Subscribe to Updates
Get the latest creative news from FooBar about art, design and business.
- ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನೀರಿನ ಸಮಸ್ಯೆ: ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ
- ರಾಗಿ ಖರೀದಿ : ಮಾರ್ಗಸೂಚಿ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ
- ಮೋದಿ ಅವರು ನನ್ನ ತಬ್ಬಿ ಡಬಲ್ ಕಂಗ್ರಾಜುಲೆಷನ್ ಅಂದರು: ಸಚಿವ ವಿ.ಸೋಮಣ್ಣ
- ಬೆಸ್ಕಾಂ ಇಂದು ವಿವಿಧ ಉಪ ವಿಭಾಗಗಳಲ್ಲಿ ಗ್ರಾಹಕರ ಸಂವಾದ ಸಭೆ
- ಧರ್ಮಸ್ಥಳ ಸಂಸ್ಥೆಯಿಂದ ಶಿರಡಿ ಸಾಯಿಬಾಬಾ ಅನಾಥಾಶ್ರಮ ಕಟ್ಟಡ ಕಾಮಗಾರಿಗೆ 2 ಲಕ್ಷ ರೂ. ದೇಣಿಗೆ
- ಹೆಣ್ಣಿನ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ: ಮಲ್ಲಿಕಾ ಬಸವರಾಜು
- ಬೀದರ್: ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಹೋಳಿ ಹಬ್ಬದ ಸಂಭ್ರಮ
- ನೌಬಾದ್ ಪಿಎಚ್ ಸಿಯಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿ: ಸೂರ್ಯಕಾಂತ ಸಾಧುರೆ ಆಗ್ರಹ
Author: admin
ಚಿತ್ರದುರ್ಗ: ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ನಡೆದಿದೆ. ಈರುಳ್ಳಿ ಲಾರಿ ಪಂಚರ್ ಆಗಿದ್ದ ಕಾರಣ, ರಸ್ತೆ ಬದಿ ಲಾರಿ ನಿಲ್ಲಿಸಿ ಪಂಕ್ಚರ್ ಹಾಕುತ್ತಿದ್ದ ವೇಳೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಅಪಘಾತದಲ್ಲಿ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಇವ ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಗುಬ್ಬಿ: ಜಿಲ್ಲೆಯಲ್ಲಿ ಯಾವ ಪುಣ್ಯಾತ್ಮ ಜಾತಿ ವಿಷ ಬೀಜ ಬಿತ್ತಿದ್ದಾರೋ ಅವರಿಗೆ ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಹೆರೂರಿನಲ್ಲಿ ಪಕ್ಷದ ಅಭ್ಯರ್ಥಿ ಆರ್.ಅನಿಲ್ ಕುಮಾರ್ ಪರ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜವನ್ನು ಒಡೆದು, ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇಂತಹ ಅನ್ಯಾಯ ನೋಡಿಕೊಂಡು ಸುಮ್ಮನಿರುವುದಿಲ್ಲ, ಅಂತಹವರ ವಿರುದ್ಧ ಜೀವ ಇರುವವರೆಗೂ ಹೋರಾಡುತ್ತೇನೆ ಎಂದರು. ಒಕ್ಕಲಿಗ ಸಮುದಾಯದ ಗಂಗಟಕಾರ, ಕುಂಚಿಟಿಗ, ಮೊರಸು ಒಕ್ಕಲಿಗರೆಲ್ಲಾ ಒಂದೇ. ಆದರೆ ಕೆಲವರು ನಮ್ಮ ಸಮುದಾಯದ ಒಗ್ಗಟ್ಟು ಮುರಿದು, ನಮ್ಮ ಶಕ್ತಿ ನಾಶ ಮಾಡಲು ಹೊರಟಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರ ಸಮುದಾಯದವರನ್ನೇ ಅಭ್ಯರ್ಥಿ ಮಾಡಿದ್ದೇನೆ. ನನ್ನ ಸೋಲಿನ ನೋವು ಮರೆಯಬೇಕಾದರೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಕೇವಲ ಒಕ್ಕಲಿಗ ಸಮುದಾಯದವರಲ್ಲ ನಾನು ಈ ದೇಶದ ಎಲ್ಲಾ ಸಮುದಾಯ ನಾಯಕನಾಗಿ ರಾಜಕೀಯ ಜೀವನದಲ್ಲಿ ಮಹತ್ವದ ಕೆಲಸವನ್ನು ಮಾಡಿದ್ದೇನೆ. ದೇವೇಗೌಡರ ಶಕ್ತಿ ಏನು…
ತಿಪಟೂರು: ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಕ್ಷೇತ್ರ ದಸರಿಘಟ್ಟದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರು ಮತ್ತು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರ ತೆಪ್ಪೋತ್ಸವ ಕಾರ್ಯಕ್ರಮ ಶ್ರೀಕ್ಷೇತ್ರ ದಸರಿಘಟ್ಟಕೆರೆಯಲ್ಲಿ ಇಂದು ನೆರವೇರಿತು ಈ ಕಾರ್ಯಕ್ರಮದಲ್ಲಿ ತಿಪಟೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು ನಮ್ಮ ನಾಯಕರಾದ ಕೆ.ಷಡಕ್ಷರಿ ಅವರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಂಬಾ ಆಳವಾಗಿ ಯೋಚಿಸಿದಾಗ ಯಾರೂ ಸಂಪೂರ್ಣ ಸಸ್ಯಾಹಾರಿಗಳಾಗಿರಲು ಅಥವಾ ಸಂಪೂರ್ಣ ಮಾಂಸಾಹಾರಿಗಳಾಗಿರಲು ಸಾಧ್ಯವಿಲ್ಲ ಎನ್ನಲಾಗುತ್ತದೆ. ಅಷ್ಟೊಂದು ಆಳಕ್ಕೆ ಈ ಲೇಖನದಲ್ಲಿ ಹೋಗುತ್ತಿಲ್ಲ. ಕೇವಲ ದಿನನಿತ್ಯದ ಆಹಾರ ಕ್ರಮಗಳು ಮತ್ತು ಜನರ ಸಾಮಾನ್ಯ ಅಭಿಪ್ರಾಯ ಆಧರಿಸಿ ಸಸ್ಯಹಾರ ಮತ್ತು ಮಾಂಸಾಹಾರದ ಬಗ್ಗೆ ಒಂದು ಸಣ್ಣ ವಿಶ್ಲೇಷಣೆ. ಸಾಮಾನ್ಯವಾಗಿ ಸಸ್ಯಾಹಾರಿ ಗಳಿಗೆ ಮಾಂಸಾಹಾರಿಗಳ ಬಗ್ಗೆ ಒಂದು ಅಭಿಪ್ರಾಯವಿದೆ. ಮಾಂಸಾಹಾರಿಗಳಿಗೆ ಅತಿಹೆಚ್ಚು ವೈವಿಧ್ಯಮಯ ಅಡುಗೆಗಳಿವೆ, ಅವರು ಎಲ್ಲಿ ಹೋದರು, ಯಾವುದೇ ಪ್ರದೇಶಕ್ಕೆ ಹೋದರೂ ಹೇಗೋ ಊಟದ ಸಮಸ್ಯೆಯಾಗುವುದಿಲ್ಲ, ಸಸ್ಯಹಾರಿಗಳಿಗೆ ತುಂಬಾ ಕಷ್ಟ. ಏನೋ ಹಣ್ಣು ಹಂಪಲು ತಿಂದು ಸಮಾಧಾನ ಮಾಡಿಕೊಳ್ಳಬೇಕು ಎಂದು ಗೊಣಗುತ್ತಿರುತ್ತಾರೆ. ಇದು ನಿಜವೇ ???? ಕೂಲಂಕಷವಾಗಿ ಪರಿಶೀಲಿಸಿ ನೋಡಿದಾಗ ವ್ಯಾಪಾರ ವ್ಯವಹಾರದ ಹೋಟೆಲುಗಳ ದೃಷ್ಟಿಯಿಂದ ಸ್ವಲ್ಪ ಮಾತ್ರ ನಿಜವೆನಿಸುತ್ತದೆ. ಆದರೆ ಸಂಪೂರ್ಣ ಸತ್ಯವಲ್ಲ. ಏಕೆಂದರೆ…… ಭಾರತದ ಮಟ್ಟಿಗೆ, ಸಾಮಾನ್ಯವಾಗಿ ಕೇವಲ ಕುರಿ ( ಮೇಕೆ ) ಕೋಳಿ ಮತ್ತು ಮೀನು ಎಂಬ ಮೂರು ಮಾತ್ರವೇ ಅತಿಹೆಚ್ಚು ಉಪಯೋಗಿಸಲ್ಪಡುವ ಮಾಂಸಾಹಾರ. ಮೊಟ್ಟೆ ಅರೆ ಮಾಂಸಾಹಾರ.…
ತಿಪಟೂರು: ತಾಲೂಕಿನ ಮಸವನಘಟ್ಟ ಸಮೀಪ ಬರುವ ಕಲ್ಲಹಳ್ಳಿ ಗ್ರಾಮದ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಜರಗಿತು. ಮಹೋತ್ಸವದಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಾಂತಕುಮಾರ್ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು. ದೇವರ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು ಕಲ್ಪತರು ನಾಡು ತಾಲೂಕಿನ ವಿಧಾನಸಭಾ ಕ್ಷೇತ್ರದ ಜನತೆಗೆ ನನ್ನ ಮೇಲೆ ಇಟ್ಟಿರುವ ಅಭಿಮಾನ, ಪ್ರೀತಿಗೆ ನಾನೆಂದು ಚಿರಋಣಿಯಾಗಿರುತ್ತೇನೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಗೊರಗೊಂಡನಹಳ್ಳಿ ಸುದರ್ಶನ್ ಸೇರಿದಂತೆ ಊರಿನ ಗ್ರಾಮಸ್ಥರು ಮುಖಂಡರು ಭಾಗಿಯಾಗಿದ್ದರು ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುರುವೇಕೆರೆ: ಎಡೆಯೂರು ಶ್ರೀ ಕ್ಷೇತ್ರದಲ್ಲಿ ಶುಕ್ರವಾರ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ ಕಾಲ್ನಡಿಗೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳಿಗೆ ತುರುವೇಕೆರೆ ಪಟ್ಟಣದ ಹೊರವಲಯದಲ್ಲಿರುವ ಮೆಟ್ರೋ ಪಾಲಿಟನ್ ಕ್ಲಬ್ ವತಿಯಿಂದ ನೀರು ಮತ್ತು ಹಾಳೆ ಹಣ್ಣು ವಿತರಿಸಲಾಯಿತು. 46 ನೇ ವರ್ಷದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಗದಗ, ನವಲಗುಂದ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತೀ ವರ್ಷ ಭಕ್ತರು ಕಾಲ್ನಡಿಗೆಯಲ್ಲಿ ಆಗಮಿಸುತ್ತಿರುತ್ತಾರೆ. ಹೀಗಾಗಿ ದಣಿದು ಬರುವ ಭಕ್ತಾದಿಗಳಿಗಾಗಿ ಮೆಟ್ರೋ ಪಾಲಿಟನ್ ಕ್ಲಬ್ ಈ ವ್ಯವಸ್ಥೆ ಮಾಡಿಸಿತ್ತು. ಇನ್ನೂ ಮೆಟ್ರೋ ಪಾಲಿಟನ್ ಕ್ಲಬ್ ನ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿಮ್ಮ ಸೇವೆ ಇದೇ ರೀತಿಯಾಗಿ ಮುಂದುವರಿಯಲಿ ಎಂದು ಶುಭಹಾರೈಸಿದ್ದಾರೆ. ವರದಿ: ಸುರೇಶ್ ಬಾಬು.ಎಂ., ತುರುವೇಕೆರೆ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ವಿಧಾನಸಭಾ ಕ್ಷೇತ್ರದ ಕುರುಬರಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿಯವರ ಕಾರ್ತಿಕ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ.ಷಡಕ್ಷರಿ ಅವರು ಭಾಗವಹಿಸಿದರು. ಈ ಸಂದರ್ಭ ನಗರ ಸಭಾ ಸದಸ್ಯರಾದ ಯೋಗೀಶ್ ಅವರು ಕೂಡ ಜೊತೆಗಿದ್ದರು. ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ನವದೆಹಲಿ: ರಾಜ್ಯದಲ್ಲಿ ಇಂದು ಇಬ್ಬರಿಗೆ ಒಮಿಕ್ರಾನ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಈಗ ಪತ್ತೆಯಾಗಿರುವ ಒಮಿಕ್ರಾನ್ ಅಷ್ಟೇನೂ ಅಪಾಯಕಾರಿ ಅಲ್ಲ ಎಂದು ತಿಳಿಸಿದ್ದಾರೆ. ಒಮಿಕ್ರಾನ್ ತಡೆ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇನೆ. ತಜ್ಞರು ಆತಂಕ ಪಡುವಂತಿಲ್ಲ ಎಂದಿದ್ದಾರೆ. ಹೀಗಾಗಿ ಅಗತ್ಯ ಬಿದ್ರೆ ಮಾರ್ಗಸೂಚಿ ಬದಲಾಯಿಸುತ್ತೇವೆ ಎಂದೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಒಮಿಕ್ರಾನ್ ಚಿಕಿತ್ಸೆಗೆ ಸಕಲ ರೀತಿಯಲ್ಲಿ ಸನ್ನದ್ಧರಾಗಿದ್ದೇವೆ. ಒಮಿಕ್ರಾನ್ ಅಷ್ಟೇನೂ ಅಪಾಯವಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದು, ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಈ ವೇಳೆ ಮನವಿ ಮಾಡಿಕೊಂಡಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುರುವೇಕೆರೆ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಅವರ ಪರವಾಗಿ ಇಂದು ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರು ಚುನಾವಣಾ ಪ್ರಚಾರ ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಕೇಂದ್ರ ಸಚಿವರಾದ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಸಂಸದರಾದ ಮುದ್ದಹನುಮೇಗೌಡ ,ಮಾಜಿ ಶಾಸಕರಾದ ಶಫಿ ಅಹಮದ್, ಕೆ.ಷಡಕ್ಷರಿ ಭಾಗಿಗಳಾಗಿ ಕಾಂಗ್ರೆಸ್ ಅಭ್ಯರ್ಥಿಯ ಪರ ಮತಯಾಚಿಸಿದರು. ಈ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಶಿಹುಲಿಕುಂಟೆ ಮುಖಂಡರಾದ ಚಂದ್ರಶೇಖರ್ ಗೌಡ, ಗೀತಾ ರಾಜಣ್ಣ, ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ತುರುವೇಕೆರೆ ಸ್ಥಳೀಯ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಸದಸ್ಯರು, ಮಾಜಿ ಜಿ.ಪಂ., ತಾ.ಪಂ. ಸದಸ್ಯರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೊತೆಗಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಗುಬ್ಬಿ: ತುಮಕೂರು ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ ನಿಮಿತ್ತ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಗುಬ್ಬಿ ಹೊರವಲಯದ ಹೇರೂರು ಬಳಿಯ ಶ್ರೀಬಾಲಾಜಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಆರ್.ಅನಿಲ್ ಕುಮಾರ ಅವರ ಪರವಾಗಿ ಮತಯಾಚನೆ ಮಾಡಲು ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಗಮಿಸುತ್ತಿದ್ದು, ಗುಬ್ಬಿ ತಾಲೂಕಿನ ಗ್ರಾಮ ಪಂಚಾಯತಿ ಸದಸ್ಯರು, ಪಟ್ಟಣ ಪಂಚಾಯ್ತಿ ಸದಸ್ಯರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಗುಬ್ಬಿ ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಮೂಲಕ ಬಿ.ಎಸ್.ನಾಗರಾಜು ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ವಿದ್ಯಾವಂತ ಬುದ್ದಿವಂತ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರ ಕಷ್ಟ ಸುಖ ಗಳನ್ನು ಅರಿತಿರುವ ಅನಿಲ್ ಕುಮಾರ್ ಅವರು ಕೆ.ಎ.ಎಸ್.ಅಧಿಕಾರಿಯಾಗಿ ಜನರ ಸಮಸ್ಯೆಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ಸರ್ಕಾರದ ಮಟ್ಟದಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಯಾಗಿದ್ದಾರೆ ಎಂದು ನಾಗರಾಜು ಹೇಳಿದರು. ಈ ಹಿನ್ನಲೆಯಲ್ಲಿ ಒಬ್ಬ ವಿದ್ಯಾವಂತ,…