Subscribe to Updates
Get the latest creative news from FooBar about art, design and business.
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
Author: admin
ತುಮಕೂರು: ಸುಮಾರು ಮೂರೂವರೆ ತಿಂಗಳುಗಳಿಂದ ಶ್ರೀವಾಲ್ಮೀಕಿ ಸ್ವಾಮೀಜಿಯವರು ಎಸ್ ಟಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು, ಅವರ ಧರಣಿಯನ್ನು ಬೆಂಬಲಿಸಲು ಶನಿವಾರ ತುಮಕೂರಿನಿಂದ ನಾಯಕ ಸಮುದಾಯ ಮುಖಂಡರು ಬೆಂಗಳೂರಿಗೆ ತೆರಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕೆಂಬ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿ ಸಿಗುವವರೆಗೂ ಸ್ವಾಮೀಜಿಗಳು ಹೋರಾಟ ಮುಂದುವರಿಸಲಿದ್ದಾರೆ. ಹಾಗಾಗಿ ತುಮಕೂರಿನ ನಮ್ಮ ಸಮುದಾಯದ ಎಲ್ಲ ನಾಯಕರು ಬೆಂಗಳೂರಿಗೆ ಹೋಗ್ತಾ ಇದ್ದೀವಿ, ಸ್ವಾಮೀಜಿಗಳಿಗೆ ಬೆಂಬಲ ನೀಡುತ್ತೇವೆ ಎಂದು ಮುಖಂಡರು ಇದೇ ವೇಳೆ ತಿಳಿಸಿದರು. 7.5 ಶೇ. ಮೀಸಲಾತಿ ಸಿಗುವವರೆಗೂ ಧರಣಿ ಬಿಡುವುದಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿಗಳು ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡರೂ ನಾವು ಅವರನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದರು. ತುಮಕೂರು ನಗರ ವಾಲ್ಮೀಕಿ ಜನಾಂಗದ ಮುಖಂಡರುಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತಲಾ ರಾಜಣ್ಣನವರ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ…
ಗಾಯಕ-ರಾಪರ್ ಸಿಧು ಮೂಸೆವಾಲಾ ಹತ್ಯೆಯ ಬಳಿಕ ಜೀವ ಬೆದರಿಕೆ ಎದುರಿಸುತ್ತಿರುವ 434 ಮಂದಿಗೆ ಜೂನ್ 7 ರ ಒಳಗೆ ಭದ್ರತೆ ಮರು ನಿಯೋಜಿಸುವುದಾಗಿ ಹರಿಯಾಣ ಹೈಕೋರ್ಟ್ ಗೆ ಪಂಜಾಬ್ ರಾಜ್ಯ ಸರ್ಕಾರ ಈ ವಿಷಯ ತಿಳಿಸಿದೆ. ಕಳೆದ ವಾರ ಮೂಸೆವಾಲ ಸೇರಿದಂತೆ ಹಲವರ ಭದ್ರತೆ ಹಿಂತೆಗೆಕೊಳ್ಳಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಗಾಯಕ ಸಿಧು ಮೂಸೆವಾಲ ಹತ್ಯೆ ಮಾಡಲಾಗಿತ್ತು. ಇದರಿಂದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರದ ಭದ್ರತೆ ಹಿಂತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಮಾಜಿ ಉಪ ಮುಖ್ಯಮಂತ್ರಿ ಓಂ ಪ್ರಕಾಶ್ ಸೋನಿ ಅವರು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರ, ಔಪಚಾರಿಕ ಹೇಳಿಕೆ ನೀಡಿದೆ. ಗಾಯಕ ಮೂಸ್ ವಾಲಾ ಭದ್ರತೆ ಹಿಂತೆಗೆದುಕೊಂಡ ಒಂದು ದಿನದ ನಂತರ, ಮೇ ೨೯ ರಂದು ಮಾನ್ಸಾ ಜಿಲ್ಲೆಯ ಜವಾಹರ್ಕೆ ಹಳ್ಳಿಯಲ್ಲಿ ತನ್ನ ಸ್ನೇಹಿತನೊಂದಿಗೆ ತನ್ನ ವಾಹನದಲ್ಲಿ ಹೋಗುತ್ತಿದ್ದಾಗ ಮೂಸೆವಾಲ ಅವರ ಮೇಲೆ ಮಾರಣಾಂತಿಕವಾಗಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಮೂಸ್…
ತುಮಕೂರು: ಮಧುಗಿರಿ ಮೋದಿ ಹೆಸರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಬರೆದಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟ್ರೋಲ್ ಆಗಿವೆ. ಪತ್ರದಲ್ಲಿ ಕಂಡು ಬಂದಿರುವಂತೆ, 9 ಜನ ಬ್ರಾಹ್ಮಣ ಕವಿಗಳ ಪಾಠ ಮಕ್ಕಳಿಗೆ ಕೊಡುತ್ತಿದ್ದೀರಿ. ನಾನು ಹೋರಾಟಗಾರ, ನನ್ನ ಪಠ್ಯವನ್ನು ಸೇರಿಸಲು ರೋಹಿತ್ ಚಕ್ರತೀರ್ಥಗೆ ಸಲಹೆ ನೀಡಿ ಎಂದು ಹಿಂದೂ ಹೋರಾಟಗಾರ ಮಧುಗಿರಿ ಮೋದಿ ಹೆಸರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆಯಲಾಗಿದೆ. ಯೋಗಿ ಆದಿತ್ಯನಾಥ್ ಉತ್ತರಪ್ರದೇಶದ ಸಿಎಂ ಆಗಲೂ ನಾನು ಕಾರಣ. ದೇಶವ್ಯಾಪಿ ಹಿಂದುತ್ವ ಹರಡಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಧುಗಿರಿ ಮೋದಿ ಹೆಸರಿನ ಈ ಪತ್ರ ನೆಟ್ಟಿನಲ್ಲಿ ಭಾರೀ ವೈರಲ್ ಆಗಿದೆ. ಈ ಪತ್ರ ಮಧುಗಿರಿ ಮೋದಿಯವರೇ ಬರೆದಿರುವುದೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ತಿಪಟೂರು: ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣ ಸಚಿವ ಮನೆಯ ಮೇಲೆ ಎನ್.ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದಾಂದಲೇ ಮಾಡಿರುವ ಘಟನೆ ಖಂಡಿಸಿ ಬಿ.ಜೆಪಿ ಕಾರ್ಯಕರ್ತರು ತಿಪಟೂರು ನಗರ ಸಭಾ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಪ್ರತಿಭಟನಾಕಾರರು ಕಾಂಗ್ರೆಸ್ ಪಕ್ಷ ಹಾಗೂ ಎನ್.ಎಸ್.ಯು.ಐ. ಸಂಘಟನೆ ಬಗ್ಗೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರನ್ನ ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಕುಮಾರ್, ಸಚಿವರ ಊರಿನಲ್ಲಿ ಇಲ್ಲದಿರುವ ವೇಳೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ. ಕಾರ್ಯಕರ್ತರು ಸಚಿವರ ಮನೆಮುಂದೆ ದಾಂಧಲೆ ನಡೆಸಿ ಬೆಂಕಿಹಚ್ಚಿರುವ ಘಟನೆ ತೀವ್ರ ಖಂಡನೀಯ ಎಂದರು. ದೇಶದ ಇತಿಹಾಸವನ್ನ ಮಕ್ಕಳಿಗೆ ತಿಳಿಸುವ ವಿಚಾರದಲ್ಲಿ ಕಾಂಗ್ರೇಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಕಾಂಗ್ರೇಸ್ ಪಕ್ಷ ಗಲಾಟೆ ಗದ್ದಲ ಮಾಡುವ ತನ್ನ ಸಂಸ್ಕ್ರತಿ ಬಿಂಬಿಸಿದೆ ಯಾವುದೇ ಕಾರಣಕ್ಕೂ ನಮ್ಮ ಶಕ್ತಿಯನ್ನ ಹಗುರವಾಗಿ ಪರಿಗಣಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು ನಗರಸಭಾ ಅಧ್ಯಕ್ಷ ರಾಮ್ ಮೋಹನ್ ಮಾತನಾಡಿ, ಎನ್.ಎಸ್.ಯೂ.ಐ. ಕಾರ್ಯಕರ್ತರ ಕೃತ್ಯ ಪೂರ್ವನಿಯೋಜಿತವಾಗಿದ್ದು…
ತಿಪಟೂರು:ತಿಪಟೂರು ತೋಟಗಾರಿಕೆ ಇಲಾಖೆಯಿಂದ ರೈತರಿಗೆ ರಿಯಾಯಿತಿ ದರದಲ್ಲಿ ತೆಂಗಿನಸಸಿ ವಿತರಸಲಾಯಿತು. ತೋಟಗಾರಿಕೆ ಸಹಾಯಕ ನಿರ್ದೇಶಕ ಆಂಜನೇಯ ರೆಡ್ಡಿ ತಂಗಿನ ಸಸಿವಿತರಣೆ ಮಾಡಿದರು. ಗೊರಗೊಂಡನಹಳ್ಳಿ ತೋಟಗಾರಿಕೆ ಫಾರಂ ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರೈತರಿಗೆ ತೆಂಗಿನ ಸಸಿವಿತರಿಸಿದ ಅವರು, ತಿಪಟೂರು ತೋಟಗಾರಿಕೆ ಇಲಾಖೆಯಿಂದ ಗೊರಗೊಂಡನಹಳ್ಳಿ ತೋಟಗಾರಿಕೆ ಫಾರಂ ನಲ್ಲಿ 19ಸಾವಿರ ತೆಂಗಿನ ಸಸಿ ಬೆಳೆಸಲಾಗಿದೆ. ತಿಪಟೂರು ತಳಿಯ ಉತ್ತಮಗುಣಮಟ್ಟದ ಸಸಿಗಳನ್ನ ತೆಂಗಿನ ಸಸಿಯೊಂದಕ್ಕೆ 75 ರೂಪಾಯಿಯಂತೆ ತಾಲ್ಲೂಕಿನ ರೈತರಿಗೆ ಸಸಿ ವಿತರಣೆ ಮಾಡುತ್ತಿದ್ದೇವೆ. ರೈತರು ಪಹಣಿ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳಮನ್ನು ಇಲಾಖೆಗೆ ಸಲ್ಲಿಸಿ ಸಸಿಗಳನ್ನ ಪಡೆಯಬಹುದಾಗಿದೆ ಎಂದು ತಿಳಿಸಿದರು. ತಾಲ್ಲೂಕಿನ ರೈತರು ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತೋಟಗಾರಿಕೆ ಎಹೆಚ್ ಒ ಚೇತನ್.ಫಾರಂ ನಿರ್ವಾಹಕ ಶ್ರೀನಿವಾಸ್ ಉಪಸ್ಥಿತರಿದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕನ್ನಡದ ಹಿರಿಯ ನಟ ಉದಯ್ ಹುತ್ತಿನಗದ್ದೆ ಗುರುವಾರ ಇಹಲೋಕ ತ್ಯಜಿಸಿದ್ದಾರೆ. 1987ರಲ್ಲಿ ಡಾ.ರಾಜ್ ಕುಮಾರ್ ನಾಯಕ ನಟನಾಗಿ ಕಾಣಿಸಿಕೊಂಡಿದ್ದ ದೇವತಾ ಮನುಷ್ಯ ಸೇರಿ ಹಲವು ಚಿತ್ರದಲ್ಲಿ ಇವರು ನಟಿಸಿದ್ದರು.. ಕನ್ನಡದಲ್ಲಿ ನಟನಾಗಿ ಹಾಗೂ ಪೋಷಕ ಪಾತ್ರಗಳಿಂದ ಗಮನ ಸೆಳೆದಿದ್ದ ನಟ ಉದಯ್ ಹುತ್ತಿನಗದ್ದೆ ಗುರುವಾರ ಸಂಜೆ ನಿಧನರಾಗಿದ್ದಾರೆ. 1987ರಲ್ಲಿ ಆರಂಭ ಸಿನಿಮಾದಲ್ಲಿ ನಾಯಕ ನಟನಾಗಿ ಮಿಂಚಿದ್ದ ಇವರು, ಜಯಭೇರಿ, ಅಮೃತ ಬಿಂದು, ಕರ್ಮ, ಉಂಡುಹೋದ ಕೊಂಡಹೋದ ಸೇರಿದಂತೆ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಚಿಕ್ಕಮಗಳೂರು ಮೂಲದ ಉದಯ್ ಹುತ್ತಿನಗದ್ದೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ‘ಅಭಿನಯ ತರಂಗ’ದಲ್ಲಿ ನಟನೆಯ ತರಬೇತಿ ಪಡೆದಿದ್ದರು. ಆ ಬಳಿಕ ಚಿತ್ರರಂಗಕ್ಕೆ ಕಲಾವಿದನಾಗಿ ಪದಾರ್ಪಣೆ ಮಾಡಿದ್ದರು. ಖ್ಯಾತ ನಾಮರೊಂದಿಗೆ ತೆರೆ ಹಂಚಿಕೊಂಡಿದ್ದರೂ ಕೂಡ ಅವರು ಕೆಲ ವರ್ಷಗಳ ನಂತರ ಚಿತ್ರರಂಗದಿಂದ ದೂರ ಉಳಿದರು. ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಪರಿಣತಿ ಹೊಂದಿದ್ದ ಉದಯ್ ಅವರು ಬೆಂಗಳೂರಿನಲ್ಲಿ ಅದೇ ಉದ್ಯಮದಲ್ಲಿ ತೊಡಗಿಸಿಕೊಂಡು ಯಶಸ್ವಿಯಾದರು. ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಹೊಂದಿರುವ ಅವರು ಅದರಲ್ಲೂ…
ಪಾವಗಡ : ಕೋವಿಡ್ ನಿಂದಾಗಿ ಕುಂಠಿತಗೊಂಡಿದ್ದ ಮಕ್ಕಳ ಶೈಕ್ಷಣಿಕ ವಿದ್ಯಾಭ್ಯಾಸ ಇತ್ತೀಚಿಗೆ ಚೇತರಿಸಿಕೊಳ್ಳುತ್ತಿದ್ದು, ಶಾಲಾ ಅಭಿವೃದ್ಧಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾ ತಿನಿದ್ಯಾವನ್ನು ಹೆಲ್ಪ್ ಸೊಸೈಟಿ ನೀಡುತ್ತಿದೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ತಿಳಿಸಿದರು. ರಾಜಾವಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿ.ಎನ್. ಬೆಟ್ಟ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆಯಲ್ಲಿ ಇಂದು ಹೆಲ್ಪ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್ ಬುಕ್ ಇನ್ನಿತರ ಸಾಮಗ್ರಿಗಳನ್ನು ವಿತರಣೆ ಮಾಡುವ ಸರಳ ಕಾರ್ಯಕ್ರಮ ವನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ವೇಳೆ ಶಾಲಾ ಮುಖ್ಯ್ಯೊಪಧ್ಯಾಯರಾದ ಬಸವರಾಜ್ ಮಾತನಾಡುತ್ತ ಹೆಲ್ಪ್ ಸೊಸೈಟಿ ಸಂಸ್ಥೆ ಪ್ರತಿ ನಿತ್ಯ ಒಂದಲ್ಲ ಒಂದು ಸೇವಾ ಕಾರ್ಯಗಳನ್ನು ಮಾಡುವ ಮೂಲಕ ತಾಲ್ಲೂಕಿನ ಶೈಕ್ಷಣಿಕ ವಿದ್ಯಾಭ್ಯಾಸದ ಮಕ್ಕಳ ಬಗ್ಗೆ ಹೆಚ್ಚಿನ ಒಲವನ್ನು ತೋರಿಸುತ್ತಿದೆ. ಮಕ್ಕಳನ್ನು ಒಳ್ಳೆಯ ಪ್ರಜೆಗಳನ್ನಾಗಿ ಮಾಡುವ ಹಂಬಲ ಹೊಂದಿರುವ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ರವರನ್ನು ಮುಕ್ತ ಕಂಠದಿಂದ ಅಭಿನಂದಿಸಿ ಮತ್ತಷ್ಟು ಸೇವಾ ಕಾರ್ಯಗಳನ್ನು…
ಹೊಸ ಚುನಾವಣೆಗಳನ್ನು ಘೋಷಿಸದಿದ್ದರೆ ದೇಶದಲ್ಲಿ ಅಂತರ್ಯುದ್ಧಕ್ಕೆ ನಡೆಯಲಿದೆ ಎಂದು ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಸಿದ್ದಾರೆ. ಬುಧವಾರ ಬೋಲ್ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷರು ಆದ ಇಮ್ರಾನ್ ಖಾನ್, ಸರ್ಕಾರ ನಮ್ಮ ಪಕ್ಷದ ಪ್ರತಿಭಟನಾಕಾರರಿಗೆ ಕಿರುಕುಳ ನೀಡುತ್ತಿದೆ. ಅವರಿಗೆ ರಕ್ಷಣೆ ನೀಡುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಲಾಗಿದೆ. ನ್ಯಾಯಾಲಯ ನೀಡುವ ನಿರ್ದೇಶನವನ್ನು ಕಾಯುತ್ತಿದ್ದೇನೆ. ನಂತರ ಮುಂದಿನ ಪ್ರತಿಭಟನೆಗೆ ದಿನಾಂಕವನ್ನು ನಿಗದಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾನೂನು ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಚುನಾವಣೆಗೆ ಹೋಗಲು ನಮಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಈ ದೇಶದಲ್ಲಿ ಅಂತರ್ಯುದ್ಧ ನಡೆಯುತ್ತದೆ ಎಂದು ಎಚ್ಚರಿಸಿದರು. ಯಾವುದೇ ಕಾರಣಕ್ಕೂ ತಾವು ಸಂಸತ್ ಕಲಾಪದಲ್ಲಿ ಭಾಗವಹಿಸುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿ ನಾನು ಸಂಸತ್ನಲ್ಲಿ ಕುಳಿತುಕೊಂಡರೆ ಅವರು ನನ್ನನ್ನು ಪದಚ್ಯುತಗೊಳಿಸಿದ ಪಿತೂರಿಯನ್ನು ಒಪ್ಪಿಕೊಂಡಂತಾಗುತ್ತದೆ ಎಂದಿದ್ದಾರೆ. ಇಮ್ರಾನ್ ಖಾನ್, ತಮ್ಮನ್ನು ಪದಚ್ಯುತಗೊಳಿಸಿದ ದಿನದಿಂದಲೂ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಶೆಹಬಾಜ್ ಷರೀಫ್ ನೇತೃತ್ವದ ಸಮ್ಮಿಶ್ರ ಸರ್ಕಾರ ವಿದೇಶದ ಆಮದು…
ಆರ್ಎಸ್ಎಸ್ ಕಂಡರೆ ತಮಗೆ ಭಯವಿದೆ ಎಂದು ಒಪ್ಪಿಕೊಂಡಿರುವ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಅದಕ್ಕೆ ಸೂಕ್ತ ಸಮರ್ಥನೆ ಮೂಲಕ ಮತ್ತೆ ಸಂಘ ಪರಿವಾರದ ವಿರುದ್ಧ ಹರಿ ಹಾಯ್ದಿದ್ದಾರೆ. ಆರ್ಎಸ್ಎಸ್ ಕಂಡರೆ ನನಗೆ ಭಯ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ಎಸ್ಎಸ್ ಕಂಡರೆ ಭಯ ಇದೆ. ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು. ಆರ್ಎಸ್ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂೀಧಿಜಿಯವರ ಹತ್ಯೆಯ ನಂತರ ಆರ್ಎಸ್ಎಸ್ ಮೇಲೆ ದೇಶದ ಮೊದಲ ಗೃಹಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ. ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ…
ತುಮಕೂರು: ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಯಾರ ಬಗ್ಗೆನೂ ದೋಷ ಪಡುವುದು ಬೇಕಾಗಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಪ್ರತಿಕ್ರಿಯಿಸಿದರು. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನ ಬಳಗೆರೆ ಗ್ರಾಮದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ವಿಚಾರದಲ್ಲಿ ಯಾರ ಬಗ್ಗೆನೂ ದೋಷ ಪಡುವುದು ಬೇಕಾಗಿಲ್ಲ. ಯಾರ್ಯಾರು ಏನೇನು ಮಾತಾಡುತ್ತಿದ್ದಾರೋ ನೀವು ನೋಡ್ತಾ ಇದ್ದೀರಾ. ನನಗೆ ಸ್ವಲ್ಪ ಗಂಟಲ ಬಾಧೆ ಇದೆ. ಈ ವಿಷಯದಲ್ಲಿ ನಾನು ಯಾರ ಬಗ್ಗೆನೂ ಟೀಕೆ ಮಾಡಲ್ಲ ಎಂದರು. ಎಲ್ಲವನ್ನೂ ತಾವುಗಳೇ ಜನತೆ ಮುಂದೆ ಪ್ರತಿಯೊಂದು ನಿಮಿಷಕ್ಕೂ ಸುದ್ದಿಯನ್ನ ಮುಟ್ಟಿಸುತ್ತಿದ್ದೀರಾ. ಎಲ್ಲ ವಿಷಯವನ್ನೂ ವಿಶ್ಲೇಷಣೆ ಮಾಡೋಕೆ ಆಗೋಲ್ಲ. ತಾವ್ಯಾರೂ ಬೇಸರ ಮಾಡ್ಕೋಬೇಡಿ. ನಾವು ಎರಡನೇ ಅಭ್ಯರ್ಥಿಯಾಗಿ ಭಾರತೀಯ ಜನತಾ ಪಾರ್ಟಿಗೆ ಅವಕಾಶ ಕೊಡಬಾರದು ಅನ್ನೋದನ್ನ ಶ್ರೀಮಾನ್ ಖರ್ಗೆಯವರೇ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡ್ತಿದ್ದಾರೆ ಎಂದರು. ಯಾರನ್ನೂ ದೋಷ ಮಾಡೋಕೆ ಹೋಗಲ್ಲ. ಖರ್ಗೆ ಅವರ ವರ್ಕ್ ಪರಿಣಾಮ ಗೊತ್ತಿದೆ. ಒಂದೇ ಒಂದು…