Subscribe to Updates
Get the latest creative news from FooBar about art, design and business.
- ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
- ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
- ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
- ತುರುವೇಕೆರೆ: ಚಿರತೆ ಸಿಕ್ಕರೂ ಗ್ರಾಮಸ್ಥರಲ್ಲಿ ದೂರವಾಗದ ಆತಂಕ
Author: admin
ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸಿ ಸುರಿಯುತ್ತಿರುವುದರಿಂದ ಪ್ರವಾಹ ಉಂಟಾಗಿ ಸಾವು-ನೋವು ಸಂಭವಿಸಿ, ಮನೆ-ಬೆಳೆಗೆ ಹಾನಿಯಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ನೆರವಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚು ಮಳೆಯಾಗುತ್ತಿರುವ ೧೩ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಓಗಳ ಜತೆ ವೀಡಿಯೊ ಸಂವಾದ ನಡೆಸಿ ಪ್ರತಿ ಜಿಲ್ಲೆಯ ಮಳೆಯ ಪರಿಸ್ಥಿತಿ, ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕಾರ್ಯಗಳು ಬಗ್ಗೆ ಮಾಹಿತಿ ಪಡೆದುಕೊಂಡರು. ಮಳೆ ಹೆಚ್ಚಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರ ಸುರಕ್ಷತೆಗೆ ಕ್ರಮಕೈಗೊಂಡು ಅಗತ್ಯವಿರುವ ಕಡೆ ಪರಿಹಾರ ಶಿಬಿರಗಳನ್ನು ಆರಂಭಿಸಿ ಮಳೆಯಿಂದ ತೊಂದರೆಗೊಳಗಾಗಿರುವವರ ನೆರವಿಗೆ ಅಗತ್ಯ ಕ್ರಮಕೈಗೊಳ್ಳಿ ಎಂದು ಸೂಚಿಸಿದರು. ಮಳೆ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಪಡೆಗಳನ್ನು ನಿಯೋಜಿಸಲಾಗಿದೆ. ಜೀವಹಾನಿಯಾಗದಂತೆ ಎಚ್ಚರ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲ, ಡಿಸಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಹಣ ಇದೆ. ಹೆಚ್ಚಿನ…
ಶಾಲಾ ವಿದ್ಯಾರ್ಥಿಗಳಿಗೆ ಬಟ್ಟೆ, ಶೂ, ಸಾಕ್ಸ್ ಕೊಡುವ ಅಗತ್ಯವಿಲ್ಲ ಎಂಬ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದು, ಸರ್ಕಾರದ ಬಳಿ ಹಣ ಇಲ್ಲದಿದ್ದರೆ ಹೇಳಿ, ಕಾಂಗ್ರೆಸ್ ಪಕ್ಷ ಭಿಕ್ಷೆ ಬೇಡಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಕೊಡಲು ಸಿದ್ಧ ಎಂದಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ನಾಗೇಶ್ರವರ ಹೇಳಿಕೆ ಸರಿಯಾದುದಲ್ಲ, ಇದು ಅಗೌರವದ ಹೇಳಿಕೆ. ಇದು ಮಾನವೀಯತೆಗೆ ಮಾಡಿದ ಅವಮಾನ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಕೊಡಲು ಹಣ ಇಲ್ಲ ಎಂದರೆ ಹೇಳಿ, ವಿವಿಧ ಕಂಪನಿಗಳ ಸಿಎಸ್ಆರ್ ಫಂಡ್ನ್ನು ಬಳಕೆ ಮಾಡಿ, ಭಿಕ್ಷೆ ಎತ್ತಿ ಮಕ್ಕಳಿಗೆ ಎಲ್ಲವನ್ನೂ ಕೊಡುತ್ತೇವೆ ಎಂದು ಸಿಟ್ಟಿನಿಂದ ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ದೊಡ್ಡ ದೊಡ್ಡ ಸ್ಥಾನಕ್ಕೆ ಹೋಗಿದ್ದಾರೆ. ಪೋಷಕರು ಮಕ್ಕಳಿಗೆ ಒಳ್ಳೆ ಬಟ್ಟೆ ಕೊಟ್ಟು, ಒಳ್ಳೆ ಶಾಲೆಯಲ್ಲಿ ಓದಿಸಲು ಬಯಸುತ್ತಾರೆ. ಸರ್ಕಾರಿ ಶಾಲೆ ಮಕ್ಕಳಿಗೂ ಯಾವುದೇ ಕೊರತೆಯಾಗಬಾರದು…
ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದ ಆವರಣದಲ್ಲಿರುವ ಉದ್ಯಾನವನ ನಿರ್ವಹಣೆ ಮಾಡುವಲ್ಲಿ ಯಾರು ಗಮನ ಹರಿಸಿಲ್ಲ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರ್ಲಕ್ಷ ತೋರಿದ್ದಾರೆ. ಈ ಪ್ರವಾಸಿ ಮಂದಿರಕ್ಕೆ ಪ್ರತಿನಿತ್ಯ ಹಾಲಿ ಶಾಸಕರು ಮಾಜಿ ಶಾಸಕರು ಸುಮಾರು ಜನ ರಾಜಕೀಯ ದ ವ್ಯಕ್ತಿಗಳು ಸಮಾಜದ ಗಣ್ಯ ವ್ಯಕ್ತಿಗಳು, ಅನೇಕ ಉನ್ನತ ಅಧಿಕಾರಿಗಳು ಬಂದು ಹೋಗುತ್ತಿದ್ದಾರೆ. ಆದರೆ ಇದರ ನಿರ್ವಹಣೆ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಉದ್ಯಾನವನದ ಬಗ್ಗೆ ಕಾಳಜಿಯನ್ನು ತೋರಿಸುತ್ತಿಲ್ಲ. ಇನ್ನಾದರೂ ಇದರ ಬಗ್ಗೆ ಸಂಬಂಧಪಟ್ಟವರು ಅಧಿಕಾರಿಗಳ ಗಮನ ಸೆಳೆದು ನಿರ್ವಹಣೆ ಬಗ್ಗೆ ಕಾಳಜಿ ವಹಿಸಿ ಪ್ರವಾಸಿ ಮಂದಿರದ ಉದ್ಯಾನವನ ಸುಂದರವಾಗಿ ಕಾಣುವಂತೆ ಹಾಗೂ ಮಾದರಿ ಆಗುವಂತೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ವರದಿ: ಸುರೇಶ್ ಬಾಬು , ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮೈಸೂರು: ಸಾಹಿತಿ ದೇವನೂರು ಮಹಾದೇವ ಅವರ ಆರೆಸ್ಸೆಸ್ ಆಳ ಮತ್ತು ಅಗಲ ಎನ್ನುವ ಕಿರು ಹೊತ್ತಿಗೆಗೆ ರಾಜ್ಯಾದ್ಯಂತ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಬಿಡುಗಡೆಯಾಗಿ ನಾಲ್ಕೇ ದಿನದಲ್ಲಿ ದಾಖಲೆಯ ಪುಸ್ತಕ ಮಾರಾಟವಾಗಿದೆ. ನಾಲ್ಕು ದಿನಗಳಲ್ಲಿ 9 ಸಾವಿರಕ್ಕೂ ಅಧಿಕ ಪುಸ್ತಕಗಳು ಮಾರಾಟವಾಗಿದ್ದು, ಇನ್ನೂ ಕೂಡ ರಾಜ್ಯದಲ್ಲಿ ಪುಸ್ತಕಕ್ಕೆ ಭಾರೀ ಬೇಡಿಕೆ ಕೇಳಿ ಬಂದಿದೆ. ದೇವನೂರು ಮಹಾದೇವ ತಮ್ಮ ಪಠ್ಯ ಕೈ ಬಿಡುವಂತೆ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರು. ಅಲ್ಲದೇ ಪಠ್ಯ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸಾಮಾಜಿಕ ಜಾಲತಾಣಗಳನ್ನು ಬಳಸಿ ಜನರನ್ನು ಜಾಗೃತಗೊಳಿಸುತ್ತೇನೆ ಎಂದು ಸಿಎಂಗೆ ಬರೆದ ಪತ್ರದಲ್ಲಿಯೂ ತಿಳಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೇವನೂರರ ಪುಸ್ತಕ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿರುವುದೇ ಅಲ್ಲದೇ, ಪುಸ್ತಕದ ಪಿಡಿಎಫ್ ಪ್ರತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುರುವೇಕೆರೆ: ತಾಲೂಕಿನ ದೊಡ್ಡ ಶೆಟ್ಟಿ ಕೆರೆ ಶ್ರೀರಂಗನಾಥ ಸ್ವಾಮಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ವತಿಯಿಂದ ದೊಡ್ಡ ಶೆಟ್ಟಿ ಕೆರೆ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸಹಾಯಧನದ ಚೆಕ್ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಗ್ರಾಮಾಂತರ ಯೋಜನಾಧಿಕಾರಿಗಳಾದ ಅನಿತಾ ಶೆಟ್ಟಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮೋಹನ್ ಕುಮಾರಿ ಮತ್ತು ಕಾರ್ಯದರ್ಶಿ ಶೀಲ ರವರಿಗೆ ಒಂದು ಲಕ್ಷದ ಸಹಾಯಧನದ ಚೆಕ್ಕನ್ನು ಹಸ್ತಾಂತರಿಸಿದರು ಇನ್ನು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು ಇದರ ಮಧ್ಯೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಮಧು ಸೇವಾ ಪ್ರತಿನಿಧಿ ಗಿರೀಶ್ ಮಹಿಳಾ ಹಾಲು ಸಹಕಾರ ಸಂಘದ ನಿರ್ದೇಶಕರುಗಳು ಶ್ರೀ ಧರ್ಮಸ್ಥಳ ಸಂಸ್ಥೆಯ ವಿವಿಧ ಸಂಘಗಳ ಸದಸ್ಯರುಗಳು ಹಾಜರಿದ್ದರು ವರದಿ: ಸುರೇಶ್ ಬಾಬು ತುರುವೇಕೆರೆ…
ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚೀಲಗನಹಳ್ಳಿ ಮತ್ತು ಅಕ್ಕಿರಾಂಪುರ ಗ್ರಾಮಗಳ ಸುತ್ತಮುತ್ತಲು ಸಾಕುಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಕೊರಟಗೆರೆ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸ್ಥಳೀಯ ಸಾರ್ವಜನಿಕರು ಮತ್ತು ರೈತರು ಕೊರಟಗೆರೆ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿಗಳಿಗೆ ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯಲು ಮನವಿ ಮಾಡಿದ್ದರು.ಹಾಗೂ ಈ ಹಿಂದೆ ಹಲವು ಬಾರಿ ದಿನಪತ್ರಿಕೆಗಳಲ್ಲಿ ಮತ್ತು ದೃಶ್ಯ ಮಾಧ್ಯಮದಲ್ಲಿ ವರದಿಯನ್ನು ಸಹ ಮಾಡಲಾಗಿತ್ತು ತಕ್ಷಣವೇ ಎಚ್ಚೆತ್ತುಕೊಂಡ ಕೊರಟಗೆರೆ ಅರಣ್ಯ ಅಧಿಕಾರಿ ಸುರೇಶ್ ಚಿರತೆಯು ಓಡಾಡುವ ಸ್ಥಳವನ್ನು ಅವರ ಮಾರ್ಗದರ್ಶನದಂತೆ ಅಕ್ಕಿರಾಂಪುರ-ಚೀಲಗಾನಹಳ್ಳಿ ಗ್ರಾಮಗಳ ತೊರೆಯ ಪಕ್ಕದಲ್ಲಿ ಬೋನ್ ಇಡಲಾಗಿತ್ತು. ತಡರಾತ್ರಿ ಆಹಾರವನ್ನು ಹುಡುಕಿಕೊಂಡು ಬಂದಂತಹ ಚಿರತೆಯು ಬೋನಿನೊಳಗೆ ಬಿದ್ದಿರುತ್ತದೆ. ಕೂಡಲೇ ಮಾಹಿತಿಯನ್ನು ತಿಳಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸುರಕ್ಷಿತವಾಗಿ ಚಿರತೆಯನ್ನು ರಕ್ಷಿಸಿ, ದೂರದ ದಟ್ಟವಾದ ಅರಣ್ಯ ಪ್ರದೇಶಕ್ಕೆ ಚಿರತೆಯನ್ನು ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ…
ತೆಲುಗು ಸ್ಟಾರ್ ನಟ ನಾಗ ಚೈತನ್ಯ ಸದ್ಯ ತಮ್ಮ ಮುಂಬರುವ ʻಥ್ಯಾಂಕ್ಯೂʼ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿಯಾಗಿದ್ದಾರೆ. ಥ್ಯಾಂಕ್ಯೂ ಸಿನಿಮಾ ಜುಲೈ 22 ರಂದು ತೆರೆ ಕಾಣಲಿದೆ. ಈ ಕುರಿತಾಗಿ ನಾಗ ಚೈತನ್ಯ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಭಾವುಕ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ನಾಗ ಚೈತನ್ಯ ತಮ್ಮ ಜೀವನದ ಪ್ರಮುಖ ಇಬ್ಬರು ವ್ಯಕ್ತಿಗಳಿಗೆ ಧನ್ಯವಾದ ತಿಳಿಸಿದ್ದಾರೆ. “Thank You.. ನನ್ನ ಜೀವನದಲ್ಲಿ ನಾನು ಸದಾ ಬಳಸುವ ಪದ. ನನ್ನ ಮುಂಬರುವ ʻಥ್ಯಾಂಕ್ಯೂʼ ಚಿತ್ರಕ್ಕೆ ಸಹ ಇದು ಅನ್ವಯಿಸುತ್ತದೆ. ನನ್ನ ಜೀವನದ ಪ್ರಮುಖ ವ್ಯಕ್ತಿಗಳಿಗೆ ಈ ಪೋಸ್ಟ್ ಅರ್ಪಿಸುತ್ತಿದ್ದೇನೆ” ಎಂದು ನಾಗ ಚೈತನ್ಯ ಬರೆದುಕೊಂಡಿದ್ದಾರೆ. ಭಾವುಕವಾಗಿ ಬರೆದುಕೊಂಡಿರುವ ನಾಗ ಚೈತನ್ಯ, “ನನ್ನ ಜೀವನದ ಪ್ರಮುಖ ಈ ಪ್ರಮುಖರಿಗೆ ಧನ್ಯವಾದ ಹೇಳಿದ ಮಾತ್ರಕ್ಕೆ ಸಾಕಾಗುವುದಿಲ್ಲ. ಹುಟ್ಟಿದಾಗಿನಿಂದ ನನ್ನೊಂದಿಗೆ ಇರುವವರು. ನನ್ನ ಜೀವನದ ಪ್ರತಿ ಹಂತದಲ್ಲೂ ನನಗೆ ಬೆನ್ನುಲುಬಾಗಿ ನಿಂತ ಅಮ್ಮ.. ನನಗೆ ದಾರಿ ತೋರುತ್ತಾ, ಸ್ನೇಹಿತನಂತಿರುವ ಅಪ್ಪ.. ಇಷ್ಟು ವರ್ಷಗಳ ನಿಮ್ಮ ಪ್ರೀತಿಗೆ…
ಕೊರಟಗೆರೆ: ತುಮಕೂರು ಜಿಲ್ಲೆಯಾದ್ಯಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲ್ಲೂಕು ಘಟಕದ ಚುನಾವಣೆ ನಡೆಯುತ್ತಿದೆ. ಅದೇ ರೀತಿ ಕೊರಟಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪುರುಷೋತ್ತಮ್, ಉಪಾಧ್ಯಕ್ಷರಾಗಿ ನಾಗರಾಜ್, ಪ್ರಧಾನ ಕಾರ್ಯದರ್ಶಿ ಚಿದಂಬರಂ, ಕಾರ್ಯದರ್ಶಿ ಸತೀಶ, ಖಜಾಂಚಿ ಕೆ.ಬಿ. ಲೋಕೇಶ್, ನಿರ್ದೇಶಕರಾಗಿ ಹರೀಶ್ ಬಾಬು ಬಿ.ಹೆಚ್, ರಾಜು, ನಾಗೇಂದ್ರ, ನರಸಿಂಹಮೂರ್ತಿ, ಜಿ.ಎಲ್ ಸುರೇಶ್, ತಿಮ್ಮರಾಜು, ಚಿಕ್ಕ ಕಾಮಯ್ಯ, ಎನ್.ಪದ್ಮನಾಭ ಆಯ್ಕೆಯಾದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಪುರುಶೋತ್ತಮ್, ಪ್ರಧಾನ ಕಾರ್ಯದರ್ಶಿ ರಘುರಾಮ್, ಚಿಕ್ಕೀರಪ್ಪ, ರಂಗಧಾಮಯ್ಯ, ಸತೀಶ್, ಸಿದ್ದಲಿಂಗಸ್ವಾಮಿ, ಜಿಲ್ಲಾ ನಿರ್ದೇಶಕರಾದ ಮೂರ್ತಿ ವಿ.ಕೆ, ನಂದೀಶ್, ಕೆ.ಎಲ್.ಟಿ.ಎಸ್ ಕೃಷ್ಣಮೂರ್ತಿ, ಪರಮೇಶ್, ಸಂಘದ ಸದಸ್ಯರು ಹಾಜರಿದ್ದರು. ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ಮಾತನಾಡಿ, ಜಿಲ್ಲೆಯಲ್ಲಿಯೇ ಕೊರಟಗೆರೆ ತಾಲ್ಲೂಕು ಪತ್ರಕರ್ತರ ಸಂಘ ಅತ್ಯಂತ ಹೆಚ್ಚು ಜನಮನ್ನಣೆ ಗಳಿಸಿದೆ. ಯಾವುದೆ ಸಮಸ್ಯೆಯ ಬಗ್ಗೆ ನಿರ್ಭಯವಾಗಿ, ನಿರ್ಭೀತಿಯಿಂದ ವರದಿ ಮಾಡುತ್ತೀರಿ. ನಿಮ್ಮ ಸೇವೆ ಹೀಗೆ ಮುಂದುವರೆಯಲಿ. ಬಡವರ ಕಷ್ಟಕ್ಕೆ ಸದಾ ಸ್ಪಂದಿಸುವ ಕೆಲಸ ಮಾಡಲಿ ಎಂದರು. ವರದಿ…
ಡ್ರೈವಿಂಗ್ ಲೈಸೆನ್ಸ್ ಮಾಡಿಸಿಕೊಳ್ಳಲು ಬಯಸುವವರಿಗೆ ಕೇಂದ್ರ ಸರ್ಕಾರದಿಂದ ಬಿಗ್ ನ್ಯೂಸ್ ಸಿಕ್ಕಿದೆ. ಇನ್ನೂ ಮುಂದೆ ನೀವು ಡ್ರೈವಿಂಗ್ ಲೈಸೆನ್ಸ್ ಪಡೆಯಲು RTO ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ. ಆರ್ಟಿಒಗೆ ಭೇಟಿ ನೀಡದೆ ಮತ್ತು ಚಾಲನಾ ಟೆಸ್ಟ್ ನೀಡದೆಯೇ ನೀವು ಚಾಲನಾ ಪರವಾನಗಿಯನ್ನು ನೀವು ಪಡೆಯಬಹುದು. ಹೌದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜಾರಿಗೆ ತಂದಿರುವ ಹೊಸ ನಿಯಮಗಳ ಪ್ರಕಾರ, ಮಾನ್ಯತೆ ಪಡೆದ ಚಾಲನಾ ತರಬೇತಿ ಕೇಂದ್ರದ ಸಹಾಯದಿಂದ ಚಾಲನಾ ಪರವಾನಗಿಯನ್ನು ಪಡೆಯಬಹುದು. ಇದಕ್ಕಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ ಚಾಲನಾ ತರಬೇತಿ ಕೇಂದ್ರ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅರ್ಹ ಅಭ್ಯರ್ಥಿಗಳಿಗೆ ಚಾಲನಾ ಪರವಾನಗಿಯನ್ನು ನೀಡಲಾಗುತ್ತದೆ. ಹೀಗಾಗಿ ನೀವು ಇನ್ನೂ ಮುಂದೆ ಆರ್ಟಿಒ ಕಚೇರಿಗೆ ಅಲೆದಾಡಿ ಚಪ್ಪಲಿ ಹರಿಯುವ ಕೆಲಸ ಇರುವುದಿಲ್ಲ. ಕೇಂದ್ರ ಅಥವಾ ರಾಜ್ಯ ಸಾರಿಗೆ ಇಲಾಖೆ ಇಂತಹ ತರಬೇತಿ ಕೇಂದ್ರಗಳನ್ನು ನಿರ್ವಹಿಸುತ್ತದೆ. ಚಾಲನಾ ಪರವಾನಗಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರದಲ್ಲಿ…
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ ಹಿಡಿದು ಗೃಹ ಸಚಿವಾಲಯ, ಪೊಲೀಸ್ ಅಧಿಕಾರಿಗಳ ಕಚೇರಿಗಳ ಪ್ರತಿನಿಧಿಗಳು ಭಾಗಿಯಾಗಿದ್ದು, ಸರ್ಕಾರ ಎಲ್ಲವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಹೀಗಾಗಿ ಪ್ರಕರಣದ ಎಲ್ಲ ಬಂಧಿತರಿಂದ ಸೆಕ್ಷನ್ 164 ಪ್ರಕಾರ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಪಿಎಸ್ಐ ನೇಮಕ ಅಕ್ರಮ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಗುರುವಾರ ಸಾಂಕೇತಿಕ ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; ‘ಪಿಎಸ್ಐ ಸೇರಿದಂತೆ ಎಲ್ಲ ಇಲಾಖೆಗಳ ನೇಮಕ ಪರೀಕ್ಷೆ ಅಕ್ರಮದ ವಿರುದ್ಧ ಕಾಂಗ್ರೆಸ್ ಇಂದು ಸಾಂಕೇತಿಕ ಪ್ರತಿಭಟನೆ ಮಾಡಲಾಗುತ್ತಿದೆ.ಪಿಎಸ್ಐ ನೇಮಕ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರಿಂದ ಸಿಆರ್ ಪಿಸಿ ಸೆಕ್ಷನ್ 164 ಪ್ರಕಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿಕೊಳ್ಳಬೇಕು. ಸರ್ಕಾರ ಈ ಅಕ್ರಮ ಪ್ರಕರಣದಲ್ಲಿ ಸಚಿವರು ಹಾಗೂ ಅಧಿಕಾರಿಗಳನ್ನು ರಕ್ಷಣೆ ಮಾಡಿಕೊಳ್ಳಲು ಬೇಕಾದ ರೀತಿಯಲ್ಲಿ ಬಂಧಿತ…