Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಮಂಗಳೂರು: ಫ್ಲಿಪ್ಕಾರ್ಟ್ನಿಂದ ವ್ಯಕ್ತಿಯೊಬ್ಬರು ಲ್ಯಾಪ್ಟಾಪ್ ಆರ್ಡರ್ ಮಾಡಿದ್ದು, ಅದರ ಬದಲಿಗೆ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಪಡೆದಿರುವ ವಿಲಕ್ಷಣ ಪ್ರಕರಣ ನಡೆದಿದೆ. ಚಿನ್ಮಯ ರಮಣ ಎಂಬ ವ್ಯಕ್ತಿ ಫ್ಲಿಪ್ಕಾರ್ಟ್ನಿಂದ ಲ್ಯಾಪ್ಟಾಪ್ ಖರೀದಿಸಿದ್ದರು. ಆದರೆ ಅವರಿಗೆ ಲ್ಯಾಪ್ಟಾಪ್ ಬಾಕ್ಸ ಅಲ್ಲಿ ದೊಡ್ಡ ಕಲ್ಲು ಕಳುಹಿಸಲಾಗಿದೆ. ಈ ವಿಚಾರವನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಲ್ಯಾಪ್ಟಾಪ್ ಆರ್ಡರ್ ಮಾಡಿದ್ದೆ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದೆ. ದೀಪಾವಳಿ ಮಾರಾಟದ ಸಮಯದಲ್ಲಿ ಎಂದು ಬರೆದಿದ್ದಾರೆ. ಅವರು ಬಾಕ್ಸ್ ತೆರೆಯುವ ವಿಡಿಯೋವನ್ನು ಸಹ ಪೋಸ್ಟ್ ಮಾಡಿದ್ದಾರೆ. ಆದಾಗ್ಯೂ, ಫ್ಲಿಪ್ಕಾರ್ಟ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಸಂಪೂರ್ಣ ಮೊತ್ತವನ್ನು ಪಾವತಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯಪುರ: ಟ್ರ್ಯಾಕ್ಟರಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ಮೃತಪಟ್ಟು, 9 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಇಂಡಿ ತಾಲೂಕಿನ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಭಯ್ಯಾಜಿ ಶಿಂಧೆ(50), ಸುಮಿತ್ರಾ ಶಿಂಧೆ(45) ಮೃತ ದುರ್ದೈವಿಗಳು. ಮೃತ ದಂಪತಿ ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ನಿವಾಸಿಗಳು. ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರಗೆ ಮಹಾರಾಷ್ಟ್ರದ ಅಕ್ಕಲಕೋಟಗೆ ತೆರಳುತ್ತಿದ್ದ ಕ್ರೂಸರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿದ್ದ 9 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಥಣಿ ಮೂಲದ ಇವರೆಲ್ಲಾ ಕ್ರೂಸರ್ ನಲ್ಲಿ ಅಕ್ಕಲಕೋಟೆ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು ರೈತರು ರಾಜ್ಯದಾದ್ಯಂತ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ. ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ ಹೋರಾಟ ನಡೆಯುತ್ತಿದೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯನಗರ: ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ಮಾಡಿದ ನಂತರ, ಕಾನೂನು ಕ್ರಮ ಕೈಗೊಳ್ಳದೇ ದಾಳಿ ನಡೆಸಿದ ಆ ವಿಷಯವನ್ನೇ ಮುಚ್ಚಿಟ್ಟು, ದಾಳಿಯೇ ನಡೆದಿಲ್ಲ ಎಂಬ ನಡೆಯನ್ನು ಪೊಲೀಸರು ತೋರಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿ ಗ್ರಾಮಸ್ಥರೇ ಶಾಕ್ ನೀಡಿದ್ದಾರೆ. ದೀಪಾವಳಿ ಹಬ್ಬದಂದು ಇಸ್ಪಿಟ್ ಆಡುತ್ತಿದದಂತ ಜೂಜು ಕೋರರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರಾದಂತ ವೆಂಕಟೇಶ್ ಎಂಬುವರು ಠಾಣೆಗೆ ತೆರಳಿ ದೂರು ದಾಖಲಾದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದರೂ, ಪ್ರಕರಣ ದಾಖಲಿಸದೇ ಇದ್ದಂತ ಪೊಲೀಸರ ವಿರುದ್ಧ ನಂತರ ವೆಂಕಟೇಶ್ ನಾಲ್ವರು ಪೊಲೀಸ್ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಾಲ್ವರು ಪೇದೆಗಳಾದ ಮಹೇಶ. ಅಭಿಷೇಕ್.…
ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಕೋಲ್ಕಾರ (7) ಮೃತ ಬಾಲಕ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು, ವಿದ್ಯುತ್ ತಂತಿ ಎಳೆದಿದ್ದರು. ಇದರಿಂದ ವಿದ್ಯುತ್ ತಂತಿ ಜೋತು ಬಿದ್ದ ಪರಿಣಾಮ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಆಘಾತಕಾರಿ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಮುದೇನೂರು ಗ್ರಾಮದ ಜನ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದಕ್ಕೆ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಗ್ರಾಮಕ್ಕೆ ಶಾಸಕ ಮಹದೇವಪ್ಪ ಯಾದವಾಡ ಭೇಟಿ ನೀಡಿದ್ದು, ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನವದೆಹಲಿ: ನೋಟುಗಳ ಮೇಲೆ ಗಾಂಧೀಜಿ ಭಾವಚಿತ್ರದೊಂದಿಗೆ ಲಕ್ಷ್ಮಿ ಮತ್ತು ಗಣೇಶ ದೇವರುಗಳ ಚಿತ್ರಗಳನ್ನೂ ಮುದ್ರಿಸಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಎರಡು ದಿನಗಳ ಹಿಂದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪೂಜೆ ಮಾಡುವಾಗ ತಮಗೆ ಈ ವಿಚಾರ ಹೊಳೆಯಿತು ಎಂದು ಹೇಳಿದ್ದಾರೆ. ಇಂಡೋನೇಷ್ಯಾದಲ್ಲಿ ಹಿಂದೂಗಳ ಜನಸಂಖ್ಯೆ ಕೇವಲ ಶೇ. 2 ರಷ್ಟಿದೆ. ಆದರೂ ಅಲ್ಲಿನ ಕರೆನ್ಸಿ ನೋಟುಗಳ ಮೇಲೆ ಗಣೇಶ ದೇವರ ಭಾವಚಿತ್ರವಿರುತ್ತದೆ. ಹೀಗಿರುವಾಗ ಭಾರತದಲ್ಲಿ ಇದು ಏಕೆ ಸಾಧ್ಯವಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ ಮತ್ತು ಗಣೇಶ ದೇವರ ಭಾವಚಿತ್ರ ಮುದ್ರಿಸುವ ಕುರಿತಂತೆ ತಾವು ಶೀಘ್ರದಲ್ಲೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯವುದಾಗಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಏಪ್ರಿಲ್ 2022ರಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಲಾಗಿತ್ತು. ಈ ಗೌರವಧನ ಸೇರಿದಂತೆ ಬಾಕಿ ಗೌರವಧನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. 2021-22ನೇ ಸಾಲಿನ ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ ಮಾಡಲು ಮೂರನೇ ತ್ರೈ ಮಾಸಿಕ ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ. ಡಿ ಬಿಟಿ ಪೋರ್ಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಪಾವತಿಸವುದಾಗಿ ಸರ್ಕಾರ ಆದೇಶಿಸಿದೆ. ಏಪ್ರಿಲ್ 2022ರ ತಿಂಗಳಿನಿಂದ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ. 2022-23ನೇ ಸಾಲಿಗೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಗೆ ಎರಡನೇ ತ್ರೈ-ಮಾಸಿಕ ಅವಧಿಗೆ ರೂ.6378.30 ಲಕ್ಷಗಳ ಅನುದಾನ ಬಿಡುಗಡೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ನಲ್ಲಿಸುವುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 14, 2022 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ವಾರ್ತಾ…
ಬೆಂಗಳೂರು : ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿನ ಬಳಿಕ ಇದೀಗ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಕಾಂಗ್ರೆಸ್ ನಾಯಕರು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ನವೆಂಬರ್ ಎರಡನೇ ವಾರದಲ್ಲಿ ರಾಜ್ಯಾದ್ಯಂತ ರಥಯಾತ್ರೆ ಆರಂಭಗೊಳ್ಳಲಿದೆ ಮೂಲಗಳು ತಿಳಿಸಿವೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಠಿಸಲು ಪ್ರಯತ್ನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ನವೆಂಬರ್ 2 ನೇ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಎರಡು ಪ್ರತ್ಯೇಕ ತಂಡಗಳು ರಾಜ್ಯ ಪ್ರವಾಸ ಹೊರಡಲಿದ್ದು, ಪ್ರತಿ ತಂಡದಲ್ಲಿ 15 ಮುಂಚೂಣಿ ನಾಯಕರು ಇರಲಿದ್ದಾರೆ ಎನ್ನಲಾಗಿದೆ. ಪ್ರತಿದಿನ 2 ಕ್ಷೇತ್ರಗಳಂತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಮಾಡಲು ಸಿದ್ಧತೆ ನಡೆಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…