Subscribe to Updates
Get the latest creative news from FooBar about art, design and business.
- ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
- ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
- ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
- ತುರುವೇಕೆರೆ: ಚಿರತೆ ಸಿಕ್ಕರೂ ಗ್ರಾಮಸ್ಥರಲ್ಲಿ ದೂರವಾಗದ ಆತಂಕ
Author: admin
ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ವರುಣ ಅಬ್ಬರ ತೀವ್ರಗೊಂಡಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ನಾಲ್ಕು ದಿನಗಳ ಭಾರಿ ಮಳೆಯಾಗಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಮುಂದುವರೆದಿದ್ದು, ಉತ್ತರ ಕರ್ನಾಟಕ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ನಾಲ್ಕು ದಿನ ಮಳೆ ಸುರಿಯಲಿದೆ. ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದ್ದು, ಕಾಲೇಜುಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದಿದೆ. ಅಪಾಯದ ಸ್ಥಿತಿಯಲ್ಲಿದ್ದು ಗುಡ್ಡದ ಮತ್ತೊಂದು ಭಾಗ ಕುಸಿದಿರುವ ಘಟನೆ…
ಕಾಂಗ್ರೆಸ್ ಪಕ್ಷದಲ್ಲಿ ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದ್ದರೆ ಮೂಲ ಕಾಂಗ್ರೆಸ್ಸಿಗರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಪ್ರಬಲವಾಗಿ ಬೀಸುತ್ತಿದೆ. ಇಂದು ವಾಗ್ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆಯವರು ಮತ್ತೊರ್ವರ ಸಿಎಂ ಕುರ್ಚಿಯ ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಅವರ “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ” ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ಕೆಣಕಿದೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯರವರ ಚಾಕರಿ ಮಾಡುವ ಸುಯೋಗ ಬಂದಿದೆ ಎಂದು ವ್ಯಂಗ್ಯವಾಡಿರುವ ಬಿಜೆಪಿ. ಸಿದ್ದರಾಮಯ್ಯ ಅವರ ಬಗ್ಗೆ ಇರುವ ಬೇಸರವನ್ನು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಹರಿಪ್ರಸಾದ್ ಈ ರೀತಿ ಹೊರಹಾಕಿದ್ದಾರೆ. ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಎಷ್ಟೇ ಆದರೂ ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸೆ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದೆ. ವರದಿ ಆಂಟೋನಿ ಬೇಗೂರು…
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ಹೆಚ್.ಪಿ. ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಬಂದ ವಿಚಾರಕ್ಕೆ ಸುಪ್ರೀಂ ಕೋರ್ಟ್ ಕೆಂಡಾಮಂಡಲವಾಗಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾ. ಸಂದೇಶ್ ಅವರಿಗೆ ವರ್ಗಾವಣೆಯಾಗುವ ಬೆದರಿಕೆ ಬಂದ ಬಗ್ಗೆ ಸ್ವತ: ನ್ಯಾಯಾಧೀಶರೇ ಪ್ರಸ್ತಾಪಿಸಿ, ಎಲ್ಲದಕ್ಕೂ ನಾನು ಸಿದ್ಧನಿರುವೆ, ಸಂವಿಧಾನಕ್ಕೆ ಬದ್ಧನಾಗಿ ಕರ್ತವ್ಯ ನಿರ್ವಹಿಸುವೆ ಎಂದು ಕೋರ್ಟ್ನಲ್ಲಿ ಹೇಳಿದ್ದು, ವೈರಲ್ ಆಗಿತ್ತು. ಈ ವಿಡಿಯೋಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಬಂದಾಗ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶರು ಗರಂ ಆಗಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಮಿಳುನಾಡಿನ ಅಣ್ಣಾ ಡಿಎಂಕೆಯ ನಾಯಕತ್ವಕ್ಕಾಗಿ ವಿಚಾರವಾಗಿ ಇಂದು ನಡೆದ ಬೆಳವಣಿಗೆಗಳು ಹಾದಿ-ಬೀದಿ ರಂಪಕ್ಕೆ ಸಾಕ್ಷಿಯಾಗಿದೆ. ಪಕ್ಷದ ಹಂಗಾಮಿ ಪ್ರಧಾನ ಕಾಂiiದರ್ಶಿಯಾಗಿ ಎಡಪ್ಪಾಡಿ ಪಳನಿ ಸ್ವಾಮಿ ಆಯ್ಕೆಯಾದ ಬೆನ್ನಲ್ಲೇ ಈ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಪಳನಿ ಸ್ವಾಮಿ ಬಣದ ಆಕ್ರೋಶ ಭುಗಿಲೆದ್ದಿದೆ. ಪನ್ನೀರ್ ಸೆಲ್ವಂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸುವ ನಿuಯವನ್ನು ಸಾಮಾನ್ಯ ಸಭೆಯಲ್ಲಿ ಕೈಗೊಳ್ಳಲಾಗಿದೆ. ಚೆನ್ನೈನಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಮಾಜಿ ಸಚಿವ ಆರ್.ಬಿ. ಉದಯ್ಕುಮಾರ್ ಹಂಗಾಮಿ ಅಧ್ಯಕ್ಷರಾಗಿ ಎಡಪ್ಪಾಡಿ ಪಳನಿ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು. ಈ ಮೂಲಕ ಕಾನೂನು ಹೋರಾಟದಲ್ಲಿ ಪಳನಿ ಸ್ವಾಮಿ ಮೇಲುಗೈ ಸಾಧಿಸಿದ್ದು, ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನರಾದ ಐದೂವರೆ ವರ್ಷದ ಬಳಿಕ ಪಳನಿ ಸ್ವಾಮಿ ಅವರು ಅಣ್ಣಾ ಡಿಎಂಕೆ ಪಕ್ಷವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಣ್ಣಾ ಡಿಎಂಕೆ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಪನ್ನಿರ್ ಸೆಲ್ವಂ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್…
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಕಳೆದ ವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಆದಾಯಕ್ಕಿಂತ ಎರಡು ಸಾವಿರ ಪಟ್ಟು ಜಾಸ್ತಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ೮೭ ಕೋಟಿ ಹೆಚ್ಚುವರಿ ಆಸ್ತಿಯ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಎಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದಾಳಿ ನಡೆದ ಮಾರನೇ ದಿನವೇ ಕಚೇರಿಗೆ ಬಂದು ದಾಖಲೆ ಒದಗಿಸುವಂತೆ ಎಸಿಬಿ ಅಧಿಕಾರಿಗಳು ತಿಳಿಸಿದ್ದು, ಬಕ್ರೀದ್ ಕಾರಣ ನೀಡಿ ಜಮೀರ್ ಕಾಲಾವಕಾಶ ಪಡೆದಿದ್ದರು. ಸದ್ಯ ಬಕ್ರೀದ್ ಮುಗಿದ ಕಾರಣ ಜಮೀರ್ ದಾಖಲೆ ಸಮೇತ ಎಸಿಬಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ. ಈ ನಡುವೆ ಆದಾಯಕ್ಕಿಂತ ಶೇ.೨೦೩೧ ಪಟ್ಟು ಹೆಚ್ಚು ಅಕ್ರಮ ಆಸ್ತಿಯನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಸಂಪಾದಿಸಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿತ್ತು. ಇಡಿ ವರದಿ ಆಧರಿಸಿ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ…
ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಬಂಧಿಸಲಾಗಿದೆ. ರಾಜ್ಯ, ಹೊರ ರಾಜ್ಯ ಮತ್ತು ವಿದೇಶದ ಎಂಟು ಮಂದಿ ಯುವತಿಯರನ್ನು ರಕ್ಷಿಸಲಾಗಿದೆ. ಸಲೂನ್ ಸೆಂಟರ್ ತೆರೆದು ಯುವತಿಯರನ್ನು ಅಕ್ರಮವಾಗಿ ಇರಿಸಿಕೊಂಡು ಗಿರಾಕಿಗಳನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲೂ ತಂತ್ರಜ್ಞಾನ ಆಧರಿತ ಶಿಕ್ಷಣವನ್ನು ನೀಡಲಾಗಿದ್ದು ಕಲಿಕೆಗೆ ಪೂರಕವಾಗಿ ತಾಂತ್ರಿಕತೆ ಹಾಗೂ ತರಗತಿ ವಾರ ವಿಷಯವನ್ನು ವಿಂಗಡಿಸಿ ಬೋಧಿಸಲಾಗುತ್ತಿದೆ. ಈ ಶಿಕ್ಷಣ ಕ್ರಮ ದೇಶದಲ್ಲಿ ಮಾದರಿಯಾಗಿ ಇದ್ದು ಇದನ್ನು ಬೇರೆ ರಾಜ್ಯಗಳು ಅಳವಡಿಸಿಕೊಳ್ಳುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎಸ್.ಸಿ. ಅಶ್ವತ್ಥ್ ನಾರಾಯಣ ತಿಳಿಸಿದರು ತಾಲೂಕು ರಂಗಾಪುರ ಬಳಿ ತುಮಕೂರು ವಿಶ್ವವಿದ್ಯಾನಿಲಯದಿಂದ ತಿಪಟೂರು ಸ್ನಾತಕೋತ್ತರ ಕೇಂದ್ರ ಕಲ್ಪ ಸಿರಿ ನೂತನ ಕ್ಯಾಂಪಸ್ ಗೆ ಭೂಮಿ ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಕೆರಗೋಡಿ ರಂಗಾಪುರ ಸುಕ್ಷೇತ್ರ ಅಧ್ಯಕ್ಷರು ಆದ ಶ್ರೀ ಗುರುಪರಾಗದೇಶಿ ಸ್ವಾಮೀಜಿ ಮಾತನಾಡಿ, ಯುವ ಜನತೆ ದೇಶದ ಸಂಸ್ಕೃತಿ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಸುಸಂಸ್ಕೃತ ಬದುಕು ಕಟ್ಟಿಕೊಳ್ಳಬೇಕು, ತಂದೆ ತಾಯಿಗಳು ತಮ್ಮೆಲ್ಲ ಕಷ್ಟಗಳನ್ನು ಬದಿಗಿಟ್ಟು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಾರೆ ಎಂದರು. ಈ ಕಾರ್ಯಕ್ರಮದಲ್ಲಿ ತುಮಕೂರಿನ ವಿವಿ ಕುಲಪತಿ ಪ್ರೊಫೆಸರ್ ಕೇಶವ ಅಧ್ಯಕ್ಷತೆ ವಹಿಸಿದ್ದರು. ಪ್ರೊಫೆಸರ್ ಕೆ.…
ತುರುವೇಕೆರೆ: ಪಟ್ಟಣದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ರವರ ಕಚೇರಿಯ ಆವರಣದಲ್ಲಿ ಮಹಿಳಾ ಕಾರ್ಯಕರ್ತರಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾಯಸಂದ್ರ ಗ್ರಾಮದ ರಾಜ್ಯ ರೈತ ಸಂಘಟನೆಯ ಚಂದ್ರಶೇಖರ್ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್ ಮಟ್ಟದಲ್ಲೂ ಮಹಿಳೆಯರು ಸಂಘಟಿತರಾಗಬೇಕು, ಬೇರೆ ಪಕ್ಷಗಳು ನೀಡುವ ಸುಳ್ಳು ಆಶ್ವಾಸನೆ ಆಮಿಷಗಳಿಗೆ ಒಳಗಾಗದೆ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಮೆಲ್ ಕಾಂತರಾಜು, ಈ ಕಾರ್ಯಕ್ರಮಕ್ಕೆ ಸೇರಿರುವ ಜನಸಂಖ್ಯೆಯನ್ನು ನೋಡಿದರೆ, 2023ರ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆದ್ದೇ ಗೆಲ್ಲಿಸುತ್ತೀರಿ ಎಂಬ ನಂಬಿಕೆ ಇದೆ, ತುರುವೇಕೆರೆ ತಾಲೂಕಿನಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾ ನಾಯಕಿ ಎಂಬ ಐತಿಹಾಸಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಪುರುಷ ಕಾರ್ಯಕರ್ತರು ಇರುವುದಿಲ್ಲ ಕಾರ್ಯಕ್ರಮವನ್ನು ಮಹಿಳೆಯರೇ ನಡೆಸಬೇಕಾಗುತ್ತದೆ. ಇದರಿಂದ ರಾಜ್ಯಕ್ಕೆ ಮಹಿಳೆಯರಿಗಾಗಿ…
ಸಮಾಜಕ್ಕೆ ಪಿಡುಗಾಗಿರುವ ಮದ್ಯಪಾನವನ್ನು ಬಿಡಿಸುವ ಸಲುವಾಗಿ 1,549 ಮದ್ಯವರ್ಜನಾ ಶಿಬಿರಗಳನ್ನು ನಡೆಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ‘ನ ವತಿಯಿಂದ ಇಂದು ಮದ್ಯಾವರ್ಜನಾ ಶಿಬಿರದ ಪೂರ್ವಭಾವಿ ಸಭೆಯನ್ನು ರಾಜೀಮತಿ ಭವನವನ್ನು ನಡೆಸಲಾಯಿತು. ಸಭೆಯನ್ನು ಉದ್ಘಾಟಿಸಿದ ಚೌದ್ರಿ ಟಿ.ರಂಗಪ್ಪ ಮತ್ತು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮಂಗಳ ಗೌರಮ್ಮ’ನವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭೆಯಲ್ಲಿ ಮದ್ಯಾವರ್ಜನಾ ಶಿಬಿರದ ತಾಲ್ಲೂಕು ಯೋಜನಾಧಿಕಾರಿಯಾದ ಗಣೇಶ್ ಮಾತನಾಡಿ ಶಿಬಿರದ ರೂಪು ರೇಷೆಗಳನ್ನು ವಿವರಿಸಿದರು. ನಂತರ ಸಭೆಯಲ್ಲಿ ಶಿಬಿರದ ಉಸ್ತುವಾರಿ ಮಂಡಳಿಯನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ತಾಲ್ಲೂಕು ಯೋಜನಾಧಿಕಾರಿ ಅನಿತಾ ಶೆಟ್ಟಿ , ಸುತ್ತಮುತ್ತಲಿನ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಸಾರ್ವಜನಿಕರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್’ನಾ ಸಿಬ್ಬಂದಿ ಭಾಗವಹಿಸಿದ್ದರು. ವರದಿ : ವೆಂಕಟೇಶ ಜೆ.ಎಸ್. ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಸರಗೂರು ಮತ್ತು ನಂಜನಗೂಡು ತಾಲ್ಲೂಕಿನ ಜೀವನದಿ ನುಗು ಜಲಾಶಯ ಭರ್ತಿ ಯಾಗಿದ್ದು, ಜಲಾಶಯದಿಂದ ನೀರನ್ನು ಹೊರ ಬಿಡಲಾಗಿದೆ. ಕಳೆದ ಒಂದು ವಾರದಿಂದ ಸತತವಾಗಿ ಕೇರಳದ ವಯನಾಡು ಜಿಲ್ಲೆ ಹಾಗೂ ಗುಂಡ್ಲುಪೇಟೆ ತಾಲ್ಲೂಕು ಮತ್ತು ತಾಲ್ಲೂಕಿನ ಗಡಿಭಾಗದ ಮಲಬಾರ್ ಅರಣ್ಯ ಪ್ರದೇಶದಲ್ಲಿ ಅಧಿಕ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ 3420 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಈ ವರ್ಷ ಅವಧಿಗಿಂತ ಬೇಗ ಜಲಾಶಯ ಭರ್ತಿಯಾಗಿದೆ. ಜಲಾಶಯದ ನೀರಿನ ಸರಾಸರಿ ಮಟ್ಟ 110 ಅಡಿ ಇದ್ದು, ಪ್ರಸ್ತುತ 108.5 ಅಡಿ ಇದ್ದು ಜಲಾಶಯದ ಭದ್ರತಾ ದೃಷ್ಟಿಯಿಂದ 1.5 ಅಡಿ ಬಾಕಿ ಉಳಿಸಿಕೊಂಡು ಜಲಾಶಯಕ್ಕೆ ಬಂದಷ್ಟು ನೀರನ್ನು ನದಿಗೆ ಬಿಡಲಾಗಿದೆ. ಶನಿವಾರ ಸಂಜೆಗೆ 3,420 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿಗೆ 3,390 ಕ್ಯೂಸೆಕ್ ನೀರನ್ನು ಜಲಾಶಯದ ಕ್ರಸ್ಟ್ ಗೇಟ್ ಮೂಲಕ 500 ಕ್ಯೂಸೆಕ್ ಹಾಗೂ 300 ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನಾ ಘಟಕದಿಂದ ನದಿಗೆ ಬಿಡಲಾಗಿದೆ. ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ತಡವಾಗಿ ಮಳೆ…