Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಬೆಂಗಳೂರು: ಸರ್ಕಾರಿ ನೌಕರಿಗೆ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರನ್ನೊಳಗೊಂಡ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಆಯೋಗದಲ್ಲಿ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನಹಳ್ಳಿ ಹಾಗೂ ರಾಜ್ಯ ಮೂಲ ಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ 7 ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ನಗರದ ನ್ಯೂ ಹೊರೈಜನ್ ಕಾಲೇಜಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ. ಇಂಜಿನಿಯರಿಂಗ್ ಮೊದಲ ವರ್ಷದ ಆರ್ಯನ್, ದಿನಕರ್, ರಿಯಾ ಪಾಕ್ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಇತರೆ ವಿದ್ಯಾರ್ಥಿಗಳು ಮೂವರನ್ನು ಥಳಿಸಲು ಮುಂದಾಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳು ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ಮಾರತ್ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದಾರೆ. ಇನ್ನು ಕಾಲೇಜು ಆಡಳಿತ ಮಂಡಳಿ ಮೂವರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಹುಜನ ಸಮಾಜ ಪಾರ್ಟಿ(BSP)ಯ ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು ಅವರು ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಜಾನೆ ವೇಳೆಗೆ ಎದೆನೋವಿನಿಂದ ಅಸ್ವಸ್ಥರಾದ ದಾಸಪ್ಪ ಅವರನ್ನು ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಆಸ್ಪತ್ರೆಗೆ ತಲುಪುವ ಮೊದಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ. ದಾಸಪ್ಪ ಎಡಪದವು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಹುಜನ ಚಳುವಳಿಯ ಪ್ರಭಾವಿ ನಾಯಕರಾಗಿದ್ದು, ಜಿಲ್ಲೆಯ ದಲಿತ ಪರ ಹೋರಾಟ, ಸಂಘಟನೆಗಳ ಪೋಷಕರೂ ಆಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸುಮಾರು ಒಂದು ದಶಕದ ಹಿಂದೆ ಬರೋಬ್ಬರಿ ಅಂದಾಜು ರೂ.೪೫೦ ಕೋಟಿ ವೆಚ್ಚದಲ್ಲಿ ಅಂದಿನ ಸರ್ಕಾರದ ವತಿಯಿಂದ ನಿರ್ಮಾಣ ಮಾಡಿದಂತಹ ಬೆಳಗಾವಿಯ ಸುವರ್ಣ ವಿಧಾನ ಸೌಧ ಸರ್ಕಾರದ ಬೊಕ್ಕಸದ ಪಾಲಿಗೆ ಒಂದು ಬಿಳಿ ಆನೆ ಆದಂತಾಗಿದೆ. ಏಕೆಂದರೆ ಅಂದಿನಿಂದ ಈವರೆಗೆ ಬಂದು ಹೋಗಿರುವಂತಹ ವಿವಿಧ ಸರ್ಕಾರಗಳು ಸಚಿವಾಲಯ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರಿಸುವಲ್ಲಿ ವಿಫಲವಾಗಿವೆ. ರಾಜಕಾರಣಿಗಳ ಆರೋಪವೇನೆಂದರೆ ಇದೊಂದು ಕೇವಲ ಗೋಡೌನ್ ರೀತಿಯಿರುವ ಕಟ್ಟವಾಗಿದ್ದು, ಸಚಿವಾಲಯ ಮಟ್ಟದ ಕಚೇರಿಗಳನ್ನು ಸ್ಥಾಪಿಸುವ ಯಾವುದೇ ಸೂಕ್ತ ಸೌಲಭ್ಯಗಳಿಲ್ಲವಂತೆ. ಜೊತೆಗೆ, ಹಿರಿಯ ಅಧಿಕಾರಿಗಳು ಬೆಳಗಾವಿಗೆ ಸ್ಥಳಂತಾರವಾಗಲು ನಿರಾಕರಿಸುತ್ತಿರುವರಂತೆ. ಅದರೆ ಇದಕ್ಕೆ ತದ್ವಿರುದ್ಧ ಎನ್ನುವಂತೆ ಅಧಿಕಾರಿಗಳ ಆರೋಪವೇನೆಂದರೆ, ರಾಜಕಾರಣಿಗಳಿಗೆ ಅಧಿಕಾರಿಗಳು ಬೆಂಗಳೂರಿನಲ್ಲೇ ಇರಬೇಕು ಎನ್ನುವುದು ಮತ್ತು ವಿವಿಧ ಸಚಿವಾಲಯಗಳ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಂತಾರಿಸುವಲ್ಲಿ ಇರುವ ರಾಜಕೀಯ ಇಚ್ಛಾಶಕ್ತಿಯ ಕೊರತೆಗಳೇ ಸುವರ್ಣ ವಿಧಾನ ಸೌಧದ ಸಂಪೂರ್ಣ ಬಳಕೆಗೆ ಎದುರಾಗಿರುವ ಮುಖ್ಯ ಕಾರಣಗಳಂತೆ. ರಾಜ್ಯ ಸರ್ಕಾರ ಸುವರ್ಣ ವಿಧಾನ ಸೌಧದ ನಿರ್ವಹಣೆಗಾಗಿಯೇ ವಾರ್ಷಿಕ ಬರೋಬ್ಬರಿ ರೂ.೫ ಕೋಟಿ ವೆಚ್ಚ ಮಾಡುತ್ತಿದೆ.…
ನಾಪತ್ತೆಯಾಗಿದ್ದ ಟ್ರಾನ್ಸ್ಪೋರ್ಟ್ ಉದ್ಯಮಿ ಬಾಲಸುಬ್ರಮಣ್ಯನ್ ಮೃತದೇಹ ಬೆಂಗಳೂರಿನ ಜೆ.ಪಿ ನಗರ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಪುಟ್ಟೇನಹಳ್ಳಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು ಸಿಡಿಆರ್ ಪರಿಶೀಲಿಸಿ ಬಾಲಸುಬ್ರಮಣ್ಯನ್ ದೂರವಾಣಿ ಕರೆಗಳನ್ನು ವಿವರ ನೋಡಿದಾಗ ಮಹಿಳೆಯೊಬ್ಬಳ ಜೊತೆ ನಿರಂತರ ಸಂಪರ್ಕದಲ್ಲಿರುವ ವಿಚಾರ ತಿಳಿದುಬಂದಿದೆ. ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಕೊನೆಯ ಲೊಕೇಷನ್ ತೋರಿಸುತ್ತಿದೆ. ಹೀಗಾಗಿ ಬಾಲಸುಬ್ರಮಣ್ಯನ್ ಸಂಪರ್ಕದಲ್ಲಿದ್ದ ಆ ಮಹಿಳೆ ಯಾರು ಎನ್ನುವ ಬಗ್ಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ನವೆಂಬರ್ 16ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್ಗೆ ಕರೆದುಕೊಂಡು ಹೋಗಿದ್ದ ಬಾಲಸುಬ್ರಮಣ್ಯನ್ ಮನೆಗೆ ವಾಪಸ್ ಆಗದೇ ನಾಪತ್ತೆಯಾಗಿದ್ದರು. ನವೆಂಬರ್ 17ರಂದು ಬಾಲ ಸುಬ್ರಮಣಿಯನ್ ಮೃತ ದೇಹ ಪತ್ತೆಯಾಗಿದ್ದು,ಹಲವು ಅನುಮಾನಗಳು ಮೂಡಿತ್ತು. ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್ಗೆ ಕರೆದುಕೊಂಡು ಹೋಗಿದ್ದ ಬಾಲ ಸುಬ್ರಮಣಿಯನ್, ಸಂಜೆ 04-55ಕ್ಕೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸವಿದೆ ಎಂದು ತಿಳಿಸಿದ್ದರು. ಅನಂತರ ಕರೆ ಮಾಡಿದರೆ ಅವರ ನಂಬರ್ ಸ್ವಿಚ್ಡ್ ಆಫ್ ಬಂದಿದೆ. ಮಗ ತಕ್ಷಣವೇ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ತೆರಳಿ…
ನವದೆಹಲಿ : ರಾಜೀವ್ ಗಾಂಧಿ ಹಂತಕರ ಆರು ಜನರ ಬಿಡುಗಡೆ ಮಾಡುವಂತೆ ನವೆಂಬರ್ 11ರಂದು ಹೊರಡಿಸಿದ್ದ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳಿಗೆ ವಿನಾಯಿತಿ ನೀಡುವ ನವೆಂಬರ್ 11ರ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಈ ಪ್ರಕರಣವನ್ನ ವಾದಿಸಲು ತನಗೆ ಅವಕಾಶ ಸಿಗಲಿಲ್ಲ ಮತ್ತು ಸುಪ್ರೀಂ ಕೋರ್ಟ್ ಆದೇಶವು ಕಾನೂನಾತ್ಮಕವಾಗಿ ದೋಷಪೂರಿತವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ಇತ್ತಿಚಿಗೆ ಆರು ಜನ ರಾಜೀವ್ ಗಾಂಧಿ ಹಂತಕರು ಜೈಲಿನಿಂದ ಬಿಡುಗಡೆಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮುಂಬೈ : ಬಾಳಾಸಾಹೇಬ್ ಅವರು ಏಕೈಕ ಹಿಂದೂ ಹೃದಯ ಸಾಮ್ರಾಟ್ ಎಂದು ಹೇಳಿದ್ದು, ಪಕ್ಷದ ಸಂಸ್ಥಾಪಕರಿಗೆ ಭಾರತ ರತ್ನ ನೀಡುವಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ನಿಜವಾಗಿಯೂ ಹಿಂದುತ್ವದ ಬಗ್ಗೆ ಗೌರವವಿದ್ದರೆ, ವೀರ್ ಸಾವರ್ಕರ್ ಜೊತೆಗೆ ಬಾಳಾಸಾಹೇಬ್ ಠಾಕ್ರೆಯವರಿಗೂ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಬೇಕು. ಅವರು ಅದನ್ನು ಏಕೆ ಘೋಷಿಸುತ್ತಿಲ್ಲ.. ಕಳೆದ ಹದಿನೈದು ವರ್ಷಗಳಿಂದ ನಾವು ಈ ಬೇಡಿಕೆಯನ್ನು ಸಲ್ಲಿಸುತ್ತಿದ್ದೇವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ವಾಸ್ತವವಾಗಿ, ಭಾರತ ರತ್ನ ಪ್ರಶಸ್ತಿಯಿಂದ ವೀರ್ ಸಾವರ್ಕರ್ ಮತ್ತು ಬಾಳಾಸಾಹೇಬ್ ಠಾಕ್ರೆ ಅವರ ಸ್ಥಾನಮಾನವು ಹೆಚ್ಚಾಗುವುದಿಲ್ಲ. ಆದರೆ ಅಂತಹ ಮಹಾನ್ ನಾಯಕರಿಗೆ ನೀಡಿದ ನಂತರ ಪ್ರಶಸ್ತಿಯ ಮಹತ್ವವು ಹಲವು ಪಟ್ಟು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಕೆಲವು ಜನರ ರಾಜಕೀಯ ಲಾಭಕ್ಕಾಗಿ ಹಲವು ರಾಜ್ಯ ನಾಯಕರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ. ವೀರ್ ಸಾವರ್ಕರ್ ಬಗ್ಗೆ ನಕಲಿ ಪ್ರೀತಿ ಮತ್ತು ಗೌರವವನ್ನು ಪ್ರದರ್ಶಿಸುವುದನ್ನು ನಿಲ್ಲಿಸಿ, ಸಾಧ್ಯವಾದಷ್ಟು…
ಶಿರಸಿ: ಅತಿಕ್ರಮಣವಾಗಿರುವ ಮನೆ ಖಾಲಿ ಮಾಡಿಸಲು ಹೋದ ಸಂದರ್ಭದಲ್ಲಿ ಅರಣ್ಯ ಅಧಿಕಾರಿಯ ಕೈ ಬೆರಳು ಕತ್ತರಿಸಿದ ಘಟನೆ ಸಿದ್ದಾಪುರದ ಗವಿನಗುಡ್ಡದಲ್ಲಿ ನಡೆದಿದೆ. ವಿ ಟಿ ನಾಯ್ಕ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿ. ಮಹಾಬಲೇಶ್ವರ ಚಂದು ಮರಾಠಿ ಹಲ್ಲೆ ನಡೆಸಿದ ಆರೋಪಿ. ಇವರು ಹೊಸದಾಗಿ ನಿರ್ಮಾಣ ಮಾಡಿಕೊಂಡಿದ್ದ ಮನೆಯನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದರು. ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ಅರಣ್ಯ ಅಧಿಕಾರಿಯ ಕೈ ಬೆರಳನ್ನು ಮಹಾಬಲೇಶ್ವರ ಕತ್ತರಿಸಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮುಂಬೈ: ನವೆಂಬರ್ 19ರಂದು ಇಂದಿರಾ ಗಾಂಧಿ ಜನ್ಮ ದಿನ ಇರುವುದರಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರು ಮಾತ್ರ ಭಾಗವಹಿಸಲಿದ್ದಾರೆ. ಇಂದಿರಾ ಗಾಂಧಿ ನೆನಪಿನಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಇಂದಿರಾಗಾಂಧಿ ಜಯಂತಿಯಂದು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ. ಇಡೀ ದಿನ ಮಹಿಳೆಯರು ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಖಚಿತಪಡಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹಿಂದೆ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದರು. ನೀವು ಈ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದೀರಿ. ಆ ತ್ಯಾಗ ವ್ಯರ್ಥವಾಗಲು ನಾನು ಬಿಡುವುದಿಲ್ಲ. ಈ ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಕುರಿತು ಟ್ವೀಟ್ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ವಿಜಯಪುರ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ, ಅದಕ್ಕಾಗಿಯೇ ಈ ತರಹದ ಹೇಳಿಕೆ ನೀಡುತ್ತಿದ್ದಾರೆ. ನನಗೆ ಗೋಕಾಕ್ ಬರಲು ಆಹ್ವಾನ ನೀಡಿದ್ದರು. ಆದ್ದರಿಂದ ನಾನು ಗೋಕಾಕ್ ಗೆ ಹೋಗಿದ್ದೆ, ಆ ಕ್ಷೇತ್ರಕ್ಕೆ ಹೋಗಲು ಯಾರಿಗೂ ಧಮ್ ಇಲ್ಲ ಎನ್ನುವಂತಾಗಿತ್ತು ಎಂದರು. ಸತೀಶ್ ಜಾರಕಿಹೊಳಿ ಅವರ ತಪ್ಪನ್ನು ಸರಿಮಾಡಿಕೊಳ್ಳಬೇಕು, ಇಂತಹ ಹೇಳಿಕೆಗಳನ್ನು ನೀಡಬಾರದು. ಅವರ ಅಂತ್ಯ ಕಾಲ ಹತ್ತಿರವಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy