Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದಲೇ 1ನೇ ತರಗತಿಗೆ ಮಕ್ಕಳ ದಾಖಲಾತಿಯನ್ನು 6 ವರ್ಷ ನಿಗದಿ ಪಡಿಸಿತ್ತು. ಈ ಬಳಿಕ ಆದೇಶವನ್ನು ರದ್ದುಗೊಳಿಸಿತ್ತು. ಇದೀಗ 2025-26ನೇ ಶೈಕ್ಷಣಿಕ ವರ್ಷದಿಂದ ಅನ್ವಯ ಆಗುವಂತೆ ಕಡ್ಡಾಯಗೊಳಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 26-07-2022ರ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ 1ನೇ ತರಗತಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಈ ಮೊದಲಿನ ಆದೇಶವನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಖಾತೆ ಮಾಡಿ ಕೊಡೋದಕ್ಕಾಗಿ ಲಂಚ ಸ್ವೀಕರಿಸುವ ವೇಳೆಯಲ್ಲಿಯೇ, ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಖಾತೆ ಮಾಡಿ ಕೊಡೋದಕ್ಕಾಗಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆಯಲ್ಲಿ ತಹಶೀಲ್ದಾರ್ ವರ್ಷಾ ಎಂಬ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್ ವರ್ಷಾ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಸಿ ಕೊಡೋ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿಯೇ ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು : 2022ರ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ತಪ್ಪು ಮೌಲ್ಯಮಾಪನಕ್ಕಾಗಿ ಸರ್ಕಾರಿ ಪಿಯು ಕಾಲೇಜುಗಳ ಒಂಬತ್ತು ಅಧ್ಯಾಪಕರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ತಪ್ಪು ಮಾಡಿದ ಖಾಸಗಿ ಅನುದಾನರಹಿತ ಕಾಲೇಜಿನ ಒಬ್ಬ ಬೋಧಕನ ವಿರುದ್ಧ ಶಿಸ್ತು ಕ್ರಮಕ್ಕೆ ಇಲಾಖೆ ನಿರ್ದೇಶನ ನೀಡಿದೆ. 10 ಅಧ್ಯಾಪಕರ ಪೈಕಿ, ತಲಾ ಐದು ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳಿಗೆ ಸೇರಿದವುಗಳಾಗಿವೆ. ಅಮಾನತು ಆದೇಶದ ಪ್ರಕಾರ, ಉತ್ತರ ಪತ್ರಿಕೆಗಳ ಕೊನೆಯ ಕೆಲವು ಪುಟಗಳನ್ನು ಮೌಲ್ಯಮಾಪನ ಮಾಡಲು ಅಧ್ಯಾಪಕರು ವಿಫಲರಾಗಿದ್ದಾರೆ. ಮೌಲ್ಯಮಾಪಕರ ಜೊತೆಗೆ, ಉಪ ಮೌಲ್ಯಮಾಪಕರಾಗಿ ನಿಯೋಜನೆಗೊಂಡಿದ್ದ ಅಧ್ಯಾಪಕರನ್ನು ಸಹ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲಬುರಗಿ: ತಡರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಬೌಲಿಗಲ್ಲಿ ಬಳಿ ನಡೆದಿದೆ. ನಗರದ ರೋಜಾ ಬಡಾವಣೆ ನಿವಾಸಿ ಮುದಾಸಿರ್ (19) ಕೊಲೆಯಾದ ಯುವಕ, ತಡರಾತ್ರಿ ಬೌಲಿಗಲ್ಲಿ ಬಳಿ ಬೈಕ್ ಗಳಲ್ಲಿ ಬಂದಿದ್ದ 3-4 ದುಷ್ಕರ್ಮಿಗಳ ತಂಡ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಲವ್ ವಿಚಾರಕ್ಕೆ ಮುದಾಸಿರ್ ನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲಾ ಸವಿತಾ ಸಮಾಜ ಹಾಗೂ ಪಾವಗಡ ಸವಿತಾ ಸಮಾಜ ಸಹಯೋಗದೊಂದಿಗೆ ತುಮಕೂರು ಜಿಲ್ಲಾ ಸವಿತಾ ಸಮಾಜ ಯುವ ಪಡೆ ವತಿಯಿಂದ ಪಾವಗಡ ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಪಾವಗಡ ಸವಿತಾ ಸಮಾಜದ ಸಲೂನ್ ಗಳಿಗೆ ಉಚಿತ ಸಲೂನ್ ಕಿಟ್ ನೀಡಲಾಯಿತು. ಈ ವೇಳೆ ಮಾತನಾಡಿದ ಕಟ್ ವೆಲ್ ರಂಗನಾಥ್, ಯುವಕರು ಸಮುದಾಯ ಸಂಘಟನೆಗೆ ಮುಂದೆ ಬರಬೇಕು, ಹೋಬಳಿ ಮಟ್ಟದಲ್ಲಿ ಸಂಘಟನೆ ಆಗಬೇಕು. ವೃತ್ತಿಯನ್ನ ಆಧುನಿಕತೆಗೆ ಕೊಂಡೊಯ್ಯಬೇಕು ಎಂದು ಕರೆ ನೀಡಿದರು. ಇದೇ ವೇಳೆ ಪಾವಗಡ ಸವಿತಾ ಸಮಾಜ ಯುವ ಪಡೆ ಅಧ್ಯಕ್ಷರಾಗಿ ಲಿಂಗದಹಳ್ಳಿ ನೀಲಕಂಠ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾರ್ಥಸಾರಥಿ, ಪಾವಗಡ ಅಧ್ಯಕ್ಷರಾದ ರಾಮು, ಪ್ರತಿನಿದಿಯಾದ ದೇವರಾಜು, ಯುವ ಪಡೆ ಜಿಲ್ಲಾ ಪ್ರಮುಖರಾದ ಕಟ್ ವೆಲ್ ರಂಗನಾಥ್, ಲಿಂಗದಹಳ್ಳಿ ಸವಿತಾ ಸಮಾಜದ ಅಧ್ಯಕ್ಷರಾದ ರವಿ ಎನ್., ನೀಡಗಲ್ಲು ಸವಿತಾ ಸಮಾಜ ಅಧ್ಯಕ್ಷರಾದ ಕಣಮರಾಜು, ಅಣ್ಣಪ್ಪ, ನಾಗರಾಜು, ಮೋಹನ್, ಅರಸೀಕೆರೆ ನಾರಾಯಣಪ್ಪ, ಬಡವನಹಳ್ಳಿ ಪ್ರದೀಪ್,…
ಅಡಿಕೆ ಎಲೆಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಡೂರಿನ ಪೊಲೀಸ್ ತರಬೇತಿ ಕೇಂದ್ರ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದ್ದು, ವಿಶ್ವವಿದ್ಯಾಲಯಗಳು, ಸಂಬಂಧಪಟ್ಟ ಇಲಾಖೆ, ಕೇಂದ್ರ ಸರ್ಕಾರದ ಸಂಸ್ಥೆಗಳು ರೋಗ ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯೋನ್ಮುಖವಾಗಿವೆ. ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಔಷಧಿ ಸಿಂಪಡನೆಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದಿದ್ದಾರೆ. ಎಲೆಚುಕ್ಕೆ ರೋಗದ ಮೂಲಕಾರಣ ಹಾಗೂ ಔಷಧಿಯ ಬಗ್ಗೆ ವಿಜ್ಞಾನಿಗಳು ಅಧ್ಯಯನ ಮಾಡಿ ಪರಿಹಾರ ಮಾರ್ಗ ಕಂಡುಹಿಡಿದರೆ, ಅದರಂತೆ ಸರ್ಕಾರ ಕ್ರಮಕೈಗೊಳ್ಳುವುದು. ಈ ರೋಗ ದೊಡ್ಡ ಪ್ರಮಾಣದಲ್ಲಿ ಹರುಡುತ್ತಿರುವುದರಿಂದ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಮಲೆನಾಡು ಹಾಗೂ ಬಯಲುಸೀಗಳಲ್ಲಿ ಈರುಳ್ಳಿ ಸೇರಿದಂತೆ ಹಲವು ಬೆಳೆಗಳ ನಾಶಕ್ಕೆ ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯಿಸಿ, ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸರ್ಕಾರ ಈಗಾಗಲೇ…
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಿಲಾರಹಟ್ಟಿ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬರ ಹತ್ಯೆಯಾಗಿದೆ. 55 ವರ್ಷದ ಮರಗು ಪಾಂಡ್ರೆ ಹತ್ಯೆಯಾಗಿರುವ ದುರ್ದೈವಿ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೀರು, ಮಾಳಪ್ಪ ಹಾಗೂ ಇನ್ನೋರ್ವ ಆರೋಪಿ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜಾಗದ ವಿಷಯಕ್ಕೆ ಹಲವು ದಿನಗಳಿಂದ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲಬುರಗಿಯಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಲ್ಲಿಕಾರ್ಜುನ್ ಮುತ್ಯಾಲ (64) ಹತ್ಯೆಯಾದ ವ್ಯಕ್ತಿ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಕೊಲೆ ನಡೆದಿದ್ದು, ಮರ್ಮಾಂಗಕ್ಕೆ ಚಾಕು ಇರಿದು , ಕುತ್ತಿಗೆಗೆ ಹಗ್ಗ ಬಿಗಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಮಲ್ಲಿಕಾರ್ಜುನ ಮುತ್ಯಾಲ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಮಾಲೀಕರಾಗಿದ್ದರು. ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಭೇಟಿ ನೀಡಿದ್ದಾರೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೆಜಾನ್ 10 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲು ಯೋಜನೆ ರೂಪಿಸಿರುವ ಸುದ್ದಿ ಬಹಿರಂಗವಾಗಿದೆ. ಕಾರ್ಪೋರೆಟ್ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಈ ವಾರದಿಂದಲೇ ಸಿಬ್ಬಂದಿ ಕಡಿತ ಮಾಡಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಸಿಬ್ಬಂದಿ ಕಡಿತದ ಕುರಿತಾಗಿ ಅಮೆಜಾನ್ ಪ್ರತಿಕ್ರಿಯೆ ನೀಡಿಲ್ಲ, ಕಂಪನಿ ತನ್ನ ಅಧೀನದಲ್ಲಿರುವ ವಿವಿಧ ವಲಯಗಳ ಸಿಬ್ಬಂದಿ ಕಡಿತ ಮಾಡಲು ನಿರ್ಧರಿಸಿದೆಯಂತೆ. ಕಳೆದ ಡಿಸೆಂಬರ್ 31ರ ವೇಳೆಗೆ ಅಮೆಜಾನ್ನಲ್ಲಿ 1.68 ಲಕ್ಷ ಮಂದಿ ಅರೆಕಾಲಿಕ ಉದ್ಯೋಗಿಗಳಾಗಿದ್ದರು. ಈಗ ವಾಯ್ಸ್ಅಸಿಸ್ಟೆಂಟ್ ಅಲೆಕ್ಸಾ, ರೀಟೇಲ್ವಿಭಾಗ ಮತ್ತು ಮಾನವ ಸಂಪನ್ಮೂಲ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ.ಅಮೆಜಾನ್ ಅಧ್ಯಕ್ಷ ಜೆಫ್ಬೆಜೋಸ್ತಮ್ಮ ಒಟ್ಟು ಆಸ್ತಿಯಾದ 10 ಲಕ್ಷ ಕೋಟಿ ಪೈಕಿ ಬಹುತೇಕ ಆಸ್ತಿಯನ್ನು ಜೀವಿತಾವಧಿಯಲ್ಲಿ ದಾನ ಮಾಡುವುದಾಗಿ ಸಿಎನ್ಎನ್ಗೆ ಮಾಹಿತಿ ನೀಡಿದ ದಿನವೇ ಹುದ್ದೆ ಕಡಿತದ ಸುದ್ದಿ ಪ್ರಕಟವಾಗಿದೆ. ಅಮೆರಿಕ ಮತ್ತೊಂದು ವಿಶ್ವವಿಖ್ಯಾತ ಕಂಪನಿ ಡಿಸ್ನಿ ಸಿಬ್ಬಂದಿ ಕಡಿತಕ್ಕೆ ಯೋಜಿಸಿದೆ. ಕಂಪನಿಯ ಸ್ಟ್ರೀಮಿಂಗ್ ಸೇವೆ ಕಳೆದ…
ಮದುವೆ ಆಗು ಅಂತ ಕೇಳಿದ್ದಕ್ಕೆ ಕೊಲೆ ಮಾಡಿ 35 ತುಂಡುಗಳಾಗಿ ಕತ್ತರಿಸಿದ್ದ ಅಫ್ತಾಬ್ ಅಮೀನ್ ಪೂನೂವಾಲಾ ಪ್ರೇಯಸಿ ಶವ ಮನೆಯಲ್ಲಿದ್ದಾಗಲೇ ಮತ್ತೊಬ್ಬಳನ್ನು ಮನೆಗೆ ಕರೆದುಕೊಂಡು ಬಂದಿದ್ದ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಡೇಟಿಂಗ್ ಆಪ್ ನಲ್ಲಿ ಶ್ರದ್ಧಾಳ ಪರಿಚಯ ಮಾಡಿಕೊಂಡಿದ್ದ ಅಫ್ತಾಬ್, ಸ್ನೇಹಕ್ಕೆ ತಿರುಗಿದ ನಂತರ ಮುಂಬೈನಲ್ಲಿ ಆಕೆಯ ಜೊತೆ ಇದ್ದ. ನಂತರ ದೆಹಲಿಯಲ್ಲಿ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ. ಶ್ರದ್ಧಾಳನ್ನು ಕೊಂದು 35 ತುಂಡುಗಳಾಗಿ ಕತ್ತರಿಸಿ ಪ್ರತಿದಿನ ರಾತ್ರಿ 2 ಗಂಟೆಗೆ ಮೆಹ್ರೂಲ್ ಕಾಡಿನಲ್ಲಿ 18 ದಿನಗಳ ಕಾಲ ಬಿಸಾಡಿದ್ದ. ಶ್ರದ್ಧಾಳ ದೇಹದ ತುಂಡುಗಳು ಮನೆಯಲ್ಲಿ ಇದ್ದಾಗಲೇ ಡೇಟಿಂಗ್ ಆಪ್ ನಲ್ಲಿ ಪರಿಚಯ ಆದ ಮತ್ತೊಬ್ಬ ಮಹಿಳೆಯನ್ನು ಅಫ್ತಾಬ್ ಮನೆಗೆ ಕರೆದುಕೊಂಡು ಬಂದಿದ್ದ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಇದೀಗ ಅಪ್ತಾಬ್ ನನ್ನು ಬಂಧಿಸಿ ಜೈಲಿನಲ್ಲಿ ಇರಿಸಿದ್ದು ದಿನದ 24 ಗಂಟೆ ಸಿಸಿಟಿವಿ ನಿಗಾದಲ್ಲಿ ಇದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…