Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಹಿರಿಯೂರು: ಪುನೀತ್ ರಾಜ್ ಕುಮಾರ್ ಅವರ ಸಾಕ್ಷ್ಯ ಚಿತ್ರ ಗಂಧದ ಗುಡಿ ಚಿತ್ರ ನಂಜುಡೇಶ್ವರ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿದೆ. ಆದರೆ ಕಾಂತಾರ ಚಿತ್ರ ಕೂಡ ಇದೇ ಸಂದರ್ಭದಲ್ಲಿ ಇದೇ ಟಾಕಿಸ್ ನಲ್ಲಿ ಪ್ರದರ್ಶನವಾಗುತ್ತಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ದಿನದಲ್ಲಿ ಒಟ್ಟು ನಾಲ್ಕು ಶೋಗಳು ಪ್ರದರ್ಶನವಾಗುತ್ತಿವೆ. ಈ ಪೈಕಿ ಎರಡು ಶೋ ಕಾಂತಾರ ಚಿತ್ರ ಪ್ರದರ್ಶನಗೊಳ್ಳಲಿದ್ದು, 2 ಶೋ ಗಂಧದ ಗುಡಿ ಚಿತ್ರ ಪ್ರದರ್ಶನಗೊಳಿಸಲು ಟಾಕಿಸ್ ಮಾಲಕರು ನಿರ್ಧರಿಸಿದ್ದಾರೆ. ಆದರೆ, ಇದರ ವಿರುದ್ಧ ಜಯ ಕರ್ನಾಟಕ ರಕ್ಷಣಾ ಸೇನೆ, ಹಾಗೂ ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಥಿಯೇಟರ್ ಮಾಲೀಕರ ಒಂದು ಕುತಂತ್ರದಿಂದ ಅಪ್ಪು ಕೊನೆಯ ಚಿತ್ರಕ್ಕೆ ಸಮಸ್ಯೆಯಾಗಿದೆ. ನಂಜುಂಡೇಶ್ವರ ಚಿತ್ರಮಂದಿರದಲ್ಲಿ ಕಾಂತಾರ ಚಲನ ಚಿತ್ರವು ಈಗ ನಡೆಯುತ್ತಿದ್ದು ಎರಡು ಶೋ ಕಾಂತಾರ ಹಾಗೂ ಎರಡು ಶೋ ಗಂಧದ ಗುಡಿ ಸಿನಿಮಾ ನಡೆಸುವುದಾಗಿ ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದ ಬೇರೆ ಯಾವುದಾದರೂ ಚಿತ್ರಮಂದಿರಕ್ಕೆ ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಲನಚಿತ್ರ ಕೊಟ್ಟು…
ರಾಜ್ಯದಲ್ಲಿ ಸರ್ಕಾರವೇ ಇಲ್ಲ. 34 ಸಚಿವರಲ್ಲಿ 26 ಸಚಿವರಿದ್ದಾರೆ. ಬೊಮ್ಮಾಯಿಯವರೇ 8 ಖಾತೆಗಳನ್ನು ಇಟ್ಟುಕೊಂಡಿದ್ದು, ಯಾವುದಕ್ಕೂ ಸರಿಯಾಗಿ ನ್ಯಾಯ ಒಗದಿಸುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಸಚಿವಾಲಯಗಳು ಖಾಲಿ ಇವೆ. ಬೊಮ್ಮಾಯಿ ಸಿಎಂ ಆದ ಮೇಲೆ 12 ಖಾತೆಗಳು ಅವರ ಬಳಿಯೇ ಇವೆ. 37 ಇಲಾಖೆಗಳನ್ನು ಸಿಎಂ ಸೇರಿ 5 ಮಂದಿ ಸಚಿವರು ಮಾತ್ರ ನಿರ್ವಹಿಸುತ್ತಿದ್ದಾರೆ. ಯಾವ ಇಲಾಖೆಗಳೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದು ಕರ್ನಾಟಕದ ದುರಂತ ಎಂದು ಕಿಡಿ ಕಾರಿದರು. ಸರ್ಕಾರ ಹೈಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಬೆಂಗಳೂರಿನಲ್ಲಿ 2ಸಾವಿರ ಕಿ.ಮೀ ರಸ್ತೆಯಿದೆ. ಇದರಲ್ಲಿ ೩೩ ಸಾವಿರ ಗುಂಡಿಗಳಿವೆ, ೧೦ ಸಾವಿರ ಮುಚ್ಚಿದ್ದೇವೆ. ಇದಕ್ಕೆ ೮೦೦ ಕೋಟಿ ಖರ್ಚಾಗಿದೆ ಎಂದು ತಿಳಿಸಿದೆ. ಹೊಸ ರಸ್ತೆ ನಿರ್ಮಿಸಲು ೧.೨ ಕೋಟಿ ವೆಚ್ಚವಾದರೆ ಗುಂಡಿ ಮುಚ್ಚಲು ೧.೫ ಕೋಟಿ ಖರ್ಚು ಮಾಡಿದ್ದಾರೆ. ಮೈಸೂರಿನಲ್ಲಿ ೧೪೦೦ ಕಿ.ಮೀ ರಸ್ತೆಯಿದ್ದು, ೫೦೦೦ ಸಾವಿರ ಗುಂಡಿಗಳಿವೆ. ೧೫೦…
ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ ಕೆ ವಿ ರಾಜೆಂದ್ರ ಅಧಿಕಾರ ಸ್ವೀಕರಿಸಿದರು.ಡಾ ಬಗಾದಿ ಗೌತಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿತ್ತು. ಇಂದು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರಾಜೇಂದ್ರ ಅವರನ್ನು ನಿರ್ಗಮಿತ ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ವಾಗತಿಸಿದರು. ಬಳಿಕ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು. ನೂತನ ಜಿಲ್ಲಾಧಿಕಾರಿಯಾಗಿ ಕಡತಗಳಿಗೆ ಸಹಿ ಹಾಕಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಕೆ.ವಿ ರಾಜೇಂದ್ರ, ಸರ್ಕಾರ ನನ್ನ ಸಾಮರ್ಥ್ಯ ನೋಡಿ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಜಿಲ್ಲಾಧಿಕಾರಿ ಕಚೇರಿ ಎಂದರೆ ಸಾರ್ವಜನಿಕರಿಗೆ ಸದಾ ತೆರೆದಿರಬೇಕು. ಅಂತಹ ಆಡಳಿತ ನೀಡಲು ಇಷ್ಟಪಡುತ್ತೇನೆ. ಸರ್ಕಾರದ ಯೋಜನೆಗಳಿಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಅಲೆಯದೇ, ತಾಲೂಕು ಮಟ್ಟದಲ್ಲೇ ಸಮಸ್ಯೆ ಬಗೆಹರಿಸುವಂತೆ ಕ್ರಮ ಕೈಗೊಳ್ಳುತ್ತೇನೆ ಎಂದರು. ಈ ವೇಳೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಮುಡಾ ಆಯುಕ್ತ ದಿನೇಶ್ ಕುಮಾರ್…
ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ಎಸ್ಬಿ ಆರ್ ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವ ವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ‘ಒಳದನಿ’, ಕೊಳಲದನಿ’, `ಸಂವೇದನೆ , `ಭಾರತೀಯ ಕಾವ್ಯಮೀಮಾಂಸೆ-ಸಮೀಕ್ಷೆ ಒಂದು ಅವಲೋಕನ, `ಸಂಕ್ಷಿಪ್ತ ಶಬ್ದಮಣಿದರ್ಪಣ’, `ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಹಾಗೂ ಇನ್ನಿತರ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಸೇವೆಯಲ್ಲಿ ನಿರತರಾಗಿದ್ದಾರೆ. ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ’, ‘ಉತ್ತಮ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ, ‘ಪರಿಸರಮಿತ್ರ ಪ್ರಶಸ್ತಿ’ ಮತ್ತು ‘ಆದರ್ಶ ಗುರು ಪ್ರಶಸ್ತಿ’ಗಳು ಲಭಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಕೊನೆಯದಾಗಿ ತೆರೆ ಮೇಲೆ ಕಾಣಿಸಿಕೊಂಡಿರುವ ಗಂಧದ ಗುಡಿ ಚಿತ್ರ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಗಂಧದ ಗುಡಿ ಚಿತ್ರ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಪುನೀತ್ ರಾಜ್ ಕುಮಾರ್ ಅವರನ್ನು ತೆರೆಯ ಮೇಲೆ ಕಂಡ ಅಭಿಮಾನಿಗಳು ಭಾವುಕರಾಗುತ್ತಿದ್ದಾರೆ. ಗಂಧದಗುಡಿ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್, ಬೇರೆ ಸಿನಿಮಾ ನೋಡೋಕು ಇದನ್ನ ನೋಡೋಕು ವ್ಯತ್ಯಾಸವಿದೆ. ತುಂಬಾ ಕಷ್ಟ ಆಗುತ್ತಿದೆ. ಗಂಧದಗುಡಿಯ ಗಂಧ ನಮ್ಮ ಫ್ಯಾಮಿಲಿಗೆ ತುಂಬಾ ಹತ್ತಿರ ಇದೆ. ಈ ಸಿನಿಮಾವನ್ನ ಪ್ರತಿಯೊಬ್ಬರು ನೋಡಲೇಬೇಕು ಎಂದಿದ್ದಾರೆ. ಹಾಗೆಯೇ ಗಂಧದಗುಡಿ ನೋಡುವಾಗ ಅಪ್ಪುವನ್ನ ಕಂಡರೇ ನೋವಾಗುತ್ತೆ. ಗಂಧದಗುಡಿ ಮೂಲಕ ಅಪ್ಪು ಸದಾ ಜೀವಂತವಾಗಿರುತ್ತಾನೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಹಾಗೆಯೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, ಕಾಂಗ್ರೆಸ್ಸಿನಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಕ್ಕಿಲ್ಲ, ಸಿಗುವುದೂ ಇಲ್ಲ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ವೇಳೆ ಕಾಡುಗೊಲ್ಲ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ರಾಹುಲ್ ಗಾಂಧಿ ಭೇಟಿ ಮಾಡಿ, ಸಂವಾದಕ್ಕೆ ಮುಂದಾಗಿದ್ದ ಕಾಡುಗೊಲ್ಲರಿಗೆ ತಡೆಯೊಡ್ಡಲಾಗಿದೆ. ಕಾಡುಗೊಲ್ಲರು ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಅಡ್ಡಿಪಡಿಸಲಾಗಿದೆ. ಇದು ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ವಿರೋಧಿತನಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಂಬೈ : ಹುಡುಗಿಯನ್ನು ಐಟಂ ಎಂದು ಕರೆಯುವುದು ಅವಹೇಳನಕಾರಿಯಾಗಿದ್ದು, ಇದು ಆಕೆಯನ್ನು ಲೈಂಗಿಕವಾಗಿ ಗುರಿಯಾಗಿಸಿ ಅಪಮಾನ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಮುಂಬೈ ವಿಶೇಷ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣ ಒಂದರ ವಿಚಾರಣೆ ವೇಳೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎ.ಜೆ.ಅನ್ಸಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬಾಲಕಿಗೆ ಕಿರುಕುಳ ನೀಡಿದ ಯುವಕನಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. 2015ರ ಜುಲೈ 14ರಂದು ಮುಂಬೈ ಹೊರವಲಯದಲ್ಲಿ ಯುವಕನೊಬ್ಬ ಹದಿನಾರು ವರ್ಷದ ಬಾಲಕಿ ಶಾಲೆಯಿಂದ ಹಿಂದಿರುಗುತ್ತಿದ್ದಾಗ ಆಕೆಗೆ ಐಟಂ ಎಂದು ಕರೆದಿದ್ದಲ್ಲದೆ ಜಡೆಯನ್ನು ಹಿಡಿದು ಎಳೆದಾಡಿ, ಅಪಮಾನ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಕುರಿತು ವಿಶೇಷ ನ್ಯಾಯಾಲಯದಲ್ಲಿ ಸುಧೀರ್ಘಕಾಲ ವಿಚಾರಣೆ ನಡೆದು ಈಗ ತೀರ್ಪು ಹೊರಬಿದ್ದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉತ್ತರಪ್ರದೇಶ : ಮನೆಯಲ್ಲಿ ಟೀ ಕುಡಿದು ತೀವ್ರ ಅಸ್ವಸ್ಥಗೊಂಡು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನಾಗ್ಲಾ ಕನ್ಹೈ ಗ್ರಾಮದಲ್ಲಿ ನಡೆದಿದೆ. ಶಿವಾನಂದನ್ (35), ಮಕ್ಕಳಾದ ಶಿವಂಗ್ (6), ದಿವ್ಯಾಂಶ್ (5), ಮಾವ ರವೀಂದ್ರಸಿಂಗ್ (55) ಮತ್ತು ನೆರೆಹೊರೆಯವರಾದ ಸೊಬ್ರಾನ್ (45) ಮನೆಯಲ್ಲಿ ಚಹಾ ಕುಡಿದು ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಷ್ಟೋತ್ತಿಗಾಗಲೇ ರವೀಂದ್ರ ಸಿಂಗ್, ಶಿವಾಂಗ್ ಮತ್ತು ದಿವಾನ್ಶ್ ಮೃತಪಟ್ಟಿದ್ದರು. ಸೊಬ್ರಾನ್ ಮತ್ತು ಶಿವಾನಂದನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಸೈಫಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅಲ್ಲಿಯೂ ಇಬ್ಬರೂ ಸಾವನ್ನಪ್ಪಿದರು. ಶಿವಾನಂದನ ಪತ್ನಿ ಭತ್ತದ ಬೆಳೆಗೆ ಸಿಂಪಡಣೆ ಮಾಡಿದ ಔಷಧವನ್ನು ಟೀ ಪುಡಿ ಎಂದು ತಪ್ಪಾಗಿ ಭಾವಿಸಿ ಚಹಾ ಮಾಡಿದ್ದಾರೆ. ಇದನ್ನು ಕುಡಿದ ಐವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಪ್ರಸಕ್ತ 2022-23 ನೇ ಸಾಲಿಗೆ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಜಿಲ್ಲೆಯ ದೈಹಿಕ ವಿಕಲಚೇತನರಿಂದ ಸೌಲಭ್ಯಕ್ಕಾಗಿ ಶೇಕಡಾ 75 ಅಥವಾ ಹೆಚ್ಚಿನ ಅಂಗವಿಕಲತೆ ಪ್ರಮಾಣ ಹೊಂದಿರುವ ಕನಿಷ್ಠ 20 ವರ್ಷ ಗರಿಷ್ಠ 60 ವರ್ಷ ವಯೋಮಿತಿಗೊಳಪಟ್ಟ ವಿಕಲಚೇತನ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ದೈಹಿಕ ವಿಕಲಚೇತನರು ಆಯಾ ತಾಲೂಕಿನ ತಾಲೂಕು ಪಂಚಾಯತ ಕಛೇರಿಯಲ್ಲಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ ಪ್ರತಿಯಲ್ಲಿ ಈ ಕೆಳಕಾಣ ಸಿದ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:-25-11-2022ರ ವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ತಾಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ.)ರನ್ನು ಅಥವಾ ಕಛೇರಿ ದೂರವಾಣ ಸಂಖ್ಯೆ: 0831-2476097ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಬೆಳಗಾವಿಯ ಇಎಸ್ಐಸಿ ಆಸ್ಪತ್ರೆಯ ಕಟ್ಟಡದ ಶಿಥಿಲಾವ್ಯವಸ್ಥೆಯನ್ನು ಪರಿಗಣ ಸಿ, ಕಾರ್ಮಿಕರ ಹಿತದೃಷ್ಠಿಯಿಂದ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ನಿರ್ಮಿಸಲು ಅರ್ಹತೆ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ಪತ್ರದ ಮೂಲಕ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಕಳೆದ ತಿಂಗಳು ಆಗಸ್ಟ್ 4 ರಂದು ರಾಜ್ಯಸಭೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಹೊಸ ಆಸ್ಪತ್ರೆಯ ನಿರ್ಮಾಣದ ಕುರಿತು ಪ್ರಸ್ತಾಪಿಸಲಾಗಿತ್ತು. ಅದಕ್ಕೆ ಸಚಿವರು ಪತ್ರದ ಮೂಲಕ ಉತ್ತರ ನೀಡುವುದಾಗಿ ತಿಳಿಸಿದ್ದರು. ಆ ಹಿನ್ನಲೆಯಲ್ಲಿ 94,636 ಕಾರ್ಮಿಕರು ಕಾರ್ಮಿಕ ವಿಮಾ ನಿಗಮದಡಿ ನೊಂದಣ ಯಾಗಿದ್ದಾರೆ. ಇಎಸ್ಐಸಿ ಮಾನದಂಡಗಳ ಆಧಾರದ ಮೇಲೆ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್ಐಸಿ ಸ್ಥಾಪಿಸಲು ಅರ್ಹತೆ ಹೊಂದಿದೆ ಎಂದು ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕವಾಗಿ ಸಕಾರಾತ್ಮಕವಾಗಿ ಕೇಂದ್ರ ಸಚಿವರು ಉತ್ತರ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ. ಕರ್ನಾಟಕದ ಬೆಂಗಳೂರಿನಲ್ಲಿ ಎರಡು, ಕಲಬುರಗಿಯಲ್ಲಿ…