಜೀನಾಮೆಗೆ ಆಗ್ರಹಿಸಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಮಾತನಾಡಿ, ಬಿ.ಸಿ.ನಾಗೇಶ್ ವಿರುದ್ಧ ಹರಿಹಾಯ್ದಿದ್ದಾರೆ. ಶಿಕ್ಷಣ ಸಚಿವರ ವರ್ತನೆಯಿಂದ ವಿದ್ಯಾರ್ಥಿಗಳು ತೊಂದರೆಗೆ ಒಳಪಟ್ಟಿದ್ದಾರೆ. ಕುವೆಂಪು, ಬಸವಣ್ಣ, ನಾರಾಯಣಗುರು, ಅಂಬೇಡ್ಕರ್, ಭಗತ್ ಸಿಂಗ್, ಅವರ ಮೂಲ ಇತಿಹಾಸವನ್ನು ತಿರುಚಲು ಹೊರಟಿದ್ದಾರೆ. 10 ಮಂದಿ ಕಮಿಟಿಯಲ್ಲಿ 9 ಮಂದಿ ಬ್ರಾಹ್ಮಣರೇ ಕೂತು ಮನು ತತ್ವಗಳನ್ನು ತುರುಕಬೇಕೆಂದು ಹೊರಟಿದ್ದಾರೆ. ರಾಜ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ. ಇದರ ವಿರುದ್ಧ  ಪ್ರತಿಭಟನೆಗೆ ಬಂದ ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ರಾಜ್ಯದಲ್ಲಿ ಶಾಂತಿ ಕದಡುವ ಕಾರ್ಯ ಮಾಡಿದ್ದಾರೆ  ಎಂದು ಆರೋಪಿಸಿದರು. ಇಂತಹ ಮಂತ್ರಿಯನ್ನು ಬೊಮ್ಮಾಯಿ ಅವರ ಮಂತ್ರಿಮಂಡಲದಲ್ಲಿ ಮುಂದುವರಿದರೆ, ಇನ್ನಷ್ಟು ಅನಾಹುತ ಉಂಟಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಹಾಗಾಗಿ ಬಿ.ಸಿ.ನಾಗೇಶ್…

Read More

ತುರುವೇಕೆರೆ: ಸ್ವಗ್ರಾಮದ ಸರ್ಕಲ್ ನಲ್ಲಿ ಅಭಿವೃದ್ಧಿ ಕಾಮಗಾರಿ ವೀಕ್ಷಿಸುವ ವೇಳೆ ಆಯತಪ್ಪಿ ಆಯತಪ್ಪಿ ಬಾಕ್ಸ್ ಚರಂಡಿಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ  ಪತ್ರಕರ್ತ ಕೆ.ಎ.ಮಂಜುನಾಥ್ ಮಂಜುನಾಥ್ ಅವರಿಗೆ ತಾಲ್ಲೂಕಿನ ಮಾಯಸಂದ್ರ ಹೋಬಳಿ, ಸೊರವನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಚಿಕಿತ್ಸೆಗೆ ನೆರವು ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾಬೀರ್  ಹುಸೇನ್ , ಮಾಜಿ ಉಪಾಧ್ಯಕ್ಷರಾದ ಶಶಿಕಲಾ ಹನುಮೇಗೌಡ, ಸದಸ್ಯರಾದ ಮಹಾಲಕ್ಷ್ಮಮ್ಮ, ಚಾಟಿತಿಮ್ಮಯ್ಯ ಹಾಗೂ ಸುರೇಶ್  ಹಾಗೂ ಸರ್ವಸದಸ್ಯರ ಹಾಜರಿಯಲ್ಲಿ ಚರ್ಚಿಸಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಹಾಜರಿಯಲ್ಲಿ ಪತ್ರಕರ್ತ ಮಂಜುನಾಥ್ ರವರ ಮನೆಗೆ ತೆರಳಿ ಚೆಕ್ ವಿತರಿಸಲಾಯಿತು. ಇನ್ನೂ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದ ಮಾನವೀಯ ನೆರವಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವರದಿ: ಸುರೇಶ್ ಬಾಬು  ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ದಾವಣಗೆರೆ ವಿಶ್ವವಿದ್ಯಾನಿಲಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಧರ್ಮಪುರ ಕೆರೆ ಮತ್ತು ಇತರೆ ಏಳು ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಕೆರೆಗಳಿಗೆ ತುಂಬಿಸುವ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ‌ ಭಾಗವಹಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರಾಜ್ಯದ ರೈತರ ಅಭ್ಯುದಯಕ್ಕೋಸ್ಕರ ಅಪ್ಪರ್ ಭದ್ರಾ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಯಂತಹ ಎರಡು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಇದರಿಂದಾಗಿ ಮಧ್ಯ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಈ ಪ್ರದೇಶವನ್ನು ನೀರಾವರಿಗೊಳಪಡಿಸಿ, ಈ ಭಾಗದ ರೈತರ ಬದುಕು ಹಸನುಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು. ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾಗದ ರೈತರು ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವಂತೆ ಸುಮಾರು…

Read More

ಪಾವಗಡ: ಪರಿಸರ ದಿನಾಚರಣೆಯ ಪ್ರಯುಕ್ತ “ಭಾರತ ಮಾತಾ ಸೇವಾ ಟ್ರಸ್ಟ್” ವತಿಯಿಂದ ಪಾವಗಡ ತಾಲೂಕಿನ ಸಾಸಲಕುಂಟೆ, ಆರ್ಲಹಳ್ಳಿ, ಮಲ್ಲಮ್ಮನಹಳ್ಳಿ, ಬುದಿಬೆಟ್ಟ, ಕೋಟಗುಡ್ಡ, ದೆವಲಕೆರೆ, ಮತ್ತು ಪಾವಗಡ ನಗರದಲ್ಲಿ 100 ನೂರಕ್ಕೂ ಹೆಚ್ಚು  ಜಂಬುನೇರಳೆ, ಸಿಬೆಗಿಡ,  ,ದೊಡ್ಡ ಹಲಸಿನ ಹಣ್ಣಿನ ಗಿಡ, ಬೆಲದಕಾಯಿ ಗಿಡ, ಕಾಡುಬಾದಮಿಗಿಡ, ಹೆಬ್ಬೆವು, ಹುಣಸೆ ಗಿಡ, ಗಸಗಸೆಗಿಡ, ಬೇವಿನಗಿಡ, ತೆಗದಗಿಡ, ಸಿತಾಫಲ, ಸಿಲ್ವರ್ ಇನ್ನೂ ಇತರೆ  ವಿವಿಧ ರೀತಿಯ ಗಿಡಗಳನ್ನು ಮನೆಯ ಹತ್ತಿರ, ತೋಟದಲ್ಲಿ, ಹೊಲದಲ್ಲಿ ನೆಡುವುದರ ಮೂಲಕ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಟ್ರಸ್ಟಿನ ಅಧ್ಯಕ್ಷರಾದ ನಾಗೇಂದ್ರ ಪ್ರತಾಪ್ ಚಾಲನೆ ನೀಡಿ ಮಾತನಾಡಿ, ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಇದು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ದಿನವಾಗಿದೆ ಎಂದರು. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಇದು ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಭೂಮಿಯು ವಿವಿಧ…

Read More

ಕೊರಟಗೆರೆ: ಡಾಂಬರು ತುಂಬಿದ ಡ್ರಮ್ ಟ್ರಾಕ್ಟರ್ ನಿಂದ ಕೆಳಕ್ಕೆ ಉರುಳಿ ಬಿದ್ದ ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಸೇರಿದಂತೆ ಇಬ್ಬರ ಕಣ್ಣುಗಳಿಗೆ ಡಾಂಬಾರು ತಗುಲಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಕೊರಟಗೆರೆ ಇಂದ ಮಧುಗಿರಿ ಕಡೆಗೆ ಆಟೋದಲ್ಲಿ ತೆರಳುತ್ತಿದ್ದ ಪ್ರಯಾಣಿಕ ಮೇಲೆ ಟ್ರಾಕ್ಟರ್ ನಿಂದ ಡಾಂಬಾರು ಡ್ರಮ್ ಉರುಳಿ ಬಿದ್ದಿದ್ದು, ಪರಿಣಾಮವಾಗಿ ಪ್ರಯಾಣಿಕರ ಕಣ್ಣುಗಳಿಗೆಯೇ ಡಾಂಬಾರು ತಾಗಿದ್ದು, ತಕ್ಷಣವೇ ಅವರನ್ನು ಕೊರಟಗೆರೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ತಹಶೀಲ್ದಾರ್  ನಾಹಿದಾ ಜಂ ಜಂ, ಮಾಧ್ಯಮಗಳ ಜೊತೆಗೆ ಮಾತನಾಡಿ, ಸುಮಾರು 11:30ರ ವೇಳೆ ಈ ಅನಾಹುತವಾಗಿದೆ. ಕೊರಟಗೆರೆಯಿಂದ ಮಧುಗಿರಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ರೋಡಿಗೆ ಡಾಂಬಾರು ಹಾಕುತ್ತಿದ್ದ ವೇಳೆ ಒಂದು ಟಿನ್ ಉರುಳಿ ಬಿದ್ದು, ಆಟೋದಲ್ಲಿದ್ದವರ ಕಣ್ಣೊಳಗೆ ಡಾಂಬಾರು ಹೋಗಿದೆ.  ತಕ್ಷಣ ಸರ್ಕಾರಿ ಆಸ್ಪತ್ರೆಗೆ ಅವರನ್ನು ಸಾಗಿಸಲಾಗಿದೆ ಎಂದರು. ಆಟೋದಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗಳು ಇಬ್ಬರ ಕಣ್ಣೊಳಗೂ…

Read More

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ಬೈರಾಗಿ. ‘ಡಾಲಿ’ ಧನಂಜಯ್ ಹಾಗೂ ಪೃಥ್ವಿ ಅಂಬರ್ ಪ್ರಮುಖ ಭೂಮಿಕೆಯಲ್ಲಿರುವ ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡು ಶಿವರಾಜ್‌ಕುಮಾರ್ ಮತ್ತು ಶರಣ್ ಕಂಠಸಿರಿಯಲ್ಲಿ ಮೂಡಿಬಂದಿರೋದು ವಿಶೇಷ. ‘ವಜ್ರಕಾಯ’ ಬಳಿಕ ಶಿವಣ್ಣನ ಸಿನಿಮಾಕ್ಕೆ ಶರಣ್ ದನಿಗೂಡಿಸಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯವಿರುವ ‘ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ…’ ಎಂಬ ಹಾಡು ಸಿಂಗಲ್ ಶಾಟ್’ನಲ್ಲಿ ಶೂಟ್ ಮಾಡಿರುವುದು ಮತ್ತೊಂದು ವಿಶೇಷ. ರಿದಮ್ ಆಫ್ ಶಿವಪ್ಪ’ ಕಾನ್ಸೆಪ್ಟ್‌’ನಡಿ ಮೂಡಿಬಂದಿರುವ ಈ ಹಾಡಿಗೆ ಇಡೀ ‘ಬೈರಾಗಿ’ ತಂಡ ಹೆಜ್ಜೆ ಹಾಕಿದ್ದು, ದೇವನಹಳ್ಳಿ ಬಳಿಯಿರುವ ನೂತನ ಮಾಲ್’ನಲ್ಲಿ ಚಿತ್ರೀಕರಣ ನಡೆಸಲಾಗಿದೆ.ಮುರಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ‘ನಖರನಖ’ ಹಾಡಿಗೆ ಆ್ಯಂಥೋನಿ ದಾಸ್ ದನಿಗೂಡಿಸಿದ್ದರು. ಇದೀಗ ‘ಸಂಡೆ-ಮಂಡೆ’ ಹಾಡು ಶಿವಣ್ಣ-ಶರಣ್ ದನಿಯಲ್ಲಿ ಮೂಡಿಬಂದಿದ್ದು ಜೆ.ಪಿ ಮ್ಯೂಸಿಕ್ ಯೂಟ್ಯೂಬ್ ಚಾನಲ್’ನಲ್ಲಿ ರಿಲೀಸ್ ಆಗಿದೆ. ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಹಿಟ್ಸ್…

Read More