Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಚಲಿಸುವ ಕಾರಿನಲ್ಲಿ 19 ವರ್ಷದ ಯುವ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಎರ್ನಾಕುಲಂ ಪೊಲೀಸರು ಒಬ್ಬ ಮಹಿಳೆ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕೊಚ್ಚಿನ್ ಶಿಪ್ ಯಾರ್ಡ್ ಬಳಿಯ ಪಬ್ ಗೆ ತೆರಳಿದ್ದು, ಮದ್ಯ ಸೇವಿಸಿದ್ದಳು. ಈ ವೇಳೆ ಕಾಕ್ಕನಾಡ್ ಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ಯುವಾಗ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ. ರಾತ್ರಿಯೀಡಿ ರೂಪದರ್ಶಿ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಮನೆ ಬಳಿ ಬಿಟ್ಟ ದುಷ್ಕರ್ಮಿಗಳು ಹೋಗಿದ್ದಾರೆ. ರೂಪದರ್ಶಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆಕೆಯ ಮೇಲೆ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಜನರ ಮನೆಬಾಗಿಲಿಗೆ ಆಡಳಿತವನ್ನು ಕೊಂಡೊಯ್ದು ಸ್ಥಳೀಯವಾಗಿ ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬ ಸರಕಾರದ ಆಶುದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು. ಬೆಳಿಗ್ಗೆ ಸವದತ್ತಿ ಯಲ್ಲಮ್ಮ ದೇವಿಯ ದರ್ಶನವನ್ನು ಪಡೆದುಕೊಂಡು ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಬಸವೇಶ್ವರ ವೃತ್ತದ ಬಳಿ ಗ್ರಾಮಸ್ಥರು ಪ್ರೀತಿಯಿಂದ ಬರಮಾಡಿಕೊಂಡರು. ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ಡೊಳ್ಳಿನ ಮೇಳದವರು ಮೆರವಣ ಗೆಯ ಮೂಲಕ ಕಾರ್ಯಕ್ರಮದ ವೇದಿಕೆ ಇರುವ ರೇ.ಹ.ಹಳಮನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ಕರೆದುಕೊಂಡು ಹೋದರು. ಬಾರ್ ಗೆ ನುಗ್ಗಿ ಬಾಗಿಲು ಬಂದ್ ಮಾಡಿಸಿದ ಜಿಲ್ಲಾಧಿಕಾರಿ!: ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಕಾರಿನಿಂದಿಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲರು ನೇರವಾಗಿ ಪಕ್ದಲ್ಲೇ ಇರುವ ಆನಂದ ಬ್ರ್ಯಾಂಡಿ ಶಾಪ್ ಗೆ ತೆರಳಿ ಲೈಸೆನ್ಸ್, ಲಭ್ಯವಿರುವ ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ಕೈಗೊಂಡರು. ಜಿಲ್ಲಾಧಿಕಾರಿಗಳು ಬಸವೇಶ್ವರ ವೃತ್ತದಲ್ಲಿ ಇರುವ ಆನಂದ…
ಮಂಗಳೂರು: 20,000 ಅಂಗನವಾಡಿ ಮತ್ತು 6000 ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 25 ರಂದು ಎನ್ ಇಪಿ ಜಾರಿಗೆ ಉದ್ದೇಶಿಸಿದ್ದು, ಇದರ ರಾಜ್ಯ ಪಠ್ಯಕ್ರಮ ನವೆಂಬರ್ ಅಂತ್ಯಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಎನ್ ಇಪಿ ವಿಶೇಷತೆ ಎಂದರೆ ಪಠ್ಯಪುಸ್ತಕಗಳನ್ನು ಹೇರುವುದಿಲ್ಲ. ಬದಲಾಗಿ ಪಠ್ಯದ ಹೊರೆ ಕಡಿಮೆಯಾಗಲಿದೆ. ಒಂದನೇ ಮತ್ತು ಎರಡನೇ ತರಗತಿಗೆ ಎರಡೆರಡು ಪುಸ್ತಕಗಳು ಇರುತ್ತವೆ. ಸಂಖ್ಯಾಶಾಸ್ತ್ರ ವಿಚಾರಗಳನ್ನು ತಿಳಿಸುವುದು, ಅಕ್ಷರ ಜ್ಞಾನ ನೀಡುವ ಪುಸ್ತಕ ಇರುತ್ತದೆ. ಈಗಾಗಲೇ ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಚಿಲಿಪಿಲಿ, ನಲಿ-ಕಲಿ ಮೂಲಕ ಎನ್ ಇಪಿ ಆಶಯಗಳನ್ನು ಜಾರಿಗೊಳಿಸಲಾಗಿದೆ. ಅಂಗನವಾಡಿ ಶಿಕ್ಷಕಿಯರಿಗೆ ಎನ್ಇಪಿ ತರಬೇತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ : ಕಳಸಾ, ಬಂಡೂರಿ ಯೋಜನೆ ಕಾಮಗಾರಿ ನಡೆಯುವ ಸ್ಥಳಕ್ಕೆ ಗೋವಾ ಶಾಸಕ ವಿಜಯ ಸರದೇಸಾಯಿ ಅನುಮತಿ ಇಲ್ಲದೆ ಪ್ರವೇಶಿಸಿದ ಘಟನೆ ನಡೆದಿದೆ. ಖಾನಾಪುರ ತಾಲೂಕಿನ ಕಣಕುಂಬಿ ಪ್ರದೇಶಕ್ಕೆ ವಿಜಯ ಸರದೇಸಾಯಿ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಗೋವಾ ಫಾರ್ವರ್ಡ್ ಪಾರ್ಟಿಯ ಅಧ್ಯಕ್ಷರೂ ಆಗಿರುವ ವಿಜಯ ಸರದೇಸಾಯಿ, ಯೋಜನೆಗೆ ಸಂಬಂಧಿಸಿ ಕರ್ನಾಟಕದ ವಿರುದ್ಧ ಆರೋಪಿಸಿದ್ದಾರೆ. ಕಾಮಗಾರಿಯ ಫೋಟೊಗಳನ್ನು ಗೋವಾದಲ್ಲಿ ಬಿಡುಗಡೆ ಮಾಡಿದ್ದಾರೆ. ಗೋವಾದ ಪರಿಸರವಾದಿಗಳನ್ನು ಎತ್ತಿಕಟ್ಟುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಗೋವಾ ಆಕ್ಷೇಪಿಸುತ್ತಿದೆ. ಬಂಡೂರಿ ನೀರು ಬಳಸಲು ಅಣೆಕಟ್ಟೆ ಹಾಗೂ ಅರಣ್ಯ ಪ್ರದೇಶದಲ್ಲಿ ಟನಲ್ ನಿರ್ಮಾಣದ ಅಗತ್ಯ ಇದೆ. ಈ ಕಾಮಗಾರಿಗೆ ಗೋವಾ ಅಡ್ಡಿಪಡಿಸುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಾಮರಾಜನಗರ : ದಲಿತ ಮಹಿಳೆ ಟ್ಯಾಂಕ್ ನಿಂದ ನೀರು ಕುಡಿದರೆಂಬ ಕಾರಣಕ್ಕೆ ಟ್ಯಾಂಕ್ ಅನ್ನು ಖಾಲಿ ಮಾಡಿಸಿ ಸ್ವಚ್ಛಗೊಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದೆ. ದಲಿತ ಯುವಕನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ವಧುವಿನ ಕಡೆಯಿಂದ ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರಿನಿಂದ ಮಹಿಳೆಯು ಬಂದಿದ್ದರು. ಈ ವೇಳೆ ಮಧ್ಯಾಹ್ನದ ಊಟ ಮುಗಿಸಿ ಬಸ್ ಗೆ ಹೋಗುವ ಸಂದರ್ಭದಲ್ಲಿ ಮಹಿಳೆಯೊಬ್ಬರು ಗ್ರಾಮದ ಸವರ್ಣೀಯರ ಬೀದಿಯಲ್ಲಿನ ತೊಂಬೆಯ ನಲ್ಲಿಯಲ್ಲಿ ನೀರು ಕುಡಿದಿದ್ದಾರೆ. ಅದೇ ಬೀದಿಯವರು ಇದನ್ನು ನೋಡಿದ್ದಾರೆ. ಆ ಮಹಿಳೆ ದಲಿತ ಸಮುದಾಯದವಳು ಎಂದು ಗೊತ್ತಾಗುತ್ತಿದ್ದಂತೆ ನೀರನ್ನು ಖಾಲಿ ಮಾಡಿಸಿ ಗೋ ಮೂತ್ರದಿಂದ ತೊಳೆದಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹೆಚ್.ಡಿ.ಕೋಟೆ: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಪ್ರಯುಕ್ತ ಕಂದಾಯ ಸಚಿವ ಆರ್. ಅಶೋಕ್ ಹೆಚ್ ಡಿ ಕೋಟೆ ತಾಲ್ಲೂಕಿನ ಎನ್.ಬೇಗೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಭೀಮನ ಕೊಲ್ಲಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದರು. ನಂದಿ ಕಂಬಕ್ಕೆ ಪೂಜೆ ಸಲ್ಲಿಸಿ ಸಚಿವ ಅಶೋಕ್ ರನ್ನು ಟ್ರಾಕ್ಟರ್ ನಲ್ಲಿ ಸುಮಾರು ಇನ್ನೂರು ಮೀಟರ್ ತನಕ ಜಾನಪದ ಕಲಾ ತಂಡಗಳ ಮೂಲಕ ಮೆರವಣಿಗೆ ತರಲಾಯಿತು. ಭೀಮನಕೊಲ್ಲಿ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಆರ್.ಅಶೋಕ್ ಹಾಗೂ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ರವರು ಪುಷ್ಪಾರ್ಚನೆ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಕಾರ್ಯಕ್ರಮದ ಪ್ರಯುಕ್ತ ತೆರೆದಿದ್ದ ಮಳಿಗೆಗಳನ್ನು ಉದ್ಘಾಟಿಸಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿದರು ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹೆಚ್.ಡಿ.ಕೋಟೆ: ಕಳೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಚರ್ಚಿಸಿರುವ ವಿಷಯಗಳ ಬಗ್ಗೆ ನೀಡಿರುವ ಅನು ಪಾಲನ ವರದಿಯನ್ನು ಅಧಿಕಾರಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ನೀಡಿದ್ದಾರೆ. ನಾವು ಹೇಳಿರುವುದು ಒಂದು, ಇಲ್ಲಿ ಬರೆದಿರೋದು ಒಂದು, ಇಲ್ಲಿ ನಡೆದಿರುವುದು ಮತ್ತೊಂದು. ಈ ವಿಷಯ ಸಭೆಯಲ್ಲಿ ತೀರ್ಮಾನವೇ ಆಗಿಲ್ಲ, ಇದರ ಬಗ್ಗೆ ಚರ್ಚೆ ಆಗಿಲ್ಲ ಹೇಗ್ರಿ ಅನುಪಾಲನ ವರದಿ ನೀಡಿದ್ದೀರಿ? ಎಂದು ಪುರಸಭೆ ಸದಸ್ಯರು ಒಬ್ಬರ ಮೇಲೆ ಒಬ್ಬರಂತೆ ಪುರಸಭೆ ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡ ಘಟನೆಗೆ ಇಂದಿನ ಸಭೆ ಸಾಕ್ಷಿ ಆಯಿತು. ಪಟ್ಟಣದ ಪುರಸಭೆ ದಿವಂಗತ ಎಸ್.ಚಿಕ್ಕಮಾಧು ಸಭಾಂಗಣದಲ್ಲಿ ಶುಕ್ರವಾರ ಪುರಸಭೆ ಅಧ್ಯಕ್ಷ ಅನಿತಾ ನಿಂಗನಾಯಕ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆ ಪ್ರಾರಂಭವಾಗುತ್ತಿದ್ದಂತೆ ಮುಂದೂಡಿದ ಸಾಮಾನ್ಯ ಸಭೆ ನಡಾವಳಿಯ ಅನುಪಾಲನ ವರದಿಯಲ್ಲಿ ಸದಸ್ಯರು ಚರ್ಚಿಸಿದ್ದ ವಿಷಯಗಳನ್ನು ಕೈ ಬಿಟ್ಟಿರುವುದು ಹಾಗೂ ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ಅನು ಪಾಲನಾ ವರದಿ ನೀಡಿರುವುದಕ್ಕೆ ಗರಂ ಅದ ಸದಸ್ಯರು ಮುಖ್ಯ ಅಧಿಕಾರಿ ಸುರೇಶ್ ಸೇರಿದಂತೆ…
ಇನ್ಮುಂದೆ ಫೇಸ್ಬುಕ್ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡುವಾಗ ಧರ್ಮ, ರಾಜಕೀಯ, ಲೈಂಗಿಕ ಆದ್ಯತೆಗೆ ಸಂಬಂಧಿತ ಫೀಲ್ಡ್ಗಳು ಇರುವುದಿಲ್ಲ ಎಂದು ಮೆಟಾ ಸಂಸ್ಥೆ ತಿಳಿಸಿದೆ. ಫೇಸ್ಬುಕ್ ಆರಂಭಗೊಂಡಾಗ ಖಾಸಗಿತನ ರಕ್ಷಣೆ, ಮಾಹಿತಿ ಸೋರಿಕೆಯ ನಿಯಂತ್ರಣ ವಿಚಾರ ದೊಡ್ಡ ಸಮಸ್ಯೆಯಾಗಿ ಇರಲಿಲ್ಲ. ಜನರು ಅಳುಕಿಲ್ಲದೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಪ್ರಸ್ತುತ ಮಾಹಿತಿ ಸೋರಿಕೆ ಹಾಗೂ ಖಾಸಗಿತನವು ಗಂಭೀರ ವಿಚಾರವಾಗಿದೆ ಎಂದು ಮೆಟಾ ಹೇಳಿದೆ. ವೈಯಕ್ತಿಕ ಮಾಹಿತಿಯ ದುರ್ಬಳಕೆಯೂ ಆಗುತ್ತಿದೆ. ಹೀಗಾಗಿ ತೀರಾ ವೈಯಕ್ತಿಕವಾದ ಮಾಹಿತಿಯನ್ನು ಪ್ರೊಫೈಲ್ನಲ್ಲಿ ಸಂಗ್ರಹಿಸದಿರಲು ಸಂಸ್ಥೆಯು ನಿರ್ಧರಿಸಿದೆ ಎಂದು ಸಂಸ್ಥೆ ತಿಳಿಸಿದೆ. ಭಾರತದಲ್ಲಿ ವೈಯಕ್ತಿಕ ದತ್ತಾಂಶ ಸೋರಿಕೆ ತಡೆಯಲು ಕೇಂದ್ರ ಸರಕಾರ ಬಿಗಿ ಕ್ರಮಕ್ಕೆ ಮುಂದಾಗಿರುವ ಸಂದರ್ಭದಲ್ಲೇ ಫೇಸ್ಬುಕ್ನಿಂದ ಇಂಥಹದ್ದೊಂದು ಮಾಹಿತಿ ಪ್ರಕಟವಾಗಿದೆ. ಮುಂದಿನ ತಿಂಗಳಿಂದ ಬಳಕೆದಾರರ ವೈಯಕ್ತಿಕ ಮಾಹಿತಿ ವಿಭಾಗದಲ್ಲಿ ಅವರ ವಿಳಾಸ, ಧರ್ಮ, ರಾಜಕೀಯ ಅಭಿಪ್ರಾಯ, ಆಸಕ್ತಿಗಳು ಇತ್ಯಾದಿ ಕುರಿತಾದ ಮಾಹಿತಿಯನ್ನು ಕಂಪನಿ ಕಲೆಹಾಕುವುದಿಲ್ಲ ಎಂದು ಫೇಸ್ಬುಕ್ ಸ್ಪಷ್ಟನೆ ನೀಡಿದೆ. ಹಿಂದಿನಂತೆ ಇಂಥ ಮಾಹಿತಿಗಳನ್ನು ಸಂಗ್ರಹಿಸಿ, ಅದಕ್ಕೆ ಅನುಗುಣವಾಗಿ…
ಮಕ್ಕಳನ್ನು ನೋಡಲು ಬಿಡಲಿಲ್ಲ ಅಂತ ಮಡದಿ ಮಕ್ಕಳನ್ನೂ ಸೇರಿಸಿ ಮನೆಗೆ ಪಾಪಿ ಪತಿ ಬೆಂಕಿ ಹಚ್ಚಿದ ಘಟನೆ ಹಾಸನ ತಾಲ್ಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಗೀತಾ, ಚಿರಂತನ್ (7), ನಂದನ್ (5) ಗಾಯಗೊಂಡಿದ್ದು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯೊಳಗಿದ್ದ ಪೀಠೋಪಕರಣಗಳು ಭಸ್ಮವಾಗಿವೆ. ತಾಯಿ-ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ವಿಚಾರಕ್ಕೆ ಪತಿ ಅಂಕನಹಳ್ಳಿಯ ರಂಗಸ್ವಾಮಿ ಹಾಗೂ ಗೀತಾಳ ನಡುವೆ ಜಗಳವಾಗಿತ್ತು. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ನಾಲ್ಕು ತಿಂಗಳಿನಿಂದ ಪತಿಯಿಂದ ಪ್ರತ್ಯೇಕವಾಗಿ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ವಾಸವಿದ್ದರು. ರಂಗಸ್ವಾಮಿ ಆಗಾಗ್ಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಬಂದಾಗ ಇದಕ್ಕೆ ಪತ್ನಿ ಗೀತಾ ವಿರೋಧ ವ್ಯಕ್ತಪಡಿಸಿದ್ದಾಳೆ. ಇದಕ್ಕೆ ಕೋಪಗೊಂಡ ಆತ ಪೆಟ್ರೋಲ್ ಬಂಕ್ನಿಂದ ಪೆಟ್ರೋಲ್ ತಂದು ಮಧ್ಯರಾತ್ರಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸ್ಥಳೀಯರ ನೆರವಿನಿಂದ ಪ್ರಾಣಾಪಾಯದಿಂದ ಗೀತಾ ಹಾಗೂ ಮಕ್ಕಳು ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ…
ಉತ್ತರ ಕೊರಿಯಾದ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ತನ್ನ ಮಗಳೊಂದಿಗೆ ಕಾಣಿಸಿಕೊಂಡಿದ್ದಾರೆ. ರಾಜ್ಯ ಏಜೆನ್ಸಿ ಹಂಚಿಕೊಂಡಿರುವ ಚಿತ್ರಗಳಲ್ಲಿ ಕಿಮ್ ಜಾಂಗ್ ಉನ್ ತಮ್ಮ ಮಗಳೊಂದಿಗೆ ಕೈ ಹಿಡಿದುಕೊಂಡು ಪಕ್ಕದಲ್ಲಿ ನಿಂತಿರುವುದು ಕಾಣಿಸಿಕೊಂಡಿದೆ. ಕೆಲವು ಫೋಟೋಗಳಲ್ಲಿ ಅವರು ಕ್ಷಿಪಣಿ ಉಡಾವಣೆ ಹಾಗೂ ಮಿಲಿಟರಿ ಕಾರ್ಯಗಳನ್ನು ನೋಡುತ್ತಿರುವುದು ಕಂಡುಬಂದಿದೆ. ಕಿಮ್ ಜಾಂಗ್ ಉನ್ ತನ್ನ ವೈಯಕ್ತಿಕ ಜೀವನದ ಬಗ್ಗೆ ಹಲವು ವಿಚಾರಗಳು ಇನ್ನು ಕೂಡಾ ರಹಸ್ಯವಾಗಿಯೇ ಇದೆ. 2013ರಲ್ಲಿ ಮಾಜಿ ಬಾಸ್ಕೆಟ್ಬಾಲ್ ತಾರೆ ಡೆನ್ನಿಸ್ ರಾಡ್ಮನ್ ಬ್ರಿಟಿಷ್ ದಿನಪತ್ರಿಕೆಯೊಂದರಲ್ಲಿ ಕಿಮ್ಗೆ ‘ಜು ಎ’ ಹೆಸರಿನ ಮಗುವಿದೆ ಎಂದು ತಿಳಿಸಿದ್ದರು. ರಾಡ್ಮನ್ ಕಿಮ್ ಅವರ ಕುಟುಂಬದೊಂದಿಗೆ ಸಮಯ ಕಳೆದಿದ್ದು, ಕಿಮ್ ಅವರನ್ನು ಒಬ್ಬ ಒಳ್ಳೆಯ ತಂದೆ ಎಂದು ಹೇಳಿದ್ದಾರೆ. ಶುಕ್ರವಾರ ಉತ್ತರ ಕೊರಿಯಾದಲ್ಲಿ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯ ವೇಳೆ ಕಿಮ್ ಜಾಂಗ್ ಉನ್ ಅವರೊಂದಿಗೆ ಕಾಣಿಸಿಕೊಂಡ ಬಾಲಕಿಯ ಹೆಸರನ್ನು ರಾಜ್ಯ ಮಾಧ್ಯಮ ಬಹಿರಂಗಪಡಿಸಿಲ್ಲ. ಉತ್ತರ ಕೊರಿಯಾ ನಿನ್ನೆ ಪ್ಯೊಂಗ್ಯಾಂಗ್…