Author: admin

ತುಮಕೂರು: ಶ್ರೀ ಗುರು ಸಿದ್ದರಾಮೇಶ್ವರ ಜಯಂತಿ ಮಹೋತ್ಸವದ ಕಾರ್ಯಕ್ರಮದ ವೇದಿಕೆ ನಿರ್ಮಾಣ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಮಾಜಿ ಶಾಸಕರು ಸನ್ಮಾನ್ಯ ಕೆ. ಷಡಕ್ಷರಿ ಹಾಗೂ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೆದುಳಿಗೆ ತೀವ್ರ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ತಿಳಿಸಿದ್ದಾರೆ. ನಟ ಶಿವರಾಮ್ ಮೂರು ದಿನಗಳ ಹಿಂದೆ ಮನೆಯಲ್ಲಿಯೇ ಬಿದ್ದು ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಕ್ಯಾನಿಂಗ್ ವರದಿಯಲ್ಲಿ ಅವರ ಮೆದುಳಿನಲ್ಲಿ ರಕ್ತಸ್ರಾವವಾಗಿರುವುದು ತಿಳಿದುಬಂದಿದೆ. ಸರ್ಜರಿ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನಮ್ಮ ತಂದೆಗೆ ವಯಸ್ಸಾಗಿರುವುದರಿಂದ ಸರ್ಜರಿ ಮಾಡಲು ಆಗಿಲ್ಲ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಸಧ್ಯ ಐಸಿಯುನಲ್ಲಿಯೇ ಶಿವರಾಮ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಚಿಕಿತ್ಸೆಗೆ ಅಷ್ಟಾಗಿ ಸ್ಪಂದಿಸುತ್ತಿಲ್ಲ. ಅವರು ಬೇಗ ಗುಣಮುಖರಾಗಲೆಂಬುದು ನಮ್ಮ ಪ್ರಾರ್ಥನೆ ಎಂದು ರವಿಶಂಕರ್ ತಿಳಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ತುಮಕೂರು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಸಕರಾದ ರಾಜೇಶ್ ಗೌಡ ಅವರು, ಶಿರಾ ವಿಧಾನಸಭಾ ವ್ಯಾಪ್ತಿಯ ಭುವನಹಳ್ಳಿ ಹಾಗೂ ಲಕ್ಷ್ಮಿಸಾಗರ , ಮಾಗೋಡ್, ರತ್ನಸಂದ್ರ, ಹೊನ್ನಗೊಂಡನ ಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಜೊತೆಗೆ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತಯಾಚಿಸಿದರು. ಇನ್ನೂ ಸಭೆಯಲ್ಲಿ ಭುವನಹಳ್ಳಿ ಹಾಗೂ ಲಕ್ಷೀಸಾಗರ ಗ್ರಾಮ ಪಂಚಾಯಿತಿ ಸದಸ್ಯರು ಜೆಡಿಎಸ್, ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಮಾತನಾಡಿ, ಕೇಂದ್ರ ಹಾಗೂ ಬಿಜೆಪಿ ಸರ್ಕಾರದ ಆಡಳಿತ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯಾದ ಎನ್.ಲೋಕೇಶ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷರು ರಂಗಸ್ವಾಮಿ, ಕರ್ನಾಟಕ ರಾಜ್ಯ ತೆಂಗು ಮತ್ತು ನಾರು ನಿಗಮ ಮಂಡಳಿ ಅಧ್ಯಕ್ಷರಾದ ಬಿ.ಕೆ.ಮಂಜುನಾಥ್, ರೇಷ್ಮೆ ನಿಗಮ ಮಂಡಳಿ ಎಸ್.ಆರ್.ಗೌಡ,  ಶಿರಾ ಗ್ರಾಮಾಂತರ ಅಧ್ಯಕ್ಷರಾದ ರಂಗಸ್ವಾಮಿ, ಮಾಲಿ ಮರಿಯಪ್ಪ, ತರೂರು ಬಸವರಾಜ್, ಬಿಜೆಪಿ ಮುಖಂಡರಾದ ಮದ್ದೆವಳ್ಳಿ ರಾಮಕೃಷ್ಣಪ್ಪ, ಅಜ್ಜಣ್ಣ, ರಾಜಣ್ಣ, ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ…

Read More

ತುಮಕೂರು: ತಾಲೂಕಿನ ಹೋನವಳ್ಳಿ ಹೋಬಳಿಯ ಗುರುಗದಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಾಲೋನಿಯಲ್ಲಿ  ವಿದ್ಯುತ್ ಕಂಬ ವಾಲಿ ನಿಂತಿರುವ ಬಗ್ಗೆ ಇಂದು ‘ನಮ್ಮತುಮಕೂರು.ಕಾಂ’ ವರದಿ ಪ್ರಕಟಿಸಿರುವ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. “ತಿಪಟೂರು: ವಾಲಿರುವ ವಿದ್ಯುತ್ ಕಂಬವನ್ನು ಸರಿಪಡಿಸುವಂತೆ ಗ್ರಾಮಸ್ಥರಿಂದ ಒತ್ತಾಯ” ಎಂಬ ಶೀರ್ಷಿಕೆಯಲ್ಲಿ ಗ್ರಾಮದಲ್ಲಿ ವಿದ್ಯುತ್ ಕಂಬ ವಾಲಿ ನಿಂತಿದ್ದು, ಇದರಿಂದ ಗ್ರಾಮಸ್ಥರು ಹಾಗೂ ವಾಹನ ಸವಾರರಿಗೆ ಅಪಾಯವಾಗುವ ಸಾಧ್ಯತೆ ಇದೆ ಎಂದು ನಮ್ಮತುಮಕೂರು.ಕಾಂ ವರದಿ ಮಾಡಿತ್ತು. ನಮ್ಮತುಮಕೂರು ವರದಿಯ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಎರಡು ದಿನಗಳೊಳಗೆ ವಿದ್ಯುತ್ ಕಂಬವನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮತುಮಕೂರು ಮಾಧ್ಯಮಕ್ಕೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ. ವರದಿ: ಮಂಜು ಗುರುದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಹಾಸನ:  ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಿಸೆಂಬರ್ 12ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಹಣ, ಹೆಂಡದ ಆಮಿಷ ಒಡ್ಡಿ ಮತಯಾಚಿಸುವವರನ್ನು ಬೆಂಬಲಿಸದೇ,  ಒಕ್ಕಲಿಗ ಸಮುದಾಯದ ಧ್ಯೇಯ, ಗೌರವ ಹಾಗೂ ಅಭಿವೃದ್ಧಿಗೆ ಶ್ರಮಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಹಾಸನದ ಯುವ ಮುಖಂಡ ಸಚಿನ್ ಸರಗೂರು ಮನವಿ ಮಾಡಿದ್ದಾರೆ. ಕೃಷಿಯನ್ನೇ ಅವಲಂಬಿಸಿರುವ ಶ್ರಮಿಕ ವರ್ಗವಾಗಿರುವ ಒಕ್ಕಲಿಗ ಸಮಾಜವು ಇಂದು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ಒಕ್ಕಲಿಗರ ಸಂಘಕ್ಕೆ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳು ಚುನಾವಣೆಯ ಸಂದರ್ಭ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ಮಂತ್ರ ಜಪಿಸಿದರೂ, ಗೆದ್ದ ಬಳಿಕ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕೆ ಕೆಲಸ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ಸಚಿನ್ ಬೇಸರ ವ್ಯಕ್ತಪಡಿಸಿದರು. ಇನ್ನೊಂದೆಡೆಯಲ್ಲಿ ಒಕ್ಕಲಿಗರ ಸಂಘದ ಚುನಾವಣೆ ಬರುವ ಸಮಯದಲ್ಲಿ, ಹಣ, ಹೆಂಡದ ಆಮಿಷವೊಡ್ಡಿ ಮತ ಹಾಕಿಸಿಕೊಂಡು ಕೆಲವರು ಗೆಲುವು ಸಾಧಿಸುತ್ತಿದ್ದಾರೆ. ಈ ರೀತಿಯಾಗಿ ಗೆದ್ದವರು, ಗೆದ್ದ ಬಳಿಕ ತಮ್ಮ ವೈಯಕ್ತಿಕ ಅಭಿವೃದ್ಧಿ ಮಾಡಿಕೊಳ್ಳುತ್ತಾರೆಯೇ ಹೊರತು, ಸಮುದಾಯದ ಅಭಿವೃದ್ಧಿ ಇವರಿಂದ ಸಾಧ್ಯವಿಲ್ಲ. ಹಾಗಾಗಿ ಮತದಾರರು ಯಾವುದೇ ಆಮಿಷಗಳಿಗೊಳಗಾಗದೇ ಸಮುದಾಯದ…

Read More

ತಿಪಟೂರು: ತಾಲೂಕಿನ ಹೋನವಳ್ಳಿ ಹೋಬಳಿಯ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರುಗದಹಳ್ಳಿ ಕಾಲೋನಿಯಲ್ಲಿರುವ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು, ಗ್ರಾಮಸ್ಥರು, ವಾಹನ ಸವಾರರು ದಿನ ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಆತಂಕದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದೇ ಗ್ರಾಮದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್ ಮೂರ್ತಿ ಸ್ಥಾಪಿತ), ತಾಲೂಕು ಯುವ ಘಟಕ ಅಧ್ಯಕ್ಷರಾದ ಗುರುಗದಹಳ್ಳಿ ಮಂಜುನಾಥ್ ಮಾತನಾಡಿ, ದಿನನಿತ್ಯ ಇದೇ ಪ್ರದೇಶದಲ್ಲಿ ಸ್ಥಳೀಯ ಮಕ್ಕಳು ಆಟ ಆಡುತ್ತಿರುತ್ತಾರೆ. ಹೀಗಾಗಿ ಸಂಬಂಧಪಟ್ಟವರು ಏನಾದರೂ ಅನಾಹುತ ನಡೆಯುವ ಮೊದಲೇ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇನ್ನೂ ಗ್ರಾಮಸ್ಥರ ಮನವಿಯ ಬಳಿಕವೂ ಎಚ್ಚೆತ್ತುಕೊಳ್ಳದಿದ್ದರೆ, ಮುಂದೆ ಏನಾದರೂ ಅನಾಹುತ ನಡೆದರೆ ಅದರ ಹೊಣೆಯನ್ನು ಬೆಸ್ಕಾಂ ಅಧಿಕಾರಿಗಳೇ ಹೊರಬೇಕಾಗುತ್ತದೆ. ಇನ್ನಾದರೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ಕೂಡಲೇ ವಿದ್ಯುತ್ ಕಂಬವನ್ನು ಸರಿಪಡಿಸಿ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಸೊರಬ: ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಾಲ್ಲೂಕು ಬಿಜೆಪಿ ಛತ್ರದಹಳ್ಳಿ ಗ್ರಾಮದ ರೇಣುಕಾ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಜನಪರ ಆಡಳಿತ ನೀಡುತ್ತಿದ್ದು, ರಾಜ್ಯದ 25ರಲ್ಲಿ 20 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದು, ಈ ಪೈಕಿ 15 ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಪದವೀಧರ ಕ್ಷೇತ್ರದ ಸಮಸ್ಯೆ ಹಾಗೂ ಶಿಕ್ಷಕರ ಕ್ಷೇತ್ರದ ಸಮಸ್ಯೆ ಚರ್ಚಿಸಲು ಸದಸ್ಯರಿದ್ದು, ಸ್ಥಳೀಯ ಸಂಸ್ಥೆಗಳ ಸಮಸ್ಯೆಯನ್ನು ಚರ್ಚಿಸಲು ಉತ್ತಮ ಸದಸ್ಯರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪಕ್ಷದ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗಟ್ಟಿನಿಂದ ಡಿ.ಎಸ್. ಅರುಣ್ ಅವರನ್ನು ಗೆಲ್ಲಿಸಬೇಕು ಎಂದ ಕರೆ ನೀಡಿದರು. ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ಇದೇ ಸಂದರ್ಭದಲ್ಲಿ ಮಾತನಾಡಿದರು. ಎಂಎಸ್‌ ಐಎಲ್ ಅಧ್ಯಕ್ಷ…

Read More

ಸರಗೂರು: ಪ್ರತಿ ವರ್ಷದಂತೆ ಈ ಬಾರಿಯೂ ತಾಲ್ಲೂಕಿನ ಮೊದಲ ಜಾತ್ರಾ ಮಹೋತ್ಸವಾದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಯಡಿಯಾಲ ಉಪ ವಿಭಾಗದೊಳಗಿನ ಬೇಲದಕುಪ್ಪೆ ಮಹದೇಶ್ವರ ಜಾತ್ರಾ ಮಹೋತ್ಸವ ನಡೆಯಿತು. ಪ್ರತಿವರ್ಷ ಕಾರ್ತಿಕ ಮಾಸದಂದು ಮೂರುದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವ ಸೋಮವಾರದಿಂದ ಆರಂಭವಾಗಿದ್ದು, ಈ ಜಾತ್ರಾ ಮಹೋತ್ಸವಕ್ಕೆ ಸರಗೂರು ಮತ್ತು ಹೆಚ್.ಡಿ.ಕೋಟೆ ತಾಲ್ಲೂಕು ಸೇರಿದಂತೆ ಜಿಲ್ಲಾ ವ್ಯಾಪ್ತಿಯಿಂದಲೂ ಸಹ ಸಾಕಷ್ಟು ಭಕ್ತರು ಪ್ರತಿವರ್ಷ ಆಗಮಿಸುತ್ತಿದ್ದರು. ಆದರೆ ಈ ವರ್ಷ ಕೋವಿಡ್ ಹಿನ್ನೆಲೆ ಸರ್ಕಾರ ನಿಯಮದ ಪ್ರಕಾರ ಸರಳ ಜಾತ್ರೆಗೆ ಅವಕಾಶವನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಏರಲಾಗಿತ್ತು. ಉಳಿದಂತೆ ಸಾಂಪ್ರದಾಯಿಕ ವಿಧಿ ವಿಧಾನ ನಡೆಸಲು ದೇವಸ್ಥಾನ ಕಮಿಟಿ ಮತ್ತು ಅರ್ಚಕರಿಗೆ ಅವಕಾಶ ನೀಡಲಾಗಿತ್ತು. ಜಾತ್ರಾ ಮಹೋತ್ಸವದ ಬೆಳಗ್ಗೆ ಸುಮಾರು 10:30ಕ್ಕೆ ದೇವರ ಕಳಶ, ದೇವರ ವಿಗ್ರಹಮೂರ್ತಿಗಳನ್ನು ವಾದ್ಯ, ಜಾನಪದ ಕಲಾ ಪ್ರದರ್ಶನಗಳ ಮೂಲಕ ಮೆರವಣಿಗೆ ನಡೆಸಲಾಯಿತು. ಕೊವಿಡ್ ಹಿನ್ನೆಲೆಯಲ್ಲಿ ಅರಣ್ಯದೊಳಗೆ ಖಾಸಗಿ ವಾಹನಗಳು, ಪೂಜಾ…

Read More

ತಿಪಟೂರು: ದೇಹದ ಸದೃಢತೆ, ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಬೆಳಗ್ಗಿನ ಕೆಲ ಗಂಟೆಗಳಲ್ಲಿ ಬಿಡುವು ಮಾಡಿಕೊಂಡು ಕ್ರೀಡೆಯಲ್ಲಿ ತೊಡಗುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಎಂದು ನ್ಯಾಯಾಧೀಶ ಬಿ.ಶಿವಕುಮಾರ್ ಹೇಳಿದರು. ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಮಂಗಳವಾರ ವಕೀಲರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,  ನಿತ್ಯ ಒಂದಿಲ್ಲೊಂದು ಜಂಜಾಟದಲ್ಲಿ ತೊಡಗಿಕೊಂಡಿರುವ ಮನುಷ್ಯನಿಗೆ ಕೆಲಕಾಲ ದೇಹದ ಆರೋಗ್ಯಕ್ಕೂ ಆದ್ಯತೆ ನೀಡಬೇಕಿದೆ. ಕ್ರೀಡೆ ಎಂದರೆ ಸೋಲು- ಗೆಲುವು ಇದ್ದೇ ಇರುತ್ತದೆ. ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಅವರು ಇದೇ ವೇಳೆ ಸಲಹೆ ನೀಡಿದರು. ನ್ಯಾಯಾಧೀಶರಾದ ನೂರುನ್ನಿಸ್ಸಾ, ಎಸ್.ಚಂದನ್, ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ದಯಾನಂದ್, ಉಪಾಧ್ಯಕ್ಷ ಸುರಬಿಧೇನು, ಕಾರ್ಯದರ್ಶಿ ಬಿ.ಎನ್.ಅಜಯ್ ಮೊದಲಾದವರು ಈ ಸಂದರ್ಭ ಇದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ವೀರಶೈವ, ಲಿಂಗಾಯತ ಸಮಾಜ ನೀಡುವ ಕೈಗಳೇ ಹೊರತು, ಬೇಡುವ ಸಮುದಾಯವಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದ ಅರಳೇಪೇಟೆಯಲ್ಲಿ ವೀರಶೈವ ಸಮಾಜದ ವತಿಯಿಂದ ಜೀರ್ಣೋದ್ಧಾರಗೊಂಡಿರುವ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ಮಾತನಾಡಿದ ಅವರು,  ವೀರಶೈವ, ಲಿಂಗಾಯತ ಸಮಾಜ ನೀಡುವ ಕೈಗಳೇ ಹೊರತು, ಬೇಡುವ ಸಮುದಾಯವಲ್ಲ. ಸಮಾಜ ತಮ್ಮ ಶಕ್ತಿ ಮೀರಿ ದೇಣಿಗೆ ಸಂಗ್ರಹಿಸಿ ಐದು ಗರ್ಭಗುಡಿಗಳಿರುವ ದೇವಾಲಯ ಜೀರ್ಣೋದ್ಧಾರ ಮಾಡಿರುವುದೇ ಇದಕ್ಕೆ ಸಾಕ್ಷಿ  ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸೊಗಡು ಶಿವಣ್ಣ, ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ಉಪಾಧ್ಯಕ್ಷ ಚಂದ್ರಮೌಳಿ, ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ ಮೊದಲಾದವರು ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More